Tag: sm

  • ಆಡಿಯೋ ಲೀಕ್ ಮಾಡಿದವ್ರ ವಿರುದ್ಧ ಕ್ರಮ ಕೈಗೊಳ್ಳಿ- ಸಿಎಂಗೆ ಕತ್ತಿ ಮನವಿ

    ಆಡಿಯೋ ಲೀಕ್ ಮಾಡಿದವ್ರ ವಿರುದ್ಧ ಕ್ರಮ ಕೈಗೊಳ್ಳಿ- ಸಿಎಂಗೆ ಕತ್ತಿ ಮನವಿ

    ಬೆಂಗಳೂರು: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಆಡಿಯೋ ಲೀಕ್ ಮಾಡಿದವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಿ ಎಂದು ಮಾಜಿ ಸಚಿವ ಉಮೇಶ್ ಕತ್ತಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.

    ಇಂದು ಸಿಎಂ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಎಸ್‌ವೈ ಅವರನ್ನು ಭೇಟಿಯಾದ ಕತ್ತಿ ಸುಮಾರು ಒಂದು ಗಂಟೆಗಳ ಕಾಲ ಜೊತೆ ಚರ್ಚೆ ನಡೆಸಿದರು. ಸಿಎಂ ಹಾಗೂ ಕತ್ತಿ ಚರ್ಚೆ ತೀವ್ರ ಕುತೂಹಲ ಮೂಡಿಸಿದ್ದು, ಆಡಿಯೋ ರೆಕಾರ್ಡ್ ಮಾಡಿದೋರು ಬೆಳಗಾವಿಯ ಅತೃಪ್ತ ಬಣ ಎಂಬ ಶಂಕೆ ಹಿನ್ನೆಲೆಯಲ್ಲಿ ಈ ಚರ್ಚೆ ನಡೆದಿದೆ ಎನ್ನಲಾಗಿದೆ.

    ಚರ್ಚೆಯ ವೇಳೆ ಆಡಿಯೊ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ. ನಮ್ಮ ಜಿಲ್ಲೆ ಬಗ್ಗೆ ಹೆಚ್ಚು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಯಾರ ಕಡೆಯವರೇ ಆಗಲಿ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಉಮೇಶ್ ಕತ್ತಿ ಮನವಿ ಮಾಡಿದ್ದಾರೆ. ಅಲ್ಲದೆ ಅವರನ್ನು ಸುಮ್ಮನೆ ಬಿಡಬಾರದು ಎಂದು ಇದೇ ವೇಳೆ ಸಿಎಂ ಮೇಲೆ ಕತ್ತಿ ಒತ್ತಡ ಹಾಕಿದ್ದಾರೆ.

    ಬೆಳಗಾವಿ ರಾಜಕೀಯ ಕಿತ್ತಾಟವೇ ಆಡಿಯೋ ಲೀಕ್ ಗೆ ಕಾರಣ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಕತ್ತಿ ಇಂದು ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹಾಗಾದ್ರೆ ಆಡಿಯೋ ಲೀಕ್ ನಿಂದ ಬೆಳಗಾವಿ ಬಿಜೆಪಿಯಲ್ಲಿ ಮತ್ತಷ್ಟು ಫೈಟ್ ಹೆಚ್ಚಾಗುತ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಇದನ್ನೂ ಓದಿ: ಈ ಆಡಿಯೋದಲ್ಲಿ ಹೊಸದಾಗಿ ಏನಿದೆ? – ಸುಪ್ರೀಂನಲ್ಲಿ ಏನಾಯ್ತು? ಕಾಂಗ್ರೆಸ್ಸಿಗೆ ಜಯವೋ? ಹಿನ್ನಡೆಯೋ?

    ಆಡಿಯೋದಲ್ಲಿ ಬಿಎಸ್‌ವೈ ಹೇಳಿದ್ದೇನು?
    ಅ.26ರಂದು ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಬಿಎಸ್‌ವೈ, ಯಾಕೋ ಇವತ್ತು ನೀವು ಮಾತಾಡಿದಂತ ಧಾಟಿ ಸರ್ಕಾರ ಉಳಿಸೋಕೆ ಇದೆ ಅಂತ ಅನ್ನಿಸುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷರೇ ಮುಂದೆ ನಿಂತು 17 ಜನರು 2-3 ತಿಂಗಳು ಮುಂಬೈಯಲ್ಲಿರಿಸಿದ್ದರು. ಅವರೆಲ್ಲರು ಕ್ಷೇತ್ರಕ್ಕೂ ಬರಲಿಲ್ಲ. ಹೆಂಡ್ತಿ ಮಕ್ಕಳ ಮುಖ ನೋಡಿರಲಿಲ್ಲ. 3-4 ವರ್ಷ ವಿಪಕ್ಷದಲ್ಲಿ ಇರಬೇಕಾದ ನಮ್ಮನ್ನ ಆಡಳಿತ ಪಕ್ಷಕ್ಕೆ ಬರುವಂತೆ ಮಾಡಿದರು. ನಿಮ್ಮ ಬಾಯಲ್ಲಿ ಅನರ್ಹ ಪರ ಗಟ್ಟಿಯಾಗಿ ನಿಂತುಕೊಳ್ಳುತ್ತೇವೆ ಅನ್ನೋ ಮಾತು ಬರಲಿಲ್ಲ. ಇದನ್ನ ನಾನು ಖಂಡಿತಾ ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ. ಐ ಆಮ್ ಸಾರಿ. ನನಗೇನೂ ಸಿಎಂ ಗಿರಿ ಬೇಕಾಗಿರಲಿಲ್ಲ. ಈಗಾಗಲೇ 3-4 ಬಾರಿ ಸಿಎಂ ಆಗಿದ್ದೇನೆ. ದೊಡ್ಡತನ, ಧಾರಾಳತನ, ವಾಸ್ತವ ಸ್ಥಿತಿಯನ್ನ ತಿಳಿಯದೆ ನೀವು ಮಾತಾಡಿದ್ದೀರಾ ಗೋಕಾಕ್ ಬಗ್ಗೆ ನೀವೇಕೆ ಮಾತಾಡಿಲ್ಲ? ಅದರಲ್ಲಿ ಅಂತಹ ವಿಶೇಷ ಏನಿದೆ? ಅವರನ್ನೆಲ್ಲ ನಂಬಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತು ನಾನು ಅಪರಾಧ ಮಾಡಿದ್ದೇನೆ ಅಂತ ಈಗ ಅನ್ನಿಸುತ್ತಿದೆ ಎಂದು ಹೇಳಿದ್ದರು.

    ಸಿಎಂ ಅವರ ಈ ಆಡಿಯೋ ಅಕ್ಟೋಬರ್ 31ರಂದು ಲೀಕ್ ಆಗಿದ್ದು, ದೇಶದ್ಯಾಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಕಾಂಗ್ರೆಸ್ ಕೂಡ ಈ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಲಾಗುವುದು ಎಂದು ಮಂಗಳವಾರ ಹೇಳಿತ್ತು.

  • ಸಿಎಂಗೆ ಬಿಗ್ ಶಾಕ್ ನೀಡಿದ ನಟ ಕಿಚ್ಚ ಸುದೀಪ್!

    ಸಿಎಂಗೆ ಬಿಗ್ ಶಾಕ್ ನೀಡಿದ ನಟ ಕಿಚ್ಚ ಸುದೀಪ್!

    ಬಾಗಲಕೋಟೆ: ಕರ್ನಾಟಕ ಕುರುಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲು 5 ದಿನ ಇರುವಂತೆ ಸಿಎಂ ಅವರಿಗೆ ಕಹಿ ಸುದ್ದಿಯೊಂದು ಹೊರಬಿದ್ದಿದೆ.

    ಯಾವುದೇ ಕಾರಣಕ್ಕೂ ಬದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಪ್ರಚಾರ ಮಾಡಲ್ಲ. ಬಹಳ ವರ್ಷಗಳಿಂದ ನನಗೆ ಶ್ರೀರಾಮುಲು ಗೊತ್ತು. ಅವ್ರಿಗೆ ಒಳ್ಳೆಯದಾಗಲಿ ಎಂದು ನಟ ಸುದೀಪ್ ಹೇಳಿದ್ದಾರೆ. ಇದನ್ನೂ ಓದಿ: ವಾಲ್ಮಿಕಿ ಸಮುದಾಯದ ಮತ ಸೆಳೆಯಲು ಕಿಚ್ಚನನ್ನು ಅಸ್ತ್ರವಾಗಿಸಲು ಸಿಎಂ ಪ್ಲಾನ್!

    ಸುದೀಪ್ ಬಳಸಿಕೊಂಡು ಬದಾಮಿಯಲ್ಲಿ ವಾಲ್ಮೀಕಿ ಸಮುದಾಯದ ಮತಗಳಿಸಲು ಪ್ಲಾನ್ ಮಾಡಿದ್ದ ಸಿಎಂ ಅವರಿಗೆ, ಇದೀಗ ನಟ ಕಿಚ್ಚ ಸುದೀಪ್ ನಿರ್ಧಾರ ಶಾಕ್ ನೀಡಿದೆ. ಈ ಮೂಲಕ ಬದಾಮಿ ಕ್ಯಾಂಪೇನ್ ಕಣದಿಂದ ಹಿಂದೆ ಸರಿಯಲು ಶ್ರೀರಾಮುಲು ಅವರು ಸುದೀಪ್ ಮೇಲೆ ಒತ್ತಡ ಹೇರಿದ್ರಾ ಎಂಬ ಪ್ರಶ್ನೆಯೊಂದು ಇದೀಗ ಮೂಡಿದೆ.

    ಇದೇ ವೇಳೆ ಇಬ್ಬರೂ ಆತ್ಮೀಯರು, ಬದಾಮಿಯಲ್ಲಿ ರಾಮುಲು ಪರ ಪ್ರಚಾರ ನಡೆಸಲ್ಲ ಅಂತ ನಟ ಯಶ್ ಕೂಡ ಹೇಳಿದ್ದಾರೆ. ಈ ಮಧ್ಯೆ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಲಿದ್ದು, 33 ಹಳ್ಳಿಗಳನ್ನ ದರ್ಶನ್ ರೋಡ್ ಶೋ ಮಾಡಲಿದ್ದಾರೆ. ಇದನ್ನೂ ಓದಿ: ಸಿಎಂ ಪರ ನಟ ಸುದೀಪ್ ಪ್ರಚಾರಕ್ಕೆ ಶುರುವಾಯ್ತು ತೀವ್ರ ವಿರೋಧ

    ವಾಲ್ಮಿಕಿ ಸಮುದಾಯದ ಮತ ಸೆಳೆಯಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀಪ್ ಅವರನ್ನು ತನ್ನ ಪರ ಪ್ರಚಾರ ನಡೆಸುವಂತೆ ಪ್ಲಾನ್ ಮಾಡಿದ್ದರು. ಈ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ದಲಿತ ಸಂಘಟನೆಗಳು ಸಿಎಂ ವಿರುದ್ಧ ಕಿಡಿಕಾರಿವೆ.

    2013 ರಲ್ಲಿ ಪರಮೇಶ್ವರ ಸೋಲಿಸಿಲು ಸಿಎಂ ಒಳ ತಂತ್ರ ಮಾಡಿದ್ದಾರೆ. ಸದಾಶಿವ ವರದಿ ಮೂಲಕ ಎರಡ ಮತ್ತು ಬಲ ಸಮುದಾಯದ ನಡುವೆ ಒಡೆದಾಳುವ ನೀತಿ ಪಾಲನೆ ಮಾಡಿದ್ದಾರೆ. ಚೆಲುವಾದಿ ಅಭಿವೃದ್ಧಿ ನಿಗಮಸ್ಥಾಪಿಸದ ಹಿನ್ನೆಲೆ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪರಮೇಶ್ವರ್, ಸತೀಶ್ ಜಾರಕೀಹೋಳಿ ಅವರನ್ನ ಸಂಪುಟದಿಂದ ಅರ್ಧಕ್ಕೆ ಸಿಎಂ ಕೈ ಬಿಟ್ಟಿದ್ದಾರೆ. ಶ್ರೀನಿವಾಸ್ ಪ್ರಸಾದ್ ಅವರನ್ನ ಕಾಂಗ್ರೆಸ್ ನಿಂದ ಹೊರ ಹೋಗುವಂತೆ ಸಿದ್ದರಾಮಯ್ಯ ಮಾಡಿದ್ದಾರೆ ಅಂತಾ ಆರೋಪ ಮಾಡಿದ್ದು, ದಲಿತ ವಿರೋಧಿ ನೀತಿ ಪಾಲಿಸುವ ಸಿದ್ದರಾಮಯ್ಯಗೆ ಪಾಠ ಕಲಿಸಲು ಮುಂದಾದ ದಲಿತ ಸಂಘಟನೆ ಬದಾಮಿಯಲ್ಲಿ ದಲಿತರು ಸಿಎಂಗೆ ಮತ ಹಾಕದಂತೆ ಕರೆ ನೀಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

  • ಕಾವೇರಿ ತೀರ್ಪು ನಡುವೆಯೇ ಇಂದು ರಾಜ್ಯ ಬಜೆಟ್ – ಎಲೆಕ್ಷನ್ ಹಳಿ ಮೇಲೆ ಸಾಗುತ್ತಾ ಅಯವ್ಯಯ

    ಕಾವೇರಿ ತೀರ್ಪು ನಡುವೆಯೇ ಇಂದು ರಾಜ್ಯ ಬಜೆಟ್ – ಎಲೆಕ್ಷನ್ ಹಳಿ ಮೇಲೆ ಸಾಗುತ್ತಾ ಅಯವ್ಯಯ

    ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 13ನೇ ಬಜೆಟ್ ಮಂಡಿಸಲಿದ್ದಾರೆ.

    ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರಾಗಿ 13ನೇ ಬಾರಿ ಹಾಗೂ ಮುಖ್ಯಮಂತ್ರಿಯಾದ ಬಳಿಕ 6ನೇ ಬಜೆಟ್ ಮಂಡಿಸುತ್ತಿದ್ದು, 13 ಬಾರಿ ದಾಖಲೆ ಬಜೆಟ್ ಮಂಡಿಸಿದ್ದ ರಾಮಕೃಷ್ಣ ಹೆಗಡೆ ಅವರ ದಾಖಲೆಯನ್ನು ಸಮ ಮಾಡಲಿದ್ದಾರೆ.

    ಸಾಲದ ಹೊರೆ, ಲೇಖಾನುಧಾನಕ್ಕೆ ಪ್ರತಿಪಕ್ಷಗಳ ಆಗ್ರಹದ ನಡುವೆಯೇ ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಯುವ ಸಮೂಹ, ರೈತರ ಸಬಲೀಕರಣವನ್ನ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲಾ ವರ್ಗಗಳನ್ನು ತೃಪ್ತಿಪಡಿಸುವ ಜನಪ್ರಿಯ ಬಜೆಟ್ ಮಂಡಿಸುವ ಸಾಧ್ಯತೆ ಹೆಚ್ಚಾಗಿದೆ. ಸಹಕಾರಿ ಸಂಘಗಳಲ್ಲಿನ ರೈತರ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದು, ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ತಂದು ಬಂಪರ್ ಕೊಡುಗೆ ನೀಡಲಿದ್ದಾರೆ ಎನ್ನಲಾಗಿದೆ.

    ಇಂದು ಬೆಳಗ್ಗೆ 11.30ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ಚುನಾವಣೆಗೆ ಇನ್ನೆರಡು ತಿಂಗಳು ಇರುವಾಗ ಮಂಡಿಸುತ್ತಿರುವ ಬಜೆಟ್ ಕುತೂಹಲ ಮೂಡಿಸಿದೆ.

     

    ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿ ಏನಿರಬಹುದು..?

    * ರೈತರ ಸಂಪೂರ್ಣ ಸಾಲ ಮನ್ನಾ (2571 ಕೋಟಿ)
    * ಸರ್ಕಾರಿ ನೌಕರರ ವೇತನ ಹೆಚ್ಚಳ (6ನೇ ವೇತನ ಆಯೋಗದ ಶಿಫಾರಸು)
    * ಆರೋಗ್ಯ ಭಾಗ್ಯಕ್ಕೆ ಹೆಚ್ಚಿನ ಒತ್ತು
    * ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮತ್ತಷ್ಟು ಕಾರ್ಯಕ್ರಮ
    * ಪಟ್ಟಣಗಳಿಗೆ ಇಂದಿರಾ ಕ್ಯಾಂಟೀನ್ ವಿಸ್ತರಣೆ
    * ಮಹಿಳೆಯರು, ವೃದ್ಧರು, ಅಂಗವಿಕಲರ ಮಾಶಾಸನ ದುಪ್ಪಟ್ಟು
    * ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್
    * ಬಗರ್‍ಹುಕುಂ ಯೋಜನೆಯ ಅನುಷ್ಠಾನ
    * ಉದ್ಯೋಗ ಸೃಷ್ಟಿಯ ಘೋಷಣೆ (ಶಿಕ್ಷಕರ ನೇಮಕ)
    * ಬೆಂಗಳೂರಿಗೆ 17 ಸಾವಿರ ಕೋಟಿಗಿಂತಲೂ ಹೆಚ್ಚಿನ ಅನುದಾನ