Tag: Shooting Set

  • ಶೂಟಿಂಗ್ ಸೆಟ್‌ನಲ್ಲಿ ತುನೀಶಾ ಆತ್ಮಹತ್ಯೆ – ಸಹ ನಟ ಶೀಜಾನ್ ಬಂಧನ

    ಶೂಟಿಂಗ್ ಸೆಟ್‌ನಲ್ಲಿ ತುನೀಶಾ ಆತ್ಮಹತ್ಯೆ – ಸಹ ನಟ ಶೀಜಾನ್ ಬಂಧನ

    ಮುಂಬೈ: ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿರುವ ಆರೋಪದ ಮೇಲೆ ಸಹ ನಟನನ್ನು ಬಂಧಿಸಲಾಗಿದೆ.

    ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಶನಿವಾರ ಶೂಟಿಂಗ್ ಸೆಟ್‌ನಲ್ಲಿಯೇ (Shooting Set) ಕಿರುತೆರೆ ನಟಿ ತುನೀಶಾ ಶರ್ಮಾ (Tunisha Sharma)(20) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ (Sheezan Mohammed Khan) ಅವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈಗ ಬಂಧಿಸಲಾಗಿದೆ.

    ತುನೀಶಾ ತಾಯಿ ಶೀಜಾನ್ ವಿರುದ್ಧ ಈ ಬಗ್ಗೆ ದೂರು ನೀಡಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಸೋಮವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆತ್ಮಹತ್ಯೆಗೆ ಶರಣಾದ ನಟಿಯ ಮರಣೋತ್ತರ ಪರೀಕ್ಷೆ ಇಂದು ಮುಂಜಾನೆ ನೈಗಾಂವ್‌ನ ಜೆಜೆ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

    ನಟಿ ಶೂಟಿಂಗ್ ಸೆಟ್‌ನಲ್ಲಿ ಚಹಾದ ವಿರಾಮದ ಬಳಿಕ ವಾಶ್‌ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತುನೀಶಾ ಶರ್ಮಾ ಶವ ಪತ್ತೆಯಾಗಿತ್ತು. ಆಕೆ ಎಷ್ಟು ಹೊತ್ತಾದರೂ ಹೊರಗೆ ಬಾರದ ಹಿನ್ನೆಲೆ ಸೆಟ್‌ನಲ್ಲಿದ್ದವರು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಬಳಿಕ ಅವರನ್ನು ಮಧ್ಯರಾತ್ರಿ 1:30ರ ವೇಳೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಸೆಟ್‌ನಲ್ಲೇ ಸೀರಿಯಲ್ ಖ್ಯಾತ ನಟಿ ಆತ್ಮಹತ್ಯೆ

    ತುನಿಶಾ ಶರ್ಮಾ ಅವರ ಸಹೋದ್ಯೋಗಿಗಳು ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸಿದ್ದಾರೆ. ಆದರೆ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದಿದ್ದಾರೆ. ಆಕೆಯ ಸಾವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಕೋನಗಳಿಂದಲೂ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ತುನಿಶಾ ಶರ್ಮಾ ‘ಭಾರತ್ ಕಾ ವೀರ್ ಪುತ್ರ – ಮಹಾರಾಣಾ ಪ್ರತಾಪ್’ ಧಾರವಾಹಿಯಲ್ಲಿ ಬಾಲ ನಟಿಯಾಗಿ ಚಂದ್ ಕನ್ವರ್ ಪಾತ್ರವನ್ನು ನಿರ್ವಹಿಸುವ ಮೂಲಕ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಅಂದಿನಿಂದ ಅವರು ಹಲವು ಶೋಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಷ್ಕ್ ಸುಭಾನ್ ಅಲ್ಲಾ’, ‘ಗಬ್ಬರ್ ಪೂಚ್‌ವಾಲಾ’, ಶೇರ್-ಎ-ಪಂಜಾಬ್: ಮಹಾರಾಜ ರಂಜಿತ್ ಸಿಂಗ್’ ಹಾಗೂ ‘ಚಕ್ರವರ್ತಿ ಅಶೋಕ ಸಾಮ್ರಾಟ್’ ಶೋಗಳಲ್ಲೂ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ದೊಡ್ಮನೆಯಲ್ಲಿ ಡಬಲ್ ಎಲಿಮಿನೇಷನ್: ಅಮೂಲ್ಯ, ಅರುಣ್ ಸಾಗರ್ ಆಟಕ್ಕೆ ಬ್ರೇಕ್ ಹಾಕಿದ ಬಿಗ್ ಬಾಸ್

    Live Tv
    [brid partner=56869869 player=32851 video=960834 autoplay=true]

  • ಶೂಟಿಂಗ್ ಸೆಟ್‍ನಲ್ಲೇ ಹೊಡೆದಾಡಿಕೊಂಡ ಅಕ್ಷಯ್- ರೋಹಿತ್ ಶೆಟ್ಟಿ

    ಶೂಟಿಂಗ್ ಸೆಟ್‍ನಲ್ಲೇ ಹೊಡೆದಾಡಿಕೊಂಡ ಅಕ್ಷಯ್- ರೋಹಿತ್ ಶೆಟ್ಟಿ

    ಮುಂಬೈ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರೋಹಿತ್ ಶೆಟ್ಟಿ ಶೂಟಿಂಗ್ ಸೆಟ್‍ನಲ್ಲಿ ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗುತ್ತಿದೆ. ಅಲ್ಲದೆ ಇವರಿಬ್ಬರ ಜಗಳವನ್ನು ಬಿಡಿಸಲು ಪೊಲೀಸರು ಹಾಗೂ ಕರಣ್ ಜೋಹರ್ ಸ್ಥಳಕ್ಕೆ ಭೇಟಿ ನೀಡಿದ್ದರು.

    ವೈರಲ್ ಆಗಿರುವ ವಿಡಿಯೋದಲ್ಲಿ ಅಕ್ಷಯ್ ಹಾಗೂ ರೋಹಿತ್ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಸ್ವತಃ ಪೊಲೀಸರೇ ಸ್ಥಳಕ್ಕೆ ಭೇಟಿ ನೀಡಿ ಇಬ್ಬರ ಜಗಳವನ್ನು ಬಿಡಿಸಿದ್ದಾರೆ. ಈ ವಿಡಿಯೋವನ್ನು ಅಕ್ಷಯ್ ಕುಮಾರ್ ಅವರು ಪೋಸ್ಟ್ ಮಾಡಿದ್ದು, ಈ ವಿಡಿಯೋ ಹಿಂದಿನ ಸತ್ಯಾಂಶ ಬೇರೆ ಇದೆ.

    ವೆಬ್‌ಸೈಟ್‌ಯೊಂದರಲ್ಲಿ, ‘ಸೂರ್ಯವಂಶಿ’ ಚಿತ್ರದ ಸೆಟ್‍ನಲ್ಲಿ ಅಕ್ಷಯ್ ಹಾಗೂ ರೋಹಿತ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕರಣ್ ಜೋಹರ್ ಅವರ ಜಗಳವನ್ನು ಬಿಡಿಸಿದ್ದಾರೆ ಎಂದು ಸುದ್ದಿ ಪ್ರಕಟಿಸಿತ್ತು. ಈ ಸುದ್ದಿ ಸಂಪೂರ್ಣ ಫೇಕ್ ಆಗಿದ್ದು, ಇದನ್ನು ನೋಡಿದ ಅಕ್ಷಯ್ ತಮಾಷೆಗಾಗಿ ರೋಹಿತ್ ಜೊತೆ ಜಗಳವಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

    https://twitter.com/akshaykumar/status/1194155278960336896

    ಈ ವಿಡಿಯೋ ನಟಿ ಕತ್ರಿನಾ ಕೈಫ್ ಕೂಡ ಸಾಥ್ ನೀಡಿದ್ದಾರೆ. ಕತ್ರಿನಾ ಅವರೇ ಮೊದಲು ರೋಹಿತ್ ಹಾಗೂ ಅಕ್ಷಯ್ ಅವರ ಜಗಳವಾಡುತ್ತಿರುವ ವಿಡಿಯೋವನ್ನು ತೋರಿಸಿದ್ದರು. ಅಕ್ಷಯ್ ಈ ವಿಡಿಯೋವನ್ನು ಹಂಚಿಕೊಂಡು ಅದಕ್ಕೆ, “ಬ್ರೇಕಿಂಗ್ ನ್ಯೂಸ್- ಈ ಜಗಳ ನೋಡಿದರೆ ನಿಮ್ಮ ದಿನ ಸರಿಯಾಗುತ್ತೆ” ಎಂದು ಟ್ವೀಟ್ ಮಾಡಿದ್ದಾರೆ.

    https://twitter.com/karanjohar/status/1194164205932421120

    ಸೂರ್ಯವಂಶಿ ಚಿತ್ರವನ್ನು ಕರಣ್ ಜೋಹರ್ ಹಾಗೂ ರೋಹಿತ್ ಶೆಟ್ಟಿ ಸೇರಿ ನಿರ್ಮಿಸುತ್ತಿದ್ದಾರೆ. ಧರ್ಮ ಪ್ರೊಡಕ್ಷನ್ ಹಾಗೂ ರೋಹಿತ್ ಶೆಟ್ಟಿ ಪಿಕ್ಚರ್ಸ್ ಬ್ಯಾನರ್ ಅಡಿ ತಯಾರಾದ ಈ ಚಿತ್ರ ಮುಂದಿನ ವರ್ಷ ಮಾರ್ಚ್ 27ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ದೃಶ್ಯವೊಂದರಲ್ಲಿ ನಟ ರಣ್‍ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಕಾಣಿಸಿಕೊಳ್ಳುತ್ತಿದ್ದಾರೆ.

  • ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಕಿಚ್ಚ

    ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಕಿಚ್ಚ

    ಬೆಂಗಳೂರು: ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

    ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

    ಇನ್‍ಸ್ಟಾ ಪೋಸ್ಟ್‍ನಲ್ಲಿ, ಎಸ್‍ಎನ್‍ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್‍ಎನ್‍ಆರ್ ಎಂದು ಹ್ಯಾಷ್‍ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್‍ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

    ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

    https://www.instagram.com/p/B3Ci_24HOY6/

  • ಶೂಟಿಂಗ್ ಸೆಟ್‍ನಲ್ಲಿ ಎಲ್ಲರಿಗೂ ಅಚ್ಚರಿ ಮೂಡಿಸುವ ಕೆಲಸ ಮಾಡಿದ್ರು ಕಿಚ್ಚ ಸುದೀಪ್!

    ಶೂಟಿಂಗ್ ಸೆಟ್‍ನಲ್ಲಿ ಎಲ್ಲರಿಗೂ ಅಚ್ಚರಿ ಮೂಡಿಸುವ ಕೆಲಸ ಮಾಡಿದ್ರು ಕಿಚ್ಚ ಸುದೀಪ್!

    ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ‘ಪೈಲ್ವಾನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಶೂಟಿಂಗ್‍ನಲ್ಲಿ ಬಿಡುವು ಸಿಕ್ಕಾಗ ಕಿಚ್ಚ ಯಾರೂ ಊಹಿಸದ ಕೆಲಸವನ್ನು ಮಾಡಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ಶೂಟಿಂಗ್ ಬಿಡುವಿನ ಸಮಯದಲ್ಲಿ ಕಿಚ್ಚ ಸುದೀಪ್ ತಮ್ಮ ಸಿನಿಮಾದ ನಾಯಕಿ ಆಕಾಂಕ್ಷಾ ಸಿಂಗ್ ಅವರ ಕ್ಯಾಂಡಿಡ್ ಫೋಟೋವನ್ನು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ಕಿಚ್ಚ ಸುದೀಪ್ ತನ್ನ ಮೊಬೈಲಿನಲ್ಲಿ ಹಿಡಿದ ಫೋಟೋವನ್ನು ನಟಿ ಆಕಾಂಕ್ಷ ಸಿಂಗ್ ತನ್ನ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

    ನಟಿ ಆಕಾಂಕ್ಷಾ ತನ್ನ ಇನ್‍ಸ್ಟಾಗ್ರಾಂನಲ್ಲಿ ಸುದೀಪ್ ಹಿಡಿದ ಫೋಟೋವನ್ನು ಹಾಕಿ ಅದಕ್ಕೆ “ನೀವು ನಿಮ್ಮ ಫೋನಿನಲ್ಲಿ ಬ್ಯುಸಿ ಇದ್ದಾಗ ನಿಮ್ಮ ಸಹ ನಟ ತೆಗೆದ ಕ್ಯಾಂಡಿಡ್ ಫೋಟೋ. ಧನ್ಯವಾದ ಕಿಚ್ಚ ಸುದೀಪ್” ಎಂದು ಪೋಸ್ಟ್ ಹಾಕಿದ್ದಾರೆ.

    ಸುದೀಪ್ ಸಿನಿಮಾ ಸೆಟ್‍ನಲ್ಲಿ ಫೋಟೋ ಕ್ಲಿಕ್ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆ ‘ದಿ-ವಿಲನ್’ ಸಿನಿಮಾ ಶೂಟಿಂಗ್ ಸೆಟ್‍ನಲ್ಲಿಯೂ ಬ್ರಿಟನ್ ಬ್ಯೂಟಿ ಏಮಿ ಜಾಕ್ಸನ್ ಫೋಟೋಗಳನ್ನ ಸೆರೆ ಹಿಡಿದಿದ್ದರು.

    ಚಿಕ್ಕಮಗಳೂರಿನಲ್ಲಿ ಶೂಟಿಂಗ್‍ಗೆ ಹೋದಾಗ ಏಮಿ ಎಳೆನೀರು ಕುಡಿಯೋದರಲ್ಲಿ ಬ್ಯುಸಿಯಾಗಿದ್ದರು. ಆ ವೇಳೆ ಕಿಚ್ಚ ಸುದೀಪ್ ಏಮಿ ಜಾಕ್ಸನ್ ಫೋಟೋವನ್ನು ಕ್ಲಿಕ್ಕಿಸಿದ್ದರು. ಸುದೀಪ್ ತನ್ನ ಚಿತ್ರದ ನಟಿಯರ ಫೋಟೋ ಹಿಡಿಯುವುದು ನಟಿಯರಿಗೆ ಗೊತ್ತಾಗುವುದಿಲ್ಲ. ನಟಿಯರ ಕ್ಯಾಂಡಿಡ್ ಫೋಟೋ ತೆಗೆದು ನಂತರ ಅವರಿಗೆ ಸರ್ಪ್ರೈಸ್ ನೀಡುತ್ತಾರೆ.