Tag: shivasena

  • ತನಿಖಾ ಇಲಾಖೆ ದುರುಪಯೋಗ ಮಾಡಿ ಶಿವಸೇನೆ ಮೇಲೆ ದಾಳಿ: ಸಂಜಯ್ ರಾವತ್

    ತನಿಖಾ ಇಲಾಖೆ ದುರುಪಯೋಗ ಮಾಡಿ ಶಿವಸೇನೆ ಮೇಲೆ ದಾಳಿ: ಸಂಜಯ್ ರಾವತ್

    ಮುಂಬೈ: ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದಾಗಿನಿಂದ ಇಡಿ ಸೇರಿದಂತೆ ಇತರೆ ತನಿಖಾ ಇಲಾಖೆಗಳು ತಮ್ಮ ಪಕ್ಷದ ನಾಯಕರ ವಿರುದ್ಧ ದಾಳಿ ನಡೆಸುತ್ತಿದೆ ಎಂದು ಆರೋಪಿಸಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಶಿವಸೇನೆ ನಾಯಕ ಸಂಜಯ್ ರಾವತ್ ಪತ್ರ ಬರೆದಿದ್ದಾರೆ.

    ಶಿವಸೇನೆ ಹಾಗೂ ಬಿಜೆಪಿ ಸುಮಾರು 25 ವರ್ಷಗಳ ಕಾಲ ಮೈತ್ರಿಯನ್ನು ಹೊಂದಿತ್ತು. ನಂತರ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದ ಮೈತ್ರಿಯನ್ನು ಕೊನೆಗೊಳಿಸಿತು. ಇದರಿಂದ ಬಿಜೆಪಿ ಜಾರಿ ನಿರ್ದೇಶನಾಲಯ ಸೇರಿದಂತೆ ಇತರೆ ತನಿಖಾ ಇಲಾಖೆಯನ್ನು ಬಳಸಿಕೊಂಡು ಶಿವಸೇನೆಯ ನಾಯಕರು ಮತ್ತು ಶಾಸಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

    ಇಡಿ ಸಿಬ್ಬಂದಿ ಶಿವಸೇನೆಯ ಶಾಸಕರು ಸಂಸದರು, ನಾಯಕರು ಅವರ ಸ್ನೇಹಿತರು, ಸಂಬಂಧಿಕರು ಹಾಗೂ ಪರಿಚಯಸ್ಥರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ದಶಕಗಳಷ್ಟು ಹಳೆಯದಾದ ಮತ್ತು ಯಾವುದೇ ಸಂಬಂಧವಿಲ್ಲದ ಕೇಸ್‌ಗಳಲ್ಲಿ ಸರ್ಕಾರ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡುತ್ತಿದೆ. ಜೊತೆಗೆ ಅವರನ್ನು ಭಯಭೀತಗೊಳಿಸುವ ಉದ್ದೇಶದಿಂದ ತನಿಖೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಧರ್ಮನಿಂದನೆ ಆರೋಪ – ಹಿಂದೂ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪಾಕ್!

    ನಮಗೆ ನಮ್ಮದೇ ಆದ ಸಿದ್ಧಾಂತವನ್ನು ಹೊಂದಲು ಹಕ್ಕಿದೆ. ಅದು ರಾಜಕೀಯ ಪಕ್ಷಕ್ಕೆ ಸಂಬಂಧಿಸಿಲ್ಲ. ನಮ್ಮ ಶಾಸಕರು, ಸಂಸದರು, ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಪರಿಚಯಸ್ಥರಿಗೆ ಬೆದರಿಕೆ ನೀಡುವುದರ ಜೊತೆಗೆ ತನಿಖೆ ನಡೆಸುವ ವೇಷದಲ್ಲಿ ಮನೆ ಮೇಲೆ ದಾಳಿ ನಡೆಸಿ ಕಿರುಕುಳ ನೀಡುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಟ್ಟದಿಂದ ಜಾರಿ ಬಂಡೆ ಮಧ್ಯೆ ಬಿದ್ದ- 2 ದಿನ ಅನ್ನ, ನೀರು ಇಲ್ಲ

  • ಬಿಜೆಪಿ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ

    ಬಿಜೆಪಿ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ

    ಮುಂಬೈ: ಶಿವಸೇನೆ ಉತ್ತರ ಭಾರತದಿಂದ ಎಲೆಕ್ಷನ್‍ಗೆ ನಿಂತಿದ್ದರೆ ಮತ್ತು ಆ ಸ್ಥಳವನ್ನು ಬಿಜೆಪಿಗೆ ಬಿಟ್ಟುಕೊಡದೆ ಇರುತ್ತಿದ್ದರೆ ನಮ್ಮ ಪಕ್ಷದಿಂದ ಯಾರಾದರೂ ಪ್ರಧಾನಿಯಾಗಿರುತ್ತಿದ್ದರು ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

    ಬಿಜೆಪಿಯೊಂದಿಗಿನ ಮೈತ್ರಿಯ ಭಾಗವಾಗಿ ಶಿವಸೇನೆ 25 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ ನಂತರ ಶಿವಸೇನೆ ಮತ್ತು ಬಿಜೆಪಿ ನಡುವಿನ ಮಾತಿನ ಯುದ್ಧದ ನಡುವೆ ರಾವತ್ ಪ್ರತಿಕ್ರಿಯಿಸಿದರು. ನಾವು ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಕೆಳಗಿನಿಂದ ಮೇಲಕ್ಕೆ ಕೊಂಡೊಯ್ದಿದ್ದೇವೆ. ಬಾಬರಿ ನಂತರ ಉತ್ತರ ಭಾರತದಲ್ಲಿ ಶಿವಸೇನೆಯ ಅಲೆ ಇತ್ತು. ಆ ಸಮಯದಲ್ಲಿ ನಾವು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ, ದೇಶದಲ್ಲಿ ನಮ್ಮ (ಶಿವಸೇನೆ) ಪ್ರಧಾನಿ ಇರುತ್ತಿದ್ದರು. ಆದರೆ ನಾವು ಅದನ್ನು ನಿರಾಕರಿಸಿದ್ದೇವೆ ಎಂದರು.

    ಈ ಹಿಂದೆ ಉದ್ಧವ್ ಠಾಕ್ರೆ, ಶಿವಸೇನೆ 25 ವರ್ಷಗಳ ಕಾಲ ಬಿಜೆಪಿಯೊಂದಿಗೆ ತನ್ನ ಸಮಯವನ್ನು ವ್ಯರ್ಥ ಮಾಡಿದೆ. ನನ್ನ ಏಕೈಕ ನಿರಾಶೆ ಎಂದರೆ ಒಂದು ಕಾಲದಲ್ಲಿ ಅವರು ನಮ್ಮ ಸ್ನೇಹಿತರಾಗಿದ್ದು, ನಾವು ಅವರನ್ನು ಬೆಳೆಸಿದ್ದೇವೆ. ನಾನು ಮೊದಲೇ ಹೇಳಿದಂತೆ ಬಿಜೆಪಿಯೊಂದಿಗೆ ನಮ್ಮ 25 ವರ್ಷಗಳ ಮೈತ್ರಿ ವ್ಯರ್ಥವಾಯಿತು ಎಂದು ನುಡಿದಿದ್ದರು. ಇದನ್ನೂ ಓದಿ: ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ

    ಹಿಂದುತ್ವದ ಬಗ್ಗೆ ತಮ್ಮ ಪಕ್ಷದ ನಿಲುವನ್ನು ಪುನರುಚ್ಚರಿಸಿದ ಠಾಕ್ರೆ, ಸಿದ್ಧಾಂತದ ಮೇಲೆ ಬಿಜೆಪಿ ಮಾಲೀಕತ್ವವನ್ನು ಹೊಂದಿಲ್ಲ. ಶಿವಸೇನಾ ಪ್ರಮುಖರು ನಮಗೆ ಹಿಂದುತ್ವದ ಬಗ್ಗೆ ಹೇಳಿದ್ದರು. ನಮಗೆ ಹಿಂದುತ್ವಕ್ಕೆ ಅಧಿಕಾರ ಬೇಕಿತ್ತು. ಈಗ ನಾವು ನೋಡುತ್ತಿರುವುದು ಈ ಜನರು ಬಿಜೆಪಿ ನಡೆಸುತ್ತಿರುವ ಹಿಂದುತ್ವ ಕೇವಲ ನೆಪ ಮಾತ್ರ. ಅವರ ಹಿಂದುತ್ವವು ಕೇವಲ ಅಧಿಕಾರಕ್ಕಾಗಿ ಎಂದು ಸಿಡಿದಿದ್ದರು.

     

    ನಮ್ಮದು ಹಿಂದುತ್ವದ ಚರ್ಮ, ನಾವು ಹಿಂದುತ್ವವನ್ನು ತೊರೆದಿದ್ದೇವೆಯೇ ಎಂದು ಜನರು ನಮ್ಮನ್ನು ಕೇಳುತ್ತಾರೆ. ಆದರೆ ನಾವು ಬಿಜೆಪಿಯನ್ನು ಬಿಟ್ಟಿದ್ದೇವೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿ ಎಂದರೆ ಹಿಂದುತ್ವವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಕಲೇಶಪುರದಲ್ಲಿ ಕಲ್ಲು ಎತ್ತಿ ಹಾಕಿ ವೃದ್ಧೆಯ ಬರ್ಬರ ಹತ್ಯೆ

    ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ರಾಮ್ ಕದಂ, ಹಿಂದುತ್ವದ ಕುರಿತು ಉಪನ್ಯಾಸ ನೀಡುವ ಮೊದಲು, ಉದ್ಧವ್ ಠಾಕ್ರೆ ಅವರು ಶಿವಸೇನೆ ದಿವಂಗತ ಬಾಳ್ ಠಾಕ್ರೆಯವರ ಸಿದ್ಧಾಂತವನ್ನು ಅನುಸರಿಸುತ್ತಿದ್ದಾರೆಯೇ ಅಂತ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅವರು ರಾಜಕೀಯ ಮತ್ತು ಜೀವನದಲ್ಲಿ ತಮ್ಮ ಪಕ್ಷವು ಎಂದಿಗೂ ಕಾಂಗ್ರೆಸ್‍ಗೆ ಸೇರುವುದಿಲ್ಲ. ಅಂತಹ ಸಂದರ್ಭಗಳು ಎದುರಾದರೆ ಅವರು ಪಕ್ಷಕ್ಕೆ ಬೀಗ ಹಾಕತ್ತೇನೆ ಎಂದಿದ್ದರು ಎಂದು ತಿರುಗೇಟು ನೀಡಿದ್ದಾರೆ.

  • ಚುನಾವಣೆ ವೇಳೆ ನಾಯಕರು ಚಂದ್ರ, ನಕ್ಷತ್ರ ಭರವಸೆ ನೀಡಿ ನಂತರ ಮರೆತು ಬಿಡುತ್ತಾರೆ: ಉದ್ಧವ್ ಠಾಕ್ರೆ

    ಚುನಾವಣೆ ವೇಳೆ ನಾಯಕರು ಚಂದ್ರ, ನಕ್ಷತ್ರ ಭರವಸೆ ನೀಡಿ ನಂತರ ಮರೆತು ಬಿಡುತ್ತಾರೆ: ಉದ್ಧವ್ ಠಾಕ್ರೆ

    ಮುಂಬೈ: ಚುನಾವಣೆ ವೇಳೆ ಹಲವು ನಾಯಕರು ಚಂದ್ರ, ನಕ್ಷತ್ರ ಭರವಸೆ ನೀಡಿ ನಂತರ ಮರೆತು ಬಿಡುತ್ತಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು.

    ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಜನ ಸಾಮಾನ್ಯರಿಗೆ ಚಂದ್ರ ನಕ್ಷತ್ರಗಳ ಭರವಸೆ ನೀಡುತ್ತಾರೆ. ನಂತರದಲ್ಲಿ ಜನರು ಈ ಚಂದ್ರ ನಕ್ಷತ್ರಗಳ ಭರವಸೆಗಳನ್ನು ಕೇಳಿದರೆ ಈ ನಾಯಕರು ಆ ಭರವಸೆಗಳನ್ನು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು ಎನ್ನುತ್ತಾರೆ. ಆದರೆ ಶಿವಸೇನೆ ಹಾಗಲ್ಲ, ಈಡೇರಿಸಲಾಗದ ಭರವಸೆಗಳನ್ನು ಎಂದಿಗೂ ನೀಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ:  ಬುರ್ಖಾ ಧರಿಸಿ ಥಿಯೇಟರ್‌ನಲ್ಲಿ ಅಭಿಮಾನಿಗಳ ಜೊತೆಗೆ ಸಿನಿಮಾ ನೋಡಿದ ಸಾಯಿ ಪಲ್ಲವಿ

    ಶಿವಸೇನೆಯು ಎಲ್ಲಾ ಕಾಲದಲ್ಲೂ ಹೀಗೆಯೇ ಇತ್ತು. ಕಾಂಗ್ರೆಸ್ ಎನ್‍ಸಿಪಿ ಜೊತೆ ನಮ್ಮ ಪಕ್ಷ ಸಾಗುತ್ತಿದ್ದು, ಯಾರೆಲ್ಲ ಹೊರಗುಳಿದಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ನುಡಿದರು. ಇದನ್ನೂ ಓದಿ: ಜನರನ್ನು ಸಜ್ಜುಗೊಳಿಸಬೇಕಾದ ಸಚಿವರು, ಶಾಸಕರಿಗೆ ಸೋಂಕು ತಗುಲಿರುವುದು ಆತಂಕಕಾರಿ: ಅಜಿತ್‌ ಪವಾರ್‌

    ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಪರಿಸ್ಥಿತಿಯ ಬಗ್ಗೆ ಸೇನಾ ಮುಖ್ಯಸ್ಥರು, ನಾವು ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥರಾಗಿದ್ದೇವೆ. ನಿಮ್ಮ ಬೆಂಬಲವನ್ನು ನಮ್ಮೊಂದಿಗೆ ಇಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ, ನಾನು ಕೊರೊನಾವೈರಸ್ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

  • ಗಲಾಟೆ ವಿಕೋಪಕ್ಕೆ ಹೋದ್ರೆ ನ್ಯೂಟನ್ 3ನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್

    ಗಲಾಟೆ ವಿಕೋಪಕ್ಕೆ ಹೋದ್ರೆ ನ್ಯೂಟನ್ 3ನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್

    ಗದಗ: ಬೆಳಗಾವಿಯಲ್ಲಿ ಗಲಾಟೆ ವಿಕೋಪಕ್ಕೆ ಹೋದರೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಾದ ನ್ಯೂಟನ್‌ನ 3ನೇ ನಿಯಮ ಅನುಸರಿಸಬೇಕಾಗುತ್ತದೆ. ಮರಾಠಿಗರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದರು.

    ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಇಬ್ಬರು ಹೆಮ್ಮೆಯ ವ್ಯಕ್ತಿಗಳ ಮೂರ್ತಿಗೆ ದಕ್ಕೆಯನ್ನುಂಟು ಮಾಡಿದ ಎಂಇಎಸ್ ಪುಂಡರ ವಿರುದ್ಧ ಕಿಡಿಕಾರಿದರು.

    ಪ್ರತಿವರ್ಷ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹಾಗೂ ಕರ್ನಾಟಕ ರಾಜ್ಯೋತ್ಸವ ವೇಳೆ ಎಂಇಎಸ್ ಅವರು ಇಂತಹ ಕಿತಾಪತಿ ಮಾಡುತ್ತಲೇ ಬರುತ್ತಿದ್ದಾರೆ. ಈ ವರ್ಷ ಅದೇ ಚಾಳಿಯನ್ನು ಮುಂದುವರೆಸಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಬಿಟ್ಟು ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

    ಬೆಳಗಾವಿ ಅಧಿವೇಶನ ಯಶಸ್ಸು ಕಂಡರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಎಂಇಎಸ್ ಅವರು ಈ ರೀತಿ ಮಾಡುತ್ತಿದ್ದಾರೆ. ಎಂಇಎಸ್ ಅವರು ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ಮಾಡುತ್ತಿದ್ದು, ಅವರು ಅರ್ಥ ಮಾಡಿಕೊಳ್ಳಬೇಕು. ಆದರೆ ಕರ್ನಾಟಕದವರು ಶಾಂತಿ ಪ್ರಿಯರು ಅವರಂತೆ ನಾವು ಮಾಡಬಾರದು ಎಂದು ಮನವಿ ಮಾಡಿದರು.

    ಎಂಇಎಸ್ ಪುಂಡರಿಗೆ ನಮ್ಮ ಸರ್ಕಾರ ಸರಿಯಾದ ಪಾಠ ಕಲಿಸುತ್ತದೆ. ಮರಾಠಿಗರು ಇನ್ನಾದರೂ ಇಂತಹ ಪುಂಡಾಟಿಕೆ ಬಿಟ್ಟು ಸಾಮರಸ್ಯದಿಂದ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    ಶಿವಸೇನಾ ಕಾರ್ಯಕರ್ತರ ಕಲ್ಲು ತೂರಾಟದ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ವಾಹನಗಳು ಮಹಾರಾಷ್ಟçದಲ್ಲಿ, ಮಹಾರಾಷ್ಟ್ರದ ವಾಹನಗಳು ಕರ್ನಾಟಕದಲ್ಲಿ ಓಡಾಡುತ್ತವೆ. ಅವರು ಅಲ್ಲಿ ತೊಂದರೆ ಮಾಡಿದರೆ, ಇಲ್ಲಿಯ ಅವರ ಜನಕ್ಕೆ ತೊಂದರೆ ಆಗುತ್ತದೆ ಎಂಬ ಪ್ರಜ್ಞೆ ಅವರಿಗೆ ಇರಬೇಕು. ಆದರೆ ನಮ್ಮ ಜನರು ಆ ರೀತಿ ಮಾಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: MES ಪುಂಡರಿಗೆ ತಕ್ಕ ಶಾಸ್ತಿ ಆಗಲಿದೆ: ಸುನಿಲ್ ಕುಮಾರ್

    ಈ ಸಂದರ್ಭದಲ್ಲಿ ಸಂಸದ ಶಿವಕುಮಾರ್ ಉದಾಸಿ, ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ, ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಎಮ್.ಎಸ್ ಕರಿಗೌಡ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

  • ಬಿಜೆಪಿ ಮಹಿಳಾ ಸದಸ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ಸಂಜಯ್ ರಾವತ್ ವಿರುದ್ಧ ಕೇಸ್ ದಾಖಲು

    ಬಿಜೆಪಿ ಮಹಿಳಾ ಸದಸ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ಸಂಜಯ್ ರಾವತ್ ವಿರುದ್ಧ ಕೇಸ್ ದಾಖಲು

    ನವದೆಹಲಿ: ಬಿಜೆಪಿ ಮಹಿಳಾ ಸದಸ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ ಆರೋಪದ ಮೇಲೆ ಶಿವಸೇನೆಯ ಸಂಸದ ಸಂಜಯ್ ರಾವತ್ ವಿರುದ್ಧ ಕೇಸ್ ದಾಖಲಾಗಿದೆ.

    ಸಂಸದರು ಟಿವಿ ಸಂದರ್ಶನವೊಂದರಲ್ಲಿ ಬಿಜೆಪಿ ಮಹಿಳಾ ಸದಸ್ಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಾವತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಅವರು ಡಿ. 9ರಂದು ಮಂಡವಾಲಿ ಪೊಲೀಸ್ ಠಾಣೆಯಲ್ಲಿ ರಾವುತ್ ವಿರುದ್ಧ ದೂರು ನೀಡಿದ್ದರು.

    ಮರಾಠಿ ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರವಾದ ಸಂದರ್ಶನವೊಂದರಲ್ಲಿ ರಾವುತ್ ಅವರು ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ನಿಂದಿಸುವ ಕಾಮೆಂಟ್‌ಗಳನ್ನು ಮಾಡಿದ್ದಾರೆ. ರಾವುತ್ ಅವರು ಬಿಜೆಪಿ ಕಾರ್ಯಕರ್ತರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಜೊತೆಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಿಂದ ಮೋದಿ ಫೋಟೋ ತೆಗೆಯಲು ಸೂಚನೆ

    ಇದಕ್ಕೆ ಪ್ರತಿಕ್ರಿಯಿಸಿದ ರಾವತ್, ರಾಜಕೀಯ ದುರುದ್ದೇಶದಿಂದ ಮತ್ತು ನನ್ನನ್ನು ಹತ್ತಿಕ್ಕಲು ನನ್ನ ವಿರುದ್ಧ ದೂರು ದಾಖಲಿಸಲಾಗಿದೆ. ಸಿಬಿಐ, ಐಟಿ, ಇಡಿ ಪ್ರಯೋಗವನ್ನು ನನ್ನ ವಿರುದ್ಧ ಮಾಡಲಾಗುವುದಿಲ್ಲ ಎಂದು ಮಾನಹಾನಿಯ ದೂರನ್ನು ಹಾಕಲಾಗಿದೆ. ಈ ರೀತಿಯ ಸುಳ್ಳು ದೂರನ್ನು ನೀಡುವುದು ಸರಿಯಲ್ಲ ಎಂದು ಶಿವಸೇನೆ ಸಂಸದ ರಾವುತ್ ಆರೋಪಿಸಿದರು. ಇದನ್ನೂ ಓದಿ: ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು: ಮೋದಿ

  • ರಾಷ್ಟ್ರಪತಿ ಆಡಳಿತಕ್ಕೆ ವಿರೋಧ – ಮೈತ್ರಿ ಬಗ್ಗೆ ತುಟಿ ಬಿಚ್ಚದ ಎನ್‍ಸಿಪಿ, ಕಾಂಗ್ರೆಸ್

    ರಾಷ್ಟ್ರಪತಿ ಆಡಳಿತಕ್ಕೆ ವಿರೋಧ – ಮೈತ್ರಿ ಬಗ್ಗೆ ತುಟಿ ಬಿಚ್ಚದ ಎನ್‍ಸಿಪಿ, ಕಾಂಗ್ರೆಸ್

    – ಮ್ಯಾರಥಾನ್ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ
    – ಮಾತುಕತೆ ಬಳಿಕ ಅಂತಿಮ ನಿರ್ಧಾರ

    ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತ ಜಾರಿಗೆ ಬಂದಿದ್ದಕ್ಕೆ ಕಾಂಗ್ರೆಸ್ ಹಾಗೂ ಎನ್‍ಸಿಪಿ ಭಾರೀ ವಿರೋಧ ವ್ಯಕ್ತಪಡಿಸಿದ್ದು,  ಮ್ಯಾರಥಾನ್ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ಹೊರ ಹಾಕಿವೆ.

    ಸುದ್ದಿಗೋಷ್ಠಿಯಲ್ಲಿ ಎನ್‍ಸಿಪಿ ನಾಯಕ ಪ್ರಫುಲ್ ಪಟೇಲ್ ಮಾತನಾಡಿ, ನವೆಂಬರ್ 11ರಂದು ಶಿವಸೇನೆ ಮೊದಲ ಬಾರಿಗೆ ಎನ್‍ಸಿಪಿಯನ್ನು ಸಂಪರ್ಕಿಸಿತ್ತು. ಎನ್‍ಸಿಪಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರ ನಡುವೆ ಇಂದು ಸಭೆ ನಡೆದಿದೆ. ಎನ್‍ಸಿಪಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಶಿವಸೇನೆಗೆ ಸಂಕಷ್ಟ: 50-50 ಸರ್ಕಾರಕ್ಕೆ ಎನ್‍ಸಿಪಿ ಪಟ್ಟು, ಕಾಂಗ್ರೆಸ್‍ನಿಂದ ಭಾರೀ ಬೇಡಿಕೆ

    ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಮಾತನಾಡಿ, ಜೊತೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಂದಿಗೂ ಮಾರ್ಗಸೂಚಿಗಳ ಬಗ್ಗೆ ಕಾಳಜಿ ವಹಿಸಿಲ್ಲ. ಸರ್ಕಾರ ರಚನೆಗೆ ರಾಜ್ಯಪಾಲರು ಕಾಂಗ್ರೆಸ್ಸನ್ನು ಎಂದಿಗೂ ಕರೆಯಲಿಲ್ಲ ಎಂದು ದೂರಿ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದನ್ನು ಖಂಡಿಸಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ – 3 ಕಾರಣಗಳಿಂದಾಗಿ ರಾಜ್ಯಪಾಲರಿಂದ ಶಿಫಾರಸು

    ಶಿವಸೇನೆಗೆ ಕಾಂಗ್ರೆಸ್ ಯಾಕೆ ಬೆಂಬಲ ನೀಡಲಿಲ್ಲ ಎನ್ನುವುದಕ್ಕೆ ಸ್ಪಷ್ಟನೆ ನೀಡಿದ ಪಟೇಲ್, ಕೆಲವು ವಿಷಯಗಳನ್ನು ಸ್ಪಷ್ಟಪಡಿಸುವ ಅವಶ್ಯಕತೆಯಿದೆ. ಆದ್ದರಿಂದ ಅದಕ್ಕೂ ಮೊದಲು ನಾವು ಬೆಂಬಲ ಪತ್ರವನ್ನು ನೀಡುವುದಿಲ್ಲ. ಮೈತ್ರಿಯ ಬಗ್ಗೆ ಚರ್ಚಿಸಲು ಮಾತ್ರ ಬಂದಿದ್ದೇವೆ ಎಂದು ಹೇಳಿದರು.

    ಯಾವುದೇ ಮೈತ್ರಿಯನ್ನು ತರಾತುರಿಯಲ್ಲಿ ರಚಿಸಲಾಗುವುದಿಲ್ಲ. ಸಂಭಾವ್ಯ ಮೈತ್ರಿಯ ವಿಧಾನಗಳನ್ನು ನಾವು ಇನ್ನೂ ಚರ್ಚಿಸುತ್ತಿದ್ದೇವೆ. ಎನ್‍ಸಿಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಇದಾದ ಬಳಿಕ ಶಿವಸೇನೆಯ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದು ಕಾಂಗ್ರೆಸ್ ಅಹ್ಮದ್ ಪಟೇಲ್ ತಿಳಿಸಿದರು.

    ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾತನಾಡಿ, ನಾವು ಯಾವುದೇ ಆತುರದಲ್ಲಿ ಇಲ್ಲ. ಕಾಂಗ್ರೆಸ್ ಜೊತೆಗೆ ಚರ್ಚೆ ನಡೆಸಿದ ನಂತರ ಶಿವಸೇನೆಗೆ ಬೆಂಬಲ ನೀಡುವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದರು.

  • ‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

    ‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

    ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.

    ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಶಿವಸೇನೆ ಹಾಗೂ ವಿಎಚ್‍ಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದಲ್ಲಿ ಸಿದ್ಧವಾಗಿದ್ದ ವಿಶೇಷ ರೈಲಿನಲ್ಲಿ ಶಿವ ಸೈನಿಕರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಕೇಸರಿ ವಸ್ತ್ರ ಧರಿಸಿದ್ದ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಪ್ರವಾಸ ಕೈಗೊಂಡಿದ್ದಾರೆ. ಈ ವಿಶೇಷ ರೈಲಿಗೆ ಆರತಿ ಬೆಳಗುವ ಮೂಲಕ ಥಾಣೆಯ ಮೇಯರ್ ಮೀನಾಕ್ಷಿ ಸಿಂಧೆ ಚಾಲನೆ ನೀಡಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ ಕಾರ್ಪೋರೇಟರ್ ನರೇಶ್ ಮಸ್ಕೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಭರವಸೆಗಳನ್ನು ಕೇಳುತ್ತಲೇ ಬಂದಿದ್ದೇವೆ. ಆದರೆ ಇದುವರೆಗೂ ರಾಮ ಮಂದಿರ ಮಾತ್ರ ನಿರ್ಮಾಣವಾಗಿಲ್ಲ. ಭಗವಾನ್ ಶ್ರೀ ರಾಮನ ಮಂದಿರ ನಿರ್ಮಾಣದ ಕಾರ್ಯಕ್ಕೆ ಈಗ ಸಕಾಲ ಕೂಡಿ ಬಂದಿದೆ ಎಂದು ಹೇಳಿದ್ದಾರೆ.

    ಶುಕ್ರವಾರ ರಾತ್ರಿ ಅಯೋಧ್ಯೆ ತಲುಪಲಿರುವ ಸಾವಿರಾರು ಕಾರ್ಯಕರ್ತರು, ಶನಿವಾರ ಸಂಜೆ ನಯಾ ಘಾಟ್ ನಲ್ಲಿ ಮಹಾ ಸಮಾವೇಶ ಹಾಗೂ ಮಂಗಳಾರತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹಿಂದೂ ಮಹಿಳೆಯೊಂದಿಗೆ ಹೋಟೆಲಿಗೆ ಬಂದ ಮುಸ್ಲಿಂ ಯುವಕನ ಮೇಲೆ ಹಲ್ಲೆ

    ಹಿಂದೂ ಮಹಿಳೆಯೊಂದಿಗೆ ಹೋಟೆಲಿಗೆ ಬಂದ ಮುಸ್ಲಿಂ ಯುವಕನ ಮೇಲೆ ಹಲ್ಲೆ

    ಬಾರ್ಮರ್: ಮುಸ್ಲಿಂ ಯುವಕನೊಬ್ಬನನ್ನು ಹೊಟೇಲ್ ನಿಂದ ಹೊರಗಡೆ ಎಳೆದುಕೊಂಡು ಬಂದು ಗುಂಪೊಂದು ಹಲ್ಲೆ ಮಾಡಿರುವ ಘಟನೆ ರಾಜಸ್ತಾನದ ಬಾರ್ಮರ್ ಜಿಲ್ಲೆಯ ಬಲೋತ್ರ ಪ್ರದೇಶದಲ್ಲಿ ನಡೆದಿದೆ.

    25 ವರ್ಷದ ಪದು ಖಾನ್ ಎಂಬ ಯುವಕ ಮಧ್ಯ ವಯಸ್ಸಿನ ಮಹಿಳೆಯೊಂದಿಗೆ ಸುಮಾರು 10 ಗಂಟೆಯ ವೇಳೆಗೆ ಹೊಟೇಲಿಗೆ ಬಂದಿದ್ದನು. ಮಹಿಳೆ ರಾಜಸ್ತಾನ ಸಂಪ್ರದಾಯದಂತೆ ಡ್ರೆಸ್ ಮಾಡಿದ್ದರು. ಅವರು ಬಂದು ಅರ್ಧ ಗಂಟೆಯಲ್ಲೇ ಮಹಿಳೆ ಬಂದಿರುವ ಮಾಹಿತಿ ಪಡೆದು ಆಕೆಯ 5 ಮಂದಿ ಸಂಬಂಧಿಕರು ಹೊಟೇಲಿಗೆ ನುಗ್ಗಿದ್ದಾರೆ ಅಂತ ಹೊಟೇಲ್ ಮಾಲೀಕ ಮುಲ್ತಾನ್ ಪರಿಹಾರ್ ತಿಳಿಸಿದ್ದಾರೆ.

    ದಿಢೀರ್ ಆಗಿ ಐವರು ಹೊಟೇಲ್ ಗೆ ಬಂದಿರುವುದನ್ನು ಸಿಬ್ಬಂದಿಗಳು ನನಗೆ ತಿಳಿಸಿದ್ದಾರೆ. ಅಲ್ಲದೇ ಶಿವಸೇನಾ ಕಾರ್ಯಕರ್ತರು ಕೂಡ ಹೊಟೇಲಿನ ಹೊರಗಡೆ ಸೇರಿರುವ ಕುರಿತು ಮಾಹಿತಿ ನೀಡಿದ್ದಾರೆ. ಖಾನ್ ನನ್ನು ಹೊಟೇಲ್ ನಿಂದ ಹೊರಗಡೆ ಎಳೆದು ಹಲ್ಲೆ ಮಾಡಿದ್ದಾರೆ ಅಂತ ಅವರು ಹೇಳಿದ್ರು.

    ಖಾನ್ ಮೇಲೆ ಹಲ್ಲೆ ಮಾಡುತ್ತಿದ್ದ ವೇಳೆ ಅವರೆಲ್ಲಾ `ಜೈ ಶ್ರೀ ರಾಮ್’ ಅಂತ ಪಠಿಸುತ್ತಿದ್ದರು. ಅಲ್ಲದೇ ಇದು ಲವ್-ಜಿಹಾದ್ ಕೇಸ್ ಅಂತಾನೂ ಹೇಳುತ್ತಿದ್ದರು ಅಂತ ಪರಿಹಾರ್ ನುಡಿದಿದ್ದಾರೆ.

    ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ರಜಪೂತ ಮಹಿಳೆ ಜೊತೆ ಬಲೋತ್ರಾದಲ್ಲಿರೋ ಹೊಟೇಲ್ ಗೆ ಬಂದಿದ್ದರು. ಇವರು ಬಂದ ಕೆಲವೇ ಕ್ಷಣಗಳಲ್ಲಿ ಮಹಿಳೆಯ ಸಂಬಂಧಿಕರ ಗುಂಪೊಂದು ನೇರವಾಗಿ ಹೊಟೇಲಿನೊಳಗೆ ನುಗ್ಗಿ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ ಅಂತ ಬಾರ್ಮಾರ್ ನ ಎಡಿಎಸ್‍ಪಿ ಕೈಲಾಸ್ ಧನ್ ರಾಥ್ನೋ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಖಾನ್ ನನ್ನು ಬಾರ್ಮಾರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಜೋಧಪುರ್ ದಲ್ಲಿರೋ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಅಂತ ಎಡಿಎಸ್‍ಪಿ ರಥ್ನೋ ತಿಳಿಸಿದ್ದಾರೆ.