Tag: shreyas k manju

  • ‘ವಿಷ್ಣುಪ್ರಿಯ’ ಹಾಡಿಗೆ ಫ್ಯಾನ್ಸ್ ಫಿದಾ: ರೊಮ್ಯಾಂಟಿಕ್ ಜೋಡಿಗೆ ಜೈ

    ‘ವಿಷ್ಣುಪ್ರಿಯ’ ಹಾಡಿಗೆ ಫ್ಯಾನ್ಸ್ ಫಿದಾ: ರೊಮ್ಯಾಂಟಿಕ್ ಜೋಡಿಗೆ ಜೈ

    ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ `ವಿಷ್ಣುಪ್ರಿಯ’ (Vishnu Priya). ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು (Shreyas K Manju) ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ.

    ಚಿಗುರು ಸಮಯ ಹಿತವಾದ ಒಂದು ಮೌನ, ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ… ಎಂಬ ಈ ಹಾಡು ಸಂಗೀತ, ಸಾಹಿತ್ಯ ಹಾಗೂ ದೃಶ್ಯ ಸೇರಿದಂತೆ ಎಲ್ಲ ಕೋನಗಳಲ್ಲಿಯೂ ಸಮ್ಮೋಹಕವಾಗಿದೆ. ಇದಕ್ಕೆ ಸಾಹಿತ್ಯ ಒದಗಿಸಿರುವವರು ವಿ ನಾಗೇಂದ್ರ ಪ್ರಸಾದ್. ಬಹುಶಃ ಈ ಮೂಲಕ ವರ್ಷಾರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರ ಬೊಗಸೆ ತುಂಬಿಸಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ.

    ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಪ್ರೇಮ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಮಿರುಗುತ್ತಿದೆ. ಈ ವರ್ಷದ ಮೆಲೋಡಿಯಸ್ ಹಾಡೆಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಚಿಗುರು ಚಿಗುರು ಹಾಡಿಗಿದೆ. ಅಂದಹಾಗೆ, ಇದು ವಿ.ಕೆ ಪ್ರಕಾಶ್ ನಿರ್ದೇಶನದ ಚಿತ್ರ.

    ತೊಂಬತ್ತರ ದಶಕದಲ್ಲಿ ಘಟಿಸುವ ಈ ಕಥನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸಿದ್ದರೆ, ಒರು ಅಡಾರ್ ಲವ್ ಖ್ಯಾತಿಯ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಪ್ರೇಮಕಥೆ ಅದೆಷ್ಟು ತಾಜಾತನದಿಂದ ನಳನಳಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯೊಂದು ಈ ಹಾಡಿನ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ.

     

    ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಹೌದು. ಈ ಹಿಂದೆ ಮೊದಲ ಚಿತ್ರ ಪಡ್ಡೆಹುಲಿಯಲ್ಲಿ ಮೈದುಂಬಿ ನಟಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದವರು ಶ್ರೇಯಸ್ ಮಂಜು. ಅವರ ಪಾತ್ರದ ಚಹರೆಗಳು ಈ ಹಾಡಿನ ಮೂಲಕ ಜಾಹೀರಾಗಿದೆ. ಈ ಹಾಡು ಕೇಳಿದವರು, ನೋಡಿದವರೆಲ್ಲ ವಿಷ್ಣುಪ್ರಿಯನನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

  • ʻಪಡ್ಡೆಹುಲಿʼ ಶ್ರೇಯಸ್‌ಗೆ ಪ್ರಿಯಾಂಕಾ ಕುಮಾರ್‌ ನಾಯಕಿ

    ʻಪಡ್ಡೆಹುಲಿʼ ಶ್ರೇಯಸ್‌ಗೆ ಪ್ರಿಯಾಂಕಾ ಕುಮಾರ್‌ ನಾಯಕಿ

    ಸ್ಯಾಂಡಲ್‌ವುಡ್‌ನಲ್ಲಿ (Sandalwood) `ಪಡ್ಡೆಹುಲಿ’, ರಾಣಾ, ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟ ಶ್ರೇಯಸ್ (Shreyas) ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ರಾಣಾ ಶ್ರೇಯಸ್‌ಗೆ ಜೋಡಿಯಾಗಿ `ಬ್ಯಾಡ್ ಮ್ಯಾನರ್ಸ್’ (Bad Manners) ನಾಯಕಿ ಪ್ರಿಯಾಂಕಾ ಕುಮಾರ್ (Priyanka Kumar) ಸಾಥ್ ನೀಡ್ತಿದ್ದಾರೆ. ಇದನ್ನೂ ಓದಿ:ನನಗೆ ಮಕ್ಕಳು ಇಲ್ಲದಿರಬಹುದು, ಶ್ವಾನಗಳೇ ನನಗೆ ಮಕ್ಕಳ ಸಮಾನ: ರಮ್ಯಾ

     

    View this post on Instagram

     

    A post shared by Shreyas k manju (@shreyaskmanju5)

    ಕಣ್ಸನೆ ಬೆಡಗಿ ಪ್ರಿಯಾ ವಾರಿಯರ್ (Priya Varrier) ಜೊತೆಗಿನ `ವಿಷ್ಣುಪ್ರಿಯ’ (Vishnu Priya) ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಿರ್ಮಾಪಕ ಕೆ.ಮಂಜು (K.Manju) ಸುಪುತ್ರ ಶ್ರೇಯಸ್ ಇದೀಗ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಮಧು ಗೌಡ ಗಂಗೂರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

    ಮಾಸ್ ಎಂಟರ್ ಟೈನರ್ ಹಾಗೂ ಕಾಲೇಜ್ ಲವ್ ಸ್ಟೋರಿಯಾಗಿರುವ ಈ ಸಿನಿಮಾಗೆ ಪ್ರಿಯಾಂಕಾ ಕುಮಾರ್ ನಾಯಕಿಯಾಗಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ `ಬ್ಯಾಡ್ ಮ್ಯಾನರ್ಸ್’ ಮತ್ತು ವಿರಾಟ್ ನಟನೆಯ `ಅದ್ಧೂರಿ ಲವರ್’ (Adduri Lover) ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿರುವ ಪ್ರಿಯಾಂಕಾಗೆ ಇದು ಮೂರನೇ ಚಿತ್ರವಾಗಿದೆ. ಏಷ್ಯಾನೆಟ್ ಮೂವೀ ಬ್ಯಾನರ್ ಕಡೆಯಿಂದ ಆರ್.ಸಂತೋಷ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ.

    ಇದೇ 31ಕ್ಕೆ ಮುಹೂರ್ತ ನೆರವೇರಲಿದ್ದು, ಏಪ್ರಿಲ್ ತಿಂಗಳಿಂದ ಶೂಟಿಂಗ್‌ಗೆ ಕಿಕ್ ಸ್ಟಾರ್ಟ್ ಸಿಗಲಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.