Tag: Sindhu Menon

  • ನಟಿ ಸಿಂಧು ಮೆನನ್ ಕುಟುಂಬದ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು

    ನಟಿ ಸಿಂಧು ಮೆನನ್ ಕುಟುಂಬದ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು

    ಬೆಂಗಳೂರು: ನಟಿ ಸಿಂಧು ಮೆನನ್ ಕುಟುಂಬದ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದೆ.

    ಕಚೇರಿಗೆ ಕಟ್ಟಡ ಬೋಗ್ಯಕ್ಕೆ ಪಡೆದು ವಂಚನೆ ಎಸಗಿರೋ ಅರೋಪದಡಿ ಸಿಂಧು ಮೆನನ್ ಸಹೋದರ ಮನೋಜ್ ಕಾರ್ತಿಕ್ ಹಾಗೂ ಸುಧಾ ರಾಜಶೇಖರ್ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಸಿಂಧು ಮೆನನ್ ಸಹೋದರ ಮನೋಜ್ ಕಟ್ಟಡದ ದಾಖಲೆಗಳನ್ನು ನಕಲು ಮಾಡಿ ಬ್ಯಾಂಕಿನಲ್ಲಿ ಲೋನ್ ಮಾಡಿಸಿದ್ದ. ಕಚೇರಿ ಪ್ರಾರಂಭಿಸಲು ಕಮರ್ಷಿಯಲ್ ಜಾಗ ಬೇಕು ಎಂದು ಗಣೇಶ್ ರಾವ್‍ರನ್ನು ಸಂಪರ್ಕಿಸಿದ್ದ. ನಂತರ ಮನೋಜ್ ಕಟ್ಟಡ ಮಾಲೀಕ ಗಣೇಶ್ ರಾವ್ ರಿಂದ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಕಟ್ಟಡದ ದಾಖಲೆಗಳನ್ನ ಪಡೆದಿದ್ದ.

    ಮೂರು ತಿಂಗಳ ಬಳಿಕ ಕಚೇರಿ ಬೇಡ ಎಂದು ಬೀಗ ವಾಪಸ್ ನೀಡಿದ್ದು, ಬ್ಯಾಂಕ್ ಲೋನ್ ಆಗಿಲ್ಲ. ನಿಮ್ಮ ಮಳಿಗೆ ಬೇಡ ಎಂದು ಮನೋಜ್ ಹೇಳಿದ್ದ. ಅಗ್ರೀಮೆಂಟ್ ದಾಖಲೆಗಳನ್ನು ಕೇಳಿದಾಗ ತಂದು ಕೊಡುತ್ತೇನೆ ಎಂದು ಮನೋಜ್ ಕೈ ಎತ್ತಿದ್ದ. ಗಣೇಶ್ ರಾವ್ ಮನೆ ದಾಖಲೆಗಳನ್ನು ಅಡವಿಟ್ಟು ವಿಜಯಾ ಬ್ಯಾಂಕಿನಲ್ಲಿ ಲೋನ್ ಗೆ ಅರ್ಜಿ ಹಾಕಿದ್ದ.

    ಬಾಡಿಗೆ ಕಟ್ಟಡವನ್ನ ಸ್ವಂತದ್ದು ಎಂದು ಮನೋಜ್ ಉಲ್ಲೇಖಿಸಿದ್ದನು. ಅಷ್ಟೇ ಅಲ್ಲದೇ ಲೋನ್ ಗೆ ಶ್ಯೂರಿಟಿ ಗಣೇಶ್ ರಾವ್ ಎಂದು ಫಾರಂ 16 ರಲ್ಲಿ ಉಲ್ಲೇಖವಾಗಿತ್ತು. ಸಿಂಧು ಮೆನನ್ ಸಹೋದರನ ವಂಚನೆ ವಿರುದ್ಧ ಗಣೇಶ್ ರಾವ್ ದೂರು ನೀಡಿದ್ದಾರೆ.

    ಸದ್ಯ ಯಶವಂತಪುರ ಪೊಲೀಸರು ದೂರು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ವಂಚನೆ ಆರೋಪ ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್- ಸಹೋದರ ಅರೆಸ್ಟ್

    https://www.youtube.com/watch?v=nFHjkXJz3Eg

    https://www.youtube.com/watch?v=DeqJXXm9-g8

    https://www.youtube.com/watch?v=HTJdVMMIOxU

  • ವಂಚನೆ ಆರೋಪ ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್- ಸಹೋದರ ಅರೆಸ್ಟ್

    ವಂಚನೆ ಆರೋಪ ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್- ಸಹೋದರ ಅರೆಸ್ಟ್

    ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಆಫ್ ಬರೋಡಗೆ 36 ಲಕ್ಷ ರೂ. ವಂಚನೆಗೈದ ಆರೋಪದ ಮೇಲೆ ಸಿಂಧು ಮೆನನ್ ಸೇರಿದಂತೆ ನಾಲ್ವರ ವಿರುದ್ಧ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ಎಫ್‍ಐಆರ್ ದಾಖಲಾಗಿದೆ.

    ಸಿಂಧು ಮೆನನ್ ಸಹೋದರ ಮನೋಜ್ ಕೆ ವರ್ಮಾ ಹಾಗೂ ನಾಗಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ  ಮನೋಜ್ ಕೆ ವರ್ಮಾ ಮೊದಲ ಆರೋಪಿ ಆಗಿದ್ದರೆ ನಾಗಶ್ರೀ ಶಿವಣ್ಣ ಎ2 ಆಗಿದ್ದಾರೆ. ಸಿಂಧು ಮೆನನ್ ಎ3 ಆಗಿದ್ದು, ಸುಧಾ ರಾಜಶೇಖರ್ ಎ4 ಆಗಿದ್ದಾರೆ.

    ಏನಿದು ಪ್ರಕರಣ?
    ಬ್ಯಾಂಕ್ ಆಫ್ ಬರೋಡಾದಲ್ಲಿ ಕಾರ್ ಖರೀದಿಗಾಗಿ ಆರೋಪಿ ಮನೋಜ್ ಶರ್ಮಾ 36 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಪಡೆಯಲು ಜ್ಯುಬಿಲೆಂಟ್ ಮೋಟಾರ್ಸ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ದಾಖಲೆ ಸೃಷ್ಟಿಸಿದ್ದರು. ಪರಿಶೀಲನೆ ವೇಳೆ ನಕಲಿ ದಾಖಲೆ ನೀಡಿದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಮೇಶ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೋಜ್ ಶರ್ಮಾ ಸಾಲ ಪಡೆದ ಬಳಿಕ ಹಣವನ್ನು ಸಿಂಧು ಮೆನನ್ ಅವರ ಖಾತೆಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ನಟಿ ಮೇಲೂ ಎಫ್‍ಐಆರ್ ದಾಖಲಾಗಿದೆ.

  • ಅಪಘಾತದಲ್ಲಿ ಗಾಯಗೊಂಡ ಸಿಂಧು ಮೆನನ್ ತಾಯಿ

    ಅಪಘಾತದಲ್ಲಿ ಗಾಯಗೊಂಡ ಸಿಂಧು ಮೆನನ್ ತಾಯಿ

    ಬೆಂಗಳೂರು: ನಗರದ ಯಶವಂತಪುರ ಸಿಗ್ನಲ್ ಬಳಿ ನಟಿ ಸಿಂಧೂ ಮೆನನ್ ಅವರ ತಾಯಿ ಶ್ರೀದೇವಿ ಅವರಿದ್ದ ಆಟೋಗೆ ಹಿಂಬದಿಯಿಂದ ಬಂದ ಕ್ಯಾಬ್ ಡಿಕ್ಕಿ ಹೊಡೆದಿದೆ.

    ಮಧ್ಯಾಹ್ನ ಶ್ರೀದೇವಿ ಅವರು ಮತ್ತಿಕೇರಿಯಿಂದ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸಕ್ಕೆ ಆಟೋದಲ್ಲಿ ಹೊರಟ್ಟಿದ್ದರು. ಈ ವೇಳೆ ಆಟೋ ಸಿಗ್ನಲ್ ನಲ್ಲಿ ನಿಂತಾಗ ಹಿಂದಿನಿಂದ ಕ್ಯಾಬ್ ಚಾಲಕ ನೇರವಾಗಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಆಟೋದಲ್ಲಿದ್ದ ಶ್ರೀದೇವಿ ಅವರ ಎದೆಭಾಗಕ್ಕೆ ಗಾಯವಾಗಿದೆ.

    ಆಟೋದಲ್ಲಿದ್ದ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸದೇ ಚಾಲಕರಿಬ್ಬರು ಸುಮಾರು ಒಂದು ಗಂಟೆಗಳ ಕಾಲ ಜಗಳ ಮಾಡಿದ್ದಾರೆ. ಕೊನೆಗೆ ಶ್ರೀದೇವಿ ಅವರು ತಮ್ಮ ಪುತ್ರ ಮನೋಜ್ ಗೆ ಕರೆ ಮಾಡಿ ಅಪಘಾತದ ವಿಷಯ ತಿಳಿಸಿದ್ದಾರೆ. ಸ್ಥಳಾಕ್ಕಾಗಮಿಸಿದ ಮನೋಜ್ ತಾಯಿಯನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.