Tag: shri krishna mutt

  • ಚಂದ್ರಗ್ರಹಣದ ವೇಳೆಯೇ ಬಾಗಿಲು ತೆರೆದ ಉಡುಪಿ ಶ್ರೀಕೃಷ್ಣ ಮಠ

    ಚಂದ್ರಗ್ರಹಣದ ವೇಳೆಯೇ ಬಾಗಿಲು ತೆರೆದ ಉಡುಪಿ ಶ್ರೀಕೃಷ್ಣ ಮಠ

    ಉಡುಪಿ: ಧಾರ್ಮಿಕ ನಂಬಿಕೆ ಹಿನ್ನೆಲೆಯಲ್ಲಿ ಚಂದ್ರಗ್ರಹಣದ ಸಂದರ್ಭದಲ್ಲಿ ಎಲ್ಲೆಡೆ ದೇವಾಲಯಗಳು ಹಾಗೂ ಧಾರ್ಮಿಕ ಕೇಂದ್ರಗಳ ಬಾಗಿಲು ಮುಚ್ಚಲಾಗಿದೆ. ಆದರೆ ಉಡುಪಿ ಶ್ರೀಕೃಷ್ಣ ಮಠವನ್ನು ಸಂಪೂರ್ಣವಾಗಿ ತೆರೆಯಲಾಗಿದೆ.

    ಗ್ರಹಣ ಕಾಲದಲ್ಲಿ ಜಪ, ತಪ, ಧ್ಯಾನಕ್ಕೆ ಮಠದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಮಠದ ಪ್ರವೇಶ ದ್ವಾರ ಮುಚ್ಚದೇ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

    ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಾಗುತ್ತಿದ್ದಂತೆ ಹಲವು ದೇವಾಲಯಗಳನ್ನು ಮುಚ್ಚಲಾಗಿತ್ತು. ಅಲ್ಲಿಯವರೆಗೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅದಾದ ಬಳಿಕ ಬಾಗಿಲು ಹಾಕಿ ನಿರ್ಬಂಧ ವಿಧಿಸಲಾಯಿತು. ಗ್ರಹಣ ಮುಗಿಯುವವರೆಗೂ ಬಾಗಿಲು ತೆರೆಯುವುದಿಲ್ಲ. ಗ್ರಹಣ ಮುಗಿದ ಬಳಿಕ ದೇವಾಲಯಗಳ ಶುದ್ಧೀಕರಣ ಮಾಡಿ ನಂತರ ಬಾಗಿಲು ತೆರೆಯಲಾಗುವುದು.

    ವಿಜ್ಞಾನ ಲೋಕಕ್ಕೆ ಚಂದ್ರಗ್ರಹಣವೆಂಬುದು ಒಂದು ಕೌತುಕ. ನಭೋಮಂಡಲದಲ್ಲಿ ಅಪರೂಪಕ್ಕೊಮ್ಮೆ ಸಂಭವಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ವಿಜ್ಞಾನಾಸಕ್ತರು ಕಾತರರಾಗಿದ್ದರು. ಚಂದ್ರಗ್ರಹಣ ವೀಕ್ಷಿಸಲು ನೆಹರೂ ತಾರಾಲಯದಲ್ಲಿ ಜನರಿಗೆ ಅವಕಾಶ ಕಲ್ಪಿಸಲಾಯಿತು. ಜನರು ಟೆಲಿಸ್ಕೋಪ್‌ನಲ್ಲಿ ಚಂದ್ರಗ್ರಹಣ ಕಣ್ತುಂಬಿಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್ ಬಾರದ ಕೃಷ್ಣಮಠಕ್ಕೆ ಮೋದಿ ಭೇಟಿ – ಮೇ 1 ರಂದು ಉಡುಪಿಗೆ ಪ್ರಧಾನಿ

    ರಾಹುಲ್ ಬಾರದ ಕೃಷ್ಣಮಠಕ್ಕೆ ಮೋದಿ ಭೇಟಿ – ಮೇ 1 ರಂದು ಉಡುಪಿಗೆ ಪ್ರಧಾನಿ

    ಉಡುಪಿ: ಪ್ರಧಾನಿ ನರೇಂದ್ರ ಮೋದಿ ಮೇ 1 ರಂದು ಉಡುಪಿಗೆ ಆಗಮಿಸಲಿದ್ದಾರೆ. ಪ್ರಧಾನಿಯಾದ ನಂತರ ಮೊದಲ ಬಾರಿಗೆ ಉಡುಪಿಗೆ ಬರುತ್ತಿರುವ ಮೋದಿ, ಮೊದಲು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಪ್ರಾಣ ದೇವರ ದರ್ಶನಗೈಯ್ಯಲಿದ್ದಾರೆ.

    ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪಲಿಮಾರುಶ್ರೀ, ಮತ್ತು ಪೇಜಾವರ ಶ್ರೀಗಳ ಆಶೀರ್ವಾದ ಪಡೆದು ಮಾತುಕತೆ ಮಾಡಲಿದ್ದಾರೆ. ನಂತರ ಎಂಜಿಎಂ ಕಾಲೇಜಿನ ಮೈದಾನದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 1 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 20 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಮತದಾರರನ್ನು ಸೆಳೆಯುವ ಉದ್ದೇಶವನ್ನು ಬಿಜೆಪಿ ಇಟ್ಟುಕೊಂಡಿದೆ.

    ಉಡುಪಿಯಲ್ಲಿ ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾಹಿತಿ ನೀಡಿದ್ದಾರೆ. ತಿಂಗಳ ಹಿಂದೆ ಜನಾಶೀರ್ವಾದ ಯಾತ್ರೆ ಮಾಡಿದ್ದ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಉಡುಪಿಗೆ ಬಂದ್ರೂ ಮಠದಿಂದ ದೂರವಿದ್ದರು. ಕಾಪು ತಾಲೂಕಿಗೆ ಭೇಟಿ ಕೊಟ್ಟಿದ್ದ ರಾಹುಲ್ ಗಾಂಧಿ, ಕೃಷ್ಣಮಠಕ್ಕೆ ಬಂದಿರಲಿಲ್ಲ. ರಾಹುಲ್ ಭೇಟಿಯನ್ನು ಸಿಎಂ ಸಿದ್ದರಾಮಯ್ಯ ತಪ್ಪಿಸಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಠಕ್ಕೆ ಈ ಹಿಂದೆಯೇ ಬಂದಿದ್ದಾರೆ. ಈ ಬಾರಿ ಮೋದಿ ಮಠಕ್ಕೆ ಭೇಟಿ ನೀಡಿ ಗೆಲುವಿನ ಚುನಾವಣಾ ಪ್ರಚಾರಕ್ಕೆ ಇಲ್ಲಿಂದಲೇ ಚಾಲನೆ ಕೊಡಲಿದ್ದಾರೆ ಎಂದರು.

     

    ಮೊಗವೀರ ಮುಖಂಡ ಯಶ್ ಪಾಲ್ ಸುವರ್ಣ ಮಾತನಾಡಿ, ಈ ಬಾರಿ ಧರ್ಮದ ಮತ್ತು ಅಧರ್ಮದ ನಡುವಿನ ಯುದ್ಧ. ನಾವು ಧರ್ಮದ ಪರವಾಗಿದ್ದೇವೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧರ್ಮದ ಪರವಾಗಿದ್ದಾರೆ. ಉಡುಪಿಗೆ ಆರು ಬಾರಿ ಬಂದರೂ ಮಠಕ್ಕೆ ಬಾರದ ಸಿದ್ದರಾಮಯ್ಯ ನೇತೃತ್ವದ ಪಕ್ಷಕ್ಕೆ ರಾಜ್ಯದಲ್ಲೇ ಗೆಲುವು ಸಿಗುವುದಿಲ್ಲ ಎಂದರು.

    ಈ ಮೂಲಕ ಕಾಂಗ್ರೆಸ್ ಗೆ ಟಾಂಗ್ ಕೊಡಲು ಬಿಜೆಪಿ ಸಿದ್ಧತೆ ಮಾಡಿದೆ. ಮಠದ ಭಕ್ತರ, ಕರಾವಳಿಯ ಮತದಾರರ ಸೆಳೆಯಲು ಬಿಜೆಪಿ ಪ್ಲಾನ್ ರೂಪಿಸಿದೆ. ತಿಂಗಳ ಹಿಂದೆ ಕೃಷ್ಣಮಠಕ್ಕೆ ಅಮಿತ್ ಶಾ ಬಂದಿದ್ದರು. ಸಿದ್ದರಾಮಯ್ಯ, ರಾಹುಲ್ ಗಾಂಧಿ ಉಡುಪಿಗೆ ಬಂದಿದ್ದರೂ ಕೃಷ್ಣಮಠಕ್ಕೆ ಭೇಟಿ ನೀಡದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಮಠ ಭೇಟಿ ಬಿಜೆಪಿಗೆ ಪ್ಲಸ್ ಆಗಬಹುದು ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬಂದಿದೆ.

  • ಉಡುಪಿ ಶ್ರೀಕೃಷ್ಣಮಠದಲ್ಲಿ ನರಕ ಚತುರ್ದಶಿ, ಎಣ್ಣೆಸ್ನಾನದ ಸಂಭ್ರಮ

    ಉಡುಪಿ ಶ್ರೀಕೃಷ್ಣಮಠದಲ್ಲಿ ನರಕ ಚತುರ್ದಶಿ, ಎಣ್ಣೆಸ್ನಾನದ ಸಂಭ್ರಮ

    ಉಡುಪಿ: ದೇಶಾದ್ಯಂತ ಬೆಳಕಿನ ಹಬ್ಬದ ಸಂಭ್ರಮ ಶುರುವಾಗಿದೆ. ದೀಪಾವಳಿಯ ಮೊದಲ ದಿನ ನರಕ ಚತುರ್ದಶಿ. ನರಕ ಚತುರ್ದಶಿಯಂದು ಎಣ್ಣೆ ಸ್ನಾನ ಮಾಡುವ ಮೂಲಕ ಹಬ್ಬಕ್ಕೆ ಚಾಲನೆ ಸಿಗುತ್ತದೆ. ಕೃಷ್ಣ ಪರಮಾತ್ಮ ನರಕಾಸುರನನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ನರಕ ಚತುರ್ದಶಿ ಆಚರಿಸಲಾಗುತ್ತದೆ.

    ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೆಳಗ್ಗಿನಿಂದ ಆಚರಣೆ ಶುರುವಾಗಿದೆ. ಪರ್ಯಾಯ ಪೇಜಾವರ ಮಠಾಧೀಶ ವಿಶ್ವೆಶತೀರ್ಥ ಸ್ವಾಮೀಜಿ ಬೆಳಗ್ಗೆ ಪಶ್ಚಿಮ ಜಾಗರ ಪೂಜೆ ನೆರವೇರಿಸಿದರು. ನಂತರ ಕೃಷ್ಣಾಪುರ ಸ್ವಾಮೀಜಿ, ಸೋದೆ-ಕಾಣಿಯೂರು ಶ್ರೀಗಳು ಪರ್ಯಾಯ ನಡೆಸುತ್ತಿರುವ ಇಬ್ಬರೂ ಶ್ರೀಗಳು ಒಬ್ಬರಿಗೊಬ್ಬರು ಎಣ್ಣೆ ಪ್ರಸಾದ ವಿನಿಮಯ ಮಾಡಿಕೊಂಡರು.

    ಮಠದ ಚಂದ್ರಶಾಲೆಯಲ್ಲಿ ಭಕ್ತರಿಗೂ ಸ್ವಾಮೀಜಿ ದೀಪಾವಳಿಯ ಎಣ್ಣೆಪ್ರಸಾದ ನೀಡಿದರು. ಮಠದ ಭಕ್ತರು ಸ್ವಾಮೀಜಿಗೆ ಎಣ್ಣೆ ಹಚ್ಚಿದರು. ಹತ್ತಾರು ಮಂದಿ ಎಣ್ಣೆ ಮಾಲೀಶ್ ಮಾಡಿದರು. ಮಠದ ಸಿಬ್ಬಂದಿ ಪರಸ್ಪರ ಎಣ್ಣೆ ಹಚ್ಚಿಕೊಂಡು ಸಂಭ್ರಮಿಸಿದರು.

    ಇದೇ ವೇಳೆ ಮಾತನಾಡಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ನರಕಾಸುರ ವಿವಿಧ ರಾಜ್ಯದ ಮೇಲೆ ದಾಳಿ ಮಾಡಿ ಯುವತಿಯರನ್ನು ಎತ್ತಿಕೊಂಡು ಹೋಗಿ ಸೆರೆಯಲ್ಲಿ ಇರಿಸಿಕೊಂಡಿದ್ದ. ಇಂದ್ರಲೋಕದ ಮೇಲೆ ದಾಳಿ ಮಾಡಿ ಅದಿತಿ ದೇವಿಯ ಕರ್ಣ ಕುಂಡಲ ಅಪಹರಿಸಿದ್ದ. ದಾರಿ ಕಾಣದಾಗದ ದೇವೇಂದ್ರ, ಶ್ರೀಕೃಷ್ಣನಲ್ಲಿ ವಿಚಾರವನ್ನೆಲ್ಲ ಒಪ್ಪಿಸಿದ. ಶ್ರೀಕೃಷ್ಣ ಸತ್ಯಭಾಮ ಸಮೇತ ಗರಡಾರೂಢನಾಗಿ ನರಕಾಸುರನ ನಗರದ ಮೇಲೆ ದಾಳಿ ಮಾಡಿದ. ಮಂತ್ರಿಗಳ ಸಂಹಾರ ಮಾಡಿ, ನರಕಾಸುರ ವಧೆ ಮಾಡಿದ. ರಾಜಕುವರಿಯರನ್ನೆಲ್ಲಾ ಬಿಡುಗಡೆಗೊಳಿಸಿದ. ನರಕಾಸುರನ ವಧೆ ಮಾಡಿ, ಕೃಷ್ಣಪರಮಾತ್ಮ ಅಭ್ಯಂಜನ ಮಾಡಿದ ದಿನ ಇವತ್ತು. ಭಗವಂತ ಲೋಕಕ್ಕೆ ಮಾಡಿದ ಮಹಾ ಉಪಕಾರವನ್ನು ನಾವೆಲ್ಲಾ ನೆನೆಯಬೇಕು ಎಂದರು.

    ಯುವತಿಯರನ್ನು ಲೋಕ ತೊರೆದಾಗ ಮಾರ್ಗದರ್ಶನ ಮಾಡಿ, ಭಗವಂತನೇ ಅವರನ್ನು ಸ್ವೀಕರಿಸಿದ. ಸಮಾಜದಲ್ಲಿ ಗೌರವದ ಸ್ನಾನ ನೀಡಿದ ದಿನ ಇಂದು. ಭಗವಂತನನ್ನು ಪ್ರಾರ್ಥನೆ ಮಾಡಿ, ಅವನ ಪರೋಪಕಾರ ಗುಣ ಅಳವಡಿಸಿಕೊಂಡು ನಾವು ಕೂಡಾ ಅದೇ ಸನ್ಮಾರ್ಗದಲ್ಲಿ ನಡೆಯಬೇಕಿದೆ. ದಣಿವಿನ ಜೊತೆ ದುರ್ಗಂದ-ಕೊಳೆ ಕೂಡಾ ದೂರವಾಗುತ್ತದೆ. ಈ ಮೂಲಕ ಈ ದಿನ ಮನಸ್ಸಿನ ಕೊಳೆಯೂ ದೂರವಾಗಲಿ ಅಂತ ಭಗವಂತನಲ್ಲಿ ಪ್ರಾರ್ಥನೆ ಮಾಡುವುದಾಗಿ ಹೇಳಿದ್ರು.