Tag: Skin Disease

  • ವಿಚಿತ್ರ ಕಾಯಿಲೆಯಿಂದ ಜೀವಂತವಾಗಿದ್ದಾಗಲೇ ಕೊಳೆಯುತ್ತಿದೆ ಯುವಕನ ದೇಹ

    ವಿಚಿತ್ರ ಕಾಯಿಲೆಯಿಂದ ಜೀವಂತವಾಗಿದ್ದಾಗಲೇ ಕೊಳೆಯುತ್ತಿದೆ ಯುವಕನ ದೇಹ

    – ಕಿಮ್ಸ್ ಆಸ್ಪತ್ರೆಗೆ ದಾಖಲು

    ಹುಬ್ಬಳ್ಳಿ: ವಿಚಿತ್ರ ಕಾಯಿಲೆಯಿಂದ ಯುವಕನೊಬ್ಬ ಜೀವಂತವಾಗಿ ಕೊಳೆಯುತ್ತಿರುವ ಘಟನೆ ಹಳೆ ಹುಬ್ಬಳ್ಳಿಯ ಆನಂದ ನಗರದ ಬೆಳಕಿಗೆ ಬಂದಿದೆ.

    ರೋಗಕ್ಕೆ ತುತ್ತಾದ ಯುವಕನನ್ನು ಇರ್ಫಾನ್ ಮನಿಯಾರ (22) ಎಂದು ಗುರುತಿಸಲಾಗಿದೆ. ಈತ ವಿಚಿತ್ರವಾದ ಚರ್ಮರೋಗ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಕಳೆದ ಎರಡು ತಿಂಗಳ ಹಿಂದೆ ಕುತ್ತಿಗೆಯ ಭಾಗಕ್ಕೆ ಮೊಡವೆಗಳು ಕಾಣಿಸಿಕೊಂಡಿದ್ದವು. ಆದರೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಎಷ್ಟೇ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣ ಮನೆಯಲ್ಲೇ ಉಳಿದುಕೊಂಡಿದ್ದ.

    ಕಳೆದ ಕೆಲ ದಿನಗಳಿಂದ ರೋಗ ಜಾಸ್ತಿಯಾಗಿ ದೇಹದ ಭಾಗಗಳಲ್ಲಿ ಕೊಳೆಯುವ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ ದೇಶಾದ್ಯಂತ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಿವೆ. ಹೀಗಾಗಿ ಕೈಚೆಲ್ಲಿ ಕುಳಿತ ಕುಟುಂಬ ಆಸ್ಪತ್ರೆಗೆ ತೋರಿಸಿರಲಿಲ್ಲ. ಆದರೆ ಈಗ ಸಹಾಯಕ್ಕೆ ಬಂದ ಅಂಗನವಾಡಿ ಶಿಕ್ಷಕಿ ಹಾಗೂ ಕಾಂಗ್ರೆಸ್ ಮುಖಂಡ ಇಮ್ರಾನ್ ಎಲಿಗಾರ, ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಕುಟುಂಬದ ಆಧಾರವಾಗಿದ್ದ ಒಬ್ಬನೇ ಮಗನಿಗೆ ವಿಚಿತ್ರವಾದ ಚರ್ಮರೋಗ ಕಾಣಿಸಿಕೊಂಡಿದ್ದು, ಇಡೀ ಕುಟುಂಬ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

  • ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಚರ್ಮರೋಗ: ಪಬ್ಲಿಕ್ ಟಿವಿ ವರದಿಗೆ ಎಚ್ಚೆತ್ತ ಆರೋಗ್ಯ ಇಲಾಖೆ

    ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಚರ್ಮರೋಗ: ಪಬ್ಲಿಕ್ ಟಿವಿ ವರದಿಗೆ ಎಚ್ಚೆತ್ತ ಆರೋಗ್ಯ ಇಲಾಖೆ

    – ನಾಲ್ಕು ಗ್ರಾಮಗಳಲ್ಲಿ ವೈದ್ಯರ ತಂಡದಿಂದ ನಿರಂತರ ತಪಾಸಣೆ

    ರಾಯಚೂರು: ಜಿಲ್ಲೆಯ ಕೃಷ್ಣಾನದಿ ತೀರದ ಗ್ರಾಮಗಳ ಜನ ಕಲುಷಿತ ನೀರನ್ನ ಬಳಸಿ ವಿವಿಧ ಚರ್ಮರೋಗಗಳಿಗೆ ತುತ್ತಾಗುತ್ತಿರುವ ಕುರಿತ ಪಬ್ಲಿಕ್ ಟಿವಿ ವರದಿಗೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಕಳೆದ ಮೂರು ದಿನಗಳಿಂದ ರಾಯಚೂರು ತಾಲೂಕಿನ ಆತ್ಕೂರು, ಡಿ.ರಾಂಪೂರ್, ಬೂರ್ದಿಪಾಡ್, ಸರ್ಜಾಪುರ ಗ್ರಾಮಗಳಲ್ಲಿ ವೈದ್ಯರ ತಂಡ ಆರೋಗ್ಯ ತಪಾಸಣೆ ಶಿಬಿರ ನಡೆಸಿದೆ.

    ನದಿ ತೀರದ ಗ್ರಾಮಗಳ ಜನರ ಚರ್ಮರೋಗಕ್ಕೆ ಕೃಷ್ಣನದಿ ನೀರು ಹಾಗೂ ಬಿಸಿಲು ಕಾರಣ ಅಂತ ವೈದ್ಯರು ಹೇಳಿದ್ದಾರೆ. ನದಿಯಲ್ಲಿನ ನಿಂತ ನೀರಲ್ಲಿ ಹೆಚ್ಚಾಗಿರುವ ಫಂಗಸ್‍ನಿಂದಾಗಿ ಚರ್ಮರೋಗಗಳು ಕಾಣಿಸಿಕೊಂಡಿವೆ.  ಹೀಗಾಗಿ ವೈದ್ಯರು ಆಂಟಿ ಫಂಗಲ್, ಆಂಟಿ ಸ್ಟೆಮಿ ಮಾತ್ರೆ ಹಾಗು ಮುಲಾಮುಗಳನ್ನು ನೀಡುತ್ತಿದ್ದಾರೆ. ಆರೋಗ್ಯ ಇಲಾಖೆ ಗ್ರಾಮಸ್ಥರಿಗೆ ನೀರನ್ನ ಶುದ್ಧೀಕರಿಸಿ ಬಳಸುವಂತೆ ಜಾಗೃತಿಯನ್ನ ಮೂಡಿಸುತ್ತಿದ್ದಾರೆ.

    ಹೆಚ್ಚು ಕಾಲ ನಿಂತ ನೀರನ್ನ ಬಳಸುವುದಿರಿಂದ ವಾಂತಿ, ಬೇಧಿ, ಅತೀಸಾರದಂತಹ ಕಾಯಿಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ನೀರಿನ ಮಾದರಿಗಳನ್ನ ಸಂಗ್ರಹಿಸಿರುವ ಆರೋಗ್ಯ ಇಲಾಖೆ ಪ್ರಯೋಗಾಯಲಕ್ಕೆ ಕಳುಹಿಸಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾರಾಯಣಪ್ಪ ನದಿ ನೀರನ್ನ ಶುದ್ಧಿಕರಿಸುವಂತೆ ಜಿಲ್ಲಾ ಆರೋಗ್ಯ ಎಂಜಿನಿಯರಿಂಗ್ ವಿಭಾಗಕ್ಕೆ ಪತ್ರ ಬರೆದಿದ್ದಾರೆ. ಗ್ರಾಮ ಪಂಚಾಯ್ತಿಗೆ ನೀರನ್ನ ಶುದ್ದಿಕರಿಸಿ ಕೊಳಾಯಿಗೆ ಬಿಡುವಂತೆ ಸೂಚಿಸಿದ್ದು, ನೀರಿನ ಕ್ಲೋರಿನೇಷನ್ ನಡೆದಿದೆ.

    ಪಬ್ಲಿಕ್ ಟಿವಿ ವರದಿಗೆ ಕೂಡಲೇ ಸ್ಪಂದಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಈಗ ವೈದ್ಯರ ತಂಡ ಚಿಕಿತ್ಸೆಗೆ ಮುಂದಾಗಿದೆ. ಗ್ರಾಮಗಳಿಗೆ ಶುದ್ಧ ನೀರಿನ ಸರಬರಾಜು ಮಾಡುವ ಅಗತ್ಯವಿದೆ.