ಹಾಸನ: ಐತಿಹಾಸಿಕ ಬೇಲೂರಿನಲ್ಲಿ (Belur) ಗಣೇಶನ ವಿಗ್ರಹಕ್ಕೆ (Ganesha Idol) ಚಪ್ಪಲಿ (Slippers) ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್ಗೆ ಕರೆ ನೀಡಲಾಗಿದೆ.
ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ ಕೃತ್ಯದ ಹಿಂದೆ ಯಾರಿದ್ದಾರೆಂದು ತನಿಖೆ ನಡೆಸುವಂತೆ ಒತ್ತಾಯಿಸಿ ಬಂದ್ಗೆ ಕರೆ ಕೊಡಲಾಗಿದೆ. ಇದನ್ನೂ ಓದಿ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನ – ಮಹಿಳೆ ಪೊಲೀಸರ ವಶಕ್ಕೆ
ಬಂದ್ ಹಿನ್ನೆಲೆ ಪಟ್ಟಣದಲ್ಲಿ ಬಹುತೇಕ ಬಂದ್ ವಾತಾವರಣ ನಿರ್ಮಾಣವಾಗಿದೆ. ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ 10:30ರ ಬಳಿಕ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಇದನ್ನೂ ಓದಿ: Hassan | ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು
ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಬಂದಿದ್ದ ಸಂದರ್ಭ ಸುಲ್ತಾನ್ಪುರದ (Sulthanpur) ಚಮ್ಮಾರನ (Cobbler)ಅಂಗಡಿಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೊಲಿದಿದ್ದ ಚಪ್ಪಲಿಗೆ ಭಾರೀ ಬೇಡಿಕೆ ಬಂದಿದೆ. ರಾಗಾ ಹೊಲಿದ ಚಪ್ಪಲಿಗೆ ವ್ಯಕ್ತಿಯೊಬ್ಬರು 10 ಲಕ್ಷ ರೂ.ಗೆ ಬೇಡಿಕೆ ಇಟ್ಟರೂ ಸಹ ಚಮ್ಮಾರ ರಾಮ್ ಚೈತ್ ಚಪ್ಪಲಿಯನ್ನು ಮಾರಾಟ ಮಾಡಲು ನಿರಾಕರಿಸಿದ್ದಾರೆ.
ರಾಹುಲ್ ಗಾಂಧಿ ಭೇಟಿ ಬಳಿಕ ಜನರು ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಆ ಚಪ್ಪಲಿಗಾಗಿ ನನಗೆ ಸಾಕಷ್ಟು ಕರೆಗಳು ಬರುತ್ತಿವೆ. ಆ ಚಪ್ಪಲಿಗೆ 10 ಲಕ್ಷ ರೂ.ವರೆಗೆ ಬೇಡಿಕೆ ಬಂದಿದೆ. ಆದರೆ ನಾನು ಅದನ್ನು ತಿರಸ್ಕರಿಸಿದ್ದೇನೆ. ಆ ಚಪ್ಪಲಿಯನ್ನು ನಾನು ಯಾರಿಗೂ ಮಾರಾಟ ಮಾಡುವುದಿಲ್ಲ ಎಂದು ಚಮ್ಮಾರ ರಾಮ್ ಚೈತ್ ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಸರ್ಕಾರ Vs ರಾಜಭವನ – ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು?
ಜು.26 ರಂದು ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರ ವಿಚಾರಣೆಗೆ ಉತ್ತರ ಪ್ರದೇಶದಕ್ಕೆ ಬಂದಾಗ ಸುಲ್ತಾನ್ಪುರದ ಬೀದಿಬದಿಯಿರುವ ರಾಮ್ ಚೈತ್ ಎಂಬ ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ನೀಡಿದ್ದರು. ಇದನ್ನೂ ಓದಿ: ಅಮ್ಮನ ಸಾವಿನ ಅಗಲಿಕೆಯಿಂದ ಮನನೊಂದು ಅಣ್ಣ, ತಂಗಿ ಆತ್ಮಹತ್ಯೆ
#WATCH | Sultanpur, UP: Shopkeeper claims slippers stitched by LoP Rahul Gandhi are in high demand, price upto Rs. 10 lakhs.
Cobbler Ramchait says, “People are clicking selfies with me. Rahul Gandhi contacted me. I am getting a lot of calls for that slipper… I have been… pic.twitter.com/aky1Vu9smw
ರಾಹುಲ್ ಗಾಂಧಿ ಮತ್ತು ಚಮ್ಮಾರ ರಾಮ್ ಚೈತ್ ನಡುವೆ ಕುಶಲೋಪರಿಯ ಮಾತುಕತೆಯ ಬಳಿಕ ರಾಹುಲ್ ಗಾಂಧಿ ಚಪ್ಪಲಿಯೊಂದಕ್ಕೆ ಹೋಲಿಗೆ ಹಾಕಲು ಪ್ರಯತ್ನಿಸಿದ್ದರು. ಮಾರನೇ ದಿನ ಆ ಚಮ್ಮಾರನಿಗೆ ಹೊಲಿಗೆ ಯಂತ್ರವೊಂದು ಕಳುಹಿಸಿ ಮಾನವೀಯತೆ ಮೆರೆದಿದ್ದರು. ಇದನ್ನೂ ಓದಿ: ವಯನಾಡು ಭೂಕುಸಿತ ದುರಂತ; ಒಂದೇ ಚಿತೆಯಲ್ಲಿ ಅಜ್ಜಿ-ಮೊಮ್ಮಗನ ಅಂತ್ಯಕ್ರಿಯೆ
ಗದಗ: ಸರ್ಕಾರದ ಯೋಜನೆಗಳು ನಾನಾ ಸ್ವರೂಪ ಪಡೆದುಕೊಳ್ಳುತ್ತಿವೆ. ಮಕ್ಕಳಿಗೆ ಶೂ (Shoe) ಬದಲು ಚಪ್ಪಲಿ (Slippers) ನೀಡಲಾಗಿದೆ. ಸರ್ಕಾರದ ದ್ವಂದ್ವ ನಿಲುವಿನ ಆದೇಶದಿಂದ ಮಕ್ಕಳು ಹಾಗೂ ಪಾಲಕರಿಗೆ ಬೇಸರ ಮೂಡಿಸಿದ ಘಟನೆ ಗದಗ (Gadag) ಜಿಲ್ಲೆಯಲ್ಲಿ ನಡೆದಿದೆ.
ಗದಗ ಜಿಲ್ಲೆಯಲ್ಲಿ 612 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. ಆ ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗಾಗಿ 2,36,67,930 ರೂ. ನೀಡಲಾಗಿದೆ. ಇನ್ನು 113 ಸರ್ಕಾರಿ ಪ್ರೌಢಶಾಲೆಗಳಿದ್ದು, 5,28,430 ರೂ. ನೀಡಲಾಗಿದೆ. ಆದರೆ ಲಕ್ಷ್ಮೇಶ್ವರ ಪಟ್ಟಣದ 2 ಶಾಲೆಗಳಿಗೆ ಶೂ, ಸಾಕ್ಸ್ ಬದಲಾಗಿದೆ ಚಪ್ಪಲಿ ಭಾಗ್ಯ ಕಲ್ಪಿಸಲಾಗಿದೆ.
ಲಕ್ಷ್ಮೇಶ್ವರ ಬಸ್ತಿಬಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 2 ಹಾಗೂ ಕೆಂಚಲಪೂರ ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ನೀಡಲಾಗಿದೆ. ಒಂದೇ ಮನೆಯಿಂದ ಬೇರೆ ಬೇರೆ ಶಾಲೆಗೆ ಹೋಗುವ ಮಕ್ಕಳಲ್ಲಿ ಶೂ-ಚಪ್ಪಲಿ ವಿಷಯವಾಗಿ ಗಲಾಟೆಗಳು ನಡೆದಿವೆ ಎನ್ನಲಾಗಿದೆ. ಸರ್ಕಾರ ಶೂ, ಸಾಕ್ಸ್ ವಿಷಯದಲ್ಲಿ ಮಕ್ಕಳಲ್ಲಿ ದ್ವಂದ್ವ ನೀತಿ ಮೂಡಿಸಿದೆ. ಇದು ಖಂಡನೀಯ, ಶಿಕ್ಷಣ ಇಲಾಖೆ ಆದೇಶದಿಂದ ಮಕ್ಕಳಿಗೆ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆ ಎಂಬ ಆರೋಪ ಪಾಲಕರದ್ದಾಗಿದೆ. ಇದನ್ನೂ ಓದಿ: ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!
ಸರ್ಕಾರ ರಾಜ್ಯದ ಆಯಾ ಭಾಗದ ಪರಿಸರಕ್ಕೆ ಹೊಂದಿಕೆ ಆಗುವಂತಹ ಶೂ ಅಥವಾ ಚಪ್ಪಲಿ ಖರೀದಿಸಬಹುದು ಎಂದು ಆದೇಶ ಹೊರಡಿಸಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುತ್ತಿದ್ದು ಅಲ್ಲಿ ಶೂ ಒಳ್ಳೆಯದು. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣಾಂಶ ಹೆಚ್ಚಿರುವ ಹಿನ್ನೆಲೆ ಬೆವರಿನಿಂದ ಶೂ ವಾಸನೆ ಬರುತ್ತವೆ. ಹೀಗಾಗಿ ಚಪ್ಪಲಿ ಖರೀದಿಸಬಹುದು ಎಂದು ಆದೇಶಿಸಲಾಗಿದೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ 2 ಶಾಲೆಗಳಲ್ಲಿ ಶೂ ಭಾಗ್ಯ ಬದಲು ಚಪ್ಪಲಿ ಭಾಗ್ಯ ಕಲ್ಪಿಸಲಾಗಿದೆ. ಉತ್ತಮ ಗುಣಮಟ್ಟದ ಶೂ ಅಥವಾ ಪಾದರಕ್ಷೆಗಳನ್ನು ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿ ಆಯಾ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ವಹಿಸಲಾಗಿದೆ. ಗದಗ ಭಾಗದಲ್ಲಿ ವಾತಾವರಣಕ್ಕೆ ಶೂ ಗಿಂತ ಚಪ್ಪಲಿ ಒಳ್ಳೆಯದೆಂದು ಖರೀದಿಸಲಾಗಿದೆ. ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಲಾಗುತ್ತದೆ. ಶೂ ಅಥವಾ ಚಪ್ಪಲಿ ಖರೀದಿ ನಿರ್ಧಾರ ಎಸ್ಡಿಎಂಸಿ ತೆಗೆದುಕೊಳ್ಳುತ್ತದೆ. ಈ ಹಣ ರಾಜ್ಯ ಕಚೇರಿಯಿಂದ ಬಿಇಒ ಕಚೇರಿಗೆ ನೇರವಾಗಿ ಬಿಡುಗಡೆ ಆಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಜಿಲ್ಲೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮತ್ತೊಂದೆಡೆ ವಿತರಿಸಿದ ಶೂ ಹಾಗೂ ಚಪ್ಪಲಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ. ಒಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮಕ್ಕಳಿಗೆ ಶೂ ಭಾಗ್ಯ ಬದಲು ಚಪ್ಪಲಿ ಭಾಗ್ಯ ಬಂದಿದ್ದು ಮುಜುಗರಕ್ಕೀಡಾಗಿದೆ. ಸರ್ಕಾರ, ಶಿಕ್ಷಣ ಇಲಾಖೆಯ ಈ ನಿಲುವು ಮಕ್ಕಳಿಗೆ ಹಾಗೂ ಪಾಲಕರಿಗೆ ಬೇಸರ ಮೂಡಿಸಿದೆ. ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ
ಬೆಂಗಳೂರು: ಇತ್ತೀಚೆಗೆ 112 ಸಹಾಯವಾಣಿ (112 Helpline) ನಂಬರ್ಗೆ ಸರ್ಕಾರ ವ್ಯಾಪಕ ಪ್ರಚಾರ ಕೊಟ್ಟು, ಯಾವುದೇ ತೊಂದರೆ ಇದ್ದಲ್ಲಿಯೂ ಕರೆ ಮಾಡುವಂತೆ ಸೂಚಿಸಿತ್ತು. ಆದರೆ ಇಲ್ಲೊಬ್ಬ ಮಹಾನುಭಾವ ಮಾಡಿರೋ ಕೆಲಸ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡ ಎನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಎನ್ನಬೇಕೋ ಗೊತ್ತಿಲ್ಲ.
ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರಿರುವ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ಕಾರ್ ಸ್ಟ್ರೀಟ್ನಲ್ಲಿರುವ ಬಾಲಂಭಟ್ಟ ಹಾಲ್ನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಹಿಂತಿರುಗಿ ಬಂದು ನೋಡಿದಾಗ ನನ್ನ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರು ನೀಡಿದ್ದಾನೆ. ವಿಧಿಯಿರದೇ ಪೊಲೀಸ್ ನಿಯಂತ್ರಣ ಕೋಣೆಯ ಸಿಬ್ಬಂದಿ ಸಮೀಪದಲ್ಲಿ ಬೀಟ್ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪ- ಹಲ್ಲೆಗೈದ ನಾಲ್ವರು ಅರೆಸ್ಟ್
ಸ್ಥಳಕ್ಕೆ ತೆರಳಿದ್ದ ಹೊಯ್ಸಳ ಸಿಬ್ಬಂದಿ ದೂರುದಾರನ ಜೊತೆ ಸೇರಿ ಚಪ್ಪಲಿ ಹುಡುಕಾಡಿ ಕೊನೆಗೆ ಚಪ್ಪಲಿ ಸಿಗದ ಕಾರಣ ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿದ್ದಾರೆ. ಇದು ವ್ಯಾಪಕ ಟೀಕೆಗೆ ಕಾರಣವಾಗಿದ್ದು ಪೊಲೀಸ್ ಇಲಾಖೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳೋದು ಎಷ್ಟು ಸರಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಲಕ್ನೋ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಮಾಸುವ ಮುನ್ನವೇ ದಲಿತ (Dalit) ವ್ಯಕ್ತಿಯೊಬ್ಬರನ್ನು ಥಳಿಸಿ, ಚಪ್ಪಲಿ ನೆಕ್ಕಿಸಿರುವ ವಿಕೃತ ಘಟನೆ ಉತ್ತರ ಪ್ರದೇಶದಲ್ಲಿ (Uttar Pradeah) ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಸೋನ್ಭದ್ರಾ ಗ್ರಾಮದಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ, ಚಪ್ಪಲಿ ನೆಕ್ಕಿಸಿ, ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಗುರುವಾರ ಸಂಜೆ ನಡೆದಿರುವ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ವರದಿಗಳ ಪ್ರಕಾರ ಎಲೆಕ್ಟ್ರಿಕಲ್ ಲೈನ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ತೇಜ್ಬಲಿ ಸಿಂಗ್ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದಾಗ ಗ್ರಾಮಸ್ಥರಿಗೆ ಸಹಾಯ ಮಾಡಿದ್ದಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಕೋಪಗೊಂಡಿದ್ದ. ಈ ಹಿನ್ನೆಲೆ ತೇಜ್ಬಲಿ ಸಿಂಗ್ ಸಂತ್ರಸ್ತ ರಾಜೇಂದ್ರನ ಮೇಲೆ ಹಲ್ಲೆ ನಡೆಸಿ, ಬಸ್ಕಿ ಹೊಡೆಸಿದ್ದು ಮಾತ್ರವಲ್ಲದೇ ಕಾಲು ಸಮೇತವಾಗಿ ಚಪ್ಪಲಿಯನ್ನು ನೆಕ್ಕಲು ಒತ್ತಾಯಿಸಿ ಅವಮಾನ ಮಾಡಿದ್ದಾನೆ. ಇದನ್ನೂ ಓದಿ: ಭಾರತದ ಪ್ರೇಮಿಯೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕ್ ಮಹಿಳೆ
ಇದೀಗ ವೀಡಿಯೋ ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಉತ್ತರ ಪ್ರದೇಶದ ಪೊಲೀಸರು 1989ರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕಾಯಿದೆ ಸೇರಿದಂತೆ ಭಾರತೀಯ ದಂಡಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮದುವೆ – ಖತರ್ನಾಕ್ ಕಿಲಾಡಿ ಅರೆಸ್ಟ್
ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ (Fine) ವ್ಯಕ್ತಿಯೊಬ್ಬ ಜಡ್ಜ್ (Judge) ಮೇಲೆ ಚಪ್ಪಲಿ (Slippers) ತೂರಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ. ನ್ಯಾಯಧೀಶರ ಮೇಲೆ ಚಪ್ಪಲಿ ತೂರಿದ ಅರವಿಂದ ನಗರ ನಿವಾಸಿ ಲೋಕೇಶ್ನನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಕಳೆದ 1 ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಬಳಿಕ ಪೊಲೀಸರು ಆತನಿಗೆ ಕೋರ್ಟ್ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದರು. ಇದಕ್ಕೆ ಆರೋಪಿ ಲೋಕೇಶ್ ದಂಡ ಕೂಡ ಕಟ್ಟಿದ್ದ. ದಂಡ ಕಟ್ಟಿದ ತಿಂಗಳ ಬಳಿಕ ಲೋಕೇಶ್ ಇಂದು ಕೋರ್ಟ್ಗೆ ಕುಡಿದು ಬಂದು, ಜಡ್ಜ್ ಮೇಲೆ ಚಪ್ಪಲಿ ತೂರಿದ್ದಾನೆ. ಇದನ್ನೂ ಓದಿ: ರಟ್ಟೀಹಳ್ಳಿ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆಯಿತು RSS ಪಥಸಂಚಲನ
ಕೂಡಲೇ ಅಲ್ಲೇ ಇದ್ದ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೋರ್ಟ್ನಲ್ಲಿ ಆತ, ನಾನು ಏನು ತಪ್ಪು ಮಾಡಿದ್ದೇನೆ ಅಂತ ದಂಡ ಹಾಕಿದ್ದೀರಾ ಎಂದು ಕೂಗಾಡಿದ್ದಾನೆ. ಲೋಕೇಶ್ನ ಈ ವರ್ತನೆ ನೋಡಿದ ಕೂಡಲೇ ಕೋರ್ಟ್ನಲ್ಲಿದ್ದ ವಕೀಲರು ಕೂಡಾ ಆತನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಿವೃತ್ತ ಪ್ರೊಫೆಸರ್ಗೆ ಯುವತಿ ಕಾಲ್ – ಅಶ್ಲೀಲ ವೀಡಿಯೋ ಮಾಡಿ 21 ಲಕ್ಷ ನಾಮ ಹಾಕಿದ್ಲು
Live Tv
[brid partner=56869869 player=32851 video=960834 autoplay=true]
ಲಕ್ನೋ: ರಸ್ತೆಯಲ್ಲಿ ಹೋಗುತ್ತಿದ್ದಾಗ ಚುಡಾಯಿಸಿದ್ದಕ್ಕೆ ವ್ಯಕ್ತಿಯೋರ್ವನಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ (slippers) ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಉತ್ತರ ಪ್ರದೇಶದ (Uttar Pradesh) ಜಲೌನ್ ಜಿಲ್ಲೆಯ (Jalaun district) ಓರೈ ನಗರದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕುಡಿತ ಮತ್ತಿನಲ್ಲಿ ವ್ಯಕ್ತಿ ಮಹಿಳೆಯನ್ನು ಅಸಭ್ಯವಾಗಿ ಚುಡಾಯಿಸಿದ್ದಾನೆ. ಇದರಿಂದ ಚಪ್ಪಲಿಯಿಂದ ಮಹಿಳೆ (Women) ರಪರಪನೇ ಬಾರಿಸಿದ್ದಾಳೆ. ಇದನ್ನೂ ಓದಿ: ಟೆಕ್ಆಫ್ ಆಗಿದ್ದ ವಿಮಾನದಲ್ಲಿ ಕಿಟಕಿ ಒದ್ದು ದಾಂಧಲೆ- ಪಾಕ್ ಪ್ರಯಾಣಿಕ ಅರೆಸ್ಟ್
20 सेकेंड में 40 चप्पल| हर सेकेंड 2 चप्पल मार
उतारा छेड़खानी का भूत।
यूपी के उरई जिले के कोंच कस्बे के एक मोहल्ले में
एक युवक को युवती से छेड़खानी करना भारी पड़ गया। पहले लड़की ने की ज़बरदस्त पिटाई फिर पुलिस ने लिया हिरासत में। pic.twitter.com/x0WoKfy69E
ವೀಡಿಯೋದಲ್ಲಿ ಆರೋಪಿ ಕುಕ್ಕರುಗಾಲಿನಲ್ಲಿ ಕುಳಿತಿದ್ದು, ಮಹಿಳೆ ತನ್ನ ಎರಡು ಕಾಲಿನ ಚಪ್ಪಲಿಯನ್ನು ಎರಡು ಕೈಯಲ್ಲಿ ಹಿಡಿದು ಬಿಟ್ಟುಬಿಡದೇ ಆತನ ಮುಖಕ್ಕೆ ಹೊಡೆದಿದ್ದಾಳೆ. 20 ಸೆಕೆಂಡ್ ಇರುವ ವೀಡಿಯೋದಲ್ಲಿ ಮಹಿಳೆ 40 ಬಾರಿ ಚಪ್ಪಲಿಯಿಂದ ಆತನಿಗೆ ಬಾರಿಸಿರುವುದನ್ನು ಕಾಣಬಹುದಾಗಿದೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಎಸ್ಎಸ್ಎಲ್ಸಿ-ಪಿಯು ಮಂಡಳಿ ವಿಲೀನಕ್ಕೆ ನಿರ್ಧಾರ – ಸಂಪುಟ ಸಭೆಯಲ್ಲಿ ಅನುಮೋದನೆ
ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸುಮಾರು 50,000 ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು, 530ಕ್ಕೂ ಹೆಚ್ಚು ರೀ ಟ್ವೀಟ್ಗಳು ಬಂದಿದೆ. ಅನೇಕ ಮಂದಿ ಮಹಿಳೆಯ ಧೈರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಕಾಮೆಂಟ್ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ನಡುರಸ್ತೆಯಲ್ಲಿ ಮಹಿಳೆಯೊಬ್ಬಳು ತನ್ನ ಮಾವನಿಗೆ ನಿಷ್ಕರುಣೆಯಿಂದ ಚಪ್ಪಲಿಯಿಂದ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಮಹಿಳೆ ತನ್ನ ತಂದೆ ಹಾಗೂ ಸಹೋದರನೊಂದಿಗೆ ಮಾವನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ಚಪ್ಪಲಿಯಲ್ಲಿ ಥಳಿಸಿದ್ದಲ್ಲದೇ ಕಿಂಚಿತ್ತು ಕರುಣೆ ತೋರದೇ ಮೂವರು ಸೇರಿಕೊಂಡು ವೃದ್ಧನನ್ನು ರಸ್ತೆಯಲ್ಲಿ ಧರಧರನೇ ಎಳೆದೊಯ್ದಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ
ಈ ಸಂಪೂರ್ಣ ಘಟನೆಯು ಹೆದ್ದಾರಿಯ ನಡುವಿನ ಛೇದಕದಲ್ಲಿ ಪೊಲೀಸ್ ಚೌಕಿಯ ಸಮೀಪ ಸಂಭವಿಸಿದೆ. ವೀಡಿಯೋದಲ್ಲಿ ಸಹೋದರ ನನ್ನ ಸಹೋದರಿಯ ತಪ್ಪು ಏನಿದೆ. ಅವಳನ್ನೆ ಏಕೆ ಹೊಡೆದೆ ಎಂದು ಪದೇ, ಪದೇ ಕೇಳುತ್ತಾ ಹೊಡೆದಿದ್ದಾನೆ. ಈ ವೇಳೆ ಅಸಹಾಯಕನಾದ ವೃದ್ಧ, ತನಗೆ ಬಿಡುವಂತೆ ಅಂಗಲಾಚಿ ಬೇಡಿಕೊಳ್ಳುತ್ತಿದ್ದರು. ಮೂವರು ಸೇರಿಕೊಂಡು ವೃದ್ಧನಿಗೆ ಹೊಡೆದು ಮತ್ತು ಕಾಲಿನಿಂದ ಒದ್ದಿದ್ದಾರೆ.
ಘಟನೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಗಾಯಾಳು ಸುಖದೇವ್ ಸಿಂಗ್ ಯಾದವ್ ಅವರ ಪುತ್ರ ಬಬ್ಲು ಯಾದವ್ ಅವರು, ತಮ್ಮ ಕಿರಿಯ ಸಹೋದರ ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದು, ಅವರ ಪತ್ನಿ ಪುಷ್ಪಾ, ಸಹೋದರ ಕಮಲೇಶ್ ಮತ್ತು ಅವರ ತಂದೆ ರಾಮ್ ವಿಲಾಸ್ ನಮ್ಮ ತಂದೆಗೆ ಸಂಪೂರ್ಣ ಆಸ್ತಿಯನ್ನು ಪುಷ್ಪಾ ಅವರ ಹೆಸರಿಗೆ ಮಾಡುವಂತೆ ಒತ್ತಾಯಿಸಿದ್ದರು. ನಂತರ ಆಸ್ತಿಯನ್ನು ಹಂಚುವಂತೆ ಒತ್ತಡ ಹೇರಿದ್ದಕ್ಕೆ ನಾನು ಆಸ್ತಿಯನ್ನು ಹಂಚಲು ಸಿದ್ಧನಿಲ್ಲ ಎಂದು ತಿಳಿಸಿದ್ದರು. ಅಲ್ಲದೇ ಆಕೆಗೆ ಇರಲು ಒಂದು ಕೋಣೆಯನ್ನು ಸಹ ನೀಡಲಾಗಿತ್ತು. ಆದರೆ ಅಷ್ಟಕ್ಕೆ ತೃಪ್ತಿ ಕಾಣದೇ, ಮಹಿಳೆ ತನ್ನ ತಂದೆ ಮತ್ತು ಕುಟುಂಬಸ್ಥರನ್ನು ಕರೆಸಿ ನಮ್ಮ ತಂದೆಗೆ ಹೊಡೆಸಿದ್ದಾಳೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪೊಲೀಸ್ ಅಧಿಕಾರಿಯೊಬ್ಬರು ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿಗಳನ್ನು ಉಡುಗೊರೆಯಾಗಿ ನೀಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ.
ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿ ಶಿವಂಗ್ ಶೇಖರ್ ಗೋಸ್ವಾಮಿ ಈ ಕ್ಲಿಪ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ, ಬಂಡಿ ಎಳೆಯುವವನು ರಸ್ತೆಯಲ್ಲಿ ಬರಿಗಾಲಿನಲ್ಲಿ ನಡೆಯುತ್ತಿರುತ್ತಾನೆ. ಕೆಲವು ಸೆಕೆಂಡುಗಳ ನಂತರ, ಪೊಲೀಸ್ ಅಧಿಕಾರಿಯೊಬ್ಬರು ಆ ವ್ಯಕ್ತಿಗೆ ಹೊಸ ಚಪ್ಪಲಿಗಳನ್ನು ಉಡುಗೊರೆಯಾಗಿ ನೀಡುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದು. ಇದನ್ನೂ ಓದಿ: ಟ್ರೈನಿ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – IAS ಅಧಿಕಾರಿ ವಶ
— Shivang Shekhar Goswami 🇮🇳 (@upcopshivang) July 1, 2022
ವೀಡಿಯೋ ಕೊನೆಯಲ್ಲಿ, ಬಂಡಿ ಎಳೆಯುವವನು ಚಪ್ಪಲಿಯನ್ನು ಹಾಕಿಕೊಂಡು ಪೊಲೀಸ್ಗೆ ಧನ್ಯವಾದ ಹೇಳುತ್ತಾನೆ. ಈ ಪೋಸ್ಟ್ ನೋಡಿದ ನೆಟ್ಟಿಗರು, ‘ತುಂಬಾ ಒಳ್ಳೆಯ ಕೆಲಸ,’ ‘ಪೊಲೀಸ್ಗೆ ವಂದನೆಗಳು’, ‘ಮಾನುಕುಲಕ್ಕೆ ಸೇವೆ ಸಲ್ಲಿಸುವುದು ಶ್ರೇಷ್ಠವಾಗಿದೆ’, ‘ಗ್ರೇಟ್ ಹ್ಯುಮಾನಿಟಿ ಸರ್. ನಿನಗೆ ನಮಸ್ಕಾರ’ ಎಂದು ಕಾಮೆಂಟ್ಗಳ ಸುರಿಮಳೆಯೇ ಬರುತ್ತಿದೆ. ಇನ್ನೂ ಕೆಲವರು ಹಾರ್ಟ್ ಎಮೋಜಿಗಳನ್ನು ಕಾಮೆಂಟ್ ಮಾಡಿದ್ದು, ಪೊಲೀಸ್ ಅಧಿಕಾರಿಯ ಔದಾರ್ಯಯನ್ನು ಹೊಗಳಿದ್ದಾರೆ.
ಈ ವೀಡಿಯೋ ಟ್ವಿಟ್ಟರ್ನಲ್ಲಿ 2,57,000ಕ್ಕೂ ಹೆಚ್ಚು ವ್ಯೂ ಮತ್ತು 17,000ಕ್ಕೂ ಹೆಚ್ಚು ಲೈಕ್ಗಳಿಸಿವೆ.
Live Tv
[brid partner=56869869 player=32851 video=960834 autoplay=true]
ರಾಯಚೂರು: ಕೆಸರು ಮೈ ಮೇಲೆ ಹಾರಿದೆ ಎಂದು ಬಸ್ ಚಾಲಕನ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹಲ್ಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಮಸ್ಕಿ ತಾಲೂಕಿನ ಪರಸಾಪುರ ಬಳಿ ಬಸ್ ಚಾಲಕ ಕೆಸರಿದ್ದ ರಸ್ತೆ ಮೇಲೆ ಬಸ್ ಚಲಾಯಿಸಿದ ವೇಳೆ ಅಲ್ಲೇ ಇದ್ದ ಪಿ.ಗೌಡರ ಮೇಲೆ ಕೆಸರು ಹಾರಿದೆ. ಇದರಿಂದ ಸಿಟ್ಟಿಗೆದ್ದ ಗೌಡ, ಕೆಸರಿನ ಮೇಲೆ ಬಸ್ ಚಲಾಯಿಸಿದ್ದಕ್ಕೆ ಕೆಸರು ತನ್ನ ಬಟ್ಟೆಗೆಲ್ಲಾ ಮೆತ್ತಿದೆ ಎಂದು ಗಲಾಟೆ ಮಾಡಿದ್ದಾನೆ.
ಘಟನೆಯಿಂದ ಅವಮಾನಿತನಾದ ಬಸ್ ಚಾಲಕ ಮಸ್ಕಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ಪೊಲೀಸರು ಇಬ್ಬರಿಗೂ ರಾಜಿ ಮಾಡಿಸಿ ದೂರು ದಾಖಲಿಸಿಕೊಂಡಿಲ್ಲ. ಇದರಿಂದ ಚಾಲಕ ಬೇಸರ ವ್ಯಕ್ತಪಡಿಸಿದ್ದಾರೆ.