Tag: slippers

  • ಚಪ್ಪಲಿಯೊಳಗೆ ಬ್ಲ್ಯೂಟೂತ್, ಮೊಬೈಲ್ -ಪರೀಕ್ಷೆಗೆ ಬಂದ ಐವರ ಬಂಧನ

    ಚಪ್ಪಲಿಯೊಳಗೆ ಬ್ಲ್ಯೂಟೂತ್, ಮೊಬೈಲ್ -ಪರೀಕ್ಷೆಗೆ ಬಂದ ಐವರ ಬಂಧನ

    ಜೈಪುರ್: ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರನ್ನು ಬಂಧಿಸಿರುವ ಘಟನೆ ನಡೆದಿದೆ.

    ರಾಜಸ್ಥಾನ ಶಿಕ್ಷಕರ ನೇಮಕಾತಿ ಪರೀಕ್ಷೆಯ (REET) ವೇಳೆ ಅಭ್ಯರ್ಥಿಗಳು ಚಪ್ಪಲಿಯೊಳಗೆ ಬ್ಲೂಟೂತ್ ಹಾಗೂ ಮೊಬೈಲ್ ಫೋನ್ ಅಡಗಿಸಿಟ್ಟುಕೊಂಡು ಚೀಟ್ ಮಾಡುತ್ತಿದ್ದ ವಿಷಯವೊಂದು ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗೋಕರ್ಣದಲ್ಲಿ ಸಮುದ್ರದ ಪಾಲಾಗುತಿದ್ದ ಪ್ರವಾಸಿಗನ ರಕ್ಷಣೆ

    ಮೋಸ ಮಾಡಲು ಮುಂದಾದ ಅಭ್ಯರ್ಥಿಗಳಿಂದ ಒಟ್ಟು 6 ಲಕ್ಷ ಮೌಲ್ಯದ ಚಪ್ಪಲಿಯನ್ನು ವಶಪಡಿಸಿಕೊಳ್ಳಲಾಗಿದೆ. ಚಪ್ಪಲಿಯೊಳಗೆ ಬ್ಲ್ಯೂಟೂತ್ ಮತ್ತು ಮೊಬೈಲ್  ಫೋನ್?ಗಳನ್ನು ಇರಿಸಿಕೊಳ್ಳಲಾಗಿತ್ತು. ಜತೆಗೆ ಅಭ್ಯರ್ಥಿಗಳು ಬ್ಲ್ಯೂಟೂತ್ ಸಹಾಯದಿಂದ ಉತ್ತರವನ್ನು ಹೊರಗಡೆ ನಿಂತಿದ್ದ ವ್ಯಕ್ತಿಯಿಂದ ಕೇಳಿ ತಿಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದರು. ಇದನ್ನೂ ಓದಿ:  ಮತ್ತೆ ಚೀನಾ ಸೈನಿಕರ ಕಿರಿಕ್ – ಭಾರತ ಗಡಿ ಪ್ರವೇಶಿಸಿ ಸೇತುವೆ ಧ್ವಂಸ

    ರಾಜಸ್ಥಾನ ಶಿಕ್ಷಕರ ಅರ್ಹತಾ ನೇಮಕಾತಿ ಪರೀಕ್ಷೆಯು ಭಾನುವಾರ ನಡೆಯಿತು. ರಾಜಸ್ಥಾನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಲು ಖಇಇಖಿ ಉತ್ತೀರ್ಣರಾಗಬೇಕು. ಐವರು ಅಭ್ಯರ್ಥಿಗಳು ಬ್ಲ್ಯೂಟೂತ್ ಇದ್ದ ಚಪ್ಪಲಿಯನ್ನು ಧರಿಸಿ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವ ಮೊದಲೇ ಅವರನ್ನು ತಡೆಯಲಾಗಿದೆ. ಜತೆಗೆ ಈ ದಂಧೆಯಲ್ಲಿ ಪಾಲ್ಗೊಂಡಿದ್ದ ಇತರರನ್ನೂ ಸಹ ಬಂಧಿಸಲಾಗಿದೆ. ಚೀಟಿಂಗ್ ಮಾಡಲು ಬಳಕೆ ಮಾಡಲಾಗುತ್ತಿದ್ದ ಚಪ್ಪಲಿಗಳನ್ನು ಬರೋಬ್ಬರಿ 2 ರಿಂದ 6 ಲಕ್ಷದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

  • ವರನಿಗೆ ವೇದಿಕೆ ಮೇಲೆಯೇ ಚಪ್ಪಲಿಯಲ್ಲಿ ಹೊಡೆದ ತಾಯಿ

    ವರನಿಗೆ ವೇದಿಕೆ ಮೇಲೆಯೇ ಚಪ್ಪಲಿಯಲ್ಲಿ ಹೊಡೆದ ತಾಯಿ

    ಲಕ್ನೋ: ಮದುವೆ ಸಮಾರಂಭದ ವೇದಿಕೆ ಮೇಲೆಯೇ ವರನಿಗೆ ತಾಯಿ ಚಪ್ಪಲಿಯಲ್ಲಿ ಹೊಡೆದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಸೃಜನ್ ಜೊತೆಗಿನ ಮದುವೆ ಮುರಿದಿದ್ದಕ್ಕೆ ವಿಜಯಲಕ್ಷ್ಮಿ ಸ್ಪಷ್ಟನೆ

    ಈ ಘಟನೆ ಉತ್ತರ ಪ್ರದೇಶದ ಹಮೀರ್‍ಪುರ ಜಿಲ್ಲೆಯ ಭರೂವಾ ಸುಮೇರ್‍ಪುರ ಗ್ರಾಮದಲ್ಲಿ ನಡೆದಿದ್ದು, ವಧು ಹಾಗೂ ವರ ಇಬ್ಬರು ಹಾರ ಬದಲಾಯಿಸಿಕೊಳ್ಳುತ್ತಿರುತ್ತಾರೆ. ಈ ವೇಳೆ ಇದಕ್ಕಿದಂತೆ ಮೆಟ್ಟಿಲುಗಳನ್ನು ಹತ್ತಿ ವೇದಿಕೆ ಮೇಲೆ ಬಂದ ವರನ ತಮ್ಮ ಚಪ್ಪಲಿಯನ್ನು ಕಾಲಿನಿಂದ ಬಿಚ್ಚಿ ವರನಿಗೆ ಹೊಡೆಯಲು ಆರಂಭಿಸುತ್ತಾರೆ.

    ಈ ದೃಶ್ಯವನ್ನು ಕಂಡು ಸಮಾರಂಭಕ್ಕೆ ಆಗಮಿಸಿದ್ದ ಅಥಿತಿಗಳಿಗೆ ಆಶ್ಚರ್ಯವಾಗಿದೆ. ನಂತರ ಮಗನು ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಲು ನಿರ್ಧರಿಸಿದ್ದರಿಂದ ಅಸಮಾಧಾನಗೊಂಡ ತಾಯಿ ವರ ಉಮೇಶ್ ಚಂದ್ರರಿಗೆ ಹೊಡೆದಿದ್ದಾರೆ ಎಂಬ ಅಸಲಿ ಸತ್ಯ ಬಹಿರಂಗಗೊಂಡಿದೆ.

    ಕುಟುಂಬಸ್ಥರ ವಿರೋಧದ ನಡುವೆ ಉಮೇಶ್ ಚಂದ್ರರವರು ಅಂಕಿತಾ ಎಂಬವರನ್ನು ನೋಂದಣಿ ಕಚೇರಿಯಲ್ಲಿ ಮದುವೆಯಾಗಿದ್ದಾರೆ. ವಿವಾಹದ ನಂತರ ವಧುವಿನ ತಂದೆ ಜುಲೈ 3 ರಂದು ಜಿಲ್ಲಾ ಸಭಾಂಗಣವೊಂದರಲ್ಲಿ ಸಣ್ಣದಾಗಿ ಫಂಕ್ಷನ್ ಮಾಡಲು ನಿರ್ಧರಿಸಿದ್ದರು. ಆದರೆ ಸಮಾರಂಭಕ್ಕೆ ವರನ ಕುಟುಂಬ ಮತ್ತು ಅವರ ಸಹೋದರರನ್ನು ಆಹ್ವಾನಿಸಿದ ಕಾರಣ ಆಕ್ರೋಶಗೊಂಡು ವರನ ತಾಯಿ ಸ್ಥಳಕ್ಕೆ ಆಗಮಿಸಿ ಮಗನಿಗೆ ಎಲ್ಲರ ಸಮ್ಮುಖ ವೇದಿಯಲ್ಲಿಯೇ ಚಪ್ಪಲಿ ಮೂಲಕ ಹೊಡೆದಿದ್ದಾರೆ.

    https://youtu.be/AWL9p72roF4

  • ತಿಂಗಳಲ್ಲಿ 24 ಗಂಟೆ ಚಪ್ಪಲಿ ಧರಿಸಿ – 4 ಲಕ್ಷ ರೂ. ಸಂಬಳ ಪಡೆಯಿರಿ

    ತಿಂಗಳಲ್ಲಿ 24 ಗಂಟೆ ಚಪ್ಪಲಿ ಧರಿಸಿ – 4 ಲಕ್ಷ ರೂ. ಸಂಬಳ ಪಡೆಯಿರಿ

    – 2 ದಿನ 12 ಗಂಟೆ ಚಪ್ಪಲಿ ಧರಿಸಿದರೆ ಸಂಬಳ

    ಲಂಡನ್: ನೀವು ಕೆಲಸ ಹುಡುಕುತ್ತಿದ್ದೀರಾ, ಇಲ್ಲಿದೆ ಅದ್ಭುತ ಅವಕಾಶ. ಫುಟ್‍ವೇರ್ ಕಂಪನಿಯೊಂದು ಕೆಲಸದ ಜಾಹೀರಾತು ಪ್ರಕಟಿಸಿದ್ದು, ತಿಂಗಳಲ್ಲಿ 24 ಗಂಟೆಗಳ ಕಾಲ ಚಪ್ಪಲಿ ಧರಿಸಿದರೆ 4 ಲಕ್ಷ ರೂ. ಸಂಬಳ ನೀಡುವುದಾಗಿ ಘೋಷಿಸಿದೆ.

    ಬ್ರಿಟನ್‍ನ ಬೆಡ್‍ರೂಮ್ ಅಥ್ಲೆಟಿಕ್ಸ್ ಸಂಸ್ಥೆ ಈ ಭರ್ಜರಿ ಕೆಲಸ ನೀಡುತ್ತಿದ್ದು, ‘ಸ್ಲಿಪ್ಪರ್ ಟೆಸ್ಟರ್’ ಕೆಲಸಕ್ಕೆ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಆಕರ್ಷಕ ಸಂಬಳವನ್ನು ಸಹ ಘೋಷಿಸಿದೆ. ಕಂಪನಿಯ ಇತ್ತೀಚಿನ ಹೊಸ ಚಪ್ಪಲಿ ಹಾಗೂ ಶೂಗಳ ವಿನ್ಯಾಸ ಪರೀಕ್ಷಿಸಲು ಹಾಗೂ ಪರಿಶೀಲಿಸಲು ಮುಂದಾಗಿದ್ದು, ಇದಕ್ಕಾಗಿ ಸ್ಲಿಪ್ಪರ್ ಟೆಸ್ಟರ್ಸ್ ಗಳನ್ನು ಕೆಲಸಕ್ಕೆ ಆಹ್ವಾನಿಸಿದೆ.

    ಕೊರೊನಾ ಕಾರಣದಿಂದ ಕೆಲಸ ಕಳೆದುಕೊಂಡು ಮನೆಯಲ್ಲೇ ಇರುವವರಿಗೆ ಸೂಕ್ತ ಕೆಲಸವಾಗಿದ್ದು, ಅಲ್ಲದೆ ಲಾಕ್‍ಡೌನ್ ಇರುವ ಪ್ರದೇಶದ ಜನರು ಸಹ ಟ್ರೈ ಮಾಡಬಹುದಾಗಿದೆ. ಆದರೆ ಸಂಸ್ಥೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷನಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಕೆಲಸಕ್ಕೆ ಆಯ್ಕೆಯಾದವರು ಕಂಪನಿ ನೀಡುವ ಚಪ್ಪಲಿಗಳನ್ನು ತಿಂಗಳಿಗೆ ಕೇವಲ ಎರಡು ದಿನ, ಪ್ರತಿ ದಿನ 12 ಗಂಟೆಗಳ ಕಾಲ ಧರಿಸಬೇಕು. ಹೀಗೆ ಒಂದು ವರ್ಷ ಕೆಲಸ ಮಾಡಬೇಕು. ಬಳಿಕ ತಮ್ಮ ಅನಿಸಿಕೆ, ಅಭಿಪ್ರಾಯ ತಿಳಿಸಬೇಕು. ಸಂಸ್ಥೆ ಅವರಿಗೆ ಪ್ರತಿ ತಿಂಗಳು ನಾಲ್ಕು ಲಕ್ಷ ರೂ. ಸಂಬಳ ನೀಡಲಿದೆ.

    ಇದು ಉದ್ಯೋಗ ಮಾರುಕಟ್ಟೆಯ ಸಿಂಡ್ರೆಲ್ಲಾ ಎಂದು ಬೆಡ್‍ರೂಮ್ ಅಥ್ಲೆಟಿಕ್ಸ್ ಸಂಸ್ಥೆ ಹೇಳಿದೆ. ಅಲ್ಲದೆ ಲಾಕ್‍ಡೌನ್ ವೇಳೆ ಮಾಡಬಹುದಾದ ಸೂಕ್ತ ಕೆಲಸವಾಗಿದೆ. ವಿದ್ಯಾರ್ಥಿಗಳು, ಪಾರ್ಟ್‍ಟೈಮ್ ಕೆಲಸ ಮಾಡುವವರು ಅಥವಾ ಮನೆಯಲ್ಲೇ ಇರುವ ಪೋಷಕರಿಗೆ ಸರಿಯಾಗುತ್ತದೆ ಎಂದು ಬೆಡ್‍ರೂಮ್ ಅಥ್ಲೆಟಿಕ್ಸ್ ಸಂಸ್ಥಾಪಕ ಹೊವಾರ್ಡ್ ವೆಟರ್ ಹೇಳಿದ್ದಾರೆ. ಈ ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಆಸಕ್ತರು ಬೆಡ್‍ರೂಮ್ ಅಥ್ಲೆಟಿಕ್ಸ್ ವೆಬ್‍ಸೈಟ್‍ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ ನೀವು ಈ ಕೆಲಸಕ್ಕೆ ಯಾಕೆ ಸೂಕ್ತ ವ್ಯಕ್ತಿ ಎಂಬ ಕಾರಣವನ್ನು ನೀಡಬೇಕಿದೆ. ಬಳಿಕ ಸಂಸ್ಥೆ ಇಬ್ಬರನ್ನು ಮಾತ್ರ ಆಯ್ಕೆ ಮಾಡಲಿದೆ.

  • ಕಾಲ್ನಡಿಗೆಯಲ್ಲಿ ತೆರಳ್ತಿದ್ದವರಿಗೆ ಆಹಾರದ ಜೊತೆ ಪಾದರಕ್ಷೆ ನೀಡಿದ ಪೊಲೀಸರು

    ಕಾಲ್ನಡಿಗೆಯಲ್ಲಿ ತೆರಳ್ತಿದ್ದವರಿಗೆ ಆಹಾರದ ಜೊತೆ ಪಾದರಕ್ಷೆ ನೀಡಿದ ಪೊಲೀಸರು

    ಜೈಪುರ: ಕೊರೊನಾ ಲಾಕ್‍ಡೌನ್ ಸಡಿಲಿಕೆ ಮಾಡಿದ ನಂತರ ಅನೇಕ ಪ್ರವಾಸಿ ಕಾರ್ಮಿಕರು ಬೇರೆ ದಾರಿಯಿಲ್ಲದೆ ನಡೆದುಕೊಂಡೇ ತಮ್ಮ ತಮ್ಮ ಗ್ರಾಮಗಳಿಗೆ ತಲುಪುತ್ತಿದ್ದಾರೆ. ಇದೀಗ ಕಾಲ್ನಡಿಗೆಯಲ್ಲಿ ತಮ್ಮ ಮನೆಗಳಿಗೆ ಮರಳುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ರಾಜಸ್ಥಾನ ಪೊಲೀಸರು ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಕಾಲ್ನಡಿಗೆ ಮೂಲಕ ಹೋಗುವ ಕಾರ್ಮಿಕರಿಗೆ ಅನೇಕರು ಊಟ, ನೀರಿನ ಸಹಾಯ ಮಾಡಿದ್ದಾರೆ. ಇದೀಗ ರಾಜಸ್ಥಾನ ಪೊಲೀಸರ ತಂಡವೊಂದು ಕಾರ್ಮಿಕರಿಗೆ ಬಿಸ್ಕೆಟ್ ಮತ್ತು ನೀರಿನ ಬಾಟಲಿಗಳ ಪ್ಯಾಕೆಟ್‍ಗಳನ್ನು ನೀಡಿದ್ದಾರೆ. ಜೊತೆಗೆ ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಚಪ್ಪಲಿಯನ್ನು ಪೂರೈಕೆ ಮಾಡಿದ್ದಾರೆ.

    ಲಾಕ್‍ಡೌನ್‍ನಿಂದ ಉದ್ಯೋಗ ಮತ್ತು ಹಣವಿಲ್ಲದ ಕಾರಣ ಸಾವಿರಾರು ಪ್ರವಾಸಿ ಕಾರ್ಮಿಕರು ಜೈಪುರ-ಆಗ್ರಾ ಹೆದ್ದಾರಿ ಮೂಲಕ ತಮ್ಮ ರಾಜ್ಯಗಳಿಗೆ ಮರಳುತ್ತಿದ್ದರು. ಅದರಲ್ಲೂ ಇಂತಹ ಬಿಸಿಲಿನಲ್ಲಿ ಕಾರ್ಮಿಕರು ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದರು.

    ಈ ವೇಳೆ ಪೊಲೀಸರ ಗುಂಪೊಂದು ಹೆದ್ದಾರಿಯಲ್ಲಿ ನಿಂತು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಹೊಸ ಚಪ್ಪಲಿಗಳನ್ನು ಒದಗಿಸಿದೆ. ಪೊಲೀಸ್ ತಂಡದ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ

    ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ

    ಮುಂಬೈ: ಬಾಲಿವುಡ್‍ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಆರೇ ಶಿಲ್ಪಗೇ ಚಪ್ಪಲಿಯನ್ನು ತಿನ್ನುವಂತಹದ್ದು ಏನ್ ಆಗಿದೆ ಅಂತೀದಿದ್ದರಾ? ಶಿಲ್ಪ ತಿಂದಿರುವುದು ಚಪ್ಪಲಿಯನ್ನಲ್ಲ ಬದಲಿಗೆ ಚಪ್ಪಲಿ ಆಕಾರದಲ್ಲಿರುವ ಚಾಕಲೇಟ್ ಕೇಕ್ ಅನ್ನು ಸವಿದಿದ್ದಾರೆ. ಅವರು ಚಪ್ಪಲಿ ರೀತಿಯಲ್ಲಿರುವ ಚಾಕಲೇಟ್ ಕೇಕ್ ಅನ್ನು ತಿನ್ನುತಿರುವ ವಿಡಿಯೋವನ್ನು ಸ್ವತಃ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    https://www.instagram.com/p/B8D3RUDBZ-A/

    ಯೋಗ ಮತ್ತು ಡಯೇಟ್ ಮಾಡಿ ಫಿಟ್ ಅಂಡ್ ಫೈನ್ ಆಗಿರುವ ಶಿಲ್ಪಾ ಅವರು ಚೆನ್ನಾಗಿ ತಿನ್ನುತ್ತಾರೆ. ಹಾಗಾಗಿ ಭಾನುವಾರ ವೀಕೆಂಡ್ ಎಂಜಾಯ್ ಮಾಡಿರುವ ಶಿಲ್ಪಾ ಶೆಟ್ಟಿ ಅವರು, ಚಪ್ಪಲಿ ರೀತಿಯಲ್ಲಿ ತಯಾರಾದ ಚಾಕಲೇಟ್ ಕೇಕ್ ಅನ್ನು ತಿಂದು ಅದನ್ನು ವಿಡಿಯೋ ಮಾಡಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಚಪ್ಪಲಿಯನ್ನು ತಿನ್ನುತ್ತೀರಾ? “ವಿಶೇಷ ಭಾನುವಾರ ವಿಶಿಷ್ಟ ಅಕಾರದ ಚಾಕಲೇಟ್ ಕೇಕ್‍ನೊಂದಿಗೆ” ಎಂದು ಬರೆದುಕೊಂಡಿದ್ದಾರೆ.

    ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ವಿಭಿನ್ನ ವಿಭಿನ್ನ ರೀತಿಯ ಚಾಕಲೇಟ್ ಕೇಕ್. ಆದರೆ ಇದು ಚಪ್ಪಲಿ ಆಕಾರದಲ್ಲಿರುವ ಚಾಕಲೇಟ್. ಇದಕ್ಕೆ ನಾನು ಚಪ್ಪಲಿಯನ್ನು ತಿನ್ನುತ್ತೀರಾ ಎಂದು ಪ್ರಶ್ನಿಸಿದ್ದೆ. ಇದನ್ನು ನಾವು ತಿನ್ನಬಹುದು. ತಿಂದು ನನಗೆ ಇಷ್ಟವಾಯಿತು ಎಂದು ಹೇಳಿ ಸಂಡೇ ಬೆಂಜ್ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

    ಕಳೆದ ತಿಂಗಳ 30 ರಂದು ತನ್ನ ಹುಟ್ಟೂರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ದೇವಿಯ ದರ್ಶನ ಪಡೆದಿದ್ದರು. ಈ ವೇಳೆ ಮಾತನಾಡಿದ್ದ ಅವರು, ಕ್ಷೇತ್ರಕ್ಕೆ ಬರಬೇಕು ಎಂದು ತುಂಬಾ ಆಸೆ ಇತ್ತು. ಕಟೀಲು ದೇವರ ಅನುಗ್ರಹದಿಂದ ನಾನು ಇಷ್ಟೆಲ್ಲ ಸಾಧನೆ ಮಾಡಲು ಸಾಧ್ಯವಾಯಿತು. ಹಾಗಾಗಿ ಬ್ರಹ್ಮಕಲಶದ ಈ ಸಂದರ್ಭದಲ್ಲಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದು ತುಳುವಿನಲ್ಲಿ ಹೇಳಿದ್ದರು.

    ಈ ವೇಳೆ ಕಟೀಲು ಕ್ಷೇತ್ರದ ವತಿಯಿಂದ ನಟಿ ಶಿಲ್ಪಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲೇ ತನ್ನ ಮನೆಯಿರುವ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಿಯ ಪರಮ ಭಕ್ತೆಯಾಗಿದ್ದಾರೆ. ತನ್ನ ಹುಟ್ಟೂರಿಗೆ ಹಾಗೂ ಮಂಗಳೂರಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುವಾಗ, ತಪ್ಪದೇ ಕಟೀಲು ಶ್ರೀ ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ಬಾಲಿವುಡ್‍ನಲ್ಲಿ ಬ್ಯುಸಿ ಇರುವ ಶಿಲ್ಪಾ ಎರಡು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೆಟ್ಟಿ ನಟನೆಯ ನಿಕ್ಕಮ್ಮ ಮತ್ತು ಹಂಗಮಾ-2 ಸಿನಿಮಾಗಳು ಬಿಡುಗಡೆ ಸಿದ್ಧಗೊಳ್ಳುತ್ತಿವೆ.

  • ಮಹಿಳೆಯ ಜೊತೆ ಅನುಚಿತ ವರ್ತನೆ – ನಿವೃತ್ತ ಪ್ರಾಚಾರ್ಯನಿಗೆ ಚಪ್ಪಲಿ ಸೇವೆ

    ಮಹಿಳೆಯ ಜೊತೆ ಅನುಚಿತ ವರ್ತನೆ – ನಿವೃತ್ತ ಪ್ರಾಚಾರ್ಯನಿಗೆ ಚಪ್ಪಲಿ ಸೇವೆ

    ಕೊಪ್ಪಳ: ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ ನಿವೃತ್ತ ಪ್ರಾಚರ್ಯನೊಬ್ಬ ಸಾರ್ವಜನಿಕವಾಗಿ ಚಪ್ಪಲಿ ಏಟು ತಿಂದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳದ ಬಸ್ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಚರ್ಯ ವಿ.ಬಿ ರಡ್ಡೆರ್ ಗೆ ಮಹಿಳೆಯಿಂದ ಚಪ್ಪಲಿಯ ಏಟು ಬಿದ್ದಿದೆ. ದಾರಿಯಲ್ಲಿ ಹೊಗುತ್ತಿದ್ದ ಮಹಿಳೆ ಜೊತೆ ರಡ್ಡೆರ್ ಅನುಚಿತವಾಗಿ ವರ್ತಿಸಿದ್ದಾನೆ.

    ರಡ್ಡೆರ್ ನಡೆಗೆ ಕೋಪಗೊಂಡ ಮಹಿಳೆಯರಿಬ್ಬರು ಸಾರ್ವಜನಿಕರ ಎದುರೇ ಚಪ್ಪಲಿ ಏಟು ನೀಡಿ ಬುದ್ಧಿ ಕಲಿಸಿದ್ದಾರೆ. ಚಪ್ಪಲಿಯಿಂದ ಹೊಡೆದ ಇಬ್ಬರು ಮಹಿಳೆಯರಲ್ಲಿ ಒಬ್ಬರಿಗೆ ಈ ಹಿಂದೆ ರಡ್ಡೆರ್ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.

  • ‘ಬ್ರಾಂಡೆಡ್ ಶೂಗಳು ಕಳೆದು ಹೋಗಿದೆ, ಹುಡುಕಿ ಕೊಡಿ’ – ಠಾಣೆ ಮೆಟ್ಟಿಲೇರಿದ ಉದ್ಯಮಿ

    ‘ಬ್ರಾಂಡೆಡ್ ಶೂಗಳು ಕಳೆದು ಹೋಗಿದೆ, ಹುಡುಕಿ ಕೊಡಿ’ – ಠಾಣೆ ಮೆಟ್ಟಿಲೇರಿದ ಉದ್ಯಮಿ

    ಚೆನ್ನೈ: ಸಾಮಾನ್ಯವಾಗಿ ಚಿನ್ನ, ಬೆಳ್ಳಿ, ವಾಹನ ಅಥವಾ ವಸ್ತು ಕಳೆದು ಹೋಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಾರೆ. ಆದರೆ ತಮಿಳುನಾಡಿನಲ್ಲಿ ಉದ್ಯಮಿಯೊಬ್ಬರು ಶೂಗಳು ಕಳೆದು ಹೋಗಿವೆ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

    ಹೌದು ವಿಚಿತ್ರ ಎನಿಸಿದರು ಇದು ನಿಜ. ಈ ದೂರಿನ ಬಗ್ಗೆ ಕೇಳಿ ಸ್ವತಃ ಪೊಲೀಸರೇ ದಂಗಾಗಿದ್ದಾರೆ. ಮನೆಯಲ್ಲಿ ಇಟ್ಟಿದ್ದ 10 ಜೊತೆ ಶೂಗಳು, ಚಪ್ಪಲಿಗಳು ಕಾಣೆಯಾಗಿದೆ ಎಂದು ಉದ್ಯಮಿ ದೂರು ನೀಡಿದ್ದಾರೆ. ಚೆನ್ನೈನ ದಿವಾನ್ ಬಹದ್ದೂರ್ ಷಣ್ಮುಗಮ್ ಬೀದಿಯ ನಿವಾಸಿ ಅಬ್ದುಲ್ ಹಫೀಜ್ ಪೊಲೀಸರಿಗೆ ದೂರು ನೀಡಿದ್ದಾರೆ.

    ತಮ್ಮ ಮನೆಯಲ್ಲಿ ಇಟ್ಟಿದ್ದ 10 ಜೊತೆ ಶೂಗಳು, ಚಪ್ಪಲಿಗಳು ಕಾಣೆಯಾಗಿವೆ. ದಯವಿಟ್ಟು ಹುಡುಕಿಕೊಡಿ. ಅವೆಲ್ಲಾ ಬಹಳ ಬೆಲೆಬಾಳುವ ಶೂಗಳು. ಎಲ್ಲಾ ಸೇರಿ ಬರೋಬ್ಬರಿ 76 ಸಾವಿರ ಮೌಲ್ಯದ ಶೂಗಳು ಕಳೆದು ಹೋಗಿದೆ ಎಂದು ಅಬ್ದುಲ್ ದೂರು ನೀಡಿದ್ದಾರೆ.

    ಶನಿವಾರ ಈ ಘಟನೆ ನಡೆದಿದೆ. ಮನೆಯಿಂದ ಹೊರಹೋಗುತ್ತಿದ್ದ ವೇಳೆ ಶೂಗಳು, ಚಪ್ಪಲಿಗಳು ಮನೆಯಲ್ಲಿ ಕಾಣಲಿಲ್ಲ. ಯಾರೋ ಮನೆಗೆ ಬಂದು ಶೂಗಳನ್ನು ಕದ್ದಿದ್ದಾರೆ ಎಂದು ಅಬ್ದುಲ್ ಪೊಲೀಸರ ಬಳಿ ಹೇಳಿದ್ದಾರೆ. ಅಲ್ಲದೆ ಅವರ ಅಕ್ಕಪಕ್ಕದ ಮನೆಯವರು ಕದ್ದಿರಬಹುದು ಎಂದು ಅಬ್ದುಲ್ ಶಂಕಿಸಿದ್ದಾರೆ. ಹಾಗೆಯೇ ಅವರ ಮನೆಯ ಪಕ್ಕದಲ್ಲಿ ಕೆಲ ಯುವಕರು ವಾಸವಾಗಿದ್ದಾರೆ, ಅವರೇ ಶೂಗಳನ್ನು ಕದ್ದಿರಬಹುದು ಎಂದು ಅಬ್ದುಲ್ ಅನುಮಾನ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸದ್ಯ ಉದ್ಯಮಿ ಅನುಮಾನ ವ್ಯಕ್ತಪಡಿಸಿದ ಯುವಕರು ಊರಿಗೆ ತೆರೆಳಿದ್ದು, ಅವರು ಮರುಳಿದ ಬಳಿಕ ವಿಚಾರಣೆ ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಮನೆಯ ಅಕ್ಕಪಕ್ಕದ ಸಿಸಿಟಿವಿಗಳನ್ನು ಕೂಡ ಪರಿಶೀಲಿಸುವುದಾಗಿ ಪೊಲೀಸರು ಹೇಳಿದ್ದಾರೆ.

  • ಬೆಂಗಳೂರಿನಲ್ಲಿ ಚಪ್ಪಲಿ, ಶೂ ಕಳ್ಳರ ಹಾವಳಿ

    ಬೆಂಗಳೂರಿನಲ್ಲಿ ಚಪ್ಪಲಿ, ಶೂ ಕಳ್ಳರ ಹಾವಳಿ

    ಬೆಂಗಳೂರು: ಮನೆಯ ಮುಂದೆ ಬಿಟ್ಟಿರುವ ಚಪ್ಪಲಿ, ಶೂಗಳನ್ನು ಕಳ್ಳರು ಬಿಡುತ್ತಿಲ್ಲ. ಬೆಂಗಳೂರಿನಲ್ಲಿ ಚಪ್ಪಲಿ ಕಳ್ಳರ ಗ್ಯಾಂಗ್ ಪ್ರತ್ಯಕ್ಷವಾಗಿದ್ದು, ಮನೆಯ ಮುಂದೆ ಇರುವ ಬ್ರ್ಯಾಂಡೆಡ್ ಶೂ, ಚಪ್ಪಲಿಗಳನ್ನು ಕದಿಯುತ್ತಿದ್ದಾರೆ. ಈ ಎಲ್ಲ ದೃಶ್ಯಗಳು ಥಣಿಸಂದ್ರದ ಭುವನೇಶ್ವರಿ ನಗರದ ಅಪಾರ್ಟ್ ಮೆಂಟ್ ನಲ್ಲಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    ಮಧ್ಯರಾತ್ರಿ ಆಟೋದಲ್ಲಿ ಬರುವ ಮೂವರು ಅಪಾರ್ಟ್ ಮೆಂಟ್ ನೊಳಗೆ ನುಗ್ಗಿದ್ದಾರೆ. ಮನೆಯ ಮುಂಭಾಗ ಇರಿಸಿರುವ ಕೇವಲ ಬ್ರ್ಯಾಂಡೆಡ್ ಶೂ ಮತ್ತು ಚಪ್ಪಲಿಗಳನ್ನು ಕದ್ದು ಮೂಟೆಯಲ್ಲಿ ತುಂಬಿಕೊಂಡಿದ್ದಾರೆ. ಎಲ್ಲವನ್ನು ಆಟೋದಲ್ಲಿ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ.

    ಕಟ್ಟಡದಲ್ಲಿ ಸಿಸಿಟಿವಿ ಕಂಡ ಕಳ್ಳನೋರ್ವ ಕದ್ದ ಶೂಗಳನ್ನು ಮುಖಕ್ಕೆ ಹಿಡಿದುಕೊಂಡು ಎಸ್ಕೇಪ್ ಆಗಿದ್ದಾನೆ. ಮತ್ತೋರ್ವನ ಮುಖ ಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿಲಿಕಾನ್ ಸಿಟಿ ಅಂಗಡಿ ಮಾಲೀಕರೇ ಹುಷಾರ್!

    ಸಿಲಿಕಾನ್ ಸಿಟಿ ಅಂಗಡಿ ಮಾಲೀಕರೇ ಹುಷಾರ್!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶೂ ಕಳ್ಳರ ಹಾವಳಿ ಶುರುವಾಗಿದ್ದು, ಪ್ರತಿಷ್ಠಿತ ಫೂಟ್ ವೇರ್ ಅಂಗಡಿಗಳನ್ನೇ ಕಳ್ಳರು ಟಾರ್ಗೆಟ್ ಮಾಡುತ್ತಿದ್ದಾರೆ.

    ಬೆಳ್ಳಂಬೆಳಗ್ಗೆ ಖರ್ತನಾಕ್ ಕಳ್ಳರ ಗ್ಯಾಂಗ್ ಬಂದು ಬೀಗ ಹೊಡೆದು ತಮ್ಮ ಕೈ ಚಳಕ ತೋರುತ್ತಿದ್ದಾರೆ. ಗರುಡ ಮಾಲ್ ಸುತ್ತಮುತ್ತ ಫೂಟ್ ವೇರ್ ಅಂಗಡಿಗಳಲ್ಲಿ ಕಳ್ಳರು ಶೂ ಕದ್ದು ಪರಾರಿಯಾಗಿದ್ದಾರೆ. ಈ ಘಟನೆ ಇದೇ ತಿಂಗಳ 18ರ ಮುಂಜಾನೆ ಸುಮಾರು 4 ಘಂಟೆಗೆ ನಡೆದಿದ್ದು, ಆರೋಪಿಗಳ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಒಂದೇ ದಿನ ಎರಡು ಫೂಟ್ ವೇರ್ ಅಂಗಡಿ ಬೀಗ ಹೊಡೆದು ಕಳ್ಳತನ ಮಾಡಿದ್ದಾರೆ. ಗರುಡ ಮಾಲ್ ಬಳಿಯ ಮೊಯಿನುದ್ದೀನ್ ಫೂಟ್ ವೇರ್ ಮತ್ತು ಸಿಮ್ಲಾ ಸ್ಟೋರ್‍ನಲ್ಲಿ ಖದೀಮರ ಕಳ್ಳತನ ಮಾಡಿದ್ದಾರೆ.

    ನಸುಕಿನ ಜಾವ ಆಟೋದಲ್ಲಿ ಕಳ್ಳರ ಗ್ಯಾಂಗ್ ಬಂದು ಅಂಗಡಿಯ ಬೀಗ ಹೊಡೆದಿದ್ದಾರೆ. ಬಳಿಕ ಎರಡು ಅಂಗಡಿಗಳಲ್ಲಿ ಬೆಲೆಬಾಳುವ ಬ್ರಾಂಡೆಂಡ್ ಶೂ ಹಾಗೂ ಸ್ಲಿಪ್ಪರ್ಸ್ ಎಗರಿಸಿದ್ದಾರೆ. ಸುಮಾರು 125 ಜೊತೆ ಶೂ ಹಾಗೂ 70 ಜೊತೆ ಚಪ್ಪಲಿ ಕದ್ದು ಅದನ್ನು ಆಟೋದಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಇದೆಲ್ಲವೂ ಸಿಸಿಟಿಯಲ್ಲಿ ಸೆರೆಯಾಗಿದೆ.

    ಸದ್ಯಕ್ಕೆ ಈ ಕುರಿತು ಕಬ್ಬನ್ ಪಾರ್ಕ್ ಹಾಗೂ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

  • ಪಕ್ಷೇತರ ಅಭ್ಯರ್ಥಿಗೆ ಚಪ್ಪಲಿ ಗುರುತು- ಗೊಂದಲದಲ್ಲಿ ಚುನಾವಣಾ ಸಿಬ್ಬಂದಿ!

    ಪಕ್ಷೇತರ ಅಭ್ಯರ್ಥಿಗೆ ಚಪ್ಪಲಿ ಗುರುತು- ಗೊಂದಲದಲ್ಲಿ ಚುನಾವಣಾ ಸಿಬ್ಬಂದಿ!

    ಕೊಪ್ಪಳ: 2ನೇ ಹಂತದ ಚುನಾವಣೆಗೆ ಇನ್ನೂ ಕೇವಲ ಒಂದು ದಿನ ಬಾಕಿ ಇರಬೇಕಾದರೆ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿ ಗೊಂದಲದಲ್ಲಿದ್ದಾರೆ.

    ಹೌದು. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 14 ಜನ ಕಣದಲ್ಲಿದ್ದಾರೆ. ಆದರೆ ಒಬ್ಬ ಪಕ್ಷೇತರ ಅಭ್ಯರ್ಥಿಯ ಚಿಹ್ನೆ ಚಪ್ಪಲಿ ಗುರುತು ಇರುವುದರಿಂದ ಚುನಾವಣಾ ಸಿಬ್ಬಂದಿ ಚಪ್ಪಲಿ ಹಾಕಬೇಕಾ ಬೇಡವಾ ಎನ್ನುವ ಚಿಂತನೆಯಲ್ಲಿ ಇದ್ದಾರೆ.

    ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಯಿಂದ 100 ಮೀಟರ್ ವರೆಗೂ ಎಲ್ಲಿಯೂ ಅಭ್ಯರ್ಥಿಯ ಚಿಹ್ನೆ ಕಾಣುವಂತಿಲ್ಲ. ಆದರೆ ಪಕ್ಷೇತರ ಅಭ್ಯರ್ಥಿ ಪ.ಯ ಗಣೇಶ್ ಅವರ ಚಿಹ್ನೆ ಚಪ್ಪಲಿ ಇರುವುದರಿಂದ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರೇ ಇದಕ್ಕೆ ಏನು ಮಾಡೋದು ಎಂದು ಯೋಚನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಸಿಬ್ಬಂದಿ ವಿಚಾರವಿರಲಿ ಮತಗಟ್ಟೆಗೆ ಮತ ಹಾಕಲು ಬರುವ ಮತದಾರರು ಚಪ್ಪಲಿ ಹಾಕಿಕೊಳ್ಳಬೇಕಾ ಅಥವಾ ಬಿಟ್ಟು ಬರಬೇಕಾ ಎನ್ನುವುದು ಇದೀಗ ಕೊಪ್ಪಳದಲ್ಲಿ ಜನರು ಚರ್ಚೆ ಮಾಡುವಂತಾಗಿದೆ.