Tag: slogans

  • PFI ರ‍್ಯಾಲಿಯಲ್ಲಿ ಬಾಲಕನಿಂದ ಹಿಂದೂ-ಕ್ರಿಶ್ಚಿಯನ್ನರ ವಿರುದ್ಧ ಘೋಷಣೆ – ಪೊಲೀಸರಿಂದ ತನಿಖೆ

    PFI ರ‍್ಯಾಲಿಯಲ್ಲಿ ಬಾಲಕನಿಂದ ಹಿಂದೂ-ಕ್ರಿಶ್ಚಿಯನ್ನರ ವಿರುದ್ಧ ಘೋಷಣೆ – ಪೊಲೀಸರಿಂದ ತನಿಖೆ

    ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ `ಗಣರಾಜ್ಯವನ್ನು ರಕ್ಷಿಸಿ’ ಎಂಬ ಘೋಷ ವಾಕ್ಯದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯಿಂದ ಈಚೆಗೆ ನಡೆದ ರ‍್ಯಾಲಿಯಲ್ಲಿ ಬಾಲಕನೊಬ್ಬ ಹಿಂದೂ ಹಾಗೂ ಕ್ರಿಶ್ಚಿಯನ್ನರ ವಿರುದ್ಧ ಘೋಷಣೆ ಕೂಗಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.

    ವೀಡಿಯೋನಲ್ಲಿ ವ್ಯಕ್ತಿಯೊಬ್ಬರ ಹೆಗಲ ಮೇಲೆ ಕುಳಿತಿರುವ ಹುಡುಗ, ಅಕ್ಕಿಯನ್ನು ಸಿದ್ಧವಾಗಿಡಿ, ಯಮ ನಿಮ್ಮ ಮನೆಗೆ ಬರ್ತಾನೆ, ನಾವು ಗೌರವಯುತವಾಗಿ ಬದುಕಿದರೆ ನಮ್ಮ ಜಾಗದಲ್ಲಿ ಬದುಕಬಹುದು. ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದು ನಮಗೆ ಗೊತ್ತಿಲ್ಲ ಎಂದೂ ಘೋಷಣೆ ಕೂಗಿದ್ದಾನೆ. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

    rally (1)

    ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ, ಇಂತಹ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವುದು ಬಾಲಾಪರಾಧಿ ಕಾಯ್ದೆಯ ಅನ್ವಯ ಶಿಕ್ಷಾರ್ಹವಾಗಿದೆ. ನಾವು ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ ಜಿಲ್ಲೆಯ ಅಧಿಕಾರಿಗಳಿಗೆ ಪತ್ರ ಬರೆಯುತ್ತೇವೆ. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇವೆ ಎಂದಿದ್ದಾರೆ.

    ಸಾಂದರ್ಭಿಕ ಚಿತ್ರ

    ಪಿಎಫ್‌ಐ ವಕ್ತಾರ ರೌಫ್ ಪಟ್ಟಾಂಬಿ ಸಹ ಈ ಬಗ್ಗೆ ಮಾತನಾಡಿದ್ದು, ಸಂಘಟನೆಯು ಆಯೋಜಿಸಿದ್ದ ಸಮಾವೇಶದಲ್ಲಿ ಘೋಷಣೆ ಕೂಗಿಲ್ಲ. ಅದಕ್ಕೂ ಮುನ್ನ ಸಾವಿರಾರು ಜನರು ಭಾಗವಹಿಸಿದ್ದ ರ‍್ಯಾಲಿಯಲ್ಲಿ ಘೋಷಣೆ ಕೂಗಿರಬಹುದು. ಆದರೆ ಹಿಂದೂಗಳ ವಿರುದ್ಧ ಘೋಷಣೆ ಕೂಗಿಲ್ಲ, ಹಿಂದುತ್ವ ವಿರೋಧಿ ಹಾಗೂ ಫ್ಯಾಸಿಸ್ಟ್ಗಳ ವಿರುದ್ಧ ಕೂಗಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಲವು ಐಫೋನ್‌ಗಳಲ್ಲಿ ಸ್ಥಗಿತವಾಗಲಿದೆ ವಾಟ್ಸಪ್

    ರ‍್ಯಾಲಿಯಲ್ಲಿ ಅನೇಕರು ಹಿಂದುತ್ವ ಭಯೋತ್ಪಾದನೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಗೆಯೇ ಈ ಹುಡುಗನೂ ಘೋಷಣೆ ಕುಗಿದ್ದಾನೆ. ಹೊರತಾಗಿ ಹುಡುಗನ ಕೆಲ ಘೋಷಣೆಗಾಗಿ ನಾವು ವಿಷಾದಿಸುತ್ತೇವೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ. ಅಲಪ್ಪುಳ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

  • ಮೋದಿ ಒಳ್ಳೆಯವರಲ್ಲ, RSS ಭಯೋತ್ಪಾದಕ ಸಂಘಟನೆ- ಕಾರ್ ಪೊಲೀಸ್ ವಶಕ್ಕೆ

    ಮೋದಿ ಒಳ್ಳೆಯವರಲ್ಲ, RSS ಭಯೋತ್ಪಾದಕ ಸಂಘಟನೆ- ಕಾರ್ ಪೊಲೀಸ್ ವಶಕ್ಕೆ

    ತಿರುವನಂತಪುರಂ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಒಳ್ಳೆಯವರಲ್ಲ. RSS   ಭಯೋತ್ಪಾದಕ ಸಂಘಟನೆಯಾಗಿದೆ ಎಂದು ಬರೆದಿದ್ದ ಕಾರನ್ನು ಪೊಲೀಸರು ತಿರುವನಂತಪುರಂನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

    ನಡೆದಿದ್ದೇನು?: ಹೋಟೆಲ್ ಒಂದಕ್ಕೆ ವ್ಯಕ್ತಿಯೊಬ್ಬ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಅನುಮಾನಾಸ್ಪದವಾಗಿ ವರ್ತಿಸಿದ್ದಾನೆ. ಬಳಿಕ ಹೋಟೆಲ್ ಒಳಗೆ ಬಂದು ಮದ್ಯ ಕೇಳಿ ಸಿಬ್ಬಂದಿ ಜೊತೆ ಜಗಳವಾಡಿಕೊಂಡಿದ್ದಾನೆ. ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಷ್ಟರಲ್ಲಿ ಆ ವ್ಯಕ್ತಿ ಕಾರನ್ನು ಅಲ್ಲಿಯೇ ಬಿಟ್ಟು ಆಟೋ ಹತ್ತಿ ಪರಾರಿಯಾಗಿದ್ದಾನೆ. ಇದನ್ನೂ ಓದಿ:  ಪಂಜಾಬ್‌ ಚುನಾವಣೆ – ನಟ ಸೋನು ಸೂದ್‌ ಸಹೋದರಿ ಕಾಂಗ್ರೆಸ್‌ ಸೇರ್ಪಡೆ

    ಸ್ಥಳಕ್ಕೆ ಬಂದ ಪೊಲೀಸರು ಕಾರು ತಪಾಸಣೆ ನಡೆಸಿದಾಗ ಅದರಲ್ಲಿ ಹಳೆಯ ಬಟ್ಟೆಗಳು, ಕೇಬಲ್‍ಗಳು, ಎಲೆಕ್ಟ್ರಾನಿಕ್ ವಸ್ತುಗಳು ದೊರೆತಿವೆ. ಆದರೆ ಕಾರ್ ಮೇಲೆ ವಿಚಿತ್ರವಾಗಿ ಬರೆಯಲಾಗಿತ್ತು. ಅನುಮಾನಗೊಂಡ ಪೊಲೀಸರು ಬಾಂಬ್ ಪತ್ತೆ ದಳ, ಶ್ವಾನ ದಳವನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಕಾರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ – ಫೆ.10ರಿಂದ ಮತದಾನ, ಮಾ.10ರಂದು ಮತ ಎಣಿಕೆ

    ಕಾರ್ ಮೇಲೆ ಪ್ರಧಾನಿ ನರೇಂದ್ರ ರೈತರ ಹೋರಾಟದ ವೇಳೆ 750 ಜನರನ್ನು ಕೊಂದಿದ್ದಾನೆ. ಪ್ರಧಾನಿ ಒಳ್ಳೆಯವರಲ್ಲ. ಆರ್‌ಎಸ್‌ಎಸ್‌ ಒಂದು ಭಯೋತ್ಪಾದಕ ಸಂಘಟನೆಯಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಖೀಂಪುರದಲ್ಲಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂದು ಕಾರ್ ಮೇಲೆ ಬರೆಯಲಾಗಿತ್ತು.