Tag: snake shyam

  • ‘ಬಿಗ್ ಬಾಸ್’ ಮನೆಯಲ್ಲಿ ನನಗೆ ಆರೋಗ್ಯ ಕೈಕೊಟ್ಟಿತು : ಸ್ನೇಕ್ ಶ್ಯಾಮ್

    ‘ಬಿಗ್ ಬಾಸ್’ ಮನೆಯಲ್ಲಿ ನನಗೆ ಆರೋಗ್ಯ ಕೈಕೊಟ್ಟಿತು : ಸ್ನೇಕ್ ಶ್ಯಾಮ್

    ಬಿಗ್ ಬಾಸ್ ಕನ್ನಡ  (Bigg Boss Kannada) ಸೀಸನ್ 10ರ ಮೊದಲ‌ ವೀಕೆಂಡ್ ಎಪಿಸೋಡಿನ‌ ಕಿಚ್ಚನ ಪಂಚಾಯಿತಿ ನಿನ್ನೆ ನಡೆದಿತ್ತು.  ಅದರ ಮುಂದುವರಿದ ಭಾಗವಾಗಿ ಇಂದಿನ ‘ಸೂಪರ್ ಸಂಡೆ ಸುದೀಪ್ (Sudeep) ಜೊತೆ’ಯಲ್ಲಿ ಸ್ಪರ್ಧಿಗಳ ಜೊತೆಗೆ ಮಾತುಕತೆಗೆ ಇಳಿದ ಕಿಚ್ಚ, ತಮಾಷೆಯಾಗಿ ಮಾತಾಡುತ್ತ, ನಗುನಗಿಸುತ್ತಲೇ ಹೇಳಬೇಕಾದ ಮಾತುಗಳನ್ನು ಸ್ಪಷ್ಟವಾಗಿ ಹೇಳಿದರು.

    ನಿನ್ನೆಯ ಎಪಿಸೋಡಿನಲ್ಲಿ ನಾಮಿನೇಷನ್ ಪಟ್ಟಿಯಲ್ಲಿ ಸ್ನೇಕ್ ಶ್ಯಾಮ್, ಮೈಕಲ್ ಅಜಯ್, ಸಿರಿ, ನೀತು,ಡ್ರೋಣ್ ಪ್ರತಾಪ್, ಇವರೆಲ್ಲ ಇದ್ದರು. ಇವರಲ್ಲಿ ಮೊದಲು ಸೇಫ್‌ ಆಗಿದ್ದು ನೀತು ಅವರು. ನಂತರ ಉಳಿದಿದ್ದು, ಮೈಕಲ್, ಸಿರಿ ಮತ್ತು ಸ್ನೇಕ್‌ ಶ್ಯಾಮ್‌ (Snake Shyam) ಅವರು. ಅವರಲ್ಲಿ ಬಿಗ್ ಬಾಸ್ ಕನ್ನಡ ಹತ್ತನೇ ಸೀಸನ್ ನ ಮೊದಲ ಎವಿಕ್ಟೆಡ್ ಕಂಟೆಸ್ಟೆಂಟ್ ಆಗಿ ಸ್ನೇಕ್ ಶ್ಯಾಮ್ ಮನೆಯಿಂದ ಹೊರಗೆ (Eliminate) ಬಿದ್ದಿದ್ದಾರೆ.

    ಐವತ್ತೆಂಟು ಸಾವಿರ ಹಾವುಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟ ಖ್ಯಾತಿ ಹೊಂದಿದ್ದ ಶ್ಯಾಮ್ ಅವರನ್ನು ಜನರು ಹೋಲ್ಡ್ ನಲ್ಲಿಟ್ಟಿದ್ದರು. ಬಿಗ್ ಬಾಸ್ ಅವರನ್ನು ಉಳಿದ ಹೋಲ್ಡ್ ಸ್ಪರ್ಧಿಗಳ ಜೊತೆಗೆ ಮನೆಯೊಳಗೆ ಕಳಿಸಿದ್ದರು. ‘ಒಂದು ವಾರ ನಿಮ್ಮ ಪರ್ಫಾರ್ಮೆನ್ಸ್ ನೋಡಿ ಮುಂದಿನ ನಿರ್ಧಾರ ತಿಳಿಸಲಾಗುತ್ತದೆ’ ಎಂದೂ ಆಸಮಯದಲ್ಲಿ ಕಿಚ್ಚ ಸುದೀಪ್ ಹೇಳಿದ್ದರು. ಹೋಗುವಾಗ ಇಂಟ್ರೆಸ್ಟಿಂಗ್ ಕಂಟೆಸ್ಟೆಂಟ್ ಆಗಿಯೇ ಕಾಣಿಸಿದ್ದ ಶ್ಯಾಮ್, ಬಿಗ್ ಬಾಸ್ ಮನೆಯೊಳಗೆ ಸದ್ದು ಮಾಡಿದ್ದು ಕಡಿಮೆ. ಇಂದಿನ ಎಪಿಸೋಡ್‌ನಲ್ಲಿಯೂ ಉಳಿದ ಸ್ಪರ್ಧಿಗಳಲ್ಲಿ ಹೆಚ್ಚಿನ ಜನರು ಶ್ಯಾಮ್ ಅವರೇ ಹೊರಗೆ ಹೋಗಬೇಕು ಎಂದು ಅಭಿಪ್ರಾಯಪಟ್ಟರು. ಇದೀಗ ಅವರು ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಹೊರಗೆ ಬಿದ್ದಿದ್ದಾರೆ.

    ‘ನನಗೆ ಇಲ್ಲಿ ಸಾಕಷ್ಟು ಸ್ನೇಹಿತರು ಇದ್ದರು. ಆದ್ರೆ ಇಲ್ಲಿ ನನಗೆ ಹೆಲ್ತ್ ಕೈಕೊಟ್ಟಿತು. ಹಾಗೆಯೇ ಪ್ರಾಣಿಗಳ ನೆನಪು ತುಂಬ ಕಾಡುತ್ತಿತ್ತು. ಅದೇ ಕಾರಣಕ್ಕೆ ನನಗೆ ಇಲ್ಲಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ’ ಎಂದು ಅಭಿಪ್ರಾಯ ಹಂಚಿಕೊಂಡರು.

     

    ಶ್ಯಾಮ್ ಅವರನ್ನು ಬೀಳ್ಕೊಟ್ಟ ಉಳಿದ ಸ್ಪರ್ಧಿಗಳು ಸದ್ಯಕ್ಕೇನೋ ನಿರಾಳರಾಗಿದ್ದಾರೆ. ಆದರೆ ಈ ನೆಮ್ಮದಿ ಎಷ್ಟು ಕಾಲ ಇರಬಹುದು? ಎರಡನೇ ವಾರದ ಬಿಗ್ ಬಾಸ್ ಮನೆಯೊಳಗಿನ ಬದುಕು ಹೇಗಿರಬಹುದು? ಬಿಗ್ ಬಾಸ್ ಮನೆಯೊಳಗಿನಿಂದ ಹೊರಬೀಳುವ ಮುಂದಿನ ಸ್ಪರ್ಧಿ ಯಾರು? ಹೀಗೆ ಹತ್ತಾರು ವಿಷಯಗಳನ್ನು JioCinema 24ಗಂಟೆ ನೇರಪ್ರಸಾರದಲ್ಲಿ ನೋಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking: ‘ಬಿಗ್ ಬಾಸ್’ ಮನೆಯಿಂದ ಸ್ನೇಕ್ ಶ್ಯಾಮ್ ಹೊರಗೆ?

    Breaking: ‘ಬಿಗ್ ಬಾಸ್’ ಮನೆಯಿಂದ ಸ್ನೇಕ್ ಶ್ಯಾಮ್ ಹೊರಗೆ?

    ಮೈಸೂರಿನ ಸ್ನೇಕ್ ಶ್ಯಾಮ್ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಸೀಸನ್ ನ ಮೊದಲ ಎಲಿಮಿನೇಟ್ (Eliminate) ಶ್ಯಾಮ್ ಆಗಿದ್ದಾರೆ ಎನ್ನುವುದು ಸಿಗುತ್ತಿರುವ ಮಾಹಿತಿ. ಆದರೆ, ಶ್ಯಾಮ್ (Snake Shyam) ಮನೆಯಲ್ಲಿ ಇದ್ದರಾ? ಅಥವಾ ನಿಜವಾಗಿಯೂ ಎಲಿಮೇನ್ ಆಗಿ ಹೊರ ಬಂದಿದ್ದಾರಾ ಎನ್ನುವುದು ಇಂದು ಸಂಜೆಯೇ ಕಿಚ್ಚನ ಪಂಚಾಯತಿಯಲ್ಲಿ ತೀರ್ಮಾನವಾಗಲಿದೆ.

    ಒಂದು ವಾರದ ಎಪಿಸೋಡ್ ಗಳನ್ನು ನೋಡಿದಾಗ ಸ್ನೇಕ್ ಶ್ಯಾಮ್ ಅಷ್ಟಾಗಿ ಉತ್ಸಾಹದಿಂದ ಇರಲಿಲ್ಲ. ವಯಸ್ಸಿನ ಕಾರಣದಿಂದಾಗಿ ಟಾಸ್ಕ್ ಮಾಡುವುದು ಕೂಡ ಅವರಿಗೆ ಕಷ್ಟದ ಕೆಲಸವೇ. ಮನೆಯಲ್ಲಿರುವವರನ್ನು ಹೋಲಿಸಿದರೆ ಶ್ಯಾಮ್ ಲವಲವಿಕೆಯಿಂದ ಇರುತ್ತಿರಲಿಲ್ಲ. ಈ ಎಲ್ಲ ಕಾರಣಗಳಿಂದಾಗಿ ಅವರನ್ನು ಮನೆಯಿಂದ ಆಚೆ ಹಾಕಿರಬಹುದಾ? ಗೊತ್ತಿಲ್ಲ. ಯಾಕೆಂದರೆ, ಅವರು ಮನೆಯಿಂದ ಹೊರ ಬಂದಿರುವುದು ನಿಕ್ಕಿ ಆಗಿಲ್ಲ.

    ಕಿಚ್ಚನ ಪಂಚಾಯತಿಯಲ್ಲೂ ಗರಂ

    ಬಿಗ್ ಬಾಸ್ ಕನ್ನಡ 10 (Bigg Boss Kannada)ರ ಕಿಚ್ಚನ ಮೊದಲ ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ವಾಹಿನಿಯು ಪ್ರೋಮೋವನ್ನು ರಿಲೀಸ್ ಮಾಡಿದ್ದು, ಕಿಚ್ಚ ಆಡಿದ ಮಾತುಗಳು ಸಖತ್ ಕುತೂಹಲ ಮೂಡಿಸಿವೆ. ‘ದೇವರ ಮುಂದೆ ನಿಯತ್ತಾಗಿ ಬೇಡಿಕೊಂಡರೆ, ದೇವರೇ ಕ್ಷಮಿಸಿ ಒಂದು ವರ ಕೊಡ್ತಾನೆ’ ಎಂದು ಹೇಳಲಾದ ಮಾತು ವೈರಲ್ ಆಗಿದೆ. ಆ ಮಾತುಗಳನ್ನು ಅವರು ಯಾರಿಗೆ ಹೇಳಿದ್ದಾರೆ ಎನ್ನುವುದು ಪ್ರೊಮೋದಲ್ಲಿ ಬಳಸಲಾದ ದೃಶ್ಯಗಳೇ ಹೇಳುತ್ತವೆ.

    ಇಂದು ಬಿಗ್ ಬಾಸ್ ಮನೆಯಲ್ಲಿ ಕಿಚ್ಚನ ಮೊದಲ ಪಂಚಾಯತಿ. ವೀಕೆಂಡ್ ನಲ್ಲಿ ಸುದೀಪ್ (Sudeep) ಜೊತೆ ಮಾತನಾಡೋಕೆ ಬಿಗ್ ಬಾಸ್ ಸ್ಪರ್ಧಿಗಳು ತುದಿಗಾಲಲ್ಲಿ ಕಾಯುತ್ತಾರೆ. ವೀಕೆಂಡ್ ಪಂಚಾಯತಿಯಲ್ಲಿ (Kichchaana Panchayati) ಭಾಗಿಯಾಗಲೆಂದೇ ಹೊಸ ಹೊಸ ವಿನ್ಯಾಸದ ಕಾಸ್ಟ್ಯೂಮ್ ಅನ್ನೂ ರೆಡಿ ಮಾಡಿಕೊಂಡಿರುತ್ತಾರೆ. ಹಾಗಂತ ಕಿಚ್ಚನ ಪಂಚಾಯತಿ, ಯಾವ ವೇಳೆಯಲ್ಲೇ ಹೇಗೆ ಟರ್ನ್ ಆಗತ್ತೋ ಗೊತ್ತಿಲ್ಲ. ನಗುತ್ತಲೇ ಅಳಿಸುತ್ತಾರೆ, ಅಳಿಸುತ್ತಲೇ ನಗಿಸುತ್ತಾರೆ, ಕೋಪ ಬಂದರೆ ಮುಖಾಮೋತಿ ನೋಡದೇ ಉಗಿದು ಬಿಡುತ್ತಾರೆ ಸುದೀಪ್. ಹಾಗಾಗಿ ಕಿಚ್ಚನ ಪಂಚಾಯತಿಗಾಗಿ ಕಿರುತೆರೆ ಪ್ರೇಕ್ಷಕ ಕೂಡ ಕಾದಿರುತ್ತಾನೆ.

    ಬಿಗ್ ಬಾಸ್ ಸೀಸನ್ 10ರ ಮೊದಲ ಕಿಚ್ಚನ ಪಂಚಾಯತಿ ಅಂದರೆ, ‘ವಾರದ ಕಥೆ ಕಿಚ್ಚನ ಜೊತೆ’ ಇಂದು ಆರಂಭವಾಗಿದೆ. ಈಗಾಗಲೇ ಶೂಟಿಂಗ್ ಕೂಡ ನಡೆದಿದ್ದು, ಮನೆಯಲ್ಲಿದ್ದವರ ಮೇಲೆ ಕಿಚ್ಚ ಗರಂ ಆಗಿದ್ದಾರೆ ಎನ್ನುವ ಮಾಹಿತಿ ಇದೆ. ಬಿಗ್ ಬಾಸ್ ಮನೆಯೊಳಗೆ ಕಂಟೆಸ್ಟೆಂಟ್ ಬಂದು ಕೇವಲ ಒಂದು ವಾರವಾಗಿದೆಯಷ್ಟೆ. ಒಬ್ಬರಿಗೊಬ್ಬರನ್ನು ಅರ್ಥ ಮಾಡಿಕೊಳ್ಳಲು ಇದು ಅತ್ಯಂತ ಕಡಿಮೆ ಸಮಯ. ಆದರೂ, ಡ್ರೋನ್ ಪ್ರತಾಪ್ ಮೇಲೆ ಮನೆಮುಂದಿಯಲ್ಲ ಮುರಿದು ಬಿದ್ದಿದ್ದಾರೆ. ಡ್ರೋನ್‍ ಪ್ರತಾಪ್ ಬಗ್ಗೆ ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಅವಮಾನಿಸುವಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಇವೆಲ್ಲ ಕಿಚ್ಚನ ಕೋಪಕ್ಕೆ ಕಾರಣವಾಗಿವೆ.

     

    ಡ್ರೋನ್ ‍ಪ್ರತಾಪ್ ತಮ್ಮ ನಿಜ ಜೀವನದಲ್ಲಿ ಏನೇ ಇರಲಿ. ಆದರೆ, ಮನೆಗೆ ಬಂದಾಗ ಇತರರಂತೆ ಅವರೂ ಕೂಡ ಸ್ಪರ್ಧಿ. ಸಮಾಜದಲ್ಲಿ ಅವರಿಗೂ ಅವರದ್ದೇ ಆದ ಸ್ಥಾನವಿದೆ. ಅವರ ಖಾಸಗಿ ಬದುಕನ್ನು ಸಾಕಷ್ಟು ರೀತಿಯಲ್ಲಿ ಕೆದಕಿ ಬಿಗ್ ಬಾಸ್ ಮನೆಯಲ್ಲಿ ಅಪಮಾನ ಮಾಡಲಾಗುತ್ತಿದೆ. ಯಾರೆಲ್ಲ ಡ್ರೋನ್ ಪ್ರತಾಪ್‍ ರನ್ನು ಅವಮಾನಿಸಿದ್ದಾರೋ ಅವರಿಗೆಲ್ಲ ಮುಟ್ಟಿ ನೋಡಿಕೊಳ್ಳುವಂತಹ ಮಾತುಗಳನ್ನು ಆಡಿದ್ದಾರಂತೆ ಸುದೀಪ್. ಅಲ್ಲದೇ, ಡ್ರೋನ್ ಅವರಿಗೂ ಕಿಚ್ಚ ಕೆಲವು ಕಿವಿ ಮಾತುಗಳನ್ನು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada: ಮನೆ ಒಳಗೆ ಕಾಣಿಸಿಕೊಂಡ ದೆವ್ವ

    Bigg Boss Kannada: ಮನೆ ಒಳಗೆ ಕಾಣಿಸಿಕೊಂಡ ದೆವ್ವ

    ಬಿಗ್ ಬಾಸ್ ಸೀಸನ್ 7ರಲ್ಲಿ ಬಿಗ್ ಬಾಸ್ (Bigg Boss Kannada) ಮನೆಯಲ್ಲೇ ದೆವ್ವ ಕಾಣಿಸಿಕೊಂಡು ಗಾಬರಿ ಮೂಡಿಸಿತ್ತು. ಆಗ ದೊಡ್ಮನೆ ಒಳಗಿದ್ದ ಚೈತ್ರಾ ಕೋಟೂರು ಭೂತ ಕಂಡ ಬೊಬ್ಬೆ ಹಾಕಿದ್ದರು. ಮನೆಯಲ್ಲಿ ದೆವ್ವ ಇದೆ ನಾನು ನೋಡಿದ್ದೇನೆ ಎಂದು ಇಡೀ ಬಿಗ್ ಬಾಸ್ ಮನೆಯ ವಾತಾವರಣವನ್ನೇ ಭಯಭೀತಿಗೊಳಿಸಿದ್ದಳು. ಚೈತ್ರಾ ಮಾತನ್ನು ಅನೇಕರು ನಂಬಿದ್ದರು. ಭಯದಲ್ಲೇ ಅಂದಿನ ದಿನವನ್ನು ಕಳೆಯಲಾಗಿತ್ತು.

    ಬಿಗ್ ಬಾಸ್ ಮನೆಯಲ್ಲಿ ದೆವ್ವ ಕಾಣಿಸಿಕೊಂಡ ವಿಚಾರ ದೊಡ್ಮನೆ ಒಳಗೆ ಮಾತ್ರವಲ್ಲ, ಆಚೆಯೂ ಸಾಕಷ್ಟು ಸದ್ದು ಮಾಡಿತ್ತು. ತಮ್ಮದೇ ಆದ ಕಲ್ಪನೆಯನ್ನು ಸೇರಿಸಿ ಸುದ್ದಿಯನ್ನು ಮತ್ತಷ್ಟು ದೊಡ್ಡದು ಮಾಡಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯ ಸದ್ದು ಮಾಡಿತ್ತು. ಈ ಬಾರಿಯೂ ಬಿಗ್ ಬಾಸ್ ಮನೆಯಲ್ಲಿ ದೆವ್ವ ಕಾಣಿಸಿಕೊಂಡಿದೆ. ಆದರೆ, ಯಾರೂ ಭಯ ಪಡಲು ಹೋಗಿಲ್ಲ. ಕಾರಣ, ಆ ದೆವ್ವವನ್ನು ಸೃಷ್ಟಿ ಮಾಡಿದವರು ಅದೇ ಮನೆಯಲ್ಲೇ ಇದ್ದರು.

    ಬಿಗ್ ಬಾಸ್ ಮನೆಯಲ್ಲಿ ಇಂದು ಇಂಟ್ರಸ್ಟಿಂಗ್ ಸಂಗತಿಯೊಂದು ನಡೆಯಿತು. ಒಬ್ಬೊಬ್ಬರು ಒಂದೊಂದು ಸಾಲನ್ನು ಜೋಡಿಸುವ ಮೂಲಕ ಹಾರರ್ ಸಿನಿಮಾದ ಕಥೆಯನ್ನು ರೆಡಿ ಮಾಡಿದರು. ಒಬ್ಬೊಬ್ಬರು ಒಂದೊಂದು ರೋಚಕ ಸಾಲುಗಳನ್ನು ಪೋಣಿಸುವ ಮೂಲಕ ದೆವ್ವದ ಕಥೆಯೊಂದನ್ನು ರೆಡಿ ಮಾಡಿದರು. ಆ ಕಥೆ ನಿಜಕ್ಕೂ ಇಂಟ್ರಸ್ಟಿಂಗ್ ಆಗಿತ್ತು. ಜೋಡಿಸಿದ ಸಾಲುಗಳಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳು ಇದ್ದವು.

    ಅದರಲ್ಲೂ ತುಕಾಲಿ ಸಂತು ದೆವ್ವ, ನಾಗಿಣಿಯಾದ ಎಳೆಗೆ ಹಾಲು ಕುಡಿಸುವ ದೃಶ್ಯವನ್ನೂ ಪೋಣಿಸಿದರು. ಅಲ್ಲಿಂದ ಕಥೆಯ ಚಿತ್ರಣವೇ ಬದಲಾಯಿತು. ಇಡೀ ಮನೆಯಲ್ಲಿ ಆಹ್ಲಾದಕರ ವಾತಾವರಣವಿತ್ತು. ಯಾವುದೇ ಕೆಲಸವಿರಲಿ ಎಲ್ಲರೂ ಕೈ ಜೋಡಿಸಿದರೆ ಅದ್ಭುತವಾದ ಕೆಲಸವನ್ನು ಮಾಡಲು ಸಾಧ್ಯ ಎನ್ನುವುದಕ್ಕೆ ಈ ದೃಶ್ಯ ಸಾಕ್ಷಿಯಾಗಿತ್ತು.

     

    ಈ ಕಥೆ ಹೆಣೆಯುವ ಪ್ರಕ್ರಿಯೆಯಲ್ಲಿ ಸ್ನೇಕ್ ಶ್ಯಾಮ್ ಉತ್ತೇಜಿಸುತ್ತಲೇ, ಹಾದಿ ತಪ್ಪುವ ಮಾತುಗಳಿಗೆ ಬ್ರೇಕ್ ಹಾಕುತ್ತಿದ್ದರು. ಕೆಲವರು ಉತ್ಸಾಹದಿಂದ ಭಾಗಿಯಾದರೆ, ಇನ್ನೂ ಕೆಲವರು ಕಥೆ ಕೇಳಿಕೊಂಡು ಎಂಜಾಯ್ ಮಾಡುತ್ತಿದ್ದರು. ಅವರು ಕಟ್ಟಿದ ಕಥೆಯನ್ನು JioCinema live ನಲ್ಲೂ ವೀಕ್ಷಿಸಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada 10: ಹಾವಿನ ಬುಟ್ಟಿಯೊಂದಿಗೆ ದೊಡ್ಮನೆ ಪ್ರವೇಶ ಮಾಡಿದ ಸ್ನೇಕ್ ಶ್ಯಾಮ್

    Bigg Boss Kannada 10: ಹಾವಿನ ಬುಟ್ಟಿಯೊಂದಿಗೆ ದೊಡ್ಮನೆ ಪ್ರವೇಶ ಮಾಡಿದ ಸ್ನೇಕ್ ಶ್ಯಾಮ್

    ಸಾವಿರಾರು ಹಾವುಗಳನ್ನು ರಕ್ಷಣೆ ಮಾಡಿದ ಮೈಸೂರಿನ ಸ್ನೇಕ್ ಶ್ಯಾಮ್ (Snake Shyam) ಬಿಗ್ ಬಾಸ್ (Bigg Boss Kannada) ಪ್ರವೇಶ ಮಾಡಿದ್ದಾರೆ. ಶೇಕಡಾ 84ರಷ್ಟು ಮತವನ್ನು ಪಡೆಯುವುದರ ಮೂಲಕ 8ನೇ ಸ್ಪರ್ಧಿಯಾಗಿ ಶ್ಯಾಮ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ಮನೆಯೊಳಗೆ ಶ್ಯಾಮ್ ಪ್ರವೇಶ ಮಾಡುವ ಮುನ್ನ ಹಾವಿನ ಬುಟ್ಟಿಯನ್ನು ಬಿಗ್ ಬಾಸ್ ಅವರಿಗೆ ನೀಡಿದ್ದಾರೆ.

    ಬುಟ್ಟಿಯನ್ನು ಶ್ಯಾಮ್ ನೋಡದೇ ಮನೆ ಒಳಗೆ ಇರುವ ಒಬ್ಬರು ಹುಡುಗಿಯರಿಗೆ ಆ ಬುಟ್ಟಿಯನ್ನು ಕೊಡುವುದಕ್ಕೆ ಹೇಳಿದ್ದಾರೆ. ಸ್ನೇಕ್ ಶ್ಯಾಮ್ ಮನೆಯೊಳಗೆ ಪ್ರವೇಶ ಮಾಡಿ, ಆ ಬುಟ್ಟಿಯನ್ನು ನಾಗಿಣಿ ಖ್ಯಾತಿಯ ನಮ್ರತಾಗೆ ನೀಡಿದರು. ಬುಟ್ಟಿ ತೆರೆದಾಗ ಅದೊಂದು ಪ್ಲಾಸ್ಟಿಕ್ ಹಾವು ಒಳಗಿತ್ತು.

     

    ವೇಟಿಂಗ್ ಲಿಸ್ಟ್ ನಲ್ಲಿ ರಕ್ಷಕ್

    ‘ನನ್ನ ಮೇಲೆ ನೆಗೆಟಿವ್ ಇಮೇಜ್ ಕಟ್ಟಿದರು ಕೆಲವರು. ನನ್ನ ನಿಜವಾದ ಫೇಸ್ ತೋರಿಸಬೇಕು. ಅದನ್ನು ಮನೆಯೊಳಗೆ ಖಂಡಿತ ತೋರಿಸ್ತೀನಿ. ಬದುಕಿನಲ್ಲಿ ಪಾಸಿಟೀವ್ ನೆಗೆಟಿವ್ ಎರಡೂ ಇರಬೇಕು’ ಎಂದು ವಯಸ್ಸಿಗೂ ಮೀರಿ ಪ್ರಬುದ್ಧವಾಗಿ ಮಾತಾಡುವ ಹುಡುಗ ರಕ್ಷಕ್‌, ಹಿರಿಯ ಹಾಸ್ಯನಟ ಬುಲೆಟ್ ಪ್ರಕಾಶ್‌ ಅವರ ಪುತ್ರ.

    ‘ಜನರ ಬಾಯಿ ಮುಚ್ಚಿಸಲಾಗದು. ಟ್ರೋಲ್, ರೋಸ್ಟ್‌ ಮಾಡಿದರು ಜನರು… ಅದಕ್ಕೆಲ್ಲ ಕೇರ್ ಮಾಡಲ್ಲ. ನನ್ನ ಸ್ವಂತ ಐಡೆಂಟಿಟಿಯೊಂದಿಗೆ ಬಿಗ್‌ಬಾಸ್ ಮನೆಯೊಳಗೆ ಹೋಗ್ತೀನಿ’ ಎಂದು ನೇರವಾಗಿ ಮಾತಾಡುವ ರಕ್ಷಕ್‌, ಕೌಟುಂಬಿಕ ಪ್ರೇಕ್ಷಕರ ಮನಸಲ್ಲಿ ಜಾಗ ಕಂಡುಕೊಳ್ಳುವ ಉದ್ದೇಶವನ್ನು ಇಟ್ಟುಕೊಂಡು ಬಿಗ್‌ಬಾಸ್ ವೇದಿಕೆಗೆ ಬಂದಿದ್ದರು.

     

    ‘ರಾಜಕೀಯ ಸಿನಿಮಾ ಎರಡರಲ್ಲಿಯೂ ನೆಗೆಟಿವ್ ಪಾಸಿಟಿವ್ ಎರಡೂ ಇರತ್ತೆ. ಹೋಗುತ್ತಾ ಹೋಗುತ್ತಾ ಈ ನೆಗೆಟಿವೇ ಪಾಸಿಟಿವ್ ಆಗುತ್ತದೆ’ ಎನ್ನುವ ನಂಬಿಕೆಯಲ್ಲಿರುವ ರಕ್ಷಕ್‌ ಅವರು ಮನೆಯೊಳಗೆ ಮಾತುಗಳಿಗೆ ಸೆನ್ಸಾರ್ ಅಳವಡಿಸಿಕೊಂಡೇ ಮನೆಯೊಳಗೆ ಹೋಗಲು ನಿರ್ಧರಿಸಿದ್ದರು. ‘ನನ್ನ ರಿಯಲ್ ಫೇಸ್‌ ನೋಡಲಿಕ್ಕಾಗಿ ನನಗೆ ವೋಟ್ ಮಾಡಿ’ ಎಂಬ ರಕ್ಷಕ್ ಮನವಿಗೆ ಜನರು 53% ವೋಟ್ ಮಾಡಿ ಹೋಲ್ಡ್‌ನಲ್ಲಿ ಇಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada: ಬಿಗ್ ಬಾಸ್ ಮನೆಗೆ ಆಗಲೇ ಕಾಲಿಟ್ಟ ಸ್ಪರ್ಧೆಗಳು? ಚಿತ್ರೀಕರಣದಲ್ಲಿ ಸುದೀಪ್

    Bigg Boss Kannada: ಬಿಗ್ ಬಾಸ್ ಮನೆಗೆ ಆಗಲೇ ಕಾಲಿಟ್ಟ ಸ್ಪರ್ಧೆಗಳು? ಚಿತ್ರೀಕರಣದಲ್ಲಿ ಸುದೀಪ್

    ಅಸಲಿಯಾಗಿ ನಾಳೆಯಿಂದ ಬಿಗ್ ಬಾಸ್ ಕನ್ನಡ ಸೀಸನ್ 9 ಶುರುವಾದರೂ, ಇಂದೇ ಆ ಭಾಗದ ಚಿತ್ರೀಕರಣ ಶುರುವಾಗಿದೆ ಅನ್ನುವ ವಿಷಯ ಹರಿದಾಡುತ್ತಿದೆ. ಇಂದು ನಡೆದಿರುವ ಚಿತ್ರೀಕರಣದಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ಈಗಾಗಲೇ 6ಕ್ಕೂ ಹೆಚ್ಚು  ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಇಂದು ನಡೆದ ಚಿತ್ರೀಕರಣದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ, ನಟ ವಿನಯ್ ಗೌಡ, ಟ್ರಾನ್ಸ್ ಝಂಡರ್ ನೀತು, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಉರಗ ತಜ್ಞ ಸ್ನೇಕ್ ಶ್ಯಾಮ್ ದೊಡ್ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ನಾಳೆ ಸಂಜೆಯಿಂದ ಬಿಗ್ ಬಾಸ್ ಆಟ ಶುರುವಾಗಲಿದೆ. ಅದಕ್ಕೂ ಮುನ್ನ ದೊಡ್ಮನೆಗೆ ಎಂಟ್ರಿ ಕೊಡುವವರ ಲಿಸ್ಟ್ ಹೊರ ಬೀಳುತ್ತಲೇ ಇದೆ. ಅಧಿಕೃತವಾದ ಹಾದಿ ಅದಾಗದಿದ್ದರೂ, ನಾನಾ ಮೂಲಗಳಿಂದ ಹೆಕ್ಕಿ ಹೆಸರುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಲೇ ಇದ್ದಾರೆ. ಈವರೆಗೂ ಒಂದಷ್ಟು ಹೆಸರುಗಳು ಕೇಳಿ ಬಂದಿದ್ದವು. ಆದರೆ, ಅವರಾರು ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಈಗ ಸಿಕ್ಕಿರುವ ಹಾದಿಯಲ್ಲಿ ಬಹುತೇಕರು ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಮೈಸೂರಿನ ಹೆಸರಾಂತ ಉರಗತಜ್ಞ ಸ್ನೇಕ್ ಶ್ಯಾಮ್ (Snake Shyam) ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರಂತೆ. 80 ಸಾವಿರಕ್ಕೂ ಅಧಿಕ ಹಾವುಗಳನ್ನು ಸಂರಕ್ಷಣೆ ಮಾಡಿರುವ ಸ್ನೇಕ್ ಶ್ಯಾಮ್, ಆ ಭಾಗದಲ್ಲಿ ಪ್ರಸಿದ್ಧರು. ಅದ್ಭುತವಾಗಿ ಮಾತನಾಡುತ್ತಾರೆ. ಅಲ್ಲದೇ, ರಾಜಕಾರಣದಲ್ಲೂ ಈ ಹಿಂದೆ ಸಕ್ರಿಯರಾಗಿದ್ದವರು.

    ನಾಗಿಣಿ ಧಾರಾವಾಹಿಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಮ್ರತಾ ಗೌಡ (Namrata Gowda) ಕೂಡ ಈ ಬಾರಿ ಬಿಗ್ ಬಾಸ್ ಮನೆಯನ್ನು ಪ್ರವೇಶ ಮಾಡಲಿದ್ದಾರಂತೆ. ಚಿಕ್ಕ ವಯಸ್ಸಿನಿಂದಲೇ ಧಾರಾವಾಹಿ ಪ್ರಪಂಚಕ್ಕೆ ಕಾಲಿಟ್ಟ ನಮ್ರತಾ ಸಿಕ್ಕಾಪಟ್ಟೆ ಫೇಮಸ್ ಆಗಿದ್ದು ನಾಗಿಣಿ 2 ಧಾರಾವಾಹಿಯ ಮೂಲಕ.

    ರಾಪರ್ ಆಗಿರುವಂತಹ ಇಶಾನಿ  (Ishani) ಕೂಡ ಬಿಗ್ ಬಾಸ್ ಮನೆಯತ್ತ ಹೆಜ್ಜೆ ಹಾಕಿದ್ದಾರೆ. ನಿನ್ನೆಯಿಂದಲೇ ನಡೆದ ವಾಹಿನಿಯ ಹಲವಾರು ಕಾರ್ಯಕ್ರಮಗಳಲ್ಲಿ ಇಶಾನಿ ಭಾಗಿಯಾಗಿದ್ದಾರೆ. ಹಾಗಾಗಿ ಇಶಾನಿ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರುವುದು ಪಕ್ಕಾ ಎಂದು ಹೇಳಲಾಗುತ್ತಿದೆ.

    ಇವರ ಜೊತೆಗೆ ಮಜಾ ಭಾರತ ಮತ್ತು ಇತರ ಕಾಮಿಡಿ ಶೋಗಳಲ್ಲಿ ಕಾಣಿಸಿಕೊಂಡಿರುವ ಚಂದ್ರಪ್ರಭ ಕೂಡ ಬಿಗ್ ಬಾಸ್ ಮನೆಯಲ್ಲಿ ಇರುವುದು ಖಚಿತ ಎಂದು ಹೇಳಲಾಗುತ್ತಿದೆ. ಇವರ ಜೊತೆಗೆ ಸುಕ್ರತಾ ನಾಗ್, ಕೋಮಲ್ ಕೂಡ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ವರ್ತಮಾನ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada : ಸ್ನೇಕ್ ಶ್ಯಾಮ್, ನಮ್ರತಾ ಗೌಡ, ಇಶಾನಿ ಕನ್ಫರ್ಮ್

    Bigg Boss Kannada : ಸ್ನೇಕ್ ಶ್ಯಾಮ್, ನಮ್ರತಾ ಗೌಡ, ಇಶಾನಿ ಕನ್ಫರ್ಮ್

    ನಾಳೆ ಸಂಜೆಯಿಂದ ಬಿಗ್ ಬಾಸ್ ಆಟ ಶುರುವಾಗಲಿದೆ. ಅದಕ್ಕೂ ಮುನ್ನ ದೊಡ್ಮನೆಗೆ ಎಂಟ್ರಿ ಕೊಡುವವರ ಲಿಸ್ಟ್ ಹೊರ ಬೀಳುತ್ತಲೇ ಇದೆ. ಅಧಿಕೃತವಾದ ಯಾದಿ ಅದಾಗದಿದ್ದರೂ, ನಾನಾ ಮೂಲಗಳಿಂದ ಹೆಕ್ಕಿ ಹೆಸರುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಲೇ ಇದ್ದಾರೆ. ಈವರೆಗೂ ಒಂದಷ್ಟು ಹೆಸರುಗಳು ಕೇಳಿ ಬಂದಿದ್ದವು. ಆದರೆ, ಅವರಾರೂ ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಈಗ ಸಿಕ್ಕಿರುವ ಯಾದಿಯಲ್ಲಿ ಬಹುತೇಕರು ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಮೈಸೂರಿನ ಹೆಸರಾಂತ ಉರಗತಜ್ಞ ಸ್ನೇಕ್ ಶ್ಯಾಮ್ (Snake Shyam) ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರಂತೆ. 80 ಸಾವಿರಕ್ಕೂ ಅಧಿಕ ಹಾವುಗಳನ್ನು ಸಂರಕ್ಷಣೆ ಮಾಡಿರುವ ಸ್ನೇಕ್ ಶ್ಯಾಮ್, ಆ ಭಾಗದಲ್ಲಿ ಪ್ರಸಿದ್ಧರು. ಅದ್ಭುತವಾಗಿ ಮಾತನಾಡುತ್ತಾರೆ. ಅಲ್ಲದೇ, ರಾಜಕಾರಣದಲ್ಲೂ ಈ ಹಿಂದೆ ಸಕ್ರಿಯರಾಗಿದ್ದವರು.

    ನಾಗಿಣಿ ಧಾರಾವಾಹಿಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಮ್ರತಾ ಗೌಡ (Namrata Gowda) ಕೂಡ ಈ ಬಾರಿ ಬಿಗ್ ಬಾಸ್ ಮನೆಯನ್ನು ಪ್ರವೇಶ ಮಾಡಲಿದ್ದಾರಂತೆ. ಚಿಕ್ಕ ವಯಸ್ಸಿನಿಂದಲೇ ಧಾರಾವಾಹಿ ಪ್ರಪಂಚಕ್ಕೆ ಕಾಲಿಟ್ಟ ನಮ್ರತಾ ಸಿಕ್ಕಾಪಟ್ಟೆ ಫೇಮಸ್ ಆಗಿದ್ದು ನಾಗಿಣಿ 2 ಧಾರಾವಾಹಿಯ ಮೂಲಕ.

    ರಾಪರ್ ಆಗಿರುವಂತಹ ಇಶಾನಿ  (Ishani) ಕೂಡ ಬಿಗ್ ಬಾಸ್ ಮನೆಯತ್ತ ಹೆಜ್ಜೆ ಹಾಕಿದ್ದಾರೆ. ನಿನ್ನೆಯಿಂದಲೇ ನಡೆದ ವಾಹಿನಿಯ ಹಲವಾರು ಕಾರ್ಯಕ್ರಮಗಳಲ್ಲಿ ಇಶಾನಿ ಭಾಗಿಯಾಗಿದ್ದಾರೆ. ಹಾಗಾಗಿ ಇಶಾನಿ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರುವುದು ಪಕ್ಕಾ ಎಂದು ಹೇಳಲಾಗುತ್ತಿದೆ.

     

    ಇವರುಗಳ ಜೊತೆಗೆ ಮಜಾ ಭಾರತ ಮತ್ತು ಇತರ ಕಾಮಿಡಿ ಶೋಗಳಲ್ಲಿ ಕಾಣಿಸಿಕೊಂಡಿರುವ ಚಂದ್ರಪ್ರಭ ಕೂಡ ಬಿಗ್ ಬಾಸ್ ಮನೆಯಲ್ಲಿ ಇರುವುದು ಖಚಿತ ಎಂದು ಹೇಳಲಾಗುತ್ತಿದೆ. ಇವರ ಜೊತೆಗೆ ಸುಕ್ರತಾ ನಾಗ್ ಕೂಡ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ವರ್ತಮಾನ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾವು ಹಿಡಿಯುವುದರಲ್ಲಿ ದಾಖಲೆ ಬರೆದ ಸ್ನೇಕ್ ಶ್ಯಾಂ

    ಹಾವು ಹಿಡಿಯುವುದರಲ್ಲಿ ದಾಖಲೆ ಬರೆದ ಸ್ನೇಕ್ ಶ್ಯಾಂ

    ಮೈಸೂರು: ಹಾವು ಹಿಡಿಯುವುದರ ಮೂಲಕ ಸ್ನೇಕ್ ಶ್ಯಾಂ ದಾಖಲೆ ಬರೆದಿದ್ದಾರೆ. ಮೈಸೂರಿನ ಈ ಉರಗ ಪ್ರೇಮಿಗೆ ಹಾವು ಸಂರಕ್ಷಣೆ ಮಾಡುವುದೇ ಕಾಯಕ. ಈ ಕಾಯಕವನ್ನು ಶ್ಯಾಂ ಬಹಳ ಶ್ರದ್ಧೆ ಮತ್ತು ಪ್ರೀತಿಯಿಂದ ಮಾಡುತ್ತಿದ್ದಾರೆ. ಹೀಗಾಗಿ ಶ್ಯಾಂ ಹಾವು ಹಿಡಿಯುವುದರಲ್ಲಿ ಈಗ ಹೊಸ ದಾಖಲೆ ಬರೆದಿದ್ದಾರೆ.

    35 ಸಾವಿರ ಹಾವನ್ನು ಸಂರಕ್ಷಣೆ ಮಾಡಿದ ದಾಖಲೆ ಶ್ಯಾಂ ಮುಡಿಗೇರಿದೆ. ಮೈಸೂರಿನ ಹೆಬ್ಬಾಳ ಬಡಾವಣೆಯ ಇನ್ಫೋಸಿಸ್ ಆವರಣದಲ್ಲಿ ಮಂಡಲದ ಹಾವು ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಬಂದ ಶ್ಯಾಂ ಆ ಹಾವನ್ನು ಕ್ಷಣ ಮಾತ್ರದಲ್ಲಿ ಹಿಡಿದರು. ಈ ಹಾವು ಶ್ಯಾಂ ಹಿಡಿದ 35ನೇ ಸಾವಿರದ ಹಾವಾಗಿ ಅವರ ರಿಜಿಸ್ಟರ್ ನಲ್ಲಿ ದಾಖಲಾಯಿತು.

    1981ರಿಂದ ಹಾವು ಹಿಡಿಯುವುದನ್ನು ಕಾಯಕ ಮಾಡಿಕೊಂಡಿರುವ ಶ್ಯಾಂ 1997ರಿಂದ ಹೀಗೆ ತಾವು ಹಿಡಿದ ಹಾವುಗಳನ್ನು ರಿಜಿಸ್ಟರ್ ನಲ್ಲಿ ದಾಖಲು ಮಾಡಿಕೊಳ್ಳಲು ಆರಂಭಿಸಿದ್ದಾರೆ. ಈಗ 35 ಸಾವಿರ ಹಾವು ಹಿಡಿದು ಸಂರಕ್ಷಿಸಿದ ಬಹು ಅಪರೂಪದ ದಾಖಲೆ ಮಾಡಿದ್ದಾರೆ.

    ಹಾವು ಕಂಡರೆ ಬೆಚ್ಚಿ ಬೀಳುವ ಮಂದಿಗೆ ಧೈರ್ಯ ಹೇಳಿ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ಬರುವ ಶ್ಯಾಂ ಬಗ್ಗೆ ಮೈಸೂರಿಗರಿಗೆ ಅಪಾರ ಪ್ರೀತಿ ಇದೆ. ಯಾವುದೇ ಪ್ರತಿಫಲ ಬಯಸದೇ ಹಾವು ಹಿಡಿಯುವ ಕಾಯಕ ಮಾಡುತ್ತಿರುವ ಸ್ನೇಕ್ ಶ್ಯಾಂಗೆ ಸರ್ಕಾರದಿಂದ ಹೆಚ್ಚಿನ ನೆರವು ಸಿಕ್ಕಿಲ್ಲ.

    ಮಕ್ಕಳನ್ನು ಶಾಲೆಗೆ ಬಿಡುವ ಕೆಲಸವೇ ಇವರ ಜೀವನಕ್ಕೆ ಆಧಾರ. ಜೊತೆಗೆ ಹಾವು ಹಿಡಿಯಲು ಹೋದಾಗ ಮನೆಯವರು ಕೊಡುವ ಅಲ್ಪಸ್ವಲ್ಪ ಹಣ ಇವರ ಜೀವನಕ್ಕೆ ಆಧಾರವಾಗಿದೆ. 35 ಸಾವಿರ ಹಾವು ಹಿಡಿದಿರುವ ಶ್ಯಾಂ ಈಗ ತಮ್ಮ ಸಾಧನೆಯನ್ನು ಜಗತ್ತಿಗೆ ಪರಿಚಯಿಸುವ ತವಕದಲ್ಲಿದ್ದಾರೆ.

  • ವಾಷಿಂಗ್ ಮೆಷಿನ್ ಒಳಗಡೆಯಿಂದ ಬುಸ್ ಎಂದ ನಾಗರಾಜ

    ವಾಷಿಂಗ್ ಮೆಷಿನ್ ಒಳಗಡೆಯಿಂದ ಬುಸ್ ಎಂದ ನಾಗರಾಜ

    ಮೈಸೂರು: ಇತ್ತೀಚೆಗೆ ಹಾವುಗಳು ನೆಲೆ ಇಲ್ಲದೆ ಬೈಕ್, ಶೂಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತವೆ. ಮೈಸೂರಿನಲ್ಲಿಯೂ ಇದೇ ರೀತಿಯ ಘಟನೆ ನಡೆದಿದ್ದು, ಬಟ್ಟೆ ತೊಳೆಯುವ ವಾಷಿಂಗ್ ಮೆಷಿನ್ ಒಳಗೆಯೇ ನಾಗರಹಾವು ಕಾಣಿಸಿಕೊಂಡಿದೆ.

    ಮೈಸೂರಿನ ಶ್ರೀ ಶಿವರಾತ್ರೀಶ್ವರ ನಗರದ ನಿವಾಸಿ ಸ್ಟಾಲಿನ್ ಕೆ.ಪೌಲ್ ಅವರ ಮನೆಯ ವಾಷಿಂಗ್ ಮೆಷಿನ್ ಒಳಗೆ ಹಾವು ಸೇರಿಕೊಂಡಿದ್ದು, ಸ್ಟಾಲಿನ್ ಅವರ ಪತ್ನಿ, ಪತಿಯ ಬಟ್ಟೆ ಒಗೆಯಲು ಹಾಕಿ ಮಗುವಿನ ಬಟ್ಟೆ ಹಾಕಲು ಹೋದಾಗ ನಾಗರಹಾವು ವಾಷಿಂಗ್ ಮೆಷಿನ್‍ನಲ್ಲಿ ಕಾಣಿಸಿಕೊಂಡಿದೆ.

    ಮೆಷಿನ್ ಒಳಗೆ ಹಾವು ಕಂಡು ಗಾಬರಿಯಾದ ಮಹಿಳೆ ತಕ್ಷಣ ಗಂಡನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಪತಿ ಕೂಡಲೇ ಈ ವಿಷಯವನ್ನು ಉರಗ ತಜ್ಞ ಸ್ನೇಕ್ ಶ್ಯಾಂ ಅವರಿಗೆ ತಿಳಿಸಿದ್ದಾರೆ. ವಿಷಯ ತಿಳಿದು ತಕ್ಷಣ ಆಗಮಿಸಿದ ಸ್ನೇಕ್ ಶ್ಯಾಂ ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

  • ಬರೋಬ್ಬರಿ 33 ಸಾವಿರ ಹಾವುಗಳ ರಕ್ಷಣೆಗೈದ್ರು ಮೈಸೂರಿನ ಸ್ನೇಕ್ ಶ್ಯಾಮ್

    ಬರೋಬ್ಬರಿ 33 ಸಾವಿರ ಹಾವುಗಳ ರಕ್ಷಣೆಗೈದ್ರು ಮೈಸೂರಿನ ಸ್ನೇಕ್ ಶ್ಯಾಮ್

    ಮೈಸೂರು: ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ನಾಗರಹಾವು ರಕ್ಷಿಸುವ ಮೂಲಕ ಸ್ನೇಕ್ ಶ್ಯಾಮ್ ಬರೋಬ್ಬರಿ 33 ಸಾವಿರ ಹಾವುಗಳನ್ನು ಹಿಡಿದು ರಕ್ಷಣೆ ಮಾಡಿ ಹೊಸ ದಾಖಲೆಯನ್ನು ಬರೆದಿದ್ದಾರೆ.

    ನಗರದ ಚಾಮುಂಡೇಶ್ವರಿ ಬಡಾವಣೆಯ ನಿವಾಸಿ ಜಯಭಾಯಿ ಎಂಬವರ ಮನೆಯಲ್ಲಿ ಸಿಲಿಂಡರ್ ಕೆಳಗೆ ನಾಗರ ಹಾವೊಂದು ಸೇರಿಕೊಂಡಿತ್ತು. ಕೂಡಲೇ ಜಯಭಾಯಿ ಅವರು ಸ್ನೇಕ್ ಶ್ಯಾಮ್ ಅವರನ್ನು ಕರೆಸಿದ್ದಾರೆ. ಈ ನಾಗರ ಹಾವನ್ನು ಹಿಡಿದು, ತಮ್ಮ ರಿಜಿಸ್ಟರ್ ನ 33000 ನಂಬರ್ ನಲ್ಲಿ ದಾಖಲಿಸಿಕೊಂಡಿದ್ದಾರೆ.

    ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು ಆಗಿರುವ ಸ್ನೇಕ್ ಶ್ಯಾಮ್ 1997ರಿಂದ ರಿಜಿಸ್ಟರ್ ಮೂಲಕ ಹಾವುಗಳ ರಕ್ಷಣೆಯ ಲೆಕ್ಕೆ ಹಾಕುತ್ತಿದ್ದಾರೆ. 1997ಕ್ಕಿಂತ ಮುಂಚೆ ಅನೇಕ ಹಾವುಗಳನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.

    ಬಿಜೆಪಿಯಿಂದ ಸ್ಪರ್ಧಿಸಿ ಪಾಲಿಕೆಗೆ ಆಯ್ಕೆಯಾಗಿರುವ ಉರಗ ತಜ್ಞ ಶ್ಯಾಮ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.