Tag: Shubman Gill

  • ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ಮುಂಬೈ: ರೋಹಿತ್ ಶರ್ಮಾ (Rohit Sharma) ಬಳಿಕ ಮೂರು ಮಾದರಿಯ ಕ್ರಿಕೆಟ್‌ಗೆ ಟೀಂ ಇಂಡಿಯಾದ ಕ್ಯಾಪ್ಟನ್‌ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಂತೆ ಕಾಣುತ್ತಿದೆ. ರೋಹಿತ್‌ ನಿವೃತ್ತಿ ಬಳಿಕ 25 ವರ್ಷದ ಯುವ ಆಟಗಾರ ಶುಭಮನ್‌ ಗಿಲ್‌ (Shubman Gill) ಅವರನ್ನೇ ಎಲ್ಲಾ ಮಾದರಿಯ ನಾಯಕನನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ರೋಹಿತ್‌, ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಚಾರಗಳು ಸೋಷಿಯಲ್‌ ಮೀಡಿಯಾದಲ್ಲಿ ಪದೇ ಪದೇ ಸದ್ದು ಮಾಡುತ್ತಿವೆ. ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ (ODI Series) ಬಳಿಕ ಇಬ್ಬರು ದಿಗ್ಗಜರು ನಿವೃತ್ತಿ ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ರೋಹಿತ್‌ ಬಳಿಕ ಆಲ್‌ಫಾರ್ಮ್ಯಾಟ್‌ (ಎಲ್ಲಾ ಮಾದರಿ)ಗೆ ಗಿಲ್‌ ಅವರನ್ನು ನಾಯಕನನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸೆ.9ರಿಂದ ಶುರುವಾಗಲಿರುವ ಟಿ20 ಏಷ್ಯಾ ಕಪ್‌ ಟೂರ್ನಿ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

    ವರದಿಗಳ ಪ್ರಕಾರ, ಶುಭಮನ್‌ ಗಿಲ್‌ ಅವರನ್ನು ಏಕದಿನ ನಾಯಕನನ್ನಾಗಿ ನೇಮಿಸುವ ಬಗ್ಗೆ ಯಾವುದೇ ಸಂಶಯ ಇಲ್ಲ. ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಗೆ ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ (BCCI) ಹೇಳಿದೆ. ರೋಹಿತ್‌ ಶರ್ಮಾ ಸದ್ಯ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದು, 2027ರ ಏಕದಿನ ವಿಶ್ವಕಪ್‌ ಗೆದ್ದು ತರುವ ಉತ್ಸಾಹದಲ್ಲಿದ್ದಾರೆ. ಆದ್ರೆ ಅಷ್ಟೊತ್ತಿಗೆ ಅವರ ವಯಸ್ಸು 40 ಸಮೀಪಿಸಲಿದೆ. ಹೀಗಾಗಿ ಆಯ್ಕೆ ಸಮಿತಿ ಅವರ ವಯೋಮಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೈಬಿಡುವ ನಿರ್ಧಾರದಲ್ಲಿದೆ. ಹೀಗಾಗಿ ಶುಭಮನ್‌ ಗಿಲ್‌ ಅವರನ್ನು ಆಸೀಸ್‌ ಸರಣಿ ಬಳಿಕ ಏಕದಿನ ನಾಯಕನನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.

    ಎಲ್ಲಾ ಫಾರ್ಮ್ಯಾಟ್‌ಗೆ ಒಬ್ಬನೇ ನಾಯಕ?
    ಸದ್ಯ ಬಿಸಿಸಿಐ ಆಯ್ಕೆ ಸಮಿತಿಯು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಒಬ್ಬನೇ ನಾಯಕನನ್ನ ಹುಡುಕುತ್ತಿದೆ. ಅದಕ್ಕಾಗಿ ಏಷ್ಯಾಕಪ್‌ ಬಳಿಕ 34 ವರ್ಷದ ಸೂರ್ಯಕುಮಾರ್‌ ಯಾದವ್‌ ಅವರನ್ನ ಟಿ20 ನಾಯಕತ್ವದಿಂದ ಬದಲಾಯಿಸುವ ಚಿಂತನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಟಿ20I ಉಪನಾಯಕನ್ನಾಗಿ ನೇಮಿಸಲಾಗಿದೆ.

    ಈಗಾಗಲೇ ಟೆಸ್ಟ್‌ ಕ್ಯಾಪ್ಟನ್‌ ಆಗಿ ಸೈ ಎನಿಸಿಕೊಂಡಿರುವ ಶುಭಮನ್‌ ಗಿಲ್‌ ಅಕ್ಟೋಬರ್‌ ಬಳಿಕ ಏಕದಿನ ನಾಯಕನೂ ಆಗಲಿದ್ದಾರೆ. ಜೊತೆಗೆ 2026ರ ಟಿ0 ವಿಶ್ವಕಪ್‌ ಬಳಿಕ ಟಿ20 ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದರೆ ಬಿಸಿಸಿಐ ಈ ಕುರಿತು ಎಲ್ಲಿಯೂ ಅಧಿಕೃತ ಹೇಳಿಕೆ ನೀಡಿಲ್ಲ.

    ಆಸೀಸ್‌ ಸರಣಿ ಬಳಿಕ ರೋಹಿತ್- ಕೊಹ್ಲಿಗೆ ವಿದಾಯ?
    ಇನ್ನೂ ಮುಂದಿನ ಅಕ್ಟೋಬರ್‌ 19ರಿಂದ ಅ.25ರ ವರೆಗೆ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿ ಬಳಿಕ ದಿಗ್ಗಜರಾದ ವಿರಾಟ್‌, ರೋಹಿತ್‌ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ವಿದಾಯ ಹೇಳಿರುವ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.

  • ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಮುಂಬೈ: 2025ರ ಟಿ20 ಏಷ್ಯಾಕಪ್‌ ಟೂರ್ನಿಗೆ ಇನ್ನೂ ಕೆಲ ದಿನಗಳು ಬಾಕಿಯಿರುವಾಗಲೇ ಟೀಂ ಇಂಡಿಯಾ (Team India) ಬಿಗ್‌ ಶಾಕ್‌ ಎದುರಾಗಿದೆ. ಈಗಾಗಲೇ ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದಿರುವ ಉಪನಾಯಕ ಶುಭಮನ್‌ ಗಿಲ್‌ (Shubman Gill) ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

    ಮುಂದಿನ ಸೆ.9 ರಿಂದ ಸೆ.28ರ ವರೆಗೆ ಯುಎಇನಲ್ಲಿ ಟಿ20 ಏಷ್ಯಾಕಪ್‌ (Asia Cup 2025) ಟೂರ್ನಿ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿರುವ ಗಿಲ್‌, ಪ್ರಸ್ತುತ ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಫಿಸಿಕಲ್‌ ಫಿಟ್ನೆಸ್‌ ತಜ್ಞರು ಹೇಳುವಂತೆ ಗಿಲ್‌ ಅವರು ಏಷ್ಯಾಕಪ್‌ ಟೂರ್ನಿಗೆ ಫಿಟ್‌ ಆಗುವ ನಿರೀಕ್ಷೆಯಿದೆ. ಆದ್ರೆ ಇದೇ ಆಗಸ್ಟ್‌ 28ರಿಂದ ಸೆ.15ರ ವರೆಗೆ ನಡೆಯಲಿರುವ ಪ್ರತಿಷ್ಠಿತ ದುಲೀಪ್‌ ಟ್ರೋಫಿಯಿಂದ (Duleep Trophy 2025) ಹೊರಗುಳಿಯುವ ಸಾಧ್ಯತೆಗಳಿಗೆ ಎಂದು ವರದಿಯಾಗಿದೆ. ಇದನ್ನೂ ಓದಿ: Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಏಷ್ಯಾಕಪ್‌ಗೆ ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್‌ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್. ಇದನ್ನೂ ಓದಿ: ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    ಶ್ರೇಯಸ್‌ಗೆ ಸಿಗುತ್ತಾ ಚಾನ್ಸ್‌?
    ಶುಭಮನ್‌ ಗಿಲ್‌ ಏಷ್ಯಾಕಪ್‌ ಟೂರ್ನಿ ಹೊತ್ತಿಗೆ ಸುಧಾರಣೆ ಆಗದಿದ್ದರೇ ಶ್ರೇಯಸ್‌ ಅಯ್ಯರ್‌ ಅವರಿಗೆ ಚಾನ್ಸ್‌ ಸಿಗಬಹುದಾ ಎನ್ನುವ ಪ್ರಶ್ನೆಯೂ ಎದ್ದಿದೆ. ಏಕೆಂದ್ರೆ ಸೂರ್ಯಕುಮಾರ್‌ ಯಾದವ್‌ ಕೂಡ ಶ್ರೇಯಸ್‌ ಅಯ್ಯರ್‌ ಆಯ್ಕೆ ಬಗ್ಗೆ ಆಸಕ್ತಿ ಹೊಂದಿದ್ದರು. ಆದ್ರೆ ಉತ್ತರ ವಲಯದ ಕ್ರಿಕೆಟ್‌ ಕಮಿಟಿ ಗಿಲ್‌ ಸ್ಥಾನಕ್ಕೆ ಸಂಭಾವ್ಯ ಆಟಗಾರರನ್ನಾಗಿ ಶುಭಮನ್‌ ರೊಹಿಲ್ಲಾ ಅಥವಾ ಅಂಕಿತ್‌ ಕುಮಾರ್‌ ರಣಜಿ ಆಟಗಾರರನ್ನ ಸೂಚಿಸಿದೆ ಎಂದು ತಿಳಿದುಬಂದಿದೆ.

    ಶ್ರೇಯಸ್‌ ಕ್ಯಾಪ್ಟನ್‌ ಎಂಬ ವದಂತಿ
    ಎರಡು ದಿನಗಳ ಹಿಂದಷ್ಟೇ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಒನ್‌ಡೇ ಕ್ಯಾಪ್ಟನ್ ಆಗಿ ಮಾಡಲಾಗುತ್ತದೆ ಅನ್ನೋ ವದಂತಿಗೆ ಬಿಸಿಸಿಐ ತೆರೆ ಎಳೆದಿತ್ತು. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ನಾಯಕನ ಆಯ್ಕೆ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಇದರಲ್ಲಿ ಶ್ರೇಯಸ್ ತಪ್ಪು ಏನೂ ಇಲ್ಲ, ನಮ್ಮದೂ ತಪ್ಪಿಲ್ಲ. ಟೂರ್ನಿಗೆ 15 ಜನರನ್ನಷ್ಟೇ ಆಯ್ಕೆ ಮಾಡಲು ಅವಕಾಶವಿದೆ. ಅವಕಾಶ ಬರುವವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದ್ದರು. ಇದೀಗ ಗಿಲ್‌ ಅನಾರೋಗ್ಯದ ಬೆನ್ನಲ್ಲೇ ಅಯ್ಯರ್‌ ಅವರತ್ತ ಅಭಿಮಾನಿಗಳ ಚಿತ್ತ ಹರಿದಿದೆ.

  • Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಮುಂಬೈ: ಏಷ್ಯಾ ಕಪ್‌ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ. ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ.

    ಮಂಗಳವಾರ ಮಧ್ಯಾಹ್ನ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಘೋಷಿಸಲಾಯಿತು. ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ. ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್‌ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್‌ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.

    ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್.

    ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್. ಇದನ್ನೂ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

  • ಒಂದೇ ಶತಕ, ಹಲವು ದಾಖಲೆ – ಡಾನ್‌ ಬ್ರಾಡ್ಮನ್, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌

    ಒಂದೇ ಶತಕ, ಹಲವು ದಾಖಲೆ – ಡಾನ್‌ ಬ್ರಾಡ್ಮನ್, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌

    ಮ್ಯಾಂಚೆಸ್ಟರ್‌: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಯುವ ನಾಯಕ ಶುಭಮನ್‌ ಗಿಲ್ (Shubman Gill) ‌ಮತ್ತೊಂದು ಶತಕ ಸಿಡಿಸುವ ಮೂಲಕ ಡಾನ್‌ ಬ್ರಾಡ್ಮನ್ (Don Bradman), ಸುನೀಲ್‌ ಗವಾಸ್ಕರ್‌, ರನ್‌ ಮಿಷನ್‌ ಕೊಹ್ಲಿ (Virat Kohli) ಅವರಂತಹ ದಿಗ್ಗಜರ ದಾಖಲೆಗಳನ್ನ ಸರಿಗಟ್ಟಿದ್ದಾರೆ.

    ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟದ ಹೊತ್ತಿಗೆ ಒಟ್ಟು 238 ಎಸೆತಗಳನ್ನು ಎದುರಿಸಿದ ಗಿಲ್‌ 12 ಬೌಂಡರಿ ಸಹಿತ 103 ರನ್‌ ಚಚ್ಚಿದರು. ಇದರಿಂದ ಹಲವು ದಾಖಲೆಗಳನ್ನ ನುಚ್ಚುನೂರು ಮಾಡಿ, ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿಕೊಂಡಿದ್ದಾರೆ. ಇದನ್ನೂ ಓದಿ: Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    2ನೇ ಭಾರತೀಯನೆಂಬ ಹೆಗ್ಗಳಿಕೆ
    ಟೆಸ್ಟ್‌ ಕ್ರಿಕೆಟ್‌ನಲ್ಲಿ 9ನೇ ಶತಕ ಸಿಡಿಸಿರುವ ಶುಭಮನ್‌ ಗಿಲ್‌ ವೃತ್ತಿಜೀವನದ 18ನೇ ಅಂತಾರಾಷ್ಟ್ರೀಯ ಶತಕ ದಾಖಲಿಸಿದ್ದಾರೆ. ಈ ಮೂಲಕ 35 ವರ್ಷಗಳ ಬಳಿಕ ಮ್ಯಾಂಚೆಸ್ಟರ್‌ನಲ್ಲಿ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ವಿಶೇಷ ಸಾಧನೆಗೂ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಧನುಷ್ ಬಾಬುಗೆ ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ

    ಡಾನ್‌, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌
    ಟೀಂ ಇಂಡಿಯಾದ 37ನೇ ಟೆಸ್ಟ್ ಕ್ಯಾಪ್ಟನ್‌ ಆಗಿರುವ ಶುಭಮನ್‌ ಗಿಲ್‌ ಚೊಚ್ಚಲ ಸರಣಿಯಲ್ಲೇ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಇಂದು ಸಿಡಿಸಿದ ಶತಕದೊಂದಿಗೆ ಈ ಸರಣಿಯಲ್ಲಿ ಒಟ್ಟು 4 ಶತಕ, ಒಂದು ದ್ವಿಶತಕವನ್ನ ದಾಖಲಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಇದರೊಂದಿಗೆ ಟೆಸ್ಟ್‌ ಸರಣಿಯೊಂದರಲ್ಲಿ ನಾಯಕನಾಗಿ ಅತಿಹೆಚ್ಚು ಶತಕ ಸಿಡಿಸಿದ ಅಗ್ರ ಬ್ಯಾಟರ್‌ಗಳ ಎಲೈಟ್‌ ಲಿಸ್ಟ್‌ ಸೇರಿಕೊಂಡಿದ್ದಾರೆ. 1947-48ರಲ್ಲಿ ಡಾನ್‌ ಬ್ರಾಡ್ಮನ್ ಮೊದಲ ಬಾರಿಗೆ 4 ಶತಕ ಸಿಡಿಸಿದ ಸಾಧನೆ ಮಾಡಿದ್ದರು. ಆ ಬಳಿಕ 1978-79ರಲ್ಲಿ ಟೀಂ ಇಂಡಿಯಾದ ಸುನೀಲ್‌ ಗವಾಸ್ಕರ್‌ ಈ ಸಾಧನೆ ಮಾಡಿದ್ದರು. ಇದಾದ 46 ವರ್ಷಗಳ ಬಳಿಕ ಶುಭಮನ್‌ ಗಿಲ್‌ ಸರಣಿಯೊಂದರಲ್ಲಿ 4‌ ಶತಕದ ಸಾಧನೆ ಮಾಡಿದ್ದಾರೆ.

    ಶತಕ ಸಿಡಿಸಿದ 3ನೇ ಭಾರತೀಯ
    ಅಲ್ಲದೇ ಟೆಸ್ಟ್‌ ಕ್ರಿಕೆಟ್‌ನ ಸರಣಿಯೊಂದರಲ್ಲಿ 4 ಶತಕ ಸಿಡಿಸಿದ ಟೀಂ ಇಂಡಿಯಾದ 3ನೇ ಆಟಗಾರನಾಗಿಯೂ ಹೊರಹೊಮ್ಮಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ ವಿರಾಟ್‌ ಕೊಹ್ಲಿ ಈ ಸಾಧನೆ ಮಾಡಿದ ಮೊದಲ ಎರಡು ಸ್ಥಾನಗಳಲ್ಲಿದ್ದಾರೆ.

  • ಗಿಲ್‌, ರಾಹುಲ್‌ ಶತಕದ ಜೊತೆಯಾಟ – ಭಾರತಕ್ಕೆ 137 ರನ್‌ಗಳ ಹಿನ್ನಡೆ, ಡ್ರಾನತ್ತ ತಿರುಗುತ್ತಾ ಪಂದ್ಯ?

    ಗಿಲ್‌, ರಾಹುಲ್‌ ಶತಕದ ಜೊತೆಯಾಟ – ಭಾರತಕ್ಕೆ 137 ರನ್‌ಗಳ ಹಿನ್ನಡೆ, ಡ್ರಾನತ್ತ ತಿರುಗುತ್ತಾ ಪಂದ್ಯ?

    ಮ್ಯಾಚೆಂಸ್ಟರ್‌: ಇಲ್ಲಿ ನಡೆಯುತ್ತಿರುವ 4ನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾ ಆಂಗ್ಲರಿಗೆ ತಿರುಗೇಟು ನೀಡುವ ಪ್ರಯತ್ನ ಮಾಡಿತು. 4ನೇ ದಿನದ ಕೊನೇವರೆಗೂ ವಿಕೆಟ್‌ ಬಿಟ್ಟುಕೊಡದ ಕೆ.ಎಲ್‌ ರಾಹುಲ್‌, ಶುಭಮನ್‌ ಗಿಲ್‌ (Shubman Gill) ಜೋಡಿ 377 ಎಸೆತಗಳಲ್ಲಿ 174 ರನ್‌ಗಳ ಜೊತೆಯಾಟ ನೀಡಿ ವಿಕೆಟ್‌ ಉಳಿಸಿಕೊಂಡಿದೆ. ಆದಾಗ್ಯೂ ಇಂಗ್ಲೆಂಡ್‌ 137 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಇಂಗ್ಲೆಂಡ್‌ ಜೋ ರೂಟ್‌, ಬೆನ್‌ಸ್ಟೋಕ್ಸ್‌ ಅವರ ಅಮೋಘ ಶತಕ,‌ ಬೆನ್‌ ಡಕೆಟ್‌, ಓಲಿ ಪೋಪ್‌ ಅವರ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 669 ರನ್‌ ಕಲೆಹಾಕಿತ್ತು.

    3ನೇ ದಿನದಾಟದಲ್ಲಿ 134 ಎಸೆತಗಳಲ್ಲಿ 77 ರನ್‌ ಗಳಿಸಿದ್ದ ನಾಯಕ ಬೆನ್‌ ಸ್ಟೋಕ್ಸ್‌ (Ben Stokes) 4ನೇ ದಿನ ಕಣಕ್ಕಿಳಿದು ಸ್ಪೋಟಕ ಬ್ಯಾಟಿಂಗ್‌ ನಡೆಸಿದರು. 198 ಎಸೆತಗಳಲ್ಲಿ 141 ರನ್‌ (3 ಸಿಕ್ಸರ್‌, 11 ಬೌಂಡರಿ) ಚಚ್ಚಿದರು ಇದರೊಂದಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 7,000 ರನ್‌ ಪೂರೈಸಿದ ಸಾಧನೆಯನ್ನೂ ಮಾಡಿದರು. ಇದರೊಂದಿಗೆ ಬ್ರ್ಯಾಂಡನ್‌ ಕಾರ್ಸ್‌ (47 ರನ್‌), ಲಿಯಾಮ್‌ ದಾವ್ಸನ್‌ (26 ರನ್‌) ಅವರ ಸಣ್ಣ ಕೊಡುಗೆ ತಂಡದ ಮೊತ್ತ ಹೆಚ್ಚಿಸುವಲ್ಲಿ ಸಹಕಾರಿಯಾಯಿತು.

    ಕೈಕೊಟ್ಟ ಸುದರ್ಶನ್‌, ಜೈಸ್ವಾಲ್‌
    ಇನ್ನೂ 4ನೇ ದಿನ ತನ್ನ 2ನೇ ಇನ್ನಿಂಗ್ಸ್‌ ಆರಂಭಿಸಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಯಶಸ್ವಿ ಜೈಸ್ವಾಲ್‌, ಸಾಯಿ ಸುದರ್ಶನ್‌ ಶೂನ್ಯ ಸುತ್ತಿ ಪೆವಿಲಿಯನ್‌ಗೆ ಮರಳಿದ್ರು. ಬಳಿಕ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಕೆ.ಎಲ್‌ ರಾಹುಲ್‌ (KL Rahul ) 87 ರನ್‌ (210 ಎಸೆತ, 8 ಬೌಂಡರಿ) ಗಳಿಸಿದ್ರೆ, ನಾಯಕ ಶುಭಮನ್‌ ಗಿಲ್‌ 78 ರನ್‌ (167 ಎಸೆತ, 10 ಬೌಂಡರಿ) ಗಳಿಸಿದರು. ಭಾನುವಾರ ಈ ಜೋಡಿ 5ನೇ ದಿನದ ಕ್ರೀಸ್‌ ಆರಂಭಿಸಲಿದೆ.

  • Ind vs Eng 4th Test | ಇಂದಿನಿಂದ ಪಂದ್ಯ ಶುರು – ಸರಣಿ ಗೆಲ್ಲುವ ತವಕದಲ್ಲಿ ಇಂಗ್ಲೆಂಡ್‌, ತಿರುಗೇಟು ನೀಡಲು ಭಾರತ ಸಜ್ಜು

    Ind vs Eng 4th Test | ಇಂದಿನಿಂದ ಪಂದ್ಯ ಶುರು – ಸರಣಿ ಗೆಲ್ಲುವ ತವಕದಲ್ಲಿ ಇಂಗ್ಲೆಂಡ್‌, ತಿರುಗೇಟು ನೀಡಲು ಭಾರತ ಸಜ್ಜು

    ಮ್ಯಾಂಚೆಸ್ಟರ್: ಇಂಗ್ಲೆಂಡ್ ಮತ್ತು ಭಾರತ (Eng vs Ind) ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಮ್ಯಾಂಚೆಸ್ಟರ್‌ (Manchester) ಕ್ರೀಡಾಂಗಣ ಸಜ್ಜಾಗಿದ್ದು, ಉಭಯ ತಂಡಗಳು ಹಲವು ಬದಲಾವಣೆ ಮಾಡಿಕೊಂಡಿವೆ.

    ಹೌದು. ಇದೀಗ ನಡೆಯುತ್ತಿರುವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ (Anderson–Tendulkar Trophy) ಆತಿಥೇಯ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್‌ ಸರಣಿ ಗೆಲ್ಲಲು ಇನ್ನೊಂದು ಗೆಲುವಿನ ಅಗತ್ಯವಿದೆ. ಆದ್ರೆ ಭಾರತ ಸರಣಿ ಗೆಲ್ಲಲು ಇನ್ನುಳಿದ ಎರಡೂ ಪಂದ್ಯಗಳನ್ನೂ ಗೆಲ್ಲಬೇಕಾದ ಅನಿವಾರ್ಯತೆ ಇದೆ. 4ನೇ ಟೆಸ್ಟ್ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಪಂದ್ಯ ಶುರುವಾಗಲಿದೆ. ಇದನ್ನೂ ಓದಿ: WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ

    ಬೌಲಿಂಗ್‌ ಪಡೆಗೆ ಬುಮ್ರಾ ಸಾರಥ್ಯ
    ಮ್ಯಾಂಚೆಸ್ಟರ್‌ ಪಂದ್ಯಕ್ಕೆ ಟೀಂ ಇಂಡಿಯಾದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. 3ನೇ ಟೆಸ್ಟ್ (Test Cricket) ಪಂದ್ಯದ ಬಳಿಕ ನಡೆದ ಅಭ್ಯಾಸದ ವೇಳೆ ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷ್‌ದೀಪ್‌ ಸಿಂಗ್‌ ಅವರ ಕೈಗೆ ಗಾಯವಾಗಿದ್ದು, ಹೀಗಾಗಿ ಮ್ಯಾಂಚೆಸ್ಟರ್​ ಟೆಸ್ಟ್ ಪಂದ್ಯದಲ್ಲೂ ಅವರು ಕಾಣಿಸಿಕೊಳ್ಳುವುದಿಲ್ಲ. ಇನ್ನೂ ಎಜ್‌ಬಾಸ್ಟನ್‌ನಲ್ಲಿ ಐತಿಹಾಸಿಕ ಗೆಲುವಿಗೆ ಕಾರಣವಾಗಿದ್ದ ವೇಗಿ ಆಕಾಶ್ ದೀಪ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಾರ್ಡ್ಸ್​ ಟೆಸ್ಟ್ ಪಂದ್ಯದ 4ನೇ ದಿನದಾಟದಂದು ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 8 ಓವರ್​ಗಳನ್ನು ಮಾತ್ರ ಎಸೆದಿದ್ದರು ಎಂದು ಟೀಮ್ ಇಂಡಿಯಾ ನಾಯಕ ಶುಭ​ಮನ್ ಗಿಲ್ ತಿಳಿಸಿದ್ದಾರೆ. ಹೀಗಾಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) ಅವರು ಟೀಂ ಇಂಡಿಯಾ ಬೌಲಿಂಗ್‌ ಪಡೆಯನ್ನ ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೇ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ (Nitish Kumar Reddy) ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಜಿಮ್​ನಲ್ಲಿನ ತರಬೇತಿ ವೇಳೆ ಅವರ ಮೊಣಕಾಲಿಗೆ ಗಾಯವಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಅವರು ಹೊರಬಿದ್ದಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ನಿತೀಶ್ ಕುಮಾರ್ ಬದಲಿಗೆ ಅನ್ಶುಲ್‌ ಕಾಂಬೋಜ್‌ ಅವರನ್ನು ಕಣಕ್ಕಿಳಿಸಲಿದೆ ಭಾರತ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಾಕಿಗೆ ಮತ್ತೆ ಶಾಕ್‌, ಹಿಂದೆ ಸರಿದ ಟೀಂ ಇಂಡಿಯಾ – ಇಂದಿನ ಪಂದ್ಯವೇ ರದ್ದು

    8 ವರ್ಷಗಳ ಬಳಿಕ ಸ್ಪಿನ್ನರ್‌ ಕಣಕ್ಕಿಳಿಸಲಿದೆ ಆಂಗ್ಲ ಪಡೆ
    ಇನ್ನೂ ಸರಣಿ ಗೆಲ್ಲುವ ತವಕದಲ್ಲಿರುವ ಇಂಗ್ಲೆಂಡ್‌ ತಂಡ ಪ್ಲೇಯಿಂಗ್‌ 11 ಬಳಗವನ್ನ ಪ್ರಕಟಿಸಿದ್ದು, ಒಂದೇ ಒಂದು ಬದಲಾವಣೆ ಮಾಡಿಕೊಂಡಿದೆ. ಗಾಯಗೊಂಡಿರುವ ಸ್ಪಿನ್ನರ್ ಶೋಯೆಬ್ ಬಶೀರ್ ಬದಲಿಗೆ ಲಿಯಾಮ್ ಡಾಸನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಬರೋಬ್ಬರಿ 8 ವರ್ಷಗಳ ಬಳಿಕ ಡಾಸನ್ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಡಲಿದ್ದಾರೆ. ಇದನ್ನೂ ಓದಿ:BCCI ಅಕೌಂಟ್‌ನಲ್ಲಿದೆ 30,000 ಕೋಟಿ ಹಣ – IPLನಿಂದಲೇ ಅತೀ ಹೆಚ್ಚು ಗಳಿಕೆ! 

    ಬಶೀರ್‌ಗೆ ಏನಾಗಿತ್ತು?
    ಶೋಯೆಬ್ ಬಶೀರ್ ಅವರು ಲಾರ್ಡ್ಸ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ವೇಳೆ ಎಡಗೈ ಬೆರಳಿಗೆ ಗಾಯ ಮಾಡಿಕೊಂಡರು. ಭಾರತದ ಎಡಗೈ ಬ್ಯಾಟರ್ ರವೀಂದ್ರ ಜಡೇಜಾ ಅವರ ಬಲವಾದ ಹೊಡೆತ ತಡೆಯಲು ಹೋಗಿ ಬೆರಳು ಮುರಿತಕ್ಕೆ ಒಳಗಾಯಿತು. ಹೀಗಾಗಿ ಅವರು ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಗಿ ಬಂತು. ನಂತರ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಬಶೀರ್ 3ನೇ ಟೆಸ್ಟ್ ಪಂದ್ಯದಲ್ಲಿ ಕೊನೆಯ ವಿಕೆಟ್ ಪಡೆದು ಇಂಗ್ಲೆಂಡ್‌ಗೆ 22 ರನ್‌ಗಳ ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು.

  • ಲಾರ್ಡ್‌ ಜಡ್ಡು ಏಕಾಂಗಿ ಹೋರಾಟ ವ್ಯರ್ಥ – ಇಂಗ್ಲೆಂಡ್‌ಗೆ 22ರನ್‌ಗಳ ರೋಚಕ ಗೆಲುವು; 2-1ರಲ್ಲಿ ಸರಣಿ ಮುನ್ನಡೆ

    ಲಾರ್ಡ್‌ ಜಡ್ಡು ಏಕಾಂಗಿ ಹೋರಾಟ ವ್ಯರ್ಥ – ಇಂಗ್ಲೆಂಡ್‌ಗೆ 22ರನ್‌ಗಳ ರೋಚಕ ಗೆಲುವು; 2-1ರಲ್ಲಿ ಸರಣಿ ಮುನ್ನಡೆ

    ಲಾರ್ಡ್ಸ್‌: ಐತಿಹಾಸಿಕ ಲಾರ್ಡ್ಸ್‌ (Lords) ಅಂಗಳದಲ್ಲಿ ಆಂಗ್ಲರ ವಿರುದ್ಧ ನಡೆಸಿದ ರವೀಂದ್ರ ಜಡೇಜಾ (Ravindra Jadeja) ಹೋರಾಟ ವ್ಯರ್ಥವಾಗಿದೆ. ರೋಚಕ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ (England) ತಂಡವು ಭಾರತದ ವಿರುದ್ಧ 22 ರನ್‌ಗಳ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

    ಲಾರ್ಡ್ಸ್‌ನಲ್ಲಿ ನಡೆದ 3ನೇ ಟೆಸ್ಟ್‌ ಪಂದ್ಯದಲ್ಲಿ 193 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 4ನೇ ದಿನದ ಅಂತ್ಯಕ್ಕೆ 58 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಕೊನೆಯ ದಿನದಾಟದಲ್ಲಿ ಭಾರತದ ಗೆಲುವಿಗೆ 135 ರನ್‌ ಬೇಕಿತ್ತು. ಗೆಲ್ಲುವ ಉತ್ಸಾಹದೊಂದಿಗೆ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಯುವಪಡೆಗೆ ಇಂಗ್ಲೆಂಡ್‌ (England) ಬೌಲರ್‌ಗಳು ಮರ್ಮಾಘಾತ ನೀಡಿದರು. ಅಗ್ರ ಬ್ಯಾಟರ್‌ಗಳು ಕೈಕೊಟ್ಟ ಪರಿಣಾಮ ರವೀಂದ್ರ ಜಡೇಜಾ ಅಜೇಯ ಹೋರಾಟದ ಹೊರತಾಗಿಯೂ ಭಾರತ 170 ರನ್‌ಗಳಿಗೆ ಆಲೌಟ್‌ ಆಯಿತು. ಇಂಗ್ಲೆಂಡ್‌ 22 ರನ್‌ಗಳ ಗೆಲುವು ಸಾಧಿಸಿತು.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಉತ್ತಮ ಪ್ರದರ್ಶನ ನೀಡುವ ಭರವಸೆಯೊಂದಿಗೆ ಕಣಕ್ಕಿಳಿದಿದ್ದ ರಿಷಭ್‌ ಪಂತ್‌ 12 ಎಸೆತಗಳಲ್ಲಿ 9ರನ್‌ ಗಳಿಸಿದ್ದಾಗ ಜೋಫ್ರಾ ಆರ್ಚರ್‌ಗೆ ಕ್ಲೀನ್‌ ಬೌಲ್ಡ್‌ ಆದರು. ಈ ಬೆನ್ನಲ್ಲೇ ಕೆ.ಎಲ್‌ ರಾಹುಲ್‌ ಕೂಡ 58 ಎಸೆತಗಳಲ್ಲಿ 39 ರನ್‌ ಗಳಿಸಿ ಔಟಾದರು. ಅಷ್ಟೇ ಅಲ್ಲ, ಮೊದಲ ಇನ್ನಿಂಗ್ಸ್‌ನಲ್ಲಿ ಕ್ರೀಸ್‌ನಲ್ಲಿ ಭದ್ರವಾಗಿ ನಿಂತಿದ್ದ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಕೇವಲ 4 ಎಸೆಗಳಲ್ಲಿ ಡಕ್‌ಔಟ್‌ ಆಗಿ ಪೆವಿಲಿಯನ್‌ಗೆ ಮರಳಿದ್ರು. ಇಲ್ಲಿಂದ ಪಂದ್ಯದ ಗತಿಯೇ ಬದಲಾಯಿತು.

    ಒಂದಂಥದಲ್ಲಿ 82 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡಿದ್ದ ಭಾರತ 100 ರನ್‌ ಗಳಿಸುವುದೂ ಕಷ್ಟವೆಂದೇ ಭಾವಿಸಲಾಗಿತ್ತು. ಆದ್ರೆ ನಿತೀಶ್‌ ರೆಡ್ಡಿ, ರವೀಂದ್ರ ಜಡೇಜಾ ಅವರ ಸಣ್ಣ ಜೊತೆಯಾಟ ಟೀಂ ಇಂಡಿಯಾ ಗೆಲುವಿನ ಭರವಸೆ ಮೂಡಿಸಿತ್ತು. ಹೀಗೆನ್ನುತ್ತಿರುವಾಗಲೇ 53 ಎಸೆತಗಳಲ್ಲಿ 13 ರನ್‌ ಗಳಿಸಿದ್ದ ನಿತೀಶ್‌ ರೆಡ್ಡಿ ಔಟಾದರು. ಬಳಿಕ ಕಣಕ್ಕಿಳಿದ ಬುಮ್ರಾ 5 ರನ್‌ ಗಳಿಸಿದರೂ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ್ದ ಜಡೇಜಾಗೆ ಉತ್ತಮ ಸಾಥ್‌ ನೀಡಿದ್ದರು. ಈ ವೇಳೆ ಜಡೇಜಾ ಉತ್ತಮ ಬ್ಯಾಟಿಂಗ್‌ ಕೂಡ ನಡೆಸುತ್ತಿದ್ದರು. ಆದ್ರೆ 54 ಎಸೆತಗಳನ್ನು ಎದುರಿಸಿದ ಬುಮ್ರಾ ಬೆನ್‌ಸ್ಟೋಕ್ಸ್‌ ಬೌಲಿಂಗ್‌ನಲ್ಲಿ ಕ್ಯಾಚ್‌ ನೀಡಿ ಔಟಾದರು. ಬಳಿಕ ಬಂದ ಸಿರಾಜ್‌ (4 ರನ್‌) ಕೂಡ ಜಡ್ಡುಗೆ ಉತ್ತಮ ಸಾಥ್‌ ನೀಡಿದ್ದರು. ಆದ್ರೆ ಶೋಯೆಬ್‌ ಬಶೀರ್‌ ಅವರ ಒಂದು ಎಸೆತವು ಬ್ಯಾಟ್‌ಗೆ ತಗುಲಿದ ಬಳಿಕ ಸ್ವಿಂಗ್‌ ಆಗಿ ವಿಕೆಟ್‌ಗೆ ತಗುಲಿತು ಈ ವೇಳೆ ಸಿರಾಜ್‌ ಚೆಂಡನ್ನು ತಡೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಜಡ್ಡು ಹೋರಾಟವೂ ವ್ಯರ್ಥವಾಯಿತು.

    ಕೊನೆಯವರೆಗೂ ಹೋರಾಡಿದ ಜಡೇಜಾ 181 ಎಸೆತಗಳಲ್ಲಿ 61‌ ರನ್‌ (ಸಿಕ್ಸ್‌, 4 ಬೌಂಡರಿ) ಗಳಿಸಿದ್ರೆ, ಕೆ.ಎಲ್‌ ರಾಹುಲ್‌ 39 ರನ್‌, ಕರುಣ್‌ ನಾಯರ್‌ 14 ರನ್‌, ಶುಭಮನ್‌ ಗಿಲ್‌ 6 ರನ್‌, ಆಕಾಶ್‌ ದೀಪ್‌ 1 ರನ್‌, ಪಂತ್‌ 9 ರನ್‌, ನಿತೀಶ್‌ ರೆಡ್ಡಿ 13 ರನ್‌, ಬುಮ್ರಾ 5 ರನ್‌, ಸಿರಾಜ್‌ 4 ರನ್‌ ಗಳಿಸಿದ್ರೆ, ಜೈಸ್ವಾಲ್‌, ವಾಷಿಂಗ್ಟನ್‌ ಸುಂದರ್‌ ಶೂನ್ಯ ಸುತ್ತಿದರು.

    ಇನ್ನೂ 2ನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ನಡೆಸಿದ್ದ ಇಂಗ್ಲೆಂಡ್‌ 62.1 ಓವರ್‌ಗಳಲ್ಲಿ 192 ರನ್‌ ಗಳಿಸಿತ್ತು.

  • ಗಿಲ್‌ ಬದಲು ಆಕಾಶ್‌ ದೀಪ್‌ಗೆ ಪಂದ್ಯಶ್ರೇಷ್ಠ ನೀಡಬೇಕಿತ್ತು: ಅಶ್ವಿನ್‌

    ಗಿಲ್‌ ಬದಲು ಆಕಾಶ್‌ ದೀಪ್‌ಗೆ ಪಂದ್ಯಶ್ರೇಷ್ಠ ನೀಡಬೇಕಿತ್ತು: ಅಶ್ವಿನ್‌

    ಚೆನ್ನೈ: ಇಂಗ್ಲೆಂಡ್‌ (England) ವಿರುದ್ಧ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಶುಭಮನ್‌ ಗಿಲ್‌ ಬದಲು ಆಕಾಶ್‌ ದೀಪ್‌ಗೆ (Akash Deep) ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು ಟೀಂ ಇಂಡಿಯಾದ ಮಾಜಿ ಆಟಗಾರ ಆರ್‌ ಅಶ್ವಿನ್‌ (R Ashwin) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಟೆಸ್ಟ್‌ ಕ್ರಿಕೆಟ್‌ ಜಯದ ಬಗ್ಗೆ ಯೂಟ್ಯೂಬ್‌ ಚಾನೆಲ್‌ ಜೊತೆ ಮಾತನಾಡಿದ ಅವರು, ಎಜ್ಬಾಸ್ಟನ್‌ ಮೈದಾನ ಬೌಲರ್‌ಗಳಿಗೆ ನೆರವು ನೀಡಲಿಲ್ಲ. ಅದು ಬ್ಯಾಟಿಂಗ್‌ ಸ್ನೇಹಿ ಪಿಚ್‌ ಆಗಿತ್ತು. ಇಂಗ್ಲೆಂಡ್‌ ಬೌಲರ್‌ಗಳು ವಿಕೆಟ್‌ ಪಡೆಯಲು ಹೆಣಗಾಡುತ್ತಿದ್ದರು. ಕಠಿಣ ಪಿಚ್‌ ಆಗಿದ್ದರೂ ಆಕಾಶ್‌ ದೀಪ್‌ 10 ವಿಕೆಟ್‌ ಪಡೆದಿದ್ದರು. ಹೀಗಾಗಿ ಅಕಾಶ್‌ದೀಪ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿ (Player of the Match) ನೀಡಬಹುದಿತ್ತು ಎಂದಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಎರಡನೇ ಟೆಸ್ಟ್‌ ಪಂದ್ಯದಲ್ಲಿ ಬುಮ್ರಾ ಬದಲು ಆಕಾಶ್‌ ದೀಪ್‌ ಕಣಕ್ಕೆ ಇಳಿದಿದ್ದರು. ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ ಪಡೆದಿದ್ದ ಆಕಾಶ್‌ ದೀಪ್‌ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಪಡೆದಿದ್ದರು.

    ಇಂಗ್ಲೆಂಡ್‌ ವಿರುದ್ಧದ ಈ ಪಂದ್ಯವನ್ನು ಭಾರತ 336 ರನ್‌ಗಳಿಂದ ಜಯಗಳಿಸಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 269 ರನ್‌ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 161 ರನ್‌ ಹೊಡೆದ ಗಿಲ್‌ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು.

  • ಸ್ಟೋಕ್ಸ್‌ ಪಡೆಗೆ ಭಾರತ ಮಾಸ್ಟರ್‌ ಸ್ಟ್ರೋಕ್‌ – ಒಂದು ಗೆಲುವಿನಲ್ಲಿ ಹತ್ತಾರು ದಾಖಲೆಗಳ ಸುರಿಮಳೆ

    ಸ್ಟೋಕ್ಸ್‌ ಪಡೆಗೆ ಭಾರತ ಮಾಸ್ಟರ್‌ ಸ್ಟ್ರೋಕ್‌ – ಒಂದು ಗೆಲುವಿನಲ್ಲಿ ಹತ್ತಾರು ದಾಖಲೆಗಳ ಸುರಿಮಳೆ

    – ಕೊಹ್ಲಿ, ಗವಸ್ಕಾರ್‌ ಜೊತೆಗೆ ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿದ ಗಿಲ್‌
    – ಒಂದೇ ಪಂದ್ಯದಲ್ಲಿ 1,000ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ 4ನೇ ತಂಡ

    ಎಜ್‌ಬಾಸ್ಟನ್‌: ಇಂಗ್ಲೆಂಡ್‌ ವಿರುದ್ಧ ನಡೆದ 2ನೇ ಟೆಸ್ಟ್‌ ಪಂದ್ಯದಲ್ಲಿ ಯಂಗ್‌ ಕ್ಯಾಪ್ಟನ್‌ ಶುಭಮನ್‌ ಗಿಲ್‌ (Shubman Gill) ನಾಯಕತ್ವದ ಟೀಂ ಇಂಡಿಯಾ (Team India) 336 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿದೆ.

    ಮೊದಲ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ನಡೆಸಿದ್ದ ಗಿಲ್‌ ಪಡೆ ಬೌಲಿಂಗ್‌ನಲ್ಲಿ ಎದುರಾಳಿಗಳನ್ನ ಕಟ್ಟಿಹಾಕುವಲ್ಲಿ ಎಡವಿತ್ತು. ಇದರಿಂದ ಇಂಗ್ಲೆಂಡ್‌ (England) ಸುಲಭವಾಗಿ ಗೆಲುವು ಸಾಧಿಸಿತ್ತು. ಅದೇ ರೀತಿ 2ನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 407 ರನ್‌ ಬಿಟ್ಟುಕೊಟ್ಟು ಲಯ ತಪ್ಪಿದ್ದ ಗಿಲ್‌ ಪಡೆ 2ನೇ ಇನ್ನಿಂಗ್ಸ್‌ನಲ್ಲಿ ಬಿಗಿ ಹಿಡಿತ ಸಾಧಿಸಿತ್ತು. ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್‌ ದಾಳಿ ಡ್ರಾ ಮಾಡಿಕೊಳ್ಳಬೇಕೆಂಬ ಇಂಗ್ಲೆಂಡ್‌ ನಿರ್ಧಾರವನ್ನ ಬುಡಮೇಲು ಮಾಡಿತು. ಪರಿಣಾಮ ಫಿನಿಕ್ಸ್ ಹಕ್ಕಿಯಂತೆ ಕಂಬ್ಯಾಕ್ ಮಾಡಿದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿತು. ಇದರೊಂದಿಗೆ ಹಲವು ದಾಖಲೆಗಳನ್ನ ನಿರ್ಮಿಸಿತು. ಅವುಗಳ ಪಟ್ಟಿ ಇಂತಿದೆ…

    ಗಿಲ್ ಮಿಂಚು; ಭಾರತದ ಅಗ್ರ ಆಟಗಾರ
    ಒಂದೇ ಪಂದ್ಯದ 2 ಇನ್ನಿಂಗ್ಸ್ ನಲ್ಲಿ ಶುಭಮನ್ ಗಿಲ್ ಗಳಿಸಿದ 430 ರನ್‌ಗಳು ವಿಶ್ವ ಟೆಸ್ಟ್ ಪಂದ್ಯವೊಂದರ ಇತಿಹಾಸದಲ್ಲಿ 2ನೇ ಅತ್ಯಧಿಕ ರನ್‌ಗಳಾಗಿದ್ದರೆ, ಭಾರತದ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ (Test Cricket History) ಮೊದಲ ಅತ್ಯಧಿಕ ರನ್ ಎಂಬ ಕೀರ್ತಿಗೆ ಪಾತ್ರವಾಗಿದೆ. ಈ ಹಿಂದೆ ಸುನಿಲ್ ಗವಾಸ್ಕರ್ ಭಾರತ ಟೆಸ್ಟ್ ಪಂದ್ಯವೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ್ದ ದಾಖಲೆ ಬರೆದಿದ್ದರು. 1971 ರಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 344 ರನ್‌ಗಳಿಸಿದ್ದು ಭಾರತ ಆಟಗಾರನ ಶ್ರೇಷ್ಠ ಸಾಧನೆಯಾಗಿತ್ತು. ಈಗ ಶುಭಮನ್ ಗಿಲ್ ಈ ದಾಖಲೆ ಅಳಿಸಿ. ಭಾರತ ಮೊದಲ ಆಟಗಾರ, ವಿಶ್ವದ 2ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    ವಿಶ್ವದ 2ನೇ ಆಟಗಾರ
    ಇದರೊಂದಿಗೆ 1990 ರಲ್ಲಿ ಲಾರ್ಡ್ಸ್‌ನಲ್ಲಿ ಭಾರತ ವಿರುದ್ಧ ಇಂಗ್ಲೆಂಡ್‌ನ ಗ್ರಹಾಂ ಗೂಚ್‌ಗಳಿಸಿದ 456 ರನ್ ವಿಶ್ವ ಕ್ರಿಕೆಟ್ ಪಂದ್ಯ ಒಂದರ ಆಟಗಾರನ ಅತಿ ಹೆಚ್ಚು ರನ್. ಬಳಿಕ ಶುಭಮನ್ ಗಿಲ್ ಗಳಿಸಿದ 430 ರನ್ 2ನೇ ಸ್ಥಾನದಲ್ಲಿದೆ. 3ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾರ್ಕ್ ಟೈಲರ್ ಪಾಕ್ ವಿರುದ್ಧ 1998 ರಲ್ಲಿ 426 ರನ್, 4ನೇ ಸ್ಥಾನದಲ್ಲಿ ಕುಮಾರ್ ಸಂಗಕ್ಕಾರ 2014 ರಲ್ಲಿ ಬಾಂಗ್ಲಾದೇಶದ ವಿರುದ್ಧ 424 ರನ್, 5ನೇ ಸ್ಥಾನದಲ್ಲಿದ್ದಾರೆ. ಇನ್ನೂ ಇಂಗ್ಲೆಂಡ್ ವಿರುದ್ಧ 2004 ರಲ್ಲಿ ಬ್ರಯನ್ ಲಾರಾ ಕೇವಲ ಒಂದೇ ಇನ್ನಿಂಗ್ಸ್‌ನಲ್ಲಿ 00 ರನ್ ಗಳಿಸಿರೋದು ಅಗ್ರಸ್ಥಾನದಲ್ಲಿದೆ.

    ಶತಕ ವೀರರ ಎಲೈಟ್‌ಲಿಸ್ಟ್‌ಗೆ ಗಿಲ್‌
    ಇನ್ನೂ ಗಿಲ್ ಹೆಸರಿಗೆ ಮತ್ತೊಂದು ದಾಖಲೆ ಕೂಡ ಸೇರ್ಪಡೆಯಾಗಿದೆ. ಇಲ್ಲಿ ತನಕ ಒಂದೇ ಟೆಸ್ಟ್‌ನಲ್ಲಿ 9 ಬ್ಯಾಟ್ಸ್‌ಮನ್‌ಗಳು ದ್ವಿಶತಕ ಮತ್ತು ಶತಕ ದಾಖಲಿಸಿದ್ದಾರೆ. ಈ ಪಟ್ಟಿಗೆ ಗಿಲ್ ಸೇರ್ಪಡೆಯಾಗಿದ್ದಾರೆ. 1971 ರಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಪರ ಸುನಿಲ್ ಗವಾಸ್ಕರ್ ಮಾತ್ರ ಈ ಸಾಧನೆ ಮಾಡಿದ್ದರು ಮತ್ತು ಇದು ಇಂಗ್ಲೆಂಡ್ ವಿರುದ್ಧ ಮೊದಲ ಬಾರಿಗೆ. ಇದಲ್ಲದೇ, 1990 ರಲ್ಲಿ ಲಾರ್ಡ್ಸ್‌ನಲ್ಲಿ ಗೂಚ್ ನಂತರ ಇಂಗ್ಲೆಂಡ್‌ನಲ್ಲಿ ಮತ್ತು ತಂಡದ ನಾಯಕನಾಗಿ ಈ ಸಾಧನೆ ಮಾಡಿದ 2ನೇ ಆಟಗಾರ ಕೂಡ ಗಿಲ್. 1980 ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ ವಿರುದ್ಧ ಅಲನ್ ಬಾರ್ಡರ್ ಮೊದಲ ಇನ್ನಿಂಗ್ಸ್ 150 ಮತ್ತು 2ನೇ ಇನ್ನಿಂಗ್ಸ್ 153 ರನ್ ಗಳಿಸಿದ ನಂತರ, ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ 150 ಸ್ಕೋರ್‌ಗಳನ್ನು ಗಳಿಸಿದ 2ನೇ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.

    ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಪ್ರಿನ್ಸ್‌
    ನಾಯಕನಾಗಿ ಗಿಲ್ ತಮ್ಮ ಮೊದಲ 2 ಟೆಸ್ಟ್ ಪಂದ್ಯಗಳಲ್ಲಿ ಮೂರು ಶತಕಗಳನ್ನು ಗಳಿಸಿದ್ದಾರೆ. ಇದು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಜಂಟಿ ದಾಖಲೆಯಾಗಿದೆ. ವಿರಾಟ್ ಕೊಹ್ಲಿ 2014/15 ರಲ್ಲಿ ಆಸ್ಟ್ರೇಲಿಯಾದಲ್ಲಿ 3 ಶತಕ ಗಳಿಸಿದ್ದರು. ಇತರ 7 ಮಂದಿ ತಲಾ 3 ಶತಕಗಳನ್ನು ಗಳಿಸಿದ್ದಾರೆ. ವಿಜಯ್ ಹಜಾರೆ, ಜಾಕಿ ಮೆಕ್‌ಗ್ಲೆವ್, ಗ್ರೆಗ್ ಚಾಪೆಲ್, ಸುನಿಲ್ ಗವಾಸ್ಕರ್, ಅಲಸ್ಟೈರ್ ಕುಕ್, ಸ್ಟೀವನ್ ಸ್ಮಿತ್ ಮತ್ತು ಧನಂಜಯ ಡಿ ಸಿಲ್ವಾ ಈಗ ಇದೇ ದಿಗ್ಗಜರ ಸಾಲಿಗೆ ಗಿಲ್ ಕೂಡ ಸೇರ್ಪಡೆಯಾಗಿದ್ದಾರೆ.

    ಅಲ್ಲದೇ ಗಿಲ್ ಭಾರತದ ಟೆಸ್ಟ್ ತಂಡದ ನಾಯಕನಾಗಿ ತಮ್ಮ ಚೊಚ್ಚಲ ಸರಣಿಯಲ್ಲಿ ಗಳಿಸಿದ 585 ರನ್‌ಗಳ ದಾಖಲೆಯನ್ನು ಹೊಂದಿದ್ದಾರೆ. ಕೊಹ್ಲಿ ಈ ಹಿಂದೆ ಈ ದಾಖಲೆಯನ್ನು ಹೊಂದಿದ್ದರು. 2014/15 ರಲ್ಲಿ ಆಸ್ಟ್ರೇಲಿಯಾದಲ್ಲಿ ನಾಯಕನಾಗಿ ಎರಡು ಟೆಸ್ಟ್ ಪಂದ್ಯಗಳಲ್ಲಿ 449 ರನ್‌ಗಳಿಸಿದ್ದು ಮೊದಲ ನಾಯಕತ್ವದ ಸರಣಿಯಲ್ಲಿ ಗಳಿಸಿದ್ದ ಅತಿ ಹೆಚ್ಚು ರನ್ ಗಳಾಗಿತ್ತು.

    ಕೊಹ್ಲಿ, ಗವಾಸ್ಕರ್, ಅಜರುದ್ದಿನ್, ದ್ರಾವಿಡ್ ಸಾಲಿಗೆ ಗಿಲ್
    ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ 3ನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ. ಈ ಹಿಂದೆ ಗವಾಸ್ಕರ್ ವೆಸ್ಟ್ ಇಂಡೀಸ್ ವಿರುದ್ಧ 1979 ರಲ್ಲಿ, ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 2014 ರಲ್ಲಿ, 1984/85 ರಲ್ಲಿ ಮೊಹಮ್ಮದ್ ಅಜರುದ್ದೀನ್ ಮತ್ತು 2002 ಮತ್ತು 2011 ರಲ್ಲಿ ರಾಹುಲ್ ದ್ರಾವಿಡ್ ನಂತರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 3 ಶತಕಗಳನ್ನು ದಾಖಲಿಸಿದ 3ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಗಿಲ್ ಪಾತ್ರರಾಗಿದ್ದಾರೆ.

    ಅಷ್ಟೇ ಅಲ್ಲ ಈ ಟೆಸ್ಟ್‌ನಲ್ಲಿ ಗಿಲ್ ಬಾರಿಸಿದ 11 ಸಿಕ್ಸರ್‌ಗಳು ದಾಖಲೆ ಪಟ್ಟಿ ಸೇರಿವೆ. ಈ ಹಿಂದೆ ಭಾರತೀಯರಲ್ಲಿ ರೋಹಿತ್ ಶರ್ಮಾ 2019 ಸೌತ್ ಆಫ್ರಿಕಾ ವಿರುದ್ಧ 13 ಮತ್ತು 2024 ಇಂಗ್ಲೆಂಡ್ ವಿರುದ್ಧವೇ ಯಶಸ್ವಿ ಜೈಸ್ವಾಲ್ 12 ಸಿಕ್ಸ್ ಬಾರಿಸಿದ್ದರು. ಈ ಸಾಲಿಗೆ ಈಗ ಗಿಲ್ ಕೂಡ ಸೇರ್ಪಡೆಯಾಗಿದ್ದಾರೆ.

    ಒಂದೇ ಪಂದ್ಯದಲ್ಲಿ 1,000ಕ್ಕೂ ಅಧಿಕ ರನ್‌
    ಈ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತ ಗಳಿಸಿದ ರನ್ ಗಳು 1014. ಈ ರನ್‌ಗಳು ಪಂದ್ಯವೊಂದರಲ್ಲಿ 4ನೇ ಅತಿ ಹೆಚ್ಚು ರನ್‌ಗಳಾಗಿದೆ, 2003/04 ರಲ್ಲಿ ಸಿಡ್ನಿಯಲ್ಲಿ ಭಾರತ ಗಳಿಸಿದ 916 ರನ್‌ಗಳ ಹಿಂದಿನ ಅತ್ಯುತ್ತಮ ಮೊತ್ತವಾಗಿತ್ತು.

    ಒಂದೇ ಪಂದ್ಯದಲ್ಲಿ ಸಾವಿರ ರನ್ ಗಳಿಸಿದ ತಂಡಗಳು
    ಮೊದಲ ಸ್ಥಾನದಲ್ಲಿ 1930 ರಲ್ಲಿ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ವಿರುದ್ಧ ಕೆನ್ನಿಂಗ್‌ಸ್ಟನ್‌ನಲ್ಲಿ 1,121 ರನ್ ಗಳಿಸಿತ್ತು. 2ನೇ ಸ್ಥಾನದಲ್ಲಿ ಪಾಕಿಸ್ತಾನ 2006 ರಲ್ಲಿ ಭಾರತದ ವಿರುದ್ಧ ಫೈಸಲಾಬಾದ್‌ನಲ್ಲಿ ಗಳಿಸಿದ್ದ 1,078 ರನ್. 3ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಓವಲ್ ನಲ್ಲಿ 1934 ರಲ್ಲಿ ಗಳಿಸಿದ್ದ 1,028 ರನ್. 4ನೇ ಸ್ಥಾನದಲ್ಲಿ ಈಗ ಭಾರತ ಗಳಿಸಿರುವ 1,014 ರನ್ 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ 1969 ಸಿಡ್ನಿಯಲ್ಲಿ 1013 ರನ್ ಗಳಿಸಿತ್ತು.

    4 ಬಾರಿಗೆ ಇನ್ನಿಂಗ್ಸ್‌ವೊಂದರಲ್ಲಿ 400 ರನ್ ಗಳಿಸಿದ ಭಾರತ
    ಇನ್ನೂ ಈ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತ 400 ರನ್ ದಾಟಿದೆ. ಇದು ಇತಿಹಾಸದಲ್ಲಿ 4ನೇ ಬಾರಿಗೆ. ಈ ಹಿಂದೆ ಪಾಕಿಸ್ತಾನ ವಿರುದ್ಧ 2004 ಕೋಲ್ಕತ್ತಾದಲ್ಲಿ, ಶ್ರೀಲಂಕಾ ವಿರುದ್ಧ ಅಹಮದಾಬಾದ್, 2009 ರಲ್ಲಿ, ಮತ್ತು ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್, 2024 ಅವರು ಈ ಸಾಧನೆ ಮಾಡಿದ್ದರು.

    ಭಾರತ ದಾಖಲೆಗಳ ಜೊತೆಯಾಟ
    ಗಿಲ್ ಟೆಸ್ಟ್ ಪಂದ್ಯವೊಂದರಲ್ಲಿ 4 ಶತಕಗಳ ಜೊತೆಯಾಟದಲ್ಲಿ ಭಾಗಿಯಾದ 5ನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡರು, ಹನೀಫ್ ಮೊಹಮ್ಮದ್ 1958 ರಲ್ಲಿ ವಿಂಡೀಸ್ ವಿರುದ್ದ, ಇಂಗ್ಲೆಂಡ್ ನ ಗ್ರಹಾಂ ಗೂಚ್ 1990 ರಲ್ಲಿ ಭಾರತ ವಿರುದ್ದ ಲಾರ್ಡ್ಸ್ ನಲ್ಲಿ, ಮಾರ್ಕ್ ಟೇಲರ್ 1998 ರಲ್ಲಿ ಪಾಕ್ ವಿರುದ್ಧ ಮತ್ತು ಜೋ ರೂಟ್ ಪಾಕ್ ವಿರುದ್ದದ 2016 ರಲ್ಲಿ 4 ಶತಕದ ಜೊತೆಯಾಟ ಆಡುವ ಮೂಲಕ ದಾಖಲೆ ಬರೆದಿದ್ದಾರೆ.

  • ಡಿಕ್ಲೇರ್‌ ವೇಳೆ ಎಡವಟ್ಟು – ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗ್ತಾರಾ ಗಿಲ್‌?

    ಡಿಕ್ಲೇರ್‌ ವೇಳೆ ಎಡವಟ್ಟು – ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗ್ತಾರಾ ಗಿಲ್‌?

    ಮುಂಬೈ: ಇಂಗ್ಲೆಂಡ್‌ (England) ವಿರುದ್ದದ ಎರಡನೇ ಟೆಸ್ಟ್‌ ಕ್ರಿಕೆಟಿನಲ್ಲಿ ದ್ವಿಶತಕ, ಶತಕ ಸಿಡಿಸಿ ಉತ್ತಮ ಲಯದಲ್ಲಿರುವ ನಾಯಕ ಶುಭಮನ್‌ ಗಿಲ್‌ (Shubman Gill) ಡಿಕ್ಲೇರ್‌ ಮಾಡುವ ಸಂದರ್ಭದಲ್ಲಿ ಎಡವಟ್ಟು ಮಾಡಿದ್ದಕ್ಕೆ ಬಿಸಿಸಿಐ (BCCI) ಕ್ಲಾಸ್‌ ಮಾಡುವ ಸಾಧ್ಯತೆಯಿದೆ.

    ಹೌದು. ಎರಡನೇ ಇನಿಂಗ್ಸ್‌ನಲ್ಲಿ ಭಾರತ 6 ವಿಕೆಟ್‌ ನಷ್ಟಕ್ಕೆ 427 ರನ್‌ ಗಳಿಸಿದ್ದಾಗ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತು. ಡಿಕ್ಲೇರ್‌ ಮಾಡಿಕೊಳ್ಳುವ ನಿರ್ಧಾರ ಪ್ರಕಟಿಸುವಾಗ ಗಿಲ್‌ ಕಪ್ಪು ಬಣ್ಣದ ನೈಕ್‌ (Nike) ಟೀಶರ್ಟ್‌ ಧರಿಸಿದ್ದರು.

    ಅಡೀಡಸ್‌ ಕಂಪನಿ ಟೀಂ ಇಂಡಿಯಾದ ಜೆರ್ಜಿ ಪ್ರಾಯೋಜಕತ್ವವನ್ನು ಪಡೆದುಕೊಂಡಿದ್ದು ಪಂದ್ಯ ನಡೆಯುವಾಗ ಆಟಗಾರರು ಕಡ್ಡಾಯವಾಗಿ ಅಡೀಡಸ್‌ (Adidas) ಕಂಪನಿಯ ಧಿರಿಸುಗಳನ್ನು ಧರಿಸಬೇಕಾಗುತ್ತದೆ. ಆದರೆ ನಾಯಕನಾಗಿರುವ ಗಿಲ್‌ ಈ ನಿಯಮವನ್ನು ಉಲ್ಲಂಘಿಸಿದ್ದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

    2023 ರಲ್ಲಿ ಬಿಸಿಸಿಐ ಜೊತೆ ಅಡೀಡಸ್‌ 253 ಕೋಟಿ ರೂ. ಡೀಲ್‌ಗೆ ಸಹಿ ಹಾಕಿತ್ತು. ಈ ಒಪ್ಪಂದದ ಅನ್ವಯ 5 ವರ್ಷಗಳ ಕಾಲ ಅಡಿಡಾಸ್‌ ಕಂಪನಿ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಿಸಲಿದೆ. ಭಾರತದ ಪುರುಷರು, ಮಹಿಳೆಯರು ಮತ್ತು U-19 ತಂಡಗಳಿಗೆ ಜೆರ್ಸಿ, ಕಿಟ್‌ಗಳು ಮತ್ತು ಇತರ ಸರಕುಗಳನ್ನು ಅಡೀಡಸ್‌ ವಿನ್ಯಾಸಗೊಳಿಸುತ್ತದೆ ಮತ್ತು ತಯಾರಿಸುತ್ತದೆ.

    ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಬಿಸಿಸಿಐ-ಅಡೀಡಸ್ ಪಾಲುದಾರಿಕೆಯು ಪ್ರಾಯೋಜಕತ್ವ ಶುಲ್ಕ, ಸರಕುಗಳ ಮಾರಾಟದಿಂದ ಬರುವ ರಾಯಧನ ಮತ್ತು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಕಿಟ್‌ ಸೇರಿದಂತೆ ಹಲವು ಅಂಶಗಳನ್ನು ಒಳಗೊಂಡಿದೆ.

    ಒಪ್ಪಂದದ ಪ್ರಕಾರ, ಅಡೀಡಸ್‌ ಪ್ರತಿ ಪಂದ್ಯಕ್ಕೆ 75 ಲಕ್ಷ ರೂ. ಪಾವತಿಸಲಿದೆ. ಸೆಪ್ಟೆಂಬರ್ 2020 ರವರೆಗೆ ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡಿದ್ದ ನೈಕ್, ಪ್ರತಿ ಪಂದ್ಯಕ್ಕೆ 88 ಲಕ್ಷ ರೂ. ಬಿಸಿಸಿಐಗೆ ಪಾವತಿಸುತ್ತಿತ್ತು. ಮುಂದಿನ ಐದು ವರ್ಷಗಳ ಅಡೀಡಸ್‌ ಮಾರಾಟ ಮಾಡುವ ಸರಕುಗಳ ಮೇಲೆ ಬಿಸಿಸಿಐ ವರ್ಷಕ್ಕೆ 10 ಕೋಟಿ ರೂ. ರಾಯಧನವನ್ನು ಪಡೆಯಲಿದೆ.