Tag: shivayogi kalasad

  • ನಾಳೆಯ ಭಾರತ್ ಬಂದ್‍ಗೆ ಸ್ತಬ್ದವಾಗುತ್ತಾ ಕರುನಾಡು? – ಎಂದಿನಂತೆ ಇರಲಿದೆ KSRTC ಸೇವೆ

    ನಾಳೆಯ ಭಾರತ್ ಬಂದ್‍ಗೆ ಸ್ತಬ್ದವಾಗುತ್ತಾ ಕರುನಾಡು? – ಎಂದಿನಂತೆ ಇರಲಿದೆ KSRTC ಸೇವೆ

    ಬೆಂಗಳೂರು: ಕೇಂದ್ರ ಸರ್ಕಾರದ ರೈತ ಮಸೂದೆ ವಿರೋಧಿಸಿ ರೈತರು ಕರೆ ಕೊಟ್ಟಿರುವ ಭಾರತ್ ಬಂದ್ ಬೆಂಗಳೂರಿನಲ್ಲೂ ಯಶಸ್ವಿಗೊಳಿಸಲು ನಗರದ ರೈತ ಸಂಘ ಮುಂದಾಗಿದೆ. ಈ ನಡುವೆ ರಾಜ್ಯದಲ್ಲಿ ಬಂದ್ ಇದ್ದರೂ ಕೂಡ ಬಸ್ ಸಂಚಾರ ಎಂದಿನಂತೆ ಇರಲಿದೆ ಎಂದು ಕೆಎಸ್ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ ತಿಳಿಸಿದ್ದಾರೆ.

    ಭಾರತ್ ಬಂದ್ ದಿನ ಸಾರಿಗೆ ವ್ಯವಸ್ಥೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಿವಯೋಗಿ ಕಳಸದ, ನಾಳೆ ಕೆಎಸ್ಆರ್‌ಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗಲ್ಲ. ಪ್ರಯಾಣಿಕರ ಬೇಡಿಕೆಗಳಿಗೆ ಅನುಸಾರವಾಗಿ ಬಸ್ ಓಡಿಸುತ್ತೇವೆ. ಸಾರ್ವಜನಿಕರಿಗೂ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದು, ನಾಳೆ ಎಂದಿನಂತೆ ಬಸ್‍ಗಳು ಓಡಾಟ ನಡೆಸಲಿದೆ ಎಂದರು. ಇದನ್ನೂ ಓದಿ: ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

    ರೈತರು ಭಾರತ್ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಪೊಲೀಸ್ ಇಲಾಖೆ ಜೊತೆ ಮಾತುಕತೆ ನಡೆಸಿದ್ದೇವೆ. ಯಾವುದೇ ಆಸ್ತಿಪಾಸ್ತಿ ಹಾನಿಯಾಗದ ಹಾಗೆ ನೋಡಿಕೊಳ್ಳತ್ತೇವೆ. ಕಿಡಿಗೇಡಿಗಳ ಕೃತ್ಯದ ಬಗ್ಗೆ ಸೂಕ್ತ ನಿಗಾವಹಿಸುತ್ತೇವೆ. ಈಗಾಗಲೇ ಶೇಕಡಾ 80 ಬಸ್ ಗಳನ್ನು ಓಡಾಟ ನಡೆಸುತ್ತಿದ್ದೇವೆ. ಅದಲ್ಲದೆ ಎಂದಿನಂತೆ ಆನ್‍ಲೈನ್‍ನಲ್ಲಿ ಸೀಟ್ ರಿಸರ್ವ್ ಮಾಡಬಹುದು ಸೋಮವಾರ ಯಾವುದೇ ಬದಲಾವಣೆ ಇಲ್ಲದೆ ಬಸ್‍ಗಳು ಸಂಚರಿಸಲಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ನೈತಿಕತೆ ಬೆಂಬಲ ಕೊಡಿ: ಕೋಡಿಹಳ್ಳಿ ಚಂದ್ರಶೇಖರ್

  • ರಾಜ್ಯದ ಎಲ್ಲಾ ಸಾರಿಗೆ ನೌಕರರ ರಜೆ ರದ್ದು: ಶಿವಯೋಗಿ ಕಳಸದ್

    ರಾಜ್ಯದ ಎಲ್ಲಾ ಸಾರಿಗೆ ನೌಕರರ ರಜೆ ರದ್ದು: ಶಿವಯೋಗಿ ಕಳಸದ್

    ಬೆಂಗಳೂರು: ವಾರದ ರಜೆ ಹಾಗೂ ತುರ್ತು ರಜೆ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರ ರಜೆ ರದ್ದುಪಡಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.

    ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಎಲ್ಲಾ ನೌಕರರ ರಜೆ ರದ್ದುಪಡಿಸಲಾಗುತ್ತದೆ. ಅನಗತ್ಯ ರಜೆ ಹಾಕಿದರೆ ವೇತನ ಕಟ್ ಮಾಡಲಾಗುತ್ತದೆ. ನಾಳೆಯಿಂದ ಅನಗತ್ಯವಾಗಿ ರಜೆ ಹಾಕಿದರೆ ವೇತನ ನೀಡಲ್ಲ ಅಂತ ಸುತ್ತೋಲೆ ಹೊರಡಿಸಿದ್ದಾರೆ.

    ಸಹಜ ಸ್ಥಿತಿಗೆ ಬರುವರಿಗೆ ಈ ಸುತ್ತೋಲೆ ಅನ್ವಯವಾಗಲಿದ್ದು, ಅನಗತ್ಯವಾಗಿ ರಜೆ ಹಾಕಿದರೆ ಸಿಬ್ಬಂದಿ ಮೇಲೆ ಶಿಸ್ತು ಕ್ರಮದ ಎಚ್ಚರಿಕೆಯನ್ನು ಕಳಸದ್ ನೀಡಿದ್ದಾರೆ.

    ಇತ್ತ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಸಾರಿಗೆ ನೌಕರರ 6ನೇ ವೇತನ ಆಯೋಗ ಶಿಫಾರಸು ಜಾರಿ ಮಾಡಲು ಆಗಲ್ಲ. ಶೇ.8 ವೇತನ ಹೆಚ್ಚಳ ಮಾಡುತ್ತೇವೆ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಆಯೋಗದ ಅನುಮತಿಯನ್ನು ಕೇಳಿದ್ದೇವೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸಂಬಳ ಹೆಚ್ಚಳ ಮಾಡಲು ಆಗುತ್ತಿಲ್ಲ. ಪ್ರತಿಭಟನೆಗೆ ಹೋಗಬಾರದು, ಮನವಿ ಮಾಡಿದ್ದೇವೆ ಎಂದರು.

    ಪ್ರತಿಭಟನೆಗೆ ಹೋದರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ. ಸಾರಿಗೆ ಪ್ರತಿಭಟನೆಯನ್ನ ಕಠಿಣವಾಗಿ ಡೀಲ್ ಮಾಡುತ್ತೇವೆ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಾತುಕತೆಗೆ ಹೋಗುವ ಪ್ರಶ್ನೆಯೇ ಇಲ್ಲ. ಬಸ್ಸಿಗೆ ಹಾನಿ ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ಮಾ ಜಾರಿ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

    ಕೋವಿಡ್ ನಿಯಮದಂತೆ ರೂಲ್ಸ್ ಫಾಲೋ ಮಾಡಬೇಕು, ಇಲ್ಲ ವಿಪತ್ತು ನಿರ್ವಹಣಾ ಕಾಯ್ದೆಯಂತೆ ಕ್ರಮ ‘ನೋ ವರ್ಕ್ ನೋ ಪೇ’ ಜಾರಿ ಮಾಡುತ್ತೇವೆ. ಚುನಾವಣಾ ಆಯೋಗಕ್ಕೆ ನಿನ್ನೆಯೇ ಪತ್ರ ಬರೆದಿದ್ದೇವೆ. ಶೇ. 8 ಸಂಬಳ ಹೆಚ್ಚಳ ಮಾಡುತ್ತೇವೆ. ಆದರೆ ಅವರು ಅನುಮತಿ ಕೊಡಬೇಕು ಎಂದು ತಿಳಿಸಿದ್ದಾರೆ.