Tag: signature

  • ಡಿ ಗ್ರೂಪ್‌ ಸಿಬ್ಬಂದಿಯಿಂದಲೇ VSK ವಿವಿ ಕುಲಸಚಿವರ ಸಹಿ ಫೋರ್ಜರಿ

    ಡಿ ಗ್ರೂಪ್‌ ಸಿಬ್ಬಂದಿಯಿಂದಲೇ VSK ವಿವಿ ಕುಲಸಚಿವರ ಸಹಿ ಫೋರ್ಜರಿ

    ಬಳ್ಳಾರಿ: ಸದಾ ಒಂದಲ್ಲೊಂದು ವಿವಾದದಿಂದ ಸುದ್ದಿಯಾಗುವ ಬಳ್ಳಾರಿಯ (Ballari) ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ (Vijayanagara Sri Krishnadevaraya University) ಈ ಬಾರಿ ಡಿ ಗ್ರೂ ಸಿಬ್ಬಂದಿ ಕುಲಸಚಿವರ ಸಹಿಯನ್ನೇ ನಕಲು ಮಾಡಿ ಸಿಕ್ಕಿ ಬಿದ್ದಿದ್ದಾನೆ.

    ವಿದ್ಯಾರ್ಥಿಗಳ ವಲಸೆ ಪ್ರಮಾಣಪತ್ರಕ್ಕೆ (Migration Certificate) ಉಪಕುಲಸಚಿವರ ಸಹಿಯನ್ನು ಡಿ ಗ್ರೂಪ್ ನೌಕರ ವೈ.ಕೃಷ್ಣಮೂರ್ತಿ ನಕಲು ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ವಿವಿಯ ಕುಲಪತಿ ವಿಚಾರಣೆ ಕಾಯ್ದಿರಿಸಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.  ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ: ಅಶ್ವಿನಿ ವೈಷ್ಣವ್‌

    ಗಂಗಾವತಿಯ ಕೆಲವು ವಿದ್ಯಾರ್ಥಿಗಳು ವಲಸೆ ಪ್ರಮಾಣ ಪತ್ರಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ಸತ್ಯಾಸತ್ಯತೆ ತಿಳಿಯಲು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ವಿವಿಯ ಸಿಬ್ಬಂದಿ ಕರೆ ಮಾಡಿದ್ದರು.

    ಈ ವೇಳೆ ಶುಲ್ಕ ಪಾವತಿಸಿ ಪ್ರಮಾಣ ಪತ್ರ ಪಡೆದಿರುವುದಾಗಿ ವಿದ್ಯಾರ್ಥಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ವಿವಿಗೆ ಯಾವುದೇ ಶುಲ್ಕ ಪಾವತಿಯಾಗದೇ ಪ್ರಮಾಣ ಪತ್ರಗಳು ವಿತರಣೆಯಾಗಿರುವ ಹಿನ್ನೆಲೆ ಅನುಮಾನಗೊಂಡು ಮತ್ತಷ್ಟು ವಿಚಾರಣೆ ಮಾಡಿದಾಗ ಸತ್ಯ ಪ್ರಕಟವಾಗಿದೆ.

    ವಿದ್ಯಾರ್ಥಿಗಳಿಂದ ಹಣ ಪಡೆದ ಕೃಷ್ಣಮೂರ್ತಿ ಉಪ ಕುಲಸಚಿವರ ನಕಲಿ ಸಹಿ ಮಾಡಿ ಪ್ರಮಾಣ ಪತ್ರ ವಿತರಿಸಿರುವುದು ಮೇಲ್ನೋಟಕ್ಕೆ ಖಚಿತವಾಗಿದೆ. ಈಗ ನಿಗದಿತ ಶುಲ್ಕ ನೀಡಿ ನಕಲಿ ಸಹಿ ಹೊಂದಿದ ವಲಸೆ ಪ್ರಮಾಣ ಪತ್ರ ಪಡೆದ ವಿದ್ಯಾರ್ಥಿಗಳು ಗೊಂದಲದಲ್ಲಿ ಸಿಲುಕಿದ್ದಾರೆ.

     

  • 50ನೇ ದಿನಕ್ಕೆ ಕಾಲಿಟ್ಟ ಏಮ್ಸ್ ಹೋರಾಟ – ರಕ್ತದಲ್ಲಿ ಸಹಿ ಸಂಗ್ರಹಿಸಿ ಸಿಎಂಗೆ ಮನವಿ

    50ನೇ ದಿನಕ್ಕೆ ಕಾಲಿಟ್ಟ ಏಮ್ಸ್ ಹೋರಾಟ – ರಕ್ತದಲ್ಲಿ ಸಹಿ ಸಂಗ್ರಹಿಸಿ ಸಿಎಂಗೆ ಮನವಿ

    ರಾಯಚೂರು: ಏಮ್ಸ್‌ಗಾಗಿ ಜಿಲ್ಲೆಯಲ್ಲಿ ನಡೆದಿರುವ ಅನಿರ್ಧಿಷ್ಟಾವಧಿ ಹೋರಾಟ ಶುಕ್ರವಾರ 50ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಹೋರಾಟಕ್ಕೆ ಇದುವರೆಗೂ ಸ್ಪಂದಿಸದ ಹಿನ್ನೆಲೆ ಹೋರಾಟಗಾರರು ರಕ್ತದಲ್ಲಿ ಸಹಿ ಮಾಡುವ ಬೃಹತ್ ಆಂದೋಲನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಸುಮಾರು 5,000 ಜನರಿಂದ ರಕ್ತದ ಸಹಿ ಸಂಗ್ರಹಿಸಲಾಗುತ್ತಿದೆ. ವಿದ್ಯಾರ್ಥಿಗಳು, ವೃದ್ಧರು, ಹೋರಾಟಗಾರರು, ಸ್ಥಳೀಯರಿಂದ ಸಹಿ ಸಂಗ್ರಹ ಮಾಡಲಾಗುತ್ತಿದೆ. 90ರ ಇಳಿ ವಯಸ್ಸಿನ ವೃದ್ಧರೊಬ್ಬರ ಮೂಲಕ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ರಕ್ತದ ಸಹಿಗಳನ್ನು ಸಿಎಂಗೆ ಕಳುಹಿಸುವ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: IIMB ಯಿಂದ ‘ಹಾಸ್ಪಿಟಲ್ ಮ್ಯಾನೇಜ್‍ಮೆಂಟ್’ ಕೋರ್ಸ್ ಆರಂಭ – ಡಾ.ಕೆ.ಸುಧಾಕರ್ ಕನಸು ಸಾಕಾರ

    ರಾಯಚೂರಿನಿಂದ ಐಐಟಿ ಕಸಿದುಕೊಳ್ಳಲಾಗಿದೆ. ಸದ್ಯ ಏಮ್ಸ್ ಆದರೂ ರಾಯಚೂರಿಗೆ ನೀಡಲಿ ಎಂಬ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರ ಸಿಎಂ ಅಲ್ಲ, ಸಮಗ್ರ ಕರ್ನಾಟಕಕ್ಕೆ ಸಿಎಂ. ಹೀಗಾಗಿ ಏಮ್ಸ್ ರಾಯಚೂರಿಗೆ ನೀಡುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕನ್ಹಯ್ಯಲಾಲ್ ಹತ್ಯೆ ಖಂಡಸಿ ಪ್ರತಿಭಟನೆ – ಮೂವರು ಕಾರ್ಯಕರ್ತರ ಪ್ಯಾಂಟ್‍ಗೆ ತಗುಲಿದ ಬೆಂಕಿ

    Live Tv

  • ಮುಳ್ಳು ಹಂದಿ ಚಿತ್ರದಂತೆ ಕಾಣುವ ವೈದ್ಯರ ಸಹಿ ವೈರಲ್

    ಮುಳ್ಳು ಹಂದಿ ಚಿತ್ರದಂತೆ ಕಾಣುವ ವೈದ್ಯರ ಸಹಿ ವೈರಲ್

    ಡಿಸ್ಪುರ್: ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಯೊಬ್ಬರು ಮುಳ್ಳು ಹಂದಿಯಂತೆ ಕಾಣುವ ಸಹಿ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿ ಸಹಿ ವೈರಲ್ ಆಗಿದೆ. ನೆಟ್ಟಿಗರೊಬ್ಬರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಖಾಕಿ ಶರ್ಟ್ ಧರಿಸಿ ಸ್ಟೇರಿಂಗ್ ಹಿಡಿದು ರಸ್ತೆಯಲ್ಲಿ ಸಂಚಾರ – ನೋವಿನ ಹಿಂದಿದೆ ಇಂಟರೆಸ್ಟಿಂಗ್ ಸ್ಟೋರಿ

    ಗುವಾಹಟಿಯ ವೈದ್ಯಕೀಯ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗದ ರಿಜಿಸ್ಟ್ರಾರ್‌ನ ಮುದ್ರೆಯ ಮೇಲೆ ಈ ಸಹಿ ಇದೆ. ಈ ಫೋಟೋವನ್ನು ನಾನು ತೆಗೆದಿದ್ದೇನೆ. ನಾನು ಇಲ್ಲಿಯವರೆಗೆ ವಿಶಿಷ್ಟ ಸಹಿಗಳನ್ನು ನೋಡಿದ್ದೇನೆ. ಆದರೆ ಇದೇ ಬೆಸ್ಟ್ ಸಿಗ್ನೇಚರ್ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ವೈರಲ್ ಆಗಿರುವ ಈ ಹಸಿ ಕೆಳಗೆ 2022 ಮಾರ್ಚ್ 4 ಎನ್ನುವ ದಿನಾಂಕ ಇರುವುದನ್ನು ನೋಡ ಬಹುದಾಗಿದೆ. ಇದನ್ನೂ ಓದಿ: ಬಪ್ಪನಾಡು ದೇವಸ್ಥಾನ ಹಾಗೂ ಮಾರಿಕಾಂಬಾ ದೇವಸ್ಥಾನ ಕಟ್ಟಿದವರು ಮುಸ್ಲಿಮರು: ರಿಜ್ವಾನ್

    ಈ ಸಹಿಯನ್ನ ಕಂಡ ನೆಟ್ಟಿಗರು ವಿವಿಧ ರೀತಿಯ ಕಾಮೆಂಟುಗಳನ್ನ ಮಾಡುತ್ತಿದ್ದಾರೆ. ಇಬ್ಬ ಬಳಕೆದಾರ, ಇದು ಥೇಟ್ ಮುಳ್ಳುಹಂದಿಯಂತೆ ಕಾಣುತ್ತದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

  • ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

    ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

    – ಬೃಹತ್ ಜನಜಾಗೃತಿ ಕಾರ್ಯಕ್ರಮ

    ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು, ಸರ್ಕಾರಿ ಶಾಲೆಗಳ ದುವ್ರ್ಯವಸ್ಥೆ, ಖಾಸಗಿ ಶಿಕ್ಷಕರ ಸಮಸ್ಯೆ, ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಈ ಗೊಂದಲ ನಿವಾರಣೆಗಾಗಿ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ ಮತ್ತು ಜನಗಾಗೃತಿ ಕಾರ್ಯಕ್ರಮ ನಡೆಯಲಿದೆ.

    ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕ ಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ. ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಬಗೆಹರಿಸಲು ಒತ್ತಾಯಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಸತತ 15 ದಿನಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸುವವರಿದ್ದಾರೆ ಎಂದು ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿ ನಡೆಸಿ ಸಮಗ್ರ ಚಿತ್ರಣ ನೀಡಿದರು. ಇದನ್ನೂ ಓದಿ: ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್

    ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿಗಳು, ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ ಎಂದು ಮಾಹಿತಿ ಹಂಚಿಕೊಂಡರು.

  • ನಕಲಿ ಬಿಲ್‍ಗೆ ಸಹಿ ಮಾಡದ ಅಧಿಕಾರಿ ಮೇಲೆ ಹಲ್ಲೆ – ಪುರಸಭೆ ಸದಸ್ಯನ ಗೂಂಡಾಗಿರಿ

    ನಕಲಿ ಬಿಲ್‍ಗೆ ಸಹಿ ಮಾಡದ ಅಧಿಕಾರಿ ಮೇಲೆ ಹಲ್ಲೆ – ಪುರಸಭೆ ಸದಸ್ಯನ ಗೂಂಡಾಗಿರಿ

    ಕಲಬುರಗಿ: ನಕಲಿ ಬಿಲ್‍ಗಳಿಗೆ ಅಧಿಕಾರಿ ಸಹಿ ಮಾಡದ ಹಿನ್ನೆಲೆ ಚಿಂಚೋಳಿ ತಾಲೂಕಿನ ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಪುರಸಭೆಯ ಸದಸ್ಯ ಆನಂದ್, ಪುರಸಭೆ ಕಚೇರಿ ಆವರಣದಲ್ಲಿಯೇ ಹಲ್ಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

    ಚಿಂಚೋಳಿ ತಾಲೂಕಿನಲ್ಲಿ ಪುರಸಭೆ ಮುಖ್ಯಾಧಿಕಾರಿಯಾಗಿ ಹಲವು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತಂದ ಅಭಯ್, ನಕಲಿ ಬಿಲ್ ಗಳಿಗೂ ಸಹ ಕಡಿವಾಣ ಹಾಕಿದ್ದಾರೆ. ಇದು ಅಲ್ಲಿನ ಕೆಲ ಪುರಸಭೆ ಸದಸ್ಯರಿಗೆ ಇದೀಗ ನುಂಗಲಾಗದ ಬಿಸಿ ತುಪ್ಪವಾಗಿದೆ. ಇದೇ ವೇಳೆ ಚಿಂಚೋಳಿ ಪುರಸಭೆಯ ಆರ್ ಪಿಐ ಪಕ್ಷದ ಪುರಸಭೆ ಸದಸ್ಯನಾದ ಆನಂದ್ ಟೈಗರ್ ಮಂಗಳವಾರ ಸಂಜೆ ತನ್ನ ಸ್ನೇಹಿತ ಶಶಿಕುಮಾರ್ ಜೊತೆ ಪುರಸಭೆಗೆ ಹೋಗಿದ್ದಾನೆ. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಅಭಯ್ ಹಾಗೂ ಆನಂದ್ ನಡುವೆ ಬಿಲ್ ಮಾಡುವ ಕುರಿತು ಮಾತಿನ ಚಕಮಕಿ ನಡೆದಿದೆ. ಈ ವೇಳೆ ತಾಳ್ಮೆ ಕಳೆದುಕೊಂಡ ಆನಂದ ನನ್ನ ಬಿಲ್‍ಗೆ ಸಹಿ ಮಾಡಲು ನೀಕಾರಿಸುತ್ತಿಯಾ ಎಂದು ಅಧಿಕಾರಿಗೆ ವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ.

    ಈ ಪುರಸಭೆ ಸದಸ್ಯನ ಗೂಂಡಾಗಿರಿಯ ದೃಶ್ಯ ಪುರಸಭೆ ಆವರಣದಲ್ಲಿ ಇರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುರಸಭೆ ಸದಸ್ಯನ ಗೂಂಡಾಗಿರಿ ವಿರುದ್ಧ ಅಧಿಕಾರಿ ಅಭಯ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಹರಿಕೃಷ್ಣ ನಾರಾಯಣಿ ಮಯೂರಿ!

    ಹರಿಕೃಷ್ಣ ನಾರಾಯಣಿ ಮಯೂರಿ!

    ಬೆಂಗಳೂರು: ಕೃಷ್ಣಲೀಲಾ ಚಿತ್ರದ ನಟನೆಯ ಮೂಲಕವೇ ಪ್ರೇಕ್ಷಕರ ಮನಗೆದ್ದಿರುವ ಮಯೂರಿಯ ಮುಂದೀಗ ಅವಕಾಶಗಳ ಒಡ್ಡೋಲಗ. ಮೂರ್ನಾಲ್ಕು ಚಿತ್ರಗಳ ಕೈಲಿರುವಾಗಲೇ ಮಯೂರಿಯೀಗ ಮತ್ತೊಂದು ಚಿತ್ರಕ್ಕೂ ಸಹಿ ಹಾಕಿದ್ದಾರೆ!

    ಇದೀಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರೋ ಮಯೂರಿ ನಟಿಸಲಿರೋ ಹೊಸಾ ಚಿತ್ರ `ಹರಿಕೃಷ್ಣ ನಾರಾಯಣಿ’. ಈ ಚಿತ್ರವನ್ನು ಡಾ. ಗಿರಿಧರ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರದಲ್ಲಿ ಮಯೂರಿ ಬಹುಮುಖ್ಯವಾದ, ಎಲ್ಲರನ್ನೂ ಅಚ್ಚರಿಗೀಡು ಮಾಡುವಂಥಾ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈಗಾಗಲೇ ಮಯೂರಿ ರುಸ್ತುಂ, 8 ಎಂಎಂ, ಸಿಗ್ನೇಚರ್ ಮುಂತಾದ ಚಿತ್ರಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರ ಇನ್ನೇನು ಚಿತ್ರೀಕರಣ ಮುಗಿಸಿಕೊಂಡು ತೆರೆ ಕಾಣಲಿದೆ. ಆ ನಂತರ ಮಯೂರಿ ಒಪ್ಪಿಕೊಂಡ ಒಂದೊಂದೇ ಚಿತ್ರವನ್ನು ಮುಗಿಸಿಕೊಳ್ಳುವ ಯೋಜನೆ ಹಾಕಿಕೊಂಡಿದ್ದಾರೆ.

    ಹೊಸದಾಗಿ ಒಪ್ಪಿಕೊಂಡಿರುವ ಹರಿಕೃಷ್ಣ ನಾರಾಯಣಿ ಚಿತ್ರ ವರಮಹಾಲಕ್ಷ್ಮಿ ಹಬ್ಬದಂದು ಶುರುವಾಗಲಿದೆ. ಇಷ್ಟಕಾಮ್ಯ, ನಟರಾಜ ಸರ್ವಿಸ್, ಕರಿಯ 2 ಮುಂತಾದ ಚಿತ್ರಗಳ ಮೂಲಕ ಮುಖ್ಯ ನಾಯಕಿಯಾಗಿ ನೆಲೆ ಕಂಡುಕೊಂಡಿರೋ ಮಯೂರಿ ಸದ್ಯದ ಬಹು ಬೇಡಿಕೆಯ ನಟಿಯಾಗಿಯೂ ಹೊರ ಹೊಮ್ಮಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಬ್ಬರ್ ಮೂಲಕ ತಹಶೀಲ್ದಾರ್ ಹೆಬ್ಬಟ್ಟನ್ನೆ ನಕಲು ಮಾಡಿದ – ಬಂದವರಿಗೆಲ್ಲಾ ಸಲೀಸಾಗಿ ದಾಖಲಾತಿ ಮಾಡಿಕೊಟ್ಟ

    ರಬ್ಬರ್ ಮೂಲಕ ತಹಶೀಲ್ದಾರ್ ಹೆಬ್ಬಟ್ಟನ್ನೆ ನಕಲು ಮಾಡಿದ – ಬಂದವರಿಗೆಲ್ಲಾ ಸಲೀಸಾಗಿ ದಾಖಲಾತಿ ಮಾಡಿಕೊಟ್ಟ

    ಚಿಕ್ಕೋಡಿ: ಫಿಲ್ಮಿ ಮಾದರಿಯಲ್ಲಿ ರಬ್ಬರ್ ಮೂಲಕ ತಹಶೀಲ್ದಾರ್ ಹೆಬ್ಬರಳಿನ ಗುರುತುಗಳನ್ನು ಖದೀಮನೊಬ್ಬ ನಕಲಿ ಮಾಡಿದ್ದಾನೆ. ಪೆನ್ ನಿಂದ ಮಾಡುವ ಸಹಿ ಅಲ್ಲ, ಡಿಜಿಟಲ್ ಸಹಿಯನ್ನೇ ನಕಲು ಮಾಡಿರೋದು ಇದೀಗ ಹಲವು ಅನುಮಾಗಳಿಗೆ ಎಡೆ ಮಾಡಿ ಕೊಟ್ಟಿದೆ.

    ಬೆಳಗಾವಿ ಜಿಲ್ಲೆ ಚಿಕ್ಕೋಡಿ ಕಂದಾಯ ಇಲಾಖೆಯ ನೌಕರ ನಿಶಾನ್ ಹೈಬತ್ತಿ. ಈತ ತಹಶೀಲ್ದಾರ ಹೆಬ್ಬಟ್ಟನ್ನೇ ನಕಲು ಮಾಡಿ ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಹಣ ವಸೂಲಿ ಮಾಡಿದ್ದಾನೆ. ಜಾತಿ, ಆದಾಯ, ಜಮೀನು ವಿವಾದ ಸೇರಿದಂತೆ 31ಕ್ಕೂ ಹೆಚ್ಚು ದಾಖಲಾತಿಗಳಿಗೆ ತಹಶೀಲ್ದಾರ್ ಫಿಂಗರ್ ಪ್ರಿಂಟ್ ಅವಶ್ಯವಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡ ಈತ ನಕಲಿ ಥಂಬ್ ಮಾಡಿ ಮಾದ್ಯಮಗಳ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ.

    ಚಿಕ್ಕೋಡಿ ತಹಶೀಲ್ದಾರ್ ಚಿದಂಬರ್ ಕುಲಕರ್ಣಿಯವರಿಗೆ ವಿಷಯ ಗೊತ್ತಿದ್ದರು ಮೌನವಾಗಿದ್ದಾರೆ ಅಂತಾ ಹೇಳಲಾಗಿದೆ. ಆದ್ದರಿಂದ ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಉಪ ವಿಭಾಗಧಿಕಾರಿ ಭೇಟಿ ನೀಡಿ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

    ತಹಶೀಲ್ದಾರ್ ನಕಲಿ ಡಿಜಿಟಲ್ ಸಹಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ನಕಲಿ ದಾಖಲೆಗಳು ನಿರ್ಮಾಣವಾಗಿರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.