Tag: sister

  • ಅಣ್ಣ ಬೈದನೆಂದು ಮನನೊಂದು ತಂಗಿ ನೇಣಿಗೆ ಶರಣು!

    ಅಣ್ಣ ಬೈದನೆಂದು ಮನನೊಂದು ತಂಗಿ ನೇಣಿಗೆ ಶರಣು!

    ನವದೆಹಲಿ: 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ಬಂಗಾಳದ 24ನೇ ಉತ್ತರ ಪರಗಣದಲ್ಲಿ ನಡೆದಿದೆ.

    ದಿನದಲ್ಲಿ ಅತೀ ಹೆಚ್ಚು ಸಮಯವನ್ನು ಫೇಸ್‍ಬುಕ್ ನಲ್ಲೇ ಕಾಲ ಕಳೆಯುವುದನ್ನು ಸಹೋದರ ಪ್ರಶ್ನಿಸಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗುತ್ತದೆ.

    ಏನಿದು ಘಟನೆ?: 11 ತರಗತಿ ಓದಿತ್ತಿರೋ ವಿದ್ಯಾರ್ಥಿನಿ ದಿನದಲ್ಲಿ ಅತೀ ಹೆಚ್ಚು ಸಮಯ ಫೇಸ್ ಬುಕ್ ನಲ್ಲಿ ಕಳೆಯುತ್ತಿದ್ದಳು. ಇದನ್ನು ಆಕೆಯ ಸಹೋದರ ಪ್ರಶ್ನಿಸಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆಕೆಯ ಬೆಡ್ ರೂಮ್ ನಲ್ಲೇ ತನ್ನ ಬಟ್ಟೆಯಿಂದಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ವಿದ್ಯಾರ್ಥಿನಿ ಕೈಗೆ ಮೊಬೈಲ್ ಬಂದಾಗಿನಿಂದಲೂ ಆಕೆ ಅದರಲ್ಲೇ ದಿನ ಕಳೆಯುತ್ತಿದ್ದಳು. ಸರಿಯಾಗಿ ಊಟನೂ ಸೇವಿಸುತ್ತಿರಲಿಲ್ಲ. ಓದಿನ ಕಡೆಗೂ ಗಮನ ಕೊಡುತ್ತಿರಲಿಲ್ಲ. ಇಷ್ಟು ಮಾತ್ರವಲ್ಲದೇ ಶಾಲೆಗೆ ಹೋಗಲು ಆಸಕ್ತಿಯಿರಲಿಲ್ಲ ಅಂತ ವಿದ್ಯಾರ್ಥಿನಿಯ ತಾಯಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗ್ಗೆಯೂ ಆಕೆಯ ಸಹೋದರ ಬೈದಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಅದೇ ದಿನ ಸಂಜೆ ಮನೆಯವರೆಲ್ಲಾ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ತಮ್ಮ ಸಂಬಂಧಿಕರನ್ನು ನೋಡಲೆಂದು ತೆರಳಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗಡೆ ಹೋಗಿದ್ದ ಮನೆಯವರು ಸುಮಾರು 8 ಗಂಟೆಯ ವೇಳೆಗೆ ಮನೆಗೆ ವಾಪಾಸ್ಸಾದ ಸಂದರ್ಭದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಆಕೆ ಇಂತಹ ಕಠಿಣ ನಿರ್ಧಾರಕ್ಕೆ ಬಂದಿದ್ದಾಳೆಂದು ನನಗೆ ಅರ್ಥವಾಗುತ್ತಿಲ್ಲ. ಸಾಯುವುದಕ್ಕೂ ಒಂದು ದಿನ ಮೊದಲೇ ಆಕೆ `I Am Dead’ ಅಂತ ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾಳೆ. ಅಲ್ಲದೇ ಫೇಸ್ ಬುಕ್ ನಲ್ಲೂ `ಜೀವನದಲ್ಲಿ ಎಲ್ಲಾ ಆಸೆಗಳನ್ನು ಕಳೆದುಕೊಳ್ಳುತ್ತಿದ್ದೇನೆ’ ಅಂತನೂ ಹಾಕಿಕೊಂಡಿದ್ದಳು ಅಂತ ವಿದ್ಯಾರ್ಥಿನಿಯ ಸಹೋದರಿ ಹೇಳಿದ್ದಾರೆ.

    ಸದ್ಯ ಘಟನೆಯ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ಎಂಬುವುದಾಗಿ ವರದಿಯಾಗಿದೆ.

  • ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

    ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

    ಯಾದಗಿರಿ: ತಂಗಿಯನ್ನು ನೋಡಲು ಬಂದವನಿಗೆ ಜ್ವರ ಬಂದು ಚಿಕಿತ್ಸೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಹೌದು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ನದಿಯಲ್ಲಿ ಹೆಚ್ಚಿನ ಪ್ರಮಾಣ ನೀರು ಬಂದಿರುವುದರಿಂದ ನೀಲಕಂಠರಾಯನಗಡ್ಡಿ ಈಗ ನಡುಗಡ್ಡೆಯಾಗಿದೆ.

    ನೀಲಕಂಠರಾಯನಗಡ್ಡಿ ಸುತ್ತಲು ಕೃಷ್ಣಾ ನದಿ ಒಡಲು ಮೈದುಂಬಿ ಹರಿಯುತ್ತಿದೆ. ಇಂದು ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಗಡ್ಡಿಯಲ್ಲಿರುವ ತನ್ನ ಸಹೋದರಿಯನ್ನು ಭೇಟಿಯಾಗಲು ಬಂದ ಯುವಕ ಜ್ವರದಿಂದ ಬಳಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಈಜುಕಾಯಿ ಸಹಾಯದೊಂದಿಗೆ ಈಜಾಡಿ ಕೃಷ್ಣಾ ನದಿ ದಡ ಸೇರಲು ಹರಸಾಹಸ ಪಟ್ಟಿದ್ದಾರೆ.

    ರಾಯಚೂರು ಜಿಲ್ಲೆಯ ಬಗಿರಗುಂಡ ಗ್ರಾಮದ ನಿವಾಸಿ ಹಣಮಂತ ಎಂಬವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲಿ ಗಡ್ಡಿ ಸುತ್ತಲು ಕೃಷ್ಣ ನದಿ ನೀರು ಹರಿಸುವುದರಿಂದ ಚಿಕಿತ್ಸೆಗೆ ಪರದಾಡಿದ್ದಾರೆ. ನಂತರ ಇಂದು ಗ್ರಾಮಸ್ಥರ ಸಹಾಯದೊಂದಿಗೆ ಈಜಾಡುತ್ತಾ ದಡ ಸೇರಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಕಾರಣ ಗ್ರಾಮದಲ್ಲಿರುವ ಶಾಲೆಗೆ ಬೀಗ ಜಡಿಯಲಾಗಿದೆ. ಕಳೆದ 2 ದಿನಗಳಿಂದ ಗಡ್ಡಿ ಗ್ರಾಮಕ್ಕೆ ಶಿಕ್ಷಕರು ಬಂದಿಲ್ಲ. ಅದೆ ರೀತಿ ಗಡ್ಡಿಯಲ್ಲಿ ನಾಲ್ವರು ಗರ್ಭಿಣಿಯರಿದ್ದು ಆಸ್ಪತ್ರೆಗೆ ತೆರಳಲು ಪ್ರಯಾಸ ಪಡುವಂತಾಗಿದೆ. ಅದೆ ರೀತಿ ಗ್ರಾಮದಲ್ಲಿ ಆಹಾರ ಪದಾರ್ಥಕ್ಕೂ ಕೂಡ ಕೊರತೆಯುಂಟಾಗಿದೆ. ಒಟ್ಟಾರೆಯಾಗಿ ಜಿಲ್ಲಾಡಳಿತ ಎಚ್ಚೆತ್ತು ದೋಣಿ ಅನುಕೂಲ ಕಲ್ಪಿಸಿ ಜನರ ಹಸಿವನ್ನು ನೀಗಿಸಬೇಕು ಹಾಗೂ ಗರ್ಭಿಣಿಯರಿಗೆ ಸೂಕ್ತ ಚಿಕೀತ್ಸೆ ನೀಡುವ ಕೆಲಸ ಮಾಡಬೇಕಿದೆ.

    https://youtu.be/zRuiyxC3flQ

     

     

  • ಮರ್ಯಾದಾ ಹತ್ಯೆ: ಸೋದರಿಯನ್ನ ಚಾಕುವಿನಿಂದ ಚುಚ್ಚಿ..ಚುಚ್ಚಿ ಕೊಂದ ಸಹೋದರ

    ಮರ್ಯಾದಾ ಹತ್ಯೆ: ಸೋದರಿಯನ್ನ ಚಾಕುವಿನಿಂದ ಚುಚ್ಚಿ..ಚುಚ್ಚಿ ಕೊಂದ ಸಹೋದರ

    ಲಾಹೋರ್: ಮನೆಯ ಪೋಷಕರ ನಡುವೆಯೂ ಸಹೋದರಿ ಬೇರೊಬ್ಬ ಯುವಕನನ್ನು ಮದುವೆಯಾಗಿದಕ್ಕೆ ಕುಪಿತಗೊಂಡ ಸಹೋದರ ಹರಿತವಾದ ಚಾಕುವಿನಿಂದ ಆಕೆಯನ್ನು ಹಲವು ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಹೋರ್‍ನಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 25 ವರ್ಷದ ಶಾಜಿಯಾ ಸಹೋದರನಿಂದ ಕೊಲೆಯಾದ ದುರ್ದೈವಿ.

    ಕೆಲವು ದಿನಗಳ ಹಿಂದೆ ಶಾಜಿಯಾ ಶೇರಕೋಟಾ ಪ್ರಾಂತದ ಯುವಕನೊಂದಿಗೆ ಪರಾರಿಯಾಗಿದ್ದರು. ಈ ವೇಳೆ ಶಾಜಿಯಾ ಸಹೋದರ ಮೊಹಮ್ಮದ್ ಇಶಾಖ್ ನನ್ನ ಸಹೋದರಿಯನ್ನು ಯುವಕನೊಬ್ಬ ಅಪಹರಿಸಿದ್ದಾನೆ ಎಂದು ನಾಪತ್ತೆ ಮತ್ತು ಅಪಹರಣ ದೂರನ್ನು ದಾಖಲಿಸಿದ್ದನು. ದೂರು ದಾಖಲಾದ ನಂತರ ಶಾಜಿಯಾ ಯುವಕನೊಂದಿಗೆ ಮದುವೆಯಾಗಿ ಹಿಂದುರುಗಿ ಬಂದಿದ್ದರು.

    ಶಾಜಿಯಾ ಹಿಂದುರಿಗಿದ ಕಾರಣ ಎರಡು ಕುಟುಂಬಗಳು ರಾಜಿ ಮೂಲಕ ದೂರನ್ನು ಹಿಂಪಡೆದಿದ್ದವು. ಶಾಜಿಯಾ ಮನೆಯಲ್ಲಿದ್ದಾಗ ಸಹೋದರ ಇಶಾಖ್ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿ ಕುಟುಂಬದ ಮರ್ಯಾದೆಯನ್ನು ತೆಗೆದಿದ್ದಿ ಎಂದು ಹೇಳಿ ಹರಿತವಾದ ಚಾಕುವಿನಿಂದ ಹಲವು ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ.

    ಶಾಜಿಯಾ ಕೊಲೆಯಾಗುವ ವೇಳೆ ಮನೆಯಲ್ಲಿ ಆಕೆಯ ಪೋಷಕರಿದ್ರು, ಇಶಾಖ್ ನನ್ನನ್ನು ತಡೆಯಲು ಮುಂದಾಗಿಲ್ಲ. ಈ ಸಂಬಂಧ ಶಾಜಿಯಾ ಹಿರಿಯ ಸಹೋದರಿ ಇಶಾಖ್ ಮತ್ತು ಮನೆಯ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

     

  • ಕಷ್ಟಪಟ್ಟು ಈಜಿಪ್ಟಿನಿಂದ ಕರೆತಂದು ಚಿಕಿತ್ಸೆ ನೀಡಿದ್ದ ಮುಂಬೈ ವೈದ್ಯರ ವಿರುದ್ಧವೇ ಈಗ ಎಮಾನ್ ಸಹೋದರಿ ಕಿಡಿ

    ಕಷ್ಟಪಟ್ಟು ಈಜಿಪ್ಟಿನಿಂದ ಕರೆತಂದು ಚಿಕಿತ್ಸೆ ನೀಡಿದ್ದ ಮುಂಬೈ ವೈದ್ಯರ ವಿರುದ್ಧವೇ ಈಗ ಎಮಾನ್ ಸಹೋದರಿ ಕಿಡಿ

    ಮುಂಬೈ: ವಿಶ್ವದ ದಢೂತಿ ಮಹಿಳೆ ಈಜಿಪ್ಟ್ ನ ಎಮಾನ್ ಅಹ್ಮದ್ ಸಹೋದರಿ ಷೈಮಾ ಸೆಲೀಮ್ ಮುಂಬೈನ ವೈದ್ಯ ಲಕ್ದವಾಲಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಭಾರತಕ್ಕೆ ಬಂದು ಎಮಾನ್ ಅಹ್ಮದ್ ತೂಕ ಇಳಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳುತ್ತಿರೋದು ಸುಳ್ಳು ಅಂತಾ ಸಹೋದರಿ ಆರೋಪಿಸಿದ್ದಾರೆ. ಬರೋಬ್ಬರಿ 500 ಕೆಜಿ ತೂಕವಿದ್ದ ಎಮಾನ್ ದೇಹದ ತೂಕ ಇಳಿಸುತ್ತೇವೆ ಅಂತಾ ವೈದ್ಯರು ಭರವಸೆ ನೀಡಿ ಭಾರತಕ್ಕೆ ಕರೆತಂದಿದ್ದರು. ಆದ್ರೆ ಇಲ್ಲಿ ಆಕೆಯ ದೇಹದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬದಲಾಗಿ ಮತ್ತಷ್ಟು ಅಸ್ವಸ್ಥಗೊಂಡಿದ್ದಾಳೆ. ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಅಂತಾ ಕಿಡಿಕಾರಿದ್ದಾರೆ.

    ಇದನ್ನೂ ಓದಿ: ಭಾರತಕ್ಕೆ ಬಂದ 3 ವಾರದಲ್ಲಿ 120 ಕೆಜಿ ತೂಕ ಇಳಿಸಿಕೊಂಡ ವಿಶ್ವದ ದಢೂತಿ ಮಹಿಳೆ

    ಷೈಮಾ ಸೆಲೀಮ್ ಏಪ್ರಿಲ್ 14ರಂದು ವೀಡಿಯೋ ಮಾಡುವ ಮೂಲಕ ಈ ಆರೋಪವನ್ನು ಮಾಡಿದ್ದಾರೆ. ಮುಂಬೈನ ಸೈಫೀ ಆಸ್ಪತ್ರೆಯ ವೈದ್ಯ ಡಾ. ಮುಫಜಲ್ ಲಕ್ದವಾಲಾ, ಸರ್ಜರಿ ಬಳಿಕ ಎಮಾನ್ ತೂಕ ಇಳಿಸಿಕೊಂಡಿದ್ದಾಳೆ ಅಂತಾ ಹೇಳುತ್ತಿದ್ದಾರೆ. ಆದ್ರೆ ಇದು ಸುಳ್ಳು. ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾದ ಬಳಿಕ ಆಕೆ ಇಲ್ಲಿವರೆಗೆ ಎಮಾನ್ ಮಾತನಾಡಿಲ್ಲ, ನಡೆದಾಡಿಲ್ಲ. ಹೀಗಾಗಿ ಭಾರತಕ್ಕೆ ಬಂದ ಬಳಿಕ ಆಕೆಯ ಆರೋಗ್ಯ ಹದಗೆಟ್ಟಿದೆಯೇ ಹೊರತು, ಚಲನವಲನದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ ಅಂತಾ ಷೈಮಾ ವೀಡಿಯೋದಲ್ಲಿ ದೂರಿದ್ದಾರೆ. ಅಲ್ಲದೇ ಆಕೆಗೆ ಆಸ್ಪತ್ರೆಯಲ್ಲಿ ಯಾವೆಲ್ಲಾ ಸೌಲಭ್ಯಗಳನ್ನು ಒದಗಿಸಿದ್ದಾರೆ ಎಂಬುವುದನ್ನು ವೀಡಿಯೋದಲ್ಲಿ ತೋರಿಸಿದ್ದಾರೆ. ಈ ಆಸ್ಪತ್ರೆಯಲ್ಲಿ ಸಿಎಟಿ ಸ್ಕ್ಯಾನ್ ಮೆಶಿನ್ ಕೂಡ ಇಲ್ಲ ಅಂತಾ ಹೇಳಿದ್ದಾರೆ.

    ಇದನ್ನೂ ಓದಿ: ಭಾರತಕ್ಕೆ ಬಂದ 2 ತಿಂಗ್ಳಲ್ಲಿ 242 ಕೆಜಿ ತೂಕ ಇಳಿಸಿಕೊಂಡಿದ್ರೂ ಎಮಾನ್ ಇನ್ನೆಂದೂ ನಡೆಯಲು ಸಾಧ್ಯವಿಲ್ಲ

    ಆದ್ರೆ ಇಮಾನ್ ಸಹೋದರಿ ಆರೋಪವನ್ನು ವೈದ್ಯ ಲಕ್ದವಾಲಾ ತಳ್ಳಿ ಹಾಕಿದ್ದಾರೆ. ಇಮಾನ್ ಚಿಕಿತ್ಸೆಗೂ ಮುನ್ನ 500 ಕೆಜಿ ತೂಕವಿದ್ಲು. ಚಿಕಿತ್ಸೆ ಬಳಿಕ ಆಕೆ ತೂಕ 172 ಕೆಜಿಗೆ ಇಳಿದಿದೆ. ಆದ್ರೆ ಮುಂದಿನ ಚಿಕಿತ್ಸಾ ವೆಚ್ಚವನ್ನು ಉಳಿಸಿಕೊಳ್ಳಲು ಇಮಾನ್ ಕುಟುಂಬಸ್ಥರು ಸುಳ್ಳು ಆರೋಪ ಮಾಡ್ತಿದ್ದಾರೆಂದು ಲಕ್ದವಾಲಾ ಪ್ರತಿಕ್ರಿಯೆ ನೀಡಿದ್ದಾರೆ.

    https://www.youtube.com/watch?v=MSz2yMt3zz4

  • ಎಸ್‍ಎಂ ಕೃಷ್ಣಗೆ ಸಹೋದರಿ ವಿಯೋಗ – ಬಿಜೆಪಿ ಸೇರ್ಪಡೆ ಮುಂದೂಡಿಕೆ

    ಎಸ್‍ಎಂ ಕೃಷ್ಣಗೆ ಸಹೋದರಿ ವಿಯೋಗ – ಬಿಜೆಪಿ ಸೇರ್ಪಡೆ ಮುಂದೂಡಿಕೆ

    ಬೆಂಗಳೂರು: ಇವತ್ತು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರಬೇಕಿತ್ತು. ಆದ್ರೆ ಕೃಷ್ಣ ಅವರ ಸಹೋದರಿ ಸುನೀತಾ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಹೀಗಾಗಿ ಕೃಷ್ಣ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

    ಮಂಗಳವಾರದಂದು ಮಂಡ್ಯದ ಸೋಮನಹಳ್ಳಿಯಲ್ಲಿ ಕೃಷ್ಣ ಅವರ ಸಹೋದರಿ ಸುನೀತಾ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷ್ಣ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

    ಸುನೀತಾ ಅವರ ಮೃತದೇಹವನ್ನು ಅವರು ವಾಸವಾಗಿರುವ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕರೆತರಲಾಗುತ್ತದೆ.

  • ಅಕ್ಕನ ಸಾವಿಗೆ ಪತಿಯೇ ಕಾರಣವೆಂದು ಭಾವನನ್ನು ಕೊಚ್ಚಿ ಕೊಂದ ಬಾಮೈದ

    ಅಕ್ಕನ ಸಾವಿಗೆ ಪತಿಯೇ ಕಾರಣವೆಂದು ಭಾವನನ್ನು ಕೊಚ್ಚಿ ಕೊಂದ ಬಾಮೈದ

    ಬೆಂಗಳೂರು: ಅಕ್ಕನನ್ನು ಕೊಂದ ಅನ್ನೋ ದ್ವೇಷಕ್ಕೆ ಬಾಮೈದನೇ ಭಾವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನ ಚಿಕ್ಕದೇವಸಂದ್ರದಲ್ಲಿ ನಡೆದಿದೆ.

    ಚಲುವರಾಯ(35) ಕೊಲೆಯಾದ ವ್ಯಕ್ತಿ. ಈತನ ಮೊದಲ ಹೆಂಡತಿ ತಮ್ಮ ರಾಜಕುಮಾರನಿಂದ ಈ ಕೃತ್ಯ ನಡೆದಿದೆ. 10 ವರ್ಷಗಳ ಹಿಂದೆ ಚಲುವರಾಯನ ಪತ್ನಿ ಮಂಜುಳ ಆತ್ಮಹತ್ಯೆ ಮಾಡಿಕೊಂಡಿದ್ದು ಈಕೆ ಸಾವಿಗೆ ಪತಿಯೇ ಕಾರಣ ಅಂತಾ ಕುಟುಂಬಸ್ಥರು ದೂರು ನೀಡಿದ್ರು. ಪ್ರಕರಣ ಸಂಬಂಧ ಚಲುವರಾಯ 2 ವರ್ಷ ಜೈಲು ಶಿಕ್ಷೆ ಅನುಭವಿಸಿ ಹೊರಗೆ ಬಂದು ಮತ್ತೊಂದು ಮದುವೆಯಾಗಿದ್ದ.

    ಅಕ್ಕನನ್ನು ಕೊಂದ ಅನ್ನೋ ಸೇಡು ಹೊಂದಿದ್ದ ರಾಜಕುಮಾರ ತನ್ನ ಸ್ನೇಹಿತರೊಂದಿಗೆ ಸೇರಿ ಭಾವನ ವಿರುದ್ಧ ಸ್ಕೆಚ್ ಹಾಕಿ ಮನೆಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

    ಪ್ರಕರಣ ಸಂಬಂಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.