Tag: Siddharth Anand

  • ಹುಲ್ಲು ಹಸಿರಾಗಿತ್ತು, ನೀರು ನೀಲಿಯಾಗಿತ್ತು ಅದಕ್ಕೆ ಕೇಸರಿ ಬಿಕಿನಿ ಹಾಕಿಸಿದೆ : ಸಿದ್ಧಾರ್ಥ್

    ಹುಲ್ಲು ಹಸಿರಾಗಿತ್ತು, ನೀರು ನೀಲಿಯಾಗಿತ್ತು ಅದಕ್ಕೆ ಕೇಸರಿ ಬಿಕಿನಿ ಹಾಕಿಸಿದೆ : ಸಿದ್ಧಾರ್ಥ್

    ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ‘ಪಠಾಣ್’ (Pathan) ಸಿನಿಮಾದ ಕೇಸರಿ ಬಿಕಿನಿ (Kesari Bikini) ವಿವಾದದ ಬಗ್ಗೆ ಈಗ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಮೌನ ಮುರಿದಿದ್ದಾರೆ. ಆ ಹಾಡಿನಲ್ಲಿ ದೀಪಿಕಾ ಪಡುಕೋಣೆಗೆ ಯಾಕೆ ಕೇಸರಿ ಬಿಕಿನಿ ಹಾಕಿಸಿದೆ ಎನ್ನುವ ಕುರಿತು ಅವರು ಮಾತನಾಡಿದ್ದಾರೆ. ಅದಕ್ಕೆ ಬಲವಾದ ಕಾರಣವನ್ನೂ ಕೊಟ್ಟಿದ್ದಾರೆ.

    ಈ ಹಾಡಿನ ಶೂಟಿಂಗ್ ನಡೆದದ್ದು ಸ್ಪೇನ್ ನಲ್ಲಿ. ಆಗ ಅಲ್ಲಿನ ವಾತಾವರಣಕ್ಕೆ ಹೊಂದುವಂತಹ ಬಣ್ಣ ಆಯ್ಕೆ ಮಾಡಿಕೊಳ್ಳಬೇಕಿತ್ತು. ಬಿಸಿಲಿತ್ತು. ಹುಲ್ಲು ಹಸಿರಾಗಿತ್ತು. ನೀರು ನೀಲಿಯಾಗಿತ್ತು. ಕೇಸರಿ ಬಣ್ಣ ಎದ್ದು ಕಾಣುತ್ತದೆ ಎನ್ನುವ ಕಾರಣಕ್ಕಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿಕೊಂಡರಂತೆ. ಅದರ ಹೊರತಾಗಿ ಬೇರೆ ಯಾವ ಆಲೋಚನೆಯೂ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 2ನೇ ಮದುವೆ ಸುದ್ದಿಗೆ ಸ್ಪಷ್ಟನೆ ನೀಡಿದ ಕಿರುತೆರೆ ನಟಿ ಸ್ವಾತಿ

    ಕೇಸರಿ ಬಿಕಿನಿ ಆರಿಸುವ ಧಾರ್ಮಿಕ ಭಾವನೆ, ಬೇರೆಯವರಿಗೆ ನೋವಾಗತ್ತೆ ಏನೂ ಯೋಚಿಸಲಿಲ್ಲ. ಒಬ್ಬ ನಿರ್ದೇಶಕನಾಗಿ ಯಾವ ಬಣ್ಣ ಹೈಲೈಟ್ ಆಗತ್ತೆ ಅಂತ ಮಾತ್ರ ಯೋಚನೆ ಮಾಡಿದೆ. ಆದರೆ, ಕೇಸರಿ ಬಿಕಿನಿ ಈ ರೀತಿಯಲ್ಲಿ ವಿವಾದ ಎಬ್ಬಿಸುತ್ತೆ ಎನ್ನುವ ಸಣ್ಣ ಅಂದಾಜು ಕೂಡ ನನಗೆ ಇರಲಿಲ್ಲ. ಸಿನಿಮಾದಲ್ಲಿ ಯಾರ ಭಾವನೆಯನ್ನೂ ಕೆರಳಿಸುವ ಕಥೆಯೂ ಇಲ್ಲ. ಆದರೂ, ವಿವಾದ ಮಾಡಲಾಯಿತು.

    ಸಿನಿಮಾ ಚೆನ್ನಾಗಿದ್ದರೆ, ಯಾರ ಮನಸ್ಸಿಗೂ ನೋವು ಮಾಡದೇ ಇದ್ದರೆ ಸಿನಿಮಾವನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ ಎನ್ನುವುದಕ್ಕೆ ಪಠಾಣ್ ಸಿನಿಮಾ ಸಾಕ್ಷಿ. ಸಿನಿಮಾ ಬಗ್ಗೆ ನನಗೆ ನಂಬಿಕೆಯಿತ್ತು. ಬಾಯ್ಕಾಟ್ ನಡೆಯಲ್ಲ ಅನ್ನುವ ವಿಶ್ವಾಸವಿತ್ತು. ಕೊನೆಗೂ ಪ್ರೇಕ್ಷಕ ಗೆಲ್ಲಿಸಿದ ಎಂದು ಅವರು ಮಾತನಾಡಿದ್ದಾರೆ.

  • ‘ಸಲಾರ್’ ನಂತರ ಮತ್ತೆ ಬಾಲಿವುಡ್ ಚಿತ್ರ ಒಪ್ಪಿಕೊಂಡ ಪ್ರಭಾಸ್

    ‘ಸಲಾರ್’ ನಂತರ ಮತ್ತೆ ಬಾಲಿವುಡ್ ಚಿತ್ರ ಒಪ್ಪಿಕೊಂಡ ಪ್ರಭಾಸ್

    ತೆಲುಗಿನ ಖ್ಯಾತ ನಟ ಪ್ರಭಾಸ್ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಸ್ಪಿರಿಟ್ ಮತ್ತು ಪ್ರಾಜೆಕ್ಟ್ ಕೆ ಚಿತ್ರಗಳು ಕೈಯಲ್ಲಿವೆ. ಸಲಾರ್ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಯುವ ಹಂತದಲ್ಲಿದೆ. ಈ ನಡುವೆ ಪ್ರಭಾಸ್ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು. ಸಿದ್ದಾರ್ಥ ಆನಂದ್ ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರ ಬಿಡುಗಡೆ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ತಡವಾಗುತ್ತಿದೆ. ವಿವಾದ ಕೂಡ ಆಗಿದ್ದರಿಂದ ಅದನ್ನು ತಿಳಿಗೊಳಿಸುವಲ್ಲಿ ನಿರ್ದೇಶಕರು ನಿರತರಾಗಿದ್ದಾರಂತೆ. ಈ ನಡುವೆಯೇ ಮತ್ತೊಂದು ಬಾಲಿವುಡ್ ಚಿತ್ರವನ್ನು ಪ್ರಭಾಸ್ ಒಪ್ಪಿಕೊಂಡಿದ್ದಾರೆ. ಈ ಮಾಹಿತಿಯನ್ನು ಚಿತ್ರ ನಿರ್ಮಾಣ ಮಾಡುವ ಮೈತ್ರಿ ಮೂವಿ ಸಂಸ್ಥೆಯೇ ಬಹಿರಂಗ ಪಡಿಸಿದೆ. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳ ಸಮಾಗಮ: ವೈಷ್ಣವಿ ಜೊತೆ ದಿವ್ಯಾ- ಅರವಿಂದ್ ಕೆ.ಪಿ ಜೋಡಿ

    ಶಾರುಖ್ ಖಾನ್ ನಿರ್ದೇಶನದ ಪಠಾಣ್ ಸಿನಿಮಾವನ್ನು ನಿರ್ದೇಶನ ಮಾಡಿರುವ ಸಿದ್ದಾರ್ಥ ಆನಂದ್, ಪಠಾಣ್ ಚಿತ್ರದ ನಂತರ ಪ್ರಭಾಸ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರಂತೆ. ಹಿಂದಿ ಚಿತ್ರರಂಗದಲ್ಲಿ ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿರುವ ಇವರು, ಈ ಬಾರಿ ಪ್ರಭಾಸ್ ಜೊತೆ ಅದೃಷ್ಟಕ್ಕೆ ಇಳಿಯಲಿದ್ದಾರೆ. ಪ್ರಭಾಸ್ ಗಾಗಿಯೇ ಅವರು ಹೊಸ ರೀತಿಯ ಕಥೆಯನ್ನೂ ಸಿದ್ದಪಡಿಸಿದ್ದಾರಂತೆ. ಪಠಾಣ್ ಸಿನಿಮಾ ರಿಲೀಸ್ ನಂತರವೇ ಈ ಕುರಿತು ಹಲವು ಮಾಹಿತಿಗಳನ್ನು ಅವರು ಹಂಚಿಕೊಳ್ಳಲಿದ್ದಾರೆ.

    ತೆಲುಗು ಚಿತ್ರೋದ್ಯಮದಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದೇ ಖ್ಯಾತಿ ಪಡೆದಿರುವ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು, ಭಾರೀ ಬಜೆಟ್ ಚಿತ್ರಗಳನ್ನೇ ತಯಾರು ಮಾಡುತ್ತಿದೆ. ಈ ಸಂಸ್ಥೆಯಿಂದ ಮೂಡಿ ಬಂದಿರುವ ವಾಲ್ತೇರು ವೀರಯ್ಯ ಹಾಗೂ ವೀರಸಿಂಹ ರೆಡ್ಡಿ ಚಿತ್ರಗಳು ಈ ವಾರ ದೇಶಾದ್ಯಂತ ಬಿಡುಗಡೆ ಆಗಿ, ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಅಲ್ಲದೇ, ಇನ್ನೂ ಹಲವು ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತ್ತೆ ಬಾಲಿವುಡ್ ಸಿನಿಮಾದಲ್ಲಿ ಪ್ರಭಾಸ್ – ಬಾಹುಬಲಿಗೆ ಜೋಡಿ ಆಗ್ತಾರಾ ಈ ಕ್ಯೂಟ್ ಬೆಡಗಿ

    ಮತ್ತೆ ಬಾಲಿವುಡ್ ಸಿನಿಮಾದಲ್ಲಿ ಪ್ರಭಾಸ್ – ಬಾಹುಬಲಿಗೆ ಜೋಡಿ ಆಗ್ತಾರಾ ಈ ಕ್ಯೂಟ್ ಬೆಡಗಿ

    ಹೈದರಾಬಾದ್: ಟಾಲಿವುಡ್ ನಟ ಬಾಹುಬಲಿ ಪ್ರಭಾಸ್ ಮತ್ತೆ ಬಾಲಿವುಡ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿಯೊಂದು ಇದೀಗ ಟಿ-ಟೌನ್ ಅಂಗಳದಲ್ಲಿ ಹರಿದಾಡುತ್ತಿದೆ.

    ನಟ ಪ್ರಭಾಸ್ ಸದ್ಯ ತೆಲುಗಿನ ಆದಿಪುರುಷ ಮತ್ತು ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್ ಕಟ್ ಹೇಳುತ್ತಿರುವ ಮುಂದಿನ ಸಿನಿಮಾದ ಶೂಟಿಂಗ್‍ನಲ್ಲಿ ಕೂಡ ಶೀಘ್ರದಲ್ಲಿಯೇ ಪಾಲ್ಗೊಳ್ಳಲಿದ್ದರೆ. ಆದರೆ ಈ ಎಲ್ಲದರ ಮಧ್ಯೆ ಬಾಲಿವುಡ್ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರ ಮುಂದಿನ ಸಿನಿಮಾಕ್ಕೆ ಪ್ರಭಾಸ್ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಸದ್ಯದಲ್ಲಿಯೇ ಈ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಲು ಸಿನಿಮಾತಂಡ ಪ್ಲಾನ್ ಮಾಡಿದೆಯಂತೆ.

    ಈ ಸಿನಿಮಾದಲ್ಲಿ ಪ್ರಭಾಸ್ ಜೊತೆಗೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಡ್ಯೂಯೆಟ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮುನ್ನ ನಿರ್ದೇಶಕ ಸಿದ್ದಾರ್ಥ್ ಆನಂದ್ ಆ್ಯಕ್ಷನ್ ಕಟ್ ಹೇಳಿದ್ದ ಬ್ಯಾಂಗ್ ಬ್ಯಾಂಗ್ ಸಿನಿಮಾದಲ್ಲಿ ಹೃತಿಕ್ ರೋಷನ್‍ಗೆ ಜೋಡಿಯಾಗಿ ಕತ್ರಿನಾ ಕೈಫ್ ಅಭಿನಯಿಸಿದ್ದರು. ಪ್ರಭಾಸ್‍ಗೆ ಸಾಹೋ ಸಿನಿಮಾದಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಜೋಡಿಯಾಗಿ ನಟಿಸಿದ್ದರು.

    ಸದ್ಯ ಸಿದ್ಧಾರ್ಥ್ ಆನಂದ್ ಬಾಲಿವುಡ್ ಬಾದ್ ಶಾ ನಟ ಶಾರೂಕ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯಿಸುತ್ತಿರುವ ಪಠಾಣ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಎಲ್ಲ ಒಕೆ ಆದಲ್ಲಿ ಸಿದ್ಧಾರ್ಥ್ ಪ್ರಭಾಸ್ ಸಿನಿಮಾವನ್ನು ಶೀಘ್ರದಲ್ಲಿ ಕೈಗೆತ್ತುಕೊಳ್ಳಲಿದ್ದಾರೆ.