Tag: Silver Medal

  • ಅಪಘಾತ ರಹಿತ ಚಾಲನೆ: ಕೋಲಾರದ 62 ಚಾಲಕರಿಗೆ ಬೆಳ್ಳಿ ಪದಕ

    ಅಪಘಾತ ರಹಿತ ಚಾಲನೆ: ಕೋಲಾರದ 62 ಚಾಲಕರಿಗೆ ಬೆಳ್ಳಿ ಪದಕ

    ಕೋಲಾರ: ಅಪಘಾತ ರಹಿತವಾಗಿ ಸುರಕ್ಷಿತ ಚಾಲನೆ ಮಾಡಿರುವ ಚಾಲಕರಿಗೆ ಸಾರಿಗೆ ಇಲಾಖೆ 30ನೇ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕವನ್ನು ಪ್ರದಾನ ಮಾಡಿ ಅಭಿನಂದಿಸಲಾಗಿದೆ.

    ಜಿಲ್ಲೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಆವರಣದಲ್ಲಿ 30ನೇ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಜೆ. ಮಂಜುನಾಥ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

    ರಾಜ್ಯದಲ್ಲೇ ಕಳೆದ 5 ವರ್ಷಗಳಲ್ಲಿ ಹೆಚ್ಚು ಸುರಕ್ಷಿತ ಚಾಲನೆ ಮಾಡಿದ ಜಿಲ್ಲೆಗೆ ಕೋಲಾರ ಪಾತ್ರವಾದ ಹಿನ್ನೆಲೆಯಲ್ಲಿ ಅಪಘಾತ ರಹಿತ ಸುರಕ್ಷಿತ ಸೇವೆ ನೀಡಿರುವ ಕೋಲಾರ ವಿಭಾಗದ 62 ಜನ ಚಾಲಕರನ್ನ ಜಿಲ್ಲಾಧಿಕಾರಿಗಳು ಬೆಳ್ಳಿ ಪದಕ ನೀಡಿ ಗೌರವಿಸಿದರು.

    ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, 1968ರಲ್ಲಿ ಪ್ರಾರಂಭವಾದ ನಿಗಮ ನಷ್ಟದಲ್ಲಿದ್ದರೂ ಕೂಡ ಸಾರಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸೇವಾ ಮನೋಭಾವದಿಂದ ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ನೀಡುತ್ತಾ ಬಂದಿದೆ. ಪ್ರತಿ ಕಿ.ಮೀ ಗೆ 28 ರೂಪಾಯಿ ಆದಾಯ ಬರುತ್ತಿದ್ದರೆ, ಅದಕ್ಕೆ ನಿಗಮ 35 ರೂಪಾಯಿ ವ್ಯಯ ಮಾಡುತ್ತಿದೆ. ಕೋಲಾರ ವಿಭಾಗದಲ್ಲಿ ಮಾತ್ರವೇ 2,856 ಮಂದಿ ಸಾರಿಗೆಯಲ್ಲಿ ಕೆಲಸ ಮಾಡುತ್ತಿದ್ದು, 609 ಸಾರಿಗೆ ಬಸ್‍ಗಳು 754 ಗ್ರಾಮಗಳನ್ನು ತಲುಪಿ ಜನರಿಗೆ ಸಾರಿಗೆ ಸಂಪರ್ಕ ಕಲ್ಪಿಸಿದೆ ಎಂದು ತಿಳಿಸಿದರು.

    ಬಳಿಕ ಬೆಳ್ಳಿ ಪದಕ ಪಡೆದ ಚಾಲಕರು ಮಾತನಾಡಿ, ಸುರಕ್ಷಿತವಾಗಿ ಬಸ್ ಚಾಲನೆ ಮಾಡಿದ ನಮ್ಮನ್ನು ಸಾರಿಗೆ ನಿಗಮ ಪದಕ ಕೊಟ್ಟು ಗೌರವಿಸುತ್ತಿರುವುದು ಸಂತೋಷ ತಂದಿದೆ. ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಎಲ್ಲಾ ಸಿಬ್ಬಂದಿಗೆ ನಿಗಮ ಉತ್ತಮ ಸೌಲಭ್ಯ ಕೊಟ್ಟಿರುವುದು ನೆಮ್ಮದಿಯ ವಿಚಾರ ಎಂದು ಅಭಿಪ್ರಾಯ ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಪಡೆದ ಮಂಗ್ಳೂರು ವಿದ್ಯಾರ್ಥಿನಿ

    ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಪಡೆದ ಮಂಗ್ಳೂರು ವಿದ್ಯಾರ್ಥಿನಿ

    ಮಂಗಳೂರು: ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಮಂಗಳೂರಿನ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಎರಡು ಬೆಳ್ಳಿ ಪದಕ ಪಡೆದಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

    15ನೇ ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ್ನು ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ನವೆಂಬರ್ 17 ಹಾಗೂ 18 ರಂದು ದೆಹಲಿಯಲ್ಲಿ ಆಯೋಜಿಸಿತ್ತು. ಈ ಚಾಂಪಿಯನ್ ಶಿಪ್‍ನ 13 ವರ್ಷದೊಳಗಿನ ವಿಭಾಗದಲ್ಲಿ ಮಂಗಳೂರಿನ ಅಮಂಡಾ ಕೊನ್ಸೆಸ್ಸೊ ಭಾಗವಹಿಸಿ ಬೆಳ್ಳಿ ಪದಕ ಪಡೆದಿದ್ದಾರೆ.

    ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ನಗರದ ಮಾಲೆಮಾರ್ ನಿವಾಸಿಯಾದ ಫ್ರಾನ್ಸಿಸ್ ಹಾಗೂ ಡೋರಿಸ್ ದಂಪತಿಯ ಪುತ್ರಿಯಾಗಿದ್ದು, ಮಂಗಳೂರಿನ ನೀರುಮಾರ್ಗದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಅಲ್ಲದೇ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಸದಸ್ಯರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಉಷಾರಾಣಿಗೆ ಪ್ರಮೋಷನ್!

    ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಉಷಾರಾಣಿಗೆ ಪ್ರಮೋಷನ್!

    – ಸರ್ಕಾರದಿಂದ ಸನ್ಮಾನ, ಡಿಸಿಎಂ ಅಭಿನಂದನೆ

    ಬೆಂಗಳೂರು: ಚಿನ್ನದ ಪದಕ ಗೆಲ್ಲುವ ನೀರಿಕ್ಷೆ ಇತ್ತು ಆದ್ರೆ ಬೆಳ್ಳಿ ಗೆದ್ದಿದ್ದೇವೆ. ಇಂದು ರಾಜ್ಯ ಸರ್ಕಾರ ನನ್ನನ್ನು ಗೌರವಿಸಿ, ಬಿ ದರ್ಜೆಯ ಪ್ರಮೋಷನ್ ನೀಡಿದೆ ಅಂತ ಏಷ್ಯನ್ ಗೇಮ್ಸ್ ನ ಕಬಡ್ಡಿಯಲ್ಲಿ ಬೆಳ್ಳಿ ಪದಕ ಗೆದ್ದಿರುವ ರಾಜ್ಯ ಪೊಲೀಸ್ ಕಾನ್ಸ್ ಸ್ಟೇಬಲ್ ಉಷಾರಾಣಿ ಹೇಳಿದ್ದಾರೆ.

    ಉಷಾರಾಣಿ ಅವರು ರಾಷ್ಟ್ರಮಟ್ಟದಲ್ಲಿ ಕಬ್ಬಡಿ ತಂಡವನ್ನು ಪ್ರತಿನಿಧಿಸಿ, ಬೆಳ್ಳಿ ಗೆದ್ದಿದ್ದಾರೆ. ಹೀಗಾಗಿ ಸರ್ಕಾರದಿಂದ 15 ಲಕ್ಷ ಚೆಕ್ ನೊಂದಿಗೆ ಸನ್ಮಾನಿತಗೊಂಡರು. ಸನ್ಮಾನದ ನಂತರ ಗೆಲುವಿನ ಖುಷಿ ಹಂಚಿಕೊಂಡ ಅವರು, ಚಿನ್ನದ ಪದಕ ಗೆಲ್ಲುವ ನೀರಿಕ್ಷೆ ಇತ್ತು. ಆದ್ರೆ ಬೆಳ್ಳಿ ಗೆದ್ದಿದ್ದೇವೆ. ರಾಜ್ಯ ಸರ್ಕಾರ ನನ್ನನ್ನು ಗೌರವಿಸಿದ್ದಕ್ಕೆ ಹೆಮ್ಮೆ ಇದೆ. ಹೀಗಾಗಿ ತುಂಬಾ ಖುಷಿಯಾಗುತ್ತಿದೆ. ಬಿ ದರ್ಜೆಯ ಪ್ರಮೋಷನ್ ನೀಡಿದ್ದಾರೆ. ಇಲಾಖೆಯಲ್ಲಿ ಇದೇ ಮೊದಲಿಗೆ ಮುಂಬಡ್ತಿ ಕೊಡುತ್ತಿರುವುದು. ಅದು ನನಗೆ ಸಿಕ್ಕಿರೋದು ಖುಷಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಚಿನ್ನ ಗೆಲ್ಲುವ ಭರವಸೆ ಇದೆ. ನನ್ನ ಶ್ರಮಕ್ಕೆ ಇಲಾಖೆಯೂ ಸಹಕಾರ ಕೊಟ್ಟಿದೆ ಅಂತ ಅವರು ಹೇಳಿದ್ರು.

    ಉಷಾರಾಣಿ ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಜಿ ನೀಲಮಣಿರಾಜು, ಎಡಿಜಿಪಿ ಭಾಸ್ಕರ್ ರಾವ್ ಮತ್ತು ಕಮಿಷನರ್ ಸುನೀಲ್ ಕುಮಾರ್ ಭಾಗಿಯಾದ್ದರು.  ಇದನ್ನೂ ಓದಿ: ಸಾಧನೆಯ ಹಾದಿಯನ್ನು ತೆರೆದಿಟ್ಟ ಏಷ್ಯನ್ ಗೇಮ್ಸ್ 2018ರ ಬೆಳ್ಳಿ ಪದಕ ವಿಜೇತೆ ಉಷಾರಾಣಿ

    ಡಿಸಿಎಂ ಅಭಿನಂದನೆ:
    ಜಕಾರ್ತ ನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ತಂಡ ಬೆಳ್ಳಿ ಪದಕ ಪಡೆದಿದೆ. ಮಹಿಳಾ ಕಬ್ಬಡಿ ತಂಡದಲ್ಲಿ ಬೆಂಗಳೂರಿನ ಉಷಾರಾಣಿ ಭಾಗವಹಿಸಿದ್ದರು. ಇವರು ನಮ್ಮ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಇದೀಗ ನಮ್ಮ ರಾಜ್ಯಕ್ಕೆ ನಮ್ಮ ಇಲಾಖೆಗೆ ಕೀರ್ತಿ ತಂದಿದ್ದಾರೆ. ನಮ್ಮ ಇಲಾಖೆ ಮತ್ತು ಯುವಜನಾ ಕ್ರೀಡಾ ಇಲಾಖೆಯಿಂದ 15 ಲಕ್ಷ ಚೆಕ್ ನೀಡಿದ್ದೇವೆ. ನಮ್ಮ ಪೊಲೀಸ್ ಇಲಾಖೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದೇವೆ ಅಂತ ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2018: ಕಬ್ಬಡ್ಡಿಯಲ್ಲಿ ಬೆಳ್ಳಿ ಪದಕ ಪಡೆದ ಕನ್ನಡತಿ

    ಹಿಮಾದಾಸ್ ಗೂ 15 ಲಕ್ಷ ರೂ.:
    ಸರ್ಕಾರದಲ್ಲಿ ನಿಯಮಾವಳಿಗಳನ್ನ ಬದಲಾವಣೆ ಮಾಡುತ್ತಿದ್ದೇವೆ. ಉಷಾರಾಣಿ ಅವರಿಗೆ ಬಿ ದರ್ಜೆಗೆ ಪ್ರಮೋಷನ್ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಚಿನ್ನದ ಪದಕ ಗಳಿಸಬೇಕು ಅಂತಾ ಆಶಿಸುತ್ತೇನೆ. ಅವರ ತಂದೆ ತಾಯಿ ಮತ್ತು ಕೋಚ್ ಜಗದೀಶ್ ಅವರಿಗೂ ಅಭಿನಂದನೆ ಸಲ್ಲಿಸುತ್ತೇವೆ. ನಮ್ಮ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡುತ್ತಿದೆ. ಬೆಳ್ಳಿ ಪದಕ ಪಡೆದ ಹಿಮಾದಾಸ್ ಅವರಿಗೂ 15 ಲಕ್ಷ ರೂಪಾಯಿ ಬಹುಮಾನ ನೀಡುತ್ತಿದ್ದೇವೆ. ನಮ್ಮ ರಾಜ್ಯದ ಫೋಲ್ಸ್ ಇರ್ಜಾ ಮತ್ತು ರೋಹಣ ಬೋಪಣ್ಣ ಅವ್ರಿಗೂ ಇಲಾಖೆ ವತಿಯಿಂದ ಗೌರವ ಸಮರ್ಪಣೆ ಮಾಡುತ್ತೇವೆ ಅಂತಾ ಪರಮೇಶ್ವರ್ ಅಂದ್ರು. ಇದನ್ನೂ ಓದಿ: 400 ಮೀಟರ್ ರೇಸ್: ಹಿಮಾದಾಸ್, ಅನಾಸ್‍ಗೆ ಬೆಳ್ಳಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಇದನ್ನೂ ಓದಿ:  ನಟ ಪುನೀತ್, ಡಿಸಿಪಿ ಚನ್ನಣ್ಣನವರಿಂದ ಹಿಮಾದಾಸ್ ಗೆ ಅಭಿನಂದನೆ

  • ಏಷ್ಯನ್ ಗೇಮ್ಸ್ 2018: ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಬೆಳ್ಳಿ

    ಏಷ್ಯನ್ ಗೇಮ್ಸ್ 2018: ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಬೆಳ್ಳಿ

    ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತಕ್ಕೆ ಪ್ರಥಮ ಬೆಳ್ಳಿ ಪದಕ ಲಭಿಸಿದ್ದು, 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಸಾಧನೆ ಮಾಡುವ ಮೂಲಕ ದೀಪಕ್ ಕುಮಾರ್ ಬೆಳ್ಳಿಯ ಪದಕಕ್ಕೆ ಕೊರಳ್ಳೊಡಿದ್ದಾರೆ.

    ಇಂದು ನಡೆದ ಪುರುಷರ 10 ಮೀ ಏರ್ ರೈಫಲ್ ವಿಭಾಗದ ಅಂತಿಮ ಹಂತದ ಪಂದ್ಯಾವಳಿಯಲ್ಲಿ ಭಾರತದ ದೀಪಕ್ ಕುಮಾರ್ ರವರು 247.7 ಅಂಕಗಳೊಂದಿಗೆ ಬೆಳ್ಳಿ ಪದಕ ಪಡೆಯುವಲ್ಲಿ ಸಫಲರಾದರು.

    ಚೀನಾದ ಯಾಂಗ್ ಹಾರಾನ್ 249.1 ಅಂಕಗಳಿಸಿ ಚಿನ್ನದ ಪದಕಗಳಿಸಿದರೆ, ಚೀನಾ ತೈಪಿಯ ಶಾವೊಕುವಾನ್ 226.8 ಅಂಕಗಳಿಸಿ ಕಂಚಿನ ಪದಕಕ್ಕೆ ಭಾಜನರಾದರು. ಅಲ್ಲದೇ ಭಾರತದ ಮತ್ತೊಬ್ಬ ಆಟಗಾರರಾದ ರವಿಕುಮಾರ್ ರವರು 205.2 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟರು.

    ಭಾನುವಾರ ಪುರುಷರ ಫ್ರೀ ಸ್ಟೈಲ್ ಕುಸ್ತಿಯ 65 ಕೆಜಿ ವಿಭಾಗದಲ್ಲಿ ಬಜರಂಗ ಪೂನಿಯಾ ಸ್ವರ್ಣದ ಪದಕಕ್ಕೆ ಮುತ್ತಿಟ್ಟಿದ್ದರು. ಜಪಾನ್ ದೇಶದ ಟಕಟಾನಿ ಡೈಚಿ ವಿರುದ್ಧ ನಡೆದ ಅಂತಿಮ ಸುತ್ತಿನಲ್ಲಿ 11-8 ಅಂಕಗಳ ಅಂತರದಿಂದ ಗೆಲ್ಲುವ ಮೂಲಕ ಪೂನಿಯಾ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಮಿಶ್ರ ಶೂಟಿಂಗ್ ವಿಭಾಗದ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾಗವಹಿಸಿದ್ದ ಅಪೂರ್ವಿ ಚಾಂಡೇಲಾ, ರವಿ ಕುಮಾರ್ ಜೋಡಿ ಕಂಚಿನ ಪದಕ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

    ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

    ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾದ 21 ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಕನ್ನಡಿಗ ಪಿ. ಗುರುರಾಜ್ ಅವರು 56 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ.

    ಪುರುಷರ 56 ಕೆಜಿ ವಿಭಾಗದಲ್ಲಿ ಒಟ್ಟು 249 ಕೆಜಿ ಭಾರ ಎತ್ತಿದ ಅವರು, ಸ್ಕ್ಯಾಚ್ ವಿಭಾಗದಲ್ಲಿ 111 ಕೆಜಿ, ಕ್ಲೀನ್ ಎಂಡ್ ಜರ್ಕ್ ವಿಭಾಗದಲ್ಲಿ 138 ಕೆಜಿ ಎತ್ತುವುದರ ಮೂಲಕ ಪದಕ ಗೆದ್ದಿದ್ದಾರೆ. ಗುರುರಾಜ್ ಮೊದಲ ಪದಕವನ್ನು ಜಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಭಾರತೀಯ ವಾಯುಪಡೆ ಉದ್ಯೋಗಿಯಾಗಿರುವ ಗುರುರಾಜ್, ಟ್ರಕ್ ಚಾಲಕರ ಪುತ್ರರಾಗಿದ್ದಾರೆ. ಇದೀಗ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಚಂಢೀಗಡ್ ಭಾರತೀಯ ವಾಯುಸೇನೆಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಗುರುರಾಜ್ ಪ್ರತಿದಿನ 4 ಘಂಟೆ ಅಭ್ಯಾಸಕ್ಕೆ ತೆರಳುತ್ತಿದ್ದರು. ಚಿನ್ನ ಗೆದ್ದ ಖುಷಿಯಲ್ಲಿರುವ ಗುರುರಾಜ್ ತನ್ನ ಸಾಧನೆಗೆ ತಂದೆ-ತಾಯಿ, ಕ್ರೀಡೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಶಿಕ್ಷಕರು ಹಾಗೂ ಕೋಚ್ ರಾಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನವೇ ಕಾರಣ ಎಂದು ಹೇಳುತ್ತಿದ್ದಾರೆ.

    ಈ ಹಿಂದೆ 2017ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಚಾಂಪಿಯನ್ ಶಿಪ್‍ನಲ್ಲಿ ಕಂಚು ಪದಕ ಹಾಗೂ 2016 ರಲ್ಲಿ ದಕ್ಷಿಣ ಏಷ್ಯಾ ಗೇಮ್ಸ್ ನಲ್ಲಿ ಗುರುರಾಜ್ ಚಿನ್ನದ ಪದಕ ಗೆದ್ದಿದ್ದರು. 2016ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ಉಡುಪಿಯಲ್ಲಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಘೋಷಣೆ ಮಾಡಿದ್ದರು.

    ಪಿವಿ ಸಿಂಧು ಚಾಲನೆ: ಬುಧವಾರ ಭಾರತದ ಪರ ಪಿವಿ ಸಿಂಧು ತ್ರಿವರ್ಣ ಧ್ವಜ ಹಿಡಿದು ಮುನ್ನಡೆಸುವ ಮೂಲಕ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ 21ನೇ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ್ದರು. ಈ ಬಾರಿ ಕ್ರೀಡಾಕೂಟದಲ್ಲಿ 71 ರಾಷ್ಟ್ರಗಳ 4,500 ಅಥ್ಲೀಟ್ಸ್ ಭಾಗಿಯಾಗುತ್ತಿದ್ದು, 275 ಗೋಲ್ಡ್ ಮೆಡೆಲ್ ಪಡೆಯಲು ಸ್ಪರ್ಧೆ ನಡೆಸಿದ್ದಾರೆ. ಭಾರತದಿಂದ ಒಟ್ಟು 221 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಇದು 12 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ.

    ಈ ಹಿಂದೆ ಗ್ಲಾಸ್ಗೊದಲ್ಲಿ ನಡೆದಿದ್ದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ 15 ಚಿನ್ನ, 30 ಬೆಳ್ಳಿ ಹಾಗೂ 19 ಕಂಚಿನ ಪದಕದೊಂದಿಗೆ ಒಟ್ಟು 64 ಪದಕಗಳನ್ನು ಭಾರತ ತಂಡ ಗೆದ್ದುಕೊಂಡಿತ್ತು. ಈ ಬಾರಿ ಪದಕಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಭರವಸೆಯಲ್ಲಿದೆ.

     

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಗಿರೀಶ್!

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಗಿರೀಶ್!

    ಹಾಸನ: 2012ರಲ್ಲಿ ಲಂಡನ್ ನಲ್ಲಿ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಗಿರೀಶ್ ಅವರ ವಿವಾಹ ಇಂದು ಹಾಸನದಲ್ಲಿ ಜರುಗಿತು.

    ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನಡೆದಿದ್ದು, ಬಂಧು-ಮಿತ್ರರು, ಹಿತೈಷಿಗಳ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಗಿರೀಶ್ ತಾಳಿ ಕಟ್ಟಿದರು. ಎಂಎಸ್‍ಸಿ ಪದವಿ ಓದಿದ ಮೈಸೂರು ಮೂಲದ ಸಹನಾರನ್ನು ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

    ಪೋಷಕರು ಈ ಮದುವೆಯನ್ನು ನಿಶ್ಚಯಿಸಿದ್ದರು. ಶುಭಾಶಯ ಕೋರಿದ ಎಲ್ಲರಿಗೂ ಧನ್ಯವಾದ ಎಂದು ಗಿರೀಶ್ ಹೇಳಿದರು. ಇನ್ನು ವಧು ಸಹನಾ ಕೂಡ ತಮ್ಮ ಮದುವೆ ಕುರಿತು ಸಂತಸ ವ್ಯಕ್ತಪಡಿಸಿದರು.

    ಗಿರೀಶ್ 2012ರಲ್ಲಿ ಲಂಡನ್ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಹೈಜಂಪ್ ನಲ್ಲಿ ಕೂದಲೆಳೆ ಅಂತರದಲ್ಲಿ ಚಿನ್ನದ ಪದಕ ಬದಲಾಗಿ ಬೆಳ್ಳಿ ಪದಕ ಪಡೆದು ದೇಶದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಭಾರತ ಸರ್ಕಾರ ಇವರ ಸಾಧನೆಯನ್ನು ಪರಿಗಣಿಸಿ ಪದ್ಮಭೂಷಣ ಪ್ರಶಸ್ತಿ ಕೂಡ ನೀಡಿ ಗೌರವಿಸಿತ್ತು.