Tag: Shraddha Walker

  • ಅನ್ಯಕೋಮಿನ ವ್ಯಕ್ತಿಯನ್ನು ಸ್ವರಾ ಭಾಸ್ಕರ್‌ ಮದುವೆಯಾಗಿದ್ದಕ್ಕೆ ಶ್ರದ್ಧಾ ವಾಕರ್‌ ಪ್ರಕರಣ ನೆನಪಿಸಿದ ಸಾಧ್ವಿ

    ಅನ್ಯಕೋಮಿನ ವ್ಯಕ್ತಿಯನ್ನು ಸ್ವರಾ ಭಾಸ್ಕರ್‌ ಮದುವೆಯಾಗಿದ್ದಕ್ಕೆ ಶ್ರದ್ಧಾ ವಾಕರ್‌ ಪ್ರಕರಣ ನೆನಪಿಸಿದ ಸಾಧ್ವಿ

    ಬಾಲಿವುಡ್ (Bollywoo) ನಟಿ ಸ್ವರಾ ಭಾಸ್ಕರ್ (Swara Bhaskar) ಅವರು ಇತ್ತೀಚಿಗೆ ಸಮಾಜವಾದಿ ಪಕ್ಷದ ಫಹಾದ್ ಅಹ್ಮದ್ ಅವರನ್ನು ಮದುವೆಯಾದರು. ಹಿಂದೂ ಹುಡುಗಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಕ್ಕೆ ಈ ಜೋಡಿಯ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈಗ ನಟಿ ಸ್ವರಾ ಭಾಸ್ಕರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ (Sadhvi Prachi) ರಾಂಗ್ ಆಗಿದ್ದಾರೆ. ಶ್ರದ್ಧಾ ವಾಕರ್ (Shraddha Walker) ಕಥೆ ನೆನಪಿಸಿ ನಿಮಗೂ ಫ್ರಿಡ್ಜ್ ಗತಿ ಬರಬಹುದು ಎಂದು ಸ್ವರಾಗೆ ಎಚ್ಚರಿಸಿದ್ದಾರೆ.

    ಶ್ರದ್ಧಾ ವಾಕರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅಫ್ತಾಬ್ ತನ್ನ ಲವರ್ ಶ್ರದ್ಧಾ ವಾಕರ್ ಅವರ ದೇಹವನ್ನು ಕತ್ತರಿಸಿ 35 ತುಂಡುಗಳನ್ನಾಗಿ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದ. ಈ ಪ್ರಕರಣ ಬೆಳಕಿಗೆ ಬಂದ ನಂತರ ಶಾಕ್ ಆಗಿತ್ತು. ಈಗ ಈ ಪ್ರಕರಣಕ್ಕೂ ಸ್ವರಾ ಭಾಸ್ಕರ್ ಮದುವೆಗೂ ಲಿಂಕ್ ಮಾಡಿ ಸಾಧ್ವಿ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ನೀಲಿ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಅನುಪಮಾ ಗೌಡ

    ಶ್ರದ್ಧಾ ಅವರ ದೇಹವನ್ನು 35 ತುಂಡುಗಳನ್ನಾಗಿ ಮಾಡಿದ ಪ್ರಕರಣದ ಬಗ್ಗೆ ಸ್ವರಾ ಅವರು ಹೆಚ್ಚು ಗಮನವಹಿಸಿಲ್ಲ ಅನಿಸುತ್ತದೆ. ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೊದಲು ಅವರು ಫ್ರಿಡ್ಜ್‌ ಒಮ್ಮೆ ನೋಡಬೇಕು. ಮದುವೆ ಅವರ ವೈಯಕ್ತಿಕ ಆಯ್ಕೆ. ಆದ್ದರಿಂದ ನನಗೇನು ಆಗುವುದಿಲ್ಲ. ಆದರೆ, ಶ್ರದ್ಧಾಗೆ ಬಂದ ಗತಿ ಸ್ವರಾಗೂ ಬರಬಹುದು ಎಂದಿದ್ದಾರೆ.

    ನಟಿ ಸ್ವರಾ ಭಾಸ್ಕರ್ ಅವರು ಈ ಮೊದಲಿನಿಂದಲೂ ಹಿಂದೂ ಧರ್ಮದ ವಿರೋಧಿಯೇ ಆಗಿದ್ದರು. ಬೇರೆ ಧರ್ಮದವರನ್ನು ಅವರು ಮದುವೆ ಆಗುತ್ತಾರೆ ಎಂದು ನಾನು ಮೊದಲೇ ಊಹೆ ಮಾಡಿದ್ದೆ, ಅದು ಈಗ ಆಗಿದೆ. ಅವರು ಮುಸ್ಲಿಂನನ್ನು ಮದುವೆ ಆಗಿದ್ದಾರೆ ಎಂದು ಸಾಧ್ವಿ ಹೇಳಿದ್ದಾರೆ. ಸದ್ಯ ಸಾಧ್ವಿ ಮಾತಿಗೆ ಸ್ವರಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

    ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

    ನವದೆಹಲಿ: ದೆಹಲಿಯಲ್ಲಿ (Delhi) ಮತ್ತೊಂದು ಶ್ರದ್ಧಾ ವಾಕರ್ (Shraddha Walker) ರೀತಿಯ ಭೀಕರ ಹತ್ಯೆ ನಡೆದಿದ್ದು, ರಾಷ್ಟ್ರ ರಾಜಧಾನಿಯ ನಜಾಫ್‍ಗಢ್‍ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದಲ್ಲಿ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದ ಗೆಳತಿಯನ್ನು (Live In Partner) ಹತ್ಯೆಗೈದು, ಫ್ರಿಡ್ಜ್‌ನಲ್ಲಿ ಇಟ್ಟ ಘಟನೆ ನಡೆದಿದೆ.

    ಮೃತಳನ್ನು ನಿಕ್ಕಿ ಯಾದವ್ (22) ಎಂದು ಗುರುತಿಸಲಾಗಿದೆ. ಫೆ. 9ರ ಮಧ್ಯರಾತ್ರಿ ಕಾಶ್ಮೀರಿ ಗೇಟ್ ಐಎಸ್‍ಬಿಟಿ ಬಳಿ ನಿಕ್ಕಿ ಗೆಳೆಯ ಸಾಹಿಲ್ ಗೆಹ್ಲೋಟ್ (24) ಕತ್ತು ಹಿಸುಕಿ ಕೊಲೆ ಮಾಡಿ, ಯಾರಿಗೂ ಅನುಮಾನ ಬಾರದಿರಲಿ ಎಂದು ತನ್ನ ಢಾಬಾದ ಫ್ರಿಡ್ಜ್‌ನಲ್ಲಿ ( Fridge) ಆಕೆಯ ಶವವನ್ನು ಬಚ್ಚಿಟ್ಟಿದ್ದ. ಅಷ್ಟೇ ಅಲ್ಲದೇ ಕೃತ್ಯ ಎಸಗಿ ಕೆಲವೇ ಗಂಟೆಯಲ್ಲಿ ಬೇರೊಂದು ಯುವತಿಯ ಜೊತೆ ಮದುವೆ ಆಗಿರುವ ವಿಷಯ ಬೆಳಕಿಗೆ ಬಂದಿದೆ.

    ಘಟನೆಯೇನು?: ಮಿತ್ರಾನ್ ಗ್ರಾಮದ ನಿವಾಸಿಯಾದ ಸಾಹಿಲ್ ಹರಿಯಾಣದ ಜಜ್ಜರ್ ನಿವಾಸಿ ನಿಕ್ಕಿಯನ್ನು 2018ರಲ್ಲಿ ಉತ್ತಮ ನಗರ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದಾಗ ಭೇಟಿಯಾಗಿದ್ದ. ನಂತರ ಇವರಿಬ್ಬರು ನೋಯ್ಡಾದ ಒಂದೇ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು. ಅಲ್ಲಿಂದ ಸ್ನೇಹಿತರಾಗಿದ್ದರು. ಈ ಸ್ನೇಹವೇ ಲೀವ್ ಇನ್ ರಿಲೇಶನ್‍ಶಿಪ್‍ನಲ್ಲಿ ಇರಲು ನಾಂದಿ ಹಾಡಿತು.

    ಅದರಂತೆ ಇಬ್ಬರು ನೋಯ್ಡಾದಲ್ಲಿ ಬಾಡಿಗೆ ಮನೆಯನ್ನು ಪಡೆದು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಆದರೆ ಸಾಹಿಲ್ ತನ್ನ ಸಂಬಂಧದ ಬಗ್ಗೆ ಕುಟುಂಬದ ಸದಸ್ಯರಿಗೆ ತಿಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾಹಿಲ್ ಮನೆಯವರು ಬೇರೊಬ್ಬ ಯುವತಿಯನ್ನು ಮದುವೆ ಆಗುವಂತೆ ಒತ್ತಾಯಿಸಿದ್ದರು. ಅದಕ್ಕೆ ಸಾಹಿಲ್ ಒಪ್ಪಿಗೆ ಸೂಚಿಸಿದ್ದಕ್ಕೆ ಬೇರೆ ಯುವತಿಯ ಜೊತೆಗೆ ಫೆ. 10ಕ್ಕೆ ಮದುವೆಯ ದಿನಾಂಕವನ್ನು ಗೊತ್ತು ಮಾಡಿದ್ದರು.

    ಈ ವಿಷಯ ತಿಳಿದ ನಿಕ್ಕಿ, ಸಾಹಿಲ್ ಜೊತೆ ಜಗಳವಾಡಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಸಾಹಿಲ್ ನಿಕ್ಕಿಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದಾನೆ. ಅದರಂತೆ ಸಾಹಿಲ್ ತನ್ನ ಮೊಬೈಲ್‍ನ ಡೇಟಾ ಕೇಬಲ್ ಅನ್ನು ಬಳಸಿ ತನ್ನ ಕಾರಿನಲ್ಲೇ ನಿಕ್ಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

    ನಂತರ ನಿಕ್ಕಿಯನ್ನು ಕೊಂದ ನಂತರ ಸಾಹಿಲ್ ಆಕೆಯ ಶವವನ್ನು ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟು ವಿಕೃತಿಯನ್ನು ಮೆರೆದಿದ್ದಾನೆ. ಬಳಿಕ ಕೆಲವೇ ಗಂಟೆಯಲ್ಲಿ ಏನೂ ಆಗದ ರೀತಿಯಲ್ಲಿ ಹೋಗಿ ಮತ್ತೊಬ್ಬ ಯುವತಿಯನ್ನು ಮದುವೆಯಾಗಿದ್ದ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್ ರಾಮಸ್ವಾಮಿ

    ಆದರೆ ಮಂಗಳವಾರ ಢಾಬಾದ ಫ್ರಿಡ್ಜ್‌ನಲ್ಲಿ ನಿಕ್ಕಿಯ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ಸಾಹಿಲ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌ : ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದ್ರೌಪದಿಗೆ ಕೃಷ್ಣ ಸಹಾಯ ಮಾಡಿದಂತೆ ನಮಗೆ ಸಹಾಯ ಮಾಡಿ: ಮೋದಿಗೆ ಕಂಗನಾ ಮನವಿ

    ದ್ರೌಪದಿಗೆ ಕೃಷ್ಣ ಸಹಾಯ ಮಾಡಿದಂತೆ ನಮಗೆ ಸಹಾಯ ಮಾಡಿ: ಮೋದಿಗೆ ಕಂಗನಾ ಮನವಿ

    ಮುಂಬೈ: ನಟಿ ತುನಿಷಾ ಶರ್ಮಾ (Tunisha Sharma) ಅವರ ಸಾವಿನ ಪ್ರಕರಣದಲ್ಲಿ ಈಗಾಗಲೇ ಅನೇಕ ರೋಚಕ ಸತ್ಯಗಳು ಹೊರಬಿದ್ದಿವೆ. ತನಿಖೆ ನಡೆಯುವ ಸಂದರ್ಭದಲ್ಲಿ ತುನಿಷಾ ಗರ್ಭಿಣಿ (Pregnant Women) ಎಂದು ಹೇಳಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ಗರ್ಭಿಣಿ ಆಗಿರಲಿಲ್ಲ ಎಂದು ಸಾಬೀತಾಯಿತು. ಈ ಕುರಿತು ಮತ್ತೆ ತುನಿಷಾ ಸ್ನೇಹಿತೆ ರಯ್ಯಾ ಲಬೀಬ್ ಅಚ್ಚರಿಯ ಹೇಳಿಕೆ ನೀಡಿದ್ದು, ಆಕೆ ಗರ್ಭಿಣಿಯಾಗಿದ್ದು ನಿಜ. ಅಬಾರ್ಷನ್ ಮಾಡಿಸಿಕೊಂಡಿದ್ದಳು ಎಂದು ಹೇಳಿಕೆ ನೀಡಿದ್ದ.

    ನಟಿ ತುನಿಷಾ ಶರ್ಮಾ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಹದಿನೈದು ದಿನ ಮುನ್ನ ಬಾಯ್ ಫ್ರೆಂಡ್ ಶಿಜಾನ್ ಜೊತೆ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದಳು ಎಂದು ಹೇಳಲಾಗಿದ್ದು, ಈ ಲವ್ ಬ್ರೇಕ್ ಅಪ್ ಗೆ ಕಾರಣ ಲವ್ ಜಿಹಾದ್ (Love Jihad) ಭಯ ಮತ್ತು ಶ್ರದ್ಧಾ ವಾಕರ್ ಕೊಲೆಯಿಂದ ಬೇಸತ್ತು ದೂರವಾಗಿದ್ದನು ಎಂದು ಹೇಳಿಕೊಂಡಿದ್ದ. ಈ ಪ್ರಕರಣದ ಕುರಿತಾಗಿ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

    ಈ ಬೆನ್ನಲ್ಲೇ ನಟಿ ಕಂಗನಾ ರಣಾವತ್ (Kangana Ranaut) ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್ ವೊಂದನ್ನು ಬರೆದುಕೊಂಡಿದ್ದಾರೆ. `ಮಹಿಳೆ ಎಲ್ಲವನ್ನೂ ನಿಭಾಯಿಸಬಲ್ಲಳು, ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ ನಿಭಾಯಿಸಬಹುದು. ಆದರೆ ಅವಳ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ. ನಾನು ಗೌರವಾನ್ವಿತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸುತ್ತೇನೆ. ಕೃಷ್ಣ ದ್ರೌಪದಿಗೆ ಸಹಾಯ ಮಾಡಿದಂತೆ, ನಾವು ನಿಮ್ಮಲ್ಲಿ ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ಮಾಡುತ್ತೀರಿ ಎಂದು ನಿರೀಕ್ಷೆ ಇಟ್ಟಿದ್ದೀವಿ. ಮಹಿಳೆಯರ ಮೇಲೆ ಆ ಸಿಡ್ ದಾಳಿ, ಮಹಿಳೆಯನ್ನು ಅನೇಕ ತುಂಡು ತುಂಡುಗಳಾಗಿ ಕತ್ತರಿಸುವುದು ಇಂತವರಿಗೆ ತಕ್ಷಣ ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದು ಮನವಿ ಮಾಡಿದ್ದಾರೆ.

    ಇತ್ತೀಚೆಗಷ್ಟೇ 20 ವರ್ಷದ ತುನಿಷಾ ಶರ್ಮಾ ಶೂಟಿಂಗ್ ಸೆಟ್‌ನಲ್ಲೇ ಮೇಕಪ್ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಳಿಕ ಆಕೆಯ ಬಾಯ್‌ಫ್ರೆಂಡ್ ಶೀಜಾನ್ ಖಾನ್ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣ ಈಗ ಲವ್ ಜಿಹಾದ್ ಆಯಾಮ ಪಡೆದುಕೊಳ್ಳುತ್ತಿದೆ. ಈ ನಡುವೆ ಕಂಗನಾ ಟ್ವೀಟ್ ವೈರಲ್ ಆಗಿದೆ. ಇದನ್ನೂ ಓದಿ: ಲವ್ ಜಿಹಾದ್’ ಗೆ ಹೆದರಿಕೊಂಡು ತುನಿಷಾ ಶರ್ಮಾಳಿಂದ ದೂರವಾಗಿದ್ದ ಬಾಯ್ ಫ್ರೆಂಡ್

    Live Tv
    [brid partner=56869869 player=32851 video=960834 autoplay=true]

  • ತಂದೆಯನ್ನ ಕೊಂದು 20 ತುಂಡು ಮಾಡಿ ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

    ತಂದೆಯನ್ನ ಕೊಂದು 20 ತುಂಡು ಮಾಡಿ ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

    ಬಾಗಲಕೋಟೆ: ದೆಹಲಿಯ (Newdelhi) ಲಿವಿಂಗ್ ರಿಲೇಷನ್‌ಶಿಪ್ ಗೆಳತಿ ಶ್ರದ್ಧಾವಾಕರ್ ಹತ್ಯೆ ಕೇಸ್‌ನಂತೆ (Shraddha Walker) ಬಾಗಲಕೋಟೆಯಲ್ಲಿ ನಡೆದಿರುವ ಹತ್ಯೆಯೊಂದು (Murder) ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.

    ಬಾಗಲಕೋಟೆಯ ಮುಧೋಳ ನಗರದಲ್ಲಿ ಪಾಪಿ ಮಗನೊಬ್ಬ ತನ್ನ ತಂದೆಯನ್ನ ಕೊಂದು 20 ತುಂಡುಗಳಾಗಿ ಕತ್ತರಿಸಿ, ಕೊಳವೆ ಬಾವಿಗೆ ಬಿಸಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪರಶುರಾಮ ಕುಳಲಿ (54) ಕೊಲೆಯಾದ ವ್ಯಕ್ತಿ. ಇವರ ಮಗ ವಿಠ್ಠಲ ಕುಳಲಿ(21) ಕೊಲೆ ಆರೋಪಿ ಆಗಿದ್ದಾನೆ. ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲೇ ಸಿದ್ದರಾಮಯ್ಯಗೆ ಬಹಿಷ್ಕಾರ..!

    ಕಳೆದ ಮಂಗಳವಾರ (ಡಿಸೆಂಬರ್ 6)ರಂದು ಹತ್ಯೆ ನಡೆದಿದೆ ಎನ್ನಲಾಗಿದೆ. ತಂದೆ ಕುಡಿದ ಮತ್ತಿನಲ್ಲಿ ಮಗನಿಗೆ ಬೈಯ್ಯೋದು, ಹಲ್ಲೆ ಮಾಡೋದು ಮಾಡ್ತಿದ್ದರು. ಇದರಿಂದ ರೋಸಿ ಹೋಗಿದ್ದ ಮಗ, ಕಬ್ಬಿಣದ ರಾಡ್‌ನಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾನೆ. ನಂತರ ಮೃತದೇಹವನ್ನು ಕೊಳವೆ ಬಾವಿಗೆ ಹಾಕಲು ಹೋಗಿದ್ದಾನೆ. ಕೊಳವೆ ಬಾವಿಗೆ ದೇಹ ಇಳಿಯದೇ ಇದ್ದಾಗ, ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿ, ನಂತರ ಕೊಳವೆ ಬಾವಿಗೆ ಹಾಕಿದ್ದಾನೆ. ಇದನ್ನೂ ಓದಿ: ಪಕ್ಷಕ್ಕೆ ತೊಂದರೆಯಾದ್ರೆ ನೀವಿಬ್ಬರೇ ಕಾರಣ – ಸಿದ್ದು, ಡಿಕೆಶಿಗೆ ಕೆ.ಸಿ ವೇಣುಗೋಪಾಲ್ ಖಡಕ್ ವಾರ್ನಿಂಗ್

    ಇದೀಗ ಕೊಲೆ ರಹಸ್ಯ ಬಯಲಾಗಿದೆ. ಜೆಸಿಬಿಯಿಂದ (JCB) ಕೊಳವೆ ಬಾವಿ ಅಗೆದು ಮೃತದೇಹದ ಭಾಗಗಳನ್ನ ಪೊಲೀಸರು (Mudhol Police) ಹೊರ ತೆಗೆದಿದ್ದಾರೆ. ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಾಪಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

    ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

    ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾವಾಕರ್ ಹತ್ಯೆ ಪ್ರಕರಣದ (Shraddha Walker Murder Case) ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ (Aftab Amin Poonawala) ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಸಾಕೇತ್ ಜಿಲ್ಲಾ ನ್ಯಾಯಲಯದ (Court) ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

    ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ (Court) ಮುಂದಿನ 14 ದಿನಗಳಿಗೆ ನ್ಯಾಯಂಗ ಬಂಧನವನ್ನು ವಿಸ್ತರಣೆ ಮಾಡಿತು. ಅಫ್ತಾಬ್ ಬುದ್ಧಿವಂತ ಯುವಕನಾಗಿದ್ದು ತನಿಖೆಯಲ್ಲಿ ಪೊಲೀಸರು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆ. ಆಗಾಗ್ಗೆ ಹೇಳಿಕೆ ಬದಲಿಸುತ್ತಾನೆ ಮತ್ತು ಹೊಸ ಮಾಹಿತಿಯನ್ನು ನೀಡುತ್ತಿದ್ದಾನೆ ಇವುಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಹತ್ಯೆ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಜೈಲಿನಲ್ಲಿ ಇಬ್ಬರು ಕೈದಿಗಳ ಜೊತೆಗೆ ಅಫ್ತಾಬ್ ಇದ್ದು ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಮಂಪರು ಪರೀಕ್ಷೆ ಮತ್ತು ಫಾಲಿಗ್ರಾಫ್ ಪರೀಕ್ಷೆ ಅಂತ್ಯವಾಗಿದ್ದು, ಅದನ್ನು ಆಧರಿಸಿ ನಡೆಯುತ್ತಿರುವ ತನಿಖೆ ಪ್ರಗತಿಯಲ್ಲಿದೆ. ತನಿಖೆಯ ದೃಷ್ಟಿಯಿಂದ ಅಫ್ತಾಬ್ ಅವಶ್ಯಕತೆ ಇದೆ ಎಂದು ದೆಹಲಿ ಪೊಲೀಸರ ಪರ ವಕೀಲರು ವಾದ ಮಂಡಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಅಫ್ತಾಬ್ ಅಮಿನ್ ಪೂನಾವಾಲಾ ತನ್ನ ಪ್ರೇಯಸಿ ಶ್ರದ್ಧಾವಾಕರ್ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳಾಗಿ ಪೀಸ್ ಪೀಸ್ ಮಾಡಿ ದೆಹಲಿಯ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ಪೋಷಕರು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರಿಗೆ ಅಫ್ತಾಬ್ ಭೀಕರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಲ್ಲೀಗ ಲವ್ ಜಿಹಾದ್ ಹೋರಾಟದ ಕಾವು

    ಕರ್ನಾಟಕದಲ್ಲೀಗ ಲವ್ ಜಿಹಾದ್ ಹೋರಾಟದ ಕಾವು

    ಬೆಂಗಳೂರು: ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಹಲಾಲ್ ಫೈಟ್, ಹಿಜಬ್ ವಿವಾದ ಹಾಗೂ ಧರ್ಮ ದಂಗಲ್ ಕುಲುಮೆಯಲ್ಲಿರುವ ಕರ್ನಾಟಕದಲ್ಲಿ ಈಗ ಲವ್ ಜಿಹಾದ್ ಮೆಗಾ ಕ್ಯಾಂಪೇನ್ ಶುರುವಾಗಿದೆ. ಈ ಬಾರಿ ಹಿಂದೂ ಸಂಘಟನೆಗಳು (Hindu Organisations) ವಿಭಿನ್ನವಾಗಿ ಲವ್ ಜಿಹಾದ್ (Love Jihad) ವಿರುದ್ಧ ಹೋರಾಟಕ್ಕೆ ಅಖಾಡ ಸಿದ್ಧಮಾಡಿಕೊಂಡಿದೆ.

    ದೆಹಲಿಯ ಶ್ರದ್ಧಾ ವಾಕರ್ (Shraddha Walker) ಅಮಾನುಷ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅಫ್ತಾಬ್ ಅಮೀನ್ ಪೂನಾವಾಲನ (Aftab Amin Poonawala) ಕ್ರೂರ ವರ್ತನೆ, ಶ್ರದ್ಧಾ ದೇಹವನ್ನು 35 ಪೀಸ್‌ಗಳಾಗಿ ಕತ್ತರಿಸಿದ್ದು ಇವೆಲ್ಲವೂ ಜನಾಕ್ರೋಶಕ್ಕೆ ಕಾರಣವಾಗಿದೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಜಾಗೃತಿ ಮೂಡಿಸುವ ಸಲುವಾಗಿ ಹಿಂದೂ ಸಂಘನೆಗಳು ಹೊಸ ಅಭಿಯಾನ ಶುರು ಮಾಡಿವೆ. ಇದನ್ನೂ ಓದಿ: ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    ಕರಾವಳಿ ಭಾಗದಲ್ಲಿ ಈಗಾಗಲೇ ನಾನಾ ಕಡೆ ಲವ್ ಜಿಹಾದ್ (Love Jihad) ಜಾಗೃತಿಗಾಗಿ ಪೋಸ್ಟರ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಹಿಂದೂ ಹುಡುಗಿ ಶ್ರದ್ಧಾ ವಾಕಾರ್ ದೇಹವನ್ನು 35 ಪೀಸ್ ಮಾಡಲಾಯ್ತು. ಇದಕ್ಕೆ ಕಾರಣ ಲವ್ ಜಿಹಾದ್. ನೀವು ಈಕೆಯಂತೆ ಈ ಜಾಲಕ್ಕೆ ಬಲಿಯಾಗಬೇಡಿ ಅಂತಾ ಪೋಸ್ಟರ್ ಅಳವಡಿಸಲಾಗಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ

    ಲವ್ ಜಿಹಾದ್ ಜಾಗೃತಿ ಮೂಡಿಸಲು ಇದೇ ವಿಚಾರವಾಗಿ ಹೋರಾಟದ ರೂಪುರೇಷೆಗೂ ಹಿಂದೂ ಸಂಘಟನೆಗಳು ಅಖಾಡ ಸಿದ್ಧಪಡಿಸಿಕೊಂಡಿವೆ. ರಾಜ್ಯದ ನಾನಾ ಕಡೆಗಳಲ್ಲಿ ಪೋಸ್ಟರ್ ಅಳವಡಿಸಲು ಚಿಂತನೆ ನಡೆಸಿವೆ. ಲವ್ ಜಿಹಾದ್ ವಿರುದ್ಧ ವ್ಯಾಪಕ ಹೋರಾಟ ನಡೆಸುವ ಬಗ್ಗೆಯೂ ಸಂಘಟನೆಗಳು ಪ್ಲ್ಯಾನ್‌ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಪೀಸ್‌ಪೀಸ್ ಪ್ರೇಮಿ ಅಫ್ತಾಬ್ ಹತ್ಯೆಗೆ ಯತ್ನ – ಪೊಲೀಸ್ ವ್ಯಾನ್ ಮೇಲೆ ದಾಳಿ

    ಪೀಸ್‌ಪೀಸ್ ಪ್ರೇಮಿ ಅಫ್ತಾಬ್ ಹತ್ಯೆಗೆ ಯತ್ನ – ಪೊಲೀಸ್ ವ್ಯಾನ್ ಮೇಲೆ ದಾಳಿ

    ನವದೆಹಲಿ: ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ (LiveIn RelationShip) ಗೆಳತಿ ಶ್ರದ್ಧಾ ವಾಕರ್‌ನನ್ನು (Shraddha Walker) ಭೀಕರವಾಗಿ ಹತ್ಯೆ ಮಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲ (Aaftab Amin Poonawala) ಹತ್ಯೆಗೆ ಸೋಮವಾರ ಯತ್ನಿಸಲಾಗಿದೆ.

    ಕತ್ತಿ ಹಿಡಿದುಬಂದ ಗುಂಪೊಂದು ಪೊಲೀಸ್ ವ್ಯಾನ್ (Poliec Van) ಮೇಲೆ ಏಕಾ-ಏಕಿ ದಾಳಿ ಮಾಡಿದೆ. ದೆಹಲಿಯ ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (Forensic Laboratory) 2ನೇ ಪಾಲಿಗ್ರಾಫ್ ಪರೀಕ್ಷೆ (Polygraph Test) ನಡೆಸಿ ಮರಳಿ ಜೈಲಿಗೆ ಕರೆದೊಯ್ಯುವಾಗ ದಾಳಿ ನಡೆದಿದೆ. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    15 ಜನರ ಗುಂಪು ಕತ್ತಿ ಹಿಡಿದು ಏಕಾ-ಏಕಿ ದಾಳಿ ನಡೆಸಿದೆ. ಅಲ್ಲದೇ ಆ ಗುಂಪು ಅಫ್ತಾಬ್‌ನನ್ನೇ (Aaftab Amin Poonawala) ಹುಡುಕುತ್ತಿತ್ತು. ಅದು ಬಲಪಂಥೀಯರ ಗುಂಪಿನಂತೆ ಕಂಡುಬಂದಿದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ತಕ್ಷಣ ಜಾಗೃತರಾದ ಪೊಲೀಸರು ದಾಳಿಯನ್ನು ಹತ್ತಿಕ್ಕಿ, ಅಫ್ತಾಬ್‌ನನ್ನು ರಕ್ಷಣೆ ಮಾಡಿದ್ದಾರೆ. ದಾಳಿಗೆ ಯತ್ನಿಸಿದ ಕೆಲವರು ಗಾಯಗೊಂಡಿದ್ದಾರೆ.

    ಪೀಸ್‌ಪೀಸ್ ಪ್ರೇಮಿ ಪ್ರಕರಣವನ್ನು ದೆಹಲಿ ಪೊಲೀಸರು ವಿಭಿನ್ನ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಕೂತುಹಲಕಾರಿ ಮಾಹಿತಿಗಳು ಬೆಳಕಿಗೆ ಬರುತ್ತಿವೆ. ಇದನ್ನೂ ಓದಿ: ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

    ಶ್ರದ್ಧಾ ಉಂಗುರ – ಗೆಳತಿಗೆ ಉಡುಗೊರೆ:
    ನವೆಂಬರ್ 12ರಂದು ಬಂಧನವಾಗಿರುವ ಅಫ್ತಾಬ್, ಶ್ರದ್ಧಾ ಮೃತದೇಹವನ್ನು ಕತ್ತರಿಸಿ ಮಾಡಿ ಮನೆಯಲ್ಲೇ ಇಟ್ಟುಕೊಂಡಿದ್ದರೂ ಡೇಟಿಂಗ್ ಆ್ಯಪ್‌ನಲ್ಲಿ (Dating App) ಪರಿಚಯವಾದ ಡಾಕ್ಟರ್ (Doctor) ಗೆಳತಿಯೊಂದಿಗೆ ಮನೆಯಲ್ಲೇ ಲೈಂಗಿಕ ಕ್ರಿಯೆ ನಡೆಸಿದ್ದ. ಜೊತೆಗೆ ಶ್ರದ್ಧಾಳ ಉಂಗುರವನ್ನೂ ಆಕೆಗೆ ಉಡುಗೊರೆಯಾಗಿ ನೀಡಿದ್ದ ಎಂದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

    ಅಫ್ತಾಬ್ ಶ್ರದ್ಧಾಳನ್ನು ಕೊಂದ ಬಳಿಕವೂ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಗೆಳತಿಯೊಂದಿಗೆ ತನ್ನ ಮನೆಯಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಆಕೆ ಮನೋವೈದ್ಯೆ ಎಂದು ಪೊಲೀಸರು ಗುರುತಿಸಿ, ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಕೊಂದ ಗೆಳತಿಯ ಉಂಗುರವನ್ನು ಡಾಕ್ಟರ್‌ಗೆ ಉಡುಗೊರೆಯಾಗಿ ನೀಡಿದ್ದ ಎಂದು ತಿಳಿದುಬಂದಿದೆ.

    ಈಗಾಗಲೇ ಶ್ರದ್ಧಾ ವಾಕರ್ ದೇಹದ 20 ಭಾಗಗಳನ್ನು ಸಂಗ್ರಹಿಸಲಾಗಿದೆ. ಅಫ್ತಾಬ್ ಹತ್ಯೆಗೆ ಬಳಸಿದ್ದ 5-6 ಇಂಚಿನ 5 ಚಾಕುಗಳನ್ನು ವಶಪಡಿಸಿಕೊಂಡಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

    ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

    ನವದೆಹಲಿ: ಲಿಂವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದ (LiveIn RelationShip) ಗೆಳತಿ ಶ್ರದ್ಧಾ ವಾಕರ್‌ನನ್ನ (Shraddha Walker) ಕೊಂದು 35 ತುಂಡುಗಳಾಗಿ ಕತ್ತರಿಸಿ, ಬಿಸಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲಾನ (Aftab Amin Poonawalla) ಮತ್ತೊಂದು ಕರಾಳಮುಖ ಪೊಲೀಸ್ ತನಿಖೆ (Police Investigation) ವೇಳೆ ಬಯಲಾಗಿದೆ.

    ತನ್ನ ಗೆಳತಿಯನ್ನ ಕ್ರೂರವಾಗಿ ಕೊಂದು ಬಳಿಕ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಹೊಸ ಫ್ರಿಡ್ಜ್‌ನಲ್ಲಿಟ್ಟಿದ್ದರೂ ತನ್ನ ರೂಮಿಗೆ ಕರೆದುಕೊಂಡು ಮತ್ತೊಬ್ಬ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅಲ್ಲದೇ ಒಬ್ಬ ವೈದ್ಯೆ (Doctor) ಜೊತೆಗೂ ಡೇಟಿಂಗ್ (Dating) ನಡೆಸುತ್ತಿದ್ದ ಎನ್ನುವ ಸತ್ಯ ಬೆಳಕಿಗೆ ಬಂದಿದೆ. ಇವರು ಮನೋವೈದ್ಯರಾಗಿದ್ದು, ಡೇಟಿಂಗ್ ಆ್ಯಪ್‌ನಲ್ಲಿ (Dating APP) ಅಫ್ತಾಬ್‌ಗೆ ಪರಿಚಯವಾಗಿದ್ದರು ಎಂದು ಪೊಲೀಸರು (Police) ತಿಳಿಸಿದ್ದಾರೆ. ಶನಿವಾರ ವೈದ್ಯೆಯನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಹಿಂದಿ ಹೇರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ತಮಿಳುನಾಡು ರೈತ ಸಾವು

    ಶ್ರದ್ಧಾ ಮೊದಲಬಾರಿಗೆ ಭೇಟಿ ಮಾಡಿದ `ಬಂಬಲ್’ ಎಂಬ ಡೇಟಿಂಗ್ ಆ್ಯಪ್ ಮೂಲಕವೇ ಈಕೆಯನ್ನು ಅಫ್ತಾಬ್ ಮೊದಲಿಗೆ ಪರಿಚಯ ಮಾಡಿಕೊಂಡಿದ್ದ. ಅಲ್ಲದೇ ಈ ಆ್ಯಪ್ ಮೂಲಕ ಮತ್ತಷ್ಟು ಮಹಿಳೆಯರ ಪರಿಚಯ ಜೊತೆಗೂ ಸಂಪರ್ಕ ಹೊಂದಿರುವುದು ತಿಳಿದುಬಂದಿದೆ. ಪೊಲೀಸರು ಈ ಬಗ್ಗೆಯೂ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಸರ್ಕಾರಿ ಆಸ್ಪತ್ರೆಗೆ ಬಂತು ರೋಬೊ ಡಾಕ್ಟರ್ – ಏನಿದರ ವಿಶೇಷತೆ?

    ಅಫ್ತಾಬ್ ಜೈಲಿಗೆ: ಅಫ್ತಾಬ್ ಅಮೀನ್ ಪೂನಾವಾಲ ಪೊಲೀಸ್ ಕಸ್ಟಡಿ ಅವಧಿ ಮುಗಿದಿದೆ. ಹೀಗಾಗಿ 13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆತನ ಸುಳ್ಳು ಪತ್ತೆಗೆ ಮಂಪರು ಪರೀಕ್ಷೆ ಮಾಡಿಸೋದು ಬಾಕಿಯಿದೆ. ಅದಕ್ಕೂ ಮುನ್ನ ಪಾಲಿಗ್ರಾಫ್ ಪರೀಕ್ಷೆ ಮಾಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ವಾಕರ್‌ ಕೊಲೆ ಪ್ರಕರಣ ಲವ್‌ ಜಿಹಾದ್‌ ಅಲ್ಲ – ಅಸಾದುದ್ದೀನ್‌ ಓವೈಸಿ

    ಶ್ರದ್ಧಾ ವಾಕರ್‌ ಕೊಲೆ ಪ್ರಕರಣ ಲವ್‌ ಜಿಹಾದ್‌ ಅಲ್ಲ – ಅಸಾದುದ್ದೀನ್‌ ಓವೈಸಿ

    ನವದೆಹಲಿ: ಶ್ರದ್ಧಾ ವಾಕರ್‌ (Shraddha Walker) ಕೊಲೆ ಪ್ರಕರಣವನ್ನು ಧಾರ್ಮಿಕ ಕೋನದಲ್ಲಿ ಬಿಜೆಪಿ ಬಿಂಬಿಸುತ್ತಿದೆ. ಆದರೆ ಇದು ʼಲವ್‌ ಜಿಹಾದ್‌ʼ (Love Jihad) ಅಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi) ಹೇಳಿದ್ದಾರೆ.

    ಬಿಜೆಪಿ (BJP) ರಾಜಕೀಯ ಸಂಪೂರ್ಣ ತಪ್ಪಾಗಿದೆ. ಇದು ಲವ್ ಜಿಹಾದ್‌ನ ಸಮಸ್ಯೆಯಲ್ಲ. ಮಹಿಳೆಯ ಮೇಲಿನ ಶೋಷಣೆ ಮತ್ತು ನಿಂದನೆಯ ವಿಷಯವಾಗಿದೆ. ಈ ದೃಷ್ಟಿಕೋನದಲ್ಲಿ ಪ್ರಕರಣವನ್ನು ನೋಡಬೇಕು ಮತ್ತು ಹತ್ಯೆಯನ್ನು ಖಂಡಿಸಬೇಕು ಎಂದು ಓವೈಸಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈನ ವಸತಿ ಪ್ರದೇಶಕ್ಕೆ ನುಗ್ಗಿ, ಕಟ್ಟಡದೊಳಗೆ ಓಡಾಡಿದ ಚಿರತೆ – ಮೂವರ ಮೇಲೆ ದಾಳಿ

    ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಇಟ್ಟುಕೊಂಡಿರುವ ಅಜಂಗಢ ಘಟನೆಯನ್ನು ನೆನಪಿಸಿಕೊಂಡ ಓವೈಸಿ, ಇಂತಹ ಘಟನೆಗಳು ದುಃಖಕರವಾಗಿವೆ. ಆದರೆ ಇದನ್ನು ಹಿಂದೂ-ಮುಸ್ಲಿಂ ಕೋನದಲ್ಲಿ ರಾಜಕೀಯಗೊಳಿಸಬಾರದು ಎಂದಿದ್ದಾರೆ.

    ಗುಜರಾತ್‌ ಚುನಾವಣೆ ಕುರಿತು ಮಾತನಾಡಿ, ಚುನಾವಣೆಗೆ ಸ್ಪರ್ಧಿಸಲು ಬೇರೆ ಪಕ್ಷದ ಅನುಮತಿ ಬೇಕಾಗಿಲ್ಲ, ಅದು ನಮ್ಮ ಹಕ್ಕು. ನಾವು ದೇಶದ ಜನರು ಮತ್ತು ಸಂವಿಧಾನವನ್ನು ನಂಬುತ್ತೇವೆ. ನಮ್ಮ ಹೋರಾಟವು ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಮೆಚ್ಚಿಸಲು ಕಾರ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದ

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪವಿದೆ – ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್

    ಶ್ರದ್ಧಾ ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪವಿದೆ – ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್

    ನವದೆಹಲಿ: ಮುಂಬೈ (Mumbai) ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ (Aaftab Ameen Poonawala) ಕೋರ್ಟ್ ಮುಂದೆ ಮೊದಲ ಬಾರಿ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸ್ (Delhi Police) ಕಸ್ಟಡಿ ವಿಸ್ತರಣೆ ವೇಳೆ ಹತ್ಯೆ ಮಾಡಿರುವುದಾಗಿ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದಾನೆ.

    ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆ ಕಸ್ಟಡಿಗಾಗಿ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ಅಫ್ತಾಬ್ ನನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್ ಜಗಳದ ಆವೇಶದಲ್ಲಿ ಹತ್ಯೆ ಮಾಡಿದ್ದೇನೆ, ಹತ್ಯೆಯ ಮಾಡಿರುವುದಕ್ಕೆ ಪಶ್ಚಾತ್ತಾಪ ಇದೆ, ಘಟನೆಯನ್ನು ನೆನಪಿಸಿಕೊಳ್ಳಲು ಬೇಸರವಿದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೈದ ಪಾಪಿ ಪತಿ!

    ಅಫ್ತಾಬ್ ಹೇಳಿಕೆ ಬಳಿಕ ಪೊಲೀಸರು ಕಸ್ಟಡಿ (Police Custody) ವಿಸ್ತರಣೆಗೆ ಮನವಿ ಮಾಡಿದರು. ಅಫ್ತಾಬ್ ಹೇಳಿಕೆ ಆಧರಿಸಿ ತನಿಖೆ ಮಾಡಬೇಕಿದೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ತನಿಖೆ ನಡೆಸಬೇಕಿದೆ. ಈ ಹಿನ್ನಲೆ ಅವಧಿ ವಿಸ್ತರಣೆ ಮಾಡಬೇಕು ಎಂದು ದೆಹಲಿ ಪೊಲೀಸರ ಪರ ವಕೀಲರು ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ಕೋರ್ಟ್ ನಾಲ್ಕು ದಿನಕ್ಕೆ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದೆ. ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ – ಇಬ್ಬರ ಸ್ಥಿತಿ ಚಿಂತಾಜನಕ

    ಈ ನಡುವೆ ಅಫ್ತಾಬ್‌ನ ಮಂಪರು ಪರೀಕ್ಷೆ ಮಾಡಲು ಪೊಲೀಸರು ತಯಾರಿ ನಡೆಸಿದ್ದು, ಅದಕ್ಕೂ ಮೊದಲು ಫಾಲಿಗ್ರಾಫ್ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇಂದು ಅಫ್ತಾಬ್ ಫಾಲಿಗ್ರಾಫ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಈ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆಗಳಲ್ಲಿರುವ ಸತ್ಯ ಮತ್ತು ಸುಳ್ಳುಗಳನ್ನು ಪರಿಶೀಲಿಸುವ ಪ್ರಯತ್ನ ನಡೆಯಲಿದೆ.

    ಪಾಲಿಗ್ರಾಫ್ ಪರೀಕ್ಷೆ ಎಂದರೇನು?
    ಸುಳ್ಳು ಪತ್ತೆಕಾರಕ ಪರೀಕ್ಷೆಯನ್ನು ಪಾಲಿಗ್ರಾಫ್‌ ಪರೀಕ್ಷೆ ಎಂದು ಕರೆಯಲಾಗುತ್ತದೆ. ಇದು ಮಾನವನ ದೇಹದ ಮೇಲೆ ಸೆನ್ಸಾರ್‌ಗಳನ್ನು ಸ್ಥಾಪಿಸಿ, ಅದರ ಸಹಾಯದಿಂದ, ಪ್ರಶ್ನೆಯನ್ನು ಕೇಳಿದ ಸಮಯದಲ್ಲಿ ದೇಹದಲ್ಲಿ ಸಂಭವಿಸುವ ಜೈವಿಕ ಭೌತಿಕ ಬದಲಾವಣೆಗಳನ್ನು ಪತ್ತೆಹಚ್ಚಲು ಸಾಧ್ಯವಿದೆ. ಸರಳವಾಗಿ ಹೇಳುವುದಾದರೆ, ನಿರ್ದಿಷ್ಟ ಘಟನೆಯ ಬಗ್ಗೆ ಅಭ್ಯರ್ಥಿಯನ್ನು ಕೇಳಿದಾಗ, ಒಬ್ಬ ವ್ಯಕ್ತಿಯು ಸುಳ್ಳು ಹೇಳುತ್ತಿದ್ದಾನೆಯೇ ಅಥವಾ ಸತ್ಯ ಹೇಳುತ್ತಾನೆಯೇ ಎಂದು ಪ್ರತಿಪಾದಿಸಲು ಅನುಮತಿಸುವ ದತ್ತಾಂಶವನ್ನು ಪರದೆಯು ಪ್ರದರ್ಶಿಸುತ್ತದೆ. ಈ ಒಟ್ಟಾರೆ ಪ್ರಕ್ರಿಯೆಗೆ ಪಾಲಿಗ್ರಾಫ್‌ ಪರೀಕ್ಷೆ ಎಂದು ಹೇಳಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]