ತುಮಕೂರು: ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದಡಿ ಸೊಸೆ ಹಾಗೂ ಮಗನನ್ನು ತುಮಕೂರು (Tumakuru) ಜಿಲ್ಲೆ ಹೆಬ್ಬೂರು ಪೊಲೀಸರು (Hebbur Poice) ಬಂಧಿಸಿದ್ದಾರೆ.
ಕೆಂಪಮ್ಮ (57) ಮೃತ ದುರ್ದೈವಿ. ಕೆಂಪಮ್ಮ ತುಮಕೂರು ತಾಲೂಕಿನ ಶಿರವರ ಗ್ರಾಮದ ಬಳಿಯಿರುವ ಕಲ್ಲುಪಾಳ್ಯ ನಿವಾಸಿಯಾಗಿದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಸೊಸೆ ಉಮಾದೇವಿ ನಿರಂತರವಾಗಿ ಕಿರುಕುಳ ಕೊಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕೆಂಪಮ್ಮ ಪುತ್ರಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ| ಬಾಬಾ ಸಿದ್ದಿಕಿ ಪುತ್ರ ಎನ್ಸಿಪಿಗೆ ಸೇರ್ಪಡೆ
ಕೆಂಪಮ್ಮನದ್ದು ಸಹಜ ಸಾವಲ್ಲ, ಕೊಲೆ ಎಂದು ಕೆಂಪಮ್ಮನ ಪುತ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತ ಕೆಂಪಮ್ಮಗೆ ಹಲ್ಲೆ ಮಾಡಿರೋದು ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸೊಸೆ ಉಮಾದೇವಿ (30) ಹಾಗೂ ಮಗ ರಾಜೇಶ್ನನ್ನು (35) ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೀದರ್| ನೀರಿನ ತೊಟ್ಟಿಗೆ ಬಿದ್ದು ಬಾಲಕಿ ದುರ್ಮರಣ
ಪತ್ನಿಗೆ ಸಹಕರಿಸಿದ ಆರೋಪದಡಿ ಕೆಂಪಮ್ಮ ಪುತ್ರ ರಾಜೇಶ್ನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಗಳೂರು | ನಡುರಾತ್ರಿ ತಲ್ವಾರ್ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್ಗಳು



ಸಿರವಾರ ಪಟ್ಟಣದ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ 4 ಜನ ಮಕ್ಕಳು ಸೇರಿ 11 ಜನರ ಪರಿಸ್ಥಿತಿ ಗಂಭೀರವಾಗಿದೆ. ಶಾಲೆಗಳು ಆರಂಭವಾದರೂ ಗ್ರಾಮೀಣ ಭಾಗದಲ್ಲಿ ಮಕ್ಕಳನ್ನ ಕೂಲಿಗೆ ಕಳುಹಿಸಲಾಗುತ್ತಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮಕ್ಕಳು ಈಗ ಆಸ್ಪತ್ರೆ ಸೇರಿದ್ದಾರೆ. ಇದನ್ನೂ ಓದಿ:
ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಸಿರವಾರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ವಾಹನಗಳ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ:
ಕೂಲಿ ಕೆಲಸಕ್ಕೆ ಮಕ್ಕಳನ್ನ ಕರೆದೊಯ್ಯುವುದಲ್ಲದೇ ಅಧಿಕ ಸಂಖ್ಯೆಯಲ್ಲಿ ಜನರನ್ನ ತುಂಬಿಕೊಂಡು ಹೋಗುವುದು, ಬೇಜವಾಬ್ದಾರಿಯಾಗಿ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಅಂತ ಗಾಯಾಳುಗಳ ಸಂಬಂಧಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

