ಮೈಸೂರು: ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ (Tippu Sultan Controversy) ಗರಿಗೆದರುವ ಸೂಚನೆ ಸ್ಪಷ್ಟವಾಗಿದೆ. ಈ ವಿವಾದಕ್ಕೆ ಮತ್ತೆ ಮೈಸೂರಿನ ರಂಗಾಯಣವೇ (Mysore Rangayana) ವೇದಿಕೆ ಆಗ್ತಿದೆ. ಇದೇ ತಿಂಗಳ ನವೆಂಬರ್ 20 ರಿಂದ ಮೈಸೂರಿನ ರಂಗಾಯಣದಲ್ಲಿ `ಟಿಪ್ಪು ನಿಜ ಕನಸುಗಳು’ ಎಂಬ ನಾಟಕ (Drama) ಪ್ರದರ್ಶನವಾಗಲಿದೆ.
ಟಿಪ್ಪುವನ್ನು ಹೆಜ್ಜೆ ಹೆಜ್ಜೆಗೂ ವಿರೋದಿ ಸುತ್ತಾ ಬಂದಿರುವ ಮೈಸೂರು ರಂಗಾಯಣದ (Mysore Rangayana) ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ (Addanda C Cariappa) `ಟಿಪ್ಪು ನಿಜ ಕನಸುಗಳು’ ಎಂಬ ನಾಟಕ ಬರೆದು ರಂಗಾಯಣ ಕಲಾವಿದರ ಮೂಲಕ ಅದನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ನವೆಂಬರ್ 20 ರಿಂದ ಇದರ ಪ್ರಥಮ ಪ್ರದರ್ಶನ ಶುರುವಾಗಲಿದೆ. ಒಟ್ಟು ಮೂರುವರೆ ತಾಸಿನ ನಾಟಕ ಇದು. ನಾಟಕ ಪ್ರದರ್ಶನಕ್ಕೆ ಮುನ್ನ ಈ ನಾಟಕ ಕೃತಿಯನ್ನು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (SL Bhyrappa) ಕೃತಿ ಬಿಡುಗಡೆ ಮಾಡಲಿದ್ದಾರೆ. ಇದನ್ನೂ ಓದಿ: ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ- ಲಲಿತಾ ನಾಯಕ್ಗೆ ಖಾದರ್ ತಿರುಗೇಟು
ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅಡ್ಡಂಡ ಸಿ. ಕಾರ್ಯಪ್ಪ, ಕನ್ನಡವನ್ನು ಕೊಂದ ಮುಸ್ಲಿಂ (Muslims) ಸುಲ್ತಾನ ಟಿಪ್ಪುವನ್ನು ಕನ್ನಡ ಪ್ರೇಮಿ ಎಂದು ಕೆಲವರು ಬಣ್ಣಿಸಿದ್ದಾರೆ. ಟಿಪ್ಪು ವಿಶ್ವಧರ್ಮ ಪ್ರೇಮಿ ಎಂಬಂತೆ ಡೋಂಗಿ ಬುದ್ದಿಜೀವಿಗಳು ಬಿಂಬಿಸಿದ್ದಾರೆ. ಟಿಪ್ಪು ಬಗ್ಗೆ ಅತಿ ರಂಜಿತ ಸುಳ್ಳು ಚರಿತ್ರೆ ಸೃಷ್ಟಿಸಿದ್ದಾರೆ. ಇಂತಹ ಸುಳ್ಳಿನ ಚರಿತ್ರೆಯ ಅಸಲಿಯತ್ತನ್ನು ಬಯಲು ಮಾಡುವುದು ಈ ನಾಟಕದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್ 22 ಹಾಗೂ 23 ರಂದು 2 ದಿನಗಳ ಕಾಲ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹೊಯ್ಸಳ ಸಾಹಿತ್ಯೋತ್ಸವ-2022 (Hoysala Sahityotsava) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹೆಚ್.ಎಲ್.ಮಲ್ಲೇಶಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2 ದಿನಗಳ ಕಾಲ ನಡೆಯುವ ಹೊಯ್ಸಳ ಸಾಹಿತ್ಯೋತ್ಸವವನ್ನು ನಾಡಿನ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಲ್.ಭೈರಪ್ಪ (SL Bhyrappa) ಉದ್ಘಾಟಿಸಲಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ (Chandrashekhara Kambara) ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಆಶಯ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ, ನಾಡಿನ ಹೆಸರಾಂತ ಕವಿಗಳಾದ ಡಾ. ದೊಡ್ಡರಂಗೇಗೌಡ, ಬಿ.ಆರ್.ಲಕ್ಷ್ಮಣರಾವ್, ಶಾಸಕ ಪ್ರೀತಂ ಜೆ. ಗೌಡ, ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್, ಗಿರೀಶ್ ರಾವ್ ಹತ್ವಾರ್ (ಜೋಗಿ) ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಮೊದಲ ದಿನ ಸಂಜೆ 6 ರಿಂದ 7 ರವರೆಗೆ ಡಾ.ಎಸ್.ಎಲ್.ಭೈರಪ್ಪ ಅವರೊಂದಿಗೆ ಸಂವಾದ ನಡೆಯಲಿದ್ದು, ಡಾ. ಪ್ರಧಾನ ಗುರುದತ್ ನಿರ್ವಹಣೆ ಮಾಡಲಿದ್ದಾರೆ. ವಿಜಯ ಹರನ್, ಜೆ.ಜಿ.ರಂಗಸ್ವಾಮಿ, ಸಹನಾ ವಿಜಯಕುಮಾರ್ ಸಂವಾದಕರಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕುಂಭ ಕಳಶ ಹೊತ್ತು ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಶಶಿಕಲಾ ಜೊಲ್ಲೆ
ಅಕ್ಟೋಬರ್ 23 ರಂದು ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಸಮಾರೋಪ ನುಡಿಗಳನ್ನಾಡಲಿದ್ದು, ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಹೆಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್.ಲಕ್ಷ್ಮಣರಾವ್, ಗಿರೀಶ್ ರಾವ್ ಹತ್ವಾರ್ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ ಎಂದು ಮಾಹಿತಿ ನೀಡಿದರು.
2 ದಿನ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು 8 ಸಾಹಿತ್ಯದ ಗೋಷ್ಠಿಗಳು ನಡೆಯಲಿವೆ. 70 ಕ್ಕೂ ಹೆಚ್ಚು ನಾಡಿನ ಹೆಸರಾಂತ ಹಿರಿಯ ಸಾಹಿತಿಗಳು, ಲೇಖಕರು, ವಿಮರ್ಶಕರು, ಯುವ ಬರಹಗಾರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹೊರ ಜಿಲ್ಲೆಯ ನೋಂದಾಯಿತ 200 ಹಾಗೂ ಜಿಲ್ಲೆಯ ನೋಂದಾಯಿತ 600 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶವಿದ್ದು, 250 ರೂ. ನೋಂದಣಿ ಶುಲ್ಕ ನಿಗದಿ ಪಡಿಸಲಾಗಿದೆ. ಹೊರ ಜಿಲ್ಲೆಯವರಿಗೆ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ 2 ದಿನಗಳ ಕಾಲ ಬೆಳಗ್ಗೆ ಉಪಾಹಾರದ ವ್ಯವಸ್ಥೆ, ಮಧ್ಯಾಹ್ನ ಊಟ ಹಾಗೂ ಚಹಾ ವ್ಯವಸ್ಥೆಯನ್ನು ಪರಿಷತ್ತಿನ ವತಿಯಿಂದ ಮಾಡಲಾಗಿದೆ ಎಂದರು.
ಮೊದಲು ನೋಂದಣಿ ಮಾಡಿದವರಿಗೆ ಆದ್ಯತೆ ಮೇರೆಗೆ ಅವಕಾಶ ನೀಡಲಾಗುತ್ತಿದ್ದು, ಜಿಲ್ಲೆಯ ಕನ್ನಡ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಕನ್ನಡ ಭಾಷೆಯ ಪದವಿ ವಿದ್ಯಾರ್ಥಿಗಳು, ಬಿ.ಎಡ್ ವಿದ್ಯಾರ್ಥಿಗಳು, ಪತ್ರಿಕೋದ್ಯಮದ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಯಾವುದೇ ನೋಂದಣಿ ಶುಲ್ಕವಿಲ್ಲದೆ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದರು. ಇದನ್ನೂ ಓದಿ: ದಸರಾ ರಜೆಯಲ್ಲಿ ಶಿಕ್ಷಕನಿಂದ ಶಾಲಾ ಆವರಣದಲ್ಲಿ ಅರಳಿದ ಕಲಾಕೃತಿಗಳು- ಗ್ರಾಮಸ್ಥರ ಮೆಚ್ಚುಗೆ
ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ಆರ್.ಬೊಮ್ಮೇಗೌಡ, ಪ್ರಸನ್ನಕುಮಾರ್, ಗೌರವ ಕೋಶಾಧ್ಯಕ್ಷ ಬಿ.ಎನ್.ಜಯರಾಂ, ಚನ್ನರಾಯಪಟ್ಟಣ ತಾಲೂಕು ಕಸಾಪ ಅಧ್ಯಕ್ಷ ಎಚ್.ಎನ್.ಲೋಕೇಶ್, ಸಕಲೇಶಪುರ ತಾಲೂಕಿನ ಶಾರದಾ ಗುರುಮೂರ್ತಿ, ಹೊಳೆನರಸೀಪುರದ ಪುಟ್ಟೇಗೌಡ, ಆಲೂರಿನ ಗೋಪಾಲಕೃಷ್ಣ, ಹಾಸನ ತಾಲೂಕು ಕಸಾಪ ಅಧ್ಯಕ್ಷ ಮಮತೇಶ್, ಜಿಲ್ಲಾ ಪದಾಧಿಕಾರಿ ಕೆ.ಜಿ.ಸುರೇಶ್ ಹಾಜರಿದ್ದರು.
Live Tv
[brid partner=56869869 player=32851 video=960834 autoplay=true]
ಪರಿಸರಕ್ಕೆ ಹಾನಿ ಮಾಡುತ್ತಿರುವ ಬೆಟ್ಟದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್ನ್ನು ಸಾಧ್ಯವಾದಷ್ಟರ ಮಟ್ಟಿಗೆ ಕೆಡವಬೇಕು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ಗಣ್ಯವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗೆ ನಿರ್ಬಂಧ ಹಾಕಬೇಕು. ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ಗಳನ್ನು ಓಡಿಸಬೇಕು. ಇದನ್ನೂ ಓದಿ: ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್
ಚಾಮುಂಡಿ ಬೆಟ್ಟದಲ್ಲಿ ಅನೇಕ ಗ್ರಾನೈಟ್ ಬಂಡೆಗಳಿವೆ. ಇದು ಬೇಸಿಗೆಯಲ್ಲಿ ಹೆಚ್ಚು ಶಾಖವನ್ನು ಹೊರಸುಸೂತ್ತದೆ. ಇದನ್ನು ತಪ್ಪಿಸಲು ಆ ಪ್ರದೇಶದಲ್ಲಿ ಹೆಚ್ಚು ಗಿಡಗಳನ್ನು ನೆಡಬೇಕು ಮತ್ತು ಅದನ್ನು ಬೆಳೆಸಬೇಕು. ಇದರಿಂದಾಗಿ ಬೇಸಿಗೆಯಲ್ಲೂ ತಂಪಾದ ವಾತಾವರಣವಿರುತ್ತದೆ.
ದೇವಾಲಯದ ಸುತ್ತ ಹಾಗೂ ಬೆಟ್ಟದ ತುದಿಯಲ್ಲಿ ಕಾಂಕ್ರೀಟ್ ಕಾಡನ್ನು ನಿರ್ಮಿಸುವ ಬದಲು ಗಿಡಗಳನ್ನು ನೆಡಬೇಕು. ಇತ್ತೀಚಿನ ದಿನಗಳಲ್ಲಿ ಯಾರೂ ಹಸಿರೀಕರಣದ ಬಗ್ಗೆ ಪ್ರಸ್ತಾಪಿಸದಿರುವುದು ದುರಂತದ ವಿಷಯವಾಗಿದೆ.
ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಉಳಿಯಲು ಅವಕಾಶ ಕೊಡಬೇಕು. ಇನ್ನುಳಿದ ಜನರನ್ನು ನಗರಕ್ಕೆ ಸ್ಥಳಾಂತರಿಸಿ ಅವರಿಗೆ ಪರಿಹಾರವನ್ನು ನೀಡಬೇಕು. ಇದನ್ನೂ ಓದಿ: ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಹೈಟೆಕ್ ವಂಚನೆ
ಮಲ್ಟಿ ಲೆವಲ್ ಪಾರ್ಕಿಂಗ್ನ್ನು ಬೆಟ್ಟದಲ್ಲಿ ಬಳಸುವುದಿಲ್ಲ ಎಂದು ಪರಿಸರವಾದಿಗಳಿಗೆ ಭರವಸೆ ನೀಡಿದ್ದರೂ, ಅಧಿಕಾರಿಗಳು ಅದನ್ನು ನಿರ್ಲಕ್ಷಿಸುತ್ತಿರುವುದು ನನಗೆ ಬೇಸರ ತಂದಿದೆ.
ಬೆಟ್ಟದ ವಾತಾವರಣವೂ ಧ್ಯಾನ ಮಾಡಲು ಹಾಗೂ ಮನಸ್ಸಿಗೆ ನೆಮ್ಮದಿಯನ್ನು ನೀಡುವ ಸ್ಥಳವಾಗಬೇಕು. ಆದರೆ ಬೆಟ್ಟದ ತುದಿಯನ್ನು ವಾಣಿಜ್ಯ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಇದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೈಸೂರು: ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಇದಕ್ಕೆ ಕಾರಣ ಇಂದಿನಿಂದ ಆರಂಭವಾಗುವ ದಸರಾ ಮಹೋತ್ಸವ.
ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ ಆಚರಣೆಗಳನ್ನು ಜಗತ್ತಿಗೆ ತೋರ್ಪಡಿಸುವ ಆಚರಣೆ ಅಂದರೆ ಅದೇ ಮೈಸೂರು ದಸರಾ ಮಹೋತ್ಸವ. ಇಂದಿನಿಂದ ಮೈಸೂರಿನಲ್ಲಿ ದಸರಾ ಮೆರಗು ತುಂಬಲಿದೆ. ಈ ಮೆರಗಿಗೆ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಇಂದು ಬೆಳಗ್ಗೆ 9.39ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ನಾಡ ಅದಿ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಂಪುಟದ ಸಚಿವರುಗಳು, ಸಂಸದರು, ಶಾಸಕರು ಸೇರಿಂದತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.
ಅರಮನೆಯಲ್ಲಿ ರಾಜಪರಂಪರೆಯ ನವರಾತ್ರಿ ಉತ್ಸವಕ್ಕೂ ಇವತ್ತು ಚಾಲನೆ ಸಿಗಲಿದೆ. ಬೆಳಗ್ಗೆ 5:10 ರಿಂದ 5:30ರ ನಡುವೆ ರತ್ನಖಚಿತ ಆಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 8:05 ರಿಂದ 8:55ರ ನಡುವೆ ಅರಮನೆ ಒಳ ಆವರಣದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಕಂಕಣಧಾರಣೆ ಮಾಡಲಾಗುತ್ತದೆ. ಬೆಳಗ್ಗೆ 9:30ಕ್ಕೆ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿದ್ದು, ಬೆಳಗ್ಗೆ 9:50 ರಿಂದ 10:35 ಕಳಸ ಪೂಜೆ ನೆರವೆರಿಸಲಾಗುತ್ತದೆ. ನಂತರ ಸಿಂಹಾಸನರೋಹಣ ಮಾಡುವ ಮೂಲಕ ಖಾಸಗಿ ದರ್ಬಾರ್ ನಡೆಯಲಿದೆ. ಬಳಿಕ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಚಾಮುಂಡೇಶ್ವರಿ ತರಲಾಗುವುದು. ಈ ಮೂಲಕ ಮೊದಲ ದಿನದ ಅರಮನೆ ಕಾರ್ಯಕ್ರಮ ಮುಕ್ತಾಯವಾಗುತ್ತದೆ.
ಇಂದಿನಿಂದ 10 ದಿನಗಳ ಕಾಲ ಮೈಸೂರು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿರುತ್ತದೆ. ಅರಮನೆ ಸೇರಿದಂತೆ ಐತಿಹಾಸಿಕ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹಾಗೂ ಮೈಸೂರಿನ ಬಹುಪಾಲು ರಸ್ತೆಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿರುತ್ತವೆ. ಜೊತೆಗೆ ಕುಸ್ತಿ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆಗಳು, ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಪುಸ್ತಕ ಮೇಳ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾಗೆ ಮತ್ತಷ್ಟು ರಂಗು ತುಂಬಲಿವೆ.
ಮೈಸೂರು: ಈ ಬಾರಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ದಸರಾ ಉದ್ಘಾಟಕರಾಗಿ ಎಸ್.ಎಲ್ ಭೈರಪ್ಪ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಒಂದೆಡೆ ಅತಿವೃಷ್ಟಿ ಇನ್ನೊಂದೆಡೆ ಅನಾವೃಷ್ಟಿಯನ್ನು ರಾಜ್ಯ ಎದುರಿಸುತ್ತಿದೆ. ಹೀಗಾಗಿ ಈ ಬಾರಿ ಅದ್ಧೂರಿಯಾಗಿ ನಾಡಹಬ್ಬವನ್ನು ಆಚರಣೆ ಮಾಡುವುದಿಲ್ಲ. ಆದರೆ ಸಂಪ್ರದಾಯದಂತೆ ದಸರಾವನ್ನು ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಜರ್ಷಿ ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ದಸರಾ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ರೂಪಿಸಿ, ವ್ಯವಸ್ಥಿತವಾಗಿ ಆಯೋಜಿಸಲು ಪೂರ್ವ ಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದರು.
ದಸರಾ ಆಯೋಜನೆಗೆ ಈ ವರ್ಷ 20.50 ಕೋಟಿ ರೂ.ಗಳ ಅನುದಾನ ನೀಡಲಾಗುವುದು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊರರಾಜ್ಯಗಳ ಕಲಾವಿದರನ್ನು ಆಹ್ವಾನಿಸದೇ, ಕೇವಲ ರಾಜ್ಯದ ಪ್ರತಿಭಾವಂತ ಕಲಾವಿದರನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ ಪ್ರಸಾದ್, ಶಾಸಕ ತನ್ವೀರ್ ಸೇಠ್, ರಾಮದಾಸ್, ಎನ್.ಮಹೇಶ್, ಯತೀಂದ್ರ. ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ನಾಗರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿ ಕಾರ್ಯದರ್ಶಿ ಶಿವಯೋಗಿ. ಸಿ. ಕಳಸದ್ ಹಾಗೂ ಮೈಸೂರು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
*ದುಂದುವೆಚ್ಚವಿಲ್ಲದ ಸಾಂಪ್ರದಾಯಿಕ ದಸರಾ ಆಚರಣೆ–ಮುಖ್ಯಮಂತ್ರಿ ಯಡಿಯೂರಪ್ಪ*
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಎಲ್ ಭೈರಪ್ಪ ಅವರು, ನನ್ನನ್ನ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದ್ದು ಸಂತೋಷವಾಗಿದೆ. ಸರ್ಕಾರಕ್ಕೆ ನನ್ನ ಧನ್ಯವಾದ ತಿಳಿಸುತ್ತೇನೆ. ನಾನು ಎರಡು ಮೂರು ಬಾರಿ ಹತ್ತಿರದಿಂದ ದಸರಾ ನೋಡಿದ್ದೇನೆ ಅಷ್ಟೇ. 1949ರಿಂದಲೂ ದಸರಾ ನೋಡುತ್ತಾ ಬಂದಿದ್ದೇನೆ. ಅದರ ಬಗ್ಗೆ ಮಾತನಾಡುವಷ್ಟು ನೆನಪುಗಳು ಇಲ್ಲ. ಆದರೆ ದಸರಾ ಉದ್ಘಾಟಕರನ್ನಾಗಿ ನನ್ನನ್ನ ಆಯ್ಕೆ ಮಾಡಿರುವುದು ಸಂತೋಷ ತಂದಿದೆ ಎಂದು ಖುಷಿಯನ್ನು ಹಂಚಿಕೊಂಡರು.
ಕಳೆದ ವರ್ಷ ಕೊಡಗಿನಲ್ಲಿ ಮಳೆ ಬಂದು ಪ್ರವಾಹ ಉಂಟಾಗಿದ್ದಾಗ ನೀರು ಕೇಳುವ ತಮಿಳುನಾಡಿನಿಂದ ಕೊಡಗಿಗೆ ಹಣ ಕೇಳಿ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಅವರು ನನ್ನ ಪತ್ರಕ್ಕೆ ಉತ್ತರವನ್ನು ಬರೆಯಲಿಲ್ಲ ಅದನ್ನ ಗಂಭೀರವಾಗಿಯೂ ಪರಿಗಣಿಸಲಿಲ್ಲ. ಆದರೂ ಕೂಡ ನಾನು ಈ ಬಾರಿಯೂ ಅದೇ ಒತ್ತಾಯ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಹೆಚ್ಚು ನೆರೆ ಬಂದಿದೆ. ನಮ್ಮ ಬಳಿ ಇಲ್ಲದಿದ್ದಾಗಲೂ ನೀರು ಕೇಳುವ ತಮಿಳುನಾಡಿನ ನಿಲುವು ಏನು ಅಂತ ಕೇಳಿ, ಅವರು ಎಷ್ಟು ಹಣ ನಮ್ಮ ರಾಜ್ಯಕ್ಕೆ ಕೊಡ್ತಾರೆ ಕೇಳಿ. ಈ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದರೆ ನಾಳೆ ಅದು ಉಪಯೋಗ ಆಗಲಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.