Tag: signature bridge

  • ದೆಹಲಿಯ ಸಿಗ್ನೇಚರ್ ಸೇತುವೆಯ ಡಿವೈಡರ್‌ಗೆ ಕಾರು ಡಿಕ್ಕಿ – ಯುವಕ ದುರ್ಮರಣ

    ದೆಹಲಿಯ ಸಿಗ್ನೇಚರ್ ಸೇತುವೆಯ ಡಿವೈಡರ್‌ಗೆ ಕಾರು ಡಿಕ್ಕಿ – ಯುವಕ ದುರ್ಮರಣ

    ನವದೆಹಲಿ: ಸಿಗ್ನೇಚರ್ ಸೇತುವೆಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ನಡೆದಿದೆ.

    ಆಶಿಶ್ (23) ಈ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಆಶಿಶ್, ರಿಷಬ್, ಯಶ್ ಮತ್ತು ವಿಶಾಲ್ ಎಂಬ ನಾಲ್ವರು ಸ್ನೇಹಿತರು ತಮ್ಮ ಕಾರಿನಲ್ಲಿ ಸಿಗ್ನೇಚರ್ ಸೇತುವೆಯ ಮೇಲೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

    ಆಶಿಶ್ ಕಾರು ಚಲಾಯಿಸುತ್ತಿದ್ದು, ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿಹೊಡೆದಿದ್ದಾರೆ. ಪರಿಣಾಮ ಕಾರು ಚಲಾಯಿಸುತ್ತಿದ್ದ ಆಶಿಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದಾಗಿ ಮೂವರಿಗೆ ಗಂಭೀರ ಗಾಯಗಳಾಗಿದೆ.

    ಗಾಯಗೊಂಡವರಲ್ಲಿ ವಿಶಾಲ್ ಸ್ಥಿತಿ ಗಂಭೀರವಾಗಿದೆ. ಯಶ್ ಮತ್ತು ರಿಷಬ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತ ಆಶಿಶ್ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಈ ಪ್ರಕರಣದ ಬಗ್ಗೆ ದೂರು ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

  • ಸಿಗ್ನೇಚರ್ ಬ್ರಿಡ್ಜ್ ಮೇಲೆ ಬಟ್ಟೆ ಬಿಚ್ಚಿ ಮಂಗಳಮುಖಿಯರ ಡ್ಯಾನ್ಸ್

    ಸಿಗ್ನೇಚರ್ ಬ್ರಿಡ್ಜ್ ಮೇಲೆ ಬಟ್ಟೆ ಬಿಚ್ಚಿ ಮಂಗಳಮುಖಿಯರ ಡ್ಯಾನ್ಸ್

    ನವದೆಹಲಿ: ಇತ್ತೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ನವದೆಹಲಿಯಲ್ಲಿ ಉದ್ಘಾಟನೆಗೊಂಡಿರುವ ಸಿಗ್ನೇಚರ್ ಬ್ರಿಡ್ಜ್ ಮೇಲೆ ಮಂಗಳಮುಖಿಯರು ಬಟ್ಟೆ ಬಿಚ್ಚಿ ಡ್ಯಾನ್ಸ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

    ಮಂಗಳಮುಖಿಯರು ಬ್ರಿಡ್ಜ್ ಮೇಲೆ ತಮ್ಮ ಬಟ್ಟೆಯನ್ನು ಕಳಚಿ ಅಲ್ಲಿ ಡ್ಯಾನ್ಸ್ ಮಾಡಲು ಶುರು ಮಾಡಿದ್ದಾರೆ. ಅಲ್ಲಿದ್ದ ಜನರು ಮಂಗಳಮುಖಿಯರ ಡ್ಯಾನ್ಸ್ ನೋಡುತ್ತಾ ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಸದ್ಯ ಮಂಗಳಮುಖಿಯರು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ದೂರನ್ನು ದಾಖಲಿಸಿಕೊಂಡು ಈ ಘಟನೆ ನಡೆದಿದ್ದು ಯಾವಾಗ ನಡೆದಿದೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

    ಮಂಗಳಮುಖಿಯರು ಬಟ್ಟೆ ಬಿಚ್ಚಿ ಡ್ಯಾನ್ಸ್ ಮಾಡುವಾಗ ಅಲ್ಲಿ ಪೊಲೀಸರು ಇರಲಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ. ಜನರ ಆರೋಪಕ್ಕೆ ಪೊಲೀಸರು ಸ್ಪಂದಿಸಿ ಸಿಗ್ನೇಚರ್ ಬ್ರಿಡ್ಜ್ ಬಳಿ ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಸಿಗ್ನೇಚರ್ ಬ್ರಿಡ್ಜ್ ಉದ್ಘಾಟನೆಯ ದಿನದಿಂದ ಎಲ್ಲರ ಹ್ಯಾಂಗೌಟ್ ಸ್ಪಾಟ್ ಆಗಿದೆ. ಕೆಲವು ಜನರು ಸೇತುವೆ ಮೇಲಿನ ಬೌಂಡರಿಯನ್ನು ಹತ್ತಿ ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದಾರೆ.

    1997ರಲ್ಲಿ ವಜೀರಾಬಾದ್ ಸೇತುವೆಯಿಂದ ಶಾಲಾ ಬಸ್ ಉರುಳಿ, 22 ಮಕ್ಕಳು ಯಮುನಾ ನದಿಯಲ್ಲಿ ಕೊನೆಯುಸಿರೆಳೆದಿದ್ದರು. ಈ ದುರಂತ ನಡೆದ ಬಳಿಕ ಸರ್ಕಾರ ಬೃಹತ್ ತೂಗು ಸೇತುವೆ ಕಾಮಗಾರಿಯನ್ನು ಪ್ರಾರಂಭಿಸಿತ್ತು. 2010ರಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಹಣಕಾಸು ತೊಂದರೆಯಿಂದ ನಿಂತು ಹೋಗಿತ್ತು. ಸುಮಾರು 1594 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯನ್ನ ಇದೇ ತಿಂಗಳ ನವೆಂಬರ್ 5ಕ್ಕೆ ಲೋಕಾರ್ಪಣೆ ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟ್ರಾಫಿಕ್ ನಿಂದ ಪಾರಾಗಲು ತೂಗು ಸೇತುವೆ- ಜೀವಕ್ಕೆ ಕುತ್ತು ತರುತ್ತಾ ಸಿಗ್ನೇಚರ್ ಬ್ರಿಡ್ಜ್..!

    ಟ್ರಾಫಿಕ್ ನಿಂದ ಪಾರಾಗಲು ತೂಗು ಸೇತುವೆ- ಜೀವಕ್ಕೆ ಕುತ್ತು ತರುತ್ತಾ ಸಿಗ್ನೇಚರ್ ಬ್ರಿಡ್ಜ್..!

    ನವದೆಹಲಿ: ಟ್ರಾಫಿಕ್ ಸಮಸ್ಯೆಯಿಂದ ಪಾರಾಗಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸಿಗ್ನೆಚರ್ ಬ್ರಿಡ್ಜ್ ತೂಗು ಸೇತುವೆ ಮೇಲೆ ಜನರು ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿರುವುದರಿಂದ ಜೀವಕ್ಕೆ ಅಪಾಯವಾಗುವ ಸಂಭವ ಜಾಸ್ತಿ ಇದೆ.

    ಹೊಸದಾಗಿ ನಿರ್ಮಾಣಗೊಂಡಿರುವ ಸೇತುವೆಯ ತುತ್ತ ತುದಿಯಲ್ಲಿ ಯುವಕರು ಸಾಹಸ ಮಾಡಿ, ತಮ್ಮ ಜೀವವನ್ನು ಒತ್ತೆಯಿಟ್ಟು ಸೆಲ್ಫಿ ತೆಗೆದುಕೊಳ್ಳುತ್ತಿರುವುರಿಂದ ಎಲ್ಲರಲ್ಲಿ ಆತಂಕ ಸೃಷ್ಠಿಯಾಗಿದೆ.

    ಸುಮಾರು 14 ವರ್ಷಗಳ ಸತತ ಪರಿಶ್ರಮದಿಂದ ಉತ್ತರ ಮತ್ತು ಈಶಾನ್ಯ ದೆಹಲಿಯನ್ನು ಸೇರಿಸಲು ಈ ತೂಗು ಸೇತುವೆಯನ್ನ ನಿರ್ಮಿಸಿದ್ದು, ಕೆಲವು ದಿನಗಳ ಹಿಂದೆಯಷ್ಟೆ ಇದನ್ನ ಲೋಕಾರ್ಪಣೆ ಮಾಡಲಾಗಿದೆ. ಟ್ರಾಫಿಕ್ ಸಮಸ್ಯೆಯನ್ನ ಬಗೆಹರಿಸಲು ಈ ಸೇತುವೆ ನಿರ್ಮಿಸಲಾಗಿದ್ದರೂ, ಈಗ ಪ್ರವಾಸಿಗರ ತಾಣವಾಗಿ ಬದಲಾಗಿದೆ.

    ಈ ಹೊಸ ಸೇತುವೆಯ ಮೇಲೆ ಜನರು ಮುಗಿಬಿದ್ದು ಫೋಟೋಗಳನ್ನ ತೆಗೆದುಕೊಳ್ಳುತ್ತಿದ್ದು, ಸೇತುವೆಗೆ ಹಾಕಲಾಗಿರುವ ಕಂಬಿಗಳ ಮೇಲೆ ನಿಂತು ಪೋಸ್ ನೀಡುವ ಮೂಲಕ ಅವರ ಪ್ರಾಣಕ್ಕೆ ಅಪಾಯವನ್ನ ತಂದುಕೊಳ್ಳುತ್ತಿದ್ದಾರೆ. ಕೆಲವರು ವಾಹನ ಚಲಾಯಿಸುವಾಗಲೇ ಫೋಟೋ ತಗೆಯುವ ಸಾಹಸಕ್ಕೆ ಕೈಹಾಕಿದ್ದು ಇದರಿಂದ ಭಾರೀ ಪ್ರಮಾಣದ ಅಪಘಾತಗಳು ಸಂಭವಿಸಬಹುದಾಗಿದೆ.

    ಈ ವಿಚಾರವಾಗಿ ಮಾತನಾಡಿದ ಅಧಿಕಾರಿಗಳು, ಮುಂದಿನ ದಿನದಲ್ಲಿ ಈ ಸೇತುವೆಯನ್ನು ಪ್ರವಾಸಿ ತಾಣವನ್ನಾಗಿ ಮಾಡಿ, ದೆಹಲಿ ನಗರದ ಸೌಂದರ್ಯ ಕಣ್ತುಂಬಿಕೊಳ್ಳಲು ಗಾಜಿನ ಕೋಣೆಗಳನ್ನು ನಿರ್ಮಿಸಲಾಗುವುದು. ಇದರೊಂದಿಗೆ ಸೆಲ್ಫಿ ಪ್ರಿಯರಿಗೆಂದೇ ಫೋಟೋ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ ಸ್ಥಳಗಳನ್ನ ನಿರ್ಮಿಸಲಾಗುವುದು ಇದರಿಂದ ಅನಾಹುತಗಳನ್ನ ತಪ್ಪಿಸಬಹುದು ಎಂದು ಹೇಳಿದ್ದಾರೆ.

    ಈ ಕಾಮಗಾರಿ ಫೆಬ್ರವರಿ ಅಂತ್ಯಕ್ಕೆ ಜಾರಿಯಾಗಲಿದ್ದು, ಜನರು ಸೇತುವೆ ಮೇಲೆ ನಿಂತು ಫೋಟೋ ತೆಗೆಯುವುದರ ಬಗ್ಗೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    1997ರಲ್ಲಿ ವಜೀರಾಬಾದ್ ಸೇತುವೆಯಿಂದ ಶಾಲಾ ಬಸ್ ಉರುಳಿ, 22 ಮಕ್ಕಳು ಯಮುನಾ ನದಿಯಲ್ಲಿ ಕೊನೆಯುಸಿರೆಳೆದಿದ್ದರು. ಈ ದುರಂತ ನಡೆದ ಬಳಿಕ ಸರ್ಕಾರ ಬೃಹತ್ ತೂಗು ಸೇತುವೆ ಕಾಮಗಾರಿಯನ್ನ ಪ್ರಾರಂಭಿಸಿತ್ತು. 2010ರಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಹಣಕಾಸು ತೊಂದರೆಯಿಂದ ನಿಂತುಹೋಗಿತ್ತು. ಸುಮಾರು 1594 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯನ್ನ ಇದೇ ತಿಂಗಳ ನವೆಂಬರ್ 5 ಕ್ಕೆ ಲೋಕಾರ್ಪಣೆ ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews