Tag: ShivSena

  • ಸಂಜಯ್ ರಾವತ್ ಹತಾಶ ವ್ಯಕ್ತಿ: ಫಡ್ನವೀಸ್

    ಸಂಜಯ್ ರಾವತ್ ಹತಾಶ ವ್ಯಕ್ತಿ: ಫಡ್ನವೀಸ್

    ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಹತಾಶ ವ್ಯಕ್ತಿಯಾಗಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವ್ಯಂಗ್ಯವಾಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜಯ್ ರಾವತ್ ಹತಾಶ್ ವ್ಯಕ್ತಿ. ಅವರಿಗೆ ಯಾವುದೇ ಕೆಲಸವಿಲ್ಲ. ಇದರಿಂದಾಗಿ ಅವರು ದಿನವಿಡೀ ಏನೇನೋ ಹೇಳುತ್ತಲೇ ಇರುತ್ತಾರೆ ಎಂದು ತಿರುಗೇಟು ನೀಡಿದರು.

    Sanjay Raut

    ಬಿಜೆಪಿ ಹಾಗೂ ಎಂಎನ್‍ಎಸ್ ಮೈತ್ರಿ ಸಾಧ್ಯತೆಯ ಬಗ್ಗೆ ಇರುವ ಊಹಾಪೋಹವನ್ನು ನಿರಾಕರಿಸಿದ ಅವರು, ಈ ಹಿಂದೆ ರಾಜ್ ಠಾಕ್ರೆ ಅವರು ಮೇ. 3ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಗಡುವು ನೀಡಿದ್ದರು. ಇದಕ್ಕೆ ಬಿಜೆಪಿಯ ಬೆಂಬಲವಿದೆ. ಇದನ್ನು ಎಲ್ಲಾ ನಾಯಕರು ಅನುಸರಿಸುತ್ತಾರೆ ಎಂದು ತಿಳಿಸಿದರು.

    ಭಾನುವಾರದಂದು ಶಿವಸೇನೆ ಸಂಸದ ಸಂಜಯ್ ರಾವತ್ ಮಾತನಾಡಿ, ಮಸೀದಿಗಳಲ್ಲಿ ಧ್ವನಿವರ್ಧಕಗಳ ತೆಗೆದುಹಾಕುವ ಬಗ್ಗೆ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಹೊಸ ಹಿಂದೂ ಓವೈಸಿಯಾಗಿದ್ದಾರೆ. ಬಿಜೆಪಿಯ ಬೆಂಬಲದೊಂದಿಗೆ ಹೊಸ ಹಿಂದೂ ಓವೈಸಿಯ ಉದಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಬಿಜೆಪಿ ಬೆಂಬಲದೊಂದಿಗೆ ಹೊಸ ಹಿಂದೂ ಓವೈಸಿ ಉದಯ : ರಾಜ್ ಠಾಕ್ರೆ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ

    Raj Thackeray

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯನ್ನು ಹೇಗೆ ಬಳಸಿಕೊಂಡಿರೋ, ಅದೇ ರೀತಿ ಮಹಾರಾಷ್ಟ್ರದಲ್ಲಿ ಬಿಜೆಪಿ ರಾಜ್ ಠಾಕ್ರೆ ಅವರನ್ನು ಬಳಸಿಕೊಳ್ಳುತ್ತಿದೆ ಕಿಡಿಕಾರಿದ್ದರು. ಇದನ್ನೂ ಓದಿ: ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

  • ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

    ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

    ಮುಂಬೈ: ಶಿವಸೇನೆ ಸೇನೆ ನಾಯಕ ಸಂಜಯ್ ರಾವತ್ ಅವರ ಆರೋಪಕ್ಕೆ ಕಿಡಿಕಾರಿರುವ ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಅವರು, ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ನಮಗೆ ಮಹಾರಾಷ್ಟ್ರದಲ್ಲಿ ಗಲಭೆ ಬೇಡ. ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸುವುದಿಲ್ಲ. ಆದರೆ ಮುಸ್ಲಿಮರು ಇದನ್ನು ಧ್ವನಿವರ್ಧಕಗಳಲ್ಲಿ ಮಾಡಿದರೆ, ನಾವೂ ಪ್ರತಿಯಾಗಿ ಧ್ವನಿವರ್ಧಕಗಳನ್ನು ಬಳಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಹಿಜಬ್‌ಗೆ ಯಾವುದೇ ನಿಷೇಧವಿಲ್ಲ: ಕೇಂದ್ರ ಸಚಿವ ಮುಖ್ತರ್‌ ಅಬ್ಬಾಸ್‌

    Raj Thackeray

    ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು. ಮೇ 3ರ ನಂತರ ಏನು ಮಾಡಬೇಕೆಂದು ನಾನು ನೋಡುತ್ತೇನೆ. ಅಷ್ಟರಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸದೇ ಇದ್ದರೆ ನಮ್ಮ ಪಕ್ಷವು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾ ಪಠಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.

    ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿಷೇಧ ಹೇರಲು ಒತ್ತಾಯಿಸುತ್ತಿರುವಂತೆಯೇ, ಅವರನ್ನು ಆಡಳಿತ ಪಕ್ಷವಾಗಿರುವ ಶಿವಸೇನೆ ಹಿಂದೂ ಓವೈಸಿ ಎಂದು ಕರೆದಿದ್ದು, ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

    `ಮಹಾರಾಷ್ಟ್ರದಲ್ಲಿ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳು ನಡೆದಿವೆ. ಆದರೆ ಇಲ್ಲಿನ ಜನರು ಮತ್ತು ಪೊಲೀಸರು ಶಾಂತಿ ಕಾಪಾಡಿದ್ದಾರೆ. ಆದರೆ ಹಿಂದೂ ಓವೈಸಿಯಂಥವರು (ರಾಜ್ ಠಾಕ್ರೆ) ರಾಮ-ಹನುಮನ ಹೆಸರಿನಲ್ಲಿ ಗಲಭೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದರು.

    `ನಾನು ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಯುಪಿ ಚುನಾವಣೆಯಲ್ಲಿ ಗೆಲ್ಲಲು ಎಐಎಂಐಎಂನ ಓವೈಸಿ ಬಿಜೆಪಿಗೆ ಮಾಡಿದ ಕೆಲಸವನ್ನೇ ಮಹಾರಾಷ್ಟ್ರದ ಹೊಸ ಹಿಂದೂ ಓವೈಸಿಯಿಂದ ಬಿಜೆಪಿ ಕೇಳುತ್ತಿದೆ’ ಎಂದು ರಾವುತ್ ಕಿಡಿಕಾರಿದ್ದರು.

  • ಬಿಜೆಪಿ ಸರ್ಕಾರಕ್ಕೆ ಪಾಕ್, ಚೀನಾ ಬುದ್ಧಿ ಕಲಿಸಬೇಕಿದೆ: ಶಿವಸೇನೆ

    ಬಿಜೆಪಿ ಸರ್ಕಾರಕ್ಕೆ ಪಾಕ್, ಚೀನಾ ಬುದ್ಧಿ ಕಲಿಸಬೇಕಿದೆ: ಶಿವಸೇನೆ

    – ಕೇಂದ್ರ ಮಂತ್ರಿ ಹೇಳಿಕೆಗೆ ರಾವತ್ ತಿರುಗೇಟು

    ಮುಂಬೈ: ಕೇಂದ್ರ ಮಂತ್ರಿ ರಾವ್‍ಸಾಹೇಬ್ ದಾಳ್ವೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಕ್ಕೆ ನೆರೆಯ ಚೀನಾ ಮತ್ತು ಪಾಕಿಸ್ತಾನ ರಾಷ್ಟ್ರಗಳು ಬುದ್ಧಿ ಕಲಿಸಬೇಕಿದೆ ಎಂದು ಹೇಳಿದ್ದಾರೆ.

    ನವೆಂಬರ್ 26ರಿಂದ ದೆಹಲಿಯ ಗಡಿ ಭಾಗದಲ್ಲಿ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಈ ಸಮಸ್ಯೆಯಿಂದ ಹೊರ ಬರಬೇಕಾದ್ರೆ ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆದುಕೊಳ್ಳಬೇಕು. ಇಡೀ ದೇಶದ ರೈತ ವರ್ಗ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ ಬಿಜೆಪಿ ಸಚಿವರು, ನಾಯಕರು ರೈತರ ಪ್ರತಿಭಟನೆ ಹಿಂದೆ ಪಾಕಿಸ್ತಾನ ಮತ್ತು ಚೀನಾದ ಬೆಂಬಲವಿದೆ ಎಂದು ಹೇಳುವ ಮೂಲಕ ಅನ್ನದಾತರನ್ನ ಅವಮಾನಿಸುತ್ತಿದ್ದಾರೆ ಎಂದು ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೊಸ ಕೃಷಿ ಕಾಯ್ದೆಗಳಲ್ಲಿ ತಿದ್ದುಪಡಿಗೆ ಬಿಜೆಪಿಗೆ ಒಪ್ಪಿದ್ರೆ ಮೊದಲಿಗೆ ತನ್ನ ಆಡಳಿತ ಇರೋ ರಾಜ್ಯಗಳಲ್ಲಿ ಕಾನೂನುಗಳನ್ನ ಜಾರಿಗೆ ತರಲಿ. ತದನಂತರ ಅಲ್ಲಿಯ ಸಾಧಕ-ಬಾಧಕಗಳನ್ನ ಗಮನದಲ್ಲಿರಿಸಿ ಉಳಿದ ಬಿಜೆಪಿಯೇತರ ಸರ್ಕಾರಗಳು ಕಾಯ್ದೆಗಳನ್ನು ತರಲಿವೆ ಎಂದು ಹೇಳಿದರು.

    ಕೇಂದ್ರ ಮಂತ್ರಿ ರಾವ್‍ಸಾಹೇಬ್ ದಾಳ್ವೆ ಹೇಳಿದ್ದೇನು?: ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವರು, ರೈತರ ಆಂದೋಲನದ ಹಿಂದೆ ವೈರಿ ರಾಷ್ಟ್ರಗಳಾದ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಿದ್ದರು.

     

  • ತಾಕತ್ತು ಇದ್ರೆ ಸರ್ಕಾರ ಬೀಳಿಸಿ – ಸಿಎಂ ಠಾಕ್ರೆ ಓಪನ್ ಚಾಲೆಂಜ್

    ತಾಕತ್ತು ಇದ್ರೆ ಸರ್ಕಾರ ಬೀಳಿಸಿ – ಸಿಎಂ ಠಾಕ್ರೆ ಓಪನ್ ಚಾಲೆಂಜ್

    ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ವಿರೋಧಿಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತು ಇದ್ರೆ ನಮ್ಮ ಸರ್ಕಾರ ಬೀಳಿಸಿ ನೋಡಿ ಎಂದು ಓಪನ್ ಚಾಲೆಂಜ್ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆದಾಗಿನಿಂದಲೂ ಮಹಾರಾಷ್ಟ್ರದಲ್ಲಿ ರಚನೆಯಾಗಿರುವ ಅಘಾಡಿ ಸರ್ಕಾರ (ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ) ಬೀಳುತ್ತೆ ಎಂದು ಕೆಲವರು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಅಂತ ಠಾಕ್ರೆ ಗುಡುಗಿದರು.

    ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ಇಂದಿಗೆ ಒಂದು ವರ್ಷವಾಯ್ತು. ಅಂದಿನಿಂದ ಇಂದಿನವರೆಗೂ ಕೆಲವರು ಸರ್ಕಾರ ಪತನವಾಗುತ್ತೆ ಅಂತ ಹೇಳುತ್ತಿದ್ದಾರೆ. ನಿಮಗೆ ತಾಕತ್ತು ಇದ್ರೆ ನಮ್ಮ ಸರ್ಕಾರ ಬೀಳಿಸಿ ಎಂದು ನಾನು ನಿಮಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ. ಕೆಲವರು ರಾಜ್ಯದಲ್ಲಿ ದೇವಸ್ಥಾನಗಳನ್ನು ತೆಗೆಯದಿರುವುದಕ್ಕೆ ಬಾಳಾ ಠಾಕ್ರೆ ಮತ್ತು ನನ್ನ ಹಿಂದುತ್ವ ಬೇರೆ ಎಂದು ಹೇಳುತ್ತಿದ್ದಾರೆ. ನಿಮ್ಮ ಹಿಂದುತ್ವ ಅಂದ್ರೆ ಗಂಟೆ ಬಾರಿಸುವುದು ಮತ್ತು ಭಜನೆ ಮಾಡೋದು ಎಂದರ್ಥ. ನಾವು ಇಷ್ಟು ಚಿಕ್ಕದಾಗಿ ಹಿಂದುತ್ವ ವ್ಯಾಖ್ಯಾನ ಮಾಡಲ್ಲ ಎಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿಗೆ ಹೆಸರು ಹೇಳದೇ ತಿರುಗೇಟು ನೀಡಿದರು.

    ನೀವು ಬಿಹಾರದಲ್ಲಿ ಮಾತ್ರ ಉಚಿತ ಕೊರೊನಾ ವ್ಯಾಕ್ಸಿನ್ ನೀಡುವ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳುತ್ತಿದ್ದೀರಿ. ಹಾಗಾದ್ರೆ ಉಳಿದ ರಾಜ್ಯಗಳು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿವೆ ಎಂದು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

    ಇದೇ ವೇಳೆ ಮಾತನಾಡಿದ ಶಿವಸೇನೆ ರಾಜ್ಯಸಭಾ ಸಂಸದ ಸಂಜಯ್ ರಾವತ್ ಮಾತನಾಡಿ, ನಮ್ಮ ಅಘಾಡಿ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ. ಮುಂದಿನ 25 ವರ್ಷ ನಾವು ಆಡಳಿತದಲ್ಲಿರುವಂತೆ ನಮ್ಮ ಅಭಿವೃದ್ಧಿ ಕೆಲಸಗಳು ಮಾಡುತ್ತವೆ. ಹಿಂದಿನ ವರ್ಷ ನಾನು ಶಿವಸೇನೆಯಿಂದ ಸಿಎಂ ಆಗುತ್ತಾರೆ ಅಂತ ಹೇಳಿದ್ದೆ. ಇದೀಗ ಉದ್ಧವ್ ಠಾಕ್ರೆ ಸಿಎಂ ಆಗಿ ಒಂದು ಪೂರ್ಣಗೊಳಿಸಿದ್ದಾರೆ ಎಂದು ಹೇಳಿದರು.

  • ಮಹಾರಾಷ್ಟ್ರ ಸರ್ಕಾರದ ಬಳಿ ಕ್ಷಮೆ ಕೇಳು: ಕಂಗನಾಗೆ ರಾಖಿ ಸಾವಂತ್ ಆಗ್ರಹ

    ಮಹಾರಾಷ್ಟ್ರ ಸರ್ಕಾರದ ಬಳಿ ಕ್ಷಮೆ ಕೇಳು: ಕಂಗನಾಗೆ ರಾಖಿ ಸಾವಂತ್ ಆಗ್ರಹ

    -ನೀನು ಸುಳ್ಳಿ, ಸುಶಾಂತ್ ಸಾವನ್ನ ವೈಯಕ್ತಿಯ ಲಾಭಕ್ಕೆ ಬಳಕೆ

    ಮುಂಬೈ: ನಟಿ ಕಂಗನಾ ರಣಾವತ್ ಮಹಾರಾಷ್ಟ್ರ ಸರ್ಕಾರ ಮತ್ತು ಸಿಎಂ ಉದ್ಧವ್ ಠಾಕ್ರೆ ಬಳಿ ಕ್ಷಮೆ ಕೇಳಬೇಕೆಂದು ನಟಿ ರಾಖಿ ಸಾವಂತ್ ಆಗ್ರಹಿಸಿದ್ದಾರೆ. ರಾಖಿ ಸಾವಂತ್ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದು ಕಂಗನಾ ವಿರುದ್ಧ ಕಿಡಿಕಾರಿದ್ದಾರೆ.

    ಕಂಗನಾ ಇಷ್ಟು ದಿನ ಹೇಳಿದೆಲ್ಲ ಸುಳ್ಳು ಅನ್ನೋದು ಸಾಬೀತಾಗ್ತಿದೆ. ಸುಶಾಂತ್ ಸಿಂಗ್ ರಜಪೂತ್ ಸಾವನ್ನ ವೈಯಕ್ತಿಯ ಮತ್ತು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ನಟಿ ಕಂಗನಾಗೆ ನಾಚಿಕೆ ಆಗಬೇಕು. ಹಾಗಾಗಿ ಸುಶಾಂತ್ ಅವರ ನಿಜವಾದ ಅಭಿಮಾನಿಗಳು, ಸಿಎಂ ಠಾಕ್ರೆ ಮತ್ತು ಪುತ್ರ ಆದಿತ್ಯ ಬಳಿ ಬಹಿರಂಗವಾಗಿ ಕ್ಷೆಮ ಯಾಚಿಸಬೇಕು. ಜೊತೆಗೆ ನಿರ್ಮಾಪಕ ಕರಣ್ ಜೋಹರ್, ಹಿರಿಯ ನಟಿ ಊರ್ಮಿಳಾ ಮಾತೊಂಡ್ಕರ್, ದೀಪಿಕಾ ಪಡುಕೋಣೆ ಸೇರಿದಂತೆ ಎಲ್ಲ ಬಾಲಿವುಡ್ ಸೆಲೆಬ್ರಿಟಿಗಳ ಬಳಿ ಕ್ಷಮೆ ಯಾವಾಗ ಕೇಳ್ತಿಯಾ ಎಂದು ರಾಖಿ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕಂಗನಾ ವಿರುದ್ಧ ಡ್ರಗ್‌ ಪರೀಕ್ಷೆ – ಸಾಬೀತಾದ್ರೆ ಮುಂಬೈ ತೊರೆಯುತ್ತೇನೆ

    ನೀನು ಸೋತಿದ್ದೀಯಾ, ನಿನ್ನ ಬಗ್ಗೆ ನನಗೆ ಅನುಕಂಪ ಇದೆ. ರಾಜಕೀಯ ಲಾಭ ಪಡೆದುಕೊಳ್ಳಲು ಬಾಲಿವುಡ್ ಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ ನಿನ್ನ ಎಲ್ಲ ಕಾರ್ಯಗಳು ವಿಫಲವಾಗಿವೆ. ಮುಂದಿನ ದಿನಗಳಲ್ಲಿ ನಿನಗೆ ಯಾವುದೇ ಸಿನಿಮಾಗಳು ಸಿಗಲ್ಲ. ನಿನಗೆ ಹೋರಾಟ ಅಂದ್ರೆ ಇಷ್ಟ ಅಲ್ವಾ, ದೇಶದ ಗಡಿಯಲ್ಲಿ ಹೋಗಿ ಸೇವೆ ಸಲ್ಲಿಸು. ಅಲ್ಲಿ ಚೀನಾ ವಿರುದ್ಧ ಹೋರಾಟ ಮಾಡು. ಎಲ್ಲ ಕಡೆಯೂ ನಿನ್ನ ಸುಳ್ಳು ಬಯಲಾಗಿದೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ-ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ

    ಈ ಹಿಂದೆಯೂ ಕಂಗನಾ ವಿರುದ್ಧ ಗುಡುಗಿದ್ದ ರಾಖಿ ಸಾವಂತ್, ಸಿನಿಮಾ ಇಂಡಸ್ಟ್ರಿಯಲ್ಲಿರೋ ಎಲ್ಲ ನಿರ್ಮಾಪಕರು, ನಿರ್ದೇಶಕರು ಕೆಟ್ಟವರಿದ್ದಾರೆ. ನಿನ್ನ ತಲೆಯ ಮೇಲೆ ಕೊಹಿನೂರು ವಜ್ರ ಇದೆಯಾ? ನಿನ್ನ ಹೊರತು ಬಾಲಿವುಡ್‍ನಲ್ಲಿರುವವರು ಕೆಟ್ಟವರಾ? ಬಾಲಿವುಡ್ ಕಂಗನಾಳನ್ನ ಬಾಯ್‍ಕಾಟ್ ಮಾಡಿ. ಅಲ್ಲೇ ಹಿಮಾಲಯದ ಮನೆಯಲ್ಲಿ ಕುಳಿತುಕೊಳ್ಳಿ. ಬಾಲಿವುಡ್ ಸಿನಿಮಾದ ಹಣದಿಂದ ಊರಲ್ಲಿ ಮನೆ ಇದೆ. ಮೊದಲಿಗೆ ಅದು ಸಹ ಇರಲಿಲ್ಲ. ಈಗ ಬಾಲಿವುಡ್ ಕಂಗನಾಗೆ ಕೆಟ್ಟದಾಗಿ ಕಾಣುತ್ತಿದೆಯಾ ಎಂದು ರಾಖಿ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ: ಕಂಗನಾ ಕಟ್ಟಡ ನೆಲಸಮಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ: ಶಿವಸೇನೆ

    https://www.instagram.com/p/CGKjhRTHVDW/

    ಕಂಗನಾ ಹೇಳಿಕೆ ಪ್ರಕಾರ ಮುಂಬೈನಲ್ಲಿ ಭಯೋತ್ಪಾದಕರಿದ್ದಾರೆ ಅಂತೆ. ಮುಂಬೈ ನಗರವನ್ನ ಪಿಓಕೆ ಹೋಲಿಕೆ ಮಾಡೋದು ಎಷ್ಟು ಸರಿ. ಮುಂಬೈ ಬಗ್ಗೆ ಮಾತನಾಡುವ ನೀನು ಇಲ್ಲಿಗ್ಯಾಕೆ ಬಂದಿರುವೆ. ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ ಇದೆನಾ? ನೋಡೋಣ ನೀನು ಎಷ್ಟು ಜನರಿಗೆ ಉದ್ಯೋಗ ಕೊಡ್ತೀಯಾ ತಿಳಿಸು. ಬಾಲಿವುಡ್ ಸೂಪರ್ ಹಿಟ್ ಸಿನಿಮಾ ನೀಡಿರುವ ಕರಣ್ ಜೋಹರ್ ಅವರನ್ನ ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ನಿನ್ನ ವರ್ತನೆಗೆ ಸಿನಿಮಾಗಳು ಸಿಕ್ಕಿಲ್ಲ. ಹಾಗಾಗಿ ನಿನ್ನದೇ ಪ್ರೊಡೆಕ್ಷನ್ ಹೌಸ್ ಮಾಡಿಕೊಡು ಸಿನಿಮಾ ಮಾಡುವ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ನನ್ನ ಮನೆಯಂತೆ ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ: ಸಿಎಂ ಠಾಕ್ರೆ ವಿರುದ್ಧ ಕಂಗನಾ ಪ್ರಹಾರ

  • ಮಹಿಳೆಯ ಧ್ವನಿಯಂತೆ ನಟಿಸಿದ್ದವರ ಬಾಯಿ ಹೆಪ್ಪುಗಟ್ಟಿತಾ? ಶಿವಸೇನೆ ಸಂಸದೆ

    ಮಹಿಳೆಯ ಧ್ವನಿಯಂತೆ ನಟಿಸಿದ್ದವರ ಬಾಯಿ ಹೆಪ್ಪುಗಟ್ಟಿತಾ? ಶಿವಸೇನೆ ಸಂಸದೆ

    -ಹತ್ರಾಸ್ ಕೇಸಿನಲ್ಲಿ ಕಂಗನಾ ಮೌನವೇಕೆ?

    ಮುಂಬೈ: ಮಹಿಳೆಯರ ಧ್ವನಿ ಎಂಬಂತೆ ನಟಿಸಿ ವೈ ಕೆಟಗರಿ ಭದ್ರತೆಯಲ್ಲಿ ಮುಂಬೈಗೆ ಬಂದಿದ್ದ ನಟಿ ಕಂಗನಾ ರಣಾವತ್ ಹತ್ರಾಸ್ ಪ್ರಕರಣದಲ್ಲಿ ಮೌನವಾಗಿರೋದೇಕೆ ಎಂದು ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಶ್ನೆ ಮಾಡಿದ್ದಾರೆ.

    ಹಗಲು-ರಾತ್ರಿ ಅನ್ನದೇ ಮುಂಬೈ ಪೊಲೀಸರನ್ನು ಟೀಕಿಸಿದಕ್ಕೆ ಆ ನಟಿಗೆ ವೈ ದರ್ಜೆಯ ಭದ್ರತೆಯನ್ನು ನೀಡಲಾಗಿತ್ತು. ತಾನು ಮಹಿಳೆಯರ ಧ್ವನಿ ಎಂಬಂತೆ ತನ್ನನ್ನ ಬಿಂಬಿಸಿಕೊಂಡು ಮುಖ್ಯಮಂತ್ರಿ ಮತ್ತು ರಾಜ್ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದರು. ಮಾಧ್ಯಮಗಳ ನೆಚ್ಚಿನಾಕೆ, ಹತ್ರಾಸ್ ಪ್ರಕರಣದ ಕುರಿತು ಒಂದು ಟ್ವೀಟ್ ಸಹ ಮಾಡುತ್ತಿಲ್ಲ ಏಕೆ ಪ್ರಶ್ನಿಸಿದ್ದಾರೆ. ನಟಿಯ ಬಾಯಿ ಈಗ ಹೆಪ್ಪುಗಟ್ಟಿದೆಯಾ? ಆದ್ರೆ ಪ್ರಿಯಾಂಕಾ ಚತುರ್ವೇದಿ ಎಲ್ಲಿಯೂ ಕಂಗನಾ ರಣಾವತ್ ಹೆಸರು ಬಳಸದೇ ಕಿಡಿ ಕಾರಿದ್ದಾರೆ.

    ಕಂಗನಾ ರಣಾವತ್ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದು, ಸಿಎಂ ಯೋಗಿ ಆದಿತ್ಯನಾಥ್ ಅವರ ನಂಬಿಕೆ ಇರಿಸಿ. ಪ್ರಿಯಾಂಕಾ ರೆಡ್ಡಿ ಪ್ರಕರಣದಲ್ಲಿ ಸಂತ್ರಸ್ತೆಯನ್ನ ಸುಟ್ಟು ಹಾಕಿದ ಸ್ಥಳದಲ್ಲಿಯೇ ಕಾಮುಕರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆ ರೀತಿಯ ದಿಢೀರ್ ನ್ಯಾಯ ಬೇಕಿದೆ ಎಂದು ಬರೆದುಕೊಂಡಿದ್ದರು.

    ಏನಿದು ಹತ್ರಾಸ್ ಪ್ರಕರಣ?:
    2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಮಾದರಿಯಲ್ಲಿಯೇ ಉತ್ತರಪ್ರದೇಶದ ಹುತ್ರಾಸ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆಪ್ಟೆಂಬರ್ 29 ಮೃತಪಟ್ಟಿದ್ದರು.

    ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಗ್ರಾಮಕ್ಕೆ ಮಧ್ಯರಾತ್ರಿ ಯುವತಿಯ ಶವವನ್ನು ತೆಗೆದುಕೊಂಡು ಹೋಗಿ ಪೊಲೀಸರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಆದರೆ ಮಧ್ಯರಾತ್ರಿ ಅಂತ್ಯಕ್ರಿಯೆ ಮಾಡುವುದು ನಮ್ಮ ಸಂಪ್ರದಾಯವಲ್ಲ. ಮೃತದೇಹ ನಮಗೆ ನೀಡಿ, ಬೆಳಗ್ಗೆ ಅಂತ್ಯಕ್ರಿಯೆ ಮಾಡುತ್ತೇವೆ ಎಂದು ಮನವಿ ಮಾಡಿಕೊಂಡರೂ ಪೊಲೀಸರು ಒಪ್ಪಿಗೆ ನೀಡರಲಿಲ್ಲ.

  • ಚಂಡೀಗಢ ತಲುಪ್ತಿದ್ದಂತೆ ನಾನು ಬದುಕುಳಿದೆ ಎಂದ ಕಂಗನಾ

    ಚಂಡೀಗಢ ತಲುಪ್ತಿದ್ದಂತೆ ನಾನು ಬದುಕುಳಿದೆ ಎಂದ ಕಂಗನಾ

    -ಸೋನಿಯಾ ಸೇನೆಯಿಂದ ಮುಂಬೈ ಅಸುರಕ್ಷಿತ
    -ಬಿಜೆಪಿ ಪರ ಪ್ರಚಾರ ಮಾಡ್ತಾರಾ ಕಂಗನಾ?

    ಮುಂಬೈ: ಚಂಡಿಗಢ ತಲುಪುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್, ಈ ಬಾರಿ ನಾನು ಬದುಕುಳಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಬೆಳಗ್ಗೆ ಕಂಗನಾ ಮನಾಲಿಗಾಗಿ ಮುಂಬೈನಿಂದ ಹಿಂದಿರುಗಿದ್ದರು. ಚಂಢೀಗಢ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಕಂಗನಾ ರಣಾವತ್, ಇಲ್ಲಿಗೆ ಬಂದ ಕೂಡಲೇ ಭದ್ರತೆ ಹೆಸರಿಗೆ ಮಾತ್ರವಿದೆ. ಇಲ್ಲಿ ನನಗೆ ಸುರಕ್ಷತೆ ಅನುಭವ ಆಗುತ್ತಿದ್ದು, ಜನರು ನನ್ನನ್ನು ಪ್ರೀತಿಯಿಂದ ಸ್ವಾಗತಿಸುತ್ತಿದ್ದಾರೆ. ಈ ಬಾರಿ ಬದುಕುಳಿದಿದ್ದೇನೆ. ಹಿಂದೊಮ್ಮೆ ಮುಂಬೈನಲ್ಲಿ ತಾಯಿಯ ನಿಷ್ಕಲ್ಮಶ ಪ್ರೀತಿಯನ್ನು ಕಂಡಿದ್ದೇನೆ. ಆದ್ರೆ ಸೋನಿಯಾ ಸೇನೆಯಿಂದಾಗಿ ಮುಂಬೈನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.

    ಇನ್ನೊಂದು ಟ್ವೀಟ್ ನಲ್ಲಿ ಈ ಬಾರಿ ದೆಹಲಿಯಲ್ಲಿ ರಕ್ತ ಹರಿಸಲಾಗಿದೆ. ಸೋನಿಯಾ ಸೇನೆ ಮುಂಬೈನಲ್ಲಿ ಪ್ರತ್ಯೇಕ ಕಾಶ್ಮೀರದ ಘೋಷಣೆಗಳನ್ನ ಕೂಗಿದೆ. ಇಂದು ಸ್ವತಂತ್ರದ ಬೆಲೆ ಧ್ವನಿ ಆಗಿದೆ. ನನಗೆ ನಿಮ್ಮ ಬೆಂಬಲ ನೀಡಿ. ನನ್ನ ಜೊತೆ ನಿಮ್ಮ ಧ್ವನಿಯನ್ನ ಸೇರಿಸಿದ್ರೆ ಮುಂದೊಂದು ದಿನ ಸ್ವತಂತ್ರ ಅಂದ್ರೆ ಕೇವಲ ಕ್ರಾಂತಿ ಎಂದ ದಿನಗಳನ್ನ ಎದುರಿಸಬೇಕಾಗುತ್ತದೆ ಎಂದು ಕಂಗನಾ ಬರೆದುಕೊಂಡಿದಾರೆ.

    ಬಿಹಾರ ಚುನಾವಣೆ ಹೊಸ್ತಿಲಿನಲ್ಲಿದ್ದು, ಬಿಜೆಪಿ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ವಿಪಕ್ಷಗಳು ವರದಿ ಮಾಡಿವೆ. ಬಿಜೆಪಿ ಪ್ರಚಾರದ ಭಿತ್ತಿ ಪತ್ರಗಳಲ್ಲಿ ಸುಶಾಂತ್ ಭಾವಚಿತ್ರ ಹಾಕಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸುಶಾಂತ್ ಪ್ರಕರಣದಲ್ಲಿ ಧ್ವನಿ ಎತ್ತಿದ್ದ ಕಂಗನಾರನನ್ನ ಬಿಜೆಪಿ ಪ್ರಚಾರಕ್ಕೆ ಬಳಸಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಹಾರ ಬಿಜೆಪಿ ಚುನಾವಣೆ ಉಸ್ತುವಾರಿ ದೇವೆಂದ್ರ ಫಡ್ನವಿಸ್, ಪ್ರಧಾನಿ ನರೇಂದ್ರ ಮೋದಿ ಅವರು ಇರುವಾಗ ನಮಗೆ ಬೇರೆ ಯಾವ ಸ್ಟಾರ್ ಪ್ರಚಾರಕರು ಬೇಕಿಲ್ಲ ಎಂದು ಹೇಳಿದ್ದಾರೆ.

    ಶಿವಸೇನೆ ಮತ್ತು ಕಂಗನಾ ನಡುವಿನ ಸಂಘರ್ಷದ ವೇಳೆಯೇ ನಟಿ ಕುಟುಂಬಸ್ಥರು ಬಿಜೆಪಿ ಸೇರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಶಿವಸೇನೆ ನಾಯಕರ ಬೆದರಿಕೆ ಹಿನ್ನೆಲೆ ಕಂಗನಾ ಅವರಿಗೆ ವೈ ದರ್ಜೆಯ ಭದ್ರತೆಯನ್ನ ಕೇಂದ್ರ ಸರ್ಕಾರ ನೀಡಿದೆ.

    ಭಾನುವಾರ ಮಾಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಯಾರಿ ಅವರನ್ನ ಕಂಗನಾ ಭೇಟಿಯಾಗಿದ್ದರು. ಭೇಟಿ ಬಳಿಕ ಸುದ್ದಿಸಂಸ್ಥೆ ಜೊತೆ ಮಾತನಾಡಿದ್ದ ಕಂಗನಾ, ಒಬ್ಬ ಸಾಮಾನ್ಯ ಪ್ರಜೆಯಂತೆ ರಾಜಭವನಕ್ಕೆ ಬಂದಿದ್ದೆ. ನನಗಾದ ಅನ್ಯಾಯದ ಬಗ್ಗೆ ರಾಜ್ಯಪಾಲರ ಮುಂದೆ ಹೇಳಿಕೊಂಡಿದ್ದೇನೆ. ನನಗೆ ನ್ಯಾಯ ಸಿಗುವ ನಂಬಿಕೆ ಇದೆ. ರಾಜ್ಯಪಾಲರ ಮಗಳ ಮನವಿಯಂತೆ ನನ್ನ ಸಮಸ್ಯೆಯನ್ನ ಆಲಿಸಿರೋದು ಖುಷಿ ತಂದಿದೆ. ರಾಜಕೀಯ ಮತ್ತು ಯಾವುದೇ ಪಕ್ಷಗಳಿಗೆ ಸಂಬಂಧವಿಲ್ಲ ಎಂದಿದ್ದರು. ರಾಜಭವನದಿಂದ ಹೊರ ಬಂದ ಕಂಗನಾ ಕಮಲದ ಹೂ ಹಿಡಿದುಕೊಂಡು ಬಂದಿರುವ ಫೋಟೋಗಳು ವೈರಲ್ ಆಗಿವೆ.

    ಕಳೆದ ಕೆಲ ದಿನಗಳಿಂದ ಶಿವಸೇನೆ ಮತ್ತು ಕಂಗನಾ ನಡುವೆ ಜಟಾಪಟಿ ನಡೆದಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಬಿಎಂಸಿ ನಿಯಮಗಳ ವಿರುದ್ಧವಾಗಿ ಕಂಗನಾ ಕಚೇರಿಯ ಕಟ್ಟಡ ವಿನ್ಯಾಸ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ನೋಟಿಸ್ ನೀಡಿದ ಕೆಲವೇ ಗಂಟೆಗಳಲ್ಲಿ ಬಿಎಂಸಿ ಕಚೇರಿ ಕಟ್ಟಡ ಒಳಾಂಗಣವನ್ನ ನೆಲಸಮ ಮಾಡಿತ್ತು. ಈ ಸಂಬಂಧ ಕಂಗನಾ ನ್ಯಾಯಾಲಯದ ಮೊರೆ ಹೋಗಿದ್ದರು. ಕಂಗನಾ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಬಿಎಂಸಿ ಕಾರ್ಯಚರಣೆಗೆ ತಡೆ ನೀಡಿದೆ. ಹಾಗೆ ದಿಢೀರ್ ನಿರ್ಧಾರಕ್ಕೆ ಕಾರಣ ತಿಳಿಸುವಂತೆ ಬಿಎಂಸಿಗೆ ನ್ಯಾಯಾಲಯ ಸೂಚನೆ ನೀಡಿದೆ.

    ಕಟ್ಟಡ ನೆಲಸಮ ಬೆನ್ನಲ್ಲೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕಂಗನಾ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದರು. ಕಂಗನಾ ಆರೋಪಕ್ಕೆ ಸ್ಪಷ್ಟನೆ ನೀಡಿದ್ದ ಶಿವಸೇನೆ ಸಂಸದ ಸಂಜಯ್ ರಾವತ್, ಸರ್ಕಾರಕ್ಕೂ ಮತ್ತು ಕಟ್ಟಡ ನೆಲಸಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿತ್ತು. ಈ ನಡುವೆ ಕಂಗನಾ ವಿರುದ್ಧ ಡ್ರಗ್ಸ್ ಸೇವನೆ ಆರೋಪವನ್ನ ಮಹಾರಾಷ್ಟ್ರ ಸರ್ಕಾರ ಮಾಡಿದೆ. ಆರೋಪ ಸಾಬೀತಾದ್ರೆ ಮುಂಬೈ ತೊರೆಯುವದಾಗಿ ಕಂಗನಾ ಸವಾಲು ಹಾಕಿದ್ದಾರೆ.

  • ಕಂಗನಾ ಕಟ್ಟಡ ನೆಲಸಮಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ: ಶಿವಸೇನೆ

    ಕಂಗನಾ ಕಟ್ಟಡ ನೆಲಸಮಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ: ಶಿವಸೇನೆ

    -ಕಂಗನಾ ಮೇಲೆ ವೈಯಕ್ತಿಕ ದ್ವೇಷವಿಲ್ಲ ಎಂದ ರಾವತ್

    ಮುಂಬೈ: ನಟಿ ಕಂಗನಾ ರಣಾವತ್ ಕಚೇರಿ ನೆಲಸಮಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಬಿಎಂಸಿ (ಬೃಹತ್ ಮುಂಬೈ ಕಾರ್ಪೋರೇಷನ್) ತೆಗೆದುಕೊಂಡ ನಿರ್ಧಾರ ಇದಾಗಿದೆ. ಕಟ್ಟಡ ನೆಲಸಮಕ್ಕೆ ನ್ಯಾಯಾಲಯ ಕಾರಣ ಕೇಳಿದ್ದು, ಬಿಎಂಸಿ ನಾಳೆ ಉತ್ತರ ನೀಡಲಿದೆ ಎಂದು ಶಿವಸೇನೆಯ ವಕ್ತಾರ, ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

    ಬಿಎಂಸಿ ಪ್ರತಿದಿನ ತೆಗೆದುಕೊಳ್ಳುವ ನಿರ್ಧಾರಗಳು ಸರ್ಕಾರಕ್ಕೆ ತಿಳಿದಿರಬೇಕೆಂದು ಏನಿಲ್ಲ. ಅದು ಸ್ವತಂತ್ರ ಸಂಸ್ಥೆಯಾಗಿದ್ದು, ತನ್ನ ಕಾರ್ಯಗಳನ್ನ ಮಾಡುತ್ತಿರುತ್ತದೆ. ಶಿವಸೇನೆಗೆ ಕಂಗನಾ ರಣಾವತ್ ಮೇಲೆ ಯಾವುದೇ ವೈಯಕ್ತಿಯ ದ್ವೇಷವಿಲ್ಲ. ಮುಂಬೈ ನಗರದಲ್ಲಿ ಇಡೀ ದೇಶದ ಎಲ್ಲ ಭಾಗದ ಜನರು ವಾಸವಾಗಿದ್ದಾರೆ. ಅದೇ ರೀತಿ ಕಂಗನಾ ಸಹ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ಆದ್ರೆ ಮುಂಬೈನ್ನ ಪಿಓಕೆಗೆ ಹೋಲಿಕೆ ಮಾಡಿದ್ದರಿಂದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಸಂಜಯ್ ರಾವತ್ ಹಾರಿಕೆಯ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ನನ್ನ ಮನೆಯಂತೆ ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ: ಸಿಎಂ ಠಾಕ್ರೆ ವಿರುದ್ಧ ಕಂಗನಾ ಪ್ರಹಾರ

    ಇಂದು ಬೆಳಗ್ಗೆ ನಡೆದ ಘಟನೆಯ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ. ಶಿವಸೇನೆಯ ಯಾವ ಕಾರ್ಯಕರ್ತರು ಕಂಗನಾಗೆ ಜೀವ ಬೆದರಿಕೆ ಹಾಕಿಲ್ಲ. ನಿಮಗೆ ಮುಂಬೈ ಪಾಕಿಸ್ತಾನ ರೀತಿ ಕಾಣುತ್ತಿದ್ದರೆ ಇಲ್ಲಿ ಯಾಕೆ ವಾಸ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದ್ದೆ. ನನ್ನ ಹೇಳಿಕೆ ಬೇರೆಯ ಸ್ವರೂಪ ಪಡೆದುಕೊಂಡಿತು ಎಂದು ಸಂಜಯ್ ರಾವತ್ ಮಾತನ್ನ ಬದಲಿಸಿದರು. ಇದನ್ನೂ ಓದಿಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ-ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ

    ಕಂಗನಾ ಏನೇ ಹೇಳಿದ್ರೂ ನಾವು ಪ್ರತಿಕ್ರಿಯೆ ನೀಡಲ್ಲ. ಮಹಾರಾಷ್ಟ್ರದ ಆಸ್ಮಿಯತೆ ಮತ್ತು ಗೌರವದ ಪ್ರಶ್ನೆ ಬಂದಾಗ ರಾಜ್ಯದ ಜನತೆ ಒಂದಾಗುತ್ತಾರೆ. ಕಂಗನಾ ಹೇಳಿಕೆಯಿಂದ ರಾಜ್ಯದ ಜನತೆ ಆಕ್ರೋಶಗೊಂಡಿದ್ದರು. ಕಂಗನಾ ಕಟ್ಟಡ ಕಚೇರಿ ಅಕ್ರಮವಾಗಿ ವಿನ್ಯಾಸ ಮಾಡಲಾಗಿತ್ತು. ಹಾಗಾಗಿ ಬಿಎಂಸಿ ಅದಕ್ಕೆ ಸಂಬಂಧಿಸಿದ ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಕರಣ ಹೈಕೋರ್ಟ್ ಅಂಗಳದಲ್ಲಿದ್ದು, ಹೆಚ್ಚು ಪ್ರತಿಕ್ರಿಯೆ ನೀಡುವುದು ಉತ್ತಮವಲ್ಲ ಎಂದರು. ಇದನ್ನೂ ಓದಿ: ಕಂಗನಾ ಮನೆ, ಆಫೀಸ್ ಕೆಡವಿದ ಬಿಎಂಸಿ – ನನ್ನ ಮುಂಬೈ ಪಿಓಕೆ ಆಗಿದೆಯೆಂದ ನಟಿ

    ಬೆದರಿಕೆ ಮಧ್ಯೆಯೂ ಮುಂಬೈಗೆ ಹಿಮಾಚಲಪ್ರದೇಶದಿಂದ ಹೊರಟಿದ್ದ ಕಂಗನಾ, ಮಹಾ ಸರ್ಕಾರವನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೂ, ಬಿಎಂಸಿಯನ್ನು ಬಾಬರ್ ಸೈನ್ಯಕ್ಕೂ ಹೋಲಿಸಿ ವಾಗ್ದಾಳಿ ನಡೆಸಿದ್ದರು. ಕಂಗನಾ ಮುಂಬೈಗೆ ಆಗಮಿಸಿದ ವೇಳೆ ವಿಮಾನ ನಿಲ್ದಾಣದ ಮುಂಭಾಗ ಹೈಡ್ರಾಮಾವೇ ನಡೆದಿತ್ತು. ಕಂಗನಾ ಭೇಟಿ ವಿರೋಧಿಸಿ ಶಿವಸೈನಿಕರು ದೊಡ್ಡ ಮಟ್ಟದಲ್ಲಿ ಸೇರಿದ್ದರು. ಇದಕ್ಕೆ ಪ್ರತಿಯಾಗಿ ಕಂಗನಾ ಭೇಟಿ ಬೆಂಬಲಿಸಿ ಕರ್ಣಿ ಸೇನಾ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಜಮಾಯಿಸಿದ್ದರು. ಕಂಗನಾ ಮುಖ್ಯದ್ವಾರದ ಮೂಲಕ ಹೊರ ಬಂದ್ರೆ ಗಲಾಟೆ ಆಗಬಹುದು ಎನ್ನುವ ಕಾರಣಕ್ಕೆ ವಿಮಾನ ನಿಲ್ದಾಣದ ಮತ್ತೊಂದು ಮಾರ್ಗದಲ್ಲಿ ಕಂಗನಾರನ್ನು ಕರೆದೊಯ್ಯಲಾಯ್ತು. ಇದನ್ನೂ ಓದಿ: ಶಿವಸೇನೆ ಧಮ್ಕಿ -ನಟಿ ಕಂಗನಾ ರಣಾವತ್‍ಗೆ ವೈ ದರ್ಜೆಯ ಭದ್ರತೆ

  • ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ

    ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ

    -ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ
    -ಮುಂಬೈಗೆ ಬಂದಿಳಿದ ಮಣಿಕರ್ಣಿಕಾ

    ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಮನೆ ಮತ್ತು ಕಚೇರಿ ನೆಲಸಮ ಕಾರ್ಯಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಬಿಎಂಸಿ (ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ಇಂದು ಬೆಳಗ್ಗೆಯಿಂದ ನಡೆಸುತ್ತಿರುವ ಕಾರ್ಯಚರಣೆಗೆ ಬ್ರೇಕ್ ಬಿದ್ದಿದೆ. ಗುರುವಾರ ಮಧ್ಯಾಹ್ನ 3 ಗಂಟೆವರೆಗೆ ಯಾವುದೇ ನೆಲಸಮ ಕಾರ್ಯ ನಡೆಯುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

    ದಿಢೀರ್ ಅಂತಾ ಕಂಗನಾ ರಣಾವತ್ ಮನೆ ಮತ್ತು ಕಚೇರಿ ನೆಲಸಮಕ್ಕೆ ಮುಂದಾಗಿದ್ದೇಕೆ ಎಂದು ಹೈಕೋರ್ಟ್ ಬಿಎಂಸಿಯನ್ನ ಪ್ರಶ್ನೆ ಮಾಡಿದೆ. ಈ ಸಂಬಂಧ ನಾಳೆ ಬಿಎಂಸಿ ನ್ಯಾಯಾಲಯಕ್ಕೆ ಉತ್ತರ ನೀಡಬೇಕಿದೆ. ಬಾಂಬೆ ಹೈಕೋರ್ಟ್ 26 ಮಾರ್ಚ್ 2020ರಂದು ರಾಜ್ಯ ಸರ್ಕಾರ, ಬಿಎಂಸಿ ಮತ್ತು ಸಂಬಂಧಿತ ವಿಭಾಗಗಳು ಯಾರ ವಿರುದ್ಧವೂ ಆತುರದ ನಿರ್ಧಾರಗಳನ್ನ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶ ನೀಡಿತ್ತು. ಮಾರ್ಚ್ 26ರ ಆದೇಶಕ್ಕೆ ಸಂಬಂಧಿಸಿದಂತೆ ಆಗಸ್ಟ್ 31ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಿ, ಆದೇಶದ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿತ್ತು. ಈ ಕಾಲಾವಧಿಯಲ್ಲಿ ಯಾರೇ ಸಮಸ್ಯೆ ಅನುಭವಿಸಿದ್ರೂ ಹೈಕೋರ್ಟ್ ಬಾಗಿಲು ತಟ್ಟಬಹುದು ಎಂದು ನ್ಯಾಯಾಲಯ ಹೇಳಿತ್ತು.  ಇದನ್ನೂ ಓದಿ: ಕಂಗನಾ ಮನೆ, ಆಫೀಸ್ ಕೆಡವಿದ ಬಿಎಂಸಿ – ನನ್ನ ಮುಂಬೈ ಪಿಓಕೆ ಆಗಿದೆಯೆಂದ ನಟಿ

    ಬಿಎಂಸಿಗೆ ಚಾಟಿ: ಹೈಕೋರ್ಟ್ ನೀಡಿದ ಆದೇಶವನ್ನ ಬಿಎಂಸಿ ಪಾಲನೆ ಮಾಡೋದರಲ್ಲಿ ವಿಫಲವಾದಂತೆ ಕಾಣಿಸುತ್ತಿದೆ. ನೋಟಿಸ್ ನೀಡಿದ 24 ಗಂಟೆಯೊಳಗೆ ಕಚೇರಿ ಮತ್ತು ಮನೆ ನೆಲಸಮ ಮಾಡುವ ಆತುರವೇನಿತ್ತು? ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುವ ವಿಷಯ ತಿಳಿಸಿದಿದ್ದರೂ ಬಿಎಂಸಿ ಈ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎಂದು ಹೈಕೋರ್ಟ್ ಬಿಎಂಸಿಗೆ ಚಾಟಿ ಬೀಸಿದೆ. ಇದನ್ನೂ ಓದಿ: ಶಿವಸೇನೆ ಧಮ್ಕಿ -ನಟಿ ಕಂಗನಾ ರಣಾವತ್‍ಗೆ ವೈ ದರ್ಜೆಯ ಭದ್ರತೆ

    ಕಂಗನಾ ರಣಾವತ್ ಮನೆ ಮತ್ತು ಕಚೇರಿ ನೆಲಸಮ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದು, ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಗಳು ಆರಂಭಗೊಂಡಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಂಗನಾ ಲಾಕ್‍ಡೌನ್ ಬಳಿಕ ಮೊದಲ ಬಾರಿಗೆ ಮುಂಬೈಗೆ ಆಗಮಿಸಿದ್ದಾರೆ. ಶಿವಸೇನೆ ನಾಯಕರ ಬೆದರಿಕೆ ನೀಡಿದ ಹಿನ್ನೆಲೆ ಕೇಂದ್ರ ಸರ್ಕಾರ ಕಂಗನಾ ರಣಾವತ್ ಅವರಿಗೆ ವೈ ದರ್ಜೆಯ ಭದ್ರತೆ ನೀಡಿದೆ.

    ಸರ್ಕಾರದ ವಿರುದ್ಧ ಕಂಗನಾ ಆಕ್ರೋಶ: ನಾನು ಯಾವತ್ತೂ ತಪ್ಪು ಮಾಡುವುದಿಲ್ಲ ಎಂದು ನನ್ನ ಶತ್ರುಗಳು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ಹೀಗಾಗಿಯೇ ನಾನು ಹೇಳಿದ್ದು, ನನ್ನ ಮುಂಬೈ ಈಗ ಪಿಓಕೆ ಆಗಿದೆ ಎಂದು ಟ್ವೀಟ್ ಮಾಡಿ, ಅಧಿಕಾರಿಗಳು ಮನೆಯನ್ನು ಒಡೆದು ಹಾಕುತ್ತಿರುವ ಫೋಟೋವನ್ನು ಹಾಕಿದ್ದಾರೆ. ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಪಾಕಿಸ್ತಾನ ಪ್ರಜಾಪ್ರಭುತ್ವದ ಕಗ್ಗೋಲೆ ಬಾಬರ್ ಮತ್ತು ಅವನ ಸೈನಿಕರು ಎಂದು ವ್ಯಂಗ್ಯವಾಡಿದ್ದಾರೆ.

    ನಾನು ಮುಂಬೈಗೆ ಬರಲು ವಿಮಾನ ನಿಲ್ದಾಣದಲ್ಲಿದ್ದಾಗ, ಮಹಾರಾಷ್ಟ್ರ ಸರ್ಕಾರ ಮತ್ತು ಅವರ ಗೂಂಡಾಗಳು ನನ್ನ ಮನೆಗ ಮತ್ತು ಆಫೀಸ್‍ಗೆ ಹೋಗಿ ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಅದನ್ನು ಒಡೆದು ಹಾಕಿದ್ದಾರೆ. ಅವರು ಒಡೆದು ಹಾಕಲಿ. ನಾನು ಮುಂಬೈಗಾಗಿ ನನ್ನ ರಕ್ತವನ್ನು ಬೇಕಾದರೂ ಕೊಡಲು ಸಿದ್ಧವಿದ್ದೇನೆ. ಅವರು ಏನೇ ಕಿತ್ತುಕೊಂಡರೂ ನನ್ನ ಹೋರಾಟದ ಗುಣವನ್ನು ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಟ್ವೀಟ್ ಕಂಗನಾ ಟ್ವೀಟ್ ಮಾಡಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿರುವ, ನನ್ನ ಮನೆಯನ್ನು ಅಕ್ರಮವಾಗಿ ಕಟ್ಟಿದ್ದರೆ, ಅದನ್ನು ಈಗಲೇ ಒಡೆಯಬೇಕಿತ್ತಾ? ಕೊರೊನಾ ಕಾರಣದಿಂದ ಸೆಪ್ಟಂಬರ್ 30ವರೆಗೆ ಸುಪ್ರೀಂ ಕೋರ್ಟ್ ಯಾವುದೇ ರೀತಿಯ ಮನೆಗಳನ್ನು ಕೆಡವುವಂತಿಲ್ಲ ಎಂದು ಹೇಳಿದೆ. ಫ್ಯಾಸಿಸಮ್ ಎಂದರೆ ಏನು ಎಂಬುದನ್ನು ಬಾಲಿವುಡ್ ಈಗ ನೋಡುತ್ತಿದೆ ಎಂದು ಕಂಗನಾ ಹೇಳಿದ್ದಾರೆ. ಜೊತೆಗೆ ನಾನು ಪ್ರೀತಿ ಇಂದು ಹಲವಾರು ವರ್ಷದಿಂದ ಕಟ್ಟಿದ ಮನೆಯನ್ನು ಕೆಡವಲು ನನಗೆ ಎಚ್ಚರಿಕೆಯ ನೋಟಿಸ್ ಕಳುಹಿಸಲಾಗಿದೆ. ಅವರು ಮನೆಯನ್ನು ಕೆಡವಬಹುದು ನನ್ನ ಆತ್ಮಬಲವನ್ನು ಅಲ್ಲ ಎಂದು ಕಂಗನಾ ತಿಳಿಸಿದ್ದಾರೆ.

    14 ನಿಯಮ ಉಲ್ಲಂಘನೆ: ಮುಂಬೈನ ಪಾಲಿ ಹಿಲ್ಸ್ ನಲ್ಲಿರುವ ಕಂಗನಾ ಅವರು ಕಚೇರಿಯಲ್ಲಿ 14 ಬಗೆಯ ನಿಯಮ ಉಲ್ಲಂಘನೆ ಮಾಡಿರೋದನ್ನ ಪಟ್ಟಿ ಮಾಡಿದ್ದೇವೆ. ಜೊತೆಗೆ ಕಂಗನಾ ಬಾಂದ್ರಾ ಬಂಗಲೆಯಲ್ಲಿ ಕೂಡ ಅಕ್ರಮವಾದ ಕೆಲ ರಚನೆಗಳು ಕಂಡು ಬಂದಿವೆ. ಹೀಗಾಗಿ ನಾವು ಅವುಗಳನ್ನು ನೆಲಸಮ ಮಾಡಿ ಅವರಿಗೆ ವಿಳಾಸದಲ್ಲಿಯೇ ನೋಟಿಸ್ ನೀಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

  • ಜಿಲ್ಲಾಡಳಿತದ ಎಚ್ಚರಿಕೆಗೆ ಥಂಡಾ ಹೊಡೆದ ಶಿವಸೇನೆಯ ರಾವತ್

    ಜಿಲ್ಲಾಡಳಿತದ ಎಚ್ಚರಿಕೆಗೆ ಥಂಡಾ ಹೊಡೆದ ಶಿವಸೇನೆಯ ರಾವತ್

    ಬೆಳಗಾವಿ: ಗಡಿ ಹಾಗೂ ಭಾಷಾ ವಿವಾದಾತ್ಮಕ ಹೇಳಿಕೆ, ಬರವಣಿಗೆಯ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಮೇಲಿಂದ ಮೇಲೆ ಕೆಣಕುತ್ತಿದ್ದ ಶಿವಸೇನೆಯ ಮುಖಂಡ ಸಂಜಯ್ ರಾವತ್‍ಗೆ ಬೆಳಗಾವಿ ಜಿಲ್ಲಾಡಳಿತ ಖಡಕ್ ಎಚ್ವರಿಕೆ ನೀಡಿದ್ದು, ಇದರಿಂದ ಮೆತ್ತಗಾಗಿ ರಾವತ್ ತಮ್ಮ ಕಾರ್ಯಕರ್ತರನ್ನೇ ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.

    ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಒಡೆತನದ ಸಾಮ್ನಾ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ಸಂಜಯ್ ರಾವತ್ ಗಡಿ ಹಾಗೂ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ಹಾಗೂ ಬರಹಗಳಿಂದ ಖ್ಯಾತಿ ಪಡೆದಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗರು ಗಡಿ ವಿವಾದ ಕೆದಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ಮಹಾರಾಷ್ಟ್ರದಿಂದ ಸಂಜಯ್ ರಾವತ್ ಅವರನ್ನು ಬೆಳಗಾವಿಗೆ ಕರೆಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಭಾರೀ ಮುಖಭಂಗವಾಗಿದೆ.

    ರಾವತ್‍ಗೆ ಬೆಳಗಾವಿ ಜಿಲ್ಲಾಡಳಿತ ಹಾಗೂ ಪೊಲೀಸರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತಂದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಜಯ್ ರಾವತ್ ಗಡಿ ವಿಷಯ ಕುರಿತಂತೆ ಮಾತನಾಡಲು ಹಿಂದೇಟು ಹಾಕುವುದರ ಮೂಲಕ ಎಂಇಎಸ್ ಆಸೆಗೆ ತಣ್ಣೀರು ಎರಚಿದ್ದಾರೆ.

    ಶುಕ್ರವಾರ ಕರ್ನಾಟಕ ಸರ್ಕಾರದ ವಿರುದ್ಧ ವೀರಾವೇಶದಿಂದ ಮಾತನಾಡಿ, ಇಂದು ಬೆಳಗಾವಿಗೆ ಆಗಮಿಸಿದ್ದ ಶಿವಸೇನೆ ವಕ್ತಾರ ಸಂಜಯ್ ರಾವತ್ ಉಗ್ರ ಹೇಳಿಕೆಯನ್ನು ನೀಡುವ ಮೂಲಕ ಗಡಿ ವಿವಾದಕ್ಕೆ ಜೀವ ತುಂಬುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಎಂಇಎಸ್ ಇತ್ತು. ಹೀಗಾಗಿ ರಾವತ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ತಮ್ಮ ಘೊಷಣೆಗಳನ್ನು ಕೂಗುವ ಮೂಲಕ ಪ್ರಚೋದನೆ ನೀಡಿ ವಿವಾದ ಸೃಷ್ಟಿಸಲು ಮುಂದಾದರೂ ಕೂಡ ರಾವತ್ ಯಾವುದೇ ವಿವಾದಾತ್ಮಕ ಹೇಳಿಕೆ ನೀಡದೆ ಸುಮ್ಮನಿದ್ದರು.

    ಅಲ್ಲದೆ ಮಹಾರಾಷ್ಟ್ರದಿಂದ ಬಂದ ಶಿವಸೇನೆ ನಾಯಕನಿಂದ ನೀತಿ ಪಾಠ ಹೇಳಿಸಿಕೊಂಡ ಎಂಇಎಸ್ ಕಾರ್ಯಕರ್ತರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ನಿರಾಸೆಯಿಂದ ಮನೆಯತ್ತ ಮುಖಮಾಡಿದರು.