Tag: shivling

  • ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಆದೇಶ

    ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಆದೇಶ

    ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯೊಳಗೆ (Gyanvapi Mosque) ಪತ್ತೆಯಾದ ಶಿವಲಿಂಗವನ್ನು (Shivling) ಕಾರ್ಬನ್ ಡೇಟಿಂಗ್ (Carbon Dating) ಸೇರಿದಂತೆ ವೈಜ್ಞಾನಿಕ ಸಮೀಕ್ಷೆಗೆ (Scientific Survey) ಒಳಪಡಿಸುವಂತೆ ಅಲಹಬಾದ್ ಹೈಕೋರ್ಟ್ (Allahabad High Court) ಶುಕ್ರವಾರ ಆದೇಶಿಸಿದೆ.

    ಅಲಹಬಾದ್ ಹೈಕೋರ್ಟ್ ಶುಕ್ರವಾರ ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾಗಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಅನುಮತಿ ನೀಡಿದೆ.

    ಕಳೆದ ವರ್ಷ ಜ್ಞಾನವಾಪಿ ಮಸೀದಿಯ ಆವರಣದೊಳಗೆ ವೀಡಿಯೋ ಸಮೀಕ್ಷೆಯನ್ನು ನಡೆಸಲಾಗಿತ್ತು. ಈ ವೇಳೆ ಶಿವಲಿಂಗದAತಹ ಆಕೃತಿಯೊಂದು ಪತ್ತೆಯಾಗಿದ್ದು, ಬಳಿಕ ಭಾರೀ ವಿವಾದಕ್ಕೆ ಕಾರಣವಾಯಿತು. ಹಿಂದೂ ಕಡೆಯವರು ಪತ್ತೆಯಾದ ಆಕೃತಿಯನ್ನು ಶಿವಲಿಂಗ ಎಂದು ಹೇಳಿಕೊಂಡರೆ ಮುಸ್ಲಿಂ ಕಡೆಯವರು ಇದು ಕಾರಂಜಿ ಎಂದು ವಾದಿಸಿದರು. ಬಳಿಕ ಆ ಆಕೃತಿಯನ್ನು ವೈಜ್ಞಾನಿಕ ಸಮೀಕ್ಷೆಗೆ ಒಳಪಡಿಸಬೇಕು ಎಂದು ಹಿಂದೂ ಪರ ಅರ್ಜಿದಾರರು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಸಿಬಿಐನಿಂದ ಭ್ರಷ್ಟಾಚಾರ ಕೇಸ್ ದಾಖಲು

    ಮಸೀದಿ ಸಂಕೀರ್ಣದೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪೂಜೆ ಮಾಡಲು 5 ಹಿಂದೂ ಮಹಿಳೆಯರು ಮನವಿ ಮಾಡಿಕೊಂಡಿದ್ದರು. 5 ಅರ್ಜಿದಾರರಲ್ಲಿ ನಾಲ್ವರು ಶಿವಲಿಂಗ ಎಷ್ಟು ವರ್ಷ ಹಳೆಯದು ಎಂಬುದನ್ನು ಖಚಿತಪಡಿಸಿಕೊಳ್ಳಲು ಕಾರ್ಬನ್ ಡೇಟಿಂಗ್ ಒಳಗೊಂಡAತೆ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿಕೊಂಡಿದ್ದರು. ಇದನ್ನೂ ಓದಿ: ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್ – ವಿದ್ಯುತ್‌ ದರ ಹೆಚ್ಚಳ

  • ನಿಧಿಯಾಸೆಗೆ ಶಿವಲಿಂಗ ಕೆತ್ತನೆ ಇರುವ ಸ್ಮಾರಕ ಧ್ವಂಸ

    ನಿಧಿಯಾಸೆಗೆ ಶಿವಲಿಂಗ ಕೆತ್ತನೆ ಇರುವ ಸ್ಮಾರಕ ಧ್ವಂಸ

    ಶಿವಮೊಗ್ಗ: ನಿಧಿಯಾಸೆಗಾಗಿ ಶಿವಲಿಂಗದ (Shivalinga Monument) ಕೆತ್ತನೆ ಇರುವ ಸ್ಮಾರಕ ಸ್ಥಳವನ್ನು ಧ್ವಂಸಗೊಳಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಬಿದನೂರು ನಗರ ಸಮೀಪದ ನೇತ್ರಬೈಲು ಗುಡ್ಡದಲ್ಲಿ ನಡೆದಿದೆ. ನಿಧಿಚೋರರು ನಿಧಿಯಾಸೆಗೆ ಶೋಧ ನಡೆಸಿದ ನಂತರ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

    ನಿಧಿಯಾಸೆಗಾಗಿ ನಿಧಿಚೋರರು ಐತಿಹಾಸಿಕ ಸ್ಥಳಗಳ ಬಳಿ ಶೋಧ ಕಾರ್ಯ ನಡೆಸುತ್ತಿದ್ದು, ಎಲ್ಲೆಂದರಲ್ಲಿ ಐತಿಹಾಸಿಕ ಸ್ಮಾರಕಗಳನ್ನು ಅಗೆದು ಹಾಕುತ್ತಿದ್ದಾರೆ. ಇದೀಗ ಅಂತಹದ್ದೆ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೇತ್ರಬೈಲುಗುಡ್ಡದಲ್ಲಿ ನಡೆದಿದೆ. ಶ್ರೀಧರಪುರದ ಶಿವಪ್ಪನಾಯಕ ಮತ್ತು ಅರಸರ ಸಮಾಧಿ ಸ್ಥಳದಿಂದ ಒಂದು ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಶಿವಲಿಂಗದ ಕಲ್ಲಿನ ಕೆಳಭಾಗದಲ್ಲಿ ಆರೇಳು ಅಡಿ ಅಗೆಯಲಾಗಿದೆ. ಇದನ್ನೂ ಓದಿ: ಗೋಮಾಂಸ ಮಾರಾಟ ಮಾಡ್ತಿದ್ದ ಇಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ – ವೀಡಿಯೋ ವೈರಲ್

    ಅಷ್ಟೇ ಅಲ್ಲದೇ ನಿಧಿಗಾಗಿ ಶೋಧ ಕಾರ್ಯ ನಡೆದಿದ್ದ ಸ್ಥಳದ ಸುತ್ತಲೂ ದಾರ ಕಟ್ಟಿ, ಅರಿಶಿನ, ಕುಂಕುಮ ಹಾಕಿ ನಿಂಬೆಹಣ್ಣು, ಕುಂಬಳಕಾಯಿ, ತೆಂಗಿನಕಾಯಿ, ಒಡೆಯಲಾಗಿದೆ. ಶಿವಲಿಂಗದ ಮೂರ್ತಿಗೆ ಭಸ್ಮ ಬಳಿದಿರುವುದು ಮಾತ್ರವಲ್ಲದೇ ಸುತ್ತಲೂ ಹಾಕಲಾಗಿದೆ. ಹೊರಭಾಗ ಮತ್ತು ಲಿಂಗದ ಸಮೀಪ‌ ಹಣತೆ ಇಟ್ಟು ದೀಪ ಬೆಳಗಿಸಲಾಗಿದೆ. ನಿಧಿ ಶೋಧಕ್ಕೂ ಮೊದಲು ನಿಧಿಚೋರರು ವಾಮಾಚಾರ ನಡೆಸಿರುವ ಬಗ್ಗೆ ಶಂಕಿಸಲಾಗಿದೆ.

    ನೇತ್ರಬೈಲು ಗುಡ್ಡ ಜನವಸತಿ ಪ್ರದೇಶದಿಂದ ದೂರದಲ್ಲಿದೆ. ಹೀಗಾಗಿ ಈ ಸ್ಥಳಕ್ಕೆ ಸ್ಥಳೀಯರು ಆಗಾಗ ಹೋಗುವುದು ಕಡಿಮೆ. ಆದರೆ ಸ್ಥಳೀಯರು ತಮ್ಮ ಕೆಲಸಗಳಿಗೆ ಗುಡ್ಡಕ್ಕೆ ಹೋದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ. ವಾರದ ಹಿಂದೆ ಗ್ರಹಣದ ವೇಳೆ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಸ್ಥಳೀಯರದ್ದಾಗಿದೆ. ಇದನ್ನೂ ಓದಿ: ಬಸವಲಿಂಗ ಶ್ರೀ ಆತ್ಮಹತ್ಯೆ ಕೇಸ್- ಬಂಧಿತರ ಮೊಬೈಲ್ FSLಗೆ ರವಾನೆ

    ಕಳೆದ ಐದಾರು ವರ್ಷದಿಂದ ನಿರಂತರವಾಗಿ ನಿಧಿಯಾಸೆಗೆ ಸ್ಮಾರಕ ಧ್ವಂಸಗೊಳಿಸುತ್ತಿರುವ ಘಟನೆ ನಡೆಯುತ್ತಿದೆ. ಶಿವಪ್ಪನಾಯಕ ಅರಸರ ಸಮಾಧಿ, ಶೂಲದ ಗುಡ್ಡ, ಬರೇಕಲ್ ಬತೇರಿ, ಗಳಿಗೆಬಟ್ಟಲು ಸೇರಿದಂತೆ ವಿವಿಧ ಕಡೆ ಸ್ಮಾರಕ ಹಾಳುಗೆಡವಿದ ಘಟನೆ ಈ ಹಿಂದೆಯೂ ನಡೆದಿತ್ತು. ನಿಧಿಯಾಸೆಗೆ ಬಿದನೂರಿನ ಸ್ಮಾರಕಗಳು ಅವಸಾನಗೊಳ್ಳುತ್ತಿವೆ.

    ಘಟನೆ ನಂತರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನಾದರೂ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಧಿಚೋರರನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ನವದೆಹಲಿ: ಜ್ಞಾನವಾಪಿ ಮಸೀದಿಯ (Gyanvapi Mosque) ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ (Shivling) ರೂಪದ ಆಕೃತಿಯ ವೈಜ್ಞಾನಿಕ ಪರೀಕ್ಷೆ ಕೋರಿ ಹಿಂದೂಪರ ನಾಲ್ವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ (Varanasi Court) ವಜಾ ಮಾಡಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶ ಹಿನ್ನಲೆ ಕಾರ್ಬನ್ ಡೇಟಿಂಗ್ ಪರೀಕ್ಷೆ ಸಾಧ್ಯವಿಲ್ಲ ಎಂದು ಹೇಳಿದೆ.

    ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾ. ಅಜಯ್ ಕೃಷ್ಣ ವಿಶ್ವೇಶಾ ಎರಡು ಬಾರಿ ಆದೇಶವನ್ನು ಮುಂದೂಡಿಸಿದ್ದರು. ಇಂದು ಆದೇಶ ಪ್ರಕಟಿಸಿದ ಅವರು ಮೇ 16 ರಂದು ಸುಪ್ರೀಂ ಕೋರ್ಟ್ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲಿಂಗ್ ಮಾಡಲು ಆದೇಶಿಸಿದ್ದರಿಂದ ವೈಜ್ಞಾನಿಕ ತನಿಖೆಯ ಮನವಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಅದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಜ್ಞಾನವಾಪಿ ಮಸೀದಿಯ ಸರ್ವೇ ವೇಳೆ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿತ್ತು. ಈ ಶಿವಲಿಂಗ ರೂಪದ ಆಕೃತಿಯನ್ನು ವೈಜ್ಞಾನಿಕ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಿರೋಧಿಸಿತ್ತು.

    ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು ಸೂಟ್ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ? ಆಪಾದಿತ ರಚನೆಯ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ? ಎನ್ನುವ ಎರಡು ಪ್ರಶ್ನೆಗಳನ್ನು ಮುಂದಿಟ್ಟು ಮೊದಲು ಈ ಬಗ್ಗೆ ವಿಚಾರಣೆ ನಡೆಯಬೇಕು ಎಂದು ಮಸೀದಿ ಪರ ವಕೀಲರು ವಾದಿಸಿದ್ದರು‌. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    court order law

    ಇದಕ್ಕೆ ಪ್ರತಿವಾದ ಮಂಡಿಸಿದ್ದ ಹಿಂದೂ ಆರಾಧಕರ ಪರ ವಕೀಲ ವಿಷ್ಣು ಶಂಕರ್ ಜೈನ್, ಶಿವಲಿಂಗವು ಸೂಟ್ ಆಸ್ತಿಯ ಒಂದು ಭಾಗವಾಗಿದೆ. ಸಿವಿಲ್ ಪ್ರೊಸೀಜರ್ ಕೋಡ್ 1908 ರ ಆದೇಶ 26 ನಿಯಮ 10A ರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದ್ದರು.

    ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅಂತಿಮವಾಗಿ ಸುಪ್ರೀಂ ಕೋರ್ಟ್‌ ಹಳೆಯ ತೀರ್ಪಿನ ಅಂಶವನ್ನು ಗಮನದಲ್ಲಿಟ್ಟುಕೊಂಡು ಹಿಂದೂ ಆರಾಧಕ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನು ಪ್ರಶ್ನಿಸಿ ಮಹಿಳೆಯರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

    ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

    ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗವನ್ನು ಪೂಜಿಸಲು ಅನುಮತಿ ನೀಡಬೇಕಾಗಿ ಕೋರಿ ಇತ್ತೀಚೆಗೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

    ಕೆಲವು ದಿನಗಳ ಹಿಂದೆ 7 ಹಿಂದೂ ಮಹಿಳೆಯರ ಗುಂಪು ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಜಸ್ಟಿನ್ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ಮನವಿಯನ್ನು ನಿರಾಕರಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ

    ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕಾಗಿ ಅರ್ಜಿಯಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್

    ಈ ಹಿಂದೆ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ ಶಿವಲಿಂಗದ ರಚನೆಯನ್ನು ಮಸೀದಿಯ ಸಮಿತಿ ಅದು ಶಿವಲಿಂಗವಲ್ಲ, ಕಾರಂಜಿ ಎಂದು ವಾದಿಸಿತ್ತು. ಈ ವಿಚಾರವಾಗಿ ದೇಶಾದ್ಯಂತ ವಿವಾದ ಉಂಟಾಗಿದ್ದು, ಬಳಿಕ ಅಲ್ಲಿನ ಜಿಲ್ಲಾ ನ್ಯಾಯಾಲಯ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಆರಾಧನೆಯ ಹಕ್ಕನ್ನು ನಿರ್ಬಂಧಿಸಿ, ಆ ಸ್ಥಳವನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಕೇಳಿಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಲಕ್ನೋ: ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ವಿವಾದಿತ ಜ್ಞಾನವಾಪಿ ಮಸೀದಿ ಆವರಣದಲ್ಲಿ ಇತ್ತೀಚೆಗೆ ಶಿವಲಿಂಗ ಪತ್ತೆಯಾಗಿದ್ದು, ಅಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

    ವರದಿಗಳ ಪ್ರಕಾರ, ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಸ್ಥಳದ ಅಧ್ಯಕ್ಷ ರಾಜೇಶ್ ಮಣಿ ತ್ರಿಪಾಠಿ ಅವರು ಅರ್ಜಿ ಸಲ್ಲಿಸಿದ್ದಾರೆ. ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಹಿಂದೂಗಳಿಗೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕು ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಇಂದು ಒಟ್ಟು 977 ಕೇಸ್ – ಬೆಂಗ್ಳೂರಲ್ಲಿ 927 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಭಾರತ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಜನರು ತಮ್ಮದೇ ಆದ ಧಾರ್ಮಿಕ ಆಚರಣೆಗಳನ್ನು ನಡೆಸುವ ಹಕ್ಕಿದೆ. ಶ್ರಾವಣ ಮಾಸದಲ್ಲಿ ಶಿವನಿಗೆ ಪೂಜೆ ಮಾಡುವ ಪದ್ಧತಿಯಿರುವುದು ನಿಜ. ಹೀಗಾಗಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಪ್ರಾರ್ಥನೆ, ಪೂಜೆ ನಡೆಸಲು ಹಿಂದೂಗಳಿಗೆ ಅನುಮತಿ ನೀಡಬೇಕಾಗಿ ತ್ರಿಪಾಠಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

    ಸ್ಥಳೀಯ ನ್ಯಾಯಾಲಯದ ಆದೇಶದಿಂದ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗವನ್ನು ರಕ್ಷಿಸಲಾಗಿದೆಯಾದರೂ, ಭಕ್ತರಿಗೆ ಅಲ್ಲಿ ಪೂಜೆ ಸಲ್ಲಿಸಲು ಹಾಗೂ ಆಚರಣೆಗಳನ್ನು ನಡೆಸಲು ನಿರ್ಬಂಧಿಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ, ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್‌ ಭಾಗವತ್‌

    ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ, ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್‌ ಭಾಗವತ್‌

    ನಾಗಪುರ: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

    ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್‌ ಭಾಗವತ್‌ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.

    ಆರ್‌ಎಸ್‌ಎಸ್‌ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.

    ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್‌ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.

    ಇತಿಹಾಸವನ್ನು ನಾವು ರಚನೆ ಮಾಡಿಲ್ಲ. ಇಂದಿನ ಹಿಂದೂ-ಮುಸ್ಲಿಮರೂ ರಚಿಸಿಲ್ಲ. ಭಾರತದ ಮೇಲೆ ಇಸ್ಲಾಂ ರಾಜರು ದಂಡಯಾತ್ರೆ ಕೈಗೊಂಡಾಗ ಜ್ಞಾನವಾಪಿಯಂತಹ ಘಟನೆಗಳು ನಡೆದಿವೆ. ನೂರಾರು ದೇವಸ್ಥಾನಗಳು ನಾಶವಾಗಿವೆ. ಹೀಗಾಗಿ ದಿನಕ್ಕೊಂದು ಹೊಸ ವಿವಾದವನ್ನು ಯಾಕೆ ಸೃಷ್ಟಿ ಮಾಡಬೇಕು? ಎಲ್ಲ ಮಸೀದಿಗಳಲ್ಲೂ ಯಾಕೆ ಶಿವಲಿಂಗವನ್ನು ಹುಡುಕಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: PFI ಗೆ ಚೀನಾ, ಗಲ್ಫ್ ದೇಶಗಳಿಂದ ಹಣ

    ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾಲ್ಗೊಂಡಿತ್ತು ನಿಜ. ಕೆಲ ಐತಿಹಾಸಿಕ ಕಾರಣ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ನಾವು ಭಾಗಿಯಾಗಿದ್ದು ನಿಜ. ಆದರೆ ಇನ್ನು ಮುಂದೆ ಈ ರೀತಿಯ ಹೋರಾಟದಲ್ಲಿ ಭಾಗಿಯಾಗುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆವು. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.

  • ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಸರ್ವೆ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಹಿಂದೂ ಮಹಿಳೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಅರ್ಹವೇ ಎನ್ನುವ ಬಗ್ಗೆ ಮೊದಲು ವಿಚಾರಣೆ ನಡೆಸಲಾಗುವುದು. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜಿಲ್ಲಾ ನ್ಯಾಯಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕೃಷ್ಣ ಅವರು ಇಂದು ಆದೇಶ ನೀಡಿದ್ದು, ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು. ಅದಕ್ಕೂ ಮುನ್ನ ಏಳು ದಿನಗಳೊಳಗೆ ವೀಡಿಯೋಗ್ರಫಿ ಸರ್ವೆಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ವಿಚಾರಣೆ ಬಳಿಕ ವೀಡಿಯೋಗ್ರಫಿ ಸರ್ವೆ ಆಧರಿಸಿ ವಿಚಾರಣೆ ಮುಂದುವರಿಸುವ ಬಗ್ಗೆ ಕೋರ್ಟ್ ತೀರ್ಮಾನಿಸುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ 

    ಶಿವಲಿಂಗ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿರುವ ಅರ್ಜಿ 1991ರ ಕಾಯಿದೆ ಮತ್ತು ಆದೇಶ 7, ನಿಯಮ 11 ಉಲ್ಲಂಘಿಸುತ್ತದೆ. ಹೀಗಾಗಿ ಇಡೀ ಪ್ರಕರಣವನ್ನು ವಜಾ ಮಾಡಬೇಕು ಎಂದು ಮಸೀದಿ ಪರ ಅರ್ಜಿದಾರರು ವಾದ ಮಂಡಿಸಿದ್ದರು.

    ಇದಕ್ಕೆ ಪ್ರತಿವಾದ ಸಲ್ಲಿಸಿದ್ದ ಐವರು ಮಹಿಳೆಯರು ಮತ್ತು ಹಿಂದೂ ಸೇನಾ ಪರ ವಕೀಲರು, ಮಸೀದಿ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಅತಿಕ್ರಮಣ ಮಾಡಿಕೊಂಡು ಮಸೀದಿ ನಿರ್ಮಿಸಲಾಗಿದೆ. ಈಗ ಶಿವಲಿಂಗ ಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ. ಹೀಗಾಗಿ ಸರ್ವೆ ವೇಳೆ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

    ರಾಮಮಂದಿರ ವಿವಾದ ಉತ್ತುಂಗದ ವೇಳೆ, 1991ರಲ್ಲಿ ಪೂಜಾ ಸ್ಥಳಗಳ ನಿರ್ಬಂಧ ಕಾಯ್ದೆ ಜಾರಿ ಮಾಡಲಾಗಿತ್ತು. ಅದರಲ್ಲಿ ಸ್ವಾತಂತ್ರ್ಯದ ನಂತರದ ದಿನಾಂಕದಿಂದ ಯಾವುದೇ ಧಾರ್ಮಿಕ ಕಟ್ಟಡಗಳನ್ನು ಬದಲಾಯಿಸುವುದು ಅಥವಾ ಅದರ ರಚನೆಗೆ ಧಕ್ಕೆ ಮಾಡುವಂತಿಲ್ಲ. ಅದು ಇದ್ದಂತಯೇ ಮುಂದುವರಿಸಬೇಕು ಎಂದು ನಿಯಮ ರೂಪಿಸಲಾಗಿತ್ತು. ಇದನ್ನೂ ಓದಿ: ನಯನತಾರಾಗೆ ಲೋಕಲ್ ಫುಡ್ ತಿನ್ನಿಸಿದ ಭಾವಿಪತಿ ವಿಘ್ನೇಶ್ 

    ಇದೇ ಅಂಶವನ್ನು ಮುಂದಿಟ್ಟುಕೊಂಡು ಈಗ ಮಸೀದಿ ಆಡಳಿತ ಮಂಡಳಿ ಕಾನೂನು ಹೋರಾಟ ಮಾಡುತ್ತಿದೆ. 1991ರ ಕಾಯಿದೆ ಅನ್ವಯ ಇಡೀ ಪ್ರಕರಣವೇ ವಿಚಾರಣೆಗೆ ಯೋಗ್ಯವಲ್ಲ ಎಂದು ಕೋರ್ಟ್‍ನಲ್ಲಿ ವಾದ ಮಂಡಿಸಿದೆ. ಆದರೆ ರಾಮಮಂದಿರ ರೀತಿಯಲ್ಲೇ ಈ ಪ್ರಕರಣವನ್ನು ಪರಿಗಣಿಸಲು ಹಿಂದೂ ಪರ ವಕೀಲರು ಮನವಿ ಮಾಡುತ್ತಿದ್ದಾರೆ.

  • 154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?

    154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?

    ನವದೆಹಲಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆಯಾಗಿ ಇದೀಗ ಭಾರೀ ವಿವಾದ ಎದ್ದಿದ್ದು, ಪ್ರಕರಣದ ನಡುವೆಯೇ ಹೊಸ ಬೆಳವಣಿಗೆ ನಡೆದಿದೆ. 154 ವರ್ಷ ಹಳೆಯ ಪೋಟೋವೊಂದು ಪತ್ತೆಯಾಗಿದ್ದು ಅದನ್ನು ಜ್ಞಾನವಾಪಿ ಮಸೀದಿಯ ಸಂಕೀರ್ಣದ್ದು ಎನ್ನಲಾಗುತ್ತಿದೆ. ಇದೀಗ ಅಲ್ಲಿ ಹನುಮಂತನ ವಿಗ್ರಹವೂ ಇದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ.

    1868ರಲ್ಲಿ ಬ್ರಿಟಿಷ್ ಛಾಯಾಗ್ರಾಹಕ ಸ್ಯಾಮುಯೆಲ್ ಬೌರ್ನ್ ಸರೆಹಿಡಿದಿರುವ ಪೋಟೋವನ್ನು ಖಾಸಗಿ ಸುದ್ದಿವಾಹಿನಿಯೊಂದು ಪತ್ತೆಹಚ್ಚಿದ್ದು, ಇದು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ಗೋಡೆಯ ಭಾಗ ಎಂದು ತಿಳಿಸಿದೆ. ಈ ಚಿತ್ರವನ್ನು ಅಮೆರಿಕದ ಹೂಸ್ಟನ್‌ನಲ್ಲಿರುವ ದ ಮ್ಯೂಸಿಯಂ ಆಫ್ ಫೈನ್ ಆರ್ಟ್ಸ್‌ನಲ್ಲಿ ಸಂರಕ್ಷಿಸಲಾಗಿದೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ

    ಜ್ಞಾನವಾಪಿ ಮಸೀದಿಯ ಸಂಕೀರ್ಣ ಹಿಂದೆ ಹೇಗಿತ್ತು ಎಂಬುದು ಫೋಟೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅದರಲ್ಲಿ ನಂದಿ, ಹನುಮಂತನ ವಿಗ್ರಹ, ಕಂಬಗಳ ಮೇಲೆ ಹಿಂದೂ ಕಲಾಕೃತಿ ಹಾಗೂ ಗಂಟೆಗಳನ್ನೂ ನೋಡಬಹುದು. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ- 19 ವಿಮಾನಗಳ ಮಾರ್ಗ ಬದಲಾವಣೆ

    ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂ ಚಿಹ್ನೆಗಳು, ದೇವತೆಗಳ ವಿಗ್ರಹಗಳಿವೆ ಎಂಬ ಹಿಂದೂ ಸಮುದಾಯದವರ ಹೇಳಿಕೆಗೆ ಈ ಚಿತ್ರಗಳು ಮತ್ತಷ್ಟು ಬಲ ನೀಡುತ್ತಿವೆ. ಆದರೆ ಈ ಫೋಟೋ ನಿಜವಾಗಿಯೂ ಜ್ಞಾನವಾಪಿಯದ್ದೇ ಎಂಬುದು ಇನ್ನೂ ದೃಢವಾಗಿಲ್ಲ.

    ಇದೀಗ ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯಲಿದೆ. ಇತ್ತೀಚೆಗೆ ಮಸೀದಿಯಲ್ಲಿ ಇನ್ನೊಂದು ಶಿವಲಿಂಗ ಇರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ.

  • ಜ್ಞಾನವಾಪಿ ಕೇಸ್ – ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ಪ್ರಾಧ್ಯಾಪಕನಿಗೆ ಜಾಮೀನು

    ಜ್ಞಾನವಾಪಿ ಕೇಸ್ – ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ಪ್ರಾಧ್ಯಾಪಕನಿಗೆ ಜಾಮೀನು

    ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕನಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 50,000 ರೂ. ಬಾಂಡ್ ನೀಡಿದ ಬಳಿಕ ಪ್ರಾಧ್ಯಾಪಕ ಜಾಮೀನಿನ ಮೇಲೆ ಹೊರಬರಬಹುದು ಎಂದಿದೆ.

    ಪ್ರಾಧ್ಯಾಪಕ ರತನ್ ಲಾಲ್ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ. ಈ ಹಿನ್ನೆಲೆಯಲ್ಲಿ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಮಂಗಳವಾರ ರತನ್ ಲಾಲ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    ರತನ್ ಲಾಲ್‌ನನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದರು. ಬಳಿಕ ರತನ್ ಲಾಲ್ ಜಾಮೀನು ಹಾಗೂ ರಕ್ಷಣೆಯನ್ನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ದೆಹಲಿ ನ್ಯಾಯಾಲಯ 50,000 ರೂ. ಬಾಂಡ್ ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಅಬಕಾರಿ ಸುಂಕ ಇಳಿಕೆ

    ರತನ್ ಲಾಲ್ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸAಹಿತೆ 153ಎ(ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹಾಗೂ ಸೌಹಾರ್ದದ ಮೇಲೆ ಪರಿಣಾಮ ಬೀರುವ ಕೃತ್ಯಗಳು) ಹಾಗೂ 295ಎ(ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾಮಿಕ ಭಾವನೆಯನ್ನು ಉದ್ರೇಕಿಸುವುದು) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

  • 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್ ಆದೇಶವನ್ನು ಒಪ್ಪಿಕೊಂಡಿರುವ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕಿರುವ ಶಿವಲಿಂಗವೂ ಒಂದಾಗಿದೆ. ಇದನ್ನು ಸಾಬೀತು ಪಡಿಸಲು ನಮ್ಮಿಂದ ಸಾಧ್ಯವಿದೆ ಎಂದು ತಿಳಿಸಿದೆ.

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವುದರ ಬಗ್ಗೆ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಅಲೋಕ್ ಕುಮಾರ್, ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿರುವುದು ಒಂದು ಗಂಭೀರ ವಿಚಾರ. ಇದು 12 ಜ್ಯೋತಿರ್ಲಿಂಗಗಳಲ್ಲಿ ಒಂದು ಎಂದು ಸಾಬೀತುಪಡಿಸಲು ಅನುಭವಿ ನ್ಯಾಯಾಧೀಶರ ಅಗತ್ಯವಿದೆ. ಜಿಲ್ಲಾ ನ್ಯಾಯಾಲಯ ಇದನ್ನು ಪರಿಶೀಲಿಸಲಿದೆ ಎಂದು ತಿಳಿಸಿದೆ. ಸುಪ್ರಿಂ ಕೋರ್ಟ್ ನಿರ್ಧಾರವನ್ನು ನಾವು ಒಪ್ಪುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ – ದೆಹಲಿ ಪ್ರಾಧ್ಯಾಪಕ ಅರೆಸ್ಟ್

    ಜ್ಞಾನವಾಪಿ ಮಸೀದಿಯಲ್ಲಿ ನಂದಿಯೂ ಕಂಡುಬಂದಿತ್ತು. ಹೀಗಾಗಿ ಇದನ್ನು ನಾವು ಶಿವಲಿಂಗ ಎಂದು ಬಲವಾಗಿ ನಂಬಬಹುದು. 12 ಜ್ಯೋತಿರ್ಲಿಂಗಗಳಲ್ಲಿ ಇದು ಒಂದು ಎಂಬುದನ್ನು ಸಾಬೀತುಪಡಿಸಬಹುದು. ಹಿಂದೂ ದೇವಾಲಯವನ್ನು ಮೊಘಲರು ವಶಪಡಿಸಿಕೊಂಡು, ಅದರ ಹಳೆಯ ಅವಶೇಷಗಳ ಮೇಲೆ ಮಸೀದಿಯನ್ನು ಕಟ್ಟಲಾಗಿದೆ. ನಾವು ಅದನ್ನು ನ್ಯಾಯಾಲಯಕ್ಕೆ ಸಾಬೀತುಪಡಿಸಲು ಸಾಧ್ಯವಿದೆ. ಸುಪ್ರಿಂ ಕೋರ್ಟ್ ಈ ಪ್ರಕರಣವನ್ನು ನಿರ್ಧರಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯಮುನೋತ್ರಿ ದೇವಸ್ಥಾನದ ಹೆದ್ದಾರಿಯಲ್ಲಿ ಗೋಡೆ ಕುಸಿತ – 10 ಸಾವಿರ ಮಂದಿ ಸಂಕಷ್ಟದಲ್ಲಿ

    ಜ್ಞಾನವಾಪಿ ಮಸೀದಿ ಪ್ರಕರಣವನ್ನು ಶುಕ್ರವಾರ ಸುಪ್ರಿಂ ಕೋರ್ಟ್ ಸಿವಿಲ್ ನ್ಯಾಯಾಧೀಶರಿಂದ ವಾರಣಾಸಿ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿದೆ. ಉತ್ತರ ಪ್ರದೇಶದ ಉನ್ನತ ನ್ಯಾಯಾಂಗ ಸೇವೆಯ ಹಿರಿಯ ಹಾಗೂ ಅನುಭವಿ ಅಧಿಕಾರಿಗಳು ಪ್ರಕರಣವನ್ನು ಪರಿಶೀಲಿಸಬೇಕೆಂದು ಆದೇಶಿಸಿದೆ.