Tag: Shobhayatra

  • ಶ್ರೀರಾಮನ ಹೆಸರಿನಲ್ಲಿ ಮುಸ್ಲಿಮರ ಶಾಂತಿಗೆ ಭಂಗ ತರುವುದು ಬೇಡ: ಹೆಚ್‌ಡಿಕೆ ಮನವಿ

    ಶ್ರೀರಾಮನ ಹೆಸರಿನಲ್ಲಿ ಮುಸ್ಲಿಮರ ಶಾಂತಿಗೆ ಭಂಗ ತರುವುದು ಬೇಡ: ಹೆಚ್‌ಡಿಕೆ ಮನವಿ

    ಬೆಂಗಳೂರು: ಮತ್ತೆ ಮುಸ್ಲಿಮರ ಓಲೈಕೆಗೆ ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಸಮುದಾಯದ ಪರ ಧ್ವನಿ ಎತ್ತಿದ್ದಾರೆ.

    ಶ್ರೀರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರವಿಲ್ಲ, ಅದಕ್ಕೆ ನನ್ನ ಬೆಂಬಲವಿದೆ. ಆದರೆ ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಮಾಡುವುದು ಬೇಡವೆಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

    ಇದರಿಂದ ಶಾಂತಿ ಕದಡುತ್ತದೆ, ಹಾಗಾಗುವುದು ಬೇಡ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಶೋಭಾಯಾತ್ರೆ ಹಿಂದೂಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

    KUMARASWAMY

    ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ಈ ಹಿನ್ನೆಲೆಯಲ್ಲಿ ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ ಎಂದು ಕರೆ ನೀಡಿದ್ದಾರೆ.

  • ಶಾಂತಿ ಸಂದೇಶ, ಸಮಾಜದ ಒಳಿತಿಗಾಗಿ ಹಾಸನದಲ್ಲಿ ಜೈನರ ಶೋಭಾಯಾತ್ರೆ

    ಶಾಂತಿ ಸಂದೇಶ, ಸಮಾಜದ ಒಳಿತಿಗಾಗಿ ಹಾಸನದಲ್ಲಿ ಜೈನರ ಶೋಭಾಯಾತ್ರೆ

    ಹಾಸನ: ಶಾಂತಿ ಸಂದೇಶ ಹಾಗೂ ಸಮಾಜದ ಒಳಿತಿಗಾಗಿ ಮತ್ತು ಸ್ವಯಂ ಸಂಯಮ ಪಾಲನೆ ಸಂದೇಶ ವಿಚಾರವಾಗಿ ಹಾಸನ ನಗರದಲ್ಲಿ ಪ್ರಸಿದ್ಧ ಜೈನಗುರು ಶ್ರೀ ಮಹಾಶ್ರಮಣ್ ಜೀ ನೇತೃತ್ವದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಿತು.

    ಹಾಸನ ರೈಲ್ವೇ ನಿಲ್ದಾಣದಿಂದ ಎಸ್‍ಡಿಎಂ ಆಯುರ್ವೇದ ಕಾಲೇಜಿನವರೆಗೂ ನಡೆದ ಶೋಭಾಯಾತ್ರೆಯಲ್ಲಿ 150ಕ್ಕೂ ಹೆಚ್ಚು ಜೈನ ಯತಿಗಳ ಜೊತೆ ಸಾವಿರಕ್ಕೂ ಹೆಚ್ಚು ಜೈನ ಸಮಾಜದ ಬಂಧುಗಳು ಹೆಜ್ಜೆ ಹಾಕಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪಾಲ್ಗೊಂಡಿದ್ದರು.

    ದೇಶದಲ್ಲಿ ಹೈದರಾಬಾದ್ ಪಶುವೈದ್ಯೆ ಹತ್ಯೆ ವಿಚಾರ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಹೀಗಾಗಿ ದೇಶದಲ್ಲಿ ಈಗ ಇಂತಹ ಗುರುಗಳ ಸಂದೇಶ ಮತ್ತು ಧರ್ಮದ ಕಾರ್ಯಕ್ರಮಗಳು ಅಗತ್ಯ ಇದೆ. ಮನುಷ್ಯ ಸ್ವಯಂ ಸಂಯಮದಿಂದ ಮಾತ್ರವೇ ಸಮಾಜದಲ್ಲಿ ಶಾಂತಿ ಸಾಧ್ಯ ಎಂದು ಶ್ರೀ ಮಹಾಶ್ರಮಣ್ ಜೀ ಸಂದೇಶ ನೀಡಿದರು.

    ತೇರಾಪಂಥ್ ಸಭಾ ವತಿಯಿಂದ ಆಯೋಜನೆಗೊಂಡಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಮಠದ ಶಂಭುನಾಥ ಸ್ವಾಮೀಜಿ ಹಾಗೂ ನೂರಕ್ಕೂ ಹೆಚ್ಚು ದೇಶದ ವಿವಿಧ ಭಾಗದ ಜೈನ ಯತಿಗಳು ಆಗಮಿಸಿದ್ದರು.