ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ (Praveen Shetty) ಅವರ ಮಗ ಪ್ರವೀರ್ ಶೆಟ್ಟಿ (Praveer Shetty) ಸ್ಯಂಡಲ್ವುಡ್ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ (Siren) ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ ಸಂಯೋಜಿಸಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ …’ ಸಾಂಗ್ನ್ನು (Song) ಮಂಗ್ಲಿ (Mangli) ಹಾಡಿದ್ದಾರೆ. ಲಹರಿ ಯೂಟ್ಯೂಬ್ನಲ್ಲಿ ಗೀತೆ ರಿಲೀಸ್ ಆಗಿದ್ದು, ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಹರಿ ವೇಲು ‘ಇದು ಪ್ರವೀರ್ ಶೆಟ್ಟಿ ಅವರ ಮೊದಲ ಸಿನಿಮಾ ಆಗಿದ್ದು, ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದಾರೆ. ಹಾಡು ಚನ್ನಾಗಿ ಬಂದಿದೆ. ಜಾನಪದ ಸೊಗಡಿನ ಮೂಲದಿಂದ ಬಂದಂತ ಸಿಂಗರ್ಗಳು ಹಾಡಿರುವ ಗೀತೆಗಳು ಚನ್ನಾಗಿರುತ್ತವೆ. ಹಾಗೆಯೇ ಮಂಗ್ಲಿ ಕೂಡ ಜಾನಪದ ಮೂಲದಿಂದ ಬಂದವರು. ತಾಂತ್ರಿಕವಾಗಿ ಸಿನಿಮಾ ಸ್ಟ್ರಾಂಗ್ ಆಗಿ ಬಂದಿದೆ’ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ್ದ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ತಂಡಕ್ಕೆ ಶುಭ ಹಾರೈಸಿದರು.
ಅಂದಂಗೆ ಈ ಚಿತ್ರವನ್ನು ಮೂಲತಃ ತಮಿಳುನಾಡಿನವರಾದ ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ರಾಜಾ ವೆಂಕಯ್ಯ ಕನ್ನಡ ಕಲಿತು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿರುವುದು ವಿಶೇಷ. ಇದು ಅವರು ನಿರ್ದೇಶನದ ಮೊದಲ ಕನ್ನಡ ಸಿನಿಮಾ. “ಸೈರನ್’ ಚಿತ್ರದ ಕೆಲಸಗಳು ಈಗಾಗಲೇ ಮುಗಿದಿದ್ದು, ಫೆಬ್ರವರಿ ಮೂರನೇ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಈ ಸಿನಿಮಾವನ್ನು ನಾವು ಕನ್ನಡ ಮತ್ತು ತಮಿಳುನಲ್ಲಿ ಶೂಟ್ ಮಾಡಿದ್ದು, ತೆಲುಗು ಮತ್ತು ಮಲಯಾಳಂಗೆ ಡಬ್ ಮಾಡಿ ರಿಲೀಸ್ ಮಾಡುತ್ತಿದ್ದೇವೆ. ನನ್ನ ಮೊದಲ ಚಿತ್ರಕ್ಕೆ ‘ಡೆಕ್ಕನ್ ಕಿಂಗ್’ ಬ್ಯಾನರ್ನಲ್ಲಿ ಸಿನಿಮಾ ನಿರ್ಮಿಸಿರುವ ಬಿಜ್ಜು ಶಿವಾನಂದ್ ತುಂಬಾ ಸಪೋರ್ಟ್ ಮಾಡಿದ್ದಾರೆ. ಮೂಲತಃ ನಾನು ಸಂಕಲನಕಾರನಾಗಿ ಸಾಕಷ್ಟು ಸಿನಿಮಾಗೆ ಕೆಲಸ ಮಾಡಿದ್ದೇನೆ. ಇದೊಂದು ಇನ್ವೆಸ್ಟಿಗೇಷನ್ ಮರ್ಡರ್ ಮಿಸ್ಟರಿ ಕಥೆ ಹೊಂದಿದ್ದು, ಇಲ್ಲಿ ನಾಯಕ ಪ್ರವೀರ್ ಯಂಗ್ ಆ್ಯಂಡ್ ಯನರ್ಜಿ ಇರುವ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರ ಮಾಡಿದ್ದಾರೆ’ ಎಂದು ಹೇಳಿದರು. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ
ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀರ್ ಶೆಟ್ಟಿ ‘ನಾನು ಇದರಲ್ಲಿ ಪೊಲೀಸ್ ಪಾತ್ರ ಮಾಡಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಬಾಂಬೆಯ ಅನುಪಮ್ ಖೇರ್ ಟ್ರೈನಿಂಗ್ ಶಾಲೆಯಲ್ಲಿ ತರಬೇತಿ ಪಡೆದಿದ್ದು, ಈ ಚಿತ್ರದಲ್ಲಿ ಯಂಗ್ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎಂದರು. ಮಲಯಾಳಂ ಮೂಲದ ನಾಯಕಿ ಲಾಸ್ಯ ‘ಇದು ನನ್ನ ಅಭಿನಯದ ಮೊದಲ ಸಿನಿಮಾ. ಚಿತ್ರತಂಡ ಒಳ್ಳೆ ಅವಕಾಶ ಕೊಟ್ಟಿದ್ದು, ಇದರಲ್ಲಿ ನಾನೂ ಕೂಡ ಪೋಲಿಸ್ ಆಫೀಸರ್ ಪಾತ್ರ ಮಾಡಿದ್ದೇನೆ’ ಎನ್ನುವರು. ಹೋಟೆಲ್ ಉದ್ಯಮ ನಡೆಸುತ್ತಿರುವ ಚಿತ್ರದ ನಿರ್ಮಾಪಕ ಬಿಜ್ಜು ಶಿವಾನಂದ್ ಮಾತನಾಡಿ ‘ಈ ಚಿತ್ರವನ್ನು ನಾವು ಗೆಳೆಯರು ಸೇರಿ ಕಷ್ಟಪಟ್ಟು ಮಾಡಿದ್ದೇವೆ. ಈ ಸಿನಿಮಾಗಾಗಿ ಎರಡು ವರ್ಷ ಶ್ರಮ ಹಾಕಲಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಗನ ಚಿತ್ರಕ್ಕೆ ಶುಭ ಹಾರೈಸಿದರು. ಚಿತ್ರಕ್ಕೆ ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರದ್ವಾಜ್ ಸಂಗೀತ, ನಾಗೇಶ್ ಆಚಾರ್ ಛಾಯಾಗ್ರಹಣ, ಕಲೈ ಮಾಸ್ಟರ್ ನೃತ್ಯವಿದೆ. ಚಿತ್ರವನ್ನು ಲಿಖಿತ್ ಫಿಲ್ಮಸ್ನ ರಮೇಶ್ ಬಾಬು ವಿತರಣೆ ಮಾಡಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಡ್ಯ: ಎಟಿಎಂನಲ್ಲಿ ದರೋಡೆಗೆ ಯತ್ನದ ವೇಳೆ ಕೊಠಡಿಯಲ್ಲಿದ್ದ ಸೈರನ್ ಮೊಳಗಿದ ಪರಿಣಾಮ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಕಳೆದ ರಾತ್ರಿ ನಡೆದಿದೆ.
ಬಸ್ ನಿಲ್ದಾಣದಲ್ಲಿರುವ ಆಕ್ಸಿಸ್ ಬ್ಯಾಂಕ್ನ ಎಟಿಎಂನಲ್ಲಿ ದರೋಡೆ ಮಾಡಲು ದುಷ್ಕರ್ಮಿಗಳು ಕಳೆದ ಮಧ್ಯರಾತ್ರಿ ಬಂದಿದ್ದಾರೆ. ಎಟಿಎಂ ಬಳಿ ಸೆಕ್ಯೂರಿಟಿ ಇಲ್ಲದ ಕಾರಣ ನೇರವಾಗಿ ಎಟಿಎಂ ಒಳಗಡೆಗೆ ನುಗ್ಗಿದ್ದಾರೆ. ನಂತರ ಎಟಿಎಂ ಯಂತ್ರದಲ್ಲಿ ಹಣ ಬರುವ ಸ್ಥಳವನ್ನು ಕೊರೆಯಲು ಮುಂದಾಗಿದ್ದಾರೆ.
ಈ ವೇಳೆ ಕೊರೆಯಲು ಸಾಧ್ಯವಾಗದ ಕಾರಣ ಮಷಿನ್ನನ್ನು ಒಡೆಯಲು ಮುಂದಾಗಿದ್ದಾರೆ. ಮಷಿನ್ಗೆ ಜೋರಾಗಿ ಒಡೆದ ಕಾರಣ ಎಟಿಎಂ ಕೊಠಡಿಯಲ್ಲಿ ಇದ್ದ ಸೈರನ್ ಕೂಗಿಕೊಂಡಿದೆ. ಇದರಿಂದ ಗಾಬರಿಗೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಜಿಲ್ಲೆಯ ಕುಂದಾಪುರದ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ದೇವಸ್ಥಾನದ ಹಿಂಭಾಗದ ಬೀಗ ಮುರಿದು ಎರಡು ಬೆಳ್ಳಿ ಮುಖವಾಡವನ್ನು ಕದ್ದೊಯ್ದಿದ್ದಾರೆ.
ನಾಲ್ಕು ಕೆ.ಜಿ ತೂಕದ ಬೆಳ್ಳಿ ಮುಖವಾಡವನ್ನು ದೇವರಿಗೆ ತೊಡಲಾಗಿದ್ದು, ಅದನ್ನೇ ಕಿತ್ತು ತೆಗೆದುಕೊಂಡು ಹೋಗಿದ್ದಾರೆ. ದೇವಿ ಮತ್ತು ಗಣಪತಿ ವಿಗ್ರಹಕ್ಕೆ ಹಾಕಿದ್ದ ಬೆಳ್ಳಿ ಮುಖವಾಡ ಇದಾಗಿದೆ. ಕಳ್ಳರು ಗರ್ಭಗುಡಿ ಪ್ರವೇಶಿಸಲು ಯತ್ನಿಸಿದ್ದಾರೆ. ಆಗ ಸೈರನ್ ಮೊಳಗಿದೆ ಆದರೂ ಕಳ್ಳರು ದೇವಾಲಯದ ಹಿಂಭಾಗದ ಬೀಗ ಮುರಿದು ಬೆಳ್ಳಿ ಮುಖವಾಡ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಸೈರನ್ ಮೊಳಗಿದಾಗ ಅರ್ಚಕರ ಮನೆಯಿಂದ ಹೊರ ಬರಲು ಯತ್ನಿಸಿದ್ದಾರೆ. ಆದರೆ ಚಾಲಾಕಿ ಕಳ್ಳರು ಅರ್ಚಕರ ಮನೆಗೆ ಎರಡೂ ಕಡೆಯಿಂದ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿದ್ದರು. ಸೈರನ್ ಮೊಳಗಿದರೂ ಹೊರಗೆ ಬರಲಾಗದೆ ಅರ್ಚಕರು ಮತ್ತು ಸಿಬ್ಬಂದಿ ಮನೆಯೊಳಗೆ ಉಳಿಯಬೇಕಾಯ್ತು. ಸೈರನ್ ಸದ್ದಿಗೆ ಎಚ್ಚೆತ್ತ ಗ್ರಾಮಸ್ಥರಿಂದ ಕಳ್ಳರ ಹುಡುಕಾಟ ನಡೆದಿದೆ. ಆದರೆ ಕತ್ತಲಲ್ಲಿ ಕಳ್ಳರು ಕಣ್ಮರೆಯಾಗಿದ್ದಾರೆ.
ಗ್ರಾಮಸ್ಥರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಕಂಡ್ಲೂರು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಅಂದಾಜು 2 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಸಂಬಂಧ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳ್ಳಂಬೆಳಗ್ಗೆ ಇಲಿ ಕಾಟಕ್ಕೆ ಕಂಗಲಾದ ಜನ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ್ದ ಘಟನೆ ಕೆಂಗೇರಿಯಲ್ಲಿ ನಡೆದಿದೆ.
ಆಗಿದ್ದು ಇಷ್ಟೇ ಕೆಂಗೇರಿಯ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿನ ಭದ್ರತಾ ಕಪಾಟಿನ ಸೈರನ್ ವಯರನ್ನು ಇಲಿ ಇಂದು ಬೆಳಗ್ಗೆ ತುಂಡರಿಸಿತ್ತು. ವಯರ್ ತುಂಡಾಗಿದ್ದೆ ತಡ ಜೋರಾಗಿ ಸೈರನ್ ಮೊಳಗಲು ಆರಂಭವಾಯಿತು.
ಸೈರನ್ ಶಬ್ಧ ಕೇಳಿ ಗಾಬರಿಯಾದ ಸುತ್ತಮುತ್ತಲಿನ ಜನರು ಪೊಲೀಸರಿಗೆ ಮಾಹಿತಿ ನೀಡಿದರು. ಕೆಂಗೇರಿ ಪೊಲೀಸರು ಕಚೇರಿಯ ಭದ್ರತಾ ಕೊಠಡಿ ಪರಿಶೀಲನೆ ನಡೆಸಿದಾಗ ಇಲಿ ಕಡಿತದ ಪರಿಣಾಮ ಸೈರನ್ ಸದ್ದು ಮಾಡಿದ್ದ ವಿಷಯ ಬಯಲಿಗೆ ಬಂತು.
4 ತಿಂಗಳ ಹಿಂದೆ ಇದೇ ರೀತಿ ಸೈರನ್ ಸದ್ದು ಮಾಡಿತ್ತು. ಈಗ ಮತ್ತೊಮ್ಮೆ ಇದೇ ರೀತಿ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ಮುತ್ತೂಟ್ ಫೈನಾನ್ಸ್ ಸಿಬ್ಬಂದಿಗೆ ಜನರು ಛೀಮಾರಿ ಹಾಕಿದರು.ಕೊನೆಗೆ ಪೊಲೀಸ್ ಠಾಣೆಯಲ್ಲಿ ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.