Tag: Singapore

  • ಮಾಲೀಕನ 11 ವರ್ಷದ ಮಗನೊಂದಿಗೆ ಸೆಕ್ಸ್- ಸೇವಕಿಗೆ ಜೈಲು ಶಿಕ್ಷೆ

    ಮಾಲೀಕನ 11 ವರ್ಷದ ಮಗನೊಂದಿಗೆ ಸೆಕ್ಸ್- ಸೇವಕಿಗೆ ಜೈಲು ಶಿಕ್ಷೆ

    ಸಿಂಗಾಪುರ: ಮಾಲೀಕನ 11 ವರ್ಷದ ಮಗನ ಜೊತೆಗೆ ಸೆಕ್ಸ್ ಮಾಡಿದ್ದ ಭಾರತೀಯ ಮೂಲದ ಮಹಿಳೆಯೊಬ್ಬಳಿಗೆ ಸಿಂಗಪುರದ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

    ಅಪರಾಧಿ ಮಹಿಳೆಯು 33 ವರ್ಷದವಳಾಗಿದ್ದು, ಕಳೆದ 18 ತಿಂಗಳಿನಿಂದ ಜೈಲಿನಲ್ಲಿದ್ದಳು. ಈಗ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಅಧಿಕ (20 ಸಾವಿರ ಸಿಂಗಾಪುರ ಡಾಲರ್) ದಂಡ ವಿಧಿಸಿದೆ.

    ಏನಿದು ಪ್ರಕರಣ?:
    ಭಾರತೀಯ ಮೂಲದ ಮಹಿಳೆ ಉದ್ಯೋಗಕ್ಕಾಗಿ ಸಿಂಗಾಪುರಕ್ಕೆ ಜನವರಿ 2016 ರಂದು ಹೋಗಿದ್ದಳು. ವ್ಯಕ್ತಿಯೊಬ್ಬರ ಮನೆಯಲ್ಲಿ ಸೇವಕಿಯಾಗಿ ಕೆಲಸ ಮಾಡುತ್ತಿದ್ದಳು. ಆದರೆ ಅವರ ಕೆಲವು ದಿನಗಳ ಬಳಿಕ ಮಾಲೀಕನ 11 ವರ್ಷದ ಮಗನ ಜೊತೆಗೆ ಸೆಕ್ಸ್ ಮಾಡಿದ್ದಾಳೆ. ಅಷ್ಟೇ ಅಲ್ಲದೇ ತನ್ನ ಮೊಬೈಲ್‍ನಲ್ಲಿ ಈ ಕೃತ್ಯದ ವಿಡಿಯೋವನ್ನು ಮಾಡಿಕೊಂಡಿದ್ದಳು.

    ಬಾಲಕನಿಗೆ ವಿಡಿಯೋ ಬೆದರಿಕೆಯೊಡ್ಡಿ ಸುಮಾರು ನಾಲ್ಕು ತಿಂಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ. ಬಾಲಕನ ಮಾನಸಿಕ ವರ್ತನೆ ಬದಲಾದ ಹಿನ್ನೆಲೆಯಲ್ಲಿ ಪೋಷಕರು ಮಹಿಳೆಯ ಮೇಲೆ ಶಂಕೆ ವ್ಯಕ್ತಪಡಿಸಿದ್ದರು. ಜುಲೈ 2016ರಂದು ಬಾಲಕನೊಂದಿಗೆ ಸೆಕ್ಸ್ ನಡೆಸುತ್ತಿರುವಾಗಲೇ ಮಹಿಳೆ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಳು. ಬಳಿಕ ಪೋಷಕರು ಆಕೆಯನ್ನು ಪೊಲೀಸರಿಗೆ ಒಪ್ಪಿಸಿ ದೂರು ದಾಖಲಿಸಿದ್ದರು.

    ಮಹಿಳೆಯ ವಿರುದ್ಧ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣದಡಿ ಪ್ರಕರಣ ದಾಖಲಾಗಿತ್ತು. ಕಳೆದ 18 ತಿಂಗಳಿನಿಂದ ಜೈಲು ಸೇರಿದ್ದ ಮಹಿಳೆಗೆ ಕೋರ್ಟ್ ನವೆಂಬರ್ 22ರಂದು ತೀರ್ಪು ಪ್ರಕಟಿಸಿತ್ತು. ನ್ಯಾಯಾಧೀಶರು ಏಳು ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿಂಗಾಪುರದಲ್ಲೇ ಟ್ರಂಪ್-ಕಿಮ್ ಭೇಟಿಯಾಗಿದ್ದು ಯಾಕೆ?

    ಸಿಂಗಾಪುರದಲ್ಲೇ ಟ್ರಂಪ್-ಕಿಮ್ ಭೇಟಿಯಾಗಿದ್ದು ಯಾಕೆ?

    ಸಿಂಗಾಪುರ: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿಂಗಾಪುರದಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ಆದರೆ ಎರಡು ದೇಶಗಳ ಗಣ್ಯರ ಭೇಟಿಗೆ ಸಿಂಗಾಪುರ ಆಯ್ಕೆ ಆಗಿದ್ದು ಮಾತ್ರ ಮಹತ್ವದಾಗಿದೆ.

    ಸತತ 7 ದಶಕಗಳ ಬಳಿಕ ಅಮೆರಿಕ ಹಾಗೂ ಉತ್ತರ ಕೊರಿಯಾ ನಡುವೆ ಮಾತುಕತೆ ನಡೆದಿದ್ದು, ವಿಶ್ವದ ಗಮನವನ್ನು ಸೆಳೆದಿದೆ. ಆದರೆ ಎರಡು ದೇಶಗಳ ನಾಯಕರ ಭೇಟಿಗೆ ಈ ಹಿಂದೆ ಹಲವು ರಾಷ್ಟ್ರಗಳ ಹೆಸರುಗಳು ಕೇಳಿ ಬಂದಿತ್ತು. ಅಂತಿಮವಾಗಿ ಐತಿಹಾಸಿಕ ಘಟನೆಗೆ ಸಿಂಗಾಪುರ ಸಾಕ್ಷಿಯಾಗಿದೆ.

    ಈ ಮೊದಲು ದಕ್ಷಿಣ ಕೊರಿಯಾದ ಮಿಲಿಟರಿ ಚಟುವಟಿಕೆ ನಿಷೇಧಿತ ಪ್ರದೇಶವನ್ನು (Korean Demilitarized Zone) ನಾಯಕರ ಸೂಕ್ತ ಭದ್ರತೆಯ ಸ್ಥಳವಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಬಳಿಕ ಈ ಪಟ್ಟಿಯಲ್ಲಿ ಸ್ವೀಡನ್, ಮಂಗೋಲಿಯಾ, ಜಿನೀವಾ ಹೆಸರು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಪಟ್ಟಿಯಲ್ಲಿ ಇಲ್ಲದ ಸಿಂಗಾಪುರ ಕಾರ್ಯಕ್ರಮದ ಜವಾಬ್ದಾರಿ ಪಡೆಯಿತು.

    ಸಿಂಗಾಪುರವೇ ಯಾಕೆ?
    ಸಿಂಗಾಪುರ ಭೇಟಿಯ ಹಿಂದೆ ಹಲವು ರಾಜತಾಂತ್ರಿಕ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಲಾಗಿದ್ದು, ವಿಶ್ವದ ಅತ್ಯಂತ ಸುರಕ್ಷಿತಾ ಸ್ಥಳ ಎಂಬ ಕಾರಣಕ್ಕೆ ಆಯ್ಕೆ ಮಾಡಲಾಗಿತ್ತು. ಸಿಂಗಾಪುರ ಕೊರಿಯಾದೊಂದಿಗೆ ಕಳೆದ 4 ದಶಕಗಳಿಂದ ಉತ್ತಮ ರಾಜತಾಂತ್ರಿಕ ಸಂಬಂಧವನ್ನು ಹೊಂದಿದೆ. ಅಲ್ಲದೇ ಅಮೆರಿಕದೊಂದಿಗೆ ಉತ್ತಮ ವ್ಯಾಪಾರಿ ಸಂಬಂಧವನ್ನು ಹೊಂದಿದ್ದು, ತಜ್ಞರ ಅಭಿಪ್ರಾಯದ ಮೇಲೆ ನಿರ್ಧಾರ ಕೈಗೊಳ್ಳಲಾಗಿದೆ.

    ಇದೇ ಮೊದಲಲ್ಲ: ಸಿಂಗಾಪುರ ಭಾರತ ಹಾಗೂ ಚೀನಾ ನಡುವಿನ ಶಾಂಘಿಲಾ ಸಭೆಯನ್ನು ಸಹ ಯಶಸ್ವಿಯಾಗಿ ಆಯೋಜಿಸಿತ್ತು. ಅಲ್ಲದೇ 2015 ರಲ್ಲಿ ಚೀನಾ ಬದ್ಧ ವೈರಿ ತೈವಾನ್ ಅಧ್ಯಕ್ಷ ಹಾಗೂ ಕ್ಸಿ ಜಿನ್ ಪಿಂಗ್ ರ ದ್ವಿಪಕ್ಷೀಯ ಸಭೆಯನ್ನು ಏರ್ಪಡಿಸಿತ್ತು.

    ಬದ್ಧ ವೈರಿಗಳಾಗಿ ಗುರುತಿಸಿಕೊಂಡಿದ್ದ ಎರಡು ರಾಷ್ಟ್ರಗಳ ನಾಯಕರ ಭೇಟಿ ಹಲವು ರಾಷ್ಟ್ರಗಳ ಗಮನಸೆಳೆದಿದೆ. ಸದ್ಯ ಸಿಂಗಾಪುರದ ಐತಿಹಾಸಿಕ ಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಿಮ್ ಜಾಂಗ್ ಉನ್ ನಮ್ಮ ಇಂದಿನ ಭೇಟಿ ಅಷ್ಟು ಸುಲಭದ ಮಾತಲ್ಲ, ಈ ಹಿಂದಿನ ಹಳೆಯ ಅಡೆತಡೆಗಳನ್ನು ಮೀರಿ ಬಂದಿದ್ದಾಗಿ ಹೇಳಿದ್ದಾರೆ.

    ಇಬ್ಬರ ಮಾತುಕತೆಯ ವೇಳೆ ಅಣ್ವಸ್ತ್ರ ಯೋಜನೆಯ ಹಾಗೂ ಪರಸ್ಪರ ಸಹಕಾರ, ಆರ್ಥಿಕ ಬಂಧನ ಕುರಿತು ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದ್ದು, ನಾಲ್ಕು ಮಹತ್ವದ ದಾಖಲೆಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಕಿಮ್ ಮಹತ್ವದ ಅಣ್ವಸ್ತ್ರ ನಿಶ್ಯಸ್ತ್ರೀಕರಣ ಕುರಿತ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದ್ದು ಅಧಿಕೃತ ಮಾಹಿತಿ ಲಭಿಸಬೇಕಿದೆ.

  • ಬೆಂಗಳೂರು ವಿಶ್ವದಲ್ಲೇ ಅಗ್ಗದ ನಗರಿ!

    ಬೆಂಗಳೂರು ವಿಶ್ವದಲ್ಲೇ ಅಗ್ಗದ ನಗರಿ!

    ಬೆಂಗಳೂರು: ವಿಶ್ವದ ಟಾಪ್ 10 ಅಗ್ಗದ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 5ನೇ ಸ್ಥಾನ ಸಿಕ್ಕಿದೆ.

    ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್, ಕಾಸ್ಟ್ ಆಫ್ ಲಿವಿಂಗ್ ಇಂಡೆಕ್ಸ್ -2018ರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಬೆಂಗಳೂರು ವಿಶ್ವದ 5ನೇ ಅಗ್ಗದ ನಗರವೆಂದು ತಿಳಿಸಿದೆ.

    ಪಟ್ಟಿಯಲ್ಲಿ ಚೆನ್ನೈ 8ನೇ ಸ್ಥಾನವನ್ನು ಪಡೆದುಕೊಂಡಿದ್ದು, ನವದೆಹಲಿಗೆ 10ನೇ ಸ್ಥಾನ ಸಿಕ್ಕಿದೆ. ಈ ಪಟ್ಟಿಯಲ್ಲಿ ಏಷ್ಯಾ, ವಿಶೇಷವಾಗಿ ಭಾರತ ಹಾಗೂ ಪಾಕಿಸ್ತಾನದ ನಗರಗಳು ಹಣ ಮತ್ತು ಸಾಂಪ್ರದಾಯಿಕವಾದ ಉತ್ತಮ ಮೌಲ್ಯವನ್ನು ಒದಗಿಸುತ್ತಿದೆ ಎಂದು ಸಮೀಕ್ಷೆ ತಿಳಿಸಿದೆ.

    ವಿಶ್ವದ ಅತ್ಯಂತ ದುಬಾರಿ ನಗರಗಳಲ್ಲಿ ಸಿಂಗಾಪುರ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನವನ್ನು ಫ್ರಾನ್ಸ್ ನ ಪ್ಯಾರಿಸ್ ನಗರ ಪಡೆದುಕೊಂಡಿದೆ. ಸ್ವಿಜರ್ಲ್ಯಾಂಡ್‍ನ ಜ್ಯುರಿಚ್, ಹಾಂಕಾಂಗ್, ನಾರ್ವೆಯ ಓಸ್ಲೋ ಕ್ರಮವಾಗಿ ಮೂರು, ನಾಲ್ಕು, ಐದನೇ ಸ್ಥಾನವನ್ನು ಪಡೆದುಕೊಂಡಿದೆ.

    ವಿಶ್ವದ ಅಗ್ಗದ ನಗರಗಳ ಪೈಕಿ ಮೊದಲ ಸ್ಥಾನದಲ್ಲಿ ಸಿರಿಯಾದ ಡಮಾಸ್ಕಸ್, ವೆನಿಜುವೆಲಾದ ಕ್ಯಾರಕಸ್‍ಗೆ ಎರಡನೇ ಸ್ಥಾನ ಸಿಕ್ಕಿದೆ. ಕಜಕಿಸ್ತಾನದ ಅಲ್ಮಾಟಿ, ನೈಜೀರಿಯಾ ಲಾಗೋಸ್‍ಗೆ ಮೂರು ಮತ್ತು ನಾಲ್ಕನೇಯ ಸ್ಥಾನ ಸಿಕ್ಕಿದೆ.

  • ಮೋದಿಯ ಒಂದು ಫೋನ್ ಕರೆಗೆ ಬಾಂಬ್ ದಾಳಿ ನಿಲ್ಲಿಸಿದ್ದ ಸೌದಿ ದೊರೆ!

    ಮೋದಿಯ ಒಂದು ಫೋನ್ ಕರೆಗೆ ಬಾಂಬ್ ದಾಳಿ ನಿಲ್ಲಿಸಿದ್ದ ಸೌದಿ ದೊರೆ!

    ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿಯವರ ಒಂದು ಫೋನ್ ಕರೆಗೆ ಸ್ಪಂದಿಸಿದ ಸೌದಿ ದೊರೆ, 2015 ರಲ್ಲಿ ಯೆಮನ್ ಮೇಲಿನ ಬಾಂಬ್ ದಾಳಿ ನಿಲ್ಲಿಸಿದ್ದರು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾನುವಾರ ಹೇಳಿದ್ದಾರೆ.

    ಆಸಿಯಾನ್ ಪ್ರವಾಸಿ ಭಾರತೀಯರ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾನುವಾರ ಈ ಕುರಿತು ಮಾಹಿತಿ ನೀಡಿದರು. ಯೆಮನ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಕೈಗೊಂಡಿದ್ದ ಆಪರೇಷನ್ `ರಹಾತ್’ ಗೆ ಸೌದಿ ದೊರೆ ಸಹಕಾರ ನೀಡಿದ್ದರು ಎಂದು ತಿಳಿಸಿದ್ದಾರೆ.

    ಯೆಮನ್ ನಲ್ಲಿದ್ದ 4000ಕ್ಕೂ ಹೆಚ್ಚು ಭಾರತೀಯರು ಸಂಕಷ್ಟದಲ್ಲಿ ಸಿಕ್ಕಿದ್ದರು. 2015 ಏಪ್ರಿಲ್ 1 ರಂದು ಆಪರೇಷನ್ ರಹಾತ್ ಎಂಬ ಹೆಸರಿನಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿತ್ತು.

    ಈ ವೇಳೆ ಸೌದಿ ಯೆಮನ್ ನಲ್ಲಿ ಉಗ್ರರ ವಿರುದ್ಧ ಬಾಂಬ್ ದಾಳಿ ನಡೆಸುತ್ತಿತ್ತು. ಸುಷ್ಮಾ ಅವರ ಸಲಹೆಯಂತೆ ಮೋದಿ ಭಾರತೀಯರ ರಕ್ಷಣೆಗೆ ಕಾರ್ಯಾಚರಣೆ ನಡೆಸಲು ಅನುವಾಗುವಂತೆ ಬಾಂಬ್ ದಾಳಿ ಸ್ಥಗಿತಕ್ಕೆ ಸೌದಿ ದೊರೆಯನ್ನು ಕೋರಿದ್ದರು.

    ಈ ಮನವಿಗೆ ಪ್ರತಿಕ್ರಿಯಿಸಿದ್ದ ಸೌದಿ ದೊರೆ, ಪ್ರಧಾನಿ ಮೋದಿಯವರೊಂದಿಗಿನ ಸ್ನೇಹಕ್ಕೆ ಅವರ ಮನವಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ. ಆದರೆ ಬಾಂಬ್ ದಾಳಿಯನ್ನೂ ಪೂರ್ಣ ನಿಲ್ಲಿಸಲಾಗದು. ಭಾರತೀಯರ ಸುರಕ್ಷಿತ ತೆರವಿಗಾಗಿ ಪ್ರತಿನಿತ್ಯ ಎರಡು ಘಂಟೆಗಳ ಕಾಲ ಬೆಳಗ್ಗೆ 9 ರಿಂದ 11 ರ ವರೆಗೆ ಬಾಂಬ್ ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡಿದ್ದರು ಎಂದು ಸುಷ್ಮಾ ಸ್ವರಾಜ್ ಘಟನೆಯನ್ನು ವಿವರಿಸಿದರು.

    ಸೌದಿ ದೊರೆಯ ಭರಸೆಯಂತೆ ಭಾರತೀಯ ಸೇನೆ 2015ರ ಏ.1ರಿಂದ 11 ದಿನಗಳ ಕಾಲ ಸೇನಾ ವಿಮಾನ ನಿಲ್ದಾಣದಿಂದ 4,800ಕ್ಕೂ ಹೆಚ್ಚು ಭಾರತೀಯರು ಮತ್ತು 1,972 ನೆರೆಹೊರೆಯ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ರಕ್ಷಿಸಿ ತವರಿಗೆ ಕರೆತಂದಿತ್ತು. ಈ ಕಾರ್ಯಾಚರಣೆಯನ್ನು ಭಾರತ ವಿದೇಶಾಂಗ ಸಲಹೆಗಾರ, ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಮುಂದಾಳತ್ವದಲ್ಲಿ ನಡೆಯಿತು ಎಂದು ಸುಷ್ಮಾ ಸ್ವರಾಜ್ ಹೇಳಿದರು.

  • ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

    ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

    ಬೆಂಗಳೂರು: ಹೊಸ ವರ್ಷದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಕುಟುಂಬ ಸಿಂಗಾಪುರಕ್ಕೆ ಪ್ರವಾಸ ಬೆಳೆಸಿದೆ.

    ಕುಮಾರಸ್ವಾಮಿ ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಶಾಸಕ ಸಾ.ರಾ ಮಹೇಶ್ ಸಾಥ್ ನೀಡಿದ್ದಾರೆ. ಪ್ರತಿ ವರ್ಷದಂತೆ ಕುಮಾರಸ್ವಾಮಿ ಕುಟುಂಬ ಈ ವರ್ಷವೂ ಸಿಂಗಾಪುರಕ್ಕೆ ತೆರಳಿದ್ದು, ಹೊಸ ವರ್ಷ ಆಚರಣೆಯ ನಂತರ ಜನವರಿ 2 ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

    ಇತ್ತ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅಯ್ಯೋ ಯಾವ ಮುಖ್ಯಮಂತ್ರಿಯೂ ಇವರ ರೀತಿ ಮಾಡಿಲ್ಲ. ಏನ್ ಕಿರೀಟ, ಕತ್ತಿ, ಗುರಾಣಿ ಹಿಡಿದುಕೊಳ್ಳುತ್ತಿದ್ದಾರೆ. ಇವರೊಬ್ಬರೇ ನವ ಕರ್ನಾಟಕ ನಿರ್ಮಾಣ ಮಾಡುವವರು. ಇಷ್ಟು ದಿನ ಎಲ್ಲಿ ಹೋಗಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯ ಅವರು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳುವ ಭರದಲ್ಲಿ, ಹಿಂದಿನವರು ಸಾಧನೆ ಮಾಡಿಲ್ಲ ಎಂದು ಜರಿದಿದ್ದಾರೆ. ಈ ವೇಳೆ ನನ್ನ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಎಷ್ಟು ಕೆಲಸ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸರ್ಕಾರಿ ಹಣದಿಂದ ದುಂದುವೆಚ್ಚ ಮಾಡಿ ಪ್ರವಾಸ ಮಾಡುತ್ತಾರೆ. ನವ ಕರ್ನಾಟಕ ನಿರ್ಮಾಣ ಮಾಡುವುದಕ್ಕೆ ಇವರೊಬ್ಬರೇ ಹುಟ್ಟಿದ್ದು, ಎಲ್ಲವು ಜನರಿಗೆ ಗೊತ್ತಾಗುತ್ತದೆ. ಬಿರುಸಿನ ಮಾತು ಸ್ವಲ್ಪ ಕಡಿಮೆ ಮಾಡಬೇಕು, ಇಲ್ಲವಾದರೆ ಅದಕ್ಕೆ ಪ್ರತಿಯಾಗಿ ಬಿರುಸಿನ ಪ್ರತಿಕ್ರಿಯೆ ಕೊಡುವ ಶಕ್ತಿ ನಮಗೂ ಇದೆ ಎಂದರು.

    ಕಾಂಗ್ರೆಸ್ ಭಿನ್ನಾಭಿಪ್ರಾಯ: ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಒಂದು ಪ್ರವಾಸ ಮಾಡಿದರೆ, ಸಿಎಂ ಅವರು ಒಂದು ಪ್ರವಾಸ ಮಾಡುತ್ತಾರೆ. ಆದರೆ ನಮ್ಮದು ಹಾಗಲ್ಲ. ಕುಮಾರಸ್ವಾಮಿ ನಾನು ಇಬ್ಬರು ಪ್ರವಾಸ ಮಾಡುತ್ತೇವೆ. ಕಾಂಗ್ರೆಸ್ ಪ್ರವಾಸ ಸಭೆಗೆ ಎಷ್ಟು ಜನ ಸೇರಿದ್ದಾರೆ ಅಂತಾ ನೋಡಿದ್ದೇನೆ. ಅವರದ್ದು ಸರ್ಕಾರಿ ಕಾರ್ಯಕ್ರಮವೋ, ಪ್ರಚಾರ ಕಾರ್ಯಕ್ರಮವೋ ಗೊತ್ತಾಗುತ್ತಿಲ್ಲ. ಕಳೆದ ಬಾರಿ 120 ಸ್ಥಾನ ಗೆಲ್ಲಲು ಕಾರಣ ಏನು? ಎಂಬುವುದು ತಿಳಿದಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಸಿಎಂ ಎಂದು ಘೋಷಣೆ ಮಾಡಿ ರಾಹುಲ್ ಗಾಂಧಿ ಗೆದ್ದು ಬರಲಿ ನೋಡೋಣ ಎಂದು ಸಿಎಂ ವಿರುದ್ಧ ಕಿಡಿಕಾರಿದರು.

    ಜನವರಿ ಬಳಿಕ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡುತ್ತಾರೆ. ಇನ್ನೊಂದು ದಿಕ್ಕಿನಲ್ಲಿ ನಾನು ಪ್ರವಾಸ ಮಾಡುತ್ತೇನೆ. ಯಡಿಯೂರಪ್ಪ, ಕುಮಾರಸ್ವಾಮಿ ಸಿಎಂ ಆಗಲ್ಲ ಎಂದು ಅಹಂನಿಂದ ಹೇಳುತ್ತಾರೆ. ಹಾಗಾಂತ ಅವರ ಹಣೆಮೇಲೆ ಬರೆದಿದ್ದಾರಾ? ಸ್ವಲ್ಪ ದಿನ ತಡೆದುಕೊಳ್ಳಿ, ಎಲ್ಲವನ್ನು ಗಮನಿಸುತ್ತಿದ್ದೇನೆ. ತಾಳ್ಮೆ ನನಗೂ ಇದೆ. ತಾಳ್ಮೆ ಮೀರಿದಾಗ ಏನಾಗುತ್ತೆ ನೋಡೋಣ. ಬೇಲ್ ತೆಗೆದುಕೊಂಡವರೆಲ್ಲ ಸಿಎಂ ಆಗೋಕೆ ಸಾಧ್ಯ ಎಂದು ಸಿಎಂ ಪ್ರಶ್ನಿಸುತ್ತಾರೆ. ಆದರೆ ಇದೇ ಸಿದ್ದರಾಮಯ್ಯ ಅವರು ಆಪರೇಷನ್ ಕಮಲದಲ್ಲಿ ಏನು ಮಾಡಿದ್ದರು. ಯಡಿಯೂರಪ್ಪ ಸಿಎಂ ಇದ್ದಾಗ ವಿಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಏನ್ ಮಾಡಿದ್ದರು ಅಂತಾ ಪ್ರಶ್ನೆ ಮಾಡಿದರು.

    ಯಾರ ಬಗ್ಗೆಯೂ ಲಘುವಾಗಿ ಮಾತನಾಡಲ್ಲ: ನಾನು ಪ್ರಧಾನಿ ಮೋದಿ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಮುಂದೆಯೂ ಮಾತನಾಡಲ್ಲ. ಹಾಗೆಯೇ ನಾನು ರಾಹುಲ್ ಗಾಂಧಿ, ಸೋನಿಯಾಗಾಂಧಿ ಯಾರ ಬಗ್ಗೆಯೂ ಲಘುವಾಗಿ ಮಾತಾನಾಡಿಲ್ಲ, ಮಾತನಾಡಲ್ಲ ಎಂದರು.

    ನಮ್ಮ ಕೈಯಲ್ಲಿ ಅಧಿಕಾರ ಇಲ್ಲ. ಅದರೂ ರಾಜ್ಯದ ಎಲ್ಲಾ ಕಡೆಯೂ ಪ್ರವಾಸ ಮಾಡುತ್ತೇವೆ. ನಮಗೆ ಹೋರಾಟ ಮಾಡೋ ಕೆಚ್ಚಿದೆ. ಆದರೆ ಪರಮೇಶ್ವರ್ ಅವರಿಗೆ ಅಧಿಕಾರ ಇಲ್ಲದಿರಬಹುದು, ಕಾಂಗ್ರೆಸ್ ಸರ್ಕಾರದ ಬೆಂಬಲ, ಸಿಬಿಐ ಬೆಂಬಲವಿದೆ. ಈ ಹಿಂದೆ ಸಿದ್ದರಾಮಯ್ಯ ಅವರನ್ನ ಕರೆದುಕೊಂಡು ಹೋದ ತಕ್ಷಣ ಜೆಡಿಎಸ್ ಮುಗೀತು ಅಂದುಕೊಂಡಿದ್ದರು. ಆದರೆ ಅಮೇಲೆ ಏನಾಯಿತು ಎಂದು ಪ್ರಶ್ನಿಸಿದರು.

    ಮಹದಾಯಿ ಹೋರಾಟಕ್ಕೆ ಸಿದ್ದ: ರಾಜ್ಯದ ನಾಯಕರ ಜೊತೆ ಪರಸ್ಪರ ದೋಷಾರೋಪದಿಂದ ಮಹದಾಯಿ ಏನಾಯಿತು. ನದಿಗೆ ಕಟ್ಟಿರುವ ತಡೆಗೋಡೆಯ ರಕ್ಷಣೆ ಜವಾಬ್ದಾರಿ ಕರ್ನಾಟಕ ಸರ್ಕಾರದ್ದು ಅದು ಈಗಲೂ ಹಾಗೆ ಮುಂದುವರೆಯುತ್ತೆ ಎಂದು ಭಾವಿಸಿದ್ದೇನೆ. ಅವಶ್ಯಕತೆ ಇದ್ದರೆ ಮಹದಾಯಿ ಹೋರಟಕ್ಕಾಗಿ ನಾನು ಮತ್ತೆ ಪ್ರಧಾನಿ ಅವರನ್ನ ಭೇಟಿ ಮಾಡುತ್ತೇನೆ. ಆದರೆ ಈ ವೇಳೆ ತನಗೆ ಫೋಟೋ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಇದರಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

    https://www.youtube.com/watch?v=AGeBU4rObUc

  • ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್

    ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್

    ಹೈದರಾಬಾದ್: ವ್ಯಾಪಾಸ್ಥರೊಬ್ಬರನ್ನು ಕಿಡ್ನಾಪ್ ಮಾಡಿ ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ಅದನ್ನು ಕುಟುಂಬವರಿಗೆ ವಾಟ್ಸಪ್ ಮೂಲಕ ಕಳುಹಿಸಿ ಹಣಕ್ಕಾಗಿ ಬೇಡಿಕೆ ಮಾಡಿದ್ದಾರೆ. ಆದರೆ ಕುಟುಂಬದವರು ಹಣ ಕೊಡಲು ನಿರಾಕರಿಸಿದ್ದರಿಂದ ಕೋಪಗೊಂಡು ಅಪಹರಣಕಾರರು ವ್ಯಕ್ತಿಯನ್ನು ಕೊಂದೇ ಬಿಟ್ಟಿದ್ದಾರೆ.

    ಕುಶೈಗುಡಾ ಪೊಲೀಸ್ ವ್ಯಾಪ್ತಿಯ ಮಹೇಶ್ ನಗರದ ನಿವಾಸಿ ವಾಸುದೇವ್‍ರಾಜ್ ಅಪಹರಣಗಾರರಿಂದ ಹತ್ಯೆಯಾದ ದುರ್ದೈವಿ. ಈ ಘಟನೆ ಹೈದರಾಬಾದಿನ ಕುಶೈಗುಡಾದಲ್ಲಿ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಅಪರಿಚಿತ ವ್ಯಕ್ತಿಯೊಬ್ಬ ವಾಸುದೇವ್ ಬಳಿ ಬಂದು ನಿಮ್ಮ ಬಳಿ ವ್ಯಾಪಾರದ ಒಪ್ಪಂದ ಮಾಡಿಕೊಳ್ಳಬೇಕು ನಮ್ಮ ಮನೆಗೆ ಬನ್ನಿ ಎಂದು ಹೇಳಿದ್ದಾನೆ. ಅದರಂತೆ ವಾಸ್‍ದೇವ್ ಆತನ ಮನೆಗೆ ತೆರಳಿದಾಗ ಅಲ್ಲಿ ಅವರನ್ನು ಸಿಂಗಾಪುರಕ್ಕೆ ಕರೆದುಕೊಂಡಿದ್ದಾರೆ. ಅಲ್ಲಿ ಅವರ ಶರ್ಟ್ ಬಿಚ್ಚಿಸಿ, ಕೈ ಕಾಲು ಕಟ್ಟಿ ಹೊಡೆದು ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮೂಲಕ 3 ಕೋಟಿ ರೂ. ಹಣದ ಬೇಡಿಕೆ ಇಟ್ಟಿದ್ದಾರೆ.

    ಆದರೆ ಕುಟುಬಂಸ್ಥರು ಹಣ ಕೊಡಲು ನಿರಾಕರಿಸಿ ಅಪಹರಣಕಾರರ ಬಳಿ ವಾಸುದೇವ್ ಅವರನ್ನು ಬಿಡುವಂತೆ ಕೇಳಿಕೊಂಡಿದ್ದರು. ಆದರೆ ಹಣ ಸಿಗಲಿಲ್ಲ ಎಂದು ಕೋಪಗೊಂಡ ಅಪಹರಣಗಾರರು ವಾಸುದೇವ್ ಅವರನ್ನು ಕೊಲೆ ಮಾಡಿದ್ದಾರೆ.

    ಹತ್ಯೆಯಾದ ವಾಸುದೇವ್ ಆರ್.ಕೆ ಎಂಟರ್‍ಪ್ರೈಸ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಗೆ ಆರ್ಥಿಕವಾಗಿ ಸಮಸ್ಯೆಗಳನ್ನ ಹೊಂದಿದ್ದು, ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಕೂಡ ಬಳಲುತ್ತಿದ್ದರು. ಈಗ ಭಾರತೀಯ ರಾಯಭಾರಿ ಅಧಿಕಾರಿಗಳು ವಾಸುದೇವ್ ಅವರ ಶವವನ್ನು ಹೈದರಾಬಾದ್‍ಗೆ ಶನಿವಾರ ತರುವ ಪ್ರಯತ್ನ ನಡೆಸುತ್ತಿದ್ದಾರೆ.