Tag: Shubanshu Shukla

  • ಬೆಳಕಿನ ಕಿರಣಗಳಲ್ಲಿ ನಮ್ಮ ದೇಶ ಅದ್ಭುತ, ಬೆಂಗ್ಳೂರು, ಪುಣೆ ಮಿನುಗುತ್ತೆ – ಬಾಹ್ಯಾಕಾಶದಿಂದ ಭಾರತ ಕಂಡ ಬಗೆ ಹಂಚಿಕೊಂಡ ಶುಕ್ಲಾ

    ಬೆಳಕಿನ ಕಿರಣಗಳಲ್ಲಿ ನಮ್ಮ ದೇಶ ಅದ್ಭುತ, ಬೆಂಗ್ಳೂರು, ಪುಣೆ ಮಿನುಗುತ್ತೆ – ಬಾಹ್ಯಾಕಾಶದಿಂದ ಭಾರತ ಕಂಡ ಬಗೆ ಹಂಚಿಕೊಂಡ ಶುಕ್ಲಾ

    ನವದೆಹಲಿ: ಬೆಳಕಿನ ಕಿರಣಗಳಲ್ಲಿ ನಮ್ಮ ದೇಶ ಅದ್ಭುತವಾಗಿ ಕಾಣುತ್ತದೆ, ಬೆಂಗ್ಳೂರು, ಪುಣೆ ಮಿನುಗುತ್ತವೆ ಎಂದು ಬಾಹ್ಯಾಕಾಶದಿಂದ ಭಾರತ (India) ಹೇಗೆ ಕಾಣಿಸುತ್ತದೆ ಎಂಬ ವಿಡಿಯೋವೊಂದನ್ನು ಗಗನಯಾನಿ ಶುಭಾಂಶು ಶುಕ್ಲಾ (Shubanshu Shukla) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಬೆಳಕಿನ ಚಿತ್ತಾರದಲ್ಲಿ ಭಾರತ ಕಂಡ ಬಗೆಯನ್ನು ಶುಭಾಂಶು ಶುಕ್ಲಾ ಹಂಚಿಕೊಂಡಿದ್ದಾರೆ. ಭಾರತವು ನೈರುತ್ಯದಿಂದ ಈಶಾನ್ಯಕ್ಕೆ ಒಂದು ನಕ್ಷತ್ರ ಪುಂಜದಂತೆ ಗೋಚರಿಸುತ್ತದೆ. ಬೆಂಗಳೂರು, ಹೈದ್ರಾಬಾದ್, ಪುಣೆ ನಗರಗಳು ಆ ಪುಂಜದ ನಕ್ಷತ್ರಗಳು ಎಂದು ಬಣ್ಣಿಸಿದ್ದಾರೆ.ಇದನ್ನೂ ಓದಿ: ಪುಣೆಯ ಐತಿಹಾಸಿಕ ಶನಿವಾರ್ ವಾಡಾದಲ್ಲಿ ಮಹಿಳೆಯರಿಂದ ನಮಾಜ್ – ಗೋಮೂತ್ರದಿಂದ ಶುದ್ಧೀಕರಿಸಿದ ಬಿಜೆಪಿ ಎಂಪಿ

    ಇನ್ನೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿ ಮೃದುವಾಗಿ ಹೊಳೆಯುವ ಮೂಲಕ ತನ್ನ ಇರುವಿಕೆಯನ್ನು ತೋರಿಸುತ್ತದೆ. ಬಂಗಾಳಕೊಲ್ಲಿ ಮತ್ತು ಮಧ್ಯ ಭಾರತ ಬೆಳಕಿನ ಕಿರಣಗಳಲ್ಲಿ ಅದ್ಭುತವಾಗಿ ಕಾಣುತ್ತವೆ. ಮೋಡಗಳ ನಡುವೆ ಘರ್ಜಿಸುವ ಸಿಡಿಲು, ಮಳೆ ಜಿನುಗು ಆಹ್ಲಾದವನ್ನು ನೀಡಿದರೆ, ಉತ್ತರಕ್ಕೆ ಸಾಗುತ್ತಿದ್ದಂತೆ ಬೆಳಕಿನ ತೇಜಸ್ಸು ಮೃದುವಾಗಿ ಮೌನವಾಗಿ, ಗಂಭೀರವಾಗಿ ಕುಳಿತ ಹಿಮಾಲಯ ಗೋಚರಿಸುತ್ತದೆ.

    ಇವೆಲ್ಲವನ್ನು ನೋಡಿದಾಗ ಪ್ರಕೃತಿಯಲ್ಲಿ ಮೂಡಿಸಿದ ಈ ವಿಸ್ಮಯದ ಕಲಾಕಾರ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಈ ಭವ್ಯ ದೃಶ್ಯವನ್ನು ನೋಡುವಾಗ ನಿಮ್ಮ ಮುಖದಲ್ಲಿ ನಸುನಗು ಬರದೇ ಇರಲು ಸಾಧ್ಯವಿಲ್ಲ. ಇದು ಭೂಮಿಯ ಮೇಲಿನ ದೀಪಾವಳಿ ಅಲ್ಲ ಭೂಮಿಯ ದೀಪಾವಳಿ ಎಂದು ಎಲ್ಲರಿಗೂ ದೀಪಾವಳಿ ಶುಭಾಶಯ ಕೋರಿದ್ದಾರೆ.ಇದನ್ನೂ ಓದಿ: ಶ್ರೀರಾಮ ಘನತೆಯ ಸಂಕೇತ, ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ – ದೀಪಾವಳಿಗೆ ದೇಶವಾಸಿಗಳಿಗೆ ಪತ್ರ ಬರೆದ ಮೋದಿ

  • ತವರೂರು ಲಕ್ನೋದಲ್ಲಿ ಶುಭಾಂಶು ಶುಕ್ಲಾಗೆ ಭರ್ಜರಿ ಸ್ವಾಗತ

    ತವರೂರು ಲಕ್ನೋದಲ್ಲಿ ಶುಭಾಂಶು ಶುಕ್ಲಾಗೆ ಭರ್ಜರಿ ಸ್ವಾಗತ

    – 63,000 ವಿದ್ಯಾರ್ಥಿಗಳಿಂದ ವಿಜಯಯಾತ್ರೆ

    ಲಕ್ನೋ: ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ (Shubanshu Shukla) ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ (Lucknow) ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು.

    ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ (Lucknow Airport) ಶುಭಾಂಶು ಶುಕ್ಲಾ ಅವರು ಕಲಿತ ಹಳೆಯ ಶಾಲೆ ಸಿಟಿ ಮಾಂಟೆಸ್ಸರಿಯ (City Montessori) ವಿದ್ಯಾರ್ಥಿಗಳು ಸ್ವಾಗತಿಸಿದರು. ಇದೇ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬ್ರಜೇಶ್ ಪಾಠಕ್ (Brajesh Pathak) ಗೌರಪೂರ್ವಕವಾಗಿ ಸ್ವಾಗತಿಸಿದರು. ನಿಲ್ದಾಣದಲ್ಲಿ ಶುಭಾಂಶು ಕುಟುಂಬಸ್ಥರು ಸೇರಿದಂತೆ ಲಕ್ನೋದ ಜನರು ಸಂಭ್ರಮದಲ್ಲಿ ವಿಜಯ ಘೋಷಣೆಗಳನ್ನು ಕೂಗಿದರು.ಇದನ್ನೂ ಓದಿ: ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

    ಬಳಿಕ ಸಿಟಿ ಮಾಂಟೆಸ್ಸರಿ ಶಾಲೆಯ 63,000 ವಿದ್ಯಾರ್ಥಿಗಳು ವಿಮಾನ ನಿಲ್ದಾಣದಿಂದ ಜಿ20 ಚೌಕ್‌ವರೆಗೆ ವಿಜಯಯಾತ್ರೆ ನಡೆಸಿದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಯುಪಿ ಡಿಸಿಎಂ ಪಾಠಕ್ ಮಾತನಾಡಿ, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ನಮ್ಮೂರಿನ ಹೆಮ್ಮೆಯ ಪುತ್ರನನ್ನು ಸ್ವಾಗತಿಸಲು ನಮಗೆ ನಿಜಕ್ಕೂ ತುಂಬಾ ಹೆಮ್ಮೆ ಎನಿಸುತ್ತದೆ. ಶುಭಾಂಶು ಶುಕ್ಲಾ ಇಡೀ ಜಗತ್ತಿಗೆ ಹೊಸ ಮಾರ್ಗವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಮೂಲಕ ಶುಭಾಂಶು ಯುವಕರಿಗೆ ಸ್ಫೂರ್ತಿಯಾಗಲಿದ್ದಾರೆ ಎಂದರು.

    ರೋಡ್ ಶೋ ವೇಳೆ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಾರಿಸುತ್ತಾ ಹೆಮ್ಮೆಯಿಂದ ಘೋಷಣೆ ಕೂಗಿದರು. ಜೊತೆಗೆ ನಗರದಾದ್ಯಂತ ಶುಭಾಂಶು ಅವರ ಪೋಸ್ಟರ್‌ಗಳು ರಾರಾಜಿಸುತ್ತಿದ್ದವು.ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

  • ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ನವದೆಹಲಿ: ನಮ್ಮ ನೆಲದಿಂದಲೇ ಒಬ್ಬರು, ನಾವೇ ತಯಾರಿಸಿದ ಕ್ಯಾಪ್ಸೂಲ್‌ನಲ್ಲಿ ಕುಳಿತು, ನಮ್ಮದೇ ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಪ್ರಯಾಣಿಸುವ ಹಂತ ಸಮೀಪದಲ್ಲಿದೆ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ (Shubanshu Shukla) ಹೇಳಿದ್ದಾರೆ.ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಯೋಜನೆಗಳ ಬಗ್ಗೆ ಅನುಭವವನ್ನು ಹಂಚಿಕೊಂಡಿದ್ದಾರೆ. ಆಕ್ಸಿಯಮ್-4 ಯೋಜನೆಯೂ ಭಾರತ ಕೈಗೊಳ್ಳುತ್ತಿರುವ ಗಗನಯಾನ ಯೋಜನೆಗೆ ನೆರವಾಗಿದೆ. ಕಳೆದ ಒಂದು ವರ್ಷದಿಂದ ಬಾಹ್ಯಾಕಾಶ ಯಾನಕ್ಕಾಗಿ ಸಾಕಷ್ಟು ತರಬೇತಿ ಪಡೆದಿದ್ದೇನೆ ಎಂದರು. ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು. ಬಾಹ್ಯಾಕಾಶದಲ್ಲಿನ ಅನುಭವವು ನೆಲದ ಮೇಲೆ ಕಲಿಯುವುದಕ್ಕಿಂತಲೂ ಬಹಳ ಭಿನ್ನವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಬಾಹ್ಯಾಕಾಶದ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಭಾರತ ಸರ್ಕಾರ, ಇಸ್ರೋ, ಹಾಗೂ ಸಂಶೋಧಕರಿಗೆ ಧನ್ಯವಾದ. ಇದೇ ವೇಳೆ ಭಾರತದಲ್ಲಿ ಬೆಳೆಯುತ್ತಿರುವ ಬಾಹ್ಯಾಕಾಶ ಸಾಮರ್ಥ್ಯಗಳನ್ನು ಎತ್ತಿ ತೋರಿಸಿದರು. ಆಕ್ಸಿಯಮ್-4 ಕಾರ್ಯಾಚರಣೆಯ ಒಳನೋಟಗಳನ್ನು ದೇಶದ ಜನತೆ ಮುಂದೆ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

  • ಪ್ರಧಾನಿ ಮೋದಿ ಭೇಟಿಯಾದ ಶುಭಾಂಶು ಶುಕ್ಲಾ

    ಪ್ರಧಾನಿ ಮೋದಿ ಭೇಟಿಯಾದ ಶುಭಾಂಶು ಶುಕ್ಲಾ

    ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿ ಮರಳಿದ್ದ ಭಾರತೀಯ ವಾಯುಪಡೆಯ ಪೈಲಟ್, ಗಗನಯಾತ್ರಿ ಶುಭಾಂಶು ಶುಕ್ಲಾ ಇವತ್ತು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.ಇದನ್ನೂ ಓದಿ: Haveri | ಮಾದಕ ವಸ್ತು ಮಾರಾಟ – ನಾಲ್ವರು ಅರೆಸ್ಟ್

    ಪ್ರಧಾನಿ ನಿವಾಸದಲ್ಲಿ ಮೋದಿಯವರು ಶುಭಾಂಶು ಶುಕ್ಲಾರನ್ನು ಆಲಿಂಗಿಸಿ ಬರಮಾಡಿಕೊಂಡರು. ಈ ವೇಳೆ ಶುಕ್ಲಾ ಮೋದಿಯವರಿಗೆ ತಾವು ಬಾಹ್ಯಾಕಾಶಕ್ಕೆ ಕೊಂಡೊಯ್ದಿದ್ದ ತ್ರಿವರ್ಣ ಧ್ವಜವನ್ನು ಉಡುಗೊರೆಯಾಗಿ ನೀಡಿದರು. ಜೊತೆಗೆ ತಮ್ಮ ಬಾಹ್ಯಾಕಾಶ ಯಾನದ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಮೋದಿ, ಶುಕ್ಲಾ ಅವರ ಸಾಧನೆಗಳನ್ನು ಮಾತ್ರವಲ್ಲದೇ, ಭೂಮಿಯಾಚೆಗೆ ಕನಸು ಕಾಣಲು ಯುವಪೀಳಿಗೆಯನ್ನು ಪ್ರೇರೇಪಿಸಿದ್ದಕ್ಕಾಗಿ ಶ್ಲಾಘಿಸಿದರು.

    ಇನ್ನೂ ಸೋಮವಾರ ಸಂಸತ್ತಿನಲ್ಲಿ ಶುಭಾಂಶು ಶುಕ್ಲಾ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಲೋಕಸಭೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಶುಕ್ಲಾ ಸಾಧನೆಯನ್ನು ಬಣ್ಣಿಸಿ, 2040ರಲ್ಲಿ ಭಾರತದ ಗಗನಯಾನಿ ಚಂದ್ರನ ಮೇಲೆ ಇಳಿಯಲಿದ್ದಾರೆ ಎಂದು ಹೇಳಿದರು. ಇತ್ತ ಎಕ್ಸ್ನಲ್ಲಿ ಶಶಿ ತರೂರ್ ಅವರು ಶುಕ್ಲಾ ಸಾಧನೆಯನ್ನು ಕೊಂಡಾಡಿದ್ದಾರೆ.ಇದನ್ನೂ ಓದಿ: ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

  • ಭೂಮಿಗೆ ಮರಳಿದ ಶುಕ್ಲಾಗೆ ಪತ್ನಿ, ಪುತ್ರನಿಂದ ಅಪ್ಪುಗೆಯ ಸ್ವಾಗತ

    ಭೂಮಿಗೆ ಮರಳಿದ ಶುಕ್ಲಾಗೆ ಪತ್ನಿ, ಪುತ್ರನಿಂದ ಅಪ್ಪುಗೆಯ ಸ್ವಾಗತ

    ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿ ಭೂಮಿಗೆ ಮರಳಿರುವ ಶುಭಾಂಶು ಶುಕ್ಲಾ (Shubanshu Shukla) ಅವರನ್ನು ಪತ್ನಿ ಹಾಗೂ ಪುತ್ರ ಅಪ್ಪುಗೆಯ ಮೂಲಕ ಸ್ವಾಗತ ಕೋರಿದ್ದಾರೆ.

    18 ದಿನಗಳ ಬಾಹ್ಯಾಕಾಶ ವಾಸದ ನಂತರ ಟೆಕ್ಸಾಸ್‌ನ (Texas) ಹೂಸ್ಟನ್‌ನಲ್ಲಿ (Houston) ಶುಭಾಂಶು ಶುಕ್ಲಾ ಅವರು ತಮ್ಮ ಪತ್ನಿ ಕಾಮ್ನಾ (Kamna) ಹಾಗೂ ಪುತ್ರ ಕಿಯಾಶ್ (Kiyas) ಅವರನ್ನು ಭೇಟಿಯಾದರು. ಎರಡು ತಿಂಗಳ ಬಳಿಕ ಶುಕ್ಲಾ ಅವರು ತಮ್ಮ ಕುಟುಂಬಸ್ಥರನ್ನು ಭೇಟಿಯಾಗಿದ್ದು, ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಕಿರಣ್ ರಾಜ್‌ಗೆ ನಾಯಕಿಯಾದ ಉಡಾಳ ಹುಡುಗಿ ಹೃತಿಕಾ

    ಪೋಸ್ಟ್‌ನಲ್ಲಿ, ಇಷ್ಟು ದಿನಗಳ ಬಳಿಕ ಭೂಮಿಗೆ ಹಿಂತಿರುಗಿ ನನ್ನ ಕುಟುಂಬವನ್ನು ಬಿಗಿದಪ್ಪಿಕೊಂಡಿದ್ದು, ನನ್ನ ಮನೆಯನ್ನೇ ನೋಡಿದಂತೆ ಭಾಸವಾಯಿತು. ಬಾಹ್ಯಾಕಾಶದಲ್ಲಿನ ಹಾರಾಟ ಎಷ್ಟು ಅದ್ಭುತವೋ, ಹಾಗೆಯೇ ಬಹಳ ದಿನಗಳ ನಂತರ ನಮ್ಮ ಪ್ರೀತಿ ಪಾತ್ರರನ್ನು ನೋಡುವುದು ಅಷ್ಟೇ ಅದ್ಭುತ. ಬಹುದಿನಗಳ ಬಳಿಕ ನಿಮ್ಮ ಪ್ರೀತಿಪಾತ್ರರನ್ನು ನೋಡಿದಾಗಲೇ ಅವರು ನಿಮಗೆಷ್ಟು ಮುಖ್ಯ ಎನ್ನುವುದು ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಮಂಗಳವಾರ (ಜು.15) ) ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

     

    View this post on Instagram

     

    A post shared by Shubhanshu Shukla (@gagan.shux)

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.ಇದನ್ನೂ ಓದಿ: Uttara Kannada | ಮೊಬೈಲ್ ನೋಡಬೇಡ ಎಂದಿದ್ದಕ್ಕೆ 13ರ ಬಾಲಕ ಆತ್ಮಹತ್ಯೆ

  • ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದಾರೆ. ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಶುಭಾಂಶು ಶುಕ್ಲಾ ಕೈಬೀಸಿದರು.

    ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಕ್ಯಾಲಿಫೋರ್ನಿಯಾ (California) ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಯಾಷ್‌ ಡೌನ್ ಮಾಡಲಾಯಿತು. ಬಳಿಕ ಕ್ಯಾಪ್ಸುಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್ ಎಕ್ಸ್ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕೈಹಿಡಿದು ಕರೆದುಕೊಂಡು ಹೋದರು. ಈ ವೇಳೆ ಎರಡನೇಯದಾಗಿ ಹೊರಬಂದ ಶುಭಾಂಶು ಶುಕ್ಲಾ ನಗುಮುಖದಿಂದ ಕೈಬೀಸಿ ಸಂತೋಷ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಕ್ಯಾಪ್ಸುಲ್‌ನಿಂದ ಹೊರಬಂದ ಬಳಿಕ ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ. ಇನ್ನೂ ಯಶಸ್ವಿ ಲ್ಯಾಂಡಿಂಗ್ ಬಳಿಕ ಶುಭಾಂಶು ಶುಕ್ಲಾ ಕುಟುಂಬಸ್ಥರು ಸಂಭ್ರಮಿಸಿದ್ದಾರೆ.

    ಪ್ರಕ್ರಿಯೆ ಹೇಗಿತ್ತು?
    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದರು.ಇದನ್ನೂ ಓದಿ: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಕೇಸ್‌ – ಪರಸ್ಪರ ವಿಚ್ಛೇದನಕ್ಕೆ ಮುಂದಾದ ದಂಪತಿ

  • ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದು, ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಬಂದಿಳಿದಿದ್ದಾರೆ.

    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಸ್ಪ್ಲ್ಯಾಷ್‌ ಡೌನ್ ಯಶಸ್ವಿಯಾಗಿದ್ದು, ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.ಇದನ್ನೂ ಓದಿ: ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

    ಕ್ಯಾಪ್ಸುಲ್ ಲ್ಯಾಂಡ್ ಆಗುವ ಮುನ್ನ ಅದರ ವೇಗ ನಿಯಂತ್ರಿಸಿ ಪ್ಯಾರಾಚೂಟ್ ಮೂಲಕ ಸಮುದ್ರದಲ್ಲಿ ಸ್ಪ್ಲ್ಯಾಷ್‌ ಡೌನ್ ಮಾಡಲಾಯಿತು. ಕ್ಯಾಪ್ಸುಲ್ ಲ್ಯಾಂಡ್ ಆಗಿ 2 ಗಂಟೆಗಳ ಅದನ್ನು ಓಪನ್ ಮಾಡುವುದಿಲ್ಲ. ಆನಂತರ ಸ್ಟ್ರೇಚ್ಚರ್‌ನಲ್ಲಿ ಮಲಗಿಸಿ ಕರೆತಂದು ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿವೆ.

    ಟಚ್‌ಡೌನ್ ಪ್ರಕ್ರಿಯೆ ಹೇಗಾಯ್ತು?
    ಕ್ರ‍್ಯೂ ಡ್ರ‍್ಯಾಗನ್ ಕ್ಯಾಪ್ಸೂಲ್ ಫ್ಲೋರಿಡಾದ ಸಮುದ್ರದ ಮೇಲೆ ಟಚ್‌ಡೌನ್ ಆಗಿದೆ. ಆಕಾಶದಿಂದ ವೇಗವಾಗಿ ಬರುವ ಕ್ಯಾಪ್ಸೂಲ್ ನಿಧಾನವಾಗಿ ಲ್ಯಾಂಡ್ ಆಯ್ತು. ಭೂಮಿ ಪ್ರವೇಶದ ಬಳಿಕ ಕ್ಯಾಪ್ಸೂಲ್‌ನಲ್ಲಿರುವ 4 ಪ್ಯಾರಾಚೂಟ್‌ಗಳು ತೆರೆದುಕೊಂಡಿತ್ತು. ಈ ಪ್ಯಾರಾಚೂಟ್‌ಗಳು ಕ್ಯಾಪ್ಸೂಲ್ ವೇಗವನ್ನು ತಗ್ಗಿಸಿತ್ತು. ವೇಗ ತಗ್ಗಿದಂತೆ ಕ್ಯಾಪ್ಸೂಲ್ ನಿಧನವಾಗಿ ಸಮುದ್ರದಲ್ಲಿ ಟಚ್‌ಡೌನ್ ಆಯ್ತು.

    ನಂತರ ವಿಶೇಷ ದೋಣಿಯಲ್ಲಿ ಸ್ಪೇಸ್ ಎಕ್ಸ್ ಸಿಬ್ಬಂದಿ ನೌಕೆಯನ್ನು ರೋಪ್ ಬಳಸಿ ಹತ್ತಿರದಲ್ಲೇ ಇದ್ದ ದೊಡ್ಡ ಬೋಟ್ ಬಳಿ ತಂದರು. ಈ ನೌಕೆಯನ್ನು ಕ್ರೇನ್ ಬಳಸಿ ಬೋಟ್ ಒಳಗಡೆ ಇಡಲಾಯಿತು. ಬೋಟ್‌ ಒಳಗಡೆ ಇಟ್ಟ ನಂತರ ಕ್ಯಾಪ್ಸೂಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್‌ ಎಕ್ಸ್‌ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕರೆದೊಯ್ಯಲಾಯಿತು. ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

  • ISSನಿಂದ ಅನ್‌ಡಾಕಿಂಗ್ ಯಶಸ್ವಿ: ಭುವಿಯತ್ತ ಶುಕ್ಲಾ, ಮಂಗಳವಾರ ಮಧ್ಯಾಹ್ನ ಕ್ಯಾಲಿಫೋರ್ನಿಯಾ ತೀರಕ್ಕೆ ವಾಪಸ್

    ISSನಿಂದ ಅನ್‌ಡಾಕಿಂಗ್ ಯಶಸ್ವಿ: ಭುವಿಯತ್ತ ಶುಕ್ಲಾ, ಮಂಗಳವಾರ ಮಧ್ಯಾಹ್ನ ಕ್ಯಾಲಿಫೋರ್ನಿಯಾ ತೀರಕ್ಕೆ ವಾಪಸ್

    ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (International Space Station) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗುತ್ತಿದ್ದಾರೆ.

    ಜೂ.25ರಂದು ಆಕ್ಸಿಯಂ-4 (Axiom-4) ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿವೆ.ಇದನ್ನೂ ಓದಿ:ಸಿಎಂಗೆ ಆಹ್ವಾನ ಕೊಡೋ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ನಿತಿನ್ ಗಡ್ಕರಿ

    ಸದ್ಯ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಮರಳುತ್ತಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿದೆ. ಒಟ್ಟು 22.5 ಗಂಟೆಗಳ ಕಾಲ ಪ್ರಯಾಣ ಬೆಳೆಸಲಿದ್ದು, ನಾಳೆ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಬಂದಿಳಿಯಲಿದ್ದಾರೆ.

    ಕ್ಯಾಪ್ಸುಲ್ ಲ್ಯಾಂಡ್ ಆಗುವ ಮುನ್ನ ಅದರ ವೇಗ ನಿಯಂತ್ರಿಸಿ ಪ್ಯಾರಾಚೂಟ್ ಮೂಲಕ ಸಮುದ್ರದಲ್ಲಿ ಸಾಫ್ಟ್ಲ್ಯಾಂಡ್ ಮಾಡಲಾಗುತ್ತದೆ. ಕ್ಯಾಪ್ಸುಲ್ ಲ್ಯಾಂಡ್ ಆಗಿ 2 ಗಂಟೆಗಳ ಅದನ್ನು ಓಪನ್ ಮಾಡುವುದಿಲ್ಲ. ಆನಂತರ ಸ್ಟೆçಚ್ಚರ್‌ನಲ್ಲಿ ಮಲಗಿಸಿ ಕರೆತಂದು ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ.

    ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.ಇದನ್ನೂ ಓದಿ: ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್

  • ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

    ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

    ನವದೆಹಲಿ: ಗಗನಯಾದ ಭಾಗವಾದ ಆಕ್ಸಿಯಮ್ 4 ಬಾಹ್ಯಕಾಶ ಪ್ರಯೋಗದ ಎಲ್ಲಾ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಮಂಗಳವಾರ ಶುಭಾಂಶು ಶುಕ್ಲಾ (Shubhanshu Shukla) ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ.

    ಸೋಮವಾರ ಸಂಜೆ 4:35ಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (IIS) ಅನ್‌ಡಾಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು ನಾಳೆ ಮಧ್ಯಾಹ್ನ 2:25ಕ್ಕೆ ಡ್ರ‍್ಯಾಗನ್‌ಗೆ ಪ್ರವೇಶಿಸಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಗನಯಾತ್ರಿಗಳು ಕ್ಯಾಲಿಫೋರ್ನಿಯಾದ ಕಡಲತೀರಕ್ಕೆ ಬಂದಿಳಿಯಲಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

    ಜೂನ್ 25ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರ ಮತ್ತು ಡ್ರ‍್ಯಾಗನ್ ಬಾಹ್ಯಾಕಾಶ ನೌಕೆ ಅಂತರರಾಷ್ಟ್ರೀಯ ಸ್ಪಾದಲ್ಲಿ ಡಾಕ್ ಮಾಡಲಾಗಿತ್ತು. ಶುಕ್ಲಾ ಜೊತೆ ಇತರ ಮೂವರು ಸಿಬ್ಬಂದಿಯಾದ ಪೆಗ್ಗಿ ವಿಟ್ಸನ್, ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಟಿಬೋರ್ಕಾಪು ಭೂಮಿಗೆ ವಾಪಸ್ ಆಗಲಿದ್ದಾರೆ.

  • ಬಾಹ್ಯಾಕಾಶದಲ್ಲಿ ಮೊಳಕೆ ಒಡೆಯಲಿವೆ ಧಾರವಾಡ ಕೃಷಿ ವಿವಿಯ ಮೆಂತೆ, ಹೆಸರು ಕಾಳು!

    ಬಾಹ್ಯಾಕಾಶದಲ್ಲಿ ಮೊಳಕೆ ಒಡೆಯಲಿವೆ ಧಾರವಾಡ ಕೃಷಿ ವಿವಿಯ ಮೆಂತೆ, ಹೆಸರು ಕಾಳು!

    – ಭೂಮಿಗೆ ಮರಳಿದ  ಬಳಿಕ ಸಂಶೋಧನೆ

    ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೆಸರು ಮತ್ತು ಮೆಂತೆ ಬೀಜಗಳನ್ನು ಆಕ್ಸಿಯಂ-4 ಬಾಹ್ಯಾಕಾಶ ಯೋಜನೆಗಾಗಿ (Axiom Mission 4) ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ರವಾನಿಸಲಾಗಿದೆ.

    ಬಾಹ್ಯಾಕಾಶದಲ್ಲಿ ಸಲಾಡ್ ಬೀಜಗಳ ಮೊಳಕೆ ಗಗನಯಾತ್ರಿಗಳ ಆಹಾರ ಪೋಷಣೆ ಸಂಶೋಧನೆ ನಿಟ್ಟಿನಲ್ಲಿ ಪರೀಕ್ಷಾರ್ಥವಾಗಿ ರವಾನಿಸಲಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ (Dharwad Agricultural University) ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ ‌ನೀಡಿದ್ದಾರೆ. ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಿದೆ – ಅಂತರಿಕ್ಷ ಪ್ರಯಾಣದ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

    ಏನಿದು ಸಂಶೋಧನೆ?
    ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಈ ಬೀಜಗಳಿಗೆ ನೀರು ಹಾಕುತ್ತಾರೆ. ಎರಡರಿಂದ ನಾಲ್ಕು ದಿನಗಳಲ್ಲಿ ಇವು ಮೊಳಕೆಯೊಡೆಯುತ್ತವೆ. ಮೊಳಕೆ ಕಾಳುಗಳನ್ನು ಬಾಹ್ಯಾಕಾಶದಲ್ಲಿ ಶೈತ್ಯ ಘಟಕದಲ್ಲಿ ಇಟ್ಟು ನಂತರ ಭೂಮಿಗೆ ತರಲಾಗುತ್ತದೆ.

    ಮೊಳಕೆ ಕಾಳುಗಳನ್ನು ವಾಪಸ್ ಭೂಮಿಗೆ ತಂದ ನಂತರ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲಾಗುತ್ತದೆ. ಮೊಳಕೆ ಪ್ರಮಾಣ, ಅವುಗಳ ಪೋಷಕಾಂಶ ಗುಣಮಟ್ಟ, ಫೈಟೋ-ಹಾರ್ಮೋನ್‌ಗಳ ಚಟುವಟಿಕೆ ಹಾಗೂ ಜೀವಸೂತ್ರ (ಟ್ರಾನ್ಸ್ ಕ್ರಿಪ್ಲೋಮ್) ಪರೀಕ್ಷಿಸಿ ವಿಶ್ಲೇಷಿಸಲಾಗುವುದು, ಅಲ್ಲದೇ ಮೊಳಕೆಯ ಮೇಲೆ ಮೈಕ್ರೋಬಿಯಲ್ ಬೆಳವಣಿಗೆ ಅಧ್ಯಯನ ಮಾಡಲಾಗುತ್ತದೆ.

    ಈ ಸಂಶೋಧನಯು ಭವಿಷ್ಯದಲ್ಲಿ ಅಂತರಿಕ್ಷ-ಯಾನದಲ್ಲಿ ಭಾರತೀಯರ ಆಹಾರದ ಭಾಗವಾಗಬಲ್ಲ ಆರೋಗ್ಯಕರ ಸಲಾಡ್ ತರಕಾರಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮೊಳಕೆಯೊಡೆಯುವ ಬೀಜಗಳನ್ನು ಬೆಳೆಸಲು ಕೇವಲ ಕಂಟೇನರ್, ನೀರು ಇದ್ದರೆ ಸಾಕು. ಮೊಳಕೆ ಕಾಳುಗಳು ಪೋಷಕಾಂಶ ಭರಿತವಾಗಿರುತ್ತವೆ.

    ಗಗನಯಾನ ಮಿಷನ್ ಭವಿಷ್ಯದ ಯಾತ್ರಿಕರ ಆಹಾರ ಗಮನದಲ್ಲಿಟ್ಟುಕೊಂಡು ಈ ಸಂಶೋಧನೆಗೆ ಹೆಸರು, ಮೆಂತೆ ಬೀಜಗಳ ಮೊಳಕೆ ಅಧ್ಯಯನ ಆಯ್ಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಜೈ ಹಿಂದ್‌.. ಜೈ ಭಾರತ್..‌: ಬಾಹ್ಯಾಕಾಶದಿಂದಲೇ ಶುಭಾಂಶು ಶುಕ್ಲಾ ಮೊದಲ ಸಂದೇಶ

    ಮೆಂತೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಎಲುಬಿನ ಆರೋಗ್ಯ ಉತ್ತಮಗೊಳಿಸುತ್ತದೆ. ಮೂತ್ರಕೋಶದಲ್ಲಿ ಕಲ್ಲು ರಚನೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯಸಂಬಂಧಿ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗಗನಯಾತ್ರಿಗಳ ಆರೋಗ್ಯದ ದೃಷ್ಟಿಯಿಂದ ಸಂಶೋಧನೆಗೆ ಈ ಬೀಜಗಳನ್ನು ಅಯ್ಕೆ ಮಾಡಲಾಗಿದೆ ಎಂದು ಪ್ರೊ.ಪಿ.ಎಲ್.ಪಾಟೀಲ ವಿವರಿಸಿದರು.