Tag: Shraddha Salian

  • ರತ್ನಮಂಜರಿಯಲ್ಲಿದೆ ಹಾಲಿವುಡ್ ಮಾದರಿಯ ತಾಂತ್ರಿಕ ಶ್ರೀಮಂತಿಕೆ!

    ರತ್ನಮಂಜರಿಯಲ್ಲಿದೆ ಹಾಲಿವುಡ್ ಮಾದರಿಯ ತಾಂತ್ರಿಕ ಶ್ರೀಮಂತಿಕೆ!

    ಬೆಂಗಳೂರು: ಅಮೆರಿಕದಂಥಾ ವಿದೇಶಗಳಲ್ಲಿ ನೆಲೆಸಿದ್ದರೂ ಕನ್ನಡತನ ಮರೆಯದ, ಬೇರುಗಳಿಗಾಗಿ ತುಡಿಯುವ ಅದೆಷ್ಟೋ ಮನಸುಗಳಿವೆ. ಇಂಥಾ ಮನಸುಗಳಿಂದಲೇ ಕನ್ನಡದ ಸಾಂಸ್ಕೃತಿಕ ಜಗತ್ತಿಗೆ ಒಂದಷ್ಟು ಮೌಲ್ಯಯುತ ಕೊಡುಗೆಗಳೂ ಸಿಕ್ಕಿವೆ. ಇದೇ ರೀತಿಯ ಕನ್ನಡತನದ ಮನಸುಗಳೇ ಸೇರಿ ನಿರ್ಮಾಣ ಮಾಡಿರೋ ಚಿತ್ರ ರತ್ನಮಂಜರಿ. ಈಗಾಗಲೇ ನಾನಾ ದಿಕ್ಕುಗಳಿಂದ ಕುತೂಹಲ ಹುಟ್ಟಿಸುತ್ತಲೇ ಬಹು ನಿರೀಕ್ಷಿತ ಚಿತ್ರವಾಗಿಯೂ ಹೊರ ಹೊಮ್ಮಿದೆ. ರತ್ನಮಂಜರಿ ಇದೇ ತಿಂಗಳ ಹದಿನೇಳರಂದು ಅದ್ಧೂರಿಯಾಗಿ ತೆರೆ ಕಾಣಲಿದೆ.

    ವಿದೇಶ ವಾಸಿಗಳಾಗಿರುವ ನಟರಾಜ್ ಹಳೆಬೀಡು, ಸಂದೀಪ್ ಕುಮಾರ್, ಡಾ. ನವೀನ್ ರತ್ನಮಂಜರಿಯನ್ನು ನಿರ್ಮಾಣ ಮಾಡಿದ್ದಾರೆ. ಪ್ರಸಿದ್ಧ್ ನಿರ್ದೇಶನದ ಈ ಚಿತ್ರದ ಮೂಲಕವೇ ರಾಜ್ ಚರಣ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಅಖಿಲಾ ಪ್ರಕಾಶ್, ಪಲ್ಲವಿ ರಾಜು ಮತ್ತು ಶ್ರದ್ಧಾ ಸಾಲಿಯಾನ್ ನಾಯಕಿಯರಾಗಿ ನಟಿಸಿದ್ದಾರೆ.

    ಕಥೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರಬೇಕೆಂಬ ಪ್ರತಿಜ್ಞೆಯೊಂದಿಗೇ ರತ್ನಮಂಜರಿ ಶುರುವಾಗಿತ್ತು. ಹೇಳಿ ಕೇಳಿ ಇದು ವಿದೇಶದಲ್ಲಿ ಬೀಡು ಬಿಟ್ಟಿರುವ ಕನ್ನಡಿಗರೇ ಸೇರಿಕೊಂಡು ಮಾಡಿರೋ ಚಿತ್ರ. ಹಾಗಿದ್ದ ಮೇಲೆ ತಾಂತ್ರಿಕವಾಗಿಯೂ ಶ್ರೀಮಂತವಾಗಿರಲಿದೆ ಎಂಬ ನಿರೀಕ್ಷೆ ಎಲ್ಲರಿಗೂ ಇದ್ದೇ ಇರುತ್ತೆ. ಇದನ್ನು ಮನಗಂಡೇ ಕನ್ನಡಕ್ಕೆ ತೀರಾ ಹೊಸತಾದ ತಾಂತ್ರಿಕ ಕೌಶಲ್ಯಗಳೊಂದಿಗೆ ಈ ಚಿತ್ರವನ್ನು ರೂಪಿಸಲಾಗಿದೆಯಂತೆ. ಹಾಲಿವುಡ್ ಚಿತ್ರಗಳಿಗೆ ಕಾರ್ಯ ನಿರ್ವಹಿಸಿದ ತಂತ್ರಜ್ಞರೂ ರತ್ನಮಂಜರಿಗೆ ಸಾಥ್ ಕೊಟ್ಟಿದ್ದಾರೆ. ಈ ಕಾರಣದಿಂದಲೇ ಈ ಚಿತ್ರ ತಾಂತ್ರಿಕವಾಗಿ ಹಾಲಿವುಡ್ ಫ್ಲೇವರಿನೊಂದಿಗೆ ಮೂಡಿ ಬಂದಿದೆ. ಅದರ ಚಮತ್ಕಾರವೇನನ್ನೋದು ಇನ್ನು ವಾರದೊಪ್ಪತ್ತಿನಲ್ಲಿಯೇ ಗೊತ್ತಾಗಲಿದೆ!

  • ರತ್ನಮಂಜರಿ ಟ್ರೈಲರ್ ರಿಲೀಸಾಯ್ತು!

    ರತ್ನಮಂಜರಿ ಟ್ರೈಲರ್ ರಿಲೀಸಾಯ್ತು!

    ಬೆಂಗಳೂರು: ಸಸ್ಪೆನ್ಸ್ ಥ್ರಿಲ್ಲರ್ ಕಥಾನಕವನ್ನು ಒಳಗೊಂಡಿರುವ ರತ್ನಮಂಜರಿ ಚಿತ್ರದ ಟ್ರೈಲರ್ ಕಳೆದ ವಾರ ಬಿಡುಗಡೆಯಾಯಿತು. ಪ್ರಸಿದ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿ ನಿರ್ದೇಶನ ಮಾಡಿದ್ದಾರೆ.

    ಅಮೆರಿಕಾದಲ್ಲಿ ನಡೆದ ನೈಜ ಘಟನೆಯೊಂದನ್ನಾಧರಿಸಿ ಈ ಚಿತ್ರದ ಕಥೆಯನ್ನು ಮಾಡಲಾಗಿದ್ದು ರಾಂಚರಣ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಖಿಲಾ ಪ್ರಕಾಶ್, ಪಲ್ಲವಿರಾಜು ಹಾಗೂ ಶ್ರದ್ಧಾ ಸಾಲಿಯಾನ್ ಮೂರು ಜನ ನಾಯಕಿಯರಾಗಿ ಅಭಿನಯಿಸಿದ್ದಾರೆ. ಈ ಮೂವರಲ್ಲಿ ರತ್ನಮಂಜರಿ ಯಾರು ಎನ್ನುವುದೇ ಚಿತ್ರದ ಸಸ್ಪೆನ್ಸ್. ಹರ್ಷವರ್ಧನ ರಾಜ್ ಅವರ ಸಂಗೀತ ಸಂಯೋಜನೆ ಹಾಗೂ ಪ್ರೀತಂ ತೆಗ್ಗಿನಮನೆ ಅವರ ಛಾಯಾಗ್ರಹಣ ಕೂಡ ಈ ಚಿತ್ರಕ್ಕಿದೆ.

    ಮೊನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಾಯಕ ರಾಂಚರಣ್ ಮಾತನಾಡಿ, ಸಿದ್ಧಾಂತ್ ಎಂಬ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದು, ಅಮೆರಿಕಾದ ಕಂಪನಿಯೊಂದರಲ್ಲಿ ಸಸ್ಯ ವಿಜ್ಞಾನಿಯಾಗಿರುತ್ತೇನೆ. ನನ್ನಲ್ಲಿರುವ ಒಂದು ವಿಶೇಷ ಫೋಟೋಗ್ರಫಿಕ್ ಮೆಮೋರಿಯಿಂದ ಅಲ್ಲಿ ನಡೆದ ಕೊಲೆಯೊಂದರ ಮೂಲವನ್ನು ಹುಡುಕುತ್ತಾ ಹೊರಟಾಗ ನೂರಾರು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಯು.ಎಸ್.ನಲ್ಲಿ ಶೂಟ್ ಮಾಡುವಾಗ ಸ್ವಲ್ಪ ತೊಂದರೆಯಾದರೂ ಅಲ್ಲಿನ ಕನ್ನಡಿಗರು ತುಂಬಾ ಸಹಾಯ ಮಾಡಿದರು. ನಮಗೆ ಮಳೆ ತುಂಬಾ ಅನುಕೂಲ ಮಾಡಿಕೊಟ್ಟಿತು ಎಂದು ಹೇಳಿದರು. ನಾಯಕಿ ಅಖಿಲಾ ಪ್ರಕಾಶ್ ಮಾತನಾಡಿ, ಗೌರಿ ಎಂಬ ಫ್ಯಾಷನ್ ಡಿಸೈನರ್ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ಯು.ಎಸ್.ನಲ್ಲಿದ್ದರೂ ನಮ್ಮ ಸಂಪ್ರದಾಯ ಮರೆತಿರುವುದಿಲ್ಲ. ಹಾಡುಗಳನ್ನು ಮಲೇಷಿಯಾ ಹಾಗೂ ಕೂರ್ಗ್ ನಲ್ಲಿ ಶೂಟ್ ಮಾಡಿದ್ದೇವೆ. ನಾವು ಮೂವರು ನಾಯಕಿಯರಿದ್ದು ಅದರಲ್ಲಿ ರತ್ನಮಂಜರಿ ಯಾರು ಅಂತ ನಮಗೂ ಗೊತ್ತಿಲ್ಲ. ಚಿತ್ರ ಬಂದ ಮೇಲಷ್ಟೇ ಅದು ಗೊತ್ತಾಗಲಿದೆ ಎಂದು ಹೇಳಿಕೊಂಡರು. ಮತ್ತೊಬ್ಬ ನಾಯಕಿ ಪಲ್ಲವಿರಾಜು ಮಾತನಾಡಿ, ಮನೆ ಕೆಲಸ ಮಾಡುವ ಹುಡುಗಿ ಪಾತ್ರ ನನ್ನದು. ಸ್ವಲ್ಪ ತಲೆಹರಟೆ ಪಾತ್ರ ಎಂದು ಹೇಳಿದರು.