Tag: slippers

  • ನೂತನ ಸಚಿವ ತುಕಾರಾಂ ದುರ್ವರ್ತನೆ

    ನೂತನ ಸಚಿವ ತುಕಾರಾಂ ದುರ್ವರ್ತನೆ

    ಬಳ್ಳಾರಿ: ನೂತನ ಸಚಿವರಾಗಿ ಸಂಪುಟ ಸೇರಿರುವ ಕಾಂಗ್ರೆಸ್ ಶಾಸಕ ತುಕಾರಾಂ ಅವರು ಇಂದು ಸಾರ್ವಜನಿಕವಾಗಿ ಸಂಬಂಧಿ ಯುವಕನಿಂದ ಶೂ ಹಾಕಿಸಿಕೊಳ್ಳುವ ಮೂಲಕ ಅಧಿಕಾರದ ದರ್ಪ ತೋರಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

    ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು ದೇವರ ದರ್ಶನ ಪಡೆದರು. ಬಳಿಕ ದೇವಾಲಯದಿಂದ ಹಿಂದಿರುಗುವ ವೇಳೆ ಕಾರಿನ ಹಿಂಭಾಗದ ಡಿಕ್ಕಿಯಲ್ಲಿದ್ದ ಸಚಿವರ ಶೂವನ್ನು ಸಂಬಂಧಿ ಹುಡುಗ ಕೈಯಲ್ಲೇ ತಂದು ಕಾರಿನ ಮುಂಭಾಗದ ಸೀಟಿನಲ್ಲಿ ಕೂತಿದ್ದ ತುಕಾರಾಂ ಬಳಿ ತೆರಳಿ ಕಾಲಿನ ಮುಂದೆ ಇರಿಸಿದರು.

    ಶಾಸಕರಾಗಿದ್ದ ವೇಳೆ ತಮ್ಮ ಸರಳ ಸಜ್ಜನಿಕೆಯಿಂದಲೇ ತುಕಾರಾಂ ಅವರು ಹೆಸರು ಪಡೆದಿದ್ದರು. ಆದರೆ ಸಚಿವ ಸ್ಥಾನ ಸ್ವೀಕರಸಿದ ಬಳಿಕ ಈ ರೀತಿಯ ವರ್ತನೆಯನ್ನು ಸಾರ್ವಜನಿಕವಾಗಿ ತೋರಿದ್ದು, ಅಧಿಕಾರ ಬಂದ ಕೂಡಲೇ ಬದಲಾಗುತ್ತಾರೆ ಎಂದ ಮಾತಿಗೆ ಸಾಕ್ಷಿಯಾಗಿ ಕಂಡಿತು.

    ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ವ್ಯಕ್ತಿಯಾದ ನನಗೆ ಹೈಕಮಾಂಡ್ ನನ್ನ ಕಾರ್ಯಗಳನ್ನು ಮೆಚ್ಚಿ ಸಚಿವ ಸ್ಥಾನ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವರಾಗಿ ನನಗೆ ಅವಕಾಶ ನೀಡಿದ್ದು, ಯುವ ಜನಾಂಗ ಹಾಗೂ ಬಡ ಜನರ ಸೇವೆ ಮಾಡಲು ಅವಕಾಶ ಲಭಿಸಿದೆ. 3 ಬಾರಿ ಶಾಸಕನಾಗಿ ನಾನು ಮಾಡಿದ ಕಾರ್ಯಗಳೇ ಸಚಿವ ಸ್ಥಾನ ನೀಡಲು ಕಾರಣ. ನಗರಕ್ಕೆ ಬಂದಾಗ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ನಂಬಿಕೆ, ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದ್ರು.

    ಚುನಾವಣಾ ನೀತಿ ಸಂಹಿತೆ ಬಂದ ಕಾರಣ ಹಂಪಿ ಉತ್ಸವ ಆಚರಣೆ ಮಾಡಿಲ್ಲ. ಆದರೆ ಈಗ ಚರ್ಚೆ ನಡೆಸಿ ಉತ್ಸವ ನಡೆಸುವ ಚಿಂತನೆ ಇದೆ. ಜಿಲ್ಲೆಯ ಜನರ ಭಾವನೆಗೆ ತಕ್ಕಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶೂ ಭಾಗ್ಯ ಯೋಜನೆ ಜಾರಿ ಹಿಂದಿದೆ ಮನಕಲಕುವ ಕಥೆ: ಸಿದ್ದರಾಮಯ್ಯ ನೆನಪು

    ಶೂ ಭಾಗ್ಯ ಯೋಜನೆ ಜಾರಿ ಹಿಂದಿದೆ ಮನಕಲಕುವ ಕಥೆ: ಸಿದ್ದರಾಮಯ್ಯ ನೆನಪು

    ಬಾಗಲಕೋಟೆ: ತಾವು ಶಾಲಾ ದಿನಗಳ ಸಮಯದಲ್ಲಿ ಟೈರ್ ನಿಂದ ತಯಾರಿಸಿದ್ದ ಚಪ್ಪಲಿ ಧರಿಸಿ ಹೋಗುತ್ತಿದ್ದೇವು, ಈಗಿನ ಮಕ್ಕಳಿಗೆ ಇಂತಹ ತೊಂದರೆ ಆಗಬಾರದು ಎಂದು ಹೇಳಿ ಶೂ ಭಾಗ್ಯ ಯೋಜನೆ ಜಾರಿ ಮಾಡಿದ್ದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಬಾದಾಮಿಯಲ್ಲಿ ಪುಸ್ತಕ ಪ್ರಾಧಿಕಾರದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಟೈರ್ ಚಪ್ಪಲಿ ಪ್ರಸಂಗ ನೆನೆಸಿಕೊಂಡರು. ನಾನು ಶಾಲೆಗೆ ಹೋಗುವಾಗ ಟೈರ್ ಚಪ್ಪಲಿ ಧರಿಸುತ್ತಿದ್ದೆ. ಇಂತಹ ತೊಂದರೆ ಬರಬಾರದೆಂದು ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಜಾರಿಗೆ ತಂದಿದ್ದೇವೆ ಎಂದರು. ಇದೇ ವೇಳೆ ತಮ್ಮ ಅಧಿಕಾರ ಮತ್ತು ಸಂಪತ್ತು ಯಾವತ್ತೂ ಬಲಾಡ್ಯರ ಕೈಯಲ್ಲಿರಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೇ ನಾನು ಧರಿಸುತ್ತಿದ್ದ ಟೈರ್ ಚಪ್ಪಲಿ ಮೂರು ವರ್ಷ ಆದ್ರು ಹರಿದಿರಲಿಲ್ಲ ಎಂದು ನಗೆಚಟಾಕಿ ಹಾರಿಸಿದರು.

    ಬಾದಾಮಿಯ ಕನಕ ಜಯಂತಿ ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ಅವರು ಸ್ವತಃ ಡೋಲು ಬಾರಿಸಿ ಗಮನ ಸೆಳೆದರು. ಆದರೆ ಆ ವೇಳೆ ಡೋಲು ಬಾರಿಸುವ ಕೋಲಿನ ಸಿಬಿರು ಚುಚ್ಚಿ ಸಿದ್ದರಾಮಯ್ಯ ಅವರ ಬೆರಳಿಗೆ ಗಾಯವಾಯಿತು. ಕೂಡಲೇ ಎಚ್ಚೆತ್ತ ಕಾರ್ಯಕರ್ತರು ಬೆರಳಿಗೆ ಚುಚ್ಚಿದ್ದ ಸಿಬಿರು ತೆಗೆದು ಪ್ರಥಮ ಚಿಕಿತ್ಸೆ ನೀಡಿದರು.

    ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಗಮಿಸಿದ್ದ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಈ ವೇಳೆ ಸಿದ್ದರಾಮಯ್ಯನವರಿಗೆ ಮೈತ್ರಿ ಸರ್ಕಾರ ನಡೆಸುವ ಉದ್ದೇಶ ಇಲ್ಲ ಎಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ಅವರು, ಹೊರಟ್ಟಿ ಹೇಳಿಕೆ ಕೊಟ್ಟಿದ್ದರೆ ತೋರಿಸಿ ಎಂದು ರಾಜ್ಯ ರಾಜಕಾರಣದ ಬಗ್ಗೆ ಮಾತನಾಡದೆ ತೆರಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಭಿವೃದ್ಧಿ ಮಾಡದಿದ್ರೆ ಚಪ್ಪಲಿ ಸೇವೆ ಮಾಡಿ – ವಿಭಿನ್ನ ಪ್ರಚಾರ ಕೈಗೊಂಡ ಅಭ್ಯರ್ಥಿ

    ಅಭಿವೃದ್ಧಿ ಮಾಡದಿದ್ರೆ ಚಪ್ಪಲಿ ಸೇವೆ ಮಾಡಿ – ವಿಭಿನ್ನ ಪ್ರಚಾರ ಕೈಗೊಂಡ ಅಭ್ಯರ್ಥಿ

    ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪ್ರಚಾರದ ಅಬ್ಬರ ಹೆಚ್ಚಾಗಿದ್ದು, ಈ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬರು ಮತದಾರರಿಗೆ ಚಪ್ಪಲಿ ಹಂಚಿಕೆ ಮಾಡುವ ಮೂಲಕ ವಿಭಿನ್ನ ಪ್ರಚಾರ ಕೈಗೊಂಡಿದ್ದಾರೆ.

    ಅಕುಲ ಹನುಮಂತ್ ಎಂಬವರು ಜಗ್ಟಿಯಲ್ ಜಿಲ್ಲೆಯ ಕೊರುಟ್ಲಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಕ್ಷೇತ್ರದ ಮತದಾರರ ಪ್ರಚಾರ ನಡೆಸುವ ವೇಳೆ ಚಪ್ಪಲಿ ಹಂಚಿಕೆ ಮಾಡಿ ನನಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಗೆದ್ದ ಬಳಿಕ ಕ್ಷೇತ್ರದ ಅಭಿವೃದ್ಧಿ ಮಾಡದಿದ್ದರೆ ನನಗೆ ಚಪ್ಪಲಿ ಸೇವೆ ಮಾಡಿ ಎಂದು ಹೇಳಿ ಪ್ರಚಾರ ಮಾಡುತ್ತಿದ್ದಾರೆ.

    ಸದ್ಯ ಹನುಮನ್ ಅವರ ಈ ವಿಭಿನ್ನ ಪ್ರಚಾರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ಎಲ್ಲಾ ರಾಜಕೀಯ ವ್ಯಕ್ತಿಗಳು ಈ ವಿಧಾನವನ್ನು ಬಳಸಿ ಎಂದು ಸಲಹೆ ನೀಡಿದ್ದಾರೆ.

    ಮನೆ ಮನೆ ಪ್ರಚಾರಕ್ಕೆ ತೆರಳುವ ಹನುಮಂತ್, ಕ್ಷೇತ್ರದ ಜನರ ಅಗತ್ಯಗಳನ್ನು ಪೂರೈಸಲು ಶ್ರಮವಹಿಸುವುದಾಗಿ ಆಶ್ವಾಸನೆ ನೀಡುತ್ತಿದ್ದು, ಇದರಲ್ಲಿ ವಿಫಲವಾದಲ್ಲಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ ಕೇವಲ ಪ್ರಚಾರ ಪಡೆಯಲು ಮಾತ್ರ ನಾನು ಈ ರೀತಿ ಮತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

    ಸದ್ಯ ಹನುಮಂತ್ ಅವರು ಸ್ಪರ್ಧೆ ಮಾಡುತ್ತಿರುವ ಕೊರುಟ್ಲಾ ಕ್ಷೇತ್ರದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ ಪ್ರಮುಖ ನಾಯಕರಾದ ಶಾಸಕ ಕೆ ವಿದ್ಯಾ ಸಾಗರ್ ರಾವ್ ಸ್ಪರ್ಧೆ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ! ವೈರಲ್ ವಿಡಿಯೋ

    ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ! ವೈರಲ್ ವಿಡಿಯೋ

    ನಗಾಡಾ: ವಿಧಾನಸಭಾ ಚುಣಾವಣೆಯಲ್ಲಿ ಜನರ ಬಳಿ ಮತ ಕೇಳಲು ಬಂದಿದ್ದ ಶಾಸಕರೊಬ್ಬರಿಗೆ ಸಾರ್ವಜನಿಕವಾಗಿ ಚಪ್ಪಲಿ ಹಾರ ಹಾಕಿರುವ ಘಟನೆ ಮಧ್ಯಪ್ರದೇಶದ ನಗಾಡಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

    ನಗಾಡಾ ಕ್ಷೇತ್ರದ ಬಿಜೆಪಿ ಪಕ್ಷದ ಹಾಲಿ ಶಾಸಕ ದಿಲೀಪ್ ಶೇಖಾವತ್ ಅವರಿಗೆ ಚಪ್ಪಲಿ ಹಾರ ಹಾಕಲಾಗಿದ್ದು, ಭಾನುವಾರ ಸಂಜೆ ವೇಳೆ ಕ್ಷೇತ್ರದ ಹಳ್ಳಿಯೊಂದರಲ್ಲಿ ಮತ ಕೇಳಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಚಪ್ಪಲಿ ಹಾರ ಹಾಕಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿದ್ದ ಶಾಸಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಜನರ ಮಧ್ಯೆ ಬಂದ ಅವರಿಗೆ ಹಲವು ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸುತ್ತಿದ್ದರು. ಆದರೆ ಈ ನಡುವೆ ಜನರ ಮಧ್ಯದಿಂದ ಬಂದ ವ್ಯಕ್ತಿಯೊಬ್ಬ ಶಾಸಕನಿಗೆ ಚಪ್ಪಲಿ ಹಾರ ಹಾಕಿದ. ಕೂಡಲೇ ಎಚ್ಚೆತ್ತಾ ಶಾಸಕ ಹಾರ ಕಿತ್ತುಹಾಕಿ ಆತನ ಮೇಲೆ ಕೋಪದಿಂದ ಹಲ್ಲೆ ನಡೆಸಲು ಮುನ್ನಡೆದಿದ್ದು ವಿಡಿಯೋದಲ್ಲಿ ಕಾರಣಬಹುದಾಗಿದೆ.

    ವಿಡಿಯೋದಲ್ಲಿ ಇರುವ ವ್ಯಕ್ತಿ ಬಿಜೆಪಿ ಪಕ್ಷದ ಟೋಪಿ, ಶಾಲು ಧರಿಸಿ ಜನರ ಮಧ್ಯೆ ಆಗಮಿಸಿದ್ದ. ಪ್ರಚಾರದ ಭಾಗವಾಗಿ ಜನರ ನಡುವೆ ಆಗಮಿಸಿದ್ದ ಶಾಸಕರು ಹತ್ತಿರ ಆಗಮಿಸುತ್ತಿದಂತೆ ಏಕಾಏಕಿ ಚಪ್ಪಲಿ ಹಾರ ಹಾಕಿದ್ದಾನೆ. ವರ್ಷದ ಆರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುಣಾವಣೆ ವೇಳೆಯೂ ಬಿಜೆಪಿ ನಾಯಕರೊಬ್ಬರಿಗೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಮತದಾನ ನ.28 ರಂದು ನಡೆಯಲಿದ್ದು, ಡಿ. 11 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿಡಿಯೋ: ಚಪ್ಪಲಿ ಹಾಕೋದ್ದಕ್ಕೂ ಪಿಎ ಇಟ್ಟುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ!

    ವಿಡಿಯೋ: ಚಪ್ಪಲಿ ಹಾಕೋದ್ದಕ್ಕೂ ಪಿಎ ಇಟ್ಟುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ!

    ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ತುಂಬಾ ಸರಳ ವ್ಯಕ್ತಿ ಎಂದೇ ಹೆಸರಾದವರು. ಆದರೆ ಯಾಕೋ ಸಚಿವರಾದ ನಂತರ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರಾ ಎನ್ನುವ ಅನುಮಾನ ಎದ್ದಿದೆ.

    ಇಂದು ಚಾಮರಾಜನಗರದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಸಿ. ಪುಟ್ಟರಂಗಶೆಟ್ಟಿಗೆ ಅವರು ತಮ್ಮ ಚಪ್ಪಲಿಯನ್ನು ಬಿಟ್ಟು ಎತ್ತಿನಗಾಡಿ ಏರಿದ್ದರು. ಎತ್ತಿನಗಾಡಿಯನ್ನು ಚಾಲನೆ ಮಾಡಿದ ನಂತರ ಅವರು ಕೆಳೆಗಿಳಿದು ನಡೆದು ಬರುತ್ತಿದ್ದಂತೆ ಅವರ ಆಪ್ತ ಸಹಾಯಕ ಪುಟ್ಟರಂಗಶೆಟ್ಟಿಗೆ ಚಪ್ಪಲಿ ತಂದು ತೊಡಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸಚಿವ ಸಿ. ಪುಟ್ಟರಂಗಶೆಟ್ಟಿ ಸೌಜನ್ಯಕ್ಕಾದರೂ ಚಪ್ಪಲಿ ತೊಡಿಸುವ ತಮ್ಮ ಆಪ್ತ ಸಹಾಯಕನಿಗೆ ಬೇಡ ಎನ್ನದೇ ಸರ್ವಾಧಿಕಾರಿಯಂತೆ ಚಪ್ಪಲಿ ತೊಡಿಸಿಕೊಂಡು ಏನೂ ಆಗಿಲ್ಲವಂತೆ ನಡೆದು ಮುಂದೆ ಸಾಗಿದ್ದಾರೆ.

    ಈ ದೃಶ್ಯವನ್ನು ನೋಡಿದ ಜನ ಶಾಸಕರಾಗಿದ್ದಾಗ ತುಂಬ ಸರಳವಾಗಿದ್ದ ಪುಟ್ಟರಂಗ ಶೆಟ್ಟಿ ಇದೀಗ ಸಚಿವರಾದ ಬಳಿಕ ಅಲ್ಪನಿಗೆ ಐಶ್ವರ್ಯ ಬಂದ ಹಾಗೆ ನಡೆದುಕೊಳ್ಳುತ್ತಿದ್ದಾರೆ ಎಂದು ಮಾತನಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=lPjIVJAvrF8&feature=youtu.be

  • ಕ್ಷುಲ್ಲಕ ವಿಷಯಕ್ಕೆ ಜಗಳ- ಚಪ್ಪಲಿ ಧರಿಸಿ ದೇವಾಲಯ ಪ್ರವೇಶಿಸಿದ ಯುವಕರು

    ಕ್ಷುಲ್ಲಕ ವಿಷಯಕ್ಕೆ ಜಗಳ- ಚಪ್ಪಲಿ ಧರಿಸಿ ದೇವಾಲಯ ಪ್ರವೇಶಿಸಿದ ಯುವಕರು

    ಗದಗ: ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ಹಾಗೂ ದೇವಸ್ಥಾನದ ಪೂಜಾರಿ ನಡುವೆ ಕ್ಷುಲ್ಲಕ ವಿಷಯಕ್ಕೆ ಮಾತಿನ ಜಗಳವಾಗಿದೆ.

    ಈ ವೇಳೆ ಅನ್ಯಕೋಮಿನ ಐದಾರು ಜನ ಯುವಕರು ಚಪ್ಪಲಿ ಧರಿಸಿಕೊಂಡು ಮಲ್ಲಿಕಾರ್ಜುನ ದೇವಸ್ಥಾನದೊಳಗೆ ನುಗ್ಗಿ ಪೂಜಾರಿ ಕರಿಬಸಪ್ಪನನ್ನು ಚಪ್ಪಲಿಯಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.

    ಪೂಜಾರಿಗೆ ಚಪ್ಪಲಿಯಿಂದ ಹೊಡೆದಿರುವುದರಿಂದ ಅಪಚಾರವಾಗಿದೆ. ಶಾಸ್ತ್ರೋಕ್ತವಾಗಿ ಸರಿಪಡಿಸುವುಂತೆ ಸ್ಥಳೀಯ ಹಿರಿಯರು ಹಲ್ಲೆ ಮಾಡಿದ ಯುವಕರಿಗೆ ಎರಡು ದಿನ ಗಡುವು ನೀಡಿದರೂ ಸರಿಪಡಿಸಿಲ್ಲ. ಆದ್ದರಿಂದ ಹಲ್ಲೆ ಮಾಡಿರುವ ಯುವಕರನ್ನು ಬಂಧಿಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಊರಿನ ನೂರಾರು ಜನರು ರಾತ್ರೋರಾತ್ರಿ ಗದಗನ ಗ್ರಾಮೀಣ ಠಾಣೆಯ ಪೋಲಿಸರ ಮೊರೆ ಹೋಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಊರಿನಲ್ಲಿ ಜರುಗಬೇಕಿದ್ದ ಮಲ್ಲಿಕಾರ್ಜುನ ದೇವರ ಜಾತ್ರೆ ನಿಂತು ಹೋಗಿದೆ. ಜಾತ್ರೆಯಲ್ಲಿ ಕರಿಬಸಪ್ಪನಿಗೆ ದೇವರು ಮೈಯಲ್ಲಿ ಬಂದು ಮಳೆ, ಬೆಳೆಗಳ ವಾಡಿಕೆ ಬಗ್ಗೆ ಈ ವರ್ಷ ಹೇಳದಿರುವುದು ಸಾಕಷ್ಟು ಆತಂಕ ಮೂಡಿದೆ. ಈ ಘಟನೆ ನಡೆಸಿರೋದು ನಮ್ಮ ಊರಿಗೆ ಅಪಚಾರವಾಗಿದೆ. ಊರಿಗೆ ಅನಾಹುತ ಕಾದಂತಿದೆ ಎಂದು ಸ್ಥಳೀಯ ಮಹಿಳೆಯರು ಕಣ್ಣೀರಿಟ್ಟಿದ್ದಾರೆ. ಅಲ್ಲದೇ ನ್ಯಾಯ ಸಿಗದೆ ಹೋದರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಡಾವಣೆಯೊಂದರಲ್ಲಿಯೇ 18 ಮನೆಗಳಲ್ಲಿ ಚಪ್ಪಲಿ, ಶೂ ಎಗರಿಸಿದ ಖದೀಮರು

    ಬಡಾವಣೆಯೊಂದರಲ್ಲಿಯೇ 18 ಮನೆಗಳಲ್ಲಿ ಚಪ್ಪಲಿ, ಶೂ ಎಗರಿಸಿದ ಖದೀಮರು

    ಬೆಂಗಳೂರು: ಸಾರ್ವಜನಿಕರೇ ಹುಷಾರ್.. ಮನೆ ಮುಂದೆ ಚಪ್ಪಲಿ ಬಿಡುವ ಮುನ್ನ ಎಚ್ಚರವಾಗಿರಿ. ನಗರದಲ್ಲಿ ಚಪ್ಪಲಿ ಕಳ್ಳರು ಹುಟ್ಟಿಕೊಂಡಿದ್ದಾರೆ.

    ನಗರದಲ್ಲಿ ಮನೆ ಮುಂದೆ ಇಟ್ಟಿದ್ದ ಚಪ್ಪಲಿಗಳನ್ನು ಬೆಳಗಾಗುವಷ್ಟರಲ್ಲೇ ಖದೀಮರು ಎಗರಿಸುತ್ತಿದ್ದಾರೆ. ಕಳ್ಳರು ಬ್ರಾಂಡೆಡ್ ಕಂಪೆನಿಯ ಶೂ ಮತ್ತು ಚಪ್ಪಲಿಗಳನ್ನು ಟಾರ್ಗೆಟ್ ಮಾಡುತ್ತಿದ್ದು, ಒಂದು ಜೊತೆ ಚಪ್ಪಲಿಯನ್ನು ಬಿಡದೆ ಹೊತ್ತೊಯ್ಯುತ್ತಿದ್ದಾರೆ.

    ಸೋಮವಾರ ರಾತ್ರಿ ನಗರದ ಅಬ್ಬಿಗೆರೆಯ ವೆಂಕಟೇಶ್ವರ ಬಡಾವಣೆಯಲ್ಲಿ ವಿಚಿತ್ರ ಘಟನೆ ನಡೆದಿದೆ. ಈ ಬಡಾವಣೆಯಲ್ಲಿ ಸುಮಾರು 18 ಮನೆಗಳಲ್ಲಿ ಚಪ್ಪಲಿ ಮತ್ತು ಶೂ ಗಳನ್ನ ಖದೀಮರು ಎಗರಿಸಿದ್ದಾರೆ. ಇದರಿಂದ ಸ್ಥಳೀಯರು ಚಪ್ಪಲಿ ಕಳ್ಳರಿಗೆ ಹಿಡಿಶಾಪ ಹಾಕಿದ್ದಾರೆ.

  • ದಿನೇಶ್ ಗುಂಡೂರಾವ್‍ಗೆ ಚಪ್ಪಲಿ ಕೊರಿಯರ್ ಮಾಡಿದ ಮೈಸೂರು ಯುವಕ

    ದಿನೇಶ್ ಗುಂಡೂರಾವ್‍ಗೆ ಚಪ್ಪಲಿ ಕೊರಿಯರ್ ಮಾಡಿದ ಮೈಸೂರು ಯುವಕ

    ಮೈಸೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಚಪ್ಪಲಿಯಿಂದ ಹೊಡೆಯಿರಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರಿಗೆ ಮೈಸೂರಿನ ಯುವಕನೊಬ್ಬ ಚಪ್ಪಲಿ ಗಿಫ್ಟ್ ಕೊಟ್ಟಿದ್ದಾನೆ.

    ನಮ್ಮ ಸಮುದಾಯದವರಿಗೆ ಗುಂಡುರಾವ್ ಅವರು ಅವಮಾನ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೊರಿಯರ್ ಮೂಲಕ ಚಪ್ಪಲಿಯನ್ನು ಕಳುಹಿಸಿರುವೆ ಮತ್ತು ಅವರು ಬಹಿರಂಗಬಾಗಿ ಕ್ಷಮೆ ಕೇಳಬೇಕು ಎಂದು ಗಿಫ್ಟ್ ನೀಡಿದ ಯುವಕ ಒತ್ತಾಯಿಸಿದ್ದಾನೆ. ಇದನ್ನೂ ಓದಿ: ಮುಲ್ಲಾ ಅಥವಾ ಮೌಲ್ವಿಗೆ ಹೊಡೀಬೇಕು ಅಂತ ಹೇಳಿದ್ರೆ, ನಿಮ್ಮ ಹೆಂಡ್ತಿಯೇ ನಿಮ್ಗೆ ಹೊಡೀತಿದ್ರು: ಗುಂಡೂರಾವ್ ವಿರುದ್ಧ ಸಿಂಹ ಕೆಂಡಾಮಂಡಲ

    ಉತ್ತರ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್‍ನ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡುರಾವ್ ಅವರು ಮಾತನಾಡಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಗುಂಡೂರಾವ್‍ಗೆ ಗಂಡಸ್ತನವಿದ್ರೆ, ತಾಯಿ ಎದೆ ಹಾಲು ಕುಡಿದಿದ್ರೆ ಮೊದ್ಲು ಕಲಬುರಗಿಗೆ ಬರಲಿ- ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸವಾಲ್

    ಗುಂಡೂರಾವ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ ಅವರು, ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಂತಹ ಮೇಣದ ಬತ್ತಿ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು ತುಚ್ಚಾ ಮಾತುಗಳನ್ನು ಆಡಿದ್ದಾರೆ. ಯೋಗಿ ಆದಿತ್ಯನಾಥ್ ಅವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಅಂದಿದ್ದೀರಲ್ಲಾ ಗುಂಡೂರಾವ್ ಅವರೇ. ಯೋಗಿ ಬದಲು ಒಬ್ಬ ಮುಲ್ಲಾ ಅಥವಾ ಮೌಲ್ವಿ ಬಗ್ಗೆನೋ ಇದೇ ಮಾತನ್ನು ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸವನ್ನು ನಿಮಗೆ ಮಾಡಿರುತ್ತಿದ್ದರು. ಮಾತನಾಡಬೇಕಾದರೆ ಸ್ವಲ್ಪ ಎಚ್ಚರಿಕೆ ಇರಬೇಕು. ನಾಲಿಗೆಯ ಮೇಲೆ ನಿಗಾ ಇರಬೇಕು. ಇಲ್ಲ ಅಂದರೆ ನಿಮಗೆ ತಕ್ಕ ಉತ್ತರ ಕೊಡಬೇಕಾಗುತ್ತದೆ’ ಎಂದು ವಿಡಿಯೋ ಮಾಡಿ ಫೇಸ್ಬುಕ್, ಟ್ವಿಟ್ಟರ್ ನಲ್ಲಿ ಹಾಕುವ ಮೂಲಕ ಗುಂಡೂರಾವ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

  • ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಚಪ್ಪಲಿ ಕದಿಯುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

    ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಚಪ್ಪಲಿ ಕದಿಯುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

    ಬೆಂಗಳೂರು: ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಇನ್ಪೆಕ್ಷನ್ ಆಗಬಾರದು ಎನ್ನುವ ನಿಟ್ಟಿನಲ್ಲಿ ಐಸಿಯುಗೆ ಹೋಗುವಾಗ ವೈದ್ಯರಿಂದ ಹಿಡಿದು ರೋಗಿಯ ಎಟೆಂಡರ್ ವರೆಗೂ ಚಪ್ಪಲಿ, ಶೂಗಳನ್ನು ಬಿಟ್ಟು ಹೋಗಬೇಕು.

    ಇದನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಆಸ್ಪತ್ರೆಯಲ್ಲಿ ಚಪ್ಪಲಿ, ಶೂಗಳನ್ನು ಕಳ್ಳತನ ಮಾಡಲು ಶುರುಮಾಡಿಕೊಂಡಿದ್ದನು. ಕದ್ದ ಮಾಲನ್ನು ಆಸ್ಪತ್ರೆಯ ಕೂಗಳತೆಯಲ್ಲಿರೋ ನೈಟ್ ಬಾಟ ಎಂದೇ ಫೇಮಸ್ ಆಗಿರೋ ಸೆಕೆಂಡ್ ಹ್ಯಾಂಡ್ ಚಪ್ಪಲಿ, ಶೂಗಳನ್ನು ಮಾರಾಟ ಮಾಡೋ ಫುಟ್ ಪಾತ್ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದನು.

    ಕಳೆದ ಎರಡು ತಿಂಗಳಿಂದ ಆಸ್ಪತ್ರೆಯ ಸಿಬ್ಬಂದಿಗೆ ಇದು ದೊಡ್ಡ ತಲೆ ನೋವಾಗಿತ್ತು. ವೈದ್ಯರ ಕಾಸ್ಟ್ಲೀ ಶೂಗಳು, ರೋಗಿಯನ್ನು ನೋಡಲು ಬರುವವರ ಚಪ್ಪಲಿ, ಶೂಗಳು ಪ್ರತಿನಿತ್ಯ ಮಾಯವಾಗುತ್ತಿತ್ತು. ಹೇಗಾದರೂ ಮಾಡಿ ಆ ಕಳ್ಳನನ್ನು ಹಿಡಿಯಲೇಬೇಕು ಎಂದು ಆಸ್ಪತ್ರೆಯ ಸೆಕ್ಯುರಿಟಿಗಳು ನಿರ್ಧರಿಸಿದ್ದರು.

    ಆದರೆ ಗುರುವಾರ ಆ ಕಳ್ಳನ ನಸೀಬು ಕೈ ಕೊಟ್ಟಿತ್ತು. ರೋಗಿಯ ಸಂಬಂಧಿಕರ ರೀತಿ ಆಸ್ಪತ್ರೆಗೆ ಬರಿಗಾಲಲ್ಲಿ ಬಂದು ಒಳ್ಳೆಯ ಚಪ್ಪಲಿಯನ್ನು ಹಾಕಿಕೊಂಡು ಎಸ್ಕೇಪ್ ಆಗುತ್ತಿದ್ದ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಿಡಿದು ಜಾಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಹಾಗೆ ಈ ಚಪ್ಪಲಿ, ಶೂಗಳು ಕಳ್ಳತನ ಆಗುತ್ತಿದ್ದದ್ದು ಬೆಂಗಳೂರಿನ ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ.

    ನೇಪ್ರೊ ನ್ಯೂರಾಲಜಿ ಬ್ಲಾಕ್ ನಲ್ಲಿ ಐಸಿಯುವಿಗೆ ಹೋಗೋ ಡಾಕ್ಟರ್ ಗಳು, ರೋಗಿಯ ಕಡೆಯವರು ಚಪ್ಪಲಿ, ಶೂಗಳನ್ನು ಶೂ ಸ್ಟಾಂಡ್ ನಲ್ಲಿ ಬಿಟ್ಟು ಹೋಗುತ್ತಾರೆ. ಕಳೆದ 2 ತಿಂಗಳಿಂದ ಪ್ರತಿನಿತ್ಯ ಎರಡು ಜೊತೆ ಚಪ್ಪಲಿ ಅಥವಾ ಶೂಗಳ ಕಳ್ಳತನ ಮಾಡುತ್ತಿದ್ದ ಈತ ಇಂದು ಪೊಲೀಸರ ಅಥಿತಿಯಾಗಿದ್ದಾನೆ.

     

  • 425 ರೂ. ಬೆಲೆಯ ಚಪ್ಪಲಿ ಕಳುವಾಗಿದ್ದಕ್ಕೆ ದೂರು!

    425 ರೂ. ಬೆಲೆಯ ಚಪ್ಪಲಿ ಕಳುವಾಗಿದ್ದಕ್ಕೆ ದೂರು!

    ಪುಣೆ: ವ್ಯಕ್ತಿ ಕಾಣೆಯಾಗಿದ್ದಾರೆ, ಚಿನ್ನಾಭರಣ ದೋಚಿದ್ದಾರೆ, ವಾಹನ ಕಳವಾಗಿದೆ, ಹಣ ಕದ್ದಿದ್ದಾರೆ ಎಂಬಂತಹ ಹಲವಾರು ನಾಪತ್ತೆಯಾಗಿರುವ ದೂರುಗಳನ್ನು ಕೇಳಿದ್ದೇವೆ, ಆದರೆ ಪುಣೆಯಲ್ಲಿ ವ್ಯಕ್ತಿಯೊಬ್ಬರು ಚಪ್ಪಲಿ ನಾಪತ್ತೆಯಾಗಿವೆ ಎಂದು ದೂರನ್ನು ದಾಖಲಿಸಿದ್ದಾರೆ.

    ಖಿಡ್ನಿ ತಕಲ್ಕರವಾಡಿ ರಸ್ತೆಯ ಪಾಲಾಶ್ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನ 3 ನೇ ಮಹಡಿಯಲ್ಲಿ ವಾಸವಾಗಿರುವ ವಿಶಾಲ್ ಕಲೇಕರ್(36) ಎಂಬುವರು ತಮ್ಮ ಚಪ್ಪಲಿಗಳನ್ನು ಯಾರೋ ಕದ್ದಿದ್ದಾರೆಂದು ಪುಣೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

    ನಾನು 425 ರೂಪಾಯಿ ನೀಡಿ ಹೊಸ ಕಪ್ಪು ಬಣ್ಣದ ಸ್ಯಾಂಡಲ್ ಗಳನ್ನು ಖರೀದಿಸಿದ್ದೆ. ಅವುಗಳನ್ನು ಮನೆಯ ಹೊರಗಡೆ ಬಿಟ್ಟಿರುವಾಗ ಯಾರೋ ಅಪರಿಚಿತ ವ್ಯಕ್ತಿಗಳು ಬಂದು ಚಪ್ಪಲಿಯನ್ನು, ಅಕ್ಟೋಬರ್ 3 ರಂದು ಮುಂಜಾನೆ ಸುಮಾರು 3 ರಿಂದ 8 ಗಂಟೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ದೂರಿದ್ದಾರೆ.

    ಕಲೇಕಾರ್ ಅವರು ನೀಡಿದ ದೂರನ್ನು ಪೊಲೀಸರು ಐಪಿಸಿ ಸೆಕ್ಷನ್ 379(ಸಂಪತ್ತು ಕಳವು) ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಕಲೇಕಾರ್ ಗುರುತಿಸಿದ ಅಥವಾ ಅನುಮಾನಿಸಿದ ವ್ಯಕ್ತಿಗಳನ್ನು ವಿಚಾರಿಸಲಾಗಿದ್ದು ಆದರೆ ಯಾರನ್ನು ಬಂಧಿಸಿಲ್ಲ, ಯಾರು ಕದ್ದಿದ್ದಾರೆಂದು ಇದುವರೆಗೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸ್ ಅಧಿಕಾರಿ ನಾಯ್ಕ್ ಎಸ್‍ಎಂ ಧೋಳೆಯವರು ಈ ತನಿಖೆಯನ್ನು ನಡೆಸುತ್ತಿದ್ದಾರೆ.