Tag: SHO

  • ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು

    ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು

    ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ (Haryana) ಮದನ ಖುರ್ದ್ (Madana Khurd) ಎಂಬಲ್ಲಿ ಸೋಮವಾರ ನಡೆದಿದೆ.

    ಮೃತರ ಕುತ್ತಿಗೆ ಮತ್ತು ತಲೆಯ ಮೇಲೆ ಗುರುತುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೊದಲು ವ್ಯಕ್ತಿ ತನ್ನ ಹೆಂಡತಿ, ಮಗಳು ಮತ್ತು ಮಗನನ್ನು ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ನೇಣು ಬಿಗಿದುಕೊಂಡಿದ್ದಾನೆ. ಮೃತ ವ್ಯಕ್ತಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅವರ ಮಗಳು ಜವಾಹರ ನವೋದಯ ವಿದ್ಯಾಲಯದಲ್ಲಿ (Jawahar Navodaya Vidyalaya) 11ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಮಗ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೃಹತ್ ಜಾಹೀರಾತು ಕಂಬವೇರಿ ಯುವಕ ಪುಂಡಾಟ

    CRIME

    ದುಜಾನಾ ಪೊಲೀಸ್ ಠಾಣಾಧಿಕಾರಿ (SHO) ಸುನೀಲ್ ಕುಮಾರ್ ಮಾತನಾಡಿ, ಸೋಮವಾರ ಮನೆಯೊಂದರಲ್ಲಿ ನಾಲ್ವರು ಮೃತಪಟ್ಟಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ನಂತರ ವಿಧಿ ವಿಜ್ಞಾನ ಪ್ರಯೋಗಾಲಯದ (Forensic Science Laboratory team) ತಂಡ ತನಿಖೆಗಾಗಿ ಸಾಕ್ಷ್ಯಗಳನ್ನು (Evidence) ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.

    ಮೃತನ ಸಹೋದರನ ಹೇಳಿಕೆ ಮೇರೆಗೆ ದುಜಾನಾ (Dujana) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಗಲಾಟೆ – ಮಾರಕಾಸ್ತ್ರ ಹಿಡಿದು ಎರಡು ಗುಂಪುಗಳು ಹೊಡೆದಾಟ

  • 10 ರೂ. ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – 76ರ ವೃದ್ಧ ಸೇರಿ ಇಬ್ಬರು ಅರೆಸ್ಟ್

    10 ರೂ. ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – 76ರ ವೃದ್ಧ ಸೇರಿ ಇಬ್ಬರು ಅರೆಸ್ಟ್

    ರಾಯ್‌ಪುರ: 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷ ವೃದ್ಧ ಮತ್ತು ಇನ್ನೊಬ್ಬ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.

    ಛತ್ತೀಸ್‍ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಶನಿವಾರ ನಡೆದಿದ್ದು, ನೆರೆ ಮನೆಯ ಮಹಿಳೆ ಈ ಕುರಿತು ಬಾಲಕಿ ಪೋಷಕರನ್ನು ಎಚ್ಚರಿಸಿದ ನಂತರ ಬೆಳಕಿಗೆ ಬಂದಿದೆ. ಪೋಷಕರಿಬ್ಬರು ರ್ಯಾಗ್‍ಪಿಕರ್ಸ್ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ವಿಷಯ ತಿಳಿದ ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ 

    ಬಲೋದಬಜಾರ್ ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ(ಎಸ್‍ಎಚ್‍ಒ) ಯದುಮಣಿ ಸಿದರ್ ಈ ಕುರಿತು ಮಾಹಿತಿ ನೀಡಿದ್ದು, ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳಾದ ಕುಂಜ್ರಾಮ್ ವರ್ಮಾ(76) ಮತ್ತು ರಮೇಶ್ ವರ್ಮಾ(47)ನನ್ನು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

    ದೂರಿನ ಪ್ರಕಾರ, ಬಾಲಕಿ ವಾಸಿಸುವ ಅದೇ ಸ್ಥಳದಲ್ಲಿಯೇ ಕುಂಜ್ರಾಮ್ ಇದ್ದ. ಈ ವೇಳೆ ಬಾಲಕಿಯನ್ನು ನೋಡಿದ ಆತ ಪ್ರತಿ ಬಾರಿ 10 ರೂ. ನೀಡುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದು ಅತ್ಯಾಚಾರ ಮಾಡುತ್ತಿದ್ದ. ಕುಂಜ್ರಾಮ್‍ಗೆ ಪರಿಚಿತರಾಗಿರುವ ರಮೇಶ್ ಕೂಡ 10 ರೂ. ಆಮಿಷವೊಡ್ಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಸಾವಿನ ದವಡೆಯಿಂದ ಹದ್ದುವನ್ನು ಕಾಪಾಡಿದ ಮೀನುಗಾರ

    ಇಬ್ಬರ ಮನೆಯಿಂದ ಬಾಲಕಿ ಹೊರಗೆ ಬರುತ್ತಿರುವುದನ್ನು ನೆರೆಮನೆಯ ಮಹಿಳೆಯೊಬ್ಬರು ಗಮನಿಸಿದಾಗ, ಆಕೆ ಬಾಲಕಿಯ ತಾಯಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ತನಗಾದ ಕಷ್ಟವನ್ನು ವಿವರಿಸಿದ ನಂತರ, ಆಕೆಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಸುಧಾರಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಚಾರ್ಜಿಂಗ್ ವೇಳೆ ಸ್ಫೋಟ- ಓರ್ವ ಸಾವು, ನಾಲ್ವರು ಗಂಭೀರ

    ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಚಾರ್ಜಿಂಗ್ ವೇಳೆ ಸ್ಫೋಟ- ಓರ್ವ ಸಾವು, ನಾಲ್ವರು ಗಂಭೀರ

    ನವದೆಹಲಿ: ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮನೆಯಲ್ಲಿ ಚಾರ್ಜ್ ಮಾಡುತ್ತಿದ್ದ ವೇಳೆ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದೆ.

    ಗುರುಗ್ರಾಮ್ ಸೆಕ್ಟರ್ 44 ರ ಕನ್ಹೈ ಗ್ರಾಮದಲ್ಲಿ ಗುರುವಾರ ರಾತ್ರಿ ಸುರೇಶ್ ಸಾಹು(60) ಅವರ ಮನೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿಯನ್ನು ಚಾರ್ಜ್ ಮಾಡಲು ರೂಮ್ ನಲ್ಲಿ ಹಾಕಲಾಗಿತ್ತು. ಈ ವೇಳೆ ಅವರ ಮನೆಯ ರೂಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಿಂದ ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ಮನೆಯ ಸುತ್ತ ಹೊಗೆ ಮತ್ತು ಬೆಂಕಿ ಸುತ್ತಿಕೊಂಡಿದೆ. ಈ ಪರಿಣಾಮ ಮನೆಯ ಮಾಲೀಕ ಸುರೇಶ್ ಅವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದು, ನೆರೆಹೊರೆಯವರು ಮನೆಯ ಕಿಟಕಿಯನ್ನು ಒಡೆದು ಕೋಣೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬದ ಸದಸ್ಯರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ: ಬಿಎಸ್‍ವೈ

    ಘಟನೆ ನಡೆದಾಗ ಸುರೇಶ್ ಸಾಹು ಅವರ ಪತ್ನಿ ರೀನಾ(50), ಮಕ್ಕಳಾದ ಮನೋಜ್(25), ಸರೋಜ್(18) ಮತ್ತು ಅನುಜ್ (14) ಅವರ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ಎಲೆಕ್ಟ್ರಿಕ್ ದ್ವಿಚಕ್ರದ ಬ್ಯಾಟರಿಯನ್ನು ಚಾರ್ಜ್ ಮಾಡಲು ಇಡಲಾಗಿದೆ. ಆದರೆ ಅದು ಸ್ಫೋಟಗೊಂಡಿದ್ದು, ಅವರು ಮಲಗಿಕೊಂಡಿದ್ದ ಹಾಸಿಗೆಗೆ ಬೆಂಕಿ ಹೊತ್ತಿಕೊಂಡಿದೆ. ಶೀಘ್ರದಲ್ಲೇ ಅದು ಇಡೀ ಕೋಣೆಗೆ ಹರಡಿದೆ. ಈ ಹಿನ್ನೆಲೆ ಇಡೀ ಕುಟುಂಬ ರೂಮ್ ನಲ್ಲಿ ಸಿಲುಕಿಕೊಂಡಿದ್ದು, ನೆರೆಹೊರೆಯವರು ಅವರನ್ನು ರಕ್ಷಿಸಲು ಕಿಟಕಿಯನ್ನು ಒಡೆದಿದ್ದಾರೆ.

    ಈ ಕುರಿತು ಅವರ ನೆರೆ ಮನೆಯ ರಮೇಶ್ ಕುಮಾರ್ ಮಾತನಾಡಿದ್ದು, ನಾವು ಬಾಗಿಲು ತೆರೆಯಲು ಪ್ರಯತ್ನಿಸಿದೆವು. ಆದರೆ ಅದು ಒಳಗಿನಿಂದ ಲಾಕ್ ಆಗಿತ್ತು. ಕೊಠಡಿಯಲ್ಲಿ ಹೊಗೆ ತುಂಬಿದ್ದರಿಂದ ಅವರ ಕುಟುಂಬದವರು ಒಳಗೆ ಸಿಲುಕಿಕೊಂಡಿದ್ದರು. ಅದಕ್ಕೆ ಅವರ ಮನೆಯ ಕಿಟಕಿಯನ್ನು ಒಡೆದು ಮನೆಯವರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದರು.

    ತಕ್ಷಣ ಈ ಬಗ್ಗೆ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಸುಮಾರು ಒಂದು ಗಂಟೆ ಬೇಕಾಯಿತು. ಈ ಕುಟುಂಬದ ಎಲ್ಲರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್‍ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದರು.

    ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್(ಎಸ್‍ಎಚ್‍ಒ) ಕುಲದೀಪ್ ದಹಿಯಾ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ಸ್ಕೂಟರ್ ಅನ್ನು ತಮ್ಮ ಕೋಣೆಯ ಹೊರಗೆ ನಿಲ್ಲಿಸಿ ಒಳಗಿನಿಂದ ಚಾರ್ಜ್ ಮಾಡಲಾಗುತ್ತಿತ್ತು. ಈ ವೇಳೆ ಬ್ಯಾಟರಿ ಸ್ಫೋಟಗೊಂಡಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಆಘಾತಕ್ಕೆ ಒಳಗಾದ ಕುಟುಂಬದ ಸದಸ್ಯರು ಚೇತರಿಸಿಕೊಂಡ ನಂತರ ಈ ಪ್ರಕರಣದ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಪ್ರಸಿದ್ಧ ವಾಸ್ತುಶಿಲ್ಪಿ ರಿಚರ್ಡ್ ರೋಜರ್ಸ್ ನಿಧನ

    ಸಿವಿಲ್ ಆಸ್ಪತ್ರೆ ವಿಧಿವಿಜ್ಞಾನ ತಜ್ಞ ಡಾ ದೀಪಕ್ ಮಾಥುರ್, ಸಾಹು ಅವರು 70% ಸುಟ್ಟ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನೂಳಿದವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದರು.

  • ಮಗು ಎತ್ತಿಕೊಂಡಿದ್ದ ವ್ಯಕ್ತಿ ಮೇಲೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸ್ ಅಮಾನತು

    ಮಗು ಎತ್ತಿಕೊಂಡಿದ್ದ ವ್ಯಕ್ತಿ ಮೇಲೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸ್ ಅಮಾನತು

    ಲಕ್ನೋ: ಮಗು ಎತ್ತಿಕೊಂಡಿದ್ದ ವ್ಯಕ್ತಿ ಮೇಲೆ ಪೊಲೀಸ್ ಸಿಬ್ಬಂದಿ ಲಾಠಿ ಚಾರ್ಜ್ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಪರಿಣಾಮವಾಗಿ ಉತ್ತರ ಪ್ರದೇಶ ಪೊಲೀಸ್ ಠಾಣೆಯ ಹೌಸ್ ಆಫೀಸರ್ (ಎಸ್‍ಎಚ್‍ಒ)ನನ್ನು ಅಮಾನತುಗೊಳಿಸಲಾಗಿದೆ.

    ಕಾನ್ಪುರ ವ್ಯಾಪ್ತಿಯ ಇನ್ಸ್ ಪೆಕ್ಟರ್‌ ಜನರಲ್ ಪ್ರಶಾಂತ್ ಕುಮಾರ್ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮಗುವನ್ನು ಎತ್ತಿಕೊಂಡಿದ್ದ ವ್ಯಕ್ತಿ ಮೇಲೆ ಪೊಲೀಸ್ ಸಿಬ್ಬಂದಿ ಮನಸೋಇಚ್ಛೆ ಥಳಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದನ್ನು ಗಮನದಲ್ಲಿಟ್ಟುಕೊಂಡು, ನಾವು ಇನ್ಸ್ ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ?

    ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಹೊರಭಾಗದಲ್ಲಿ ಗುರುವಾರ ಈ ಘಟನೆ ನಡೆದಿದೆ. ಕಠಿಣ ಸಂದರ್ಭದಲ್ಲಿ ಜನರ ಜೊತೆ ಸೂಕ್ಷ್ಮವಾಗಿ ವರ್ತಿಸಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಹೇಳಿದರು.

    ವೀಡಿಯೋದಲ್ಲಿ, ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಆ ವ್ಯಕ್ತಿಯನ್ನು ದೊಣ್ಣೆಗಳಿಂದ ಥಳಿಸಿದ್ದಾರೆ. ಮತ್ತೊಬ್ಬ ಪೊಲೀಸ್ ಆ ವ್ಯಕ್ತಿಯ ತೋಳಿನಲ್ಲಿದ್ದ ಮಗುವನ್ನು ಹಿಂಸಾತ್ಮಕವಾಗಿ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ವೀಡಿಯೋ ನೋಡಿದ ನೆಟ್ಟಿಗರು ಪೊಲೀಸ್ ಕ್ರೌರ್ಯಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ನಡೆದಿದ್ದೇನು?
    ಗುರುವಾರ ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲಾ ಆಸ್ಪತ್ರೆಯ ಹೊರಭಾಗದಲ್ಲಿ ಫೋರ್ಥ್ ಕ್ಲಾಸ್ ನೌಕರರು ಒಪಿಡಿ(ಹೊರರೋಗಿ ವಿಭಾಗದ ಚಿಕಿತ್ಸೆ)ಗೆ ಬೀಗ ಹಾಕಿ ಧರಣಿ ನಡೆಸಲಾಗಿದೆ. ಈ ವೇಳೆ ರಜನೀಶ್ ಶುಕ್ಲಾ ನೇತೃತ್ವದಲ್ಲಿ ಪ್ರತಿಭಟನಾಕಾರರು, ವೈದ್ಯರು ಮತ್ತು ರೋಗಿಗಳನ್ನು ಒಪಿಡಿಯಿಂದ ಬಲವಂತವಾಗಿ ಹೊರಗೆ ಕರೆಯುತ್ತಿದ್ದರು. ಇದನ್ನೂ ಓದಿ: ಇವರು ಯಾರೆಂದು ಗುರುತಿಸಿ- ಹಳೇ ಫೋಟೋ ಹಂಚಿಕೊಂಡು ಹರ್ಭಜನ್ ಪ್ರಶ್ನೆ

    ಈ ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅಕ್ಬರ್‍ಪುರ ಪೊಲೀಸರು ಉಪವಿಭಾಗಾಧಿಕಾರಿ ವಾಗೀಶ್ ಕುಮಾರ್, ಸರ್ಕಲ್ ಅಧಿಕಾರಿ ಅರುಣ್ ಕುಮಾರ್ ಮತ್ತು ಎಸ್‍ಎಚ್‍ಒ ವಿನೋದ್ ಕುಮಾರ್ ಮಿಶ್ರಾ ನೇತೃತ್ವದಲ್ಲಿ ಸ್ಥಳಕ್ಕೆ ಆಗಮಿಸಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಿ ಧರಣಿ ಕೊನೆಗೊಳಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಯಾಗದಂತೆ ತಡೆಯಲು ಪ್ರಯತ್ನಿಸಿದ್ದಾರೆ. ಆಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.