Tag: Shrikrishna mata

  • ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಉಡುಪಿ: ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಕಡೆಗೋಲು ಶ್ರೀಕೃಷ್ಣನ ವಿಶೇಷ ದರ್ಶನ ಪಡೆದರು.

    ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲರು ಇಂದು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಈ ವೇಳೆ ಮಠದಲ್ಲೇ ಸ್ವಲ್ಪ ಸಮಯ ಸ್ವಾಮೀಜಿ ಹಾಗೂ ರಾಜ್ಯಪಾಲರು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಪರ್ಯಾಯ ಅದಮಾರು ಮಠದಿಂದ ಗೌರವಿಸಲಾಯಿತು. ರಾಜ್ಯಪಾಲರು ಸ್ವಾಮೀಜಿಯನ್ನು ಸನ್ಮಾನಿಸಿದರು.

    ಈ ಸಂದರ್ಭದಲ್ಲಿ ಪರ್ಯಾಯ ಈಶಪ್ರೀಯ ತೀರ್ಥಶ್ರೀಪಾದರ ಭೇಟಿಯಾದರು. ಶಾಸಕ ರಘುಪತಿ ಭಟ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ನಂತರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರು ಮೂಕಾಂಬಿಕೆಯ ದರ್ಶನ ಪಡೆದರು. ದೇಗುಲದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

    ಕೊಲ್ಲೂರು ಮೂಕಾಂಬಿಕಾ ದೇವಳ ವತಿಯಿಂದ ರಾಜ್ಯಪಾಲರಿಗೆ ಗೌರವ ಸಲ್ಲಿಸಲಾಯಿತು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ರಾಜ್ಯಪಾಲರು ತೆರಳಿದರು. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

  • ಉಡುಪಿ ಮಠಕ್ಕೂ ತಟ್ಟಿದೆ ಬಂದ್ ಬಿಸಿ!

    ಉಡುಪಿ ಮಠಕ್ಕೂ ತಟ್ಟಿದೆ ಬಂದ್ ಬಿಸಿ!

    – ಶ್ರೀಕೃಷ್ಣ ಮಠಕ್ಕೆ ಬರುತ್ತಿದ್ದ ಭಕ್ತರ ಸಂಖ್ಯೆ ಇಳಿಮುಖ

    ಉಡುಪಿ: ಜಿಲ್ಲೆಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೂ ಭಾರತ್ ಬಂದ್ ಎಫೆಕ್ಟ್ ತಟ್ಟಿದೆ. ಪ್ರತಿದಿನ ಮಧ್ಯಾಹ್ನ ತುಂಬಿ ತುಳುಕುವ ಕೃಷ್ಣಮಠದ ಭೋಜನ ಶಾಲೆಗಳು ಇಂದು ಖಾಲಿ ಖಾಲಿಯಾಗಿ ಕಾಣುತ್ತಿದೆ.

    ಕಾರ್ಮಿಕರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್‍ಗೆ ಹಲವು ಸಂಘಟನೆಗಳು ಕರೆ ಕೊಟ್ಟಿದೆ. ಆದರಿಂದ ದೇಶಾದ್ಯಂತ ಬಹುತೇಕ ಕಾರ್ಮಿಕರು ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ ಸಾರಿಗೆ ಇಲಾಖೆಯಂತೂ ಕೆಲವೆಡೆ ಸಂಪೂರ್ಣ ಸ್ಥಗಿತಗೊಂಡಿದ್ದು, ರಾಜ್ಯದಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಸಿಗದೆ ರೋಗಿಗಳು, ವಿದ್ಯಾರ್ಥಿಗಳು ಹಾಗೂ ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

    ಈ ಬಂದ್ ಬಿಸಿ ಕೊಂಚ ಉಡುಪಿ ಮಠಕ್ಕೂ ತಟ್ಟಿದೆ. ಬಂದ್ ಇರುವ ಹಿನ್ನೆಲೆ ಮಠಕ್ಕೆ ಬರುವ ಭಕ್ತರ ಸಂಖ್ಯೆ ಇಳಿಮುಖವಾಗಿದೆ. ಅದರಲ್ಲೂ ಮಠದ ಭೋಜನ ಶಾಲೆಯಲ್ಲಿ ಇಂದು ಕೇವಲ ಮೂರು ಸಾವಿರ ಭಕ್ತರು ಮಾತ್ರ ಅನ್ನಪ್ರಸಾದ ಸ್ವೀಕಾರ ಮಾಡಿದ್ದಾರೆ. ಇಲ್ಲವಾದರೆ ಮಠದಲ್ಲಿ ಪ್ರತಿನಿತ್ಯ 8 ರಿಂದ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನದಾನ ನಡೆಯುತ್ತಿತು. ರಜೆ ಇದ್ದ ದಿನಗಳಲ್ಲಿ 15 ಸಾವಿರಕ್ಕೂ ಹಚ್ಚು ಜನರು ಅನ್ನಪ್ರಸಾದವನ್ನು ಸ್ವೀಕರಿಸುತ್ತಾರೆ. ಆದ್ರೆ ಇಂದು ಮಠಕ್ಕೆ ಹೊರ ಜಿಲ್ಲೆಯ ಪ್ರವಾಸಿಗರ ಬಸ್ಸುಗಳೂ ಬರಲಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳಂತೂ ಮಠದ ಕಡೆ ಮುಖ ಮಾಡಿಲ್ಲ.

    ಇಂದು ಮತ್ತು ನಾಳೆ ಭಾರತ್ ಬಂದ್ ಇರುವುದರಿಂದ ಮುಂಜಾಗೃತೆ ಕ್ರಮವಾಗಿ ಕಡಿಮೆ ಅಡುಗೆ ತಯಾರಿ ಮಾಡಿದ್ದೇವೆ. ರಾತ್ರಿಯೂ ಕೂಡ ಭಕ್ತರು ಕಡಿಮೆ ಸಂಖ್ಯೆಯಲ್ಲಿ ಬರುವ ಸಾಧ್ಯತೆಯಿದೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv