Tag: Shruti Prakash

  • ಬಾಲಿವುಡ್‌ಗೆ ಹಾರಿದ ಕನ್ನಡತಿ- ಡೈರೆಕ್ಟರ್ ವಿಕ್ರಮ್ ಭಟ್ ಸಿನಿಮಾದಲ್ಲಿ ಶ್ರುತಿ ಪ್ರಕಾಶ್

    ಬಾಲಿವುಡ್‌ಗೆ ಹಾರಿದ ಕನ್ನಡತಿ- ಡೈರೆಕ್ಟರ್ ವಿಕ್ರಮ್ ಭಟ್ ಸಿನಿಮಾದಲ್ಲಿ ಶ್ರುತಿ ಪ್ರಕಾಶ್

    ‘ಬಿಗ್ ಬಾಸ್ ಕನ್ನಡ ಸೀಸನ್ 5’ರ (Bigg Boss Kannada 5) ಮೂಲಕ ಗಮನ ಸೆಳೆದ ಶ್ರುತಿ ಪ್ರಕಾಶ್ (Shruti Prakash)  ಅವರು ಸದ್ಯ ಬಾಲಿವುಡ್‌ಗೆ ಹಾರಿದ್ದಾರೆ. ಖ್ಯಾತ ನಿರ್ದೇಶಕನ ಸಿನಿಮಾದಲ್ಲಿ ನಾಯಕಿಯಾಗಿ ಬಿಟೌನ್‌ಗೆ ನಟಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

    ಬಾಲಿವುಡ್‌ನಲ್ಲಿ (Bollywood) ಹಲವು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ವಿಕ್ರಮ್ ಭಟ್ (Vikram Bhatt) ಅವರು ‘ಹಾಂಟೆಡ್ 2’ (Haunted 2) ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಚಿತ್ರವನ್ನು ಆನಂದ್ ಪಂಡಿತ್ (Anand Pandit) ನಿರ್ಮಾಣ ಮಾಡಿದ್ದಾರೆ. ಇದು ಹಾಂಟೆಡ್ ಚಿತ್ರದ ಸೀಕ್ವೆಲ್ ಆಗಿದೆ.

    ‘ಹಾಂಟೆಡ್ 2’ (Haunted 2) ಸಿನಿಮಾದಲ್ಲಿ ಮಿಮೋಹ್ ಚಕ್ರವರ್ತಿಗೆ ಶ್ರುತಿ ಪ್ರಕಾಶ್ ನಾಯಕಿಯಾಗಿದ್ದಾರೆ. ಶ್ರುತಿ ಪಾತ್ರಕ್ಕೆ ಬಹಳಷ್ಟು ಪ್ರಾಮುಖ್ಯತೆ ಇದ್ದು, ಇದೊಂದು ಫ್ಯಾಮಿಲಿ ಎಂಟರ್‌ಟೈನರ್ ಚಿತ್ರವಾಗಿದೆ. ಈ ಚಿತ್ರದಲ್ಲಿ ಅವಕಾಶ ಸಿಕ್ಕಿರುವುದಕ್ಕೆ ನಟಿ ಸಂತಸ ವ್ಯಕ್ತಪಡಿಸಿದ್ದಾರೆ.

    ಅಂದಹಾಗೆ, ಬಿಗ್ ಬಾಸ್ ಶೋ ಬಳಿಕ ಕಸ್ತೂರಿ ಮಹಲ್, ಕಡಲ ತೀರದ ಭಾರ್ಗವ, ಲಂಡನ್‌ನಲ್ಲಿ ಲಂಬೋದರ, ಗ್ರೇ ಗೇಮ್ಸ್ ಸೇರಿದಂತೆ ಹಲವು ಚಿತ್ರಗಳಲ್ಲಿ ಶ್ರುತಿ ಪ್ರಕಾಶ್ ನಟಿಸಿದ್ದಾರೆ.

  • ಹೊಸ ವರ್ಷಕ್ಕೂ ಮುನ್ನ ಹೊಸ ಸಿನಿಮಾ ಒಪ್ಪಿಕೊಂಡ ಶ್ರುತಿ ಪ್ರಕಾಶ್

    ಹೊಸ ವರ್ಷಕ್ಕೂ ಮುನ್ನ ಹೊಸ ಸಿನಿಮಾ ಒಪ್ಪಿಕೊಂಡ ಶ್ರುತಿ ಪ್ರಕಾಶ್

    ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ (Shruti Prakash) ಹಾಗೂ ಮೇಡ್ ಇನ್ ಬೆಂಗಳೂರು ಚಿತ್ರದ ನಾಯಕ ಮಧುಸೂದನ್ ಗೋವಿಂದ್ (Madhusudan Govind) ನಾಯಕ – ನಾಯಕಿಯಾಗಿ ನಟಿಸುತ್ತಿರುವ ‘ಫ್ರೈಡೆ’ (Friday) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ ‘ಹೊಸ ದಿನಚರಿ’ ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಫ್ರೈಡೆ ಚಿತ್ರದ ಬಗ್ಗೆ ಮಾಹಿತಿ ನೀಡಿದರು.

    ಈ ಸಂಸ್ಥೆ ನಿರ್ಮಾಣದ ನಾಲ್ಕನೇ ಚಿತ್ರ ಹಾಗೂ Dees films ಸಂಸ್ಥೆ, shoolin media ಸಂಸ್ಥೆಯ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಎರಡನೇ ಚಿತ್ರ ಫ್ರೈಡೆ. ಈ ಹಿಂದೆ ಆಯನ, ಹೊಸ ದಿನಚರಿ  ಹಾಗೂ  ಗ್ರೇ ಗೇಮ್ಸ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೆವು. ಇದು ನಾಲ್ಕನೇ ಚಿತ್ರ. ಆಯನ ಹಾಗೂ ಗ್ರೇ ಗೇಮ್ಸ್ ಚಿತ್ರಗಳನ್ನು ನಾನೇ ನಿರ್ದೇಶಿಸಿದ್ದೇನೆ‌. ಫ್ರೈಡೆ ಚಿತ್ರವನ್ನು ಹೊಸ ದಿನಚರಿ ಚಿತ್ರದ ನಿರ್ದೇಶಕರಾದ ಕೀರ್ತಿ ಹಾಗೂ ವೈಶಾಖ್ ನಿರ್ದೇಶಿಸುತ್ತಿದ್ದಾರೆ. ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ನಿರ್ಮಾಪಕರು. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಸದಭಿರುಚಿ ಚಿತ್ರಗಳನ್ನು ನಿರ್ಮಿಸುವ ಇರಾದೆ ಇದೆ ಎಂದರು ಕ್ರಿಯೇಟಿವ್ ನಿರ್ಮಾಪಕರಾದ ಗಂಗಾಧರ್ ಸಾಲಿಮಠ.

    ಸಿನಿಮಾದವರಿಗೆ ಫ್ರೈಡೆ ಎಂದರೆ ವಿಶೇಷ. ನಮಗೂ ಹಾಗೆ. ಏಕೆಂದರೆ ನಮ್ಮ ಚಿತ್ರದ ಹೆಸರು “ಫ್ರೈಡೆ”. ಚಿತ್ರ ಬಿಡುಗಡೆಯಾಗುವುದು  ಫ್ರೈಡೆ . ಆ ಫ್ರೈಡೆಗೂ ನಮ್ಮ ಚಿತ್ರಕ್ಕೂ ನಂಟಿದೆ. ಫ್ರೈಡೆ ಬಿಡುಗಡೆಯಾದ ಹೊಸ ಚಿತ್ರವನ್ನು ನೋಡಲು ಹೋಗಿದ್ದ ದಂಪತಿ ಜೀವನದಲ್ಲಿ ನಡೆಯಬಾರದ ಘಟನೆ ನಡೆದು ಹೋಗುತ್ತದೆ. ಅದೇ ಚಿತ್ರದ ಕಥಾಹಂದರ. ಮಧುಸೂದನ್ ಗೋವಿಂದ್, ಶೃತಿ ಪ್ರಕಾಶ್ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ‌. ನಾನು ಕಥೆ ರಚಿಸಿದ್ದು. ಚಿತ್ರಕಥೆಯನ್ನು ನಾನು ಹಾಗೂ ಕೀರ್ತಿ ಶೇಖರ್ ಬರೆದಿದ್ದೇವೆ. ಜನವರಿ ಮೊದಲವಾರದಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದು ನಿರ್ದೇಶಕರಲ್ಲೊಬ್ಬರಾದ ವೈಶಾಖ್ ಪುಷ್ಪಲತ.

    ಮತ್ತೊಬ್ಬ ನಿರ್ದೇಶಕರಾದ ಕೀರ್ತಿ ಶೇಖರ್ ಮಾತನಾಡಿ, ಫ್ರೈಡೆ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಮೂರು ಹಾಡುಗಳಿದೆ. ಅಶ್ವಿನ್ ಹೇಮಂತ್ ಸಂಗೀತ ನಿರ್ದೇಶನ ಹಾಗೂ ಸಂದೀಪ್ ವಲ್ಲೂರಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.  ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಲಿದೆ ಎಂದರು.

     

    ಚಿತ್ರದ ಪ್ರಮುಖ ಪಾತ್ರಧಾರಿಗಳಾದ ಮಧುಸೂದನ್ ಗೋವಿಂದ್, ಶೃತಿ ಪ್ರಕಾಶ್ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ನಿರ್ಮಾಪಕರಾದ ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ಸಹ ಫ್ರೈಡೆ ಚಿತ್ರದ ಕುರಿತು ಮಾತನಾಡಿದರು.

  • ವಿಜಯ್ ರಾಘವೇಂದ್ರ ನಟನೆಯ ವಿಭಿನ್ನ ಸಿನಿಮಾದ ಟೀಸರ್ ರಿಲೀಸ್

    ವಿಜಯ್ ರಾಘವೇಂದ್ರ ನಟನೆಯ ವಿಭಿನ್ನ ಸಿನಿಮಾದ ಟೀಸರ್ ರಿಲೀಸ್

    ವಿಭಿನ್ನ ಕಥಾಹಂದರ ಹೊಂದಿರುವ ‘ಗ್ರೇ ಗೇಮ್ಸ್ ‘ (Gray Games) ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಗ್ರೇ ಗೇಮ್ಸ್ ಒಂದು ರೋಮಾಂಚಕ ಕೌಟುಂಬಿಕ ಚಿತ್ರವಾಗಿದ್ದು, ಇದರಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ವಿಜಯ್ ರಾಘವೇಂದ್ರ (Vijay Raghavendra), ಶ್ರುತಿ ಪ್ರಕಾಶ್ (Shruti Prakash), ಭಾವನಾ ರಾವ್ (Bhavana Rao), ಅಪರ್ಣಾ, ರವಿ ಭಟ್ ಮತ್ತು ಪ್ರಮುಖ ಪಾತ್ರದಲ್ಲಿ ಜೈ ಅಭಿನಯಿಸಿದ್ದಾರೆ. ಈ ಕಥೆಯು ನಿಮ್ಮ ಸತ್ಯ ಮತ್ತು ಸುಳ್ಳಿನ ನಡುವಿನ ಗೆರೆಗಳನ್ನು ನಿರಂತರ ಬದಲಾವಣೆ ಮತ್ತು ಯೋಚಿಸಲು ಒಳಪಡಿಸುತ್ತಿದೆ ಮತ್ತು ವಾಸ್ತವದ ನಿಮ್ಮ ಗ್ರಹಿಕೆಗೆ ಸವಾಲು ಹಾಕುತ್ತದೆ. ಗ್ರೇ ಗೇಮ್ಸ್‌ನ  ಜಗತ್ತಿನಲ್ಲಿ ಹೆಜ್ಜೆ ಹಾಕಿ, ಲೆಟ್ ದ ಗೇಮ್ ಬಿಗಿನ್ಸ್.

    ಗ್ರೇ ಗೇಮ್ಸ್ ಆನ್‌ಲೈನ್ ಗೇಮಿಂಗ್ ಗೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಸುತ್ತ ಸುತ್ತುತ್ತದೆ. ವಿಜಯ್ ರಾಘವೇಂದ್ರ (ಮನಶ್ಶಾಸ್ತ್ರಜ್ಞ), ಭಾವನಾ ರಾವ್ (ಪೊಲೀಸ್ ಅಧಿಕಾರಿ), ಮತ್ತು ಶ್ರುತಿ ಪ್ರಕಾಶ್ (ಚಿತ್ರನಟಿ) ಆಗಿ ಪಾತ್ರಗಳನ್ನು ನಿರ್ವಹಿಸಿದ್ದಾರೆ, ಚಲನಚಿತ್ರವು ಹೊಸ ಪ್ರತಿಭೆ ಜೈ (ಗೇಮರ್) ಪಾತ್ರವನ್ನು ನಿರ್ವಹಿಸಿದ್ದಾರೆ. ಇದು ತಂತ್ರಜ್ಞಾನ ಯುಗದಲ್ಲಿ ನಮ್ಮ ಮೇಲಾಗುವ ಮಾನಸಿಕ ಒತ್ತಡವನ್ನು ಆಧರಿಸಿದೆ. ಚಿತ್ರದಲ್ಲಿ ಮೂರು ಹಾಡುಗಳು ಮತ್ತು ಹೊಸ ಕಥಾವಸ್ತುವಿನ ಜೊತೆಗೆ ಭಾವನಾತ್ಮಕ ತಿರುವುಗಳೊಂದಿಗೆ, ನಿಮ್ಮನ್ನು ಮಾನಸಿಕವಾಗಿ  ಸೆಳೆಯುತ್ತದೆ.

    ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಂಗಾಧರ ಸಾಲಿಮಠ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಒಂದು ರೋಚಕ ಕಥೆಯನ್ನು ರಚಿಸಿದ್ದಾರೆ. ಚಿತ್ರದ ಛಾಯಾಗ್ರಾಹಕ ವರುಣ ಡಿಕೆ ಕ್ಯಾಮೆರಾದಲ್ಲಿ ಕಥೆಗೆ ಜೀವ ತುಂಬಿದ್ದಾರೆ. ಚಿತ್ರವನ್ನು ಆನಂದ ಹೆಚ್.ಮುಗದ್ ನಿರ್ಮಿಸಿದ್ದಾರೆ ಮತ್ತು ಸತೀಶ ಗ್ರಾಮಪುರೋಹಿತ, ಅರವಿಂದ ಜೋಶಿ, ಮತ್ತು ಡೋಲೇಶ್ವರ್ ರಾಜ್ ಸುಂಕು ಸಹ-ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ರಿಯಾಲಿಟಿ ಮತ್ತು ವರ್ಚುವಾಲಿಟಿ ಜಗತ್ತಿನ ಕಥೆಯುಳ್ಳ, ನುರಿತ ಕಲಾವಿದರು ಅಭಿನಯಿಸಿರುವ ಈ ಚಿತ್ರ, ಪ್ರೇಕ್ಷಕರನ್ನು ಮನರಂಜನೆಯ ಜೊತೆಗೆ ಅವರ ವಾಸ್ತವದ ಗ್ರಹಿಕೆಗೆ ಸವಾಲು ಹಾಕುತ್ತದೆ ಎಂಬ ವಿಶ್ವಾಸವಿದೆ ಎನ್ನುತ್ತಾರೆ ನಿರ್ದೇಶಕ ಗಂಗಾಧರ ಸಾಲಿಮಠ.

  • ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್

    ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್

    ತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಈಗ ಚಿತ್ರವು ಇದೇ ಮಾರ್ಚ್ 03ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು. ಕನ್ನಡ ನಾಡಿನಲ್ಲಿ ಅವರು ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ ಅವರು ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಅವರ ಜೀವನದ ಕಥೆಯಲ್ಲ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವ ಪನ್ನಗ ಸೋಮಶೇಖರ್.

    ಈ ಕುರಿತು ಮಾತನಾಡುವ ಅವರು, ‘ಕಡಲು ಎಂದರೆ ಅಂತ್ಯವಿಲ್ಲದ್ದು ಅಥವಾ ಅನಂತ ಎಂದರ್ಥ. ಆ ಕಡಲನ್ನು ನಮ್ಮ ಚಿತ್ರದಲ್ಲಿ ಒಂದು ವಿಷಯಕ್ಕೆ ಹೋಲಿಸಿದ್ದೇನೆ. ಇನ್ನು, ಭಾರ್ಗವರಾಮ ಅಥವಾ ಪರಶುರಾಮ ಎನ್ನುವುದು ನಮ್ಮ ಪುರಾಣಗಳಲ್ಲಿ ಬರುವ ಒಂದು ಪವರ್ಫುಲ್ ಪಾತ್ರ. ಇಲ್ಲಿ ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ ಮುನ್ನಡೆಯುತ್ತಿರುತ್ತಾನೆ. ಹಾಗಾಗಿ, ಚಿತ್ರಕ್ಕೆ ‘ಕಡಲತೀರದ ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರವಾಗಿದ್ದು, ಡಾ. ಶಿವರಾಮ ಕಾರಂತರಿಗೂ ಯಾವುದೇ ಸಂಬಂಧವಿಲ್ಲ. ಅವರಿಗೆ ಧಕ್ಕೆ ತರುವಂತಹ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗಾಗಲೇ ಚಿತ್ರವನ್ನು ಹಲವರಿಗೆ ತೋರಿಸಿದ್ದೇವೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ. ಶೀರ್ಷಿಕೆಗೆ ನ್ಯಾಯ ಸಲ್ಲಿಸಿದ್ದೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ’ ಎನ್ನುತ್ತಾರೆ ಪನ್ನಗ ಸೋಮಶೇಖರ್. ಇದನ್ನೂ ಓದಿ: ರಮ್ಯಾಗಿಂತ ಸಾನ್ಯಗೆ ವಯಸ್ಸಾಯ್ತಾ? ಕಾಲೆಳೆದ ನೆಟ್ಟಿಗರು

    ‘ಒಬ್ಬ ಮನುಷ್ಯನಲ್ಲಿ ಎಲ್ಲ ತರಹದ ಭಾವನೆಗಳಿರುತ್ತವೆ. ಆ ಎಮೋಷನ್ಗಳನ್ನು ಇಟ್ಟುಕೊಂಡು ಮಾಡಿರುವ ಕಥೆಯೇ ‘ಕಡಲತೀರದ ಭಾರ್ಗವ’’ ಎನ್ನುತ್ತಾರೆ ಚಿತ್ರದ ನಾಯಕರಲ್ಲೊಬ್ಬರಾದ ವರುಣ್ ರಾಜು. ‘ಚಿತ್ರದ ಟ್ರೇಲರ್ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಲರ್ ನೋಡಿದವರೆಲ್ಲ, ಬಹಳ ಗ್ರಿಪ್ಪಿಂಗ್ ಆಗಿದೆ, ಕಥೆ ಗೊತ್ತಾಗುತ್ತಿಲ್ಲ, ಹೊಸಬರೇ ಸೇರಿ ಈ ಚಿತ್ರ ಮಾಡಿದ್ದು ಎಂದನಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಾಳೆ ಚಿತ್ರ ನೋಡುವ ಪ್ರೇಕ್ಷಕರು ಸಹ ಇದೇ ಅಭಿಪ್ರಾಯಪಟ್ಟರೆ ನಮ್ಮ ಶ್ರಮ ಸಾರ್ಥಕ’ ಎನ್ನುತ್ತಾರೆ ವರುಣ್. ಈಗಾಗಲೇ ‘ಕಡಲತೀರದ ಭಾರ್ಗವ’ ಚಿತ್ರದ ಮೊದಲ ಟಿಕೆಟ್ ದಾಖಲೆಯ ಎರಡೂವರೆ ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಮಾತಾಟವಾಗಿದೆ. ನಾಯಕ ವರುಣ್ ರಾಜು ಅವರ ಸಂಬಂಧಿಯೂ ಆದ ಮೋಹನ್ ರಾಜು ದುಡ್ಡು ಕೊಟ್ಟು ಮೊದಲ ಟಿಕೆಟ್ ಪಡೆದಿದ್ದಾರೆ.

    ‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

  • ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ಕಡಲತೀರದ ಭಾರ್ಗವ’ ಸಿನಿಮಾ ಸಾಂಗ್

    ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ಕಡಲತೀರದ ಭಾರ್ಗವ’ ಸಿನಿಮಾ ಸಾಂಗ್

    ಶೀರ್ಷಿಕೆಯ ಮೂಲಕವೇ ಮನೆಮಾತಾಗಿರುವ  ‘ಕಡಲ ತೀರದ ಭಾರ್ಗವ’ ಚಿತ್ರಕ್ಕಾಗಿ ಖ್ಯಾತ ಸಾಹಿತಿ ಡಾ.ವಿ‌.ನಾಗೇಂದ್ರ ಪ್ರಸಾದ್ ಬರೆದಿರುವ ‘ಸಮಯವೇ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಕರಾವಳಿಯ ಅದ್ಭುತ ಪರಿಸರ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನೆರವೇರಿತು.

    “ಕಡಲ ತೀರದ ಭಾರ್ಗವ” ಎಂದು ಹಿರಿಯ ಸಾಹಿತಿ ಶಿವರಾಮ ಕಾರಂತರನ್ನು ಕರೆಯುತ್ತಾರೆ‌. ಅದರೆ ನಮ್ಮ ಚಿತ್ರದ ಕಥೆ ಅವರ ಬಗ್ಗೆ ಅಲ್ಲ. ಚಿತ್ರದಲ್ಲಿ ನಾಯಕನ ಹೆಸರು ಭಾರ್ಗವ ಎಂದು. ನಾನು ಕಡಲತೀರವನ್ನು  ಮನುಷ್ಯನ ಮನಸ್ಸಿಗೆ ಹೋಲಿಸುತ್ತೇನೆ. ಪಟೇಲ್ ವರುಣ್ ರಾಜು ಭಾರ್ಗವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭರತ್ ಗೌಡ ನಾಯಕನಾಗಿ, ಶೃತಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಅನಿಲ್ ಸಿ.ಜೆ ಸಂಗೀತ ನೀಡಿರುವ ಆರು ಹಾಡುಗಳ ಪೈಕಿ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿ, ಜನಪ್ರಿಯವಾಗಿದೆ. ಫೆಬ್ರವರಿ 13 ಟ್ರೇಲರ್ ಬರಲಿದೆ. ಅದೇ ದಿವಸ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ಪನ್ನಗ ಸೋಮಶೇಖರ್. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

    ಮದವೆ ಮಾಡಿ ನೋಡು. ಮನೆ ಕಟ್ಟಿ ನೋಡು ‌ಎಂದು ಹೇಳುತ್ತಾರೆ. ಹಾಗೆ ಸಿನಿಮಾ ಮಾಡುವುದು ಸಹ ಅಷ್ಟು ಸುಲಭವಲ್ಲ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ, ನಾನು ಹಾಗೂ ವರುಣ್ ಪಟೇಲ್ ರಾಜು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ – ನಾಯಕ ಭರತ್ ಗೌಡ.

    ಕೊರೋನ ಪೂರ್ವದಲ್ಲಿ ಚಿತ್ರಗಳು ಬಿಡುಗಡೆಯಾಗುತ್ತಿದ್ದ ರೀತಿಗೂ ಹಾಗೂ ಈಗಿನ ರೀತಿಗೂ  ಬದಲಾವಣೆ ಇದೆ. ಈಗ ವಾರಕ್ಕೆ ಸಾಕಷ್ಟು ಚಿತ್ರಗಳು ಬರುತ್ತಿದೆ. ಅದರ ನಡುವೆ ನಮ್ಮ ಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಜನರು ಬರುವ ಪ್ರಯತ್ನ ಮಾಡಬೇಕು. ಆ ನಿಟ್ಟಿನಲ್ಲಿ ಪ್ರಚಾರ ಆರಂಭಿಸಿದ್ದೇವೆ. ಉತ್ತಮ ಕಂಟೆಂಟ್ ವುಳ್ಳ ಚಿತ್ರ ಮಾಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲ ಬೇಕು ಎನ್ನುತ್ತಾರೆ ನಿರ್ಮಾಪಕ ಹಾಗೂ ಭಾರ್ಗವ ಪಾತ್ರಧಾರಿ ಪಟೇಲ್ ವರುಣ್ ರಾಜು. ಚಿತ್ರದ ಹಾಡುಗಳ ಬಗ್ಗೆ ಅನಿಲ್ ಸಿ ಜೆ ಮಾಹಿತಿ ನೀಡಿದರು. ಅನೇಕ ಕಲಾವಿದರು ಹಾಗೂ ತಂತ್ರಜ್ಞರು “ಕಡಲ ತೀರದ ಭಾರ್ಗವ” ಸಿನಿಮಾ ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಮಧುರ ಮಧುರ’ ಹಾಡಿಗೆ ಸೊಂಟ ಬಳುಕಿಸಿದ ಶ್ರುತಿ ಪ್ರಕಾಶ್

    ‘ಮಧುರ ಮಧುರ’ ಹಾಡಿಗೆ ಸೊಂಟ ಬಳುಕಿಸಿದ ಶ್ರುತಿ ಪ್ರಕಾಶ್

    ನ್ನಡದಲ್ಲೀಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳೇ ಹೆಚ್ಚಾಗಿ ಜನಪ್ರಿಯಾಗುತ್ತಿದೆ. ಅಂತಹ ಉತ್ತಮ ಕಂಟೆಂಟ್ ಇರುವ ಮತ್ತೊಂದು ಕನ್ನಡ ಚಿತ್ರ ‘ಕಡಲ ತೀರದ ಭಾರ್ಗವ’. ವಿಭಿನ್ನ ಕಥೆಯುಳ್ಳ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗಿದೆ.

    ಪಟೇಲ್ ವರುಣ್ ರಾಜು ಹಾಗೂ ಭರತ್ ಗೌಡ ನಿರ್ಮಿಸಿರುವ, ಪನ್ನಗ ಸೋಮಶೇಖರ್ ನಿರ್ದೇಶಿಸಿರುವ ಈ ಚಿತ್ರದ  ‘ಮಧುರ ಮಧುರ’ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಅನಿಲ್ ಸಿ ಜೆ ಸಂಗೀತ ನೀಡಿರುವ ಈ ಹಾಡನ್ನು ವಾರಿಜಾಶ್ರೀ ಹಾಗೂ ಅನಿಲ್ ಸಿ ಜೆ ಅವರು ಸುಶ್ರಾವ್ಯವಾಗಿ ಹಾಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿರುವ ಈ ಹಾಡು ಜನಪ್ರಿಯವಾಗಿದ್ದು, ಈಗಾಗಲೇ ಐದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಆರ್ಯನ್ ರೋಷನ್ ನೃತ್ಯ ನಿರ್ದೇಶಿಸಿರುವ ‘ಮಧುರ ಮಧುರ’ ಹಾಡಿಗೆ‌ ನಾಯಕ ಭರತ್ ಗೌಡ ಹಾಗೂ ನಾಯಕಿ ಶ್ರುತಿ ಪ್ರಕಾಶ್ ಹೆಜ್ಜೆ ಹಾಕಿದ್ದಾರೆ. ಅನಿಲ್ ಸಿ ಜೆ  ಸಂಗೀತಕ್ಕೆ ಹಾಗೂ ಕೀರ್ತನ ಪೂಜಾರಿ ಅವರ ಛಾಯಾಗ್ರಹಣಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯದಲ್ಲೇ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಲಿದೆ. ಆನಂತರ ಟ್ರೇಲರ್ ಬರಲಿದ್ದು, ಟ್ರೇಲರ್ ನಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗುವುದೆಂದು ನಿರ್ಮಾಪಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    ಬೆಂಗಳೂರು: ಒಂದು ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸಿ, ಅದನ್ನು ನೋಡಲೇ ಬೇಕೆಂಬ ತುಡಿತ ಮೂಡಿಸುವಲ್ಲಿ ಟ್ರೇಲರ್ ಪಾತ್ರ ಮಹತ್ವದ್ದು. ಆದರೆ ಒಂದಿಡೀ ಸಿನಿಮಾ ಸಾರವನ್ನು ಸೆಕೆಂಡು, ನಿಮಿಷಗಳ ಬೊಗಸೆಯಲ್ಲಿ ಹಿಡಿದಿಡುವುದು ಬಲು ಕಷ್ಟದ ಕೆಲಸ. ಅದರಲ್ಲಿ ಗೆದ್ದವರು ಸಿನಿಮಾ ಮೂಲಕ ಗೆಲ್ಲುವುದೂ ನಿಶ್ಚಿತ ಎಂಬಂಥಾ ನಂಬಿಕೆ ಇದೆ. ಈ ಆಧಾರದಲ್ಲಿ ಹೇಳೋದಾದರೆ ಕಡಲ ತಡಿಯ ಭಾರ್ಗವ ಎಂಬ ಸಿನಿಮಾ ಗೆಲುವಿನ ಹಾದಿಯಲ್ಲಿದೆ. ಯಾಕೆಂದರೆ ಇದೀಗ ಲಾಂಚ್ ಆಗಿರೋ ಈ ಸಿನಿಮಾ ಟ್ರೇಲರ್ ಅಷ್ಟೊಂದು ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

    ಅಷ್ಟಕ್ಕೂ ಕಡಲ ತೀರದ ಭಾರ್ಗವ ಅಂದಾಕ್ಷಣವೇ ಕನ್ನಡಿಗರೆಲ್ಲರ ಮನಸಲ್ಲಿ ಮೇರು ಸಾಹಿತಿ ಶಿವರಾಮ ಕಾರಂತರ ಚಿತ್ರ ಮೂಡಿಕೊಳ್ಳುತ್ತದೆ. ಈ ಸಿನಿಮಾ ಆರಂಭಿಕವಾಗಿ ಗಮನ ಸೆಳೆದದ್ದರ ಹಿಂದೆಯೂ ಶಿವರಾಮ ಕಾರಂತರೆಂಬ ಮಾಯೆಯಿದ್ದದ್ದು ಸುಳ್ಳಲ್ಲ. ಪ್ರತಿಭೆಯ ವಿರಾಟ್ ರೂಪದಂತಿದ್ದ ವರ್ಣರಂಜಿತ ವ್ಯಕ್ತಿತ್ವದ ಕಾರಂತರಿಗೂ ಈ ಸಿನಿಮಾಗೂ ಸಂಬಂಧವಿದೆಯಾ ಎಂಬ ಪ್ರಶ್ನೆಗೆ ಚಿತ್ರತಂಡ ಇಲ್ಲ ಎಂಬ ನಿಖರ ಉತ್ತರವನ್ನೇ ರವಾನಿಸಿತ್ತು. ಇದೀಗ ಟ್ರೇಲರ್ ಮೂಲಕ ಬೇರೆಯದ್ದೇ ಕಥೆಯ ದಿಕ್ಕು ತೋರಿಸೋ ಮೂಲಕ ಚಿತ್ರತಂಡ ಕಾರಂತರ ವಿಚಾರವಾಗಿ ಹುಟ್ಟಿಕೊಂಡಿದ್ದ ಕೌತುಕಕ್ಕೆ ನಿಖರವಾದ ಉತ್ತರವನ್ನೇ ಕೊಟ್ಟಿದೆ.

    https://www.youtube.com/watch?v=2freW2IGokw

    ಈ ಟ್ರೇಲರ್ ನೋಡಿದವರ್ಯಾರೂ ಕಡಲ ತೀರದ ಭಾರ್ಗವ ಚಿತ್ರದತ್ತ ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಪ್ರೀತಿ ಪ್ರೇಮ, ನಶೆ, ದ್ವೇಷ ಸೇರಿದಂತೆ ಬೇರೆಯದ್ದೇ ಛಾಯೆಗಳಿಂದ ಈ ಟ್ರೇಲರ್ ಹೊರ ಬಂದಿದೆ. ಅದುವೇ ಈ ಸಿನಿಮಾದ ದೃಶ್ಯ ವೈಭವಕ್ಕೆ, ಭಿನ್ನ ಬಗೆಯ ಕಥಾನಕಕ್ಕೆ ಕನ್ನಡಿ ಹಿಡಿದಂತಿದೆ. ಇದು ಪನ್ನಗ ಸೋಮಶೇಖರ್ ನಿರ್ದೇಶನ ಮಾಡಿರೋ ಚಿತ್ರ. ಈಗಾಗಲೇ ಹಲವಾರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರೋ ಪನ್ನಗ ಕಿರುತೆರೆ ಕ್ಷೇತ್ರದಲ್ಲಿಯೂ ಒಂದಷ್ಟು ಅನುಭವ ಹೊಂದಿದ್ದಾರೆ. ಭರತ್ ಗೌಡ ಮತ್ತು ವರುಣ್ ರಾಜ್ ಜೋಡಿಯಾಗಿ ನಟಿಸಿರೋ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಇಷ್ಟರಲ್ಲಿಯೇ ಈ ಸಿನಿಮಾದ ಬಿಡುಗಡೆ ದಿನಾಂಕ ಹೊರಬೀಳಲಿದೆ.

  • ಲಂಡನ್ ನಲ್ಲಿ ಲಂಬೋದರ: ವಿದೇಶಿ ವ್ಯಾಮೋಹದಿಂದ ದೇಶ ಮರೆತವರ ಮರ್ಮರ!

    ಲಂಡನ್ ನಲ್ಲಿ ಲಂಬೋದರ: ವಿದೇಶಿ ವ್ಯಾಮೋಹದಿಂದ ದೇಶ ಮರೆತವರ ಮರ್ಮರ!

    ಬೆಂಗಳೂರು: ಯಾವುದೇ ಸಿನಿಮಾ ರೂಪಿಸಿದವರೂ ತಮ್ಮ ಚಿತ್ರವನ್ನು ಯಾಕೆ ಜನ ನೋಡಲೇ ಬೇಕು ಅನ್ನೋದಕ್ಕೆ ಬೇಕಾದಷ್ಟು ಕಾರಣಗಳನ್ನ ಕೊಡುತ್ತಾರೆ. ಆದರೆ ಲಂಡನ್ ನಲ್ಲಿ ಲಂಬೋದರ ಚಿತ್ರದ ನಿರ್ದೇಶಕ ರಾಜ್ ಸೂರ್ಯ ಕೊಡೋ ಕಾರಣ ಮಾತ್ರ ತುಸು ಭಿನ್ನ. ಇನ್ನೇನು ಇದೇ ತಿಂಗಳ ಇಪ್ಪತ್ತೊಂಬತ್ತರಂದು ಬಿಡುಗಡೆಗೊಳ್ಳಲಿರೋ ಈ ಚಿತ್ರದ ವಿಶೇಷತೆಗಳು ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆಯುವಂತಿದೆ.

    ಈಗ ಹೇಳಿಕೇಳಿ ಥಳುಕು ಬಳುಕಿಗೆ ಬೇಗನೆ ಮಾರು ಹೋಗುವ ಕಾಲ. ಹುಟ್ಟಿದ ನೆಲವನ್ನು ಹಳಹಳಿಸುತ್ತಾ ಹೇಗಾದರೂ ಮಾಡಿ ವಿದೇಶಕ್ಕೆ ಹಾರಿ ಸೆಟಲ್ ಆಗಬೇಕೆಂಬ ಮನಸ್ಥಿತಿಯೇ ಬಹುತೇಕರನ್ನು ಆಳುತ್ತಿದೆ. ಹೀಗೆ ಹುಟ್ಟಿದೂರನ್ನು ತೊರೆದು ವಿದೇಶದಲ್ಲಿ ಬೇರಿಳಿಸಿಕೊಂಡು ತಾಯಿ ಬೇರನ್ನು ಸಂಪೂರ್ಣವಾಗಿ ಮರೆತರೆ ಏನಾಗುತ್ತೆ ಅನ್ನೋದಕ್ಕೆ ಖಂಡಿತವಾಗಿಯೂ ಈ ಚಿತ್ರದಲ್ಲಿ ವಿಶೇಷವಾದ ಉತ್ತರಗಳು ಜಾಹೀರಾಗಲಿವೆ!

    ಇನ್ನು ಪಾತ್ರಗಳ ಬಗ್ಗೆ ಹೇಳೋದಾದರೆ ನಿರ್ದೇಶಕರು ಪ್ರತೀ ಪಾತ್ರವನ್ನೂ ಕೂಡಾ ಟ್ರೆಂಡ್ ಸೆಟ್ ಮಾಡುವಂಥಾ ರೀತಿಯಲ್ಲಿ ರೂಪಿಸಿದ್ದಾರಂತೆ. ಸಂಪತ್ ರಾಜ್ ಅವರದ್ದಿಲ್ಲಿ ವಿಶಿಷ್ಟವಾದ ಪಾತ್ರ. ಸಾಧು ಕೋಕಿಲಾ ಕೂಡಾ ಈವರೆಗಿನದಕ್ಕಿಂತಲೂ ಪಕ್ಕಾ ವಿಶೇಷವಾದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರಂತೆ. ನಮ್ಮ ನಡುವೆಯೇ ಇರುವಂತೆ ಭಾಸವಾಗೋ ಈ ಪಾತ್ರಗಳೆಲ್ಲವೂ ತಮ್ಮದೇ ರೀತಿಯಲ್ಲಿ ಕಚಗುಳಿ ಇಡಲಿವೆ ಅನ್ನೋದು ಚಿತ್ರತಂಡದ ಭರವಸೆ.

    ಈಗಾಗಲೇ ಲಂಡನ್ ನಲ್ಲಿ ಲಂಬೋದರ ಚಿತ್ರ ಬಹು ನಿರೀಕ್ಷಿತ ಸಿನಿಮಾವಾಗಿ ಹೊರಹೊಮ್ಮಿದೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರೋ ಈ ಸಿನಿಮಾದಲ್ಲಿ ಸ್ಕ್ರೀನ್ ಪ್ಲೇ, ಎಡಿಟಿಂಗ್, ಹಾಡುಗಳು, ಛಾಯಾಗ್ರಹಣ ಸೇರಿದಂತೆ ಎಲ್ಲದರಲ್ಲಿಯೂ ಹೊಸಾ ಪ್ರಯೋಗಗಳನ್ನು ಮಾಡಲಾಗಿದೆ. ಅದರ ಮುದ ಏನೆಂಬುದು ಈ ತಿಂಗಳ ಇಪ್ಪತ್ತೊಂಬತ್ತರಂದು ಜಾಹೀರಾಗಲಿದೆ.

  • ಲಂಡನ್‍ನಲ್ಲಿ ಲಂಬೋದರನ ಬಗ್ಗೆ ಶ್ರುತಿ ಪ್ರಕಾಶ್ ಹೇಳಿದ್ದೇನು?

    ಲಂಡನ್‍ನಲ್ಲಿ ಲಂಬೋದರನ ಬಗ್ಗೆ ಶ್ರುತಿ ಪ್ರಕಾಶ್ ಹೇಳಿದ್ದೇನು?

    ಬೆಂಗಳೂರು: ಶ್ರುತಿ ಪ್ರಕಾಶ್ ಮೂಲತಃ ಕನ್ನಡತಿಯೇ ಆಗಿದ್ದರೂ ಈ ಬಿಗ್ ಬಾಸ್ ಶೋ ಮೂಲಕವೇ ಕನ್ನಡಿಗರಿಗೆ ಪರಿಚಯವಾದ ಹುಡುಗಿ. ಕಳೆದ ಸೀಸನ್ನಿನ ಈ ಶೋನಲ್ಲಿ ಮುಖ ಮುಖವಾಡಗಳ ಸಂತೆಯ ನಡುವೆಯೂ ನೈಜ ವ್ಯಕ್ತಿತ್ವ ಮರೆಮಾಚದೆ ಕನ್ನಡಿಗರ ಮನ ಗೆದ್ದಿದ್ದವರು ಶ್ರುತಿ. ಈ ಶೋ ಮುಗಿದ ನಂತರ ತನ್ನೆದುರು ಅವಕಾಶಗಳ ಮೆರವಣಿಗೆಯೇ ನೆರೆದಿದ್ದರೂ ಕೂಡಾ ಅವರು ಪ್ರೀತಿಯಿಂದ ಆರಿಸಿಕೊಂಡಿದ್ದು ಲಂಡನ್ ನಲ್ಲಿ ಲಂಬೋದರ ಚಿತ್ರವನ್ನು. ಈ ಬಗ್ಗೆ ಒಂದಷ್ಟು ಮಜವಾದ ವಿಚಾರಗಳನ್ನ ಶ್ರುತಿ ಪಬ್ಲಿಕ್ ಟಿವಿಯ ಜೊತೆ ಹಂಚಿಕೊಂಡಿದ್ದಾರೆ.

    ಶ್ರುತಿ ಪ್ರಕಾಶ್ ಮೂಲತಃ ಕರ್ನಾಟಕದ ಗಡಿ ಪ್ರದೇಶವಾದ ಬೆಳಗಾವಿಯವರು. ಹಿಂದಿ ಭಾಷೆಯಲ್ಲಿ ನಾನಾ ಹಿಟ್ ಧಾರಾವಾಹಿಗಳ ಮೂಲಕ, ಮ್ಯೂಸಿಕ್ ಆಲ್ಬಂಗಳ ಮೂಲಕ ಪ್ರಸಿದ್ಧಿ ಹೊಂದಿದ್ದರೂ ಈ ಕನ್ನಡತಿಯ ಪರಿಚಯ ಕನ್ನಡಿಗರಿಗೇ ಇರಲಿಲ್ಲ. ಬೆಳಗಾವಿಯ ಕನ್ನಡತನದ ಕುಟುಂಬದಲ್ಲಿಯೇ ಹುಟ್ಟಿ ಬೆಳೆದು ಮುಂಬೈನಲ್ಲಿ ತಮ್ಮ ಕನಸಿನ ಆರಂಭ ಮಾಡಿದ್ದ ಶ್ರುತಿಗೆ ಅಲ್ಲಿ ಅಗಾಧವಾದ ಪ್ರಸಿದ್ಧಿ ಸಿಕ್ಕರೂ ಕೂಡಾ ಅದೊಂದು ಕೊರಗು ಮಾತ್ರ ಅವರನ್ನು ಬೆಂಬಿಡದೆ ಕಾಡುತ್ತಿತ್ತಂತೆ. ಅದು ತಮ್ಮ ತಾಯಿಭಾಷೆಯಾದ ಕನ್ನಡ ಚಿತ್ರದ ಮೂಲಕ ನಾಯಕಿಯಾಗಿ ಅಡಿಯಿರಿಸಿ ಕನ್ನಡಿಗರನ್ನೆಲ್ಲ ತಲುಪಿಕೊಳ್ಳುವ ಹಂಬಲ!

    ಮೊದಲು ತನ್ನನ್ನು ತಾನು ಕನ್ನಡಿಗರೆಂದು ಪರಿಚಯ ಮಾಡಿಕೊಂಡು ಮತ್ತೆ ಮುಂದುವರೆಯಬೇಕು ಅಂದುಕೊಂಡಿದ್ದ ಶ್ರುತಿ ಅವರಿಗೆ ಬಿಗ್ ಬಾಸ್ ಶೋ ವರದಾನವಾಗಿದೆ. ಈ ಮೂಲಕ ಕನ್ನಡಿಗರ ಮನೆಮಗಳಂತೆ ಆಗಿಹೋಗಿರೋ ಶ್ರುತಿ ಅವರು ರಾಜ್ ಸೂರ್ಯ ಹೇಳಿದ ಲಂಡನ್ ನಲ್ಲಿ ಲಂಬೋದರ ಚಿತ್ರವನ್ನು ಪ್ರೀತಿಯಿಂದಲೇ ಒಪ್ಪಿಕೊಂಡಿದ್ದಾರಂತೆ. ಅದಕ್ಕೆ ಕಾರಣ ಗಂಭೀರವಾದ ಕಥೆ ಮತ್ತು ಮಜವಾದ ನಿರೂಪಣೆ.

    ಈ ಚಿತ್ರದ ಮೂಲಕವೇ ಶ್ರುತಿ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶ್ರುತಿ ಅವರದ್ದು ನಾನಾ ಶೇಡುಗಳಿರೋ ಪಾತ್ರವಂತೆ. ಇಲ್ಲವರು ಪ್ರತಿಯೊಂದು ವಿಚಾರವನ್ನೂ ಕೂಡಾ ಅಳೆದೂ ತೂಗಿ ಆಲೋಚಿಸಿಯೇ ಮುಂದಡಿ ಇಡುವ ಪ್ರಾಕ್ಟಿಕಲ್ ಹುಡುಗಿಯಾಗಿ ಮಿಂಚಿದ್ದಾರಂತೆ. ಇವರ ಜೋಡಿ ಲಂಬೋದರ ಪ್ರತೀ ನಿತ್ಯ ಎದ್ದೇಟಿಗೆ ದಿನಭವಿಷ್ಯ ನೋಡಿ ಅದರಂತೆಯೇ ಮುಂದುವರೆಯುವಾತ. ಅಂಥಾ ಕ್ಯಾರೆಕ್ಟರ್ ಮತ್ತು ಈ ಪ್ರಾಕ್ಟಿಕಲ್ ಹುಡುಗಿಯ ಕಾಂಬಿನೇಷನ್ನೇ ಈ ಸಿನಿಮಾದ ಪ್ರಧಾನ ಆಕರ್ಷಣೆ.

    ಈ ಚಿತ್ರದ ಮೂಲಕವೇ ತಮಗೆ ಕನ್ನಡದಲ್ಲಿ ನಾಯಕಿಯಾಗಿ ಗಟ್ಟಿ ನೆಲೆ ಕೊಡಲಿದೆ ಅನ್ನೋ ಭರವಸೆ ಶ್ರುತಿ ಪ್ರಕಾಶ್ ಅವರಿಗಿದೆ. ಲಂಬೋದರನ ಕಾರಣದಿಂದಲೇ ಇನ್ನೂ ಒಂದಷ್ಟು ಅವಕಾಶಗಳು ಅವರ ಮುಂದಿವೆ. ಆದರೆ ಈ ಚಿತ್ರ ಬಿಡುಗಡೆಯಾದ ನಂತರವೇ ಆ ಬಗ್ಗೆ ಆಲೋಚಿಸುವ ನಿರ್ಧಾರ ಶ್ರುತಿ ಅವರದ್ದು. ಈ ನಡುವೆ ಹಿಂದಿ ಸೀರಿಯಲ್ಲುಗಳ ಅವಕಾಶ ಬಂದರೂ ನಿರಾಕರಿಸುತ್ತಿರೋ ಅವರ ಪಾಲಿಗೆ ಕನ್ನಡದಲ್ಲಿಯೇ ನೆಲೆಗೊಳ್ಳೋ ಆಸೆಯಿದೆ. ಲಂಡನ್ ನಲ್ಲಿ ಲಂಬೋದರ ಸೃಷ್ಟಿಸಿರೋ ಕ್ರೇಜ್ ನೋಡಿದರೆ ಅದು ಸಾಧ್ಯವಾಗೋ ಎಲ್ಲ ಲಕ್ಷಣಗಳೂ ದಟ್ಟವಾಗಿವೆ.

  • ರಂಗಮಂದಿರಕ್ಕೆ ಬರ್ತಾರಂತೆ ಮುಗುಳುನಗೆ ಸುಂದರಿ ಆಶಿಕಾ!

    ರಂಗಮಂದಿರಕ್ಕೆ ಬರ್ತಾರಂತೆ ಮುಗುಳುನಗೆ ಸುಂದರಿ ಆಶಿಕಾ!

    ಬೆಂಗಳೂರು: ಯೋಗರಾಜಭಟ್ಟರ ಮುಗುಳು ನಗೆ ಚಿತ್ರದ ನಾಯಕಿಯರಲ್ಲೊಬ್ಬರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು ಆಶಿಕಾ ರಂಗನಾಥ್. ಆ ನಂತರ ನಟಿಸಿದ ಚಿತ್ರಗಳಲ್ಲೆಲ್ಲ ಚೆಂದಗೆ ಅಭಿನಯಿಸುತ್ತಲೇ ಬೆಳೆದು ಬಂದ ಇವರೀಗ ಬಹು ಬೇಡಿಕೆಯ ನಾಯಕಿ. ರ‍್ಯಾಂಬೋ 2 ಯಶಸ್ಸಿನ ಬಳಿಕವಂತೂ ಆ ಬೇಡಿಕೆ ಇನ್ನೂ ಹೆಚ್ಚಾಗಿದೆ. ಇಂಥಾ ಆಶಿಕಾ ಇದೀಗ ರಂಗಮಂದಿರಕ್ಕೆ ಬರುವ ಸನ್ನಾಹದಲ್ಲಿದ್ದಾರೆ!

    ಆಶಿಕಾ ರಂಗನಾಥ್ ಇದೀಗ ಬಹು ತಾರಾಗಣ ಹೊಂದಿರುವ ರಂಗಮಂದಿರ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಪ್ರವೀಣ್ ತೇಜ್, ಅನುಪಮಾ ಗೌಡ ಮತ್ತು ಶ್ರುತಿ ಪ್ರಕಾಶ್ ನಟಿಸಲಿರೋ ಈ ಚಿತ್ರದಲ್ಲಿ ಆಶಿಕಾ ಬಹು ಮುಖ್ಯವಾದ ಪಾತ್ರವೊಂದಕ್ಕ ಜೀವ ತುಂಬಲಿದ್ದಾರಂತೆ. ಈ ಚಿತ್ರದಲ್ಲಿನ ಭಿನ್ನವಾದ ಕಥೆ ಮತ್ತು ತಮ್ಮ ಪಾತ್ರದ ಸೊಗಸನ್ನು ಮೆಚ್ಚಿಕೊಂಡೇ ಆಶಿಕಾ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರಂತೆ. ರಂಗಾಯಣ ರಘು, ಅಚ್ಯುತ್ ಕುಮಾರ್, ತೆಲುಗು ನಟ ಸುಮನ್ ಮುಂತಾದವರೂ ಈ ಚಿತ್ರದಲ್ಲಿ ನಟಿಸಲಿದ್ದಾರೆ.

    ಈ ತಿಂಗಳ ಕೊನೆಯಲ್ಲಿ ಆಶಿಕಾ ರಂಗನಾಥ್ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv