Tag: simple suni

  • ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಗಣೇಶ್ ಸಾಥ್

    ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಗಣೇಶ್ ಸಾಥ್

    ಸಿಂಪಲ್ ಸುನಿ (Simple Suni) ನಿರ್ದೇಶಿಸಿ ವಿನಯ್ ರಾಜ್‌ಕುಮಾರ್‌ (Vinod Rajkumar) ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್ ಗಣೇಶ್ (Ganesh) ರಿಲೀಸ್ ಮಾಡಿ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಾಥ್ ನೀಡಿದರು.

    ಹಾಡು ಬಿಡುಗಡೆ ಮಾತನಾಡಿದ ಗಣೇಶ್, ಹಾಡು ಬಹಳ ಚೆನ್ನಾಗಿದೆ. ಆ ಹುಕ್ ಲೈನ್ ಬಹಳ ಇಷ್ಟವಾಯಿತು. ಗುನು ಗುನುಗು ಅಂತಾ. ನನಗೆ ಈ ರೀತಿ ಸಾಂಗ್ ಕೇಳಲು ಬಹಳ ಇಷ್ಟ. ಇಡೀ ತಂಡಕ್ಕೆ ಆಲ್ ದಿ ಬೆಸ್ಟ್. ವಿನಯ್ ಹಾಗೂ ಹೀರೋಯಿನ್ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಮ್ಯೂಸಿಕ್ ತುಂಬಾ ಚೆನ್ನಾಗಿದೆ. ಅದು ಸಿಂಪಲ್ ಸುನಿ ಅಲ್ಲ ಕಂಪ್ಲಿಕೇಟೇಡ್ ಸುನಿ. ಕಥೆ ಮಾಡುವ ವಿಚಾರದಲ್ಲಿ ಕಂಪ್ಲಿಕೇಷನ್ ಇದೆ. ಸುನಿ ಕಥೆ ಹೇಳಬೇಕಾದರೆ ಸಿಂಪಲ್ ಆಗಿ ಹೇಳ್ತಾರೆ. ಸುನಿ ಅವರ ಜೊತೆ ನನ್ನ ದೊಡ್ಡ ಜರ್ನಿ ಇದೆ. ಚಮಕ್ ಆದ್ಮೇಲೆ ಸಿಕ್ತಾ ಇದ್ದೇವು. ಯಾವುದಾದರೂ ಲೈನ್ ಬಂದರೆ ಹೇಳುವವರು. ಮೂರ್ನಾಲ್ಕು ಲೈನ್ ಹೇಳಿದಾಗ ಗೊತ್ತಾಯ್ತು ಸಿಂಪಲ್ ಸುನಿ ಅಲ್ಲ ಕಂಪ್ಲಿಕೇಟೆಡ್ ಸುನಿ. ಒಂದ್ ಒಂದು ಸಾರಿಗೆ ಒಂದೊಂದು ಐಡಿಯಾ ತರುತ್ತಾರೆ. ಅದೇ ತರ ಈ ಸಿನಿಮಾ ಕೂಡ ವಿಭಿನ್ನವಾಗಿ ಇರುತ್ತದೆ ಅಂದುಕೊಂಡಿದ್ದೇನೆ. ಸುನಿಯ ಡೈಲಾಗ್, ಬರವಣಿಗೆ ಶೈಲಿ ನಾನು ದೊಡ್ಡ ಅಭಿಮಾನಿ. ಯಾವ ನಿರ್ದೇಶಕನಿಗೆ ಬರವಣಿಗೆ, ಭಾಷೆ ಹಿಡಿತ ಇರುತ್ತದೆಯೋ ಆತನಿಗೆ ತುಂಬಾ ಚೆನ್ನಾಗಿ ಹೊಳೆಯುತ್ತದೆ ಎಲ್ಲಾ. ನಮ್ಮ ಭಾಷೆ, ಅಕ್ಷರ, ವ್ಯಾಕರಣ ಮೇಲೆ ಹಿಡಿತ ಇರುವ ನಿರ್ದೇಶಕರಲ್ಲಿ ಒಬ್ಬರು ಸುನಿ ಎಂದರು.

    ನಟ ವಿಜಯ್ ರಾಜ್ ಕುಮಾರ್ ಮಾತನಾಡಿ, ಗುನು ಗುನುಗು ತುಂಬಾ ಇಷ್ಟವಾದ ಹಾಡು. ವೀರ್ ಸಮರ್ಥ್ ಅವರು ತುಂಬಾ ಚೆನ್ನಾಗಿ ಮ್ಯೂಸಿಕ್ ಮಾಡಿದ್ದಾರೆ. ಸಚಿನ್ ಅವರು ತುಂಬಾ ಚೆನ್ನಾಗಿ ಬರೆದಿದ್ದಾರೆ. ಇದೊಂದೇ ಕೊರಿಯೋಗ್ರಾಫ್ ಸಾಂಗ್ ಈ ಚಿತ್ರದಲ್ಲಿ ಇರುವುದು. ಇಡೀ ಟೀಂಗೆ ಧನ್ಯವಾದ. ಈ ಬಾರಿ ಫೈಟ್ ಇಲ್ಲ ಬರೀ ಪ್ರೀತಿ. ಒಂದು ಸರಳ ಪ್ರೇಮಕಥೆ ನೋಡಿ. ನೆಕ್ಸ್ಟ್ ಆಕ್ಷನ್ ನೋಡಿ.‌ನನ್ನದು ಅತಿಷಯ ಎಂಬ ಪಾತ್ರ. ಚಿಕ್ಕಪೇಟೆಯಲ್ಲಿ ಇಡೀ ಕುಟುಂಬ ಕಥೆ. ಈ ಕಥೆಯನ್ನು ಸುನಿ ಅವರು ತುಂಬಾ ಸರಳವಾಗಿ ಹೇಳಿದ್ದಾರೆ ಎಂದರು.

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ನಿರ್ಮಾಪಕರಾದ ರಮೇಶ್ ಸರ್  ಸಿನಿಮಾಗೆ ಏನೂ ಬೇಕು ಎಲ್ಲಾ ಕೊಟ್ಟಿದ್ದಾರೆ‌. ಪಾತ್ರಕ್ಕೆ ಏನೂ ಬೇಕು ಎಲ್ಲವನ್ನೂ ವಿನಯ್ ಅವರು ಕಲಿತ್ತಿದ್ದಾರೆ. ಸ್ವಾದಿಷ್ಟ, ಮಲ್ಲಿಕಾ ಇಬ್ಬರು ಅದ್ಭುತವಾಗಿ ನಟಿಸಿದ್ದಾರೆ. ಸಚಿನ್ ಅದ್ಭುತವಾಗಿ ಹಾಡು ಬರೆದಿದ್ದಾನೆ. ವೀರ ಸಮರ್ಥ್ ಸರ್ ಫರ್ಪೆಕ್ಟ್ ಟೈಮ್ ಗೆ ಡಿಲಿವರಿ ಮಾಡುವವರು. ಯಾವಾಗಲೂ ಕೀ ಬೋರ್ಡ್ ಮುಂದೆ ಕುಳಿತಿರುತ್ತಾರೆ. ಸಿನಿಮಾ ನೋಡಿದ ನಂತರ ಅವರ ಸ್ಟ್ರೇಂಥ್ ಏನೂ ಅನ್ನೋದು ಗೊತ್ತಾಗುತ್ತದೆ ಎಂದರು. ಸ್ವಾತಿಷ್ಠ ಕೃಷ್ಣನ್ ಮಾತನಾಡಿ, ಸುನಿ ಸರ್ ನನ್ನ ಈ ಚಿತ್ರಕ್ಕೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ರಮೇಶ್ ಸರ್ ಅಂತಾ ಪ್ರೊಡ್ಯೂಸರ್ ಎಲ್ಲಾ ಆರ್ಟಿಸ್ಟ್ ಗೆ ಸಿಗಬೇಕು. ತುಂಬಾ ಫ್ರೆಂಡ್ಲಿ. ವಿನಯ್ ಅವರ ಬಗ್ಗೆ ತುಂಬಾ ಹೇಳಬೇಕಿದೆ. ಮುಂದಿನ ಇವೆಂಟ್ ನಲ್ಲಿ ಒಂದೊಂದಾಗಿ ಹೇಳುತ್ತೇ‌ನೆ. ನನಗೆ ಒಳ್ಳೆ ಕೋ ಆರ್ಟಿಸ್ಟ್. ನಿಮ್ಮ ಜೊತೆ ನಟಿಸಲು ಮತ್ತಷ್ಟು ಅವಕಾಶಗಳು ಸಿಗಲಿ. ಟೆಕ್ನಿಷಿಯನ್ಸ್ ತುಂಬಾ ಫ್ರೆಂಡ್ಲಿಯಾಗಿ ಟ್ರೀಟ್ ಮಾಡಿದರು. ಇದು ನನ್ನ ಎರಡನೇ ಮೂವೀ. ಅನುರಾಧಾ ಪಾತ್ರ ನಿಮಗೆ ಇಷ್ಟ ಆಗುತ್ತದೆ ಎಂದರು.

    ಮಲ್ಲಿಕಾ ಸಿಂಗ್ ಮಾತನಾಡಿ, ಈ ಅದ್ಭುತ ಪ್ರಾಜೆಕ್ಟ್ ಭಾಗವಾಗಿದ್ದಕ್ಕೆ ಖುಷಿ ಇದೆ. ಮೊದಲು ಈ ಪ್ರಾಜೆಕ್ಟ್ ನಲ್ಲಿ ನಟಿಸುವಾಗ ಭಯವಾಗಿತ್ತು. ಆ ನಂತರ ಎಲ್ಲಾ ಸುಲಭವಾಗಿ ಆಯ್ತು. ನಿಮಗೆ ಈ ಚಿತ್ರ ಇಷ್ಟವಾಗುತ್ತದೆ ಎಂದರು. ಗುನುಗುನುಗು ಹಾಡಿಗೆ ಸಚಿನ್ ಸಂಘೈ ಸಾಹಿತ್ಯ ಬರೆದಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನವಿದ್ದು, ಕೇಶವ್ ಆನಂದ್ ಧ್ವನಿಯಾಗಿದ್ದಾರೆ. ವಿನಯ್ ರಾಜ್ ಕುಮಾರ್ ಹಾಗೂ ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸ್ವಾತಿಷ್ಠ ಕೃಷ್ಣನ್ ಮತ್ತೊಬ್ಬ ನಾಯಕಿಯಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಸ್ಪೆಷಲ್ ರೋಲ್ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ. ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆದವರು. ಇದೀಗ ಅವರು ‘ಒಂದು ಸರಳ ಪ್ರೇಮಕಥೆ’ ಹೇಳೋದಿಕ್ಕೆ ಬರ್ತಿದ್ದಾರೆ. ರಾಮ್ ಮೂವೀಸ್ ಬ್ಯಾನರ್ ನಡಿ ಮೈಸೂರು ರಮೇಶ್ ಬಂಡವಾಳ ಹೂಡಿದ್ದಾರೆ.

  • ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್‌ಕುಮಾರ್- ‘ಒಂದು ಸರಳ ಪ್ರೇಮಕಥೆ’ ಚಿತ್ರದ ಸಾಂಗ್ ರಿಲೀಸ್

    ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್‌ಕುಮಾರ್- ‘ಒಂದು ಸರಳ ಪ್ರೇಮಕಥೆ’ ಚಿತ್ರದ ಸಾಂಗ್ ರಿಲೀಸ್

    ಒಂದು ಸರಳ ಪ್ರೇಮಕಥೆಯ ರೂವಾರಿ ಸಿಂಪಲ್ ಸುನಿ (Simple Suni) ಹೊಸ ವರ್ಷಕ್ಕೆ ಸಂಗೀತ ಪ್ರಿಯರಿಗೆ ಚೆಂದದ ಹಾಡನ್ನು ಉಡುಗೊರೆಯಾಗಿ ನೀಡಿದ್ದಾರೆ. ‘ನೀನ್ಯಾರೆಲೆ ನಿನಗಾಗಿಯೇ ಈ ಜೀವ ಭಾವ ಸೋಜಿಗ’ ಎಂಬ ಕ್ಯಾಚಿ ಮ್ಯಾಚಿ ಸಾಹಿತ್ಯದ ಮೆಲೋಡಿ ಮಸ್ತಿಯನ್ನು ರಿಲೀಸ್ ಮಾಡಿದ್ದಾರೆ. ಸಿದ್ದು ಕೋಡಿಪುರ ಹಾಗೂ ಸುನಿ ಸಾಹಿತ್ಯದ ಈ ಹಾಡಿಗೆ ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ.

    ಇದೇ ಮೊದಲ ಬಾರಿಗೆ ದೊಡ್ಮನೆಯ ಹೀರೋ ವಿನಯ್ ರಾಜ್ ಕುಮಾರ್ ಗೆ (Vinay Rajkumar) ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ವಿನಯ್ ನಾಯಕನಾಗಿ ನಟಿಸಿರುವ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ (Malika Singh) ಎಂಬ ಇಬ್ಬರು ಚೆಲುವೆಯರ ನಾಯಕಿಯಾರಾಗಿ ನಟಿಸಿದ್ದಾರೆ.

    ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ. ಇದನ್ನೂ ಓದಿ:ಶಿವಣ್ಣ ನಟನೆಯ 131ನೇ ಸಿನಿಮಾದ ಪೋಸ್ಟರ್ ಹಂಚಿಕೊಂಡ ಟೀಮ್

    ತಮ್ಮ ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆಯುತ್ತಾ ಬರ್ತಿದ್ದಾರೆ. ‘ಅವತಾರ್ ಪುರುಷ’ ಬಳಿಕ ಸುನಿ ‘ಗತವೈಭವ’ ಸಿನಿಮಾ ಕೈಗೆತ್ತಿಕೊಂಡಿದ್ದರು. ಬಳಿಕ ಸದ್ದಿಲ್ಲದೇ ‘ಒಂದು ಸರಳ ಪ್ರೇಮಕಥೆ’ ಶುರು ಮಾಡಿದ್ದಾರೆ. ಇದೀಗ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಿಡುಗಡೆಗೆ ಸಜ್ಜಾಗಿದೆ. ಅಂದಹಾಗೇ ಈ ಸಿನಿಮಾಗೆ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ.

  • ಸುನಿ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್: ಶೂಟಿಂಗ್ ಮುಗಿಸಿದ ಟೀಮ್

    ಸುನಿ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್: ಶೂಟಿಂಗ್ ಮುಗಿಸಿದ ಟೀಮ್

    ನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ (Shooting) ಕಂಪ್ಲೀಟ್ ಆಗಿದೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅಪ್ಪ ರಾಘಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿ ಮಾಧ್ಯಮದವರೊಂದಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ನಿರ್ದೇಶಕ ಸುನಿ (Simple Suni) ಮಾತನಾಡಿ, ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ. ಒಟ್ಟು ಸಿನಿಮಾದಲ್ಲಿ 11 ಸಾಂಗ್ ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಸರ್ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.

    ರಾಘಣ್ಣ (Raghavendra Rajkumar) ಮಾತನಾಡಿ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ನೋಡಿದ್ಮೇಲಿನಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ. ಕುಂಬಳಕಾಯಿ ಒಡೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಚೆನ್ನಾಗಿ ಆಗಲಿ. ಸಿನಿಮಾ ನಿಮ್ಮ ಮುಂದೆ ಬರಲಿ. ನಿಮ್ಮ ಬೆಂಬಲ ಇರಲಿದೆ ಎಂದರು.

    ನಟ ವಿನಯ್ ರಾಜ್ ಕುಮಾರ್ (Vinay) ಮಾತನಾಡಿ, ಒಂದು ಸರಳ ಪ್ರೇಮಕಥೆ. ಈ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್ ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಲು ಖುಷಿ ಕೊಡ್ತು. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬ ಕಂಫರ್ಟ್ ಫೀಲ್ ಕೊಡ್ತಾರೆ. ಆಕ್ಟಿಂಗ್ ಮಾಡಲು ಟ್ರೈ ಮಾಡುವುದು ಬೇಡ. ಅದು ತಾನಾಗಿಯೇ ಬರುತ್ತದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲಾ ಕಲಾವಿದರ ಅದ್ಭುತವಾಗಿ ನಟಿಸಿದ್ದಾರೆ ಎಂದರು.

    ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿ, ನನ್ನ ಸಿನಿಮಾ ಕರಿಯರ್ ನ ಅತ್ಯಂತ ಉತ್ಕೃಷ್ಟ ಮ್ಯೂಸಿಕ್ ಸಂಗೀತ ಸಿನಿಮಾ ಒಂದು ಸರಳ ಪ್ರೇಮ ಕಥೆ. ನನ್ನ ಎರಡನೇ ಸಿನಿಮಾದಲ್ಲಿ 10 ಹಾಡುಗಳಿದ್ದವು. ತುಂಬ ದೊಡ್ಡ ಹೆಸರು ತಂದುಕೊಟ್ಟಿತ್ತು. ಆ ನಂತರ ಯೋಗರಾಜ್ ಭಟ್ ಅವರ ಪ್ರೊಡಕ್ಷನ್ ನಲ್ಲಿ ದೇವ್ರೇ ಅಂತಾ ಮಾಡಿದ್ದೆ. ಅದು ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಆ ಎರಡು ಸಿನಿಮಾಗಳನ್ನು ಈ ಚಿತ್ರ ಮೀರಿಸುತ್ತದೆ ಅನಿಸುತ್ತಿದೆ. ಯಾಕೆಂದರೆ ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್ ಜೊತೆ ಕನೆಕ್ಟ್ ಆಗುತ್ತದೆ ಎಂದರು.

    ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ ಎಂದರು. ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ವಿನಯ್ ರಾಜ್ಕುಮಾರ್ ಗೆ ಜೋಡಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ.

  • ಮಲ್ಲಿಕಾ ಸಿಂಗ್ ಪಾತ್ರ ಪರಿಚಯಿಸಿದ ನಿರ್ದೇಶಕ ಸಿಂಪಲ್ ಸುನಿ

    ಮಲ್ಲಿಕಾ ಸಿಂಗ್ ಪಾತ್ರ ಪರಿಚಯಿಸಿದ ನಿರ್ದೇಶಕ ಸಿಂಪಲ್ ಸುನಿ

    ಸಿಂಪಲ್ ಸುನಿ (Simple Suni) ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸುತ್ತಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್ (Swathistha Krishnan) ಹಾಗೂ ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಮಲ್ಲಿಕಾ ಸಿಂಗ್ (Mallika Singh) ಅವರ ಪಾತ್ರ ಮತ್ತು ಪಾತ್ರದ ಹಿನ್ನೆಲೆಯನ್ನು ಪರಿಚಯಿಸುವಂತಹ ವಿಡಿಯೋ ಮತ್ತು ಫಸ್ಟ್ ಲುಕ್ ಅನ್ನು ಮಲ್ಲಿಕಾ ಅವರ ಹುಟ್ಟು ಹಬ್ಬಕ್ಕಾಗಿ ನಿರ್ದೇಶಕರು ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮಲ್ಲಿಕಾ ಅವರು ಮಧುರಾ ಹೆಸರಿನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದು ಗಾಯಕಿಯ ಪಾತ್ರವಾಗಿದೆ

    ಸಿನಿಮಾ ಕುರಿತು ಮಾತನಾಡಿದ ನಟ ವಿನಯ್ ರಾಜ್ ಕುಮಾರ್, ‘ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು’ ಎಂದಿದ್ದಾರೆ.

    ಈ ಚಿತ್ರದಲ್ಲಿ ವಿನಯ್ ಅವರದ್ದು ಅತಿಶಯ್ ಪಾತ್ರ. ಅದೊಂದು ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ. ಇದು ಸಿನಿಮಾದ ಒಂದು ಎಳೆಯಾಗಿದೆ. ಇದನ್ನೂ ಓದಿ:‘ರವಿಕೆ’ ಹೆಸರಿನಲ್ಲೊಂದು ಸಾಂಗ್ : ಇದು ರವಿಕೆ ಪ್ರಸಂಗ

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಓಕೆ ಮಾಡಿದ್ರು, ಚಿತ್ರಕ್ಕೆ  ಎಂ.ಎಲ್. ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ, ಮೈಸೂರಿನಲ್ಲಿ ಎರಡನೇ ಹಂತದ ಶೂಟಿಂಗ್ ಮುಗಿದಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

     

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.  ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀರಿಯಲ್ ನಿರ್ದೇಶನದತ್ತ ‌’ಚಮಕ್‌’ ಡೈರೆಕ್ಟರ್ ಸಿಂಪಲ್ ಸುನಿ

    ಸೀರಿಯಲ್ ನಿರ್ದೇಶನದತ್ತ ‌’ಚಮಕ್‌’ ಡೈರೆಕ್ಟರ್ ಸಿಂಪಲ್ ಸುನಿ

    ಮಕ್, ಅವತಾರ ಪುರುಷ (Avatara Purusha)  ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಸಿಂಪಲ್ ಸುನಿ (Simple Suni) ಸೀರಿಯಲ್ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಶಾಂಭವಿ (Shambhavi) ಎಂಬ ಸೀರಿಯಲ್ ಮೂಲಕ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

    ಶಾಂಭವಿ ಮುದ್ದಾದ 6 ವರ್ಷದ ಮಗು. ಇವಳ ಅಮ್ಮ ಶಿವಗಾಮಿ ಸಾವಿರಾರು ಕೋಟಿ ಆಸ್ತಿಯ ಒಡತಿ. ಶ್ರೀ ಶಾಂಭವಿ ಶಿಕ್ಷಣ ಸಂಸ್ಥೆ ಜೊತೆ ಇನ್ನೂ ಹಲವು ಉದ್ಯಮಗಳಿವೆ. ಇವಳಿಗೊಬ್ಬ ಅಣ್ಣ ಹರಿಪ್ರಸಾದ್. ಅಣ್ಣ ತಂಗಿಗೆ ಅವರಿಬ್ಬರೇ ಪ್ರಪಂಚವಾಗಿರುತ್ತಾರೆ. ಇದನ್ನೂ ಓದಿ:Jawan ರಿಲೀಸ್ ದಿನವೇ ಬರುತ್ತಿದೆ ಕನ್ನಡತಿ ಅನುಷ್ಕಾ ಶೆಟ್ಟಿ ಸಿನಿಮಾ

    ನಾಯಕ ಅಶೋಕ ಅವರ ಸಂಸ್ಥೆಯಲ್ಲಿ ಶಿಕ್ಷಕನಾಗಿ ಸೇರುವುದರೊಂದಿಗೆ ಕಥೆ ತಿರುವು ಪಡೆದುಕೊಳ್ಳುತ್ತದೆ. ಅಶೋಕನ ಮನೆಯವರು ದುಡ್ಡಿಗಾಗಿ ಹಪಹಪಿಸುವ ಮಂದಿಯಾಗಿದ್ದು,  ಅವನ ಅಮ್ಮ ಮತ್ತು ತಮ್ಮಂದಿರು ತುಂಬಾ ಖತರ್ನಾಕ್ ಆಗಿರುತ್ತಾರೆ. ಈ ಮೂಲಕ ದೇವರಾಗಿ ದೆವ್ವವಾಗಿ ಕಾಡುವ ಮಗುವಿನ ಕಥೆಯನ್ನ ಸಿಂಪಲ್ ಸುನಿ ತೋರಿಸಲು ಹೊರಟಿದ್ದಾರೆ. ಸದ್ಯದಲ್ಲೇ ಈ ಸೀರಿಯಲ್‌, ಟಿವಿ ಪರದೆಯಲ್ಲಿ  ಮೂಡಿ ಬರಲಿದೆ.

    ಶಾಂಭವಿ ಸೀರಿಯಲ್‌ನಲ್ಲಿ ಐಶ್ವರ್ಯಾ ಸಿಂಧೋಗಿ (Aishwarya Shindogi), ವಿನಯ್ ಗೌಡ (Vinay Gowda) ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಾಂಭವಿ ಆಗಿ ಬಾಲನಟಿ ರಚನಾ ಜೀವ ತುಂಬಿದ್ದಾರೆ. ಈ ಸೀರಿಯಲ್ ಜೊತೆಗೆ ಒಂದು ಸರಳ ಪ್ರೇಮ ಕಥೆ, ಅವತಾರ ಪುರುಷ 2, ಗತವೈಭವ ಸಿನಿಮಾಗಳು ಸಿಂಪಲ್ ಸುನಿ ಕೈಯಲ್ಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • RCB ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ನಿರ್ದೇಶಕ ಸಿಂಪಲ್ ಸುನಿ

    RCB ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ನಿರ್ದೇಶಕ ಸಿಂಪಲ್ ಸುನಿ

    ಮೊದಲಿನಿಂದಲೂ ಆರ್ ಸಿ ಬಿ (RCB) ಟೀಮ್ ಅನ್ನು ಬೆಂಬಲಿಸುತ್ತಾ ಬಂದಿರುವ ಸ್ಯಾಂಡಲ್ ವುಡ್ ನಿರ್ದೇಶಕ ಸಿಂಪಲ್ ಸುನಿ (Simple Suni), ನಿನ್ನೆ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿ ಬಿ ಸೋತಿರುವುದಕ್ಕೆ (Loss) ಬೇಸರ ವ್ಯಕ್ತ ಪಡಿಸಿದ್ದಾರೆ. ಮುಂದಿನ ಮ್ಯಾಚ್ ಕೂಡ ಸೋಲಿರಿ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ಆಶಾಭಾವವನ್ನೂ ಅವರು ವ್ಯಕ್ತ ಪಡಿಸಿದ್ದು, 17ನೇ ತಾರೀಖು ಮ್ಯಾಚ್ ನಮ್ಮದೇ ಆಗಬೇಕು ಎಂದಿದ್ದಾರೆ.

    ಈ ಕುರಿತು ಸರಣಿಯ ಟ್ವೀಟ್ ಮಾಡಿರುವ ಸುನಿ, ‘ಧೋನಿ ಮೇಲೆ ರೆಸ್ಪೆಕ್ಟ್ ಇದೆ. ಸಿಎಸ್ ಕೆ ಮೇಲೆ ಜಿದ್ದಿದೆ, ಆರ್ ಸಿ ಬಿ ಮೇಲೆ ಪ್ರಾಣಾನೇ ಇದೆ’ ಎಂದು ಕಾವ್ಯಾತ್ಮಕವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಆರ್ ಸಿ ಬಿ ಸತತವಾಗಿ ಎರಡು ಪಂದ್ಯವನ್ನು ಸೋತಿದೆ. ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಆರ್ ಸಿ ಬಿ ಚೆನ್ನಾಗಿಯೇ ಆಡಿತ್ತು. ಹಾಗಾಗಿ ಈ ಪಂದ್ಯವನ್ನು ಗೆಲ್ಲುತ್ತದೆ ಎಂದು ನಂಬಿಕೆಯಿತ್ತು. ಕೊನೆ ಗಳಿಗೆಯಲ್ಲಿ ನಂಬಿಕೆ ಹುಸಿ ಆಯಿತು. ಇದನ್ನೂ ಓದಿ: ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ನಿನ್ನೆಯ ಸೋಲು ಕೂಡ ಅನೇಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಮುಂದಿನ 15ನೇ ತಾರೀಖು ಮತ್ತು 17ನೇ ತಾರೀಖು ಎರಡು ಪಂದ್ಯಗಳಿವೆ. 17ನೇ ತಾರೀಖಿನ ಪಂದ್ಯ ಮಹತ್ವದ್ದು ಆಗಿರುವುದರಿಂದ 15ನೇ ತಾರೀಖು ಮ್ಯಾಚ್ ಸೋತರೂ, 17ಕ್ಕೆ ಸೋಲುವಂತಿಲ್ಲ ಎಂದು ಸಿಂಪಲ್ ಸುನಿ ಟ್ವೀಟ್ ಮಾಡಿದ್ದಾರೆ.

    ಮತ್ತೊಂದು ಟ್ವೀಟ್ ಮಾಡಿರುವ ಸುನಿ, ‘ವೈಡ್ ಬಾಲ್ ಹಾಕೋದು ಬಿಡೋಲ್ಲ. ಬ್ಯಾಟಿಂಗ್ ಚೆನ್ನಾಗಿ ಮಾಡಿದ್ರೆ ಬೌಲಿಂಗ್ ಮಾಡೋಲ್ಲ. ಬೌಲಿಂಗ್ ಮಾಡಿದ್ರೆ ಬ್ಯಾಟಿಂಗ್ ಆಡೋಲ್ಲ. ಕರ್ನಾಟಕ ಪ್ಲೇಯರ್ಸ್ ನ ತಗೋಳಲ್ಲ. ಬ್ಯಾಂಗಳೂರ್ ನ ಬೆಂಗಳೂರು ಮಾಡಲ್ಲ. ಆದರೂ ನಮ್ ಕರ್ಮ ದ್ವೇಷಿಸೋಕೆ ನಮಗ್ ಬರೋಲ್ಲ. ನಿಮ್ಮ ಮೇಲೆ ಅಭಿಮಾನ ಕಮ್ಮಿ ಆಗಿಲ್ಲ. ಸ್ಟೇಟಸ್ ಹಾಕ್ದೆ ಮಲಗೋಲ್ಲ’ ಎಂದು ಬರೆದಿದ್ದಾರೆ.

  • ರಾಮನ ಅವತಾರದಲ್ಲಿ ಕವಲುದಾರಿಯ ನಾಯಕ ರಿಷಿ

    ರಾಮನ ಅವತಾರದಲ್ಲಿ ಕವಲುದಾರಿಯ ನಾಯಕ ರಿಷಿ

    ನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ (Rishi) ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಇದೀಗ ಅವರು ರಾಮನ ಅವತಾರ (Ramana Avatara) ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಥೇಟ್ ರಾಮನ ಗೆಟಪ್ ನಲ್ಲಿಯೇ ರಿಷಿ ಕಾಣಿಸಿಕೊಂಡಿದ್ದು, ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಶುಭ್ರ ಅಯ್ಯಪ್ಪ (Shubhra Ayyappa) ಹಾಗೂ ಪ್ರಣೀತಾ ಸುಭಾಷ್ (Praneetha Subhash) ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

    ನಿರ್ದೇಶಕ ಸಿಂಪಲ್ ಸುನಿ (Simple Suni) ಕ್ಯಾಂಪನ್ ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ನಿಮ್ಮ ಅಭಿನಯ- ವ್ಯಕ್ತಿತ್ವ ಎರಡು ಅದ್ಭುತ: ಅನುಪಮ್ ಖೇರ್ ಹೊಗಳಿದ ಶಿವಣ್ಣ

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಗ್ರಾಫಿಕ್ಸ್ ಹಾಗೂ ಮ್ಯೂಸಿಕ್ ಕೆಲಸಗಳು ಭರದಿಂದ ಸಾಗ್ತಿವೆ. ಜೂನ್ ಮೊದಲನೇ ವಾರದಲ್ಲಿ ರಾಮನ ಅವತಾರ ಸಿನಿಮಾವನ್ನು ತೆರೆಗೆ ತರೋದಿಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಇದೀಗ `ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ನವಿರಾದ ಪ್ರೇಮಕಥೆಯನ್ನ ತೆರೆಯ ಮೇಲೆ ಹೇಳಲು ರೆಡಿಯಾಗಿದ್ದಾರೆ. ಈ ಹಿಂದೆ ಅಪ್ಪು ಇಷ್ಟಪಟ್ಟಿದ್ದ ಕಥೆಯಲ್ಲಿ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿದ್ದಾರೆ.

    `ಒಂದು ಸರಳ ಪ್ರೇಮಕಥೆ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ಭರದಿಂದ ಚಿತ್ರೀಕರಣ ನಡೆಯುತ್ತಿದ್ದು, ಮಾ.08ರಂದು ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಿಂಪಲ್ ಸುನಿ ನಿರ್ದೇಶನದ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿ ಹತ್ತು ವರ್ಷವಾದ ಹಿನ್ನೆಲೆಯಲ್ಲಿ `ಒಂದು ಸರಳ ಪ್ರೇಮ ಕತೆ’ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ 2 ವರ್ಷಗಳ ಹಿಂದೆ ನಡೆದ ಅಪ್ಪು ಜೊತೆಗಿನ ಸಂಭಾಷಣೆ ಬಗ್ಗೆ ಸಿಂಪಲ್ ಸುನಿ ಹಂಚಿಕೊಂಡಿದ್ದಾರೆ.‌ ಸುನಿ ರಚಿಸಿದ ಸ್ಟೋರಿಯನ್ನ ಅಪ್ಪು ಮೆಚ್ಚಿಕೊಂಡಿದ್ದರು. ಈ ಬಗ್ಗೆ ಸುನಿ ಮಾತನಾಡಿದ್ದಾರೆ. ಇದನ್ನೂ ಓದಿ: ತಾಯಿ ದೀಪಾ ಅಯ್ಯರ್ ಡ್ರೆಸ್ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವರಿಗೆ ಬೆಂಡೆತ್ತಿದ ಸಾನ್ಯ

    ಈ ಸಿನಿಮಾದ ಕತೆಯನ್ನು ಪುನೀತ್ ರಾಜ್‌ಕುಮಾರ್ ಇಷ್ಟಪಟ್ಟಿದ್ದರು. ಮೊದಲು ನಾಲ್ಕು ಸಾಲಲ್ಲಿ ಕತೆ ಹೇಳಿದ್ದೆ ಆಗ ಅಪ್ಪು ಸರ್ ಒಪ್ಪಿದ್ದರು. ಕತೆಯನ್ನು ಡೆವೆಲಪ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ದುರ್ಘಟನೆ ಸಂಭವಿಸಿತು. ಈಗ ಅದೇ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ನಟಿಸುತ್ತಿದ್ದಾರೆ ಎಂದು ನಿರ್ದೇಶಕ ಸುನಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಒಂದು ಸರಳ ಪ್ರೇಮಕಥೆ. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, `ರಾಧಾ ಕೃಷ್ಣ’ ಧಾರಾವಾಹಿ ನಟಿ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ.

    ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ʻಸಿಂಪಲ್ಲಾಗ್ ಒಂದ್ ಲವ್ ಸ್ಟೋರಿʼಗೆ ಇಟ್ಟ ಮೊದಲ ಟೈಟಲ್ ʻಒಂದು ಸರಳ ಪ್ರೇಮಕಥೆʼ. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಒಕೆ ಮಾಡಿದರು. ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜ.23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50%ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

     

    View this post on Instagram

     

    A post shared by ಸುನಿ SuNi (@simplesuni)

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡರು. ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

  • ‘ಒಂದು ಸರಳ ಪ್ರೇಮಕಥೆ’ ಹೇಳಲಿದ್ದಾರೆ ನಿರ್ದೇಶಕ ಸಿಂಪಲ್ ಸುನಿ

    ‘ಒಂದು ಸರಳ ಪ್ರೇಮಕಥೆ’ ಹೇಳಲಿದ್ದಾರೆ ನಿರ್ದೇಶಕ ಸಿಂಪಲ್ ಸುನಿ

    ಸಿಂಪಲ್ ಸುನಿ (Simple Suni) ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್ (Swathistha Krishnan), ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

    ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು. ಇದನ್ನೂ ಓದಿ: ವರುಣ್ ಧವನ್ ಮಾಡಿದ ಎಡವಟ್ಟಿಗೆ ಬೇಸರ ಹೊರಹಾಕಿದ ಕೃತಿ ಸನೂನ್

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಒಕೆ ಮಾಡಿದ್ರು, ಚಿತ್ರಕ್ಕೆ  ಎಂ.ಎಲ್. ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.  ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

  • ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ರಾಧಾ ಕೃಷ್ಣ’ ಸೀರಿಯಲ್ ನಟಿ

    ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ರಾಧಾ ಕೃಷ್ಣ’ ಸೀರಿಯಲ್ ನಟಿ

    ನಪ್ರಿಯ ಧಾರಾವಾಹಿ `ರಾಧಾ ಕೃಷ್ಣ’ (Radhakrishna) ಸೀರಿಯಲ್‌ನ ರಾಧೆ ಮಲ್ಲಿಕಾ ಸಿಂಗ್ (Mallika Singh) ಇದೀಗ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ. ಡಾ.ರಾಜ್ ಕುಟುಂಬದ ಕುಡಿ ವಿನಯ್ ರಾಜ್‌ಕುಮಾರ್‌ಗೆ (Vinay Rajkumar)  ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

    ಕಿರುತೆರೆಯ ರಾಧೆಯಾಗಿ ಮನಗೆದ್ದಿದ್ದ ಚೆಲುವೆ ಮಲ್ಲಿಕಾ ಸಿಂಗ್ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೀಗ ಹಿರಿತೆರೆಯಲ್ಲಿ ಮಿಂಚಲು ನಟಿ ಮಲ್ಲಿಕಾ ಸಿಂಗ್ ರೆಡಿಯಾಗಿದ್ದಾರೆ. ಸಿಂಪಲ್ ಸುನಿ (Simple Suni) ಮತ್ತು ವಿನಯ್ ರಾಜ್‌ಕುಮಾರ್ ಕಾಂಬಿನೇಷನ್ ಚಿತ್ರಕ್ಕೆ ರಾಧಾ (Radha) ಅಲಿಯಾಸ್ ಮಲ್ಲಿಕಾ ಸಿಂಗ್ ಆಯ್ಕೆಯಾಗಿದ್ದಾರೆ.

    ಇತ್ತೀಚಿಗಷ್ಟೇ ವಿನಯ್ ರಾಜ್‌ಕುಮಾರ್ ಹೊಸ ಸಿನಿಮಾಗೆ ಚಾಲನೆ ನೀಡಲಾಗಿತ್ತು. ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರದಲ್ಲಿ ವಿನಯ್‌ಗೆ ಜೋಡಿಯಾಗಿ ತಮಿಳಿನ `ವಿಕ್ರಮ್’ ನಟಿ ಸ್ವಾತಿಷ್ಠ ಕೃಷ್ಣನ್ ನಟಿಸುವ ಬಗ್ಗೆ ಅನೌನ್ಸ್‌ ಮಾಡಲಾಗಿತ್ತು. ಈ ಬೆನ್ನಲ್ಲೇ ಈ ಚಿತ್ರಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿದೆ. ಇದನ್ನೂ ಓದಿ: Exclusive- ರಕ್ಷಿತ್ ಶೆಟ್ಟಿ ಎಲ್ಲಿಯೂ ಕಾಣಿಸ್ತಿಲ್ಲ ಯಾಕೆ? ಅದಕ್ಕೊಂದು ಕಾರಣವಿದೆ

    ಈ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್‌ಗೆ ಇಬ್ಬರು ನಾಯಕಿಯರು ಇರಲಿದ್ದಾರೆ. ಸ್ವಾತಿಷ್ಠ ಕೃಷ್ಣನ್- ಮಲ್ಲಿಕಾ ಸಿಂಗ್ ಇಬ್ಬರು ವಿನಯ್ ಜೊತೆ ಡ್ಯುಯೇಟ್ ಹಾಡಲಿದ್ದಾರೆ. ನಾಯಕಿ ಸ್ವಾತಿಷ್ಠ ಪತ್ರಕರ್ತೆ (Journalist) ಪಾತ್ರದಲ್ಲಿ ನಟಿಸುತ್ತಿದ್ದು, ಮಲ್ಲಿಕಾ ಕಾಶ್ಮೀರಿ ಹುಡುಗಿಯ ಪಾತ್ರಕ್ಕೆ ಜೀವತುಂಬಲಿದ್ದಾರೆ. ಇನ್ನೂ ಸಿಂಪಲ್ ಸುನಿ ನಿರ್ದೇಶನದ ಈ ಹೊಸ ಪ್ರೇಮ ಕಥೆಯಲ್ಲಿ ಈ ಮೂವರ ಜೋಡಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.