Tag: Short Run

  • ಡೆಲ್ಲಿ ತಂಡಕ್ಕೆ ನೆರವಾಯ್ತು ಅಂಪೈರ್ ಎಡವಟ್ಟು ತೀರ್ಪು- ಶ್ರೀನಾಥ್‍ಗೆ ದೂರು ಕೊಟ್ಟ ಪಂಜಾಬ್

    ಡೆಲ್ಲಿ ತಂಡಕ್ಕೆ ನೆರವಾಯ್ತು ಅಂಪೈರ್ ಎಡವಟ್ಟು ತೀರ್ಪು- ಶ್ರೀನಾಥ್‍ಗೆ ದೂರು ಕೊಟ್ಟ ಪಂಜಾಬ್

    ಅಬುಧಾಬಿ: ಕಿಂಗ್ಸ್ ಇಲೆವೆನ್ ತಂಡ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಅವರ ವಿವಾದಾತ್ಮಕ ಶಾರ್ಟ್ ರನ್ ವಿರುದ್ಧ ಪಂಜಾಬ್ ತಂಡ ಮನವಿ ಮಾಡಿದ್ದು, ಉತ್ತಮ ಫಲಿತಾಂಶಕ್ಕಾಗಿ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲು ಆಟಗಾರರು ಮನವಿ ಮಾಡಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಿಇಒ ಸತೀಶ್ ಮೆನನ್, ಪಂದ್ಯದ ರೆಫರಿ ಜಾವಗಲ್ ಶ್ರೀನಾಥ್ ಬಳಿ ಮನವಿ ಮಾಡಿದ್ದೇವೆ. ಮಾನವ ತಪ್ಪು ಸಹಜವಾಗಿ ನಡೆಯುತ್ತದೆ. ಆದರೆ ಅಂತಾರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ, ತಂತ್ರಜ್ಞಾನ ಲಭ್ಯವಿದ್ದರೂ ಇಂತಹ ಪ್ರಮಾದ ನಡೆಯುವುದು ಸರಿಯಲ್ಲ. ಈ ಒಂದು ರನ್ ನಮ್ಮ ಪ್ಲೇ ಆಫ್ ಪ್ರವೇಶಿಸಲು ದುಬಾರಿಯಾಗಬಹುದು. ಸೋಲು ಅಂತಿಮವಾಗಿ ಸೋಲು ಅಷ್ಟೇ. ಆದ್ದರಿಂದ ನಿಯಮಗಳಲ್ಲಿ ಬದಲಾವಣೆ ತರುವ ವಿಶ್ವಾಸವಿದೆ ಎಂದು ತಿಳಿಸಿದರು.

    ಇತ್ತ ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಟ್ರೇಲಿಯಾ ಮಾಜಿ ಆಟಗಾರ ಟಾಮ್ ಮೂಡಿ, ತಂತ್ರಜ್ಞಾನ ಆಟಕ್ಕೆ ಸಹಾಯ ಮಾಡಬೇಕಾದರೆ ನಿಯಮಗಳ ಬದಲಾವಣೆ ಅಗತ್ಯವಿದೆ. ಆದರೆ ಯಾವುದೋ ಒಂದು ತಪ್ಪು ನಡೆಯುವವರೆಗೂ ಅಂತಹ ವಿಷಯಗಳನ್ನು ನಾವು ಯೋಚಿಸಲಾಗುವುದಿಲ್ಲ. ಘಟನೆಯಲ್ಲಿ ಮೂರನೇ ಅಂಪೈರ್ ತೀರ್ಪು ನೀಡಬೇಕಾಗಿತ್ತು. ಯಾವುದೇ ನಿಯಮಗಳನ್ನು ಬದಲಿಸಿದರೂ ಟೂರ್ನಿಯ ಆರಂಭದಲ್ಲೇ ಅದನ್ನು ಘೋಷಿಸಬೇಕಿದೆ ಎಂದು ಹೇಳಿದ್ದಾರೆ.

    ಪಂಜಾಬ್ ಮತ್ತು ಡೆಲ್ಲಿ ವಿರುದ್ಧ ಪಂದ್ಯ ಸೂಪರ್ ಓವರ್ ಮುನ್ನ ಕಗಿಸೊ ರಬಡಾ ಬೌಲ್ ಮಾಡಿದ ಓವರಿನಲ್ಲಿ ನಾನ್‍ಸ್ಟ್ರೇಕ್ ನಲ್ಲಿದ್ದ ಕ್ರಿಸ್ ಜೋರ್ಡನ್ ರನ್ ಪೂರ್ಣಗೊಂಡಿರುವುದು ರಿಪ್ಲೇನಲ್ಲಿ ಸ್ಪಷ್ಟವಾಗಿತ್ತು. ತಾಂತ್ರಿಕವಾಗಿ ಸಾಕ್ಷಿ ಇದ್ದರೂ ಅಂಪೈರ್ ಮೆನನ್ ತಮ್ಮ ತೀರ್ಪನ್ನು ಮರುಪರಿಶೀಲನೆ ಮಾಡಲಿಲ್ಲ. ಪರಿಣಾಮ ಕಿಂಗ್ಸ್ ಇಲೆವೆನ್ ಖಾತೆಗೆ ಕೇವಲ 1 ರನ್ ಲಭಿಸಿತ್ತು.

    ಅಂತಿಮ ಓವರಿನಲ್ಲಿ ಪಂಜಾಬ್ 13 ರನ್ ಗಳಿಸಬೇಕಿತ್ತು. ಮಯಾಂಕ್ 12 ರನ್ ಸಿಡಿಸಲು ಯಶಸ್ವಿಯಾಗಿದ್ದರು. ಒಂದೊಮ್ಮೆ ಶಾರ್ಟ್ ರನ್ ಅವರ ಖಾತೆಗೆ ಜಮೆಯಾಗಿದ್ದರೆ ಮೂರು ಎಸೆತ ಬಾಕಿ ಇರುವಂತೆಯೇ ಪಂದ್ಯದಲ್ಲಿ ಪಂಜಾಬ್ ತಂಡ ಗೆಲುವು ಪಡೆಯುತ್ತಿತ್ತು. ಆದರೆ ಬಳಿಕ ನಡೆದ ಎರಡು ಎಸೆತಗಳಲ್ಲಿ, ಎರಡು ವಿಕೆಟ್ ಉರುಳಿದ ಕಾರಣ ಪಂದ್ಯದ ಫಲಿತಾಂಶ ತೀರ್ಮಾನ ಸೂಪರ್ ಓವರ್‍ನಲ್ಲೇ ಮಾಡಬೇಕಾಯ್ತು.

    ಇತ್ತ ಶಾರ್ಟ್ ರನ್ ಕುರಿತಂತೆ ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರ ಹಾಕಿರುವ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ, ಕೊರೊನಾ ಸಂದರ್ಭದಲ್ಲಿ ಐಪಿಎಲ್‍ಗಾಗಿ ಉತ್ಸಾಹದಿಂದ ಪ್ರಯಾಣಿಸಿದೆ. 6 ದಿನಗಳ ಕ್ವಾರಂಟೈನ್ ಹಾಗೂ 5 ಕೋವಿಡ್ ಟೆಸ್ಟ್‍ಗಳನ್ನ ನಗುವಿನ ಮೂಲಕವೇ ಎದುರಿಸಿದ್ದೆ. ಆದರೆ ಒಂದು ಶಾರ್ಟ್ ರನ್ ನನಗೆ ತೀವ್ರ ಹೊಡೆತ ನೀಡಿದೆ. ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲು ಆಗದಿದ್ದರೆ ಅದರ ಅರ್ಥವೇನು? ಬಿಸಿಸಿಐಗೆ ಇದು ಹೊಸ ನಿಯಮಗಳನ್ನು ಪರಿಚಯಿಸಲು ಸೂಕ್ತ ಸಮಯ. ಇದು ಪ್ರತಿ ವರ್ಷ ಸಂಭವಿಸುವುದಿಲ್ಲ ಎಂದು ಹೇಳಿದ್ದಾರೆ.

    ಇತ್ತ ಕಿವೀಸ್ ಮಾಜಿ ಆಟಗಾರ ಸ್ಕಾಟ್ ಸ್ಟೈರಿಸ್ ಪ್ರತಿಕ್ರಿಯೆ ನೀಡಿ, ಶಾರ್ಟ್ ರನ್ ಇಂದಿನ ಐಪಿಎಲ್ ಪಂದ್ಯದಲ್ಲಿ ಸಣ್ಣ ನಿರ್ಧಾರ. ಆದರೆ ನಿಮಗೆ ಕೊನೆಯ 2 ಎಸೆತಗಳಲ್ಲಿ 1 ರನ್ ಬೇಕಾಗಿದ್ದು, ಗೆಲುವು ಪಡೆಯಲು ಸಾಧ್ಯವಾಗದಿದ್ದರೆ ನಿಮ್ಮನ್ನು ನೀವೇ ದೂಷಿಸಿಕೊಳ್ಳಬೇಕು ಎಂದಿದ್ದಾರೆ.

  • ‘ಶಾರ್ಟ್ ರನ್’ – ಧೋನಿ ತಪ್ಪಿಲ್ಲ: ಅಭಿಮಾನಿಯ ಡೌಟ್ ಕ್ಲಿಯರ್ ಮಾಡಿದ ಗಿಲ್‍ಕ್ರಿಸ್ಟ್

    ‘ಶಾರ್ಟ್ ರನ್’ – ಧೋನಿ ತಪ್ಪಿಲ್ಲ: ಅಭಿಮಾನಿಯ ಡೌಟ್ ಕ್ಲಿಯರ್ ಮಾಡಿದ ಗಿಲ್‍ಕ್ರಿಸ್ಟ್

    ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಪಡೆದು ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಆದರೆ ಪಂದ್ಯದ ವೇಳೆ ಧೋನಿ ರನ್ ಪೂರ್ಣಗೊಳಿಸದೇ ಇರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಆಸೀಸ್ ಮಾಜಿ ಆಟಗಾರ, ವಿಕೆಟ್ ಕೀಪರ್ ಗಿಲ್‍ಕ್ರಿಸ್ಟ್ ಘಟನೆಯಲ್ಲಿ ಧೋನಿ ನಿಯಮವನ್ನು ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ.

    ಧೋನಿ ಶಾರ್ಟ್ ರನ್ ಕುರಿತು ಅಭಿಮಾನಿಯೊಬ್ಬರು ಟ್ವೀಟ್ ಮಾಡಿ ಗಿಲ್‍ಕ್ರಿಸ್ಟ್ ಅಭಿಪ್ರಾಯವನ್ನು ಕೇಳಿದ್ದು, ಈ ಟ್ವೀಟ್‍ಗೆ ಗಿಲ್‍ಕ್ರಿಸ್ಟ್ ಪ್ರತಿಕ್ರಿಯೆ ನೀಡಿದ್ದಾರೆ. ಧೋನಿ ನಿಯಮಗಳ ವಿರುದ್ಧ ಏನೂ ಮಾಡಿಲ್ಲ. ಇದು ಸಾಮಾನ್ಯವಾಗಿ ಕಂಡುಬಾರದ ಸಂದರ್ಭ ಎಂದು ಹೇಳಿ ಧನ್ಯವಾದ ತಿಳಿಸಿದ್ದಾರೆ.

    ಧೋನಿ ಶಾರ್ಟ್ ರನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಗಿಲ್‍ಕ್ರಿಸ್ಟ್ ಅವರನ್ನು ಪ್ರಶ್ನಿಸಿರುವ ದರ್ಶಕ್ ಪಟೇಲ್ ಎಂಬವರು, ಪಂದ್ಯದಲ್ಲಿ ಬ್ಯಾಟ್ಸ್ ಮನ್ 2ನೇ ರನ್ ಅಥವಾ ಅದಕ್ಕಿಂತ ಹೆಚ್ಚಿನ ರನ್ ಪಡೆಯುವ ಸಂದರ್ಭದಲ್ಲಿ ಶಾರ್ಟ್ ರನ್ ಸಂಭವಿಸಿದರೆ ಮಾತ್ರ ಅದನ್ನು ಪರಿಗಣಿಸಲಾಗುತ್ತದೆ. ಒಮ್ಮೆ ಬ್ಯಾಟ್ಸ್ ಮನ್ ಮೊದಲ ರನ್ ಪೂರ್ಣಗೊಳಿಸಿದ ವೇಳೆ ಬಳಿಕ ಫೀಲ್ಡಿಂಗ್ ತಂಡ ಏನನ್ನು ಮಾಡಬಾರದು ಎಂದು ನಿರ್ಧರಿಸಿದರೆ ಅದು ರನ್ ಆಗುತ್ತದೆ ಅಲ್ಲವೇ? ಇದನ್ನು ಬಗೆಹರಿಸಿ ಎಂದು ಗಿಲ್‍ಕ್ರಿಸ್ಟ್ ಅವರಲ್ಲಿ ಕೇಳಿದ್ದರು.

    ನಡೆದಿದ್ದೇನು?
    ಅಡಿಲೇಡ್ ಏಕದಿನ ಪಂದ್ಯದ 45ನೇ ಓವರಿನಲ್ಲಿ ಧೋನಿ ಒಂದು ರನ್ ಪಡೆದು ಮುಂದಿನ ಓವರಿಗೆ ಬ್ಯಾಟಿಂಗ್ ಕಾಯ್ದುಕೊಳ್ಳಲು ನಿರ್ಧರಿಸಿದ್ದರು. ಆದರೆ ಈ ವೇಳೆ ರನ್ ಪೂರ್ಣಗೊಳಿಸದೆ ಕೆಲವೇ ಇಂಚುಗಳ ಅಂತರದಲ್ಲಿ ಮರಳಿ ಹಿಂದಕ್ಕೆ ತೆರಳಿದ್ದರು. ಧೋನಿ ಅವರ ಈ ಎಡವಟ್ಟನ್ನು ಅಂಪೈರ್ ಹಾಗೂ ಎದುರಾಳಿ ತಂಡದ ಆಟಗಾರರು ಕೂಡ ಗಮನಿಸಿರಲಿಲ್ಲ.

    ಪಂದ್ಯದ ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಹಲವರು, ತಂಡಕ್ಕೆ 18 ಎಸೆತಗಳಲ್ಲಿ 25ರನ್ ಬೇಕಿತ್ತು. ಒಂದೊಮ್ಮೆ ಧೋನಿ ಬ್ಯಾಟಿಂಗ್ ಸ್ಟ್ರೈಕ್ ಪಡೆಯದಿದ್ದರೆ, ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

    https://twitter.com/ALL_IN_ONE_MAN/status/1085528833183236096

    ನಿಯಮ ಏನು ಹೇಳುತ್ತೆ: ಮೆಲ್ಬರ್ನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ನಿಯಮವಾಳಿಯ (18.4.1) ಪ್ರಕಾರ ಆಟಗಾರ 2ನೇ ರನ್ ಪಡೆಯುವ ಅಥವಾ ಚೆಂಡು ಬೌಂಡರಿ ಗೆರೆದಾಟಿದೆ ಎಂದು ಭಾವಿಸಿ ರನ್ ಶಾಟ್ ರನ್ ಮಾಡಿದರೆ ಮಾತ್ರ ಅದನ್ನು ಅಂಪೈರ್ ಪರಿಗಣಿಸಬಹುದಾಗಿದೆ. ಆದರೆ ಧೋನಿ ಹಾಗೂ ದಿನೇಶ್ ಕಾರ್ತಿಕ್ ಇಬ್ಬರು 2ನೇ ರನ್ ಪಡೆಯಲು ಯತ್ನಿಸದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv