Tag: Siraj

  • ಸಿರಾಜ್ ದಾಳಿಗೆ ನಲುಗಿದ ಇಂಗ್ಲೆಂಡ್- ಭಾರತಕ್ಕೆ ಭರ್ಜರಿ ಜಯ

    ಸಿರಾಜ್ ದಾಳಿಗೆ ನಲುಗಿದ ಇಂಗ್ಲೆಂಡ್- ಭಾರತಕ್ಕೆ ಭರ್ಜರಿ ಜಯ

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 151 ರನ್‍ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

    ಭಾರತ ತಂಡ ನೀಡಿದ 272 ರನ್‍ಗಳ ಗುರಿ ಪಡೆದ ಇಂಗ್ಲೆಂಡ್ ತಂಡಕ್ಕೆ ಮೊಹಮ್ಮದ್ ಸಿರಾಜ್ ಮಾರಕವಾಗಿ ಎರಗಿದರು. 10 ಓವರ್ ಎಸೆದ ಸಿರಾಜ್ ಕೇವಲ 34 ರನ್ ನೀಡಿ ಪ್ರಮುಖ 4 ವಿಕೆಟ್ ಕಿತ್ತು ಭಾರತಕ್ಕೆ ಗೆಲುವು ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇಂಗ್ಲೆಂಡ್ ತಂಡ 272 ರನ್‍ಗಳ ಗುರಿಯನ್ನು ತಲುಪುವಲ್ಲಿ ಎಡವಿ ಕೇವಲ 120 ರನ್ ಗಳಿಗೆ ಆಲ್‍ಔಟ್ ಆಯಿತು. ಇದನ್ನೂ ಓದಿ: ಸಿರಾಜ್ ವಿಕೆಟ್ ಪಡೆದ ಬಳಿಕ ವಿಶೇಷ ಸಂಭ್ರಮಾಚರಣೆಯ ಕಹಾನಿ ರಿವೀಲ್

    ಬುಮ್ರಾ, ಶಮಿ ಕಮಾಲ್
    ಈ ಮೊದಲು ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಂದ ಎರಡನೇ ಇನ್ನಿಂಗ್ಸ್ ಮುಂದುವರಿಸಿದ ಭಾರತ 8 ವಿಕೆಟ್ ಗೆ 298 ರನ್ ಕಲೆ ಹಾಕಿ ಡಿಕ್ಲೇರ್ ಮಾಡಿಕೊಂಡಿತು. 209 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಭರ್ಜರಿ ಜೊತೆಯಾಟದ ಮೂಲಕ ಇಂಗ್ಲೆಂಡ್‍ಗೆ ತೀರುಗೇಟು ನೀಡಿದರು.

    ಶಮಿ ಅಜೇಯ 56ರನ್(70 ಎಸೆತ, 6 ಬೌಂಡರಿ, 1 ಸಿಕ್ಸ್) ಬಾರಿಸಿ ಅಜೇಯರಾಗಿ ಉಳಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಸ್ಪ್ರಿತ್ ಬುಮ್ರಾ ಅಜೇಯ 34 ರನ್ ಬಾರಿ ಇಂಗ್ಲೆಂಡ್ ತಂಡದ ಬೌಲರ್ ಗಳನ್ನು ಕಾಡಿತು.

  • 5 ವಿಕೆಟ್ ಪಡೆದು ಮಿಂಚಿದ ಸಿರಾಜ್- ಭಾರತಕ್ಕೆ 328 ರನ್‍ಗಳ ಗುರಿ

    5 ವಿಕೆಟ್ ಪಡೆದು ಮಿಂಚಿದ ಸಿರಾಜ್- ಭಾರತಕ್ಕೆ 328 ರನ್‍ಗಳ ಗುರಿ

    ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯಾಟದ ಎರಡನೇ ಇನ್ನಿಂಗ್ಸ್‍ನಲ್ಲಿ 5 ವಿಕೆಟ್ ಕಿತ್ತು ಸಿರಾಜ್ ಆಸ್ಟ್ರೇಲಿಯಾ ತಂಡಕ್ಕೆ ಕಡಿವಾಣ ಹಾಕಿದ್ದು, ಭಾರತಕ್ಕೆ 328 ರನ್‍ಗಳ ಗುರಿಯನ್ನು ಆಸೀಸ್ ನೀಡಿದೆ.

    ಭಾರತದ ಪರ ತನ್ನ ಮೊದಲ ಸರಣಿಯನ್ನು ಆಡಲು ಆಸ್ಟ್ರೇಲಿಯಾಗೆ ಬಂದಿದ್ದ ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿ ಅವಮಾನಿಸಿದ್ದರು. ಆದರೆ ಅದನ್ನೆಲ್ಲ ಬದಿಗೊತ್ತಿ ತನ್ನ ಆಟದ ಮೂಲಕ ಇದೀಗ ಸಿರಾಜ್ ಆಸ್ಟ್ರೇಲಿಯಾ ತಂಡಕ್ಕೆ ಮತ್ತು ಅಲ್ಲಿನ ಪ್ರೇಕ್ಷಕರಿಗೆ ದಿಟ್ಟ ಉತ್ತರ ನೀಡಿದ್ದಾರೆ.

    ಕೊನೆಯ ಟೆಸ್ಟ್ ಪಂದ್ಯದ 4ನೇ ದಿನ ಬ್ಯಾಟಿಂಗ್ ಮುಂದುವರೆಸಿದ ಆಸ್ಟ್ರೇಲಿಯಾ ಭಾರತದ ನಿಖರ ದಾಳಿಯ ಎದುರು 75.5 ಓವರ್‍ಗಳಲ್ಲಿ 294 ರನ್‍ಗಳಿಗೆ ಆಲೌಟ್ ಆಯಿತು. ಭಾರತದ ಪರ ಮೊಹಮ್ಮದ್ ಸಿರಾಜ್ 73ರನ್ ನೀಡಿ 5 ವಿಕೆಟ್ ಪಡೆದರು. ಈ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ ಸಿರಾಜ್ ತನ್ನ ಜೀವನ ಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ್ದಾರೆ. ಇವರಿಗೆ ಉತ್ತಮ ಸಾತ್ ನೀಡಿದ ಶಾರ್ದೂಲ್ ಠಾಕೂರ್ 61ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಇನ್ನೊಂದು ವಿಕೆಟ್ ಡೆಬ್ಯು ಪ್ಲೇಯರ್ ವಾಷಿಂಗ್ಟನ್ ಸುಂದರ್ ಪಾಲಾಯಿತು.

    ಗೆಲ್ಲಲು 328 ರನ್‍ಗಳ ಗುರಿ ಪಡದ ಭಾರತ ಬ್ಯಾಟಿಂಗ್ ಆರಂಭಿಸಿದಾಗ ಮಳೆ ಅಡ್ಡಿ ಪಡಿಸಿದೆ. ದಿನದಾಟದ ಮುಕ್ತಾಯದ ವೇಳೆಗೆ ಭಾರತದ ಪರ ರೋಹಿತ್ ಶರ್ಮಾ 4ರನ್ (6 ಎಸೆತ) ಮತ್ತು ಶುಭಮನ್ ಗಿಲ್ 5 ಎಸೆತ ಎದುರಿಸಿ ಯಾವುದೇ ರನ್‍ಗಳಿಸದೆ ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇನ್ನೂ ಭಾರತಕ್ಕೆ ಗೆಲ್ಲಲು 324 ರನ್‍ಗಳ ಅವಶ್ಯಕತೆ ಇದ್ದು ಐದನೇ ದಿನದಾಟದಲ್ಲೂ ಮಳೆಯ ಅಡಚಣೆಯ ಭೀತಿ ಕಾಡುತ್ತಿದೆ.

  • ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

    ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

    – ಐಸಿಸಿಗೆ ಬಿಸಿಸಿಐನಿಂದ ದೂರು

    ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯಾಟದ ಮೂರನೇ ದಿನದಾಟದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಇಬ್ಬರು ಆಟಗಾರರಿಗೆ ಪಂದ್ಯ ವಿಕ್ಷೀಸುತ್ತಿದ್ದ ಪ್ರೇಕ್ಷಕನೋರ್ವ ಹೀಯ್ಯಾಳಿಸಿದ್ದಾನೆ. ಇದನ್ನು ಖಂಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಅಂತಾರಾಷ್ಟ್ರೀಯಾ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.

    ಬಿಸಿಸಿಐ ಪ್ರಕಾರ ಫೀಲ್ಡಿಂಗ್ ಮಾಡುತ್ತಿದ್ದ ಭಾರತೀಯ ಆಟಗಾರರನ್ನು ಕೆಲ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಿಸಿತ್ತು. ಐಸಿಸಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಎರಡು ವಾರಗಳಲ್ಲಿ ಈ ಪ್ರಕರಣವನ್ನು ಸರಿಪಡಿಸುವಂತೆ ಸೂಚಿಸಿದೆ.

    ಮದ್ಯದ ಅಮಲಿನಲ್ಲಿದ್ದ ಆಸ್ಟ್ರೇಲಿಯಾದ ಬೆಂಬಲಿಗನೊಬ್ಬ ಫೈನ್ ಲೆಗ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಬುಮ್ರಾ ಮತ್ತು ಸಿರಾಜ್ ಅವರನ್ನು ಹೀಯ್ಯಾಳಿಸಿದ್ದಾನೆ. ಇದಕ್ಕೆ ಟೀಂ ಇಂಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ದಿನದಾಟದ ಕೊನೆಯಲ್ಲಿ ಅಂಪೈರ್ ಜೊತೆ ಈ ಕುರಿತು ಮಾತಾನಾಡುತ್ತಿದ್ದಂತೆ ಬಿಸಿಸಿಐ ಮಧ್ಯ ಪ್ರವೇಶಿಸಿ ಪ್ರಕರಣವನ್ನು ಐಸಿಸಿ ಮುಂದಿಟ್ಟಿದೆ.

    ಮೊದಲ ಇನ್ನಿಂಗ್ಸ್‍ನಲ್ಲಿ 244 ರನ್‍ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡ ಭಾರತ ತಂಡ ಆಸೀಸ್‍ಗೆ 94 ರನ್‍ಗಳ ಮುನ್ನಡೆ ಬಿಟ್ಟುಕೊಟ್ಟಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 103 ರನ್ ಗಳಿಸಿ 197 ರನ್‍ಗಳ ಮುನ್ನಡೆ ಪಡೆದುಕೊಂಡಿದೆ. 47(69) ರನ್ ಗಳಿಸಿರುವ ಲಬುಶೇನ್ ಮತ್ತು 29(63) ಗಳಿಸಿರುವ ಸ್ಟೀವನ್ ಸ್ಮಿತ್ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.