Tag: Shrirama Sena

  • ಜ್ವಾಲಾಮುಖಿ ಏಳುವ ಮೊದಲು ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಬೇಕು: ಮುತಾಲಿಕ್

    ಜ್ವಾಲಾಮುಖಿ ಏಳುವ ಮೊದಲು ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಬೇಕು: ಮುತಾಲಿಕ್

    – ರಾಯಣ್ಣ ಜಾತಿ, ಗಡಿಗಾಗಿ ಅಲ್ಲ, ಬ್ರಿಟೀಷರ ವಿರುದ್ಧ ಹೋರಾಡಿದ್ದು
    – ಪ್ರತಿಮೆ ತೆಗೆದು ಅಕ್ಷಮ್ಯ ಅಪರಾಧ ಮಾಡಿದ್ದಾರೆ

    ಧಾರವಾಡ: ಬೆಳಗಾವಿ ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆಗೆದು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್  ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಯಾವ ಜಾತಿಯವನು ಎಂಬುದು ಮುಖ್ಯ ಅಲ್ಲ, ಯಾವುದಕ್ಕೆ ಹೋರಾಟ ಮಾಡಿದ ಅನ್ನೋದು ಮುಖ್ಯ. ರಾಯಣ್ಣ ಜಾತಿಗಾಗಿ, ಗಡಿಗಾಗಿ ಹೋರಾಟ ಮಾಡಿದ್ದಲ್ಲ, ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ನಾಯಕ, ಅಂತಹವನಿಗೆ ಅಪಮಾನ ಮಾಡುತ್ತಿರುವುದು ದೇಶದ ಭಕ್ತರಿಗೆ ಅಪಮಾನ ಎಂದರು.

    ಈ ರೀತಿಯ ಮಹಾಪುರುಷರಿಗೆ, ಜಾತಿ ಬಣ್ಣ ಬಳೆಯುವವರಿಗೆ ನಾಚಿಕೆಯಾಗಬೇಕು. ನಿಮ್ಮ ಸ್ವಾರ್ಥಕ್ಕಾಗಿ ಇವರನ್ನು ರಾಜಕೀಯ ದಾಳಕ್ಕೆ ಬಳಸಬೇಡಿ ಎಂದು ಕಿಡಿಕಾರಿದರು. ರಾಯಣ್ಣನನ ಪ್ರತಿಮೆಯನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು, ಜ್ವಾಲಾಮುಖಿ ಏಳುವ ಮೊದಲು ಪ್ರತಿಮೆ ಸ್ಥಾಪನೆ ಮಾಡಬೇಕು. ನೀವು ಜಾತಿ, ರಾಜಕೀಯ ಬಣ್ಣ ಬಳಿದರೆ ನಾವು ನಂದಗಡದಿಂದ ಪೀರನವಾಡಿ ಚಲೋ ಕರೆ ಕೊಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

  • ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಶ್ರೀರಾಮ ಸೇನಾ ಮನವಿ

    ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಶ್ರೀರಾಮ ಸೇನಾ ಮನವಿ

    ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

    ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಚಿಂತಾಜನಕ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಮೂಹಿಕ ಪ್ರಾರ್ಥನೆ, ಸಭೆ ಸಮಾರಂಭ ನಡೆಸದಂತೆ ದೇವಸ್ಥಾನ, ಚರ್ಚ್, ಮಸೀದಿ ಬಂದ್ ಮಾಡಿಸಿದೆ. ಈ ಹಿನ್ನೆಲೆಯಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಹ ಯಾವುದೇ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸದೇ ಸಾರ್ವಜನಿಕ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

    ಈ ಹಿಂದೆ ಮುಸ್ಲಿಂ ಸಮುದಾಯದವರು ರಂಜಾನ್ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದರು. ಇದೀಗ ಶ್ರೀರಾಮ ಸೇನಾದಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸಬಾರದು ಎಂದು ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ರಾಜು ಗಾಡಗೋಳಿ, ಅಣ್ಣಪ್ಪ ದಿವಟಿಗಿ, ಮಂಜು ಕಾಟಕರ, ಸಿದ್ದು ರಾಯನಾಳ, ಅಭಿಷೇಕ ಕಾಂಬಳೆ ಸೇರಿದಂತೆ ಇತರರು ಇದ್ದರು.