Tag: Slaughter

  • ಬಿಎಸ್‍ಎಫ್ ಯೋಧರ ಮೇಲೆ ದಾಳಿ – ಓರ್ವ ಸ್ಮಗ್ಲರ್‌ನ ಹತ್ಯೆ

    ಬಿಎಸ್‍ಎಫ್ ಯೋಧರ ಮೇಲೆ ದಾಳಿ – ಓರ್ವ ಸ್ಮಗ್ಲರ್‌ನ ಹತ್ಯೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಸಿಬ್ಬಂದಿಯು ನಡೆಸಿದ ಎನ್‍ಕೌಂಟರ್‌ನಲ್ಲಿ ಕಳ್ಳಸಾಗಣೆದಾರನೊಬ್ಬನನ್ನು ಹತ್ಯೆಗೈಯಲಾಗಿದೆ.

    ಮೃತ ಕಳ್ಳಸಾಗಾಣಿಕೆದಾರನನ್ನು ಮುರ್ಷಿದಾಬಾದ್ ನಿವಾಸಿ ಭಾರತೀಯ ಪ್ರಜೆ ರೋಹಿಲ್ ಮಂಡಲ್ ಎಂದು ಗುರುತಿಸಲಾಗಿದೆ. ಈ ಕುರಿತು ಬಿಎಸ್‍ಎಫ್ ಅಧಿಕಾರಿಯೊಬ್ಬರು ಮಾತನಾಡಿ, ಕಳ್ಳಸಾಗಣೆದಾರರ ಗುಂಪೋಂದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತೀಕಾರವಾಗಿ ಪಡೆಗಳು ಓರ್ವ ಕಳ್ಳಸಾಗಣೆದಾರನೊಬ್ಬನನ್ನು ಹತ್ಯೆಗೈದಿದ್ದಾರೆ. 141 ಬೆಟಾಲಿಯನ್‍ನ ಬಾರ್ಡರ್ ಔಟ್ ಪೋಸ್ಟ್ ಸಾಗರಪಾರಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಬಿಎಸ್‍ಎಫ್‍ನ ಗುಪ್ತಚರ ಇಲಾಖೆಯಿಂದ ವಿಶ್ವಾಸಾರ್ಹ ಮಾಹಿತಿ ಪಡೆದ ನಂತರ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಅಲರ್ಟ್ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ 10-15 ಕಳ್ಳಸಾಗಾಣಿಕೆದಾರರ ಚಲನವಲನವನ್ನು ಗಮನಿಸಿದ ಪಡೆಗಳು ಗಸ್ತು ತಿರುಗುತ್ತಿದ್ದವರಿಗೆ ಮಾಹಿತಿ ನೀಡಿವೆ. ಸ್ವಲ್ಪ ಸಮಯದ ನಂತರ, ಕಳ್ಳಸಾಗಣೆದಾರರು ಕಲ್ಲುಗಳು ಮತ್ತು ಚೂಪಾದ ಆಯುಧಗಳನ್ನು ಬಳಸಿ ಜವಾನರ ಮೇಲೆ ದಾಳಿ ಮಾಡಿದರು. ಬಳಿಕ ಯೋಧರೂ ಪ್ರತಿದಾಳಿ ಆರಂಭಿಸಿದ್ದಾರೆ. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ

    ಬಿಎಸ್‍ಎಫ್ ಸಿಬ್ಬಂದಿ ಮೊದಲು ಕಳ್ಳಸಾಗಣೆದಾರರನ್ನು ಓಡಿಸಲು ಪ್ರಯತ್ನಿಸಿದರು. ಬಳಿಕ, ಆತ್ಮರಕ್ಷಣೆಗಾಗಿ ತಮ್ಮ ಕೈಯಲ್ಲಿದ್ದ ಆಯುಧವನ್ನು ಬಳಸಲು ಮುಂದಾಗಿದ್ದಾರೆ ಎಂದು ಬಿಎಸ್‍ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇತರ ಕಳ್ಳಸಾಗಣೆದಾರರು ಓಡಿಹೋಗಿದ್ದು, ಸ್ಥಳದಿಂದ 532 ಬಾಟಲ್ ಫೆನ್ಸೆಡಿಲ್ ಅನ್ನು ಯೋಧರು ವಶಪಡಿಸಿಕೊಂಡಿದ್ದಾರೆ.

  • ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 3 ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

    ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭಾರೀ ಕಾರ್ಯಾಚರಣೆಯನ್ನು ಆರಂಭಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್‌ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ.

    ಕಾಶ್ಮೀರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದರು. ಇದನ್ನೂ ಓದಿ:  ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್

    ನಾವು ಕಳೆದ ರಾತ್ರಿ 4-5 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಇದುವರೆಗೆ ಪುಲ್ವಾಮಾದಲ್ಲಿ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್‌ಬಾಲ್ ಎಲ್‍ಇಟಿಯ ಒಬ್ಬ ಭಯೋತ್ಪಾದಕ, ಹಂದ್ವಾರದಲ್ಲಿ ಎಲ್‍ಇಟಿಯ ಮತ್ತೊಬ್ಬ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿಸಿದರು. ಎಲ್ಲಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ. ಇತರ ಸ್ಥಳಗಳಲ್ಲಿಯೂ ಸಂಪರ್ಕವನ್ನು ಸ್ಥಾಪಿಸಲಾಗುವುದು ಅಂತ ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

    ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾಕಲನ್ ಗ್ರಾಮದಲ್ಲಿ ನಿನ್ನೆ ಸಂಜೆ ಮೊದಲ ಎನ್‍ಕೌಂಟರ್ ಪ್ರಾರಂಭವಾಯಿತು. ಅಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಇನ್ನೂ ಇಬ್ಬರು ಉಗ್ರರು ಅಲ್ಲಿಯೇ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

    ಎರಡನೇ ಎನ್‍ಕೌಂಟರ್ ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಕೌಬಾಗ್ ನುನಾರ್ ಪ್ರದೇಶದಲ್ಲಿ ನಡೆದಿದ್ದು, ಅಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಎಲ್‍ಇಟಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಸದ್ಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಬೆಳಗ್ಗೆ ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ, ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ಎನ್‍ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು. ಎನ್‍ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

    ಇದಕ್ಕೂ ಮೊದಲು, ಫೆಬ್ರವರಿ 10 ರಂದು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಅದರಲ್ಲಿ ಇಬ್ಬರು ಎಲ್‍ಇಟಿ ಭಯೋತ್ಪಾದಕರು ಪುಲ್ವಾಮಾದ ಬಟ್ಪೋರಾ ಪ್ರದೇಶದಲ್ಲಿ ಮತ್ತು ಶ್ರೀನಗರದ ಹಜರತ್ಬಾಲ್ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ತಿಳಿದು ಬಂದಿದೆ.

    ಈ ವರ್ಷ ಕಾಶ್ಮೀರದಲ್ಲಿ 20 ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಕಾರ್ಯಗತಗೊಳಿಸಲಾಗಿದೆ. ಭದ್ರತಾ ಪಡೆಗಳು ಮೂವರು ಉನ್ನತ ಕಮಾಂಡರ್‍ಗಳು ಮತ್ತು 9 ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ 35 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

    ಅದಲ್ಲದೆ ಭದ್ರತಾ ಪಡೆಗಳು ಈ ವರ್ಷ 16 ಸಕ್ರಿಯ ಭಯೋತ್ಪಾದಕರು ಮತ್ತು ಮೂರು ಡಜನ್‍ಗಿಂತಲೂ ಹೆಚ್ಚು ಭಯೋತ್ಪಾದಕರ ಸಹಚರರನ್ನು ಜೀವಂತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

     

  • ಇರಾಕ್ ಏರ್‌ಸ್ಟ್ರೈಕ್ – 6 ಐಸಿಸ್‌ ಉಗ್ರರ ಹತ್ಯೆ

    ಇರಾಕ್ ಏರ್‌ಸ್ಟ್ರೈಕ್ – 6 ಐಸಿಸ್‌ ಉಗ್ರರ ಹತ್ಯೆ

    ಬಾಗ್ದಾದ್: ಇರಾಕ್‍ನ ಪೂರ್ವ ಪ್ರಾಂತ್ಯದ ದಿಯಾಲಾದಲ್ಲಿ ಶನಿವಾರ ನಡೆದ  ಏರ್‌ಸ್ಟ್ರೈಕ್  ದಾಳಿಯಲ್ಲಿ ಐಎಸ್ ಸ್ಥಳೀಯ ನಾಯಕ ಸೇರಿದಂತೆ ಉಗ್ರಗಾಮಿ ಇಸ್ಲಾಮಿಕ್ ಸ್ಟೇಟ್ (ಐಸಿಸ್‌)  ಗುಂಪಿನ 6 ಉಗ್ರರು ಹತರಾಗಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ.

    ಗುಪ್ತಚರ ವರದಿಗಳ ಆಧಾರದ ಮೇಲೆ, ಇರಾಕಿನ ಯುದ್ಧ ವಿಮಾನಗಳು ದಿಯಾಲಾ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಉಧೈಮ್ ಪ್ರದೇಶದಲ್ಲಿ ಐಎಸ್ ಸ್ಥಾನದ ಮೇಲೆ ಏರ್‌ಸ್ಟ್ರೈಕ್ ದಾಳಿ ನಡೆಸಿವೆ. ಈ ದಾಳಿಯಲ್ಲಿ ಸ್ಥಳೀಯ ಐಎಸ್ ನಾಯಕ ಸೇರಿದಂತೆ 6 ಐಎಸ್ ಉಗ್ರರು ಹತರಾಗಿದ್ದಾರೆ ಎಂದು ಮೊಹಮ್ಮದ್ ಹೇಳಿದ್ದಾರೆ. ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

    ಐಸಿಸ್‌ ಉಗ್ರಗಾಮಿಗಳು ಈ ಹಿಂದೆ ನಿಯಂತ್ರಿಸಿದ್ದ ಪ್ರಾಂತ್ಯಗಳು ಕಳೆದ ತಿಂಗಳುಗಳಲ್ಲಿ ಅವರ ತೀವ್ರವಾದ ಉಗ್ರಗಾಮಿ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ. ಅವರನ್ನು ಬೇಟೆಯಾಡಲು ಪದೇ ಪದೇ ಮಿಲಿಟರಿ ಕಾರ್ಯಾಚರಣೆಗಳ ಹೊರತಾಗಿಯೂ 2017 ರಲ್ಲಿ ಇರಾಕಿನ ಪಡೆಗಳು ಐಎಸ್ ಅನ್ನು ಸೋಲಿಸಿದಾಗಿನಿಂದ ಇರಾಕ್‍ನಲ್ಲಿನ ಭದ್ರತಾ ಪರಿಸ್ಥಿತಿಯು ಸುಧಾರಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿ ಕಲಾವತಿ ಮೌನೇಶ ಬಡಿಗೇರ ದಿಢೀರ್ ರಾಜೀನಾಮೆ

     

  • ಸಂಬಳ ಕೇಳಿದ ಮಹಿಳೆಯನ್ನು ನಡುರಸ್ತೆಯಲ್ಲಿ ಕೂದಲು ಎಳೆದಾಡಿ ಹಲ್ಲೆ ನಡೆಸಿದ್ರು!

    ಸಂಬಳ ಕೇಳಿದ ಮಹಿಳೆಯನ್ನು ನಡುರಸ್ತೆಯಲ್ಲಿ ಕೂದಲು ಎಳೆದಾಡಿ ಹಲ್ಲೆ ನಡೆಸಿದ್ರು!

    ನವದೆಹಲಿ: ಸಂಬಳ ಕೇಳಿದ ಮಹಿಳೆಯ ಮೇಲೆ ಯುವಕರು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲ್ಲೆಗೊಳಗಾದ ಯುವತಿ ಗ್ರೇಟರ್ ನೋಯ್ಡಾದ ನಾಲೇಜ್ ಪಾರ್ಕ್ ಬಳಿಯ ಯುನಿಸೆಕ್ಸ್ ಸಲೂನ್ ನಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿಕೊಂಡಿದ್ದರು.

    ಮೇ 12ರಂದು ಸಲೂನ್ ಮಾಲೀಕನ ಬಳಿ ಮಹಿಳೆ ಸಂಬಳ ಕೇಳಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಮಾಲೀಕ ತನ್ನ ಯುವಕರೊಂದಿಗೆ ಸೇರಿ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಕೂದಲು ಹಿಡಿದು ಯುವಕರು ದೊಣ್ಣೆಯಿಂದ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜನರು ಸಹಾಯಕ್ಕೆ ಮುಂದಾಗದೇ ಮೊಬೈಲ್ ನಲ್ಲಿ ವಿಡಿಯೋ ಸೆರೆಹಿಡಿದಿದ್ದಾರೆ.

    ಸಲೂನ್ ನಲ್ಲಿ ಮಹಿಳೆ ಧರಿಸಿದ್ದ ಟೀ ಶರ್ಟ್ ಎಳೆಯಲು ಪ್ರಯತ್ನಿಸಿದ್ದಾರೆ. ಅಷ್ಟೇ ಅಲ್ಲದೇ ಯುವಕರು ಅತ್ಯಾಚಾರಕ್ಕೂ ಮುಂದಾಗಿದ್ದರು. ಕೊನೆಗೆ ಮಹಿಳೆ ಭಯಗೊಂಡು ಹೊರಗಡೆ ಬಂದಿದ್ದರಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸೋಮವಾರ ಮಹಿಳೆ ನಾಲೇಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಲಭ್ಯವಾಗಿದೆ. ಮಹಿಳೆ ನೀಡಿದ ದೂರು ಆಧರಿಸಿ ಸಲೂನ್ ಮಾಲೀಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿದ್ದ ಮೂವರು ನಾಪತ್ತೆಯಾಗಿದ್ದು, ಅವರನ್ನು ಸಹ ಶೀಘ್ರದಲ್ಲಿಯೇ ಬಂಧಿಸಲಿದ್ದೇವೆ ಎಂದು ಹಿರಿಯ ಪೊಲೀಸ್ ಆಧಿಕಾರಿ ತಿಳಿಸಿದ್ದಾರೆ.

  • ರೆಸಾರ್ಟ್​ನಲ್ಲಿ ಬಡಿದಾಡಿಕೊಂಡ ಇಬ್ಬರು ಕಾಂಗ್ರೆಸ್ ಶಾಸಕರು?

    ರೆಸಾರ್ಟ್​ನಲ್ಲಿ ಬಡಿದಾಡಿಕೊಂಡ ಇಬ್ಬರು ಕಾಂಗ್ರೆಸ್ ಶಾಸಕರು?

    ಬೆಂಗಳೂರು: ಒಗ್ಗಟ್ಟಿನ ಪ್ರದರ್ಶನಕ್ಕೆ ರೆಸಾರ್ಟ್ ಗೆ ಹೋಗಿದ್ದ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಇಬ್ಬರು ಬಡಿದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಹೊಸಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಬೆಳಗಿನ ಜಾವ ಸುಮಾರು ಮೂರು ಗಂಟೆ ಈ ಗಲಾಟೆ ನಡೆದಿದೆ. ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಶನಿವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‍ಪಿ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ.

    ಇಂದು ಬೆಳಗಿನ ಜಾವದವರೆಗೂ ಪಾರ್ಟಿ ನಡೆದಿದೆ. ಅಷ್ಟೇ ಅಲ್ಲದೇ ಇಂದು ವೇಣುಗೋಪಾಲ್ ಜೊತೆ ಪ್ರತ್ಯೇಕ ಸಭೆ ಹಿನ್ನೆಲೆಯಲ್ಲಿ ರೆಸಾರ್ಟ್ ನಲ್ಲಿ ತಂಗಿದ್ದರು. ಆದರೆ ಪಾರ್ಟಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದ್ದು, ಗಲಾಟೆಯಲ್ಲಿ ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಗಲಾಟೆಗೆ ಕಾರಣ?
    ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ತೆಕ್ಕೆಗೆ ಸೇರಲು ಮುಂದಾಗಿದ್ದ ಗಣೇಶ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಮತ್ತು ಕಾಂಗ್ರೆಸ್ ಹೈಕಮಾಂಡ್‍ಗೆ ಆನಂದ್ ಸಿಂಗ್ ಮಾಹಿತಿ ನೀಡಿದ್ದರು. ಆನಂದ್ ಸಿಂಗ್ ನೀಡುತ್ತಿದ್ದ ಮಾಹಿತಿ ಆಧಾರದ ಮೇಲೆಯೇ ಗಣೇಶ್ ರನ್ನ ಕಾಂಗ್ರೆಸ್ ನಾಯಕರುಗಳು ಬೆನ್ನುಹತ್ತಿದ್ದರು. ಈಗ ಸಿಎಲ್‍ಪಿ ಸಭೆಯಲ್ಲಿ ಭಾಗವಹಿಸಿ ವಾಪಾಸ್ ಹೋಗಲು ಗಣೇಶ್ ಬಂದಿದ್ದರು. ಆದರೆ ಅನಿವಾರ್ಯವಾಗಿ ರೆಸಾರ್ಟ್ ನಲ್ಲಿ ಇರಬೇಕಾಯಿತು ಎಂದು ತಿಳಿದು ಬಂದಿದೆ.

    ಇದಕ್ಕೂ ಮುನ್ನ ತಮ್ಮ ಕಾರ್ಯತಂತ್ರದ ಬಗ್ಗೆ, ಆಪರೇಷನ್ ಕಮಲದ ಬಗ್ಗೆ ಆನಂದ್ ಸಿಂಗ್ ಬಳಿ ಗಣೇಶ್ ಹೇಳಿಕೊಂಡಿದ್ದರು. ಗಣೇಶ್ ನೀಡಿದ್ದ ಮಾಹಿತಿಯನ್ನ ಯಥಾವತ್ತಾಗಿ ಕಾಂಗ್ರೆಸ್ ನಾಯಕರಿಗೆ ಆನಂದ್ ಸಿಂಗ್ ತಲುಪಿಸಿದ್ದರು. ಆನಂದ್ ಸಿಂಗ್‍ರಿಂದಾಗಿ ಅನಿವಾರ್ಯವಾಗಿ ಇಲ್ಲೇ ಉಳಿಯಬೇಕಾಯಿತು ಎಂದು ಗಣೇಶ್ ಕೋಪಗೊಂಡಿದ್ದರು. ಇದೇ ವಿಚಾರವಾಗಿ ನಾಲ್ಕು ದಿನದ ಹಿಂದೆ ಫೋನ್ ನಲ್ಲಿ ಶಾಸಕರುಗಳು ಬೈದಾಡಿಕೊಂಡಿದ್ದರು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಕಳೆದ ರಾತ್ರಿ ಪಾರ್ಟಿ ಮಾಡುತ್ತ ಬಳ್ಳಾರಿ ಶಾಸಕರುಗಳು ಕುಳಿತ್ತಿದ್ದರು. ಇದೇ ವಿಚಾರವಾಗಿ ಎಣ್ಣೆ ಏಟಿನಲ್ಲಿ ಶಾಸಕ ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಖಿ ಪ್ರಿಯತಮನ ಮೇಲೆ ಲೈವ್ ಮಾಡಿ ಹಲ್ಲೆ

    ರಾಖಿ ಪ್ರಿಯತಮನ ಮೇಲೆ ಲೈವ್ ಮಾಡಿ ಹಲ್ಲೆ

    – ಇದೊಂದು ಪಬ್ಲಿಸಿಟಿ ಗಿಮಿಕ್ ಅಂದ ಡ್ರಾಮಾ ಕ್ವೀನ್

    ನವದೆಹಲಿ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮಾಜಿ ಪ್ರಿಯಕರ, ಕಾಮಿಡಿಯನ್ ದೀಪಕ್ ಕಲಾಲ್ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಹಲ್ಲೆಕಾರರು ಲೈವ್ ಮಾಡಿ ಹಲ್ಲೆ ನಡೆಸಿದ್ದಾರೆ. ಹರಿಯಾಣದ ಗುರುಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದ್ದು, ಗಾಯಕ ಫಾಜಿಲಪುರಿಯಾ ಅವರ ಮ್ಯಾನೇಜರ್ ನಿಂದಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಹಲ್ಲೆ ನಡೆದಿದ್ದು ಯಾಕೆ?
    ದೀಪಕ್ ಕಲಾಲ್ ಸಾಮಾಜಿಕ ಜಾಲತಾಣದಲ್ಲಿ ಚಿತ್ರ ವಿಚಿತ್ರ ವಿಡಿಯೋಗಳನ್ನು ಅಪ್ಲೋಡ್ ಮಾಡಿಕೊಳ್ಳುತ್ತಿರುತ್ತಾರೆ. ಈ ವಿಡಿಯೋಗಳಿಗೆ ನೆಟ್ಟಿಗರು ಆಕ್ರೋಶ ಹೊರಹಾಕುವುದು ಸಾಮನ್ಯವಾಗಿರುತ್ತೆ. ಇತ್ತೀಚೆಗೆ ನೊಯ್ಡಾಗೆ ತೆರಳಿದ್ದ ದೀಪಕ್ ನಗರದ ಪಾರ್ಕಿಂಗ್ ನಲ್ಲಿ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋವನ್ನು ಇನ್ಸ್ಟಾದಲ್ಲಿ ಅಪ್ಲೋಡ್ ಮಾಡಿಕೊಂಡು, ಮರಗಳಿಗೆ ನೀರು ಹಾಕುತ್ತಿದ್ದೇನೆ ಅಂತಾ ಹೇಳಿದ್ದರು. ನೊಯ್ಡಾದಿಂದ ಹಿಂದಿರುಗುತ್ತಿದ್ದ ವೇಳೆ ಫಾಜಿಲಪುರಿಯಾ ಮ್ಯಾನೇಜರ್ ತನ್ನ ಗೆಳೆಯರೊಂದಿಗೆ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೈದಿದ್ದಾರೆ.

    ದೀಪಕ್ ಮೇಲಿನ ಹಲ್ಲೆ ಕುರಿತು ಪ್ರತಿಕ್ರಿಯಿಸಿರುವ ರಾಖಿ ಸಾವಂತ್, ವಿಷಯ ತಿಳಿದಾಗ ತುಂಬಾನೇ ನೋವಾಯ್ತು. ಆ ವ್ಯಕ್ತಿ ಹಲ್ಲೆ ಮಾಡಿದ್ದು ತಪ್ಪು. ದೆಹಲಿ ಅಲ್ಲಿದ್ದವನನ್ನು ಯಾರು ಎಳೆದುಕೊಂಡು ಹೋಗಿ ಹೊಡೆದ್ರೋ ನನಗೆ ಗೊತ್ತಿಲ್ಲ. ತನ್ನ ಚೇಷ್ಠೆಗಳಿಂದ ಹಲ್ಲೆಗೆ ಒಳಗಾಗಿರುತ್ತಾನೆ. ದೀಪಕ್ ಪ್ರಚಾರಕ್ಕಾಗಿ ಈ ರೀತಿ ವಿಡಿಯೋಗಳನ್ನು ಮಾಡಿರುವ ಸಾಧ್ಯತೆಗಳಿವೆ. ಆತನೋರ್ವ ನಂಬಿಕೆಗೆ ಅನರ್ಹವಾದ ವ್ಯಕ್ತಿ ಅಂತಾ ಹೇಳಿದ್ದಾರೆ.

    ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ದೀಪಿಕಾ ಹಾಗು ಪ್ರಿಯಾಂಕ ಚೋಪ್ರಾ ಸಾಂಸರಿಕ ಜೀವನಕ್ಕೆ ಕಾಲಿರಿಸಿದ್ದರು. ಎಲ್ಲರು ಮದುವೆ ಆಗುತ್ತಿದ್ದು, ನಾನು ದೀಪಕ್ ಕಲಾಲ್ ಎಂಬ ವ್ಯಕ್ತಿಯನ್ನು ವರಿಸಲಿದ್ದೇನೆ ಎಂದು ರಾಖಿ ಸಾವಂತ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು. ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದ ಜೋಡಿ ಮದ್ವೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಕಾಗೆ ಹಾರಿಸಿದ್ದರು. ಕೆಲ ದಿನಗಳ ಬಳಿಕ ರಾಖಿ ಸಾವಂತ್ ಇನ್ಸ್ಟಾದಲ್ಲಿ ವಿಡಿಯೋ ಹಾಕಿಕೊಂಡು, ದೀಪಕ್ ನಡವಳಿಕೆ ಸರಿಯಾಗಿಲ್ಲ. ಸಾರ್ವಜನಿಕವಾಗಿ ನನ್ನ ಜೊತೆ ಅಸಭ್ಯವಾಗಿ ವರ್ತಿಸುತ್ತಾನೆ. ಭಾರತೀಯ ಹೆಣ್ಣಾದ ನನಗೆ ದೀಪಕ್ ವರ್ತನೆ ಸರಿಹೋಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾವಿಬ್ಬರು ಬ್ರೇಕಪ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬಾಂಬ್ ಸಿಡಿಸಿದ್ರು.

    https://www.youtube.com/watch?v=dyv4N8U_T7k

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಕ್ ಕತ್ತರಿಸಲು ಚಾಕು ಕೇಳಿದ್ದಕ್ಕೆ ಮಹಿಳೆ ಮೇಲೆ ವೇಟರ್ ಹಲ್ಲೆ!

    ಕೇಕ್ ಕತ್ತರಿಸಲು ಚಾಕು ಕೇಳಿದ್ದಕ್ಕೆ ಮಹಿಳೆ ಮೇಲೆ ವೇಟರ್ ಹಲ್ಲೆ!

    ಮುಂಬೈ: ಹೋಟೆಲಿನಲ್ಲಿ ಮಹಿಳೆಯೊಬ್ಬರು ತನ್ನ ಮದುವೆ ವಾರ್ಷಿಕೋತ್ಸವ ಆಚರಣೆ ಮಾಡುತ್ತಿದ್ದ ವೇಳೆ ಕೇಕ್ ಕತ್ತರಿಸಲು ಚಾಕು ಕೇಳಿದ್ದಕ್ಕೆ ವೇಟರ್ ಆಕೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಮುಂಬೈನ ಜೆ.ಬಿ ನಗರದಲ್ಲಿ ನಡೆದಿದೆ.

    ನಿಶಾಂತ್ ಗೌಡ(23) ಹಲ್ಲೆ ಮಾಡಿರುವ ವೇಟರ್ ಎಂದು ಗುರುತಿಸಲಾಗಿದೆ. ಫರ್ಜಾನಾ ಮಿರಾತ್(30) ಹಲ್ಲೆಗೊಳಗಾದ ಮಹಿಳೆ. ಭಾನುವಾರ ಬೆಳಗ್ಗೆ ಫರ್ಜಾನಾ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದರು. ಈ ವೇಳೆ ಜೆ.ಬಿ ನಗರದಲ್ಲಿರುವ ಹೋಟೆಲ್‍ಗೆ ತನ್ನ ತಾಯಿಯ ಜೊತೆಗೆ ಫರ್ಜಾನಾ ಹೋಗಿದ್ದಾರೆ. ಆಗ ಅಲ್ಲಿ 6ರಿಂದ 7 ಬಾರಿ ವೇಟರ್‍ನನ್ನು ಪದೇ ಪದೇ ಕರೆದು ತಿಂಡಿ ಆರ್ಡರ್ ಮಾಡಿದ್ದಾರೆ. ಅಲ್ಲದೆ ತನ್ನ ಮದುವೆ ವಾರ್ಷಿಕೋತ್ಸವದ ಆಚರಣೆ ಮಾಡಲು ಫರ್ಜಾನಾ ಕೇಕ್ ಕೂಡ ಆರ್ಡರ್ ಮಾಡಿದ್ದಾರೆ.

    ಬಳಿಕ ಕೇಕ್ ಕತ್ತರಿಸಲು ಚಾಕು ನೀಡದ್ದಕ್ಕೆ ಮತ್ತೆ ನಿಶಾಂತ್‍ನನ್ನು ಕರೆದು ಚಾಕು ನೀಡುವಂತೆ ಕೇಳಿದ್ದಾರೆ. ಮೊದಲೇ ಕೋಪದಲ್ಲಿದ್ದ ವೇಟರ್ ಪದೇ ಪದೇ ಈ ಮಹಿಳೆ ಹಿಂಸೆ ನೀಡುತ್ತಿದ್ದಾಳೆಂದು ಚಾಕು ತಂದು ನೇರವಾಗಿ ಫರ್ಜಾನಾನ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೈದ ಪರಿಣಾಮ ಮಹಿಳೆಯ ಕತ್ತಿನ ಮೇಲೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಘಟನೆ ಕುರಿತು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ. ಆರೋಪಿಯನ್ನು ಜೆ.ಬಿ ನಗರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುವತಿ ಜೊತೆ ಲವ್ವಿ-ಡವ್ವಿ- 4 ವರ್ಷದ ಬಳಿಕ ಯುವಕನ ಮನೆಗೆ ಹೋದಾಗ ಬಯಲಾಯ್ತು ಸತ್ಯ!

    ಯುವತಿ ಜೊತೆ ಲವ್ವಿ-ಡವ್ವಿ- 4 ವರ್ಷದ ಬಳಿಕ ಯುವಕನ ಮನೆಗೆ ಹೋದಾಗ ಬಯಲಾಯ್ತು ಸತ್ಯ!

    ತುಮಕೂರು: ಅನ್ಯಕೋಮಿನ ಹುಡುಗನೊಬ್ಬ ಹಿಂದೂ ಎಂದು ನಂಬಿಸಿ ಯುವತಿಯನ್ನು ಮದುವೆಯಾಗಲು ಯತ್ನಿಸಿ ಒಪ್ಪದಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಖಾಸಗಿ ಹೋಟೆಲ್ ಬಳಿ ನಡೆದಿದೆ.

    ತುಮಕೂರು ನಗರದ ಇಮ್ರಾನ್, ರಮೇಶ್ ಎಂಬ ಹೆಸರಿನೊಂದಿಗೆ ಪರಿಚಯ ಮಾಡಿಕೊಂಡು ವಿಕಲಚೇತನ ಯುವತಿಯನ್ನು ಪ್ರೇಮದ ಬಲೆಗೆ ಬೀಳಿಸಿಕೊಂಡಿದ್ದಾನೆ. ಹೀಗೆ ಇಬ್ಬರೂ ನಾಲ್ಕು ವರ್ಷಗಳ ಪರಸ್ಪರ ಪ್ರೀತಿಸಿದ್ದಾರೆ. ಕೆಲ ತಿಂಗಳ ಹಿಂದೆ ಯುವತಿ ಯುವಕನ ಮನೆಗೆ ಹೋದಾಗ ಆತ ಅನ್ಯಕೋಮಿಗೆ ಸೇರಿದವನು ಎಂದು ತಿಳಿದು ಮದುವೆಗೆ ನಿರಾಕರಿಸಿದ್ದಾಳೆ.

    ಯುವತಿ ಮನೆಯಲ್ಲೂ ಮದುವೆ ತೀವ್ರ ವಿರೋಧವ್ಯಕ್ತವಾಗಿದೆ. ಹಾಗಾಗಿ ಯುವಕ ಇಮ್ರಾನ್ ಮದುವೆಯಾಗದೇ ಇದ್ದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಈ ನಡುವೆ ಯುವತಿ ನಗರದ ಹೋಟೆಲ್ ನಲ್ಲಿ ಊಟಕ್ಕೆ ಬಂದಾಗ ಯುವಕ ಇಮ್ರಾನ್ ಹಾಗೂ ಆತನ ಸ್ನೇಹಿತೆ ಇಬ್ಬರೂ ಸೇರಿ ನಡುರಸ್ತೆಯಲ್ಲಿಯೇ ಯುವತಿಯನ್ನು ಥಳಿಸಿದ್ದಾರೆ.

    ಇವರ ಗಲಾಟೆ ನೋಡಿ ಸುತ್ತುವರಿದ ಜನರು ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಮೂವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

  • ಸೊಂಡಿಲಿನಿಂದ ಬಡಿದು ಕಾರನ್ನು ಜಖಂಗೊಳಿಸಿದ ಕಾಡಾನೆ- ಓರ್ವ ಗಂಭೀರ

    ಸೊಂಡಿಲಿನಿಂದ ಬಡಿದು ಕಾರನ್ನು ಜಖಂಗೊಳಿಸಿದ ಕಾಡಾನೆ- ಓರ್ವ ಗಂಭೀರ

    ಮಂಗಳೂರು: ಕಾಡಾನೆಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ಕಾರು ಜಖಂಗೊಂಡು, ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ.

    ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಯಾತ್ರಾರ್ಥಿಗಳು ಮಾರುತಿ ಓಮ್ನಿ ಕಾರಿನಲ್ಲಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದರು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬಿಳಿನೆಲೆಯ ಸಿಪಿಸಿಆರ್ ಐ ಸಮೀಪ ಕಾಡಾನೆ ರಸ್ತೆ ಹಾದು ಹೋಗುತ್ತಿತ್ತು. ಇದನ್ನು ಕಂಡ ಚಾಲಕ ಕಾರನ್ನು ನಿಲ್ಲಿಸಿದ್ದಾರೆ.

    ಈ ಸಂದರ್ಭದಲ್ಲಿ ಕಾಡಾನೆ ಹಿಂತಿರುಗಿ ಬಂದಿದ್ದು, ಸೊಂಡಿಲಿನಿಂದ ಕಾರಿನ ಮುಂಭಾಗಕ್ಕೆ ಬಡಿದು ಹಾನಿಯುಂಟು ಮಾಡಿದೆ. ಇದೇ ವೇಳೆ ಬಸ್ಸೊಂದು ಹಾರ್ನ್ ಮಾಡುತ್ತಾ ಬಂದ ಕಾರಣ ಕಾಡಾನೆ ಕಾರನ್ನು ಬಿಟ್ಟು ಓಡಿ ಹೋಗಿದೆ. ಇದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಈ ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಇನ್ನುಳಿದವರು ಅಪಾಯದಿಂದ ಪಾರಾಗಿದ್ದಾರೆ.

    https://www.youtube.com/watch?v=SdoaZVpXFIc

  • ಪೊಲೀಸ್ರ ಮುಂದೆಯೇ ಲಾರಿ ಚಾಲಕನಿಗೆ ರೈತರಿಂದ ಧರ್ಮದೇಟು!

    ಪೊಲೀಸ್ರ ಮುಂದೆಯೇ ಲಾರಿ ಚಾಲಕನಿಗೆ ರೈತರಿಂದ ಧರ್ಮದೇಟು!

    ಮೈಸೂರು: ಅಕ್ರಮವಾಗಿ ಕಲ್ಲು ಮಿಶ್ರಿತ ಮರುಳನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನ ರೈತರೇ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ವೇಳೆ ರೈತರಿಗೆ ಧಮ್ಕಿ ಹಾಕಿದ ಚಾಲಕನಿಗೆ ರೈತರೇ ಧರ್ಮದೇಟು ನೀಡಿದ್ದಾರೆ.

    ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿಪುರ ಗ್ರಾಮದ ಕಬಿನಿ ಬಲದಂಡೆ ಬಳಿ ಈ ಘಟನೆ ನಡೆದಿದೆ. ಇಲ್ಲಿ ರಾಜಾರೋಷವಾಗಿ ಕಲ್ಲು ಮಿಶ್ರಿತ ಮಣ್ಣನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ರೈತ ಸಂಘದ ಮುಖಂಡರು, ಸ್ಥಳೀಯ ರೈತರ ಜೊತೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ಆಗ ಮಣ್ಣು ಸಾಗಾಟ ನಡೆಯುತ್ತಿದ್ದದ್ದು ಕಣ್ಣಿಗೆ ಬಿದ್ದಿದೆ. ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ತಿಳಿಸಿ 10 ಕ್ಕೂ ಹೆಚ್ಚು ಲಾರಿ, ಒಂದು ಜೆಸಿಬಿ ಹಾಗೂ ಟಿಪ್ಪರ್ ಗಳನ್ನ ಹಿಡಿದಿದ್ದಾರೆ. ಈ ವೇಳೆ ರೈತರಿಗೆ ಲಾರಿ ಚಾಲಕ ಧಮ್ಕಿ ಹಾಕಿದ್ದಾನೆ. ಇದರಿಂದ ಆಕ್ರೋಶಗೊಂಡ ರೈತರು ಪೊಲೀಸರ ಮುಂದೆಯೇ ಲಾರಿ ಚಾಲಕನಿಗೆ ಧರ್ಮದೇಟು ಕೊಟ್ಟಿದ್ದಾರೆ.

    ಕಬಿನಿ ನಾಲೆಯ ತಡೆಗೋಡೆಗಳನ್ನ ಕೊರೆದು ಮಣ್ಣನ್ನು ಸಾಗಿಸುತ್ತಿದ್ದು, ನಾಲೆಗೆ ಹಾನಿಯಾಗುತ್ತಿದೆ ಎಂದು ದೂರು ನೀಡಿರುವ ರೈತರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.