Tag: Shyamsundar

  • ಜಾರಕಿಹೊಳಿಗೆ ಅನಾರೋಗ್ಯ- ಎಸ್‍ಐಟಿ ವಿಚಾರಣೆಗೆ ಗೈರು

    ಜಾರಕಿಹೊಳಿಗೆ ಅನಾರೋಗ್ಯ- ಎಸ್‍ಐಟಿ ವಿಚಾರಣೆಗೆ ಗೈರು

    ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಅನಾರೋಗ್ಯಕ್ಕೆ ತುತ್ತಾದ ಕಾರಣ ಇಂದಿನ ಎಸ್‍ಐಟಿ ವಿಚಾರಣೆಗೆ ಗೈರಾಗಿದ್ದಾರೆ.

    ಸಿಡಿ ಪ್ರಕರಣದ ಸಂಬಂಧ ಇಂದು ಜಾರಕಿಹೊಳಿ ಎಸ್‍ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಎಲ್ಲಿ ಹೋಗಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು.

    ಈ ಪ್ರಶ್ನೆಗೆ ಉತ್ತರ ನೀಡಿದ ಜಾರಕಿಹೊಳಿ ಪರ ವಕೀಲ ಶ್ಯಾಮಸುಂದರ್, ಇಂದು ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯ ಹಿನ್ನಲೆಯಲ್ಲಿ ಬರಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನಾವು ಬಂದು ಎರಡು ದಿನಗಳ ಕಾಲಾವಕಾಶ ಕೇಳಿದ್ದೇವೆ. ಸೋಮವಾರ ವಿಚಾರಣೆಗೆ ಹಾಜರಾಗುತ್ತಾರೆ. ಅವರು ಈಗಾಗಲೇ ವಿಚಾರಣೆಗೆ ಹಾಜರಾಗಿದ್ದಾರೆ ಮತ್ತು ತನಿಖೆಗೆ ಸಹಕಾರ ನೀಡುತ್ತಾರೆ ಎಂದು ತಿಳಿಸಿದರು.