Tag: shruthi krishna

  • ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಅರೆಸ್ಟ್ ಆಗಿರೋದು ನೋವುಂಟು ಮಾಡಿದೆ- ಶ್ರುತಿ

    ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಅರೆಸ್ಟ್ ಆಗಿರೋದು ನೋವುಂಟು ಮಾಡಿದೆ- ಶ್ರುತಿ

    ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ (Renukaswamy Murder Case) ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ, ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಅರೆಸ್ಟ್ ಆಗಿರೋದು ನೋವುಂಟು ಮಾಡಿದೆ ಎಂದು ಹಿರಿಯ ನಟಿ ಶ್ರುತಿ (Actress Shruthi) ಮಾತನಾಡಿದ್ದಾರೆ. ಇದನ್ನೂ ಓದಿ:‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್- ಮೊದಲ ಶೋಗೆ ಉತ್ತಮ ರೆಸ್ಪಾನ್ಸ್

    ದರ್ಶನ್ ಅರೆಸ್ಟ್ ವಿಷ್ಯವಾಗಿ ನಟಿ ಶ್ರುತಿ ಪ್ರತಿಕ್ರಿಯಿಸಿ, ಇದನ್ನು ಯಾರು ಕೂಡ ಊಹೆ ಮಾಡಿರಲಿಲ್ಲ. ಈ ಪ್ರಕರಣ ಎರಡು ಫ್ಯಾಮಿಲಿ ಸಂಬಂಧಿಸಿದ್ದು ಮಾತ್ರವಲ್ಲ. ಇದರಿಂದ ಇಡೀ ಫ್ಯಾಮಿಲಿ ಮಂಕಾಗಿದೆ ಎಂದರು. ‘ಕಾಟೇರ’ (Kaatera) ಸಿನಿಮಾದಲ್ಲಿ ದರ್ಶನ್ ಜೊತೆಗೆ ಕೆಲಸ ಮಾಡೋ ಅವಕಾಶ ಸಿಗುವ ಮುನ್ನ ‘ಎಲ್ಲರ ಮನೆ ದೋಸೆ ತೂತು’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ ಎಂದರು. ನನ್ನ ಕೊನೆಯ ತಮ್ಮನ ಪಾತ್ರದಲ್ಲಿ ದರ್ಶನ್ ನಟಿಸಿದ್ದರು. ದರ್ಶನ್ ಸರಳ ವ್ಯಕ್ತಿತ್ವ ಹೊಂದಿರುವವರು ಎಂದು ನಟಿ ಮಾತನಾಡಿದ್ದಾರೆ.

    ದರ್ಶನ್ ಕಷ್ಟದಿಂದ ಬಂದು ಚಿತ್ರರಂಗದಲ್ಲಿ ಬೆಳೆದವರು. ಪ್ರತಿ ಸಿನಿಮಾಗೂ ದರ್ಶನ್ ಹಾರ್ಡ್ ವರ್ಕ್ ಮಾಡುತ್ತಾರೆ. ಜನ ಕೊಡೋ ದುಡ್ಡಿಗೆ ಮೋಸ ಮಾಡಬಾರದು ಎನ್ನುವ ಅರಿವಿದೆ. ಫಿಟ್‌ನೆಸ್ ಕಡೆ ಹೆಚ್ಚು ಗಮನ ಕೊಡುತ್ತಿದ್ದರು. ಇಂತಹ ಪ್ರಕರಣದಲ್ಲಿ ದರ್ಶನ್ ಸಿಲುಕಿದ ವಿಚಾರ ಕೇಳಿ ಶಾಕ್ ಆಯ್ತು. ಇದಕ್ಕೆಲ್ಲಾ ತಾರ್ಕಿಕ ಅಂತ್ಯ ಸಿಗಬೇಕು ಎಂದು ಶ್ರುತಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹೆಣ್ಣು ಮಕ್ಕಳ ಬಗ್ಗೆ ತುಂಬಾ ಕೆಟ್ಟದಾಗಿ ಕಾಮೆಂಟ್ ಮಾಡ್ತಾರೆ. ಇದರಿಂದ ಹೆಣ್ಣು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ನನಗೂ ಕೂಡ ಕೆಲ ಕಾಮೆಂಟ್ ಬಂದಿದೆ. ಅದರಿಂದ ಆಚೆ ಬರೋಕೆ ತುಂಬಾ ಕಷ್ಟ ಆಗುತ್ತೆ ಎಂದು ನಟಿ ಮಾತನಾಡಿದ್ದಾರೆ.

    ರೇಣುಕಾಸ್ವಾಮಿ ಪ್ರಕರಣದ ಹಾದಿಯನ್ನು ನೋಡಿದರೆ ದರ್ಶನ್ ದುಡುಕಿದ್ರು ಅನಿಸುತ್ತದೆ. ಸದ್ಯ ವಿಚಾರಣೆ ನಡೆಯುತ್ತದೆ. ಏನಾಗಲಿದೆ ಎಂದು ಕಾದುನೋಡೋಣ. ನೊಂದ ಕುಟುಂಬಕ್ಕೂ ನ್ಯಾಯ ಸಿಗಬೇಕು ಎಂದು ಕಾಟೇರ ನಟಿ ಶ್ರುತಿ ಮಾತನಾಡಿದ್ದಾರೆ.

  • ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ ಶ್ರುತಿ ಮಗಳು ಗೌರಿ

    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ ಶ್ರುತಿ ಮಗಳು ಗೌರಿ

    ಚಂದನವನದ ಚೆಂದದ ನಟಿ ಶ್ರುತಿ ಕೃಷ್ಣ (Shruthi Krishna) ತಮ್ಮ ಜನ್ಮದಿನದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಣ್ಣದ ಲೋಕಕ್ಕೆ ಶ್ರುತಿ ಮಗಳು ಗೌರಿ (Gowri) ಎಂಟ್ರಿ ಕೊಡ್ತಿದ್ದಾರೆ. ಈ ಬಗ್ಗೆ ನಟಿ ಶ್ರುತಿ ಮಾಹಿತಿ ನೀಡಿದ್ದಾರೆ.

    90ರ ದಶಕದಿಂದ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ಶ್ರುತಿ ಅವರಿಗೆ ಈಗಲೂ ಚಿತ್ರರಂಗದಲ್ಲಿ ಬೇಡಿಕೆಯಿದೆ. ನಟಿಯಾಗಿ, ರಿಯಾಲಿಟಿ ಶೋಗಳ ಜಡ್ಜ್ ಆಗಿ ಹೈಲೆಟ್ ಆಗುತ್ತಿದ್ದಾರೆ. ಅವರ ಮಗಳು ಗೌರಿ (Gowri) ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರೀಲ್ಸ್, ಹಾಡುಗಾರಿಕೆ ಮೂಲಕ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:‘ಜವಾನ್ 2’ ಜೊತೆ ಮತ್ತೊಂದು ಸರ್ ಪ್ರೈಸ್ ನೀಡಿದ ನಿರ್ದೇಶಕ ಅಟ್ಲಿ

    ಶ್ರುತಿಗೆ, ಪ್ರತಿ ಸಲ ಮಗಳು ಚಿತ್ರರಂಗಕ್ಕೆ (Films) ಬರುತ್ತಾರಾ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಇದೀಗ ಈ ಪ್ರಶ್ನೆಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರುತಿ ಅವರ ಜನ್ಮದಂದು, ತಮ್ಮ ಮಗಳು ಇಂಡಸ್ಟ್ರಿಗೆ ನಟಿಯಾಗಿ ಬರುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಒಂದೂವರೆ ತಿಂಗಳ ಹಿಂದಷ್ಟೇ ನನ್ನ ಮಗಳು ನಟಿಸೋದಾಗಿ ಹೇಳಿದ್ದಾಳೆ. ನಾನು ಒಪ್ಪಿಗೆ ನೀಡಿದ್ದೇನೆ ಎಂದು ತಿಳಿಸಿದ್ದರು.

    ನಟನೆಗೆ ಬೇಕಾಗಿರುವ ತಯಾರಿ ಮಾಡಿಕೊಂಡೇ ಮಗಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾಳೆ ಎಂದು ನಟಿ ಮಾಹಿತಿ ನೀಡಿದ್ದಾರೆ. ಗೌರಿಗೆ ಒಳ್ಳೆಯ ಕಥೆಗಳು ಅರಸಿ ಬರುತ್ತಿವೆ. ಬೇರೆಯವರ ಬ್ಯಾನರ್‌ನಲ್ಲಿ ಲಾಂಚ್ ಆಗುತ್ತಾಳೆ ಎಂದು ನಟಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಅಕ್ಕನ ಮಗಳು ಬಣ್ಣದ ಲೋಕಕ್ಕೆ ಬರುವ ಬಗ್ಗೆ ಸಿಹಿಸುದ್ದಿ ನೀಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಘನಾ ರಾಜ್ ಸಿನಿಮಾದಲ್ಲಿ ನಟಿ ಶ್ರುತಿ ಕೃಷ್ಣ

    ಮೇಘನಾ ರಾಜ್ ಸಿನಿಮಾದಲ್ಲಿ ನಟಿ ಶ್ರುತಿ ಕೃಷ್ಣ

    ಸ್ಯಾಂಡಲ್‌ವುಡ್‌ಗೆ (Sandalwood) ಕಮ್‌ಬ್ಯಾಕ್ ಆಗಿರುವ ಮೇಘನಾ ರಾಜ್ ಅವರು ಸದ್ಯ `ತತ್ಸಮ ತದ್ಭವ’ ಚಿತ್ರದ ಮೂಲಕ ಸುದ್ದಿಯಲ್ಲಿದ್ದಾರೆ. ದಿನದಿಂದ ದಿನಕ್ಕೆ ಚಿತ್ರದ ತಾರಾಗಣ ಹಿರಿದಾಗುತ್ತಿದೆ. ಮೇಘನಾಗೆ (Meghana Raj) ಸಾಥ್ ನೀಡಲು ಹಿರಿಯ ನಟಿ ಶ್ರುತಿ ಕೃಷ್ಣ ಸುಮನಳಾಗಿ ಈ ಚಿತ್ರದ ಭಾಗವಾಗಿದ್ದಾರೆ.

    ಪತಿ ಚಿರು ಸರ್ಜಾ ನಿಧನದ ಬಳಿಕ ಮಗನ ಆರೈಕೆಯಲ್ಲಿ ಬ್ಯುಸಿಯಾಗಿದ್ದ ಮೇಘನಾ ಈಗ ನಟನೆ ಅಂತಾ ಬ್ಯುಸಿಯಾಗಿದ್ದಾರೆ. ಮಹಿಳಾ ಪ್ರಧಾನ ಚಿತ್ರದ ಮೂಲಕ ಭಿನ್ನ ಕಥೆಯನ್ನ ತೆರೆಯ ಮೇಲೆ ಹೇಳಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಜ್ಯೂ.ಎನ್‌ಟಿಆರ್ ತೆಲುಗಿನ ಹೆಮ್ಮೆ ಎಂದ ಐಕಾನ್ ಸ್ಟಾರ್‌ ವಿರುದ್ಧ ಚರಣ್ ಫ್ಯಾನ್ಸ್ ಕಿಡಿ

     

    View this post on Instagram

     

    A post shared by Meghana Raj Sarja (@megsraj)

    ಪನ್ನಗ ಭರಣ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ `ತತ್ಸಮ ತದ್ಭವ’ (Tatsama Tadbhava) ಚಿತ್ರಕ್ಕೆ ವಿಶಾಲ್ ಅಥ್ರೇಯಾ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಶೋಷಣೆಗೆ ಒಳಗಾದ ಯುವತಿಯ ಕಥೆ ಈ ಚಿತ್ರದಲ್ಲಿದೆ.

     

    View this post on Instagram

     

    A post shared by Meghana Raj Sarja (@megsraj)

    ಮೇಘನಾ ರಾಜ್ ಜೊತೆ ಇದೀಗ ಕನ್ನಡದ ಹಿರಿಯ ನಟಿ ಶ್ರುತಿ ಕೃಷ್ಣ, ಗಿರಿಜಾ ಲೋಕೇಶ್, ನಾಗಾಭರಣ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಶ್ರುತಿ ಸುಮನಳಾಗಿ ಕಾಣಿಸಿಕೊಳ್ತಿದ್ದಾರೆ.