Tag: sk shivakumar

  • ಸಿಬಿಐಯನ್ನು ಫೇಸ್ ಮಾಡೋ  ಸಾಮರ್ಥ್ಯ ನಮ್ಮ ಅಧ್ಯಕ್ಷರಿಗಿದೆ: ಸತೀಶ್ ಜಾರಕಿಹೊಳಿ

    ಸಿಬಿಐಯನ್ನು ಫೇಸ್ ಮಾಡೋ ಸಾಮರ್ಥ್ಯ ನಮ್ಮ ಅಧ್ಯಕ್ಷರಿಗಿದೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಿಬಿಐ ತನಿಖೆಯನ್ನು ಎದುರಿಸುವ ಸಾಮರ್ಥ್ಯ ನಮ್ಮ ಅಧ್ಯಕ್ಷರಿಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಡಿಕೆ ಬ್ರದರ್ಸ್ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಸಂಬಂಧ ಗೋಕಾಕ್‍ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಸತೀಶ್, ಇದು ಪೂರ್ವನಿಯೋಜಿತ, ಇದೇನು ಹೊಸದೇನಲ್ಲ. ನಮಗೆ ಡಿಸ್ಟರ್ಬ್ ಮಾಡಲಿಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಆರೋಪ ಮಾಡಿದ್ದೇವೆ. ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ತೊಂದರೆ ಕೊಡುತ್ತಿದ್ದಾರೆ. ಆದರೆ ಪಕ್ಷ ದೊಡ್ಡದು, ಒಂದೇ ವ್ಯಕ್ತಿಯಿಂದ ಏನು ಪಕ್ಷ ಇರಲ್ಲ. ಇಡೀ ಪಕ್ಷವೇ ದೊಡ್ಡದಾಗಿದೆ, ಅವರನ್ನು ಯಾರೂ ಹೆದರಿಸಕ್ಕಾಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?

    ಇದನ್ನು ಫೇಸ್ ಮಾಡುವ ಸಾಮರ್ಥ್ಯ ನಮ್ಮ ಅಧ್ಯಕ್ಷರಿಗಿದೆ. ನಮ್ಮ ಅಧ್ಯಕ್ಷರು ಇದನ್ನು ಫೇಸ್ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ

    ಇತ್ತ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ ಎಂದು ಖಂಡಿಸಿದ್ದರು. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಗರಂ ಆಗಿದ್ದರು.

  • ನಿಮ್ಮ ಕೈಯಲ್ಲಿ ಆಗಲ್ಲ ಅಂದ್ರೆ ನಾನೇ ಚೆಕ್ ಕೊಡ್ತೀನಿ, ಅವ್ರನ್ನ ಕಳಿಸಿಬಿಡಿ: ಡಿಕೆಶಿ

    ನಿಮ್ಮ ಕೈಯಲ್ಲಿ ಆಗಲ್ಲ ಅಂದ್ರೆ ನಾನೇ ಚೆಕ್ ಕೊಡ್ತೀನಿ, ಅವ್ರನ್ನ ಕಳಿಸಿಬಿಡಿ: ಡಿಕೆಶಿ

    ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಊರಿಗೆ ತೆರಳಲು ವಲಸೆ ಕಾರ್ಮಿಕರು ಸಾಲುಗಟ್ಟಿ ನಿಂತಿದ್ದನ್ನು ನೋಡಿದರೆ ಅಯ್ಯೋ ಅನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇ ಚೆಕ್ ಕೊಡ್ತೀನಿ ಅವರನ್ನ ಬಿಟ್ಟು ಬನ್ನಿ. ಸರ್ಕಾರದ ಕೈಯಲ್ಲಿ ಆಗಲ್ಲ ಅಂದ್ರೆ ನಾನೇ ಕಳಿಸಿಕೊಡ್ತೀನಿ. ಅವರಿಗೆ ಅಹಾರದ ಪೊಟ್ಟಣ ಕೊಟ್ಟಿಲ್ಲ. ಸರ್ಕಾರದ ಕೈಯಲ್ಲಿ ಆಗಲ್ಲ ಅಂದ್ರೆ ನಾನು ಮಾಡ್ತೀನಿ ಎಂದು ಸವಾಲೆಸೆದರು.

    ಯಡಿಯೂರಪ್ಪ ಅವರೇ ನೀವೇ ಕಣ್ಣು ತೆರೆದು ನೋಡಿ. ನಾನು ಏನಾದರೂ ಮಾತನಾಡಿದ್ರೆ ನಿಮ್ಮ ಸಚಿವರು ನನ್ನ ವಿರುದ್ಧ ಮಾತನಾಡ್ತಾರೆ. ನೀಮ್ಮ ಕೈಯಲ್ಲಿ ಆಗುತ್ತಾ ಇಲ್ವಾ ಹೇಳಿ. ನಿಮ್ಮ ಕೈಯಲ್ಲಿ ಆಗಲ್ಲ ಅಂದ್ರೆ ಸರ್ಕಾರಕ್ಕೆ ನಾನು ಚೆಕ್ ಕೊಡಲು ಸಿದ್ಧನಿದ್ದೇನೆ. ಅವರವರ ಊರುಗಳಿಗೆ ಕಳುಹಿಸಿ ಕೊಡುವ ಕೆಲಸ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಸೇವಾಸಿಂಧುನಲ್ಲಿ ತವರು ರಾಜ್ಯಗಳಿಗೆ ಹೋಗಲು ಅರ್ಜಿ ಸಲ್ಲಿಸಿದವರಿಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಹೀಗಾಗಿ ಒಂದೇ ದಿನ 6 ಸಾವಿರ ಮಂದಿಗೆ ಸಮ್ಮತಿಸಲಾಗಿದೆ. ಅರಮನೆ ಮೈದಾನದ ಬಳಿ ಸುಮಾರು 6 ಸಾವಿರ ಮಂದಿ ಜಮಾಯಿಸಿದ್ದಾರೆ. ಯಾವುದೇ ಸೋಷಿಯಲ್ ಡಿಸ್ಟೆನ್ಸ್ ಇಲ್ಲ, ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಕಾರ್ಮಿಕರು ಜಮಾವಣೆಗೊಂಡಿದ್ದಾರೆ. ಇಂದು ಎರಡು ರೈಲುಗಳು ಒರಿಸ್ಸಾ ಮತ್ತು ಮಣಿಪುರಕ್ಕೆ ಹೊರಡಲಿವೆ.

    ಚಿಕ್ಕಬಾಣವಾರದಿಂದ ಮಧ್ಯಾಹ್ನದ ನಂತರ ಹೊರಡಲಿವೆ. 2,800 ಜನಕ್ಕಷ್ಟೇ ,ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಆದರೆ ಮೇಖ್ರಿ ಸರ್ಕಲ್ ನಿಂದ ಕಾವೇರಿ ಥಿಯೇಟರ್ ವರೆಗೂ ಜನಸಾಗರವೇ ನೆರೆದಿದ್ದು, ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ಯಾಲೇಸ್ ಗ್ರೌಂಡ್ ಬಳಿ ಹೊರ ರಾಜ್ಯದ ನಿವಾಸಿಗಳ ದಂಡು ನೆರೆದಿದ್ದು, ಸುಮಾರು ಮೂರು ಕಿಲೋಮೀಟರ್ ನಷ್ಟು ಜನ ಕ್ಯೂ ನಿಂತಿದ್ದಾರೆ.

  • ಬಿಜೆಪಿಯವರ ಮೇಲೆ ನಡೆದ ಐಟಿ ದಾಳಿಯಲ್ಲಿ ಕಾಂಗ್ರೆಸ್ ಕೈವಾಡವಿತ್ತೆ: ಡಿಕೆಶಿಗೆ ಈಶ್ವರಪ್ಪ ಪ್ರಶ್ನೆ

    ಬಿಜೆಪಿಯವರ ಮೇಲೆ ನಡೆದ ಐಟಿ ದಾಳಿಯಲ್ಲಿ ಕಾಂಗ್ರೆಸ್ ಕೈವಾಡವಿತ್ತೆ: ಡಿಕೆಶಿಗೆ ಈಶ್ವರಪ್ಪ ಪ್ರಶ್ನೆ

    ಶಿವಮೊಗ್ಗ: ಮಾಜಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

    ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಬಿಜೆಪಿಯವರ ಮೇಲೆ, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ನವರ ಮೇಲೆ ದಾಳಿ ನಡೆಸುವಂತಿಲ್ಲ ಅಂತ ಕಾನೂನು ಮಾಡಬೇಕೆ ಎಂದು ಮಾಜಿ ಸಚಿವರನ್ನು ಪ್ರಶ್ನಿಸಿದ್ದಾರೆ.

    ಆದಾಯ ತೆರಿಗೆ ಇಲಾಖೆ ಸ್ವತಂತ್ರವಾದ ಇಲಾಖೆಯಾಗಿದೆ. ಅಲ್ಲಿ ಯಾರ ಹಸ್ತಕ್ಷೇಪ ನಡೆಯುವುದಿಲ್ಲ ಎಂದಿದ್ದಾರೆ. ಯುಪಿಎ ಸರ್ಕಾರ ಇದ್ದಾಗ ಬಿಜೆಪಿಯವರ ಮೇಲೆ ನಡೆದ ದಾಳಿಯಲ್ಲಿ ಕಾಂಗ್ರೆಸ್ ಕೈವಾಡವಿತ್ತೆ ಎಂದು ಪ್ರಶ್ನಿಸಿದ್ರು.

    ರಾಜ್ಯ ಸರ್ಕಾರ ಅಂಗವಿಕಲ ಮಗು ಇದ್ದಂತೆ, ಇದಕ್ಕೆ ಎರಡು ತಲೆ, ನಾಲ್ಕು ಕಾಲು, ಎಂಟು ಕೈ ಎಷ್ಟೋ ಹೊಟ್ಟೆ. ಹೀಗೆ ವಿಚಿತ್ರವಾದ ಮಗು ಹುಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ. ಈ ಮಗು ಬಹಳ ದಿನ ಉಳಿಯಲ್ಲ. ವಿಚಿತ್ರವಾಗಿ ಹುಟ್ಟಿರುವ ಮಗುವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

    ಸಚಿವ ಸಂಪುಟ ಬುಧವಾರ ರಚನೆ ಮಾಡುತ್ತೇವೆ. ಬಹಳಷ್ಟು ಜನ ಮಂತ್ರಿಗಿರಿಗಾಗಿ ಕಾಯುತ್ತಿದ್ದಾರೆ ಅಷ್ಟೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಸಮನ್ವಯ ಸಮಿತಿ ರಚನೆ ಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿದ್ದಾರೆ. ಸಮನ್ವಯ ಸಮಿತಿ ಯಾಕೆ ಬೇಕು ಅಂತ ದೇವೆಗೌಡರು ಹೇಳುತ್ತಿದ್ದಾರೆ. ಆರಂಭದಲ್ಲೇ ಅಪಸ್ವರವೆತ್ತಿದ್ದ ಕಾಂಗ್ರೆಸ್ ದಿನೇ ದಿನೇ ಷರತ್ತುಗಳನ್ನು ಹಾಕುತ್ತಿದೆ. ಕಾಂಗ್ರೆಸ್ ನಾಯಕರು ಜೆಡಿಎಸ್ ಮೇಲೆ ಸವಾರಿ ಮಾಡಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.