Tag: silent protest

  • ಬಾಯಿ ಬಡಿದುಕೊಂಡು ಸಾಕಾಗಿ ಕಾಂಗ್ರೆಸ್ಸಿಗರು ಇಂದು ಮೌನಕ್ಕೆ ಶರಣಾಗಿದ್ದಾರೆ: ಸುಧಾಕರ್ ವ್ಯಂಗ್ಯ

    ಬಾಯಿ ಬಡಿದುಕೊಂಡು ಸಾಕಾಗಿ ಕಾಂಗ್ರೆಸ್ಸಿಗರು ಇಂದು ಮೌನಕ್ಕೆ ಶರಣಾಗಿದ್ದಾರೆ: ಸುಧಾಕರ್ ವ್ಯಂಗ್ಯ

    ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ವೇಳೆ ಬಾಯಿ ಬಡಿದುಕೊಂಡರೂ ಪ್ರಯೋಜನ ಆಗಲಿಲ್ಲ. ಈಗ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್‍ನವರ ಮೌನ ಪ್ರತಿಭಟನೆ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 54 ವರ್ಷ ಆಡಳಿತ ಮಾಡಿದ್ದ ಕಾಂಗ್ರೆಸ್ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿಲ್ವಾ? ಆಗ ಎಲ್ಲವೂ ಸರಿ ಇತ್ತು ಅನ್ನುವವರು ಈಗೇಕೆ ಸಂದೇಹ ಪಡುತ್ತಿದ್ದಾರೆ ಎಂದು ಸುಧಾಕರ್ ಪ್ರಶ್ನಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗಲೇ 8-10 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಅಮಿತ್ ಶಾ ಅವರನ್ನು ಗಡಿಪಾರು ಮಾಡಲಾಗಿತ್ತು. ಕಾಂಗ್ರೆಸ್‍ನ ದ್ವಿಮುಖ ನೀತಿಯನ್ನು ಜನರು ಒಪ್ಪಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದವರು ಮಾತ್ರ ತನಿಖೆ, ವಿಚಾರಣೆಗೆ ಸಹಕರಿಸುತ್ತಾರೆ. ಒಂದು ವೇಳೆ ನ್ಯಾಯ ಸಿಕ್ಕಿಲ್ಲ ಎಂದರೆ ಕೋರ್ಟ್ ವ್ಯವಸ್ಥೆ ನಮ್ಮ ದೇಶದಲ್ಲಿದೆ ಎಂದು ಕಾಂಗ್ರೆಸ್ ಪ್ರತಿಭಟನೆಯ ಬಗ್ಗೆ ಕಿಡಿಕಾರಿದರು.

    ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಜ್ವರದಿಂದ ಬಳಲುತ್ತಿದ್ರೂ ಮೌನ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ. ಜನರಿಗೋಸ್ಕರ ಕೆಲಸ ಮಾಡುತ್ತಿದೆ. ಆಡಳಿತಕ್ಕೆ ಬಂದು 3 ವರ್ಷವಾಗಿದೆ. ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಈಗ ಬಸವರಾಜ್ ಬೊಮ್ಮಾಯಿಯವರು ಸಿಎಂ ಆಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನೆರವು ಪಡೆದ ಲಕ್ಷಾಂತರ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಪಕ್ಷ ಹಾಗೂ ಸರ್ಕಾರದ ಕಾರ್ಯ ವೈಖರಿಯನ್ನು ಮೆಚ್ಚಿ ಸಂದೇಶ ಕಳುಹಿಸಲಿದ್ದಾರೆ ಎಂದು ತಿಳಿಸಿದರು.

    ಯಾವುದೇ ಒಂದು ಸಮುದಾಯದಿಂದ ಒಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಸಮುದಾಯದ ಒಟ್ಟಾರೆ ಅಭಿಪ್ರಾಯ ಇರಬೇಕು. ಉಳಿದ ಸಮುದಾಯಗಳ ವಿಶ್ವಾಸ ಗಳಿಸಬೇಕು. ಜನರ ನಾಯಕತ್ವದ ಮೇಲೆ ನಂಬಿಕೆ ಇಟ್ಟವರು ಮಾತ್ರ ಮುಖ್ಯಮಂತ್ರಿಯಾಗಬಹುದು. ಯಾವುದೇ ಸಮುದಾಯಕ್ಕೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ. ಸಚಿವರಾಗಿ ಅನುಭವವಿದ್ದಂತಹ ಜಮೀರ್ ಅಹ್ಮದ್‍ರಿಂದ ಒಕ್ಕಲಿಗರಿಗೆ ನೋವಾಗುವಂತಹ ಮಾತನ್ನು ನಿರೀಕ್ಷೆ ಮಾಡಿರಲಿಲ್ಲ. ರಾಜಕಾರಣಿಗಳು ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು ಎಂದು ಹೇಳಿದರು.

    ಒಕ್ಕಲಿಗ ಸಮುದಾಯ ಕೃಷಿಕರ ಸಮುದಾಯ. ಕೃಷಿಕರು ದೇಶದ ಬೆನ್ನೆಲುಬು. ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆ ಒಳ್ಳೆಯ ವಿಶ್ವಾಸ ಇಟ್ಟುಕೊಂಡು, ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ. ಕಾಯಕವನ್ನೇ ನಂಬಿರುವ ಸಮುದಾಯವಿದು. ಜಮೀರ್ ಹೇಳಿಕೆಯಿಂದ ಅವರಿಗೆ ಹಾಗೂ ಅವರ ಪಕ್ಷಕ್ಕೆ ಹೆಚ್ಚು ನಷ್ಟವಾಗುತ್ತದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಪೌರತ್ವ ವಿಧೇಯಕ ವಿರೋಧಿಸಿ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಪ್ರತಿಭಟನೆ

    ಪೌರತ್ವ ವಿಧೇಯಕ ವಿರೋಧಿಸಿ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಪ್ರತಿಭಟನೆ

    ಬೀದರ್: ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಪಾಸಾದ ಪೌರತ್ವ ವಿಧೇಯಕ ವಿರೋಧಿಸಿ ಇಂದು ಮುಸ್ಲಿಂ ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಬೀದರ್ ನಲ್ಲಿ ಮೌನ ಪ್ರತಿಭಟನೆ ಮಾಡಿದ್ದಾರೆ.

    ಸಾವಿರಾರು ಮುಸ್ಲಿಂ ಸಂಘಟನೆಯ ಕಾರ್ಯಕರ್ತರು ಹಾಗೂ ಕೇಲ ಕೇಂದ್ರ ಸಂಘಟನೆ ಕಾರ್ಯಕರ್ತರು ಸೇರಿ ಬೃಹತ್ ರ್ಯಾಲಿ ಮಾಡುವ ಮೂಲಕ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಶಾಗೆ ವಿಧೇಯಕ ವಾಪಸ್ ಪಡೆಯುವಂತೆ ಎಚ್ಚರಿಕೆ ನೀಡಿದರು. ನಗರದ ಚೌಬಾರ್ ವೃತದಿಂದ ಪ್ರಾರಂಭವಾದ ರ್ಯಾಲಿ ನಯಾಕಮಾನ್, ಅಂಬೇಡ್ಕರ್ ವೃತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಗೆ ಬಂದು ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವಗೆ ಮನವಿ ಸಲ್ಲಿಸಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪೌರತ್ವ ವಿಧೇಯಕದ ವಿರುದ್ಧ ಕಿಡಿಕಾರಿದ ಸಂಘಟನೆ ಮುಖಂಡರು ಈ ವಿಧೇಯಕ ಮುಸ್ಲಿಂರಗೆ ಅಷ್ಟೇ ಅಲ್ಲ.ಇದು ದೇಶದ ಎಲ್ಲಾ ಜನರಿಗೆ ಮಾರಕವಾಗಲಿದೆ. ಮೋದಿ ದೇಶದ ಯುವಕರಿಗೆ ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡಿ ಯುವಕರಿಗೆ ದಾರಿ ದೀಪವಾಗುತ್ತೇನೆ ಎಂದಿದ್ದರು. ಆದರೆ ಇಂದು ಲಕ್ಷಾಂತರ ಯುವಕರು ಬೀದಿಗೆ ಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂಘಟನೆಗಳ ಮುಖಂಡರು ತೀವ್ರ ವಾಗ್ದಾಳಿ ನಡೆಸಿದರು.