Tag: shop owner

  • ಮಂಗಳೂರಿನಲ್ಲಿ ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಅಂಗಡಿ ಮಾಲೀಕ

    ಮಂಗಳೂರಿನಲ್ಲಿ ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಅಂಗಡಿ ಮಾಲೀಕ

    ಮಂಗಳೂರು: ಅಂಗಡಿ ಮಾಲೀಕನೊಬ್ಬ (Shop Owner) ತನ್ನ ಕಾರ್ಮಿಕನನ್ನೇ (Labourer) ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಕೊಂದಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಮಂಗಳೂರಿನ ಮುಳಿಹಿತ್ಲು ಜಂಕ್ಷನ್ ಬಳಿ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಗಜ್ಞಾನ್ ಜಗು ಕೊಲೆಯಾದ ವ್ಯಕ್ತಿಯಾಗಿದ್ದು, ಆತನನ್ನು ಅಂಗಡಿ ಮಾಲೀಕ ತೌಸಿಫ್ ಹುಸೈನ್ ಬೆಂಕಿ ಹಚ್ಚಿ ಕೊಂದಿದ್ದಾನೆ.

    ಆರೋಪಿ ಜನರಲ್ ಸ್ಟೋರ್‌ನ ಮಾಲೀಕನಾಗಿದ್ದು, ಕಾರ್ಮಿಕನನ್ನು ಕೊಂದ ಬಳಿಕ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾನೆ. ಆದರೆ ವೈದ್ಯರು ಆತನನ್ನು ಪರೀಕ್ಷಿಸಿದಾಗ ಗಜ್ಞಾನ್ ಮೃತಪಟ್ಟಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಆರೋಪಿ ಬಳಿಕ ವಿದ್ಯುತ್ ಶಾಕ್‌ನಿಂದ ಕಾರ್ಮಿಕ ಸಾವನ್ನಪ್ಪಿರುವುದಾಗಿ ಪೊಲೀಸರಿಗೆ ದೂರು ನೀಡಿ ಘಟನೆಯನ್ನು ತಿರುಚಲು ಪ್ರಯತ್ನಿಸಿದ್ದಾನೆ. ಆದರೆ ಪೊಲೀಸರು ಅಂಗಡಿ ಮಾಲೀಕನ ಮೇಲೆಯೇ ಅನುಮಾನಗೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ಸಂಚು ಬಯಲಾಗಿದೆ.

    ಘಟನೆ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತೌಸಿಫ್ ಹುಸೈನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ದಲಿತನ ಮೇಲೆ ಹಲ್ಲೆ – ಚಪ್ಪಲಿ ನೆಕ್ಕಿಸಿ ವಿಕೃತಿ ಮೆರೆದ ದುರುಳ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಶಾ ಕಾರ್ಯಕರ್ತೆ ಮೇಲೆ ಅಂಗಡಿ ಮಾಲೀಕನಿಂದ ಹಲ್ಲೆ

    ಆಶಾ ಕಾರ್ಯಕರ್ತೆ ಮೇಲೆ ಅಂಗಡಿ ಮಾಲೀಕನಿಂದ ಹಲ್ಲೆ

    ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತೆ ಮೇಲೆ ಅಂಗಡಿ ಮಾಲೀಕ ಹಾಗೂ ಮತ್ತಿಬ್ಬರು ಸೇರಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಸುಮತಿ ಎಂದು ಗುರುತಿಸಲಾಗಿದೆ. ಗ್ರಾಮದ ಅಂಗಡಿ ಮಾಲೀಕ ರಾಮಲಿಂಗಪ್ಪ ಮಾಸ್ಕ್ ಹಾಕದೆ ವ್ಯಾಪಾರ ಮಾಡುತ್ತಿದ್ದು, ಮಾಸ್ಕ್ ಹಾಕಿ ವ್ಯಾಪಾರ ಮಾಡಿ ಎಂದು ಆಶಾ ಕಾರ್ಯಕರ್ತೆ ಸುಮತಿ ಹೇಳಿದ್ದಾರೆ. ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಲಾಕ್‍ಡೌನ್ ನಡುವೆ ಆಂಗಡಿ ಯಾಕೆ ತೆಗೆದಿದ್ದೀರಾ ಎಂದು ವಾಗ್ವಾದ ಮಾಡಿದ್ದಾರೆ.

    ಈ ವೇಳೆ ಅಂಗಡಿ ಮಾಲೀಕ ರಾಮಲಿಂಗಪ್ಪ, ಅನಂದ್, ಹಾಗೂ ನರಸಿಂಹಮೂರ್ತಿ ಆಶಾ ಕಾರ್ಯಕರ್ತೆ ಸುಮತಿ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿರುವ ಆಶಾ ಕಾರ್ಯಕರ್ತೆಯನ್ನು ದೊಡ್ಡಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

  • ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿ ಮಾಲೀಕನ ಮೇಲೆ ಡ್ರಾಗರ್‌ನಿಂದ ಹಲ್ಲೆ

    ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿ ಮಾಲೀಕನ ಮೇಲೆ ಡ್ರಾಗರ್‌ನಿಂದ ಹಲ್ಲೆ

    ಬೆಂಗಳೂರು: ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿ ಮಾಲೀಕನ ಮೇಲೆ ಗನ್ ತೋರಿಸಿ ಡ್ರಾಗರ್‌ನಿಂದ ಹಲ್ಲೆ ಮಾಡಿದ್ದಾರೆ.

    ನಗರದ ಹೊರವಲಯದ ನೆಲಮಂಗಲ ನಗರದ ಅಡೇಪೇಟೆಯಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಗನ್ ಹಾಗೂ ಡ್ರಾಗರ್ ತೊರಿಸಿ ಹಲ್ಲೆ ಮಾಡಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಪುಂಡರು, ಸಿಗರೇಟ್ ಕೇಳುವ ನೆಪದಲ್ಲಿ ಶ್ರೀ ವೀರೇಶ್ವರ ಪ್ರಾವಿಷನ್ ಸ್ಟೋರ್ ಮಾಲೀಕ ರುದ್ರೇಶ್ (42) ಮೇಲೆ ಹಲ್ಲೆ ಮಾಡಿದ್ದಾರೆ.

    ದರೋಡೆಕೋರರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾಲೀಕನ ಕುತ್ತಿಗೆ ಭಾಗಕ್ಕೆ ಡ್ರಾಗರ್ ನಿಂದ ಇರಿದಿದ್ದಾರೆ. ಇರಿಯುತ್ತಿದ್ದಂತೆ ರುದ್ರೇಶ್ ಪ್ರತಿ ದಾಳಿ ನಡೆಸಲು ಮುಂದಾಗಿದ್ದು, ಹಲ್ಲೆಕೋರರ ಮುಖಕ್ಕೆ ಚೀಲ ಬಿಸಾಡಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ತಕ್ಷಣವೇ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯ ಸಮೀಪವೇ ಘಟನೆ ನಡೆದಿದೆ.

  • ಆಟಿಕೆ ಕೊಳ್ಳಲು ಬಂದ ಮಹಿಳೆಯ ಕೊಲೆ- ಶವದ ಜೊತೆ ಅಂಗಡಿ ಮಾಲೀಕ ಸೆಕ್ಸ್

    ಆಟಿಕೆ ಕೊಳ್ಳಲು ಬಂದ ಮಹಿಳೆಯ ಕೊಲೆ- ಶವದ ಜೊತೆ ಅಂಗಡಿ ಮಾಲೀಕ ಸೆಕ್ಸ್

    – ರಾತ್ರಿಯವರೆಗೆ ಶವದ ಜೊತೆ ಇದ್ದ ಆರೋಪಿ
    – ವ್ಯಾನಿನಲ್ಲಿ ಮಹಿಳೆಯ ಮೃತದೇಹ ಪತ್ತೆ

    ಮುಂಬೈ: ಅಂಗಡಿ ಮಾಲೀಕನೊಬ್ಬ ಮಹಿಳಾ ಗ್ರಾಹಕಳನ್ನು ಕೊಲೆ ಮಾಡಿದ್ದಲ್ಲದೇ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರುವ ಘಟನೆ ಮುಂಬೈನ ನಲಸೋಪರಾದಲ್ಲಿ ನಡೆದಿದೆ.

    ಈ ಘಟನೆ ಜೂನ್ 26 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್ 26 ರಂದು 32 ವರ್ಷದ ಮಹಿಳೆ ದಿನಸಿ ಖರೀದಿಸಲು ಮನೆಯಿಂದ ಹೊರ ಬಂದಿದ್ದರು. ಈ ವೇಳೆ ಮಹಿಳೆ ತನ್ನ ಮಕ್ಕಳಿಗೆ ಆಟಿಕೆಗಳನ್ನು ಖರೀದಿಸಲು ಆರೋಪಿಯ ಅಂಗಡಿಗೆ ಹೋಗಿದ್ದಾರೆ. ಅಂದಿನಿಂದ ಮೃತ ಮಹಿಳೆ ನಾಪತ್ತೆಯಾಗಿದ್ದಾರೆ.

    ದಿನಸಿ ಖರೀದಿಸಲು ಹೋಗಿದ್ದ ಪತ್ನಿ ನಾಪತ್ತೆಯಾಗಿದ್ದರಿಂದ ಪತಿ ನಲಸೋಪರಾದಲ್ಲಿ ಟ್ಯೂಲಿಂಗ್ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ದೂರು ದಾಖಲಿಸಿದ್ದರು. ಜೂನ್ 28 ರಂದು ನಲಸೋಪರಾದ ಚಂದನ್ ನಾಕಾದಲ್ಲಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಪಿಕ್ ಅಪ್ ವ್ಯಾನ್ ಒಳಗೆ ಮಹಿಳೆಯ ಶವ ಪತ್ತೆಯಾಗಿದೆ. ಶವವನ್ನು ಕಾಣೆಯಾದ ಮಹಿಳೆಯ ದೇಹ ಎಂದು ಗುರುತಿಸಲಾಗಿದೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಪೊಲೀಸರು ಆಸ್ಪತ್ರೆಗೆ ರವಾನಿಸಿದ್ದರು.

    ಮರಣೋತ್ತರ ವರದಿಯಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಮತ್ತು ಶವದ ಜೊತೆ ಸೆಕ್ಸ್ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ, ಪಾಲ್ಘರ್ ಅಪರಾಧ ವಿಭಾಗದ ತಂಡ ತನಿಖೆಯನ್ನು ಪ್ರಾರಂಭಿಸಿದೆ. ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಪಿಕ್‍ಅಪ್ ವ್ಯಾನ್ ಮಾಲೀಕರು ಈ ಪ್ರಕರಣಕ್ಕೂ ನಮಗೂ ಸಂಬಂಧ ಇಲ್ಲ ಎಂದು ನಿರಾಕರಿಸಿದ್ದಾರೆ. ಯಾಕೆಂದರೆ ಹಲವಾರು ದಿನಗಳಿಂದ ವಾಹನವನ್ನು ನಾಕಾದಲ್ಲಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

    ಹೆಚ್ಚಿನ ತನಿಖೆಯಿಂದ ಅಂಗಡಿ ಮಾಲೀಕ ಕೊಲೆ ಮಾಡಿರುವುದು ತಿಳಿದುಬಂದಿದೆ. ಜೂನ್ 26 ರಂದು ಆಟಿಕೆಗಳ ಬೆಲೆಗೆ ಸಂಬಂಧಿಸಿದಂತೆ ಮಹಿಳೆ ಮತ್ತು ಅಂಗಡಿ ಮಾಲೀಕನ ಮಧ್ಯೆ ವಾಗ್ವಾದ ನಡೆದಿದೆ. ವಾದದ ನಂತರ ಆರೋಪಿ ಮಹಿಳೆಯನ್ನು ಅಂಗಡಿಯ ಹಿಂದೆ ಇರುವ ಕೋಣೆಗೆ ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ ಆರೋಪಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಮಹಿಳೆಯ ಮೃತದೇಹದ ಜೊತೆ ಸೆಕ್ಸ್ ಮಾಡಿದ್ದಾನೆ ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

    ಆರೋಪಿ ಅಂಗಡಿ ಮಾಲೀಕ ರಾತ್ರಿಯವರೆಗೆ ಮಹಿಳೆಯ ಶವದ ಜೊತೆ ಇದ್ದನು. ನಂತರ ಮಹಿಳೆಯ ಮೃತದೇಹವನ್ನು ನಿಲ್ಲಿಸಿದ್ದ ವ್ಯಾನ್‍ನಲ್ಲಿ ಎಸೆದಿದ್ದಾನೆ. ಅದಕ್ಕೂ ಮೊದಲು ಮಹಿಳೆ ಮೃತದೇಹವನ್ನು ಪ್ಲಾಸ್ಟಿಕ್ ಕವರಿನಲ್ಲಿ ಸುತ್ತಿ ಎಸೆದಿದ್ದಾನೆ. ಸದ್ಯಕ್ಕೆ ಪೊಲೀಸರು ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಗುಟ್ಕಾದ 5 ರೂ. ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡಿಟ್ಟರು

    ಗುಟ್ಕಾದ 5 ರೂ. ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡಿಟ್ಟರು

    ಆಗ್ರಾ: 4 ಮಂದಿ ಯುವಕರು ಅಂಗಡಿಯೊಂದರಲ್ಲಿ 5 ರೂ. ಗುಟ್ಕಾ ಖರೀದಿಸಿ ಹಾಗೇಯೇ ಹೋಗುತ್ತಿದ್ದರು. ಆಗ ಅವರನ್ನು ತಡೆದು ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡು ಹಾರಿಸಿ, ಕ್ರೌರ್ಯ ಮೆರೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿಗಳನ್ನು ದೀಪಕ್, ಟಿಕನ್ನಾ, ಫೌಜ್ದಾರ್, ಪೋಟಾ ಎಂದು ಗುರುತಿಸಲಾಗಿದೆ. ಮಾಧೋಪುರದ ಚೋಟು ಅಗರ್ವಾಲ್ ಗುಂಡೇಟು ತಿಂದ ಅಂಗಡಿ ಮಾಲೀಕ. ಮಂಗಳವಾರದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳವಾರ ರಾತ್ರಿ ಸುಮಾರು 9:30ರ ಹೊತ್ತಿಗೆ ಈ ಘಟನೆ ನಡೆದಿದೆ. ಚೋಟು ಅಂಗಡಿಗೆ ಬಂದ ಆರೋಪಿಗಳು 5 ರೂ. ಬೆಲೆಯ ಗುಟ್ಕಾವನ್ನು ಖರೀದಿಸಿದ್ದರು. ಆದರೆ ಹಣ ಕೊಡದೆ ವಾಪಾಸ್ ಆಗುತ್ತಿದ್ದ ವೇಳೆ ಅವರನ್ನು ತಡೆದ ಚೋಟು ಹಣ ಕೊಟ್ಟು ಹೋಗಿ ಎಂದನು. ಕೇವಲ 5 ರೂ. ವಿಚಾರಕ್ಕೆ ಸಿಟ್ಟಿಗೆದ್ದ ಯುವಕರು ಚೋಟುಗೆ ಹಿಗ್ಗಾಮುಗ್ಗ ಹೊಡೆದು, ಆತನ ಅಂಗಡಿಯ ಪೆಟ್ಟಿಗೆಯಲ್ಲಿದ್ದ 250 ರೂ. ಹಣವನ್ನು ದೋಚಿದ್ದರು.

    ಈ ವೇಳೆ ಗಲಾಟೆ ಗಮನಿಸಿದ ಸ್ಥಳೀಯ ಅಮಿತ್ ಚೋಟು ಸಹಾಯಕ್ಕೆ ಬಂದಾಗ, ಯುವಕರು ಮನಬಂದಂತೆ ಗುಂಡು ಹಾರಿಸಿದ್ದಾರೆ. ಜೊತೆಗೆ ಚೋಟುಗೂ ಗುಂಡಿಕ್ಕಿದ್ದಾರೆ. ಅಷ್ಟೇ ಅಲ್ಲದೆ ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೆ ನಿನ್ನನ್ನು ಸಾಯಿಸುತ್ತೇವೆ. ನಿನ್ನ ಕುಟುಂಬವನ್ನೂ ಕೊಲೆ ಮಾಡುತ್ತೇವೆ ಎಂದು ಅಮಿತ್‍ಗೆ ಬೆದರಿಕೆವೊಡ್ಡಿ ಯುವಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

    ಆರೋಪಿಗಳು ಹೋದ ಬಳಿಕ ಗಂಭೀರ ಗಾಯಗೊಂಡಿದ್ದ ಚೋಟುವನ್ನು ಅಮಿತ್ ಆಸ್ಪತ್ರೆಗೆ ದಾಖಲಿಸಿದ್ದು, ಆತನ ಸ್ಥಿತಿ ಗಂಭಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊದಲು ಪೊಲೀಸರಿಗೆ ದೂರು ಕೊಡಲು ಹೆದರಿದ ಅಮಿತ್ ಬುಧವಾರ ಧೈರ್ಯ ಮಾಡಿ ಈ ಬಗ್ಗೆ ತಾಪ್ಪಲ್ ಪೊಲೀಸರ ಮುಂದೆ ಘಟನೆ ವಿವರಿಸಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307, ಸೆಕ್ಷನ್ 394 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗನಿಂದ ಸಖತ್ ಕ್ಲಾಸ್!

    ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗನಿಂದ ಸಖತ್ ಕ್ಲಾಸ್!

    – ಅಂಗಡಿ ಮಾಲೀಕನ ಬೈಗುಳದಿಂದ ಕಾಲ್ಕಿತ್ತ ಪ್ರತಿಭಟನಾಕಾರರು

    ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಬಂದ್‍ಗೆ ಕರೆ ಕೊಟ್ಟಿದ್ದು, ಹೀಗಾಗಿ ಮೊದಲ ದಿನವಾದ ಇಂದು ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗರೊಬ್ಬರು ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

    ಈ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ತಾಲೂಕು ಗುಜ್ಜಾಡಿಯಲ್ಲಿ ನಡೆದಿದೆ. ಅಂಗಡಿ ಮಾಲೀಕನ ಬೈಗುಳ ಕೇಳಿದ ಪ್ರತಿಭಟನಾಕಾರರು ಸ್ಥಳದಿಂದಲೇ ಕಾಲ್ಕಿತ್ತಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಂಗಡಿ ಮಾಲೀಕ ಏನ್ ಹೇಳಿದ್ರು..?
    ನಾನು ಮೋದಿ ಬೆಂಬಲಿಗ ಮಾತ್ರವಲ್ಲದೇ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ಬಂದ್ ಮಾಡಲ್ಲ. ಕಮ್ಯೂನಿಷ್ಟರಿಗೆ ನಾವು ಸಪೋರ್ಟ್ ಮಾಡಲ್ಲ. ನೀವು ಒಳ್ಳೆಯ ಹೋರಾಟಗಳನ್ನು ಮಾಡುತ್ತೀರಾ. ಮಾಡುವುದಿದ್ದರೆ ಶಬರಿಮಲೆಗಾಗಿ ಹೋರಾಟ ಮಾಡಿ. ಸಾವಿರ ವರ್ಷದಿಂದ ಶಬರಿಮಲೆಯಲ್ಲಿ ಪುಣ್ಯದ ಕೆಲಸ ನಡೆಯುತ್ತಿತ್ತು. ಮುಖ್ಯಮಂತ್ರಿಗಳು ಮಾಂಸ ತಿಂದು ದೇವಸ್ಥಾನಕ್ಕೆ ಹೋದಾಗ ಕಮ್ಯುನಿಸ್ಟರು ಬಂದ್ ಮಾಡಲ್ಲ. ಆದ್ರೆ ಒಳ್ಳೆಯ ಪ್ರಧಾನಿ ನಮ್ಮ ದೇಶದಲ್ಲಿದ್ದರೆ ನೀವು ಪ್ರತಿಭಟನೆಗಳನ್ನು ಮಾಡುತ್ತಿದ್ದೀರಾ ಅಂತ ಅಂಗಡಿ ಮಾಲೀಕ ಕೆಂಡಾಮಂಡಲರಾಗಿದ್ದಾರೆ.

    ಈ ವೇಳೆ ಪ್ರತಿಭಟನಾಕಾರರು ನಾವು ಮಾನವೀಯತೆಯ ದೃಷ್ಟಿಯಿಂದ ಅಂಗಡಿ ಬಂದ್ ಮಾಡಲು ಹೇಳುತ್ತಿದ್ದೇವೆ ಅಂತ ಹೇಳಿದ್ರು. ಇದರಿಂದ ಮತ್ತಷ್ಟು ಕೋಪಗೊಂಡ ಅಂಗಡಿ ಮಾಲೀಕ, ಯಾವುದು ಮಾನವೀಯತೆ..? ದೇಶದ ಬಗ್ಗೆ ಚಿಂತೆ ಮಾಡಿ. ಅದು ಮಾನವೀಯತೆ. ನರೇಂದ್ರ ಮೋದಿ ಸರ್ಕಾರ ಇಷ್ಟು ಸವಲತ್ತು ನಿಮಗೆ ಕೊಟ್ಟಿದೆ. ಬೆಲೆಯೇರಿಕೆ 2014ರಲ್ಲಿ ಎಷ್ಟು, 2019ರಲ್ಲಿ ಎಷ್ಟು ಎನ್ನುವುದನ್ನು ತಾಕತ್ತಿದ್ದರೆ ಬಂದು ಟ್ಯಾಲಿ ಮಾಡಿ ತಂದು ತೋರಿಸಿ ಅಂತ ಸವಾಲೆಸೆದರು.

    ನಮ್ಮ ದೇಶಕ್ಕೆ ಇಂತಹ ಪ್ರಧಾನಿ ಸಿಗುವುದೇ ನಮ್ಮ ಪುಣ್ಯ. ಕೇರಳಕ್ಕೆ ಹೋಗಿ ಪ್ರತಿಭಟನೆ ಮಾಡಿ. ಶಬರಿಮಲೆಗೆ ಮಾಂಸ ತಿಂದು ಹೋಗಿದ್ದಾರಲ್ವ ಅವರ ವಿರುದ್ಧ ಪ್ರತಿಭಟನೆ ಮಾಡಲು ಇವರಿಗೆ ಜೀವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಂಗಡಿ ಮಾಲೀಕನ ಬೈಗುಳದಿಂದ ಪ್ರತಿಭಟನಾಕಾರರು ಸ್ಥಳದಿಂದಲೇ ಕಾಲ್ಕಿತ್ತಿದ್ದಾರೆ.

    https://www.youtube.com/watch?v=SS8oTtm00f4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಕ್ಲೇರ್ಸ್ ಪ್ರಿಯರೇ ಎಚ್ಚರ – ಚಾಕ್ಲೇಟ್ ತಿನ್ನುವ ಮುನ್ನ ಈ ವಿಡಿಯೋ ನೋಡಿ

    ಎಕ್ಲೇರ್ಸ್ ಪ್ರಿಯರೇ ಎಚ್ಚರ – ಚಾಕ್ಲೇಟ್ ತಿನ್ನುವ ಮುನ್ನ ಈ ವಿಡಿಯೋ ನೋಡಿ

    ಚಿಕ್ಕಬಳ್ಳಾಪುರ: ಎಕ್ಲೇರ್ಸ್ ಚಾಕ್ಲೇಟ್ ಪ್ರಿಯರೇ ಎಚ್ಚರವಾಗಿರಿ. ನೀವು ಚಾಕ್ಲೇಟ್ ತಿನ್ನುವ ಮುನ್ನ ಈ ವಿಡಿಯೋವನ್ನು ನೋಡಲೇಬೇಕು.

    ಮಂಜುನಾಥ್ ಎಂಬವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿ ಒಂದು ಪ್ರಾವಿಜನ್ ಸ್ಟೋರ್ ನಡೆಸುತ್ತಿದ್ದರು. ಈ ವೇಳೆ ಚಾಕ್ಲೇಟ್ ತಿನ್ನಬೇಕೆಂದು ಆಸೆಯಾಯಿತು. ಹಾಗಾಗಿ ಅವರು ತನ್ನದೇ ಅಂಗಡಿಯಲ್ಲಿದ್ದ ಎಕ್ಲೇರ್ಸ್ ಚಾಕ್ಲೇಟ್ ತೆಗೆದುಕೊಂಡು ತಿನ್ನಲು ಮುಂದಾಗಿದ್ದಾರೆ.

    ಮಂಜುನಾಥ್ ತನ್ನದೇ ಅಂಗಡಿಯಲ್ಲಿ ಚಾಕ್ಲೇಟ್ ತಿನ್ನುವಾಗ ಅದರಲ್ಲಿ ಹುಳ ಪತ್ತೆಯಾಗಿದೆ. ಚಾಕ್ಲೇಟ್ ರ‍್ಯಾಪರ್ ಬಿಚ್ಚಿದ ಕೂಡಲೇ ಭಾರಿ ಗಾತ್ರದ ಹುಳು ಪತ್ತೆಯಾಗಿದೆ. ಇದನ್ನು ಕಂಡು ಮಂಜುನಾಥ್ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಚಾಕ್ಲೇಟ್ ನಲ್ಲಿ ಹುಳ ಪತ್ತೆಯಾಗಿರುವ ಫೋಟೋ ಮತ್ತು ವಿಡಿಯೋ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದೆ.

    ಮಂಜುನಾಥ್ ಪ್ರಾವಿಜನ್ ಸ್ಟೋರ್ ಜೊತೆ ಫೋಟೋ ಸ್ಟುಡಿಯೋ ಕೂಡ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    https://www.youtube.com/watch?v=JWxmrqYCma4&feature=youtu.be

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎರಡು ಅಂತಸ್ತಿನಿಂದ ಬೀಳ್ತಿದ್ದ ಬಾಲಕಿಯನ್ನು ರಕ್ಷಿಸಿದ ಅಂಗಡಿ ಮಾಲೀಕ

    ಎರಡು ಅಂತಸ್ತಿನಿಂದ ಬೀಳ್ತಿದ್ದ ಬಾಲಕಿಯನ್ನು ರಕ್ಷಿಸಿದ ಅಂಗಡಿ ಮಾಲೀಕ

    ಬೀಜಿಂಗ್: ಎರಡು ಅಂತಸ್ತಿನ ಮೇಲಿನಿಂದ ಬಾಲಕಿಯೊಬ್ಬಳನ್ನು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

    ಅಂಗಡಿ ಮಾಲೀಕ ಫೋನ್ ನಲ್ಲಿ ಮಾತನಾಡುತ್ತಾ ಎದುರಿನ ಕಟ್ಟಡದಿಂದ ಬೀಳುತ್ತಿದ್ದ ಬಾಲಕಿಯನ್ನು ನೋಡಿದ್ದಾರೆ. ತನ್ನ ಅಂಗಡಿಗೂ ಬಾಲಕಿ ಬೀಳುತ್ತಿದ್ದ ಕಟ್ಟಡಕ್ಕೆ ಅಂದಾಜು 40 ಮೀಟರ್ ದೂರವಿದ್ರೂ ಕ್ಷಣಾರ್ಧದಲ್ಲಿ ಓಡಿ ಹೋಗಿ ಆಕೆಯನ್ನು ಕ್ಯಾಚ್ ಹಿಡಿದಿದ್ದಾರೆ.

    ರಸ್ತೆಯಲ್ಲಿ ಬಾಲಕಿ ಬೀಳುತ್ತಿದ್ದನ್ನು ಹಲವರು ಅಸಹಾಯಕರಾಗಿ ನೋಡುತ್ತಿದ್ದರು. ಅಂಗಡಿ ಮಾಲೀಕನ ಸಮಯ ಪ್ರಜ್ಞೆಯಿಂದಾಗಿ ಬಾಲಕಿಯ ಜೀವ ಉಳಿದಿದೆ. ನೈಋತ್ಯ ಚೀನಾದ ಚಾಂಗ್ಕಿಂಗ್ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಂಗಡಿ ಮಾಲೀಕ ಕಟ್ಟಡದಿಂದ ಬೀಳುತ್ತಿದ್ದ ಬಾಲಕಿಯನ್ನು ಕ್ಯಾಚ್ ಹಿಡಿದಿರುವ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

    ಇತ್ತೀಚೆಗೆ ಏಪ್ರಿಲ್ 30ರಂದು ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಬಾಲಕನನ್ನು ಚಾಲಕ ಕಾರ್ ನಿಲ್ಲಿಸಿ ತನ್ನ ಪ್ರಾಣವನ್ನು ಲೆಕ್ಕಿಸದೇ ಆತನನ್ನು ರಕ್ಷಣೆ ಮಾಡಿದ್ದರು.

  • 10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಕೇಸ್

    10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಕೇಸ್

    ಲಕ್ನೋ: 10 ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯ ಜೌರಾ ನಗರದಲ್ಲಿ ನಡೆದಿದೆ.

    ಗುರುವಾರ ಸಂಜೆ ಜೌರಾ ಪಟ್ಟಣದಲ್ಲಿರುವ ಅಂಗಡಿಗೆ ಒಬ್ಬ ಗ್ರಾಹಕ ಹ್ಯಾಂಡ್ ಕರ್ಚಿಫ್ ತೆಗೆದುಕೊಳ್ಳಲು ಹೋಗಿದ್ದರು. ಹ್ಯಾಂಡ್ ಕರ್ಚಿಫ್ ಖರೀದಿಸಿ ಎರಡು 10 ರೂ. ನಾಣ್ಯಗಳನ್ನು ಅಂಗಡಿ ಮಾಲೀಕನಿಗೆ ನೀಡಿದ್ದರು. ಆದರೆ ಮಾಲೀಕ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾಗಿ ಜೌರಾ ಪೊಲೀಸ್ ಠಾಣೆಯ ಮೇಲ್ವಿಚಾರಕ ಪ್ರವೀಣ್ ತ್ರಿಪಾಠಿ ತಿಳಿಸಿದ್ದಾರೆ.

    ಅಂಗಡಿ ಮಾಲೀಕನ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯಡಿ ಆರೋಪಿಗೆ ಸುಮಾರು 6 ತಿಂಗಳವರೆಗೆ ಜೈಲು ಶಿಕ್ಷೆ ಆಗಬಹುದು.

    ಅಂಗಡಿಯವರು 10 ರೂ. ನಾಣ್ಯಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿ ತಿಳಿದ ನಂತರ ಇಲ್ಲಿನ ಜಿಲ್ಲಾಧಿಕಾರಿ ಸುತ್ತೋಲೆ ಹೊರಡಿಸಿ, ಈ ರೀತಿ 10 ರೂ. ನಾಣ್ಯಗಳನ್ನು ಯಾರಾದರೂ ತೆಗೆದುಕೊಳ್ಳಲು ನಿರಾಕರಿಸಿದರೆ ಅದು ಭಾರತೀಯ ಕರೆನ್ಸಿಗೆ ಮಾಡುವ ಅಪಮಾನ ಎಂದು ಪರಿಗಣಿಸಲಾಗುತ್ತದೆ ಎಂದಿದ್ದರು ಅಂತ ತ್ರಿಪಾಠಿ ಹೇಳಿದ್ದಾರೆ.