Tag: singer

  • ಖ್ಯಾತ ಹಿರಿಯ ಗಾಯಕಿ ನಿರ್ಮಲಾ ಮಿಶ್ರಾ ವಿಧಿವಶ

    ಖ್ಯಾತ ಹಿರಿಯ ಗಾಯಕಿ ನಿರ್ಮಲಾ ಮಿಶ್ರಾ ವಿಧಿವಶ

    ಕೋಲ್ಕತ್ತಾ: ಖ್ಯಾತ ಹಿರಿಯ ಬೆಂಗಾಲಿ ಮತ್ತು ಒಡಿಯಾ ಗಾಯಕಿ ನಿರ್ಮಲಾ ಮಿಶ್ರಾ(81) ಅವರು ಹೃದಯಾಘಾತದಿಂದ ಭಾನುವಾರ ಮುಂಜಾನೆ ಚೆಟ್ಲಾ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

    ನಿರ್ಮಲಾ ಮಿಶ್ರಾ ಅವರು ಹಲವಾರು ಬೆಂಗಾಲಿ ಮತ್ತು ಒಡಿಯಾ ಚಲನಚಿತ್ರಗಳ ಹಾಡುಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ 12.05ರ ಸುಮಾರಿಗೆ ನಿರ್ಮಲಾ ಮಿಶ್ರಾ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಸಮೀಪದ ನರ್ಸಿಂಗ್ ಹೋಮ್‍ಗೆ ಕರೆದೊಯ್ಯಲಾಯಿತು. ಈ ವೇಳೆ ನಿರ್ಮಲಾ ಮಿಶ್ರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 1938ರಲ್ಲಿ ಜನಿಸಿದ ನಿರ್ಮಲಾ ಮಿಶ್ರಾ ಅವರು, ಸಂಗೀತ ಸುಧಾಕರ್ ಬಾಲಕೃಷ್ಣ ದಾಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಎಮಾನ್ ಏಕ್ತಾ ಜಿನುಕ್’, ‘ಬೋಲೋ ತೊ ಅರ್ಷಿ’ ಮತ್ತು ‘ಈ ಬಂಗ್ಲಾರ್ ಮತಿ ತೆ’ ಹಾಡುಗಳು ನಿರ್ಮಲಾ ಮಿಶ್ರಾ ಅವರು ಹಾಡಿರುವ ಜನಪ್ರಿಯ ಬೆಂಗಾಲಿ ಹಾಡುಗಳಲ್ಲಿ ಒಂದಾಗಿದೆ. ಜೊತೆಗೆ ಒಡಿಯಾದಲ್ಲಿ ನಿರ್ಮಲಾ ಮಿಶ್ರಾ ಅವರು ಹಾಡಿದ್ದ ‘ನಿದಾ ಭಾರ ರಾತಿ ಮಧು ಝರಾ ಜಾನ್ಹಾ’ ಮತ್ತು ‘ಮೋ ಮನ ಬೀನಾ ರಾ ತಾರೆ’ ಹಾಡುಗಳು ಸಾಕಷ್ಟು ಹಿಟ್ ಆಗಿತ್ತು.

    ಸದ್ಯ ನಿರ್ಮಲಾ ಮಿಶ್ರಾ ಅವರ ಅಗಲಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ – ಮೋದಿಯಿಂದ ಅಭಿನಂದನೆ

    Live Tv
    [brid partner=56869869 player=32851 video=960834 autoplay=true]

  • ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

    ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

    ಬ್ರಿಟನ್ ಸಂಗೀತ ಕ್ಷೇತ್ರದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದ್ದ, ಪಂಜಾಬಿ ಮೂಲದ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. 63ರ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸ್ವತಃ ಕುಟುಂಬದ ಮೂಲಗಳೇ ತಿಳಿಸಿವೆ. ಭಾರತೀಯ ಮೂಲದ ಬ್ರಿಟನ್ ನಲ್ಲಿ ಫೇಮಸ್ ಆಗಿದ್ದ ಸಫ್ರಿ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದರು.

    ಪಂಜಾಬಿನಲ್ಲಿ ಜನಿಸಿದ್ದರೂ, ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆ ಕಂಡುಕೊಂಡಿದ್ದ ಬಲ್ವಿಂದರ್ ಸಫ್ರಿ, 1989ರಿಂದ ಯುಕೆ ಭಾಂಗ್ರಾದ ಭಾಗವಾಗಿದ್ದ ಅವರು 1990ರಲ್ಲಿ ಸಫ್ರಿ ಬಾಯ್ಸ್ ಬ್ಯಾಂಡ್ ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಸಫ್ರಿ ಬಾಯ್ಸ್ ಬ್ಯಾಂಡ್ ಅತೀ ದುಬಾರಿ ಬ್ಯಾಂಡ್ ಎಂದೂ ಖ್ಯಾತಿಗಳಿಸಿತ್ತು. ಇದನ್ನೂ ಓದಿ:ಓಟಿಟಿನಲ್ಲಿ ಬರುತ್ತಿದ್ದಾಳೆ ರಕ್ಷಿತ್ ಶೆಟ್ಟಿ ನಟನೆಯ ಕನ್ನಡದ ‘ಚಾರ್ಲಿ

    ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ನಂತರ ಅವರು ಕೋಮಾಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೇ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತಂತೆ. ಆನಂತರ ಜುಲೈ 15ರಂದು ಆಸ್ಪತ್ರೆಯಿಂದ ಅವರನ್ನು ಮನೆಗೆ ಕರೆತರಲಾಗಿತ್ತು. ಮನೆಯಲ್ಲೇ ಸಫ್ರಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • 53ನೇ ವಯಸ್ಸಿನಲ್ಲಿ ಬೆತ್ತಲಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಜನ್ನಿಫರ್ ಲೊಪೇಜ್

    53ನೇ ವಯಸ್ಸಿನಲ್ಲಿ ಬೆತ್ತಲಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಜನ್ನಿಫರ್ ಲೊಪೇಜ್

    ಜನ್ನಿಫರ್ ಲೊಪೇಜ್ ತಮ್ಮ ನಟನೆ, ಗಾಯನದ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಇತ್ತೀಚೆಗಷ್ಟೇ ನಟಿ ಜನ್ನಿಫರ್ ನಾಲ್ಕನೇ ಮದುವೆಯಾಗುವ ಮೂಲಕ ಸಿಕ್ಕಾಪಟ್ಟೆ ಸೌಂಡ್ ಮಾಡಿದ್ದರು. ಈಗ ತಮ್ಮ ಬರ್ತಡೇ ದಿನ ಬೆತ್ತಲೆ ಫೋಟೋಶೂಟ್ ಶೇರ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸಿದ್ದಾರೆ.

     

    View this post on Instagram

     

    A post shared by Jennifer Lopez (@jlo)

    ತಮ್ಮ 53ನೇ ವಯಸ್ಸಿನಲ್ಲಿ ನಾಲ್ಕನೇ ವಿವಾಹ ಆಗುವ ಮೂಲಕ ವೈರಲ್ ಆಗಿದ್ದ ನಟಿ ಹಾಲಿವುಡ್ ಖ್ಯಾತ ನಟಿ ಜನ್ನಿಫರ್ ಲೊಪೇಜ್ ಇದೀಗ ಬೆತ್ತಲಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ನಟ ಬೆನ್ ಅಫ್ಲೆಕ್ ಜತೆ 4ನೇ ಮದುವೆಯಾದ ನಟಿ ಜನ್ನಿಫರ್ ನಿನ್ನೆ (ಜುಲೈ 24)ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ನೆಚ್ಚಿನ ನಟಿಗೆ ಫ್ಯಾನ್ಸ್ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದರು. ಆದರೆ ಜನ್ನಿಫರ್ ತನ್ನ ಹುಟ್ಟುಹಬ್ಬವನ್ನು ಬೆತ್ತಲಾಗುವ ಮೂಲಕ ವಿಭಿನ್ನವಾಗಿ ಆಚರಿಸಿ, ಬರ್ತಡೇಯನ್ನ ಸಂಭ್ರಮಿಸಿದ್ದಾರೆ. ಜನ್ನಿಫರ್ ನಗ್ನರಾಗಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಬನ್ಸಾಲಿ ನಿರ್ದೇಶನದಲ್ಲಿ ಬಹುಭಾಷಾ ನಟಿ ಅದಿತಿ ರಾವ್

     

    View this post on Instagram

     

    A post shared by Jennifer Lopez (@jlo)

    ೫೩ನೇ ವರ್ಷಕ್ಕೆ ಕಾಲಿಟ್ಟರುವ ಜೆನ್ನಿಫರ್ ಲೊಪೇಜ್ ಬೆತ್ತಲೆ ವಿಡಿಯೋ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ನಟಿಯ ವಿಚಿತ್ರ ಬರ್ತಡೇ ಆಚರಣೆಗೆ ಫ್ಯಾನ್ಸ್ ದಂಗಾಗಿದ್ದಾರೆ. ವಿಡಿಯೋದಲ್ಲಿ ಜನ್ನಿಫರ್ ಮೊದಲು ಕಪ್ಪು ಬಟ್ಟೆ ಧರಿಸಿದ್ದರು. ಬಳಿಕ ಬಾಡಿ ಲೋಷನ್ ಹಚ್ಚುವ ನಟಿ ನಂತರ ಸಂಪೂರ್ಣ ಬೆತ್ತಲಾಗುತ್ತಾರೆ. ವಿವಿಧ ರೀತಿಯಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿರುವ ವಿಡಿಯೋ ವೈರಲ್ ಆಗಿದೆ. ಜನ್ನಿಫರ್ ಈ ವಿಡಿಯೊಗೆ ಅನೇಕರು ಹುಟ್ಟುಹಬ್ಬದ ವಿಶ್ ಮಾಡಿದ್ರೆ ಇನ್ನು ಅನೇಕರು ಸಖತ್ ಹಾಟ್, ೫೩ನೇ ವಯಸ್ಸಿನಲ್ಲೂ ಎಷ್ಟು ಬ್ಯೂಟಿಫುಲ್ ಆಗಿದ್ದೀರಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಸದ್ಯ ತಮ್ಮ ಹುಟ್ಟುಹಬ್ಬದ ಬೆತ್ತಲೆ ಫೋಟೋಶೂಟ್ ಮೂಲಕ ಜನ್ನಿಫರ್ ಸದ್ದು ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಾಯಕ ಅದ್ನಾನ್ ಸಮಿ ಗುಡ್ ಬೈ ಹೇಳಿದ್ದು ಯಾಕೆ?

    ಗಾಯಕ ಅದ್ನಾನ್ ಸಮಿ ಗುಡ್ ಬೈ ಹೇಳಿದ್ದು ಯಾಕೆ?

    ಬಾಲಿವುಡ್‌ನಲ್ಲಿ ಸಾಕಷ್ಟು ಹಾಡುಗಳಿಗೆ ಧ್ವನಿ ನೀಡಿರುವ ಅದ್ನಾನ್ ಸಮಿ ಹಾಕಿರುವ ಈ ಒಂದು ಪೋಸ್ಟ್‌ನಿಂದ ಸಖತ್ ಚರ್ಚೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ `ಗುಡ್ ಬೈ’ ಅಂತಾ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ನೋಡಿರುವ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಅಷ್ಟಕ್ಕೂ ಆಗಿದ್ದೇನು ಅಂತಾ ಫ್ಯಾನ್ಸ್ ಪ್ರಶ್ನಿಸುತ್ತಿದ್ದಾರೆ.

    ಹಿಂದಿ ಮತ್ತು ಸಾಕಷ್ಟು ಭಾಷೆಗಳಲ್ಲಿ ಹಾಡಿ ಸೈ ಎನಿಸಿಕೊಂಡಿರುವ ಖ್ಯಾತ ಗಾಯಕ ಅದ್ನಾನ್ ಮೂಲತಃ ಪಾಕಿಸ್ತಾನದವರು. 2016ರಲ್ಲಿ ಅವರು ಭಾರತದ ಪೌರತ್ವ ಪಡೆದರು. ಇನ್ನು ತಮ್ಮ ವೃತ್ತಿಜೀವನ ಆರಂಭಿಸುವಾಗ 230 ಕೆ.ಜಿ ಇದ್ದರು. ಜಿಮ್, ಫಿಟ್‌ನೆಸ್ ವರ್ಕೌಟ್ ಬಳಿಕ ಫಿಟ್ ಆಗಿ ಬಂದರು.

    ಇನ್ನು ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದ ಗಾಯಕ ಅದ್ನಾನ್ ಸಮಿ ಸಡನ್ ಆಗಿ ʻಗುಡ್ ಬೈʼ ಪೋಸ್ಟ್‌ ಅಂತಾ ಹಾಕಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಕೆಲವರು ಸೋಷಿಯಲ್ ಮೀಡಿಯಾ ತೊರೆಯುತ್ತಿದ್ದಾರೆ ಅಂತಾ ಪ್ರಶ್ನೆ ಮಾಡಿದ್ರೆ, ಕೆಲವರು ಪಾಸಿಟಿವ್ ಆಗಿ ಯೋಚಿಸಿ ಕೆಲ ಸಮಯದ ನಂತರ ಕಂಬ್ಯಾಕ್ ಆಗಲಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಈ ಎಲ್ಲಾ ವದಂತಿಗೂ ಅದ್ನಾನ್ ಸಮಿ, ಉತ್ತರ ಕೊಡುವವರೆಗೂ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಂಗರ್ ಕೆಲ್ಲಿಗೆ 30 ವರ್ಷ ಜೈಲು ಶಿಕ್ಷೆ: 9 ಆರೋಪ ಸಾಬೀತು

    ಸಿಂಗರ್ ಕೆಲ್ಲಿಗೆ 30 ವರ್ಷ ಜೈಲು ಶಿಕ್ಷೆ: 9 ಆರೋಪ ಸಾಬೀತು

    ಹಾಲಿವುಡ್ ನ ಖ್ಯಾತ ಗಾಯಕ ಆರ್.ಕೆಲ್ಲಿ ಮೇಲೆ ಸರಣಿ ಲೈಂಗಿಕ ಅಪರಾಧಗಳ ಆರೋಪವಿತ್ತು. ಈ ಆರೋಪಗಳೆಲ್ಲ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಬರೋಬ್ಬರಿ ಮೂವತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ಬ್ರೂಕ್ ಲೀನ್ ನ್ಯಾಯಾಲಯ. 30 ವರ್ಷ ಜೈಲು ಶಿಕ್ಷೆಯ ಜೊತೆಗೆ ಒಂದು ಲಕ್ಷ ಡಾಲರ್ ಹಣವನ್ನೂ ಜುಲ್ಮಾನೆಯಾಗಿ ಕೊಡಲು ಆದೇಶಿಸಲಾಗಿದೆ.

    ಸಣ್ಣ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅಭಿಮಾನಿಗಳ ಮೇಲೂ ಲೈಂಗಿಕ ದೌರ್ಜನ್ಯ ಹಾಗೂ ಯುವತಿಯರನ್ನು ಲೈಂಗಿಕತೆಗಾಗಿ ಉದ್ಯೋಗಕ್ಕೆ ಸೇರಿಸಿಕೊಳ್ಳುವ ಆರೋಪ ಸೇರಿದಂತೆ ಒಂಬತ್ತು ಆರೋಪಗಳು ಕೆಲ್ಲಿ ಮೇಲಿದ್ದವು. ಶಿಕ್ಷೆ ಪ್ರಕಟಿಸುತ್ತಿದ್ದಂತೆಯೇ ಕೆಲ್ಲಿ ಪರ ವಕೀಲರು ಶಿಕ್ಷೆಯನ್ನು ಕಡಿಮೆಗೊಳಿಸುವಂತೆ ಮನವಿ ಮಾಡಿದರು. ನ್ಯಾಯಾಲಯವು ಕೆಲ್ಲಿ ವಕೀಲರ ಮನವಿಯನ್ನು ಪುರಸ್ಕರಿಸದೇ ಶಿಕ್ಷೆ ಪ್ರಕಟಿಸಿದೆ. ಇದನ್ನೂ ಓದಿ:ಪವಿತ್ರ ಲೋಕೇಶ್ ದೂರು : ತನಿಖೆ ಆರಂಭಿಸಿದ ಸೈಬರ್ ಪೊಲೀಸ್

    ಕೆಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ 45 ಮಂದಿ ಸಾಕ್ಷಿ ನುಡಿದಿದ್ದರು. ಅದರಲ್ಲಿ 11 ಜನ ಸಂತ್ರಸ್ತೆಯರೂ ಇದ್ದರು. ಅಲ್ಲದೇ, ಮಾದಕ ವಸ್ತು ಸೇವನೆ, ಹಲ್ಲೆ, ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪಗಳನ್ನು ಅವರು ಎದುರಿಸುತ್ತಿದ್ದರು. ಅಚ್ಚರಿಯ ಸಂಗತಿ ಅಂದರೆ, ಕೆಲ್ಲಿಯ  ಮೊದಲ ಪತ್ನಿ ಕೂಡ ದೂರು ದಾಖಲಿಸಿದ್ದರು.

    Live Tv

  • ಗೃಹಪ್ರವೇಶದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಗಾಯಕ ನವೀನ್ ಸಜ್ಜು

    ಗೃಹಪ್ರವೇಶದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ಗಾಯಕ ನವೀನ್ ಸಜ್ಜು

    ಸ್ಯಾಂಡಲ್‌ವುಡ್‌ನ ಗಾಯಕ, ಮ್ಯೂಸಿಕ್ ಕಂಪೋಸರ್ ನವೀನ್ ಸಜ್ಜು ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬಿಗ್‌ ಬಾಸ್‌ ಖ್ಯಾತಿಯ ನವೀನ್ ಸಜ್ಜು ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದೆ.

    ಚಂದನವನದಲ್ಲಿ ಗಾಯಕ, ಸಂಗೀತ ಸಂಯೋಜಕ, ಬರಹಗಾರ ಮೂಲಕ ಮೋಡಿ ಮಾಡಿರುವ `ಬಿಗ್ ಬಾಸ್’ ಖ್ಯಾತಿಯ ನವೀನ್ ಸಜ್ಜು ಮನೆಯಲ್ಲಿ ಸಂತಸ ಮಾಡಿದೆ. ಹೊಸ ಮನೆಯ ಹೊಸ ಹೊಸ್ತಿಲಲ್ಲಿ ಗಾಯಕ ನವೀನ್ ಸಜ್ಜು ಇದ್ದಾರೆ. ಮೈಸೂರಿನಲ್ಲಿ ತಮ್ಮ ಹೊಸ ಮನೆಯ ಗೃಹ ಪ್ರವೇಶ ಮಾಡಿದ್ದಾರೆ. ನಟಿ ಅಕ್ಷತಾ ಪಾಂಡವಪುರ ಕೂಡ ನವೀನ್ ಮನೆಯ ಗೃಪ್ರವೇಶದಲ್ಲಿ ಪಾಲ್ಗೋಂಡಿದ್ದಾರೆ. ನವೀನ್ ಹೊಸ ಮನೆಯ ಫೋಟೋ ಶೇರ್ ಮಾಡಿ ಶುಭ ಹಾರೈಸಿದ್ದಾರೆ.‌ ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    `ಮಾನಸು’ ಇವತ್ತು ಮೈಸೂರಿನಲ್ಲಿ ನಮ್ಮ ನವೀನ್‌ನ ಮನೆ ಓಪನಿಂಗ್ ಇತ್ತು. ಚಂದದ ಮನೆ, ಮುಂದಿನ ಎಲ್ಲಾ ದಿನಗಳೂ ಹೀಗೆ ಮನೆಯಷ್ಟೇ ಚಂದವಾಗಿರಲಿ ಎಂದು ನಟಿ ಅಕ್ಷತಾ ಶುಭಹಾರೈಸಿದ್ದಾರೆ. ಸಾಕಷ್ಟು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಿರುವ ನವೀನ್ ಸಜ್ಜು, ಹೊಸ ಮನೆಯ ಸಂಭ್ರಮಕ್ಕೆ ಸಾಕಷ್ಟು ಸೆಲೆಬ್ರೆಟಿ ಸ್ನೇಹಿತರು ಸಾಕ್ಷಿಯಾಗಿದ್ದಾರೆ.

    Live Tv

  • ಸಿಧು ಮೂಸೆವಾಲಾ ಹತ್ಯೆ ಪ್ರಕರಣ – 8 ಮಂದಿ ಅರೆಸ್ಟ್

    ಸಿಧು ಮೂಸೆವಾಲಾ ಹತ್ಯೆ ಪ್ರಕರಣ – 8 ಮಂದಿ ಅರೆಸ್ಟ್

    ಚಂಡೀಗಢ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳನ್ನು ಸಂದೀಪ್ ಸಿಂಗ್ ಅಲಿಯಾಸ್ ಕೆಕ್ಡಾ, ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನಾ, ತಲ್ವಾಂಡಿ ಸಾಬೋ, ಬಟಿಂಡಾ, ಧೈಪೈ, ಫರೀದ್‌ಕೋಟ್‌ನ ಮನ್‌ಪ್ರೀತ್ ಭಾವು, ಅಮೃತಸರದ ದೊಡೆ ಕಲ್ಸಿಯಾ ಗ್ರಾಮದ ಸರಾಜ್ ಮಿಂಟು, ಹರಿಯಾಣದ ತಖತ್-ಮಾಲ್‌ನ ಪ್ರಭದೀಪ್ ಸಿಧು ಅಲಿಯಾಸ್ ಪಬ್ಬಿ, ಮೋನು ದಾಗರ್, ಪವನ್ ಬಿಷ್ಣೋಯ್, ನಸೀಬ್ ಹಾಗೂ ಫತೇಹಾಬಾದ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಗಾಯಕ ಸಿಧು ಮೂಸೆವಾಲಾ ಅವರ ಮೇಲೆ ಗುಂಡಿನ ದಾಳಿ ನಡೆಸಿದವರಿಗೆ ರಕ್ಷಣೆ, ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಣೆ ಹಾಗೂ ಸರಕು ಸಹಕಾರ ನೀಡಿರುವ ಆರೋಪದ ಮೇಲೆ ಈ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ

    ಏನಿದು ಪ್ರಕರಣ?
    ಪಂಜಾಬ್‌ನ ಮಾನ್ಸ ಜಿಲ್ಲೆಯಲ್ಲಿ ಮೇ 29ರಂದು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಮೂಸೆವಾಲಾ ಅವರ ಹತ್ಯೆ ನಡೆದಿತ್ತು.  

    ನಡೆದಿದ್ದೇನು?
    ಜವಾಹರ್ ಕೆ ಗ್ರಾಮದ ದೇವಸ್ಥಾನದ ಬಳಿ ಮೂಸೆವಾಲಾ ಅವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಕಾರಿನ ಮೇಲೆ 10 ಬಾರಿ ಗುಂಡು ಹಾರಿಸಿದ್ದಾರೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಮಾನ್ಸಾದ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೂ ಪ್ರಯೋಜನವಾಗದೆ ಮೂಸೆವಾಲಾ ಮೃತಪಟ್ಟಿದ್ದರು. ಇದಕ್ಕೆ ಪಂಜಾಬ್ ಸಿಎಂ ಸಹ ಸಂತಾಪ ಸೂಚಿಸಿದ್ದರು.

  • ಸಿಧು ಮೂಸೆವಾಲಾ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಸಿಧು ಮೂಸೆವಾಲಾ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಚಂಡೀಗಢ: ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಪಂಜಾಬಿ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ನಿವಾಸಕ್ಕೆ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

    ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಜ್ವಾ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿ ಜೊತೆಗಿದ್ದರು. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ

    ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಭದ್ರತೆಯನ್ನು ಹೆಚ್ಚು ಮಾಡಲಾಗಿತ್ತು. ಸಿಧು ಮೂಸೆವಾಲಾ ಹತ್ಯೆ ಬಳಿಕ ಹಲವು ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದು, ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅದಕ್ಕೂ ಮುನ್ನ ಸಿಎಂ ಭಗವಂತ್ ಮಾನ್ ಭೇಟಿ ನೀಡಿದ್ದರು.

    ಸಿಧು ಮೂಸೆವಾಲಾ, ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದು, ಮಾನ್ಸಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮೇ 29 ರಂದು ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಅವರ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಭರವಸೆಯ ನಾಯಕ ಮತ್ತು ಪ್ರತಿಭಾವಂತ ಕಲಾವಿದ ಸಿಧು ಮೂಸೆವಾಲಾ ಅವರ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಪ್ರಪಂಚದಾದ್ಯಂತದ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಹೇಳಿದ್ದರು. ಇದನ್ನೂ ಓದಿ: ಅಗಲಿದ ಕೆಕೆ ಕೊನೆ ಹಾಡು ರಿಲೀಸ್ : ಭಾವುಕರಾದ ಕೇಳುಗರು

     

  • ಸಿದ್ದು ಮೂಸೆವಾಲಾ ಹತ್ಯಾ ಪ್ರಕರಣ ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ

    ಸಿದ್ದು ಮೂಸೆವಾಲಾ ಹತ್ಯಾ ಪ್ರಕರಣ ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ

    ನವದೆಹಲಿ: ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಖ್ಯಾತ ಗಾಯಕ ಸಿದ್ದು ಮೂಸೆವಾಲಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

    ಬಿಜೆಪಿ ನಾಯಕ ಜಗಜಿತ್ ಸಿಂಗ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳ ಅಡಿಯಲ್ಲಿ ದಾಖಲಾಗಿರುವ ಮೇ 29 ರ ಪ್ರಥಮ ಮಾಹಿತಿ ವರದಿಯನ್ನು(ಎಫ್‌ಐಆರ್) ಸಿಬಿಐಗೆ ವರ್ಗಾಯಿಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ

    ಹಗಲು ಹೊತ್ತಿನಲ್ಲಿ ಕೋಲ್ಡ್ ಬ್ಲೆಡ್ ಹತ್ಯೆಯನ್ನು ನಡೆಸಿದ ರೀತಿ, ಪಂಜಾಬ್ ರಾಜ್ಯದ ಆಡಳಿತ ಯಂತ್ರವು ಅಪರಾಧವನ್ನು ತಡೆಗಟ್ಟುವಲ್ಲಿ ಮಾತ್ರವಲ್ಲದೆ ದರೋಡೆಕೋರರ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಗ್ರಹಿಸುವ ಕರ್ತವ್ಯದಲ್ಲೂ ವಿಫಲವಾಗಿದೆ ಎಂಬ ಅಂಶವನ್ನು ಸೂಚಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಕಾನ್ಪುರದಲ್ಲಿ ಘರ್ಷಣೆ – ಸಾವಿರ ಮಂದಿ ಮೇಲೆ ಎಫ್‍ಐಆರ್, 18 ಮಂದಿ ಅರೆಸ್ಟ್

    ಗಾಯಕ ಮೂಸೆವಾಲಾ ಕಳೆದ ವಾರ ತನ್ನ ಸ್ಪೋರ್ಟ್ಸ್ ಯುಟಿಲಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯಲ್ಲಿ ಭಾಗಿಯಾಗಿದ್ದು, ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಾವೇ ಎಸಗಿದ್ದಾನೆ ಎಂದು ಹೇಳಿದ್ದಾನೆ.

    ಹತ್ಯೆಗೂ ಒಂದು ದಿನದ ಮೊದಲು ಪಂಜಾಬ್ ಸರ್ಕಾರ ಮೂಸೆವಾಲಾ ಭದ್ರತೆಯನ್ನು ಹೇಗೆ ತೆಗೆದುಹಾಕಿತ್ತು ಮತ್ತು ಅದರ ಬಗ್ಗೆ ಮಾಧ್ಯಮಗಳಲ್ಲಿ ಹೇಗೆ ಮಾಹಿತಿ ಪ್ರಕಟವಾಯಿತು ಎಂಬುದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಒತ್ತಿ ಹೇಳಲಾಗಿದೆ.

    ಪ್ರಕರಣದ ಓರ್ವ ಆರೋಪಿ ಮನ್‌ಪ್ರೀತ್ ಸಿಂಗ್‌ನನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ. ಆದರೆ ಇತರ ಸಹ ಆರೋಪಿಗಳು ಕಾನೂನಿನಿಂದ ತಪ್ಪಿಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

  • ಪಂಚಭೂತಗಳಲ್ಲಿ ಕೆಕೆ ಲೀನ: ಪುತ್ರ ನಕುಲ್ ಅವರಿಂದ  ಅಂತಿಮ ವಿಧಿ ವಿಧಾನ

    ಪಂಚಭೂತಗಳಲ್ಲಿ ಕೆಕೆ ಲೀನ: ಪುತ್ರ ನಕುಲ್ ಅವರಿಂದ ಅಂತಿಮ ವಿಧಿ ವಿಧಾನ

    ಬಾಲಿವುಡ್ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ಅವರ ಅಂತ್ಯ ಸಂಸ್ಕಾರವು ಹಿಂದೂ ಸಂಪ್ರದಾಯದಂತೆ, ಮುಂಬೈನಲ್ಲಿ ನಡೆಯಿತು. ಪುತ್ರ ನಕುಲ್ ಅವರು ಅಂತಿಮ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಕೆ ಅವರ ಪತ್ನಿ ಜ್ಯೋತಿ, ಸ್ನೇಹಿತರು ಮತ್ತು ಅಪಾರ ಅಭಿಮಾನಿಗಳು ಹಾಜರಿದ್ದರು. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

     

    ಬೆಳಿಗ್ಗೆಯಿಂದ ಮುಂಬೈ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಾಲಿವುಡ್ ನ ನಟ, ನಟಿಯರು, ತಂತ್ರಜ್ಞರು ಮತ್ತು ಗಾಯಕರು ಕೆಕೆ ಮನೆಗೆ ಆಗಮಿಸಿ, ಅಂತಿಮ ನಮನ ಸಲ್ಲಿಸಿದರು. ನಂತರ ಮುಂಬೈನ ಹಿಂದೂ ರುದ್ರಭೂಮಿಯಲ್ಲಿ ಕೆಕೆ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕುಟುಂಬದ ಆಕ್ರಂದನ ಮುಗಿಲುಮುಟ್ಟಿತ್ತು. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ಬುಧವಾರ ಅವರ ಶವ ಪರೀಕ್ಷೆಯ ಮಾಹಿತಿಯು ಲಭ್ಯವಾಗಿದ್ದು, ಕೆಕೆ ಸಾವಿಗೆ ಹೃದಯಸ್ತಂಭನವೇ ಕಾರಣ ಎಂದು ವೈದ್ಯರು ಶರಾ ಬರೆದಿದ್ದಾರೆ. ಮಯೋಕಾರ್ಡಿಯಲ್ ಇನ್ ಫ್ರಾಕ್ಷನ್ ಕಾರಣವು ಕೆಕೆ ಅವರ ನಿಧನಕ್ಕೆ ಕಾರಣವೆಂದು ಹೇಳಲಾಗಿದೆ. ಜೊತೆಗೆ ಕೆಕೆ ಅವರ ದೇಹದಲ್ಲಿ ಸುದೀರ್ಘವಾದ ಹೃದಯ ಸಮಸ್ಯೆಗಳು ಕಂಡು ಬಂದಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

    ಮಂಗಳವಾರ ರಾತ್ರಿ ಕೆಕೆ ಅವರು ಕೋಲ್ಕತ್ತಾ ಠಾಕೂರ್ಪುಕೂರ್ ವಿವೇಕಾನಂದ ಕಾಲೇಜಿನಲ್ಲಿ ಆಯೋಜನೆ ಮಾಡಿದ್ದ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಲು ಹೋಗಿದ್ದರು. ಒಂದು ಗಂಟೆ ಕಾರ್ಯಕ್ರಮ ನೀಡಿದ ನಂತರ, ಮಧ್ಯದಲ್ಲೇ ಅವರು ಅಸ್ವಸ್ಥರಾಗಿದ್ದರು. ವಿಶ್ರಾಂತಿ ಪಡೆಯಲೆಂದೇ ಅವರು ಹೋಟೆಲ್ ಗೆ ತೆರೆಳಿದರು. ಅಲ್ಲಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲದೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಯಾವುದೇ ಪ್ರಯೋಜನವಾಗಲಿಲ್ಲ.