Tag: Sky Deck

  • ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ

    ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ

    – ಆಕ್ಷೇಪಣೆಗಳಿದ್ದರೆ 7 ದಿನದಲ್ಲಿ ಸಲ್ಲಿಸುವಂತೆ ಬಿಬಿಎಂಪಿ ಮನವಿ

    ಬೆಂಗಳೂರು: ಬೆಂಗಳೂರಿನ (Bengaluru) ಅತಿ ಎತ್ತರದ ಸ್ಕೈಡೆಕ್ (Skydeck) ನಿರ್ಮಾಣಕ್ಕೆ ಬಿಬಿಎಂಪಿ (BBMP) ಜಾಗ ಫೈನಲ್ ಮಾಡಿದೆ. ಹೆಮ್ಮಿಗೆಪುರದಲ್ಲಿ (Hemmigepura) ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧರಿಸಿದ್ದು, ಈ ಜಾಗದಲ್ಲಿ ಗೋಪುರ ನಿರ್ಮಾಣಕ್ಕೆ ಆಕ್ಷೇಪಣೆ ಇದ್ದರೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ನವೆಂಬರ್ 8ರ ಒಳಗಡೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

    ರಾಜ್ಯ ಸರ್ಕಾರ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬ್ರ‍್ಯಾಂಡ್ ಬೆಂಗಳೂರಿನಡಿ ಅತಿ ಎತ್ತರದ ಆಕಾಶ ಗೋಪುರ ನಿರ್ಮಾಣಕ್ಕೆ ಮುಂದಾಗಿದೆ. ಇದಕ್ಕೆ ಹೆಮ್ಮಿಗೆಪುರದಲ್ಲಿ ಜಾಗ ಕೂಡ ಫೈನಲ್ ಆಗಿದೆ. ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣ ಮಾಡೋದಕ್ಕೆ ಆಕ್ಷೇಪಣೆ ಇದ್ದರೆ ನವೆಂಬರ್ 8ರ ಒಳಗಡೆ ಆಕ್ಷೇಪಣೆ ಸಲ್ಲಿಸಲು ಬಿಬಿಎಂಪಿ ಸಾರ್ವಜನಿಕರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿದ್ಯುಕ್ತ ತೆರೆಗೆ ಕ್ಷಣಗಣನೆ – ಭಕ್ತ ಸಾಗರ, ದಾಖಲೆಯ ಆದಾಯ

    ಪ್ರವಾಸೋದ್ಯಮ ಉತ್ತೇಜನದ ಜೊತೆಗೆ ಬೆಂಗಳೂರು ನಗರವನ್ನು ವೀಕ್ಷಣೆ ಮಾಡುವ ಉದ್ದೇಶದಿಂದ ಆಕಾಶ ಗೋಪುರ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿತ್ತು. ಇದಕ್ಕಾಗಿ ಎನ್‌ಜಿಇಎಫ್, ಯಶವಂತಪುರ ಬಳಿಯ ಸಾಬೂನು ಕಾರ್ಖಾನೆ, ವೈಟ್‌ಫೀಲ್ಡ್, ಜಿಕೆವಿಕೆ, ರೇಸ್‌ಕೋರ್ಸ್, ಬೆಂಗಳೂರು ಅರಮನೆ ಆವರಣದ ಜಾಗಗಳನ್ನು ಗುರುತಿಸಲಾಗಿತ್ತು. ಆದರೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೆಚ್‌ಎಎಲ್ ವಿಮಾನ ನಿಲ್ದಾಣ ಸುರಕ್ಷತೆ ದೃಷ್ಟಿಯಿಂದ ಒಪ್ಪಿಗೆ ಕೊಡಲಿಲ್ಲ. ಇದರ ಜೊತೆಗೆ ಎನ್‌ಜಿಇಎಫ್, ಯಶವಂತಪುರ ಬಳಿಯ ಸಾಬೂನು ಕಾರ್ಖಾನೆ, ವೈಟ್‌ಫೀಲ್ಡ್, ಜಿಕೆವಿಕೆ, ರೇಸ್‌ಕೋರ್ಸ್, ಬೆಂಗಳೂರು ಅರಮನೆ ಆವರಣದ ಜಾಗಗಳನ್ನು ಬಳಕೆ ಮಾಡಿಕೊಳ್ಳಲು ನಿರ್ಬಂಧವಿದೆ. ಇದನ್ನೂ ಓದಿ: ಮಂಗಳೂರು| ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರ ಸಾವು

    ಸಾರ್ವಜನಿಕರು ಆಕ್ಷೇಪಣೆ ಜೊತೆಗೆ ಬೆಂಗಳೂರಿನ ನೈಋತ್ಯ ಮತ್ತು ಪಶ್ವಿಮ ಭಾಗದಲ್ಲಿ ಜಾಗ ಇದ್ದರೆ ಸಲಹೆ ಕೂಡ ಕೊಡಿ ಅಂತಾ ಕೇಳಿದೆ. ಸ್ಕೈಡೆಕ್ ನಿರ್ಮಾಣಕ್ಕೆ ಆಕ್ಷೇಪಣೆ ಜೊತೆಗೆ ಸಲಹೆ ಏನು ಬರಲಿವೆ ಎಂದು ಕಾದು ನೋಡಬೇಕಿದೆ.‌ ಇದನ್ನೂ ಓದಿ: Uttar Pradesh| ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ- ಇಬ್ಬರು ಮಕ್ಕಳು ಸಾವು

  • ಬೆಂಗ್ಳೂರಲ್ಲಿ 12,690 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಸಂಪುಟ ಸಭೆ ಅಸ್ತು

    ಬೆಂಗ್ಳೂರಲ್ಲಿ 12,690 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಸಂಪುಟ ಸಭೆ ಅಸ್ತು

    -500 ಕೋಟಿ ರೂ. ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣ

    ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು (Brand Bengaluru) ಕನಸಿನ ಭಾಗವಾಗಿ ಗುರುವಾರ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. 12,690 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳದಿಂದ (Hebbala) ಸಿಲ್ಕ್ ಬೋರ್ಡ್‌ವರೆಗೆ (Silk Board) ಸುರಂಗ ರಸ್ತೆ ನಿರ್ಮಿಸುವ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ಅಲ್ಲದೇ, 500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಲ್ಲಿ 250 ಅಡಿ ಎತ್ತರದ ಸ್ಕೈಡೆಕ್ (Sky Deck) ನಿರ್ಮಾಣಕ್ಕೂ ಅನುಮೋದನೆ ನೀಡಿದೆ.

    ಅಲ್ಲದೇ, ಮೈಸೂರು ಮಿನರಲ್ ಸಂಸ್ಥೆ ಎ.ವೃಂದದ ಅಧಿಕಾರಿಗಳಿಗೆ 4ನೇ ವೇತನ ಆಯೋಗದ ಶಿಫಾರಸ್ಸಿನಂತೆ ಬಾಕಿ ವೇತನ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಎಂಎಸ್‌ಎಂಇ ಕೈಗಾರಿಕೆಗಳಿಗೆ ವೇಗ ನೀಡಲು ಕೈಗಾರಿಕಾ ನಿಯಮಗಳ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಅಲ್ಲದೇ, ಸಂಡೂರಿನಲ್ಲಿರುವ 3,724 ಎಕರೆ ಭೂಮಿಯನ್ನು ಜೆಎಸ್‌ಡಬ್ಲ್ಯೂ ಸಂಸ್ಥೆಗೆ ಕ್ರಯಪತ್ರ ಮಾಡಿಕೊಡಲು ಸಮ್ಮತಿ ಸೂಚಿಸಿದೆ. ಅಲ್ಲದೇ, ಸಹಕಾರಿ ಸಂಸ್ಥೆಗೆ 1,600 ಕೋಟಿ ರೂ. ಸಾಲ ಪಡೆಯಲು ಖಾತರಿಯನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ

    ಏನಿದು ಟನೆಲ್ ರೋಡ್ ಯೋಜನೆ?
    * ಹೆಬ್ಬಾಳ – ಸಿಲ್ಕ್‌ಬೋರ್ಡ್ 18 ಕಿ.ಮೀ ಸುರಂಗ
    * ಬೋಟ್ ಶೈಲಿಯ ಸುರಂಗ ಮಾರ್ಗ ರಸ್ತೆ
    * ಇದು ಡಬಲ್ ಡೆಕ್ ರಸ್ತೆಗಳನ್ನು ಒಳಗೊಂಡಿರುತ್ತದೆ
    * ವಾಹನಗಳಿಗೆ ಐದು ಎಂಟ್ರಿ, ಐದು ಎಕ್ಸಿಟ್ ಪಾಯಿಂಟ್
    * ಎಸ್ಟೀಮ್ ಮಾಲ್, ಪ್ಯಾಲೇಸ್ ಗ್ರೌಂಡ್, ಗಾಲ್ಫ್ ಕ್ಲಬ್, ಲಾಲ್‌ಬಾಗ್, ಸಿಲ್ಕ್ಬೋಡ್ ಬಳಿ ಎಂಟ್ರಿ-ಎಕ್ಸಿಟ್
    * ಉದ್ದೇಶಿತ ನಮ್ಮ ಮೆಟ್ರೋಗೆ ಸಮನಾಂತರವಾಗಿ ಸುರಂಗ ರಸ್ತೆ (ಸರ್ಜಾಪುರ ರೋಡ್-ಹೆಬ್ಬಾಳ ಮೆಟ್ರೋ ಯೋಜನೆ)
    * ಈ ಯೋಜನೆಗೆ ಭೂಸ್ವಾಧೀನದ ಅಗತ್ಯ ಬೀಳಲ್ಲ

    ಮೊದಲು ಈ ಯೋಜನೆಗೆ 8,000 ಕೋಟಿ ರೂ. ಅಂದಾಜು ವೆಚ್ಚ ಎಂದು ಹೇಳಲಾಗಿತ್ತು ಆದರೀಗ ಈ ಮೊತ್ತ ಒಂದೂವರೆ ಪಟ್ಟು ಹೆಚ್ಚಾಗಿದೆ. ಅಂದರೆ 12,690 ಕೋಟಿ ರೂ.ಗೆ ಏರಿಕೆಯಾಗಿದೆ. ಅಂದಾಜು ಒಂದು ಕಿಲೋಮೀಟರ್ ಸುರಂಗ ರಸ್ತೆಗೆ ಅಂದಾಜು 705 ಕೋಟಿ ರೂ. ವೆಚ್ಚವಾಗಲಿದೆ. ಇದನ್ನೂ ಓದಿ: POCSO Case | ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ; ಆ.30ರವರೆಗೆ ಮದ್ಯಂತರ ಆದೇಶ ಮುಂದುವರಿಕೆ

  • ಬೆಂಗಳೂರಲ್ಲಿ ತಲೆ ಎತ್ತಲಿದೆ ಸ್ಕೈ ಡೆಕ್ – 12 ಸಾವಿರ ಕೋಟಿ ವೆಚ್ಚದಲ್ಲಿ 100 ಕಿಮೀ ಫ್ಲೈಓವರ್‌ ನಿರ್ಮಿಸಲು ಪ್ಲ್ಯಾನ್‌!

    ಬೆಂಗಳೂರಲ್ಲಿ ತಲೆ ಎತ್ತಲಿದೆ ಸ್ಕೈ ಡೆಕ್ – 12 ಸಾವಿರ ಕೋಟಿ ವೆಚ್ಚದಲ್ಲಿ 100 ಕಿಮೀ ಫ್ಲೈಓವರ್‌ ನಿರ್ಮಿಸಲು ಪ್ಲ್ಯಾನ್‌!

    ಬೆಂಗಳೂರು: ಸಿಲಿಕಾನ್‌ ಸಿಟಿ ಅಂದ್ರೆನೇ ಥಟ್ ಅಂತ ಕಣ್ಣೆದುರು ಬರೋದು ವಿಧಾನಸೌಧ (Vidhana Soudha), ಹೈಕೋರ್ಟ್, ಕಬ್ಬನ್ ಪಾರ್ಕ್, ಲಾಲ್‌ಬಾಗ್. ಅದು ಬಿಟ್ರೆ, ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರು ತಾರಾಲಯ. ಆದ್ರೆ ಕಾಲ ಬದಲಾಗಿದೆ. ಜನರ ಆಲೋಚನೆಯೂ ಚೇಂಜ್ ಆಗಿದೆ. ಬೆಂಗಳೂರನ್ನ ಮತ್ತಷ್ಟು ಆಕರ್ಷಿಸಲು ಸರ್ಕಾರ ಮುಂದಾಗಿದೆ. ಪ್ರವಾಸಿಗರನ್ನ ಮತ್ತಷ್ಟು ಸೆಳೆಯಲು ಸಿಲಿಕಾನ್ ಸಿಟಿಯಲ್ಲಿ ಅತಿ ಎತ್ತರದ ಸ್ಕೈ ಡೆಕ್ (Sky Deck) ನಿರ್ಮಾಣ ಆಗಲಿದೆ. ಅದರ ಜೊತೆಗೆ ಬ್ರ್ಯಾಂಡ್‌ ಬೆಂಗಳೂರಿಗೆ (Brand Bengaluru) ಮತ್ತಷ್ಟು ಪ್ಲ್ಯಾನ್‌ಗಳು ಸಹ ರೆಡಿಯಾಗಿದೆ.

    ಕಾಲ ಬದಲಾದಂತೆ ಜನರ ಅಭಿರುಚಿಯೂ ಬದಲಾಗ್ತಿದೆ. ಉದ್ಯಾನ ನಗರಿಯ ಸೌಂದರ್ಯವನ್ನು ಬಾನೆತ್ತರದಲ್ಲಿ ನಿಂತು ನೋಡುವ ಅಪೂರ್ವ ಅವಕಾಶವನ್ನ ಜನರಿಗೆ ಒದಗಿಸಲು ಸರ್ಕಾರ (Karnataka Govt) ಮುಂದಾಗಿದೆ. ಅದಕ್ಕಾಗಿಯೇ ಸ್ಕೈ ಡೆಕ್ ಅಂದ್ರೆ ವೀಕ್ಷಣಾ ಗೋಪುರ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದನ್ನೂ ಓದಿ: ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

    ನೈಸ್ ರಸ್ತೆಯಲ್ಲಿ ಸ್ಕೈ ಡೆಕ್ ತಲೆ ಎತ್ತಲಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಬೆಂಗಳೂರು ಶಾಸಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸರ್ಕಾರದಿಂದಲೇ ಸ್ಕೈ ಡೆಕ್ ನಿರ್ಮಾಣವಾಗಲಿದೆ. ಶನಿವಾರ (ಜು.27) ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಬೆಂಗಳೂರು ಶಾಸಕರ ಸಭೆಯಲ್ಲಿ ಸ್ಕೈ ಡೆಕ್ ನಿರ್ಮಾಣಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ನೀಡಿದ್ದಾರೆ. ನೈಸ್ ರಸ್ತೆಯಲ್ಲಿ ಸ್ಕೈ ಡೆಕ್ ನಿರ್ಮಾಣಕ್ಕೆ ಜಾಗ ಫೈನಲ್ ಮಾಡಲಾಗಿದೆ. 400 – 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಅಗತ್ಯ ಜಾಗವನ್ನ ನೈಸ್ ಸಂಸ್ಥೆಯಿಂದ ಬಿಡಿಸಿಕೊಳ್ಳಲು ತೀರ್ಮಾನ ಮಾಡಲಾಗಿದೆ.

    ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ:
    ಒಂದೆಡೆ ಸ್ಕೈ ಡೆಕ್ ನಿರ್ಮಾಣಕ್ಕೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಟನಲ್ ರೋಡ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಮೊದಲ ಹಂತದಲ್ಲಿ ಎಸ್ಟೀಮ್ ಮಾಲ್ ಟು ಸಿಲ್ಕ್ ಬೋರ್ಡ್ ವರೆಗೂ 18.5 ಕಿಮೀ ಟನಲ್ ರೋಡ್ ನಿರ್ಮಾಣ ಮಾಡಲಾಗುತ್ತದೆ. ಟನಲ್ ರೋಡ್‌ಗೆ ಕೆಲವು ಕಡೆ ಭೂಸ್ವಾಧೀನ ಅವಶ್ಯಕತೆ ಇದೆ. ಭೂಸ್ವಾಧೀನಕ್ಕೂ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ಪೂರ್ವ ಪಶ್ಚಿಮ ಭಾಗದಲ್ಲಿ 2ನೇ ಹಂತದಲ್ಲಿ ಮತ್ತೊಂದು ಟನಲ್ ರೋಡ್ ನಿರ್ಮಾಣ ಮಾಡಲು ಚರ್ಚೆಯೂ ಸಹ ನಡೆದಿದೆ. ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗಕ್ಕಾಗಿ ಇನ್ಮುಂದೆ ಭೂಸ್ವಾಧೀನ ಇಲ್ಲ. ಭೂಸ್ವಾಧೀನ ಬದಲಿಗೆ ಡಬಲ್ ಡಕ್ಕರ್ ರಸ್ತೆಗಳನ್ನ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುತ್ತದೆ. ಪಾಲಿಕೆ ಮತ್ತು ಮೆಟ್ರೋದವರೇ ಈ ಪ್ರಾಜೆಕ್ಟ್‌ಗೆ ಹಣ ಖರ್ಚು ಮಾಡಲಿವೆ. ಇನ್ನು ಸಿಗ್ನಲ್ ಫ್ರೀ ಕಾರಿಡಾರ್‌ಗೆ 100 ಕಿಮೀ ಫ್ಲೈಓವರ್‌ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಫ್ಲೈಓವರ್‌ ನಿರ್ಮಾಣಕ್ಕೆ 12 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತೆ. ಕಸ ಸಮಸ್ಯೆ ನಿವಾರಣೆಗೆ ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದಲ್ಲಿ 4 ಜಾಗ ಗುರುತಿಸಲಾಗಿದೆ. ಪ್ರತಿ ಭಾಗದಲ್ಲಿ 100 ಎಕರೆ ಜಾಗದಲ್ಲಿ ಕಸ ಡಂಪಿಂಗ್ ಮಾಡುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಇನ್ನು ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಜೊತೆಗೆ ಎಲ್ಲಾ ಶಾಸಕರು ವಿಶೇಷ ಅನುದಾನಕ್ಕೆ ಬೇಡಿಕೆ ಇಟ್ಟರು. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ಡಿಸಿಎಂ ಶಾಸಕರಿಗೆ ನೀಡಿದ್ದಾರೆ. ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು