Tag: sister

  • ರೂಮ್‍ನಲ್ಲಿ ಮಲಗಿದ್ದ ಅಪ್ರಾಪ್ತೆ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ

    ರೂಮ್‍ನಲ್ಲಿ ಮಲಗಿದ್ದ ಅಪ್ರಾಪ್ತೆ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ

    ಲಕ್ನೋ: ಅಪ್ರಾಪ್ತೆ ಮಲಗಿದ್ದ ರೂಮ್‍ಗೆ ನುಗ್ಗಿ ಆಕೆಯ ಮೇಲೆ ಅಪ್ರಾಪ್ತನೇ ಅತ್ಯಾಚಾರ ಎಸಗಿರುವ ಘಟನೆ ಮೇ 17 ರಂದು ಉತ್ತರ ಪ್ರದೇಶದ ಗುರುಗ್ರಾಮ್‍ನಲ್ಲಿ ಬೆಳಕಿಗೆ ಬಂದಿದೆ.

    ಆರೋಪಿಯು ಬಾಲಕಿ ತನ್ನ ಕೊಠಡಿಯಲ್ಲಿ ಮಲಗಿದ್ದಾಗ ಆಕೆಯ ಕೋಣೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಅವನ ಸ್ನೇಹಿತ ಕೋಣೆಗೆ ಬೀಗ ಹಾಕಿ ಕಾವಲು ಕಾಯುತ್ತಿದ್ದ ಎಂದು ಸಂತ್ರಸ್ತೆಯ ಸಹೋದರಿ ಬಜ್‍ಘೇರಾ ಪೊಲೀಸ್ ಠಾಣೆಗೆ ಬಂದು ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆಯ ವೇಳೆ ಮಗಳ ಕಿರುಚಾಟವನ್ನು ಕೇಳಿ ಹುಡುಗಿಯ ಪೊಷಕರು ಕೊಠಡಿಯ ಹತ್ತಿರ ಧಾವಿಸಿದ್ದು, ಈ ಸಂದರ್ಭದಲ್ಲಿ ಆರೋಪಿಗಳಿಬ್ಬರು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ತಾಯಿ ಶವದೊಂದಿಗೆ 10 ದಿನ ಮನೆಯಲ್ಲೇ ಕಾಲ ಕಳೆದ ಮಗಳು

    STOP RAPE

    ಘಟನೆಯ ಕುರಿತು ಇಬ್ಬರೂ ಅಪ್ರಾಪ್ತರನ್ನು ವಶಕ್ಕೆ ಪಡೆದು ಮಕ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರನ್ನು ಫರಿದಾಬಾದ್‍ನಲ್ಲಿರುವ ರಿಮಾಂಡ್ ಹೋಂನಲ್ಲಿ (ವೀಕ್ಷಣಾಲಯ) ಇಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಿನ್ನ ಹೆಸರು ಮೊಹಮ್ಮದ್? – ಬಿಜೆಪಿ ಮಾಜಿ ಕಾರ್ಪೊರೇಟರ್ ಪತಿಯಿಂದ ಹಲ್ಲೆಗೊಳಗಾದ ವೃದ್ಧ ಸಾವು

    ಆರೋಪಿ ಈ ಹಿಂದೆ ಬಾಲಕಿಯ ಬಾತ್‍ರೂಮ್‍ಗೆ ನುಗ್ಗಿದ್ದನು. ನಂತರದಲ್ಲಿ ತಾನು ತಪ್ಪಾಗಿ ಪ್ರವೇಶಿಸಿದ್ದೇನೆ ಎಂದು ಹೇಳಿ ಅಲ್ಲಿಂದ ಹೊರಬಿದ್ದಿದ್ದನು ಎಂದು ದೂರುದಾರರು ಆರೋಪಿಸಿದ್ದಾರೆ.

    ಇದರ ಮಧ್ಯೆ, ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದೆ.

  • ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗನ ಶಿಕ್ಷಣದ ಜವಾಬ್ದಾರಿ ವಹಿಸಿದ ಅಶ್ವಿನಿ

    ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗನ ಶಿಕ್ಷಣದ ಜವಾಬ್ದಾರಿ ವಹಿಸಿದ ಅಶ್ವಿನಿ

    ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿ ಅವರು 2015ರಲ್ಲಿ ಕೊಲೆಯಾಗಿದ್ದ ವಿಶ್ವನಾಥ್ ಶೆಟ್ಟಿ ಮಗನ ಓದಿನ ಜವಾಬ್ದಾರಿ ಹೊತ್ತಿದ್ದಾರೆ.

    2015ರಲ್ಲಿ ಪಿಎಫ್‍ಐ ಸಂಸ್ಥಾಪನಾ ದಿನಾಚರಣೆ, ಸಮಾವೇಶ ಅಂಗವಾಗಿ ಶಿವಮೊಗ್ಗದಲ್ಲಿ ನಡೆದ ಮೆರವಣಿಗೆ ಮತ್ತು ಆನಂತರದಲ್ಲಿ ಉಂಟಾದ ಗಲಭೆಯಲ್ಲಿ ಮೃತಪಟ್ಟ ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗ ಯಶಸ್ ಓದಿನ ಜವಾಬ್ದಾರಿಯನ್ನು ಅಶ್ವಿನಿ ವಹಿಸಿಕೊಂಡಿದ್ದಾರೆ. ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿಯ ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

    2015ರ ಫೆಬ್ರವರಿ 19 ರಂದು ಶಿವಮೊಗ್ಗದಲ್ಲಿ ನಡೆದ ಪಿಎಫ್‍ಐ ಸಮಾವೇಶ ಮುಗಿಸಿಕೊಂಡು ಹೋಗುವಾಗ ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿಯನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು. ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದನು.

    2022ರ ಫೆಬ್ರವರಿ 20ರಂದು ಹರ್ಷ ರಾತ್ರಿ 10 ಗಂಟೆ ವೇಳೆಯಲ್ಲಿ ಊಟಕ್ಕೆ ಹೋಗುವಾಗ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಏಳೆಂಟು ಜನ ಹರ್ಷ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದರು. ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಯಶಸ್ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ ಆ ಬಾಲಕನ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ.

    ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ. ನನಗೆ ಒಂಬತ್ತನೇ ತರಗತಿ ಓದುತ್ತಿರುವ ಮಗಳು ಇದ್ದಾಳೆ. ಇವನನ್ನು 8ನೇ ತರಗತಿ ಓದುತ್ತಿರುವ ಮಗ ಎಂದು ಭಾವಿಸಿಕೊಳ್ಳುತ್ತೇನೆ. ಅವನಿಗೆ ಏನು ಬೇಕು ಎಲ್ಲಾ ಮಾಡುತ್ತೇನೆ. ನೀವು ಅವನ ಬಗ್ಗೆ ಚಿಂತೆಯನ್ನೇ ಮಾಡಬೇಡಿ ಎಂದು ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    ಅವನಿಗೆ ಏನೇ ಸಮಸ್ಯೆಯಾದರೂ ನನಗೆ ಕರೆ ಮಾಡಿ, ನಾನು ಬಂದು ಅವನನ್ನ ನೋಡಿಕೊಳ್ಳುತ್ತೇನೆ ಎಂದಿದ್ದಾರೆ. ಅಜ್ಜಿ ಹಾಗೂ ಅವನನ್ನು ನೋಡಿಕೊಂಡು ಅವನ ಓದಿನ ಬಗ್ಗೆ ಮಾತ್ರ ಯೋಚನೆ ಮಾಡಿ, ಉಳಿದದ್ದು ನನಗೆ ಬಿಡಿ. ಅವನ ಓದು ಹಾಗೂ ಹಣದ ಬಗ್ಗೆ ಯೋಚನೆಯನ್ನೇ ಮಾಡಬೇಡಿ. ಅವನು ನನಗೆ ಹರ್ಷನಿದ್ದಂತೆ, ನೀವು ಯೋಚನೆ ಮಾಡಬೇಡಿ ಎಂದು ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿಗೆ ಧೈರ್ಯ ತುಂಬಿದ್ದಾರೆ.

    ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಮೃತ ಹರ್ಷ ಅಕ್ಕ ಅಶ್ವಿನಿ ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನು ನೋಡಿಕೊಳ್ಳುತ್ತಿದ್ದರು.

  • ಹದಿಹರೆಯದ ವಯಸ್ಸಲ್ಲಿ ಪ್ರೀತಿ ಪ್ರೇಮ – ಕೆರೆಗೆ ಹಾರಿ ಅಕ್ಕ, ತಂಗಿ ಆತ್ಮಹತ್ಯೆ

    ಹದಿಹರೆಯದ ವಯಸ್ಸಲ್ಲಿ ಪ್ರೀತಿ ಪ್ರೇಮ – ಕೆರೆಗೆ ಹಾರಿ ಅಕ್ಕ, ತಂಗಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಹದಿಹರೆಯದ ವಯಸ್ಸಲ್ಲಿ ಪ್ರೀತಿ ಪ್ರೇಮ ಎಂದು ಅಕ್ಕ-ತಂಗಿ ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಕಂದವಾರ ಕೆರೆಯಲ್ಲಿ ನಡೆದಿದೆ.

    ಅಗಲಗುರ್ಕಿ ಗ್ರಾಮದ ಮುನಿಸ್ವಾಮಪ್ಪ ಹಾಗೂ ಲಕ್ಷ್ಮೀ ದಂಪತಿ ಪುತ್ರಿಯರಾದ 16 ವರ್ಷದ ಅಶ್ವಿನಿ ಹಾಗೂ 14 ವರ್ಷದ ನಿಶ್ಚಿತಾ ಮೃತರು. ಕಂದವಾರ ಕೆರೆಯಲ್ಲಿ ಭಾನುವಾರ ಮಧ್ಯಾಹ್ನ ಬಾಲಕಿಯ ಮೃತದೇಹ ತೇಲಾಡುತ್ತಿದ್ದನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಸಂಜೆ ವೇಳೆಗೆ ಮತ್ತೊಂದು ಮೃತದೇಹ ಅದೇ ಜಾಗದಲ್ಲಿ ತೇಲಿಬಂದಿದೆ. ಎರಡು ಮೃತದೇಹಗಳನ್ನ ಆಗ್ನಿಶಾಮಕ ದಳ ಸಿಬ್ಬಂದಿ ಸಹಾಯದಿಂದ ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ 2022: ಅತ್ಯುತ್ತಮ ಪೋಷಕ ಪಾತ್ರಗಳಿಗೆ ಅರಿಯಾನಾ ಡಿಬೋಸ್, ಟ್ರಾಯ್ಕೋಟ್ಸೂರ್‌ಗೆ ಅವಾರ್ಡ್

    ಬೈದು ಬುದ್ದಿ ಹೇಳಿದ್ದ ಪೋಷಕರು
    ಆಟೋ ಚಾಲಕ ಮುನಿಸ್ವಾಮಿ ಹಾಗೂ ಲಕ್ಷ್ಮೀ ದಂಪತಿ ಹಿರಿಯ ಪುತ್ರಿ ಅಶ್ವಿನಿ ತಮ್ಮದೇ ಗ್ರಾಮದ ಎದುರು ಮನೆಯ 18 ವರ್ಷದ ರಕ್ಷಿತ್ ಜೊತೆ ಪ್ರೀತಿ ಪ್ರೇಮ ಎಂದು ಸುತ್ತಾಡುತ್ತಿದ್ದಳು. ಈ ವಿಷಯ ತಿಳಿದಿದ್ದ ಪೋಷಕರು ಕಳೆದ 6 ತಿಂಗಳ ಹಿಂದೆಯೇ ಬೈದು ಬುದ್ದಿವಾದ ಹೇಳಿದ್ದರು.

    ನಮ್ಮನ್ನ ಹುಡುಕಬೇಡಿ
    ಪ್ರೀತಿ ಮಾಡೋದು ಬಿಡದ ಅಶ್ವಿನಿ, ಕದ್ದುಮುಚ್ಚಿ ಯುವಕನ ಜೊತೆ ಪ್ರೀತಿ ಪ್ರೇಮ ಮುಂದುವರಿಸಿದ್ದಳು. ಆದ್ರೆ ಭಾನುವಾರ ಚಿಕ್ಕಬಳ್ಳಾಪುರ ನಗರಕ್ಕೆ ಬಂದಿದ್ದ ಅಕ್ಕ-ತಂಗಿ ಇಬ್ಬರು ಅಪರಿಚಿತರ ಮೊಬೈಲ್ ಪಡೆದು ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಅಪ್ಪ ಮುನಿಸ್ವಾಮಿ ಅವರಿಗೆ ಕರೆ ಮಾಡಿ, ಅಪ್ಪ ನಮ್ಮನ್ನ ಹುಡುಕಬೇಡಿ ನಾವು ನಿಮಗೆ ಸಿಗಲ್ಲ ಎಂದು ಹೇಳಿದ್ದಾರೆ. ಕೂಡಲೇ ತಂದೆ ಕರೆ ಮಾಡಿದ ಜಾಗಕ್ಕೆ ಹೋಗಿ ಹುಡುಕುವಷ್ಟರಲ್ಲಿ ಅಲ್ಲಿ ಇಬ್ಬರು ಮಕ್ಕಳು ಇರಲಿಲ್ಲ.

    ಅಕ್ಕನ ಜೊತೆ ತಂಗಿಯೂ ಆತ್ಮಹತ್ಯೆ
    ರಾತ್ರಿಯೆಲ್ಲ ಹುಡುಕಾಡಿದ್ರೂ ಮಕ್ಕಳ ಸುಳಿವು ಸಿಕ್ಕಿರಲಿಲ್ಲ. ಭಾನುವಾರ ಮಧ್ಯಾಹ್ನ ಮೊದಲು ಕಂದವಾರ ಕೆರೆಯಲ್ಲಿ ಹಿರಿಯ ಮಗಳು ಮೃತದೇಹ ತೇಲಿಬಂದಿದ್ದು, ತದನಂತರ ಕಿರಿಯ ಮಗಳ ಮೃತದೇಹ ತೇಲಿಬಂದಿದೆ. ಓದೋ ವಯಸ್ಸಲ್ಲಿ ಪ್ರೀತಿ ಪ್ರೇಮ ಎಂದು ಸುತ್ತಾಡಿದ್ದು, ಅಪ್ಪ ಅಮ್ಮ ಬುದ್ದಿವಾದ ಹೇಳಿ ದಂಡಿಸಿದ್ದಕ್ಕೆ ತಾನೂ ಸತ್ತು, ತನ್ನ ಜೊತೆಗೆ ತನ್ನ ತಂಗಿಯನ್ನ ಸಹ ಸಾವಿನ ಮನೆಗೆ ಕರೆದೊಯ್ದಿದ್ದಾಳೆ. ಇದನ್ನೂ ಓದಿ: ಸುಧಾಮೂರ್ತಿ ರಾಷ್ಟ್ರಪತಿ ಆಗಬೇಕೆಂದು ವಿಶೇಷ ಪೂಜೆ

    ಯುವತಿ ಪ್ರೀತಿಸುತ್ತಿದ್ದ ಯುವಕ ರಕ್ಷಿತ್ ಚಿಕ್ಕಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತಂಗಿ ಆರೋಗ್ಯ ಸರಿಯಿಲ್ಲವೆಂದು ಕ್ಯಾಬ್ ದರೋಡೆ ಮಾಡಿದ ಸಹೋದರರು..!

    ತಂಗಿ ಆರೋಗ್ಯ ಸರಿಯಿಲ್ಲವೆಂದು ಕ್ಯಾಬ್ ದರೋಡೆ ಮಾಡಿದ ಸಹೋದರರು..!

    ಲಕ್ನೋ: ತಂಗಿ ಆರೋಗ್ಯ ಸರಿಯಿಲ್ಲವೆಂದು ಅಣ್ಣಂದಿರು ಓಲಾ ಕ್ಯಾಬ್ ದರೋಡೆ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಗಾಜಿಪುರದ ಸೈದ್‍ಪುರ ಕೊತ್ವಾಲಿ ಪೊಲೀಸರು ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಕ್ಯಾಬ್ ಬುಕ್ ಮಾಡಿ ಚಾಲಕನ ಮೇಲೆ ಹಲ್ಲೆ ನಡೆಸಿ ಕಾರನ್ನು ದರೋಡೆ ಮಾಡಿದ್ದರು. ವಿಷಯ ತಿಳಿದ ತಕ್ಷಣ ಪೊಲೀಸರು ತನಿಖೆ ಮಾಡಿ ಆರೋಪಿಗಳನ್ನು ಹಿಡಿದಿದ್ದು, ಟ್ಯಾಕ್ಸಿ ಜೊತೆಗೆ ಪಿಸ್ತೂಲ್, ಕಾಟ್ರಿಡ್ಜ್ ಮತ್ತು ಫೋನ್ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ:  ದೆಹಲಿ ನಾಯಕರು ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಂಜಿತ್ ಚನ್ನಿ

    Ola to now sell used cars

    ಕಾರಣವೇನು?
    ಬಂಧಿತ ಆರೋಪಿಗಳನ್ನು ಈ ಕೃತ್ಯಕ್ಕೆ ಕಾರಣವೇನು ಎಂದು ಕೇಳಿದಾಗ ಅವರು, ನಮ್ಮ ತಂಗಿಯ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ನಮ್ಮ ತಂಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಈ ಕೃತ್ಯ ಮಾಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ.

    ನಡೆದಿದ್ದೇನು?
    ಆರೋಪಿಗಳು ವಾರಣಾಸಿ ಕ್ಯಾಂಟ್‍ನಿಂದ ಕ್ಯಾಬ್ ಬುಕ್ ಮಾಡಿದ್ದಾರೆ. ಚಾಲಕ ಇವರನ್ನು ಕರೆದುಕೊಂಡು ಹೋಗುತ್ತಿರಬೇಕಾದರೆ ಸೈದ್‍ಪುರ ಬಳಿ ಕ್ಯಾಬ್ ಚಾಲಕನನ್ನು ಬೆದರಿಸಿದ್ದು, ಚೆನ್ನಾಗಿ ಥಳಿಸಿ ಕಾರಿನಿಂದ ಹೊರ ಹಾಕಿದ್ದಾರೆ. ಬಳಿಕ ಆರೋಪಿಗಳು ಕಾರಿನ ಸಮೇತ ಪರಾರಿಯಾಗಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಕಾರ್ ಚಾಲಕ ಜ್ಞಾನೇಂದ್ರ ಪಾಂಡೆ ದೂರು ನೀಡಿದ್ದಾರೆ.

    POLICE JEEP

    ಈ ದೂರಿನಲ್ಲಿ ಜ್ಞಾನೇಂದ್ರ ಅವರು, ವಾಹನ ಸಂಖ್ಯೆ ‘ಯುಪಿ 65 ಕೆಟಿ 1217’ ಸಂಖ್ಯೆಯ ಸುಜುಕಿ ಡಿಜೈರ್ ಕಾರನ್ನು ದರೋಡೆಕೋರರು ಕದ್ದಿದ್ದಾರೆ. ಈ ವೇಳೆ ಆರೋಪಿಗಳನ್ನು ನನ್ನ ಮೇಲೆ ಹಲ್ಲೆ ಮಾಡಿದ್ದು, ಕಾರಿನಿಂದ ಹೊರ ಹಾಕಿದ್ದಾರೆ. ಬಳಿಕ ಕಾರಿನ ಸಮೇತ ಪರಾರಿಯಾಗಿದ್ದಾರೆ. ಆ ಕಾರನ್ನು ನಾನು ಓಲಾಗೆ ಲಿಂಕ್ ಮಾಡಿಸಿಕೊಂಡು ಓಡಿಸುತ್ತಿದ್ದೆ ಎಂದು ವಿವರಣೆ ಕೊಟ್ಟಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಹಿಡಿಯಲು ಮುಂದಾಗಿದ್ದು, ಸಿಕ್ಕಿ ಬಿದ್ದಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮಹಿಳೆಯರನ್ನು ಮುಸುಕಿನಲ್ಲಿರಿಸಲಾಗಿದೆ: ಸುನಿಲ್ ಕುಮಾರ್

    ಆರೋಪಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ರಂಬದನ್ ಸಿಂಗ್ ಮಾಧ್ಯಮದ ಮುಂದೆ ಹಾಜರುಪಡಿಸಿ ಮಾತನಾಡಿದ್ದು, ಈ ಗುಂಪಿನಲ್ಲಿರುವ ಇಬ್ಬರು ಹಳೆಯ ಕ್ರಿಮಿನಲ್ ದಾಖಲೆ ಹೊಂದಿದ್ದಾರೆ. ಇನ್ನಿಬ್ಬರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಸ್ತುತ ಆರೋಪಿಗಳ ಬಳಿ ಇದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಪಿಸ್ತೂಲ್, ಕಾಟ್ರಿಡ್ಜ್ ಮತ್ತು ಫೋನ್ ಗಳನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ವಿವರಿಸಿದರು.

  • ಅಣ್ಣ, ತಂಗಿ ಒಂದೇ ಬಾರಿಗೆ ಪಿಎಸ್‌ಐ ಹುದ್ದೆಗೆ ಆಯ್ಕೆ

    ಅಣ್ಣ, ತಂಗಿ ಒಂದೇ ಬಾರಿಗೆ ಪಿಎಸ್‌ಐ ಹುದ್ದೆಗೆ ಆಯ್ಕೆ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಿಹಾಳ ತಾಂಡದ ಅಣ್ಣ, ತಂಗಿ ಇಬ್ಬರೂ ಒಂದೇ ಬಾರಿಗೆ ಪಿಎಸ್‌ಐ ಹುದ್ದೆಗೆ ತೇರ್ಗಡೆಯಾಗುವ ಮೂಲಕ ತಾಂಡದ ಕೀರ್ತಿ ಹೆಚ್ಚಿಸಿದ್ದಾರೆ.

    ಕಾರ್ತಿಕ್ ರಾಠೋಡ್ ಹಾಗೂ ರೂಪಾ ರಾಠೋಡ್ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿರುವ ಸಹೋದರ, ಸಹೋದರಿ. ಇದನ್ನೂ ಓದಿ: ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ ಸಿವಿಲ್ ಹುದ್ದೆಗಳಿಗೆ 2021ರ ಅಕ್ಟೋಬರ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಕಾರ್ತಿಕ್ ರಾಠೋಡ್ ಹಾಗೂ ರೂಪಾ ರಾಠೋಡ್ ತೇರ್ಗಡೆಯಾಗಿದ್ದಾರೆ. ಬಿಎಸ್ಸಿ ಹಾರ್ಟಿಕಲ್ಚರ್ ಓದಿರುವ ರೂಪಾ ರಾಠೋಡ್ 46 ರ‍್ಯಾಂಕ್, ಬಿಎಸ್ಸಿ ಫಾರೆಸ್ಟ್ ಓದಿರುವ ಕಾರ್ತಿಕ್ ರಾಠೋಡ್ 78 ನೇ ರ‍್ಯಾಂಕ್ ಪಡೆದಿದ್ದಾರೆ.

    ಗುರಗುಂಟಾ ಸರ್ಕಾರಿ ಕಿರಿಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿರುವ ಶಂಕರ್ ರಾಠೋಡ್ ತಮ್ಮ ಮಕ್ಕಳ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆಯ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ

  • ಆಟವಾಡುತ್ತಾ ಚರಂಡಿಗೆ ಬಿದ್ದು ಪ್ರಾಣ ಬಿಟ್ಟ ಅಕ್ಕ, ತಮ್ಮ

    ಆಟವಾಡುತ್ತಾ ಚರಂಡಿಗೆ ಬಿದ್ದು ಪ್ರಾಣ ಬಿಟ್ಟ ಅಕ್ಕ, ತಮ್ಮ

    ಲಕ್ನೋ: ಮನೆಯಿಂದಾಚೆ ಆಟವಾಡುತ್ತಿದ್ದ ಅಕ್ಕ, ತಮ್ಮ ಇಬ್ಬರು ಚರಂಡಿಗೆ ಬಿದ್ದು ಸಾವನ್ನಪಿರುವ ಘಟನೆ ನಡೆದಿದೆ.

    ರುಬೀನಾ (9) ಹತ್ತು ತಿಂಗಳ ಕಿರಿಯ ಸಹೋದರ ಸುಮಿತ್ ಕುಮಾರ್ ಮೃತರಾಗಿದ್ದಾರೆ. ಇಬ್ಬರು ಆಟವಾಡುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದಿದ್ದಾರೆ. ಚರಂಡಿ ಸುಮಾರು 15 ಅಡಿ ಆಳವಿದ್ದುದರಿಂದ ಮಕ್ಕಳಿಬ್ಬರು ಸಾವನ್ನಪಿದ್ದಾರೆ.

    ಬಿಹಾರದ ಸಮಸ್ತಿಪುರದ ನಿವಾಸಿ ಶಂಭು ಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಕೊಳಗೇರಿಯಲ್ಲಿ ವಾಸಿಸುತ್ತಿದ್ದಾರೆ. ಸೋಮವಾರ ಸಂಜೆ 4:30ಕ್ಕೆ ಹಿರಿಯ ಮಗಳು ರುಬೀನಾ, ಸುಮಿತ್ ಕುಮಾರ್‍ನ ಜೊತೆ ಮನೆ ಬಳಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರೂ ಅನುಮಾನಾಸ್ಪದವಾಗಿ ಚರಂಡಿಗೆ ಬಿದ್ದಿದ್ದಾರೆ. ಇದನ್ನೂ ಓದಿ: ಸಲಿಂಗ ಸಂಗಾತಿ ಜೊತೆಗೆ ವಧು ಎಸ್ಕೇಪ್

    ಮಕ್ಕಳಿಬ್ಬರು ಎಷ್ಟು ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಅವರನ್ನು ಹುಡುಕತೊಡಗಿದಾಗ ಸುಮಾರು ಅರ್ಧ ಗಂಟೆಯ ನಂತರ ರುಬೀನಾ ಮತ್ತು ಅವಳ ಸಹೋದರ ಚರಂಡಿಯಲ್ಲಿ ಕಂಡು ಬಂದಿದೆ. ಚರಂಡಿಯಿಂದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಗುದ್ದಿದ ಕಾರ್- ಐದು ಮಂದಿ ಸ್ಥಳದಲ್ಲೇ ಸಾವು

  • ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣ ಅರೆಸ್ಟ್

    ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣ ಅರೆಸ್ಟ್

    ಮೈಸೂರು: ಅಣ್ಣನೇ ತಂಗಿಯನ್ನು ಅತ್ಯಾಚಾರ ಮಾಡಿದ ಹೇಯ ಕೃತ್ಯವೊಂದು ಮೈಸೂರಿನಲ್ಲಿ ನಡೆದಿದ್ದು, ಇದೀಗದ ಪ್ರಕರಣ ಸಂಬಂಧ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

    ಹೌದು. ಅರಮನೆ ನಗರಿಯ ಗಿರಿದರ್ಶಿನಿ ನಗರದಲ್ಲಿ ಸ್ವಂತ ಅಣ್ಣನೇ ಅಪ್ರಾಪ್ತ ಸಹೋದರಿಯ ಮೇಲೆ ತನ್ನ ಕಾಮತೃಷೆ ನೀಗಿಸಿಕೊಂಡಿದ್ದಾನೆ. ಆರೋಪಿಯನ್ನು ವಿನಯ್ ಕುಮಾರ್ ಎಂದು ಗುರುತಿಸಲಾಗಿದೆ. ಈತನ ಕಾಮದಾಟಕ್ಕೆ ಇದೀಗ ತಂಗಿ ಗರ್ಭಿಣಿಯಾಗಿದ್ದಾಳೆ.

    ಚಿಕ್ಕವಯಸ್ಸಿನಲ್ಲೇ ತಂದೆ ತಾಯಿಯನ್ನ ಕಳೆದುಕೊಂಡಿದ್ದ 16 ವರ್ಷದ ಅಪ್ರಾಪ್ತೆ, ಅಣ್ಣನ ಜೊತೆ ವಾಸವಾಗಿದ್ದಳು. ಇಬ್ಬರು ಅಣ್ಣಂದಿರು ಹಾಗೂ ಇಬ್ಬರು ಅಕ್ಕಂದಿರೊಂದಿಗೆ ಜೀವನ ಸಾಗಿಸುತ್ತಿದ್ದಳು. ಅಕ್ಕಂದಿರಿಗೆ ವಿವಾಹವಾದ ಕಾರಣ ಇಬ್ಬರು ಅಣ್ಣಂದಿರ ಜೊತೆ ಆಶ್ರಯ ಪಡೆದಿದ್ದಳು.

    ಕುಡಿತದ ಚಟಕ್ಕೆ ಬಲಿಯಾಗಿದ್ದ ಓರ್ವ ಅಣ್ಣ ಪಾನಮತ್ತನಾದ ಸಮಯದಲ್ಲಿ ಸ್ವಂತ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮೂರು ತಿಂಗಳಿಂದ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‌ ರೇಪ್: ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

    POLICE JEEP

    ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತಮ್ಮನ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಅಕ್ಕ

    ತಮ್ಮನ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಅಕ್ಕ

    ಹಾವೇರಿ: ತಮ್ಮನ ಸಾವಿನ ಸುದ್ದಿ ತಿಳಿದು ಮನೆಗೆ ಬಂದು ಅಕ್ಕನೂ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದಿದೆ.

    ನಾಗರಾಜ್ ಚಲವಾದಿ(16), ಭಾಗ್ಯಶ್ರೀ(18) ಮೃತರಾಗಿದ್ದಾರೆ. ಸರಿಯಾಗಿ ಶಾಲೆಗೆ ಹೋಗು ಅಂದಿದ್ದಕ್ಕೆ ಬಾಲಕ ನೇಣಿಗೆ ಶರಣಾಗಿದ್ದನು. ತಮ್ಮ ಸಾವಿಗೆ ಸುದ್ದಿ ಕೇಳಿ ಅಕ್ಕನೂ ನೇಣಿಗೆ ಶರಣಾಗಿದ್ದು, ಸಾವಿನಲ್ಲೂ ಅಕ್ಕ, ತಮ್ಮ ಒಂದಾಗಿದ್ದಾರೆ.

    ಸರಿಯಾಗಿ ಶಾಲೆಗೆ ಹೋಗು ಅಂದಿದ್ದಕ್ಕೆ ಮನೆಯ ಮೇಲಿನ ಕೊಠಡಿಯಲ್ಲಿ ಬಾಲಕ ನಾಗರಾಜ್ ನೇಣಿಗೆ ಶರಣಾಗಿದ್ದಾನೆ. ತಮ್ಮನ ಸಾವಿನ ಸುದ್ದಿ ಕೇಳಿದ ಭಾಗ್ಯಶ್ರೀ ಮನೆಗೆ ಬಂದು ಅದೇ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇಬ್ಬರ ಮರಣೋತ್ತರ ಪರೀಕ್ಷೆ ನಂತರ ಅಕ್ಕ ತಮ್ಮನ ಅಂತ್ಯಕ್ರಿಯೆ ಕುಟುಂಬಸ್ಥರು ನೆರವೇರಿಸಿದ್ದಾರೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!

    ಬೆಳಿಗ್ಗೆ ನಾಗರಾಜ್ ಮೃತಪಟ್ಟಿದ್ದು, ನಾಗರಾಜನ ಸಾವಿನ ಸುದ್ದಿ ತಿಳಿದು 12 ಗಂಟೆಗೆ ಅಕ್ಕ ಬಾಗ್ಯಶ್ರೀ ಮೃತಪಟ್ಟಿದ್ದಾಳೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ಕ ತಮ್ಮ ಸಾವಿಗೆ ಈಡೀ ಬ್ಯಾಡಗಿ ಪಟ್ಟಣದ ಜನರು ಹಾಗೂ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

  • ಊಟದ ವಿಚಾರಕ್ಕೆ ತಾಯಿ, ಮಗನ ಗಲಾಟೆ – ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿ ತಾಯಿ, ಅಕ್ಕನ ಹತ್ಯೆ

    ಊಟದ ವಿಚಾರಕ್ಕೆ ತಾಯಿ, ಮಗನ ಗಲಾಟೆ – ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿ ತಾಯಿ, ಅಕ್ಕನ ಹತ್ಯೆ

    ಕಾರವಾರ: ಕುಡಿದ ಅಮಲಿನಲ್ಲಿ ಊಟದ ವಿಚಾರವಾಗಿ ಗಲಾಟೆ ಮಾಡಿಕೊಂಡು ತಾಯಿ ಹಾಗೂ ಅಕ್ಕನನ್ನು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದದಲ್ಲಿ ನಡೆದಿದೆ.

    ಮಂಜುನಾಥ್ ಜಯಂತ್ ನಾರಾಯಣ ಹಸಲರ್, ಕೊಲೆಗೈದ ಆರೋಪಿ. ತಾಯಿ ಪಾರ್ವತಿ ಹಾಗೂ ಅಕ್ಕ ರಮ್ಯಾ ಮೃತ ದುರ್ದೈವಿಗಳಾಗಿದ್ದಾರೆ. ಊಟದ ವಿಷಯದಲ್ಲಿ ಗಲಾಟೆ ತೆಗೆದಿದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಬಂದೂಕನ್ನು ತೆಗೆದುಕೊಂಡು ತಾಯಿ ಹಾಗೂ ಅಕ್ಕನಿಗೆ ಹೊಡೆದಿದ್ದಾನೆ. ಈ ವೇಳೆ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ಸಿಂಹಕ್ಕೂ ಅಂಜದೇ ಮಾಂಸ ತಿನ್ನಿಸಿದ ರಾಕಿ ಬಾಯ್ – ವೀಡಿಯೋ ವೈರಲ್

    ಇನ್ನೂ ತಂದೆ ನಾರಾಯಣ್ ಮನೆಯಲ್ಲಿ ಇರಲ್ಲದೇ ಇರುವ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ:  ನನ್ನಿಂದ ತಪ್ಪಾಗಿದೆ, ಡಿಕೆಶಿ ಮುಖ ನೋಡಲು ಆಗ್ತಿಲ್ಲ: ಸಲೀಂ ಕಣ್ಣೀರು

  • ಐವರ ಸಾವಿಗೆ ಅವರೇ ಕಾರಣ, ನಮ್ಮಣ್ಣ ಅಲ್ಲ: ಶಂಕರ್ ತಂಗಿ

    ಐವರ ಸಾವಿಗೆ ಅವರೇ ಕಾರಣ, ನಮ್ಮಣ್ಣ ಅಲ್ಲ: ಶಂಕರ್ ತಂಗಿ

    – ನಾವ್ಯಾರು ಅಣ್ಣನ ಮನೆಗೆ ಹೋಗುತ್ತಿರಲಿಲ್ಲ
    – ನಮ್ಮಣ್ಣನಿಗೆ ಟಾರ್ಚರ್ ಕೊಡುತ್ತಿದ್ದರು

    ಮಂಡ್ಯ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಪ್ರಕರಣ ಸಂಬಂಧ, ವಿಚಾರಣೆಯಲ್ಲಿರುವ ಶಂಕರ್ ಅವರ ತಂಗಿ ಹೇಳಿಕೆ ನೀಡಿದ್ದಾರೆ. ಅವರ ಸಾವಿಗೆ ಅವರೇ ಕಾರಣ ನಮ್ಮಣ್ಣ ಅಲ್ಲವೆಂದು ಸಹೋದರನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ.

    ಒಂದೇ ಕುಟುಂಬದ ಐವರು ಸಾವಿನ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತ ಶಂಕರ್ ಕೂಡಾ ಮೃತ ಹೆಂಡತಿ, ಮಕ್ಕಳು ಮಾಡಿರುವ ಆರೋಪ ಸುಳ್ಳು ಎನ್ನುತ್ತಿದ್ದಾರೆ. ಇತ್ತ ಶಂಕರ್ ತಂಗಿಯು ಅಣ್ಣನ ಮೇಲಿನ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಇದನ್ನೂ ಓದಿ:   ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್

    ಮಂಡ್ಯದಲ್ಲಿ ಮಾಧ್ಯಮದವರೊಂಂದಿಗೆ ಮಾತನಾಡಿದ ಅವರು, ಸಾಯುವ ಮುನ್ನ ತಂದೆ ಶಂಕರ್ ವಿರುದ್ಧ ಡೆತ್ ನೋಟ್ ಬರೆದು ಮಧುಸಾಗರ್, ತಂದೆಯ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇದೀಗ ಈ ಆರೋಪಗಳನ್ನು ಶಂಕರ್ ತಂಗಿ ಪಾರ್ವತಿ ಈ ಆರೋಪಗಳೆಲ್ಲಾವೂ ಸುಳ್ಳು, ಅವರ ಸಾವಿಗೆ ನಮ್ಮ ಅಣ್ಣ ಕಾರಣ ಅಲ್ಲ, ಅವರೇ ಅವರ ಸಾವಿಗೆ ಕಾರಣ ಎಂದು ಮಂಡ್ಯದ ಹಲ್ಲೆಗೆರೆಯಲ್ಲಿ ಕಣ್ಣೀರಿಡುತ್ತಾ ಮಾತನಾಡಿದ್ದಾರೆ.

    ಅವರ ತಪ್ಪು ಇಟ್ಟುಕೊಂಡು ಇನ್ನೊಬ್ಬರನ್ನ ದೂರುತ್ತಾರಲ್ಲ ಅದು ತಪ್ಪು. ನಮ್ಮಣ್ಣ ಆ ರೀತಿಯ ವ್ಯಕ್ತಿಯಲ್ಲ, ಬೇಕಿದ್ದರೆ ಅಕ್ಕಪಕ್ಕದ ಊರಿನವರನ್ನ ಕೇಳಿಕೊಳ್ಳಿ. ಅವನ ಹೆಂಡತಿ ಮದುವೆಯಾದಾಗಿನಿಂದಲೂ ನಮ್ಮಣ್ಣನಿಗೆ ಟಾರ್ಚರ್ ಕೊಡುತ್ತಿದ್ದರು. ನಮ್ಮಣ್ಣ ನೆಮ್ಮದಿಯಿಂದರಲಿ ಎಂದು ನಾವ್ಯಾರು ಮನೆಗೆ ಹೋಗುತ್ತಿರಲಿಲ್ಲ ಎಂದು ಪಾರ್ವತಿ ಅವರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಐಟಿ ದಾಳಿ ಬಳಿಕ ಕೊನೆಗೂ ಮೌನ ಮುರಿದ ಸೋನು ಸೂದ್

    ನಮ್ಮಮ್ಮ ಅವರ ಮನೆಗೆ ಹೋಗುತ್ತೇವೆ ಎಂದರೆ ಗಡಗಡ ನಡುಗುತ್ತಿದ್ದರು. ನನ್ನ ಸೊಸೆ, ನನ್ನ ಮೊಮ್ಮಕ್ಕಳು ಏನಾದರು ಮಾಡ್ತಾರೆ ಅಂತಾ ಕಣ್ಣೀರಿಡುತ್ತಿದ್ದರು. ನಮಗೆ ಹಾಗೂ ನಮ್ಮ ತಾಯಿಗೆ ಚಿತ್ರಹಿಂಸೆ ಅವರು ಕೊಡುತ್ತಿದ್ದರು. ನಮ್ಮಣ್ಣ ದಯವಿಟ್ಟು ಬರಬೇಡಿ ಕಂಡ್ರೊ ಅಂತಾ ನಮ್ಮ ಬಳಿ ಕಣ್ಣೀರಿಡುತ್ತಿದ್ದರು. ಮದುವೆಯಾದಗಿನಿಂದಲೂ ಕೂಡ ನಮ್ಮಣ್ಣನ ಹೆಂಡತಿ ಹಠವಾದಿ. ನಮ್ಮ ಜೊತೆಗೆ ನಮ್ಮಣ್ಣನ ಹೆಂಡತಿ, ಮಕ್ಕಳು ಮಾತಾಡುತ್ತಿರಲಿಲ್ಲ. ನಮ್ಮಣ್ಣ ಅವರ ಕಷ್ಟವನ್ನ ಯಾವತ್ತು ನಮ್ಮ ಹತ್ತಿರ ಹೇಳಿಕೊಳ್ಳುತ್ತಿರಲಿಲ್ಲ. ಅವರ ಸಾವಿಗೆ ಅವರೇ ಕಾರಣ, ನಮ್ಮಣ್ಣ ಕಾರಣನಲ್ಲ. ನಮ್ಮ ದೇವರ ಮೇಲೆ ಪ್ರಮಾಣ ಮಾಡುತ್ತೇನೆ, ನಮ್ಮಣ್ಣ ಅಂತಹವರಲ್ಲ ಎಂದು ಹೇಳಿದ್ದಾರೆ.