Tag: SII

  • ಕೋವಿಶೀಲ್ಡ್‌ ಲಸಿಕೆ ಸುರಕ್ಷಿತವಾಗಿದೆ, ಹಠಾತ್‌ ಸಾವಿಗೆ ಸಂಬಂಧವಿಲ್ಲ: ಸೀರಮ್‌ ಇನ್‌ಸ್ಟಿಟ್ಯೂಟ್‌

    ಕೋವಿಶೀಲ್ಡ್‌ ಲಸಿಕೆ ಸುರಕ್ಷಿತವಾಗಿದೆ, ಹಠಾತ್‌ ಸಾವಿಗೆ ಸಂಬಂಧವಿಲ್ಲ: ಸೀರಮ್‌ ಇನ್‌ಸ್ಟಿಟ್ಯೂಟ್‌

    ನವದೆಹಲಿ: ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ ಕೊರೊನಾ ವ್ಯಾಕ್ಸಿನ್ (Covid Vaccine) ಕಾರಣವಲ್ಲ ಎಂದು ಲಸಿಕೆ ತಯಾರಕ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (SII) ಹೇಳಿದೆ. ತಮ್ಮ ಕೋವಿಶೀಲ್ಡ್ (Covishield) ಲಸಿಕೆ ಸುರಕ್ಷಿತವಾಗಿದೆ ಎಂದು ಇದೇ ವೇಳೆ ಅದು ಸ್ಪಷ್ಟಪಡಿಸಿದೆ.

    ಸೀರಮ್‌ ಇನ್‌ಸ್ಟಿಟ್ಯೂಟ್‌ ತಮ್ಮ ಔಷಧವು ಕೋವಿಡ್‌ 19 ವಿರುದ್ಧ ರಕ್ಷಣೆ ನೀಡುವಲ್ಲಿ ಪರಿಣಾಮಕಾರಿಯಾಗಿದೆ. ಕೋವಿಶೀಲ್ಡ್‌ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ವಿಶ್ವಾದ್ಯಂತ ಹಲವಾರು ಕ್ಲಿನಿಕಲ್‌ ಪರೀಕ್ಷೆಗಳು ಮತ್ತು ನಿಯಂತ್ರಕ ಸಂಸ್ಥೆಗಳ ಮೌಲ್ಯಮಾಪನದಿಂದ ದೃಢೀಕರಿಸಲಾಗಿದೆ. ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ದುಷ್ಪರಿಣಾಮಗಳಿಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಸಂಸ್ಥೆ ವಾದಿಸಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ ನಾಲ್ವರು ಮೊಮ್ಮಕ್ಕಳಿಗೆ ಬೈಪಾಸ್‌ ಸರ್ಜರಿ!

    ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇತ್ತೀಚೆಗೆ ರಾಜ್ಯದಲ್ಲಿ ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡ ಕೆಲವರು ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ಹೇಳಿಕೆಯು ಸಾರ್ವಜನಿಕರಲ್ಲಿ ಗೊಂದಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆದರೆ ಸೀರಂ ತನ್ನ ಲಸಿಕೆಯ ಸುರಕ್ಷತೆಯನ್ನು ಪುನರುಚ್ಚರಿಸಿದ್ದು, ಇಂತಹ ಆರೋಪಗಳಿಗೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿದೆ.  ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ

    ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಭಾರತದ ಔಷಧ ನಿಯಂತ್ರಣ ಸಂಸ್ಥೆಗಳಂತಹ ಸಂಸ್ಥೆಗಳು ಕೋವಿಶೀಲ್ಡ್‌ ಲಸಿಕೆಯನ್ನು ವ್ಯಾಪಕವಾಗಿ ಬಳಕೆಗೆ ಅನುಮೋದಿಸಿವೆ. ಈ ಲಸಿಕೆಯು ಭಾರತದ ಕೋವಿಡ್‌-19 ಲಸಿಕಾ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಕೋಟ್ಯಂತರ ಜನರಿಗೆ ರಕ್ಷಣೆ ನೀಡಿದೆ ಎಂದು ತಿಳಿಸಿದೆ.

    ಆತಂಕ ಮೂಡಿಸುವ ಯಾವುದೇ ಆಧಾರರಹಿತ ಹೇಳಿಕೆಗಳಿಗೆ ಜನರು ಭಯ ಪಡಬಾರದು. ಒಳಗಾಗದಂತೆ ಮನವಿ ಮಾಡಿದ್ದು, ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ವೈಜ್ಞಾನಿಕ ಮಾಹಿತಿಯನ್ನು ಅವಲಂಬಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದೆ.

  • ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ

    ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ

    ದಾವೋಸ್: ಭಾರತದೊಂದಿಗಿನ (India) ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಚೀನಾ (China) ಕೋವಿಡ್ ಲಸಿಕೆಗಳನ್ನು (Vaccine) ತರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಬೇಕು ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮುಖ್ಯಸ್ಥ ಅದಾರ್ ಪೂನಾವಾಲಾ (Adar Poonawalla) ಸಲಹೆ ನೀಡಿದ್ದಾರೆ.

    ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ಗೆ ಆಗಮಿಸಿರುವ ಅವರು ಮಾಧ್ಯಮದ ಜೊತೆ ಮಾತನಾಡಿ, ಚೀನಾ ಇದೀಗ ಕೋವಿಡ್‌ನಿಂದ (Covid-19) ಚೇತರಿಸಿಕೊಳ್ಳುವುದು ಮುಖ್ಯವಾಗಿದೆ. ಇದು ಜಗತ್ತಿಗೂ ಒಳಿತು. ನಾವು ಚೀನಾದೊಂದಿಗೆ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಭಿನ್ನಾಭಿಪ್ರಾಯಗಳು, ಸಮಸ್ಯೆಗಳು ಹಾಗೂ ಯಾವುದೇ ರೀತಿಯ ಆತಂಕಗಳನ್ನು ಬದಿಗಿಟ್ಟು ನಮ್ಮ ಲಸಿಕೆಗಳನ್ನು ಬೂಸ್ಟರ್ ಡೋಸ್ ಆಗಿ ಪಡೆದುಕೊಳ್ಳಲು ಕೇಳುತ್ತಿದ್ದೇವೆ ಎಂದಿದ್ದಾರೆ.

    ಭಾರತದ ಸೀರಮ್ ಇನ್‌ಸ್ಟಿಟ್ಯೂಟ್ ತನ್ನ 2 ಪ್ರಮುಖ ಲಸಿಕೆಗಳಾದ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಅನ್ನು ಕೊರೊನಾ ಸೋಂಕಿಗಾಗಿ ಮಾರಾಟ ಮಾಡುತ್ತಿದೆ. ಚೀನಾ ಇದೀಗ ಮತ್ತೆ ಕೊರೊನಾ ಸೋಂಕಿಗೆ ನಲುಗುತ್ತಿದೆ. ಜಗತ್ತು ತನ್ನ ಪೂರೈಕೆ ಸರಪಳಿಯನ್ನು ಕಾರ್ಯಗತಗೊಳಿಸುವುದು ಮುಖ್ಯ. ಈ ಸಂದರ್ಭದಲ್ಲಿ ಚೀನಾ ಲಸಿಕೆಗಳನ್ನು ತರಿಸಿ, ಸೋಂಕಿನಿಂದ ಚೇತರಿಸಿಕೊಂಡರೆ ಜಗತ್ತಿಗೂ ಒಳಿತಾಗುತ್ತದೆ ಎಂದು ತಿಳಿಸಿದರು.

    ಚೀನಾ ಇದೀಗ ಕೋವಿಡ್‌ನಿಂದ ನರಳಾಡುತ್ತಿದ್ದು, ಮುಂದೆ ಯಾವ ಹೆಜ್ಜೆಯಿಟ್ಟು ಸಾಗಬೇಕು ಎಂಬುದನ್ನು ತ್ವರಿತವಾಗಿ ನಿರ್ಧರಿಸಲಿದೆ ಎಂದು ನಾನು ಭಾವಿಸುತ್ತೇನೆ. ಚೀನಾ ಪಾಶ್ಚಿಮಾತ್ಯ ದೇಶಗಳಿಂದ ಲಸಿಕೆಯನ್ನು ಆಮದು ಮಾಡಿಕೊಳ್ಳುವ ದಿಟ್ಟ ನಿರ್ಧಾರ ಮಾಡಬೇಕಾಗುತ್ತದೆ. ಒಂದು ವೇಳೆ ಚೀನಾ ಈಗಲೇ ಮಹತ್ವದ ನಿರ್ಧಾರ ಮಾಡದೇ ಹೋದರೆ ಮುಂದೆ ಪರಿಸ್ಥಿತಿಯನ್ನು ನಿಭಾಯಿಸಲು ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ

    ಕೋವಿಡ್ 2020ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಕಂಡುಬಂದಿತ್ತು. ಇಡೀ ಜಗತ್ತು ಕೊರೊನಾ ಸಂಕಷ್ಟವನ್ನು ಅನುಭವಿಸಿ ನರಳಿದೆ. ಇದೀಗ ಮತ್ತೆ ಚೀನಾದಲ್ಲಿ ಕೊರೊನಾ ಪ್ರಕರಣ ಉಲ್ಬಣಗೊಳ್ಳುತ್ತಿದೆ. ಆದರೆ ಚೀನಾದಲ್ಲಿ ಆರೋಗ್ಯ ಮೂಲಸೌಕರ್ಯದ ಕೊರತೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳನ್ನು ಕಾಣುತ್ತಿದೆ. ಇದನ್ನೂ ಓದಿ: ಚಲನಚಿತ್ರಗಳ ಬಗ್ಗೆ ಅನಗತ್ಯ ಟೀಕೆ ಮಾಡಬೇಡಿ: ನಾಯಕರಿಗೆ ಮೋದಿ ಸೂಚನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k