Tag: Sivakasi

  • ಶಿವಕಾಶಿ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು

    ಶಿವಕಾಶಿ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು

    ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ (Firecracker factory) ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯ ಶಿವಕಾಶಿ (Sivakasi) ಬಳಿಯ ನಾರಣಾಪುರಂದಲ್ಲಿ (Naranapuram) ನಡೆದಿದೆ.

    ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಈ ಸಂದರ್ಭ ದೊಡ್ಡ ಮಟ್ಟದ ಸ್ಫೋಟದ ಶಬ್ದ ಕೇಳಿ ಬಂತು. ಗಾಬರಿಯಲ್ಲಿ ಮನೆಯಿಂದ ಹೊರಗೆ ಬಂದಾಗ ಪಟಾಕಿ ಅಂಗಡಿ ಸ್ಫೋಟಗೊಂಡಿರುವುದು ಗೋಚರಿಸಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ. ಘಟನಾ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ. ಸ್ಫೋಟದ ನಿಖರ ಕಾರಣ ತಿಳಿದುಬಂದಿಲ್ಲ.

  • ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ದುರ್ಮರಣ

    ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ದುರ್ಮರಣ

    ಚೆನ್ನೈ: ತಮಿಳುನಾಡಿನ (Tamil Nadu) ಶಿವಕಾಶಿ (Sivakasi) ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Fireworks Factory Explosion) ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ರಾಸಾಯನಿಕಗಳನ್ನು ಬಳಕೆ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಲಾಗಿದೆ. ಇದು ಪರವಾನಗಿ ಪಡೆದ ಘಟಕವಾಗಿದ್ದು, ಘಟನೆಗೆ ನಿಖರ ಕಾರಣದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫೋರ್ಟ್ ಸಿಟಿ ರೀಲ್ಸ್ ಸ್ಟಾರ್ ಗೀತಾಶ್ರೀ ನಿಗೂಢ ಸಾವು – ಪತಿ ಪರಾರಿ

    ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಪಟಾಕಿ ಕಾರ್ಖಾನೆಗಳ ಅವಘಡದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ತಿಂಗಳು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

    ಕಾರ್ಖಾನೆಗಳಲ್ಲಿ 99% ಸ್ಫೋಟಗಳು ಮಾನವ ದೋಷದಿಂದ ಸಂಭವಿಸುತ್ತವೆ. ಅಲ್ಲದೇ ತರಬೇತಿ ಇಲ್ಲದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಇಂತಹ ಅವಘಡಗಳಿಗೆ ಕಾರಣ ಎಂದು ಅಗ್ನಿಶಾಮಕ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

    ಈ ಘಟನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮಾದರಿ ಸಂಹಿತೆಯಿಂದಾಗಿ ಚುನಾವಣಾ ಆಯೋಗದ ಒಪ್ಪಿಗೆ ಪಡೆದ ನಂತರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಎದೆ ಮೇಲೆ ಕಲ್ಲು ಎತ್ತಾಕಿ ಪತ್ನಿಯ ಕೊಂದ ಪತಿ!