Tag: Shweta Bachchan Nanda

  • ಮೊಮ್ಮಗಳು ಮದುವೆ ಆಗದೇ ಮಗು ಮಾಡಿಕೊಂಡರೂ ಓಕೆ: ಜಯಾ ಬಚ್ಚನ್ ಅಚ್ಚರಿ ಹೇಳಿಕೆ

    ಮೊಮ್ಮಗಳು ಮದುವೆ ಆಗದೇ ಮಗು ಮಾಡಿಕೊಂಡರೂ ಓಕೆ: ಜಯಾ ಬಚ್ಚನ್ ಅಚ್ಚರಿ ಹೇಳಿಕೆ

    ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ (Amitabh Bachchan) ಪತ್ನಿ ಜಯಾ ಬಚ್ಚನ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಆಡಿದ ಆ ಮಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೊಮ್ಮಗಳು ನವ್ಯಾ ನವೇಲಿ ನಂದಾ ಅವರ ಪಾಡ್ ಕಾಸ್ಟ್ ನಲ್ಲಿ ಮಾತನಾಡಿರುವ ಜಯಾ, ತಮ್ಮ ಜೀವನದ ಅನೇಕ ಅಂಶಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಸಂಬಂಧವು ದೀರ್ಘಕಾಲ ಉಳಿಯಲು ಗುಟ್ಟುವೊಂದನ್ನು ನೀಡಿದ್ದಾರೆ.

    ತಮ್ಮ ಪುತ್ರಿ ಶ್ವೇತಾ ಬಚ್ಚನ್ ನಂದಾ (Shweta Bachchan Nanda) ಅವರ ಪುತ್ರಿ ನವ್ಯಾ ನವೇಲಿ ನಂದಾ (Navya Naveli Nanda) ಕುರಿತು ಮಾತನಾಡಿರುವ ಜಯ ಬಚ್ಚನ್, ‘ಮೊಮ್ಮಗಳು ಮದುವೆಗೆ ಮುನ್ನವೇ ಮಗು ಮಾಡಿಕೊಂಡರೆ ಯಾವುದೇ ಸಮಸ್ಯೆ ಇಲ್ಲ. ಸಂಬಂಧ ದೀರ್ಘ ಕಾಲ ಉಳಿಯಬೇಕೆಂದರೆ ಮಾನಸಿಕ ಆರೋಗ್ಯದ ಜೊತೆಗೆ ದೈಹಿಕ ಆರೋಗ್ಯವೂ ಮುಖ್ಯ. ನಮ್ಮ ಕಾಲದಲ್ಲಿ ಈ ರೀತಿ ಇರಲಿಲ್ಲವೆಂದು ಜಯ ಹೇಳಿದ್ದಾರೆ. ಅಲ್ಲದೇ, ಅವರ ಈ ಮಾತು ವಿವಾದಕ್ಕೂ ಕಾರಣವಾಗಬಹುದು ಎಂದೂ ತಿಳಿಸಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಮೊಮ್ಮಗಳು ಮದುವೆಗೂ ಮುನ್ನ ಮಕ್ಕಳನ್ನು ಮಾಡಿಕೊಂಡರೂ ಅಡ್ಡಿಯಿಲ್ಲ ಎಂದು ಸ್ವತಃ ಜಯ ಬಚ್ಚನ್ (Jaya Bachchan) ಹೇಳಿರುವ ಮಾತು, ವಿವಾದಕ್ಕೂ ಕಾರಣವಾಗಿದೆ. ಹಿರಿಯ ನಟಿಯಾಗಿ, ಸಂಸದೆಯಾಗಿ ಈ ರೀತಿ ಮಾತನಾಡಬಾರದಿತ್ತು ಎಂದು ಹಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅಮಿತಾಭ್ ಬಚ್ಚನ್ ರೀತಿಯಲ್ಲಿ ಮಾತನಾಡುವುದನ್ನು ಕಲಿಯಿರಿ ಎಂದು ಹಲವರು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೈ ನೋವಿನಿಂದ ಬಳಲುತ್ತಿರುವ ಅಭಿಷೇಕ್ ಬಚ್ಚನ್ – ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ಭೇಟಿ

    ಕೈ ನೋವಿನಿಂದ ಬಳಲುತ್ತಿರುವ ಅಭಿಷೇಕ್ ಬಚ್ಚನ್ – ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ಭೇಟಿ

    ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್‍ಗೆ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿದ್ದು, ಭಾನುವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

    ಈ ವೇಳೆ ಬಿಗ್-ಬಿ ಅಮಿತಾಬ್ ಬಚ್ಚನ್ ಮತ್ತು ಸಹೋದರಿ ಶ್ವೇತಾ ಬಚ್ಚನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಫೋಟೋದಲ್ಲಿ ಅಮಿತಾಬ್ ಕುರ್ತಾ ಮತ್ತು ಪೈಜಾಮ ಧರಿಸಿದ್ದು, ಶ್ವೇತಾ ಬಚ್ಚನ್ ನಂದ ಬಿಳಿ ಬಣ್ಣದ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿರುವುದನ್ನು ಕಾಣಬಹುದಾಗಿದೆ.  ಇದನ್ನೂ ಓದಿ:ಅಮಿತಾಬ್ ಬಚ್ಚನ್, ಜಯಗೆ 48ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

    ಸದ್ಯ ಈ ಕುರಿತಂತೆ ಲೀಲಾವತಿ ಆಸ್ಪತ್ರೆಯ ಸಿಇಒ ಅವರು, ಅಭಿಷೇಕ್‍ರವರ ಕೈಗೆ ಸಣ್ಣ ಪೆಟ್ಟಾಗಿದ್ದು, ಕೈ ಸಂಬಂಧಿಸಿದ ನೋವಿನಿಂದ ಅವರು ಭಾನುವಾರ ಆಸ್ಪತ್ರೆಗೆ ಬಂದಿದ್ದರು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಈಗಾಗಲೇ ಮನೆಗೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

     

    View this post on Instagram

     

    A post shared by Manav Manglani (@manav.manglani)

    ಕಳೆದ ವಾರ ಅಭಿಷೇಕ್ ಬಚ್ಚನ್, ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್ ಮುಂಬೈನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಐಶ್ವರ್ಯ ರೈ ನಿರ್ದೇಶಕ ನಣಿರತ್ನಂ ಆಕ್ಷನ್ ಕಟ್ ಹೇಳುತ್ತಿರುವ ಪೊನ್ನಿನ್ ಸೆಲ್ವನ್ ಚಿತ್ರದ ಚಿತ್ರೀಕರಣಕ್ಕಾಗಿ ಮಧ್ಯಪ್ರದೇಶಕ್ಕೆ ಹೊರಟ್ಟಿದ್ದರು.  ಇದನ್ನೂ ಓದಿ:ಅಮಿತಾಬ್ ಬಚ್ಚನ್ ಶಸ್ತ್ರಚಿಕಿತ್ಸೆ – ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ಬಿಗ್ ಬಿ

     

    View this post on Instagram

     

    A post shared by Manav Manglani (@manav.manglani)