Tag: Shradha Srinath

  • ಸ್ವಾತಂತ್ರ‍್ಯ ದಿನಕ್ಕೆ ವೆಂಕಟೇಶ್ ‘ಸೈಂಧವ್’ ಟೀಮ್‌ನಿಂದ ಸ್ಪೆಷಲ್ ಗಿಫ್ಟ್- ಡಿಸೆಂಬರ್‌ 22ಕ್ಕೆ ಸಿನಿಮಾ ರಿಲೀಸ್

    ಸ್ವಾತಂತ್ರ‍್ಯ ದಿನಕ್ಕೆ ವೆಂಕಟೇಶ್ ‘ಸೈಂಧವ್’ ಟೀಮ್‌ನಿಂದ ಸ್ಪೆಷಲ್ ಗಿಫ್ಟ್- ಡಿಸೆಂಬರ್‌ 22ಕ್ಕೆ ಸಿನಿಮಾ ರಿಲೀಸ್

    ಟಾಲಿವುಡ್ (Tollywood) ನಟ ವಿಕ್ಟರಿ ವೆಂಕಟೇಶ್ (Victory Venkatesh) ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ (Saindhav Film) ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆಷ್ಟೇ ಮುಕ್ತಾಯಗೊಂಡಿತ್ತು. 18 ದಿನದ ಕಾಲ ನಡೆದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ 8 ಪ್ರಮುಖ ಸ್ಟಾರ್ ಭಾಗಿಯಾಗಿದ್ದು, ದಕ್ಷಿಣ ಚಿತ್ರರಂಗದ ಖ್ಯಾತ ಸ್ಟಂಟ್ ಮಾಸ್ಟರ್ಸ್ ರಾಮ ಲಕ್ಷ್ಮಣ ಸಾಹಸ ನಿರ್ದೇಶನ  ಮಾಡಿದ್ದಾರೆ.

    ಸ್ವಾತಂತ್ರ‍್ಯ ದಿನದ ಅಂಗವಾಗಿ 8 ಸ್ಟಾರ್ಸ್ ಒಳಗೊಂಡ ಸಣ್ಣ ವಿಡಿಯೋ ಝಲಕ್ ನ್ನು ಬಿಡುಗಡೆ ಮಾಡಲಾಗಿದೆ. ವೆಂಕಟೇಶ್, ನವಾಜುದ್ದೀನ್ ಸಿದ್ದಿಕಿ, ಶ್ರದ್ಧಾ ಶ್ರೀನಾಥ್ (Shradha Srinath), ರುಹಾನಿ ಶರ್ಮಾ, ಆಂಡ್ರಿಯಾ ಜೆರೆಮಿಯಾ, ಸಾರಾ ಮತ್ತು ಜಯಪ್ರಕಾಶ್ ಪಾತ್ರಗಳನ್ನು ಪರಿಚಯ ಮಾಡಲಾಗಿದೆ. ಎಲ್ಲಾ ಅದ್ಭುತ ಕಲಾವಿದರನ್ನು ಒಟ್ಟಿಗೆ ನೋಡುವುದೇ ಕಣ್ಣಿಗೆ ಹಬ್ಬ. ಇದನ್ನೂ ಓದಿ:ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವಣ್ಣ

    ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ‘ಸೈಂಧವ್’ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಡಾ ರೇಣು ಪಾತ್ರದಲ್ಲಿ ರುಹಾನಿ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ.

    ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣದಲ್ಲಿ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ಹಬ್ಬದಂದು ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನಗೆ ಮಕ್ಕಳೇ ಬೇಡ ಅಂದ್ರು ಶ್ರದ್ಧಾ ಶ್ರೀನಾಥ್

    ನನಗೆ ಮಕ್ಕಳೇ ಬೇಡ ಅಂದ್ರು ಶ್ರದ್ಧಾ ಶ್ರೀನಾಥ್

    ಹೈದರಾಬಾದ್: ನನಗೆ ಮಕ್ಕಳು ಬೇಡ ಎಂದು ನಿರ್ಧಾರ ಮಾಡಿರುವುದಾಗಿ ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ತಿಳಿಸಿದ್ದಾರೆ.

    ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮಾತನಾಡಿ, ನನ್ನ ಅಜ್ಜ-ಅಜ್ಜಿಯರಿಗೆ 15 ಮಂದಿ ಮಕ್ಕಳು. ನಮ್ಮ ಪೋಷಕರಿಗೆ ಇಬ್ಬರು ಮಕ್ಕಳಿದ್ದೇವೆ. ಆದರೆ ನಾನು ಮಕ್ಕಳೇ ಬೇಡ ಎಂಬ ನಿರ್ಣಯ ತೆಗೆದುಕೊಂಡಿದ್ದಾಗಿ ಅವರು ಹೇಳಿದರು. ತನ್ನ ರೀತಿ ಯಾರೂ ನಿರ್ಣಯ ಕೈಗೊಳ್ಳಬೇಡಿ ಎಂದು ಇದೇ ವೇಳೆ ಮನವಿ ಕೂಡ ಮಾಡಿಕೊಂಡಿರುವ ನಟಿ, ನನ್ನ ನಿರ್ಣಯದಂತೆ ನೀವು ತೀರ್ಮಾನ ತೆಗೆದುಕೊಳ್ಳಬೇಡಿ. ನನ್ನ ಜ್ಞಾನ, ಶಿಕ್ಷಣ ಮೇಲೆ ನಾನು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

    ಕಾಲ ಬದಲಾಗುತ್ತಿದ್ದರೂ ಮಹಿಳೆಯರ ಮೇಲಿನ ಸಮಾಜದ ದೃಷ್ಠಿ ಮಾತ್ರ ಬದಲಾಗಿಲ್ಲ. ಮಹಿಳೆಯರ ಮೇಲೆ ಅತ್ಯಾಚಾರ ಮಾಡುವುದು ಮಾತ್ರ ಅಪರಾಧವಲ್ಲ. ಇಂದಿಗೂ ಹೆಣ್ಣು ಮಕ್ಕಳು ಪೊಲೀಸ್ ಠಾಣೆಗೆ ತೆರಳಿ ತಮ್ಮ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ನ್ಯಾಯಾಲಯದಲ್ಲೂ ಇಂತಹ ಪ್ರಕರಣದಲ್ಲಿ ತೀರ್ಪು ಬರುವುದು ಕೂಡ ತಡವಾಗುತ್ತಿದೆ. ಶೋಷಣೆಗೆ ಒಳಗಾದ ಮಹಿಳೆ, ಹೆಣ್ಣು ಮಕ್ಕಳ ಬಳಿ ನಡೆದುಕೊಳ್ಳುವ ರೀತಿಯೂ ಬದಲಾಗಬೇಕಿದೆ ಎಂದು ನಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹು ಬೇಡಿಕೆಯ ನಟಿಯಾಗಿರುವ ಶ್ರದ್ಧಾ ಶ್ರೀನಾಥ್ ಅವರು, ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮಾತನಾಡಿದ್ದಾರೆ. ಶ್ರದ್ಧಾ ಶ್ರೀನಾಥ್, ತಮಿಳು ನಟ ವಿಜಯ್ ಸೇತುಪತಿ ನಟಿಸಿರುವ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಪ್ರಶಂಸೆ ಪಡೆದಿತ್ತು. ಸಿನಿಮಾದಲ್ಲಿ ಶ್ರದ್ಧಾರ ನಟನೆ ಮೆಚ್ಚುಗೆಗೆ ಪಾತ್ರವಾಗಿತ್ತು.

  • ಯಶ್, ನಾನಿ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡ್ತೀರಿ – ನಾನಿ ಎಂದ ಶ್ರದ್ಧಾ ಶ್ರೀನಾಥ್

    ಯಶ್, ನಾನಿ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡ್ತೀರಿ – ನಾನಿ ಎಂದ ಶ್ರದ್ಧಾ ಶ್ರೀನಾಥ್

    ಹೈದರಾಬಾದ್: ನಟಿ ಶ್ರದ್ಧಾ ಶ್ರೀನಾಥ್ ಅವರು ತೆಲುಗಿನಲ್ಲಿ ನಟಿಸಿದ ‘ಜೆರ್ಸಿ’ ಸಿನಿಮಾ ಬಿಡುಗಡೆಯಾಗಿದೆ. ಈ ವೇಳೆ ಮಾಧ್ಯಮದವರು ನೀವು ನಾನಿ ಹಾಗೂ ಯಶ್ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಶ್ರದ್ಧಾ ನಾನಿ ಅವರನ್ನು ಆಯ್ಕೆ ಮಾಡಿಕೊಳ್ಳುವುದಾಗಿ ಉತ್ತರಿಸಿದ್ದಾರೆ.

    ಕಳೆದ ಶುಕ್ರವಾರ ನಾನಿ ಹಾಗೂ ಶ್ರದ್ಧಾ ಶ್ರೀನಾಥ್ ನಟಿಸಿದ ಜೆರ್ಸಿ ಸಿನಿಮಾ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.

     

    View this post on Instagram

     

    Last night. Celebrating with the heroes of Jersey. My director Gowtam – I call him a visionary. My most favourite person on set. My go to person for everything Sarah. What he has created is magical and so so special. Everyone told me that they couldn’t remember the last time they cried during a movie. You are genius, Gowtam. Nani – the best co actor I could ask for. Humourous, intelligent, inspirational and such fantastic company. His understanding of the craft is beyond words. A complete actor. Brilliant. Sanu sir – the wittiest man on set. As an actor I have been fascinated with the camera ever since I joined this field and watching Sanu sir go about doing his job was such a delight. I learnt so much from him. I was amused and laughing all the time thanks to him. Best. Anirudh – how he has elevated Jersey to another level we all know. Thank you for the music, Anirudh. My entire direction department and some of the camera department – such a jolly bunch. Always laughing at the lame jokes I made on set and appreciating my broken Telugu. It was so good working with each and every one of you.

    A post shared by Shraddha Srinath (@shraddhasrinath) on

    ಸ್ಟಾರ್ ಆಗಿ ನಾನು ನಾನಿ ಜೊತೆ ಕೆಲಸ ಮಾಡಿದ್ದೇನೆ. ಹಾಗಾಗಿ ಯಶ್ ಬದಲು ನಾನಿ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ಯಶ್ ಕೂಡ ಸ್ಟಾರ್ ಆಗಲು ಸಾಕಷ್ಟು ಕಷ್ಟಪಟ್ಟಿದ್ದಾರೆ. ಯಶ್ ಧಾರಾವಾಹಿಯಿಂದ ಚಿತ್ರರಂಗಕ್ಕೆ ಎಂಟ್ರಿ ಕೊಡುವುದಕ್ಕೆ ಅವರು ಎಷ್ಟು ಕಷ್ಟಪಟ್ಟಿದ್ದಾರೆ ಎಂಬುದು ನನಗೆ ಗೊತ್ತಿದೆ. ಅವರು ಕನ್ನಡ ಚಿತ್ರರಂಗವನ್ನು ಇಡೀ ಪ್ರಪಂಚಕ್ಕೆ ತೋರಿಸಿದ್ದಾರೆ. ನಾನು ಕೇವಲ ಒಂದು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಅವರನ್ನು ಹತ್ತಿರದಿಂದ ನಾನು ನೋಡಿಲ್ಲ. ಹಾಗಾಗಿ ನಾನಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ತನ್ನ ಉತ್ತರಕ್ಕೆ ಸಮರ್ಥನೆ ನೀಡಿದ್ದಾರೆ.

    ನಂತರ ಮಾಧ್ಯಮದವರು ನೀವು ಸ್ಯಾಂಡಲ್‍ವುಡ್ ಹಾಗೂ ಟಾಲಿವುಡ್‍ನಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಆಗ ಶ್ರದ್ಧಾ, “ನನಗೆ ಎಲ್ಲ ಚಿತ್ರರಂಗ ಇಷ್ಟವಾಗುತ್ತದೆ. ನಾನು ಕೆಲಸವನ್ನು ಪ್ರೊಫೆಶನ್ ಆಗಿ ನೋಡುತ್ತೇನೆ. ಹಾಗಾಗಿ ನಾನು ಎರಡರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದಿಲ್ಲ. ಒಂದು ಚಿತ್ರರಂಗ ಆಯ್ಕೆ ಮಾಡಿ ನನಗೆ ನನ್ನ ಅಭಿಮಾನಿಗಳನ್ನು ಕಳೆದುಕೊಳ್ಳಲು ಇಷ್ಟವಿಲ್ಲ” ಎಂದು ಹೇಳಿದರು.

  • ತೆರೆಮರೆಯಲ್ಲಿ ನಡೆಯುತ್ತಿದೆ ‘ರುಸ್ತುಂ’ ತಯಾರಿ

    ತೆರೆಮರೆಯಲ್ಲಿ ನಡೆಯುತ್ತಿದೆ ‘ರುಸ್ತುಂ’ ತಯಾರಿ

    ಬೆಂಗಳೂರು: ಟಗರು ಸಿನಿಮಾದ ಸೂಪರ್ ಹಿಟ್ ಸಕ್ಸಸ್ ಬಳಿಕ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಕವಚ’ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಶಿವಣ್ಣ ಅಭಿನಯದ ಮತ್ತೊಂದು ಚಿತ್ರಕ್ಕೆ ತೆರೆಮರೆಯಲ್ಲಿ ಜೋರಾದ ತಯಾರಿ ನಡೆಯುತ್ತಿದೆ ಅದರ ಹೆಸರು ‘ರುಸ್ತುಂ’. ಹೌದು, ಶಿವರಾಜಕುಮಾರ್ ಅಭಿನಯದ ಮತ್ತೊಂದು ನಿರೀಕ್ಷಿತ ಚಿತ್ರ ‘ರುಸ್ತುಂ’ ಪ್ರಿ-ಪ್ರೋಡಕ್ಷನ್ ಕೆಲಸಗಳು ಜೋರಾಗಿ ನಡೆಯುತ್ತಿದೆ. ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಿರ್ಮಾಪಕರಾಗಿ ಜಯಣ್ಣ ಮತ್ತು ಭೋಗೇಂದ್ರ ಬಂಡವಾಳ ಹೂಡುತ್ತಿದ್ದಾರೆ.

    ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ ಗುರುತಿಸಿಕೊಂಡಿದ್ದ ರವಿವರ್ಮಾ ಈ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುವ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಶಿವಣ್ಣ ಅಭಿನಯದ ರುಸ್ತುಂ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರತಂಡದ ಮೂಲಗಳ ಪ್ರಕಾರ ಈಗಾಗಲೇ ‘ರುಸ್ತುಂ’ನ ಬಹುತೇಕ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡುವುದೊಂದೇ ಬಾಕಿಯಿದೆ. ಮುಂದಿನ ಏಪ್ರಿಲ್ 24ರಂದು ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬದ ದಿನದಂದು ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

    ಇನ್ನು ‘ರುಸ್ತುಂ’ ಸಿನಿಮಾದಲ್ಲಿ ಯೂ ಟರ್ನ್ ನಾಯಕಿ ಶ್ರದ್ಧಾ ಶ್ರೀನಾಥ್ ಶಿವಣ್ಣಗೆ ಹೀರೋಯಿನ್ ಆಗಿ ನಟಿಸಲಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ‘ರುಸ್ತುಂ’ ಸಿನಿಮಾ ಕಥೆ ಕೇಳಿ, ಶ್ರದ್ಧಾ ಕೂಡ ಶಿವಣ್ಣ ಜೊತೆ ಅಭಿನಯಿಸಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಸಿಂಪಲ್ ಸುನಿ ನಿರ್ದೇಶನದ ‘ಆಪರೇಷನ್ ಅಲಮೇಲಮ್ಮ’ ನಂತರ ಶ್ರದ್ಧಾ ಶ್ರೀನಾಥ್ ಯಾವುದೇ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಸದ್ಯಕ್ಕೆ ತಮಿಳು ಮತ್ತು ತೆಲುಗಿನ ಕೆಲ ಸಿನಿಮಾಗಳಲ್ಲಿ ನಟಿಸುತ್ತಿರುವ ಶ್ರದ್ಧಾಗೆ ಕನ್ನಡದಲ್ಲಿ ಬೇರೆ ಯಾವುದೇ ಸ್ಟಾರ್ ಸಿನಿಮಾಗಳಿಲ್ಲ. ಹಾಗಾಗಿ ಕನ್ನಡದಲ್ಲಿ ದೊಡ್ಡ ಸಿನಿಮಾಕ್ಕೆ ಎದುರು ನೋಡುತ್ತಿರುವ ಶ್ರದ್ಧಾ ಈ ಸಿನಿಮಾ ಒಪ್ಪಿಕೊಂಡು ಶಿವಣ್ಣ ಅವರಿಗೆ ಸಿನಿಮಾದಲ್ಲಿ ಹೀರೋಯಿನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬುದು ಸಿನಿಮಾ ಮಂದಿಯ ಲೆಕ್ಕಾಚಾರ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವ ಶ್ರದ್ಧಾ ಒಂದಷ್ಟು ಕುತೂಹಲವನ್ನು ಹಾಗೆ ಉಳಿಸಿಕೊಂಡಿದ್ದಾರೆ.

    ಇವೆಲ್ಲದರ ಜೊತೆಗೆ ‘ರುಸ್ತುಂ’ಗೆ ಖಳ ನಟರಾಗಿ ಬೇರೆ ಭಾಷೆಯಿಂದ ಖ್ಯಾತ ಕಲಾವಿದರನ್ನು ಕರೆತರುವ ಬಗ್ಗೆಯೂ ಚಿತ್ರತಂಡ ಯೋಚಿಸುತ್ತಿದೆ. ಈಗಾಗಲೇ ‘ರುಸ್ತುಂ’ನಲ್ಲಿ ಬಣ್ಣ ಹಚ್ಚುವಂತೆ ಅನಿಲ್ ಕುಮಾರ್, ಮನೋಜ್ ಬಾಜಪೇಯಿ, ಸಂಜಯ್ ದತ್, ಸುನೀಲ್ ಶೆಟ್ಟಿ ಅವರನ್ನು ಒಪ್ಪಿಸಲು ನಿರ್ದೇಶಕ ರವಿ ವರ್ಮಾ ಮತ್ತು ಚಿತ್ರತಂಡ ಪ್ರಯತ್ನಿಸುತ್ತಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ.