Tag: Sneha

  • ‘ಪುಟ್ಟಕ್ಕನ ಮಕ್ಕಳು’ ಸ್ನೇಹಾ ಪಾತ್ರ ಅಂತ್ಯ- ಫ್ಯಾನ್ಸ್‌ಗೆ ಸಂದೇಶ ನೀಡಿದ ಸಂಜನಾ

    ‘ಪುಟ್ಟಕ್ಕನ ಮಕ್ಕಳು’ ಸ್ನೇಹಾ ಪಾತ್ರ ಅಂತ್ಯ- ಫ್ಯಾನ್ಸ್‌ಗೆ ಸಂದೇಶ ನೀಡಿದ ಸಂಜನಾ

    ಕಿರುತೆರೆಯ ಜನಪ್ರಿಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu) ಸ್ನೇಹಾ (Sneha) ಪಾತ್ರ ಅಂತ್ಯವಾಗಿದೆ. ಸ್ನೇಹಾ ಪಾತ್ರದಲ್ಲಿ ಸಂಜನಾ ಬುರ್ಲಿ (Sanjana Burli) ಸೀರಿಯಲ್‌ಗೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಸ್ನೇಹಾ ಪಾತ್ರದ ಸಾವಿನ ದೃಶ್ಯ ನೋಡಿ ಪ್ರೇಕ್ಷಕರು ಕಣ್ಣೀರಿಟ್ಟಿದ್ದಾರೆ. ತಮ್ಮ ಪಾತ್ರ ಅಂತ್ಯವಾದ ಬೆನ್ನಲ್ಲೇ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸ್ವೀಟಿ ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್- 2 ಸಿನಿಮಾಗಳ ಶೂಟಿಂಗ್ ಮುಗಿಸಿದ ನಟಿ

    ನಮಸ್ತೆ ಪ್ರಿಯರೇ, ಎಲ್ಲಾ ಫ್ಯಾನ್ಸ್ಗೆ ನಾನು ಒಂದು ಸುದ್ದಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಪ್ರತಿಯೊಂದು ದೊಡ್ಡ ವಿಷಯವೂ ಕೊನೆಗೊಳ್ಳುತ್ತದೆ. ಅದರಂತೆ ಈ ಮಹತ್ವದ ಪಾತ್ರದೊಂದಿಗೆ ನನ್ನ ಪ್ರಯಾಣವೂ ಕೊನೆಗೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್‌ನ ಸ್ನೇಹಾ ಪಾತ್ರವು ಕೊನೆಯಾಗುತ್ತಿದೆ. ಕಳೆದ 3 ವರ್ಷಗಳಿಂದ ಸ್ನೇಹಾ ಪಾತ್ರವನ್ನು ನಿರ್ವಹಿಸುವುದು ನನ್ನ ನಟನಾ ವೃತ್ತಿಜೀವನದ ಅವಿಭಾಜ್ಯ ಅಂಗವಾಗಿತ್ತು. ಈ ಸಮಯ ಎಷ್ಟು ವೇಗವಾಗಿ ಮುಗಿಯಿತು ಅನ್ನೋದೇ ಗೊತ್ತಾಗಲಿಲ್ಲ. ಈ ಸೀರಿಯಲ್‌ನಲ್ಲಿ ನಾನು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದೆ. ಅದಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನನಗೆ ಈ ಉತ್ತಮ ಪಾತ್ರವನ್ನು ನೀಡಿದ್ದಕ್ಕಾಗಿ ಮತ್ತು ನನ್ನನ್ನು ಸ್ನೇಹಾ ಆಗಿ ಆಯ್ಕೆ ಮಾಡಿದ್ದಕ್ಕಾಗಿ ವಾಹಿನಿ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ.

    ಆದರೆ ಈಗ ನಾನು ಮುಂದುವರಿಯುವ ಸಮಯ ಬಂದಿದೆ. ಕೆಲವು ಅನಿವಾರ್ಯ ಸಂದರ್ಭಗಳು ಮತ್ತು ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಭಾರವಾದ ಹೃದಯದಿಂದ ಈ ಸೀರಿಯಲ್ ಅನ್ನು ತೊರೆಯುವ ಸ್ಥಿತಿ ನಿರ್ಮಾಣವಾಯಿತು. ನನ್ನ ಜೀವನದಲ್ಲಿ ಈ ಸಮಯದಲ್ಲಿ ಸಾಧಿಸಲು ನನಗೆ ಇತರ ಸವಾಲುಗಳಿವೆ. ಈ ಪ್ರಾಜೆಕ್ಟ್ನಲ್ಲಿನ ಈ ಪಾತ್ರಕ್ಕಾಗಿ ನಾನು ನಟಿನಾಗಿ ಪಡೆದ ಅಪಾರ ಪ್ರೀತಿ ಮತ್ತು ಮನ್ನಣೆಯು ನನ್ನ ದೊಡ್ಡ ಪ್ರಶಸ್ತಿ. ಅದು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ನಿಮ್ಮಲ್ಲಿ ಹೆಚ್ಚಿನವರು ಪಾತ್ರವು ಸಾಯುವುದನ್ನು ನೋಡಿ ದುಃಖಿತರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ, ನಾಯಕಿಯಾಗಿ ನಾನು ನಟಿಸಿದ್ದ ಪಾತ್ರವನ್ನು ಯಾರು ಬದಲಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಅದನ್ನು ನಾವು ಪಾಸಿಟಿವ್ ಆಗಿ ತೆಗೆದುಕೊಳ್ಳೋಣ ಎಂದಿದ್ದಾರೆ ಸಂಜನಾ.

    ಸ್ವಲ್ಪ ಸಮಯದ ನಂತರ ವಿಭಿನ್ನ ಪಾತ್ರಗಳಲ್ಲಿ ನನ್ನ ಅಭಿಮಾನಿಗಳನ್ನು ಭೇಟಿಯಾಗಲು ಆಶಿಸುತ್ತಿದ್ದೇನೆ, ಆದರೆ, ಸದ್ಯದ ಮಟ್ಟಿಗೆ ನನ್ನ ಪಾತ್ರ ಅಂತ್ಯವಾಗಿದೆ. ಕಳೆದ 3 ವರ್ಷಗಳಲ್ಲಿ ಇಡೀ ಕರ್ನಾಟಕ ನನ್ನ ಮೇಲೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನನ್ನ ವೈಯಕ್ತಿಕ ಮತ್ತು ವೃತ್ತಿಪರ ಪ್ರಗತಿಗೆ ಸಂಬಂಧಿಸಿದಂತೆ ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನನ್ನ ಸೋಶಿಯಲ್ ಮೀಡಿಯಾ ಫ್ಲಾಟ್‌ಫಾರ್ಮ್ ಅನ್ನು ನೋಡ್ತಾ ಇರಿ. ಈಗ ಪಾಸಿಟಿವ್ ನೋಟ್‌ನೊಂದಿಗೆ ಮುಂದುವರಿಯೋಣ. ಏನಾಗಲಿ ಮುಂದೆ ಸಾಗು ನೀ.. ಮತ್ತೊಮ್ಮೆ ತೆರೆ ಮೇಲೆ ಭೇಟಿ ಆಗೋಣ ಬೇರೆ ವಿಭಿನ್ನ ಪಾತ್ರ ಜೊತೆಗೆ, ಶೀಘ್ರದಲ್ಲಿ ನನ್ನ ಅಭಿಮಾನಿಗಳೇ ನನ್ನ ಸ್ಪೂರ್ತಿ, ಶಕ್ತಿ. ಚಿಯರ್ಸ್ ಸಂಜನಾ ಬುರ್ಲಿ ಎಂದು ಅವರು ಬರೆದುಕೊಂಡಿದ್ದಾರೆ.

    ಇನ್ನೂ ಕಳೆದ ಮೂರು ವರ್ಷಗಳಿಂದ ಸಂಜನಾ ಬುರ್ಲಿ ಅವರು ಸ್ನೇಹಾ ಪಾತ್ರಕ್ಕೆ ಜೀವ ತುಂಬಿದ್ದರು. ಹಿರಿಯ ನಟಿ ಉಮಾಶ್ರೀ (Umashree) ಮಗಳಾಗಿ, ಕಂಠಿ ಪತ್ನಿಯ ಪಾತ್ರದಲ್ಲಿ ಉತ್ತಮವಾಗಿ ನಟಿಸಿದ್ದರು. ಈಗ ಅವರ ಪಾತ್ರ ಅಂತ್ಯವಾಗಿರೋದು ಸಹಜವಾಗಿ ಪ್ರೇಕ್ಷಕರಿಗೆ ಬೇಸರವುಂಟು ಮಾಡಿದೆ.

  • The GOAT Trailer: ದ್ವಿಪಾತ್ರದಲ್ಲಿ ಅಬ್ಬರಿಸಿದ ವಿಜಯ್ ದಳಪತಿ

    The GOAT Trailer: ದ್ವಿಪಾತ್ರದಲ್ಲಿ ಅಬ್ಬರಿಸಿದ ವಿಜಯ್ ದಳಪತಿ

    ಮಿಳು ನಟ ವಿಜಯ್ (Vijay Thalapathy) ನಟನೆಯ ‘ದಿ ಗೋಟ್’ (The GOAT Trailer) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಪ್ರೇಕ್ಷಕರಿಗೆ ಕಿಕ್ ಕೊಡುತ್ತಿದೆ. ಡಬಲ್ ರೋಲ್‌ನಲ್ಲಿ ವಿಜಯ್ ಅಬ್ಬರಿಸಿದ್ದಾರೆ. ನಟನ ಅಬ್ಬರ ಕಂಡು ಫ್ಯಾನ್ಸ್‌ ಫಿದಾ ಆಗಿದ್ದಾರೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದಕ್ಕೆ ಹೆಮ್ಮೆ ಇದೆ- ನಿತ್ಯಾ ಮೆನನ್ ಫಸ್ಟ್ ರಿಯಾಕ್ಷನ್

    ‘ದಿ ಗೋಟ್’ ಸ್ಪೈ ಥ್ರಿಲರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಅಪ್ಪ ಮತ್ತು ಮಗನಾಗಿ ಎರಡು ರೋಲ್‌ಗಳಲ್ಲಿ ವಿಜಯ್ ಮಿಂಚಿದ್ದಾರೆ. ಆ್ಯಕ್ಷನ್ ಸೀಕ್ವೆನ್ಸ್‌ನಲ್ಲಿ  ಎದುರಾಳಿಗಳಿಗೆ ವಿಜಯ್ ಠಕ್ಕರ್ ಕೊಟ್ಟಿದ್ದಾರೆ.

     

    View this post on Instagram

     

    A post shared by Archana Kalpathi (@archanakalpathi)


    ಗಣೇಶ ಹಬ್ಬದ ವೇಳೆ, ಸೆ.5ರಂದು ‘ದಿ ಗೋಟ್’ ಸಿನಿಮಾ ರಿಲೀಸ್ ಆಗಲಿದೆ. ವಿಜಯ್ ಜೊತೆ ಸ್ನೇಹಾ, ಪ್ರಭುದೇವ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು ಸೇರಿದಂತೆ ಅನೇಕರು ನಟಿಸಿದ್ದಾರೆ. ತೆಲುಗು, ತಮಿಳು, ಹಿಂದಿಯಲ್ಲಿ ಬರಲಿರುವ ಈ ಸಿನಿಮಾ ಇದೀಗ ಟ್ರೈಲರ್‌ನಿಂದಲೇ ಕುತೂಹಲ ಮೂಡಿಸಿದೆ. ಹಾಗಾಗಿ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಯಿದೆ. ಈ ಚಿತ್ರದ ರಿಲೀಸ್ ಬಳಿಕ ‘ದಳಪತಿ 69’ನೇ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಇದು ಅವರ ವೃತ್ತಿ ಜೀವನದ ಕೊನೆಯ ಸಿನಿಮಾವಾಗಿರಲಿದೆ.

    ಈಗಾಗಲೇ ವಿಜಯ್ ತಮ್ಮದೇ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೆ ಇದೆ. ‘ತಮಿಳ ವೆಟ್ರಿ ಕಳಗಂ’ ಪಕ್ಷದ ಮೂಲಕ ಜನಸೇವೆ ಮಾಡಲು ಮತ್ತು ಸಿನಿಮಾ ಬಿಟ್ಟು ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

  • ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

    ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

    ನ್ನಡದ ರವಿಶಾಸ್ತ್ರಿ, ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿರುವ ತಮಿಳು ನಟಿ ಸ್ನೇಹಾ (Actress Sneha) ಇದೀಗ ತಮ್ಮ ದಾಂಪತ್ಯದ (Wedding) ಬಗ್ಗೆ ಮಾತನಾಡಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಾ ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್‌ಗೆ ಸ್ನೇಹಾ- ಪ್ರಸನ್ನ ದಂಪತಿ ಸಜ್ಜಾಗಿದ್ದಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಡಿವೋರ್ಸ್ (Divorce) ಸುದ್ದಿ ಸುಳ್ಳು ನಾವು ಚೆನ್ನಾಗಿದ್ದೇವೆ ಎಂದು ನಟಿ ಉತ್ತರ ನೀಡಿದ್ದಾರೆ. ದಾಂಪತ್ಯದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

    ಪ್ರೀತಿಯಲ್ಲಿ (Love) ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ, ಏನು ಮಾಡುತ್ತಿದ್ದೀರಾ? ಎಂದು ಕೇಳುವುದು ಕೂಡ ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ ಎಂದು ನಟಿ ಸ್ನೇಹಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

    ದೈನಂದಿನ ಜೀವನದಲ್ಲಿ ನಾವು ಏನು ಮಾಡುತ್ತಿದ್ದೇನೆ. ಎಲ್ಲಿ ಹೋಗುತ್ತಿದ್ದೇನೆ. ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದ ಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ. ಆ ಸಮಯದಲ್ಲಿ ಮಾತನಾಡಿ, ಎಲ್ಲಾ ಬಗೆಹರಿಸಿಕೊಳ್ಳುತ್ತೇವೆ. ಬಳಿಕ ಮತ್ತೆ ಜೀವನ ಹೀಗೆ ಮುಂದುವರೆಯುತ್ತದೆ. ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಆಗ ಸಮಸ್ಯೆ ಇರುವುದಿಲ್ಲ ಎಂದು ವೈವಾಹಿಕ ಬದುಕಿನ ಬಗ್ಗೆ ನಟಿ ಸಲಹೆ ನೀಡಿದ್ದಾರೆ.

    ಸ್ನೇಹಾ ಮೊದಲ ಬಾರಿಗೆ ತಮ್ಮ ಲವ್ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರಸನ್ನ(Actor Prasanna) ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ (Love Breakup) ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ. ಒಂದರ್ಥದಲ್ಲಿ ಖಿನ್ನತೆಗೆ ಒಳಗಾಗಿದ್ದೆ. ಆ ಇಡೀ ವರ್ಷ ನನಗೆ ಬಹಳ ಕೆಟ್ಟದಾಗಿತ್ತು. ಹೊರಗೆ ಸಾಕಷ್ಟು ಜನ ಏನೇನೋ ಮಾತನಾಡುತ್ತಿದ್ದರು. ಈ ಬಗ್ಗೆ ಪೋಷಕರು ನನ್ನ ಜೊತೆ ಚರ್ಚಿಸಿ ಸಂತೈಸಿದ್ದರು. ಅದರ ನಡುವೆ ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ವಿಶೇಷ ಅಂದರೆ, ಅದೇ ವರ್ಷ ನನ್ನ ನಟನೆಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಆ ವರ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಟಿ ತೆರೆ ಎಳೆದಿದ್ದಾರೆ.

  • Thalapathy 68: ‘ಲಿಯೋ’ ರಿಲೀಸ್ ಬೆನ್ನಲ್ಲೇ ಹೊಸ ಚಿತ್ರದಲ್ಲಿ ವಿಜಯ್ ಬ್ಯುಸಿ

    Thalapathy 68: ‘ಲಿಯೋ’ ರಿಲೀಸ್ ಬೆನ್ನಲ್ಲೇ ಹೊಸ ಚಿತ್ರದಲ್ಲಿ ವಿಜಯ್ ಬ್ಯುಸಿ

    ಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ (Leo) ಸಿನಿಮಾ ಅ.19ಕ್ಕೆ ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಹೊಸ ಸಿನಿಮಾದ ಮುಹೂರ್ತ ಕಾರ್ಯದಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. ದಸರಾ ಹಬ್ಬದಂದು ಹೊಸ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇದನ್ನೂ ಓದಿ:‘ಜೇಮ್ಸ್’ ನಿರ್ದೇಶಕನ ಜೊತೆ ಕೈಜೋಡಿಸಿದ ಅಣ್ಣಾವ್ರ ಮೊಮ್ಮಗ ಧೀರೆನ್

    ಕಾಲಿವುಡ್‌ನಲ್ಲಿ (Kollywood) ವಿಜಯ್‌ಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ಸದ್ಯ ‘ಲಿಯೋ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡುತ್ತಿದೆ. ಇದರ ನಡುವೆ ಹೊಸ ಸಿನಿಮಾದತ್ತ ವಿಜಯ್ ಮುಖ ಮಾಡಿದ್ದಾರೆ.

    ವಿಜಯ್ 68ನೇ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿದೆ.

    ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi Babu) ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಇದೀಗ ಮುಹೂರ್ತ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದಾರೆ.

    ‘ಲಿಯೋ’ (Leo) ಬಳಿಕ 68ನೇ ಚಿತ್ರಕ್ಕೆ ವಿಜಯ್ & ಟೀಂ ಚಾಲನೆ ನೀಡಿರೋದು ದಳಪತಿ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಸಿನಿಮಾ ಬಗೆಗಿನ ಹೆಚ್ಚಿನ ಅಪ್‌ಡೇಟ್‌ಗಾಗಿ ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗುಳ್ಟು’ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಮದುವೆ ಡೇಟ್ ಫಿಕ್ಸ್

    ‘ಗುಳ್ಟು’ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಮದುವೆ ಡೇಟ್ ಫಿಕ್ಸ್

    ಸ್ಯಾಂಡಲ್‌ವುಡ್‌ನಲ್ಲಿ ‘ಗುಳ್ಟು’ (Gultoo) ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಜನಾರ್ದನ್ ಚಿಕ್ಕಣ್ಣ ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬಹುಕಾಲದ ಗೆಳತಿ ಸ್ನೇಹಾ(Sneha) ಜೊತೆ ನಿರ್ದೇಶಕ ಜನಾರ್ದನ್  ಚಿಕ್ಕಣ್ಣ (Janrdhan Chikkanna) ಅವರು ಹಸೆಮಣೆ(Wedding) ಏರಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಪವನ್ ಕಲ್ಯಾಣ್ ವಿರುದ್ಧ ಗರಂ ಆದ ನಟಿ ಪೂನಂ ಕೌರ್

    ಜನಾರ್ದನ್  ಚಿಕ್ಕಣ್ಣ ಅವರ ಪರಿಕಲ್ಪನೆಯಲ್ಲಿ ‘ಗುಳ್ಟು’ ಸಿನಿಮಾ ಮೂಡಿ ಬಂದಿತ್ತು. ನವೀನ್ ಶಂಕರ್ (Naveen Shankar), ಸೋನು ಗೌಡ (Sonu Gowda) ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ‘ಸಾರ್ವಜನಿಕರಿಗೆ ಸುವರ್ಣಾವಕಾಶ’ ಚಿತ್ರವನ್ನ ನಿರ್ಮಾಣ ಮಾಡಿದ್ದರು. ರಿಷಿ ಮತ್ತು ಧನ್ಯಾ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು.

    ನಿರ್ಮಾಪಕ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಜನಾರ್ದನ್ ಚಿಕ್ಕಣ್ಣ ಅವರು ಬಹುಕಾಲದ ಗೆಳತಿ ಸ್ನೇಹಾ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಜೂನ್ 1ರಂದು ಮೈಸೂರಿನಲ್ಲಿ(Mysuru) ಸರಳವಾಗಿ ಮದುವೆಯಾಗುತ್ತಿದ್ದಾರೆ. ಕುಟುಂಬಸ್ಥರು, ಸಿನಿಮಾ ರಂಗದ ಆಪ್ತರಿಗಷ್ಟೇ ಆಹ್ವಾನ ನೀಡಿದ್ದಾರೆ.

    ಜನಾರ್ದನ್  ಚಿಕ್ಕಣ್ಣ ಅವರ ಮದುವೆ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ‘ಗುಳ್ಟು’ ನಿರ್ದೇಶಕನ ಹೊಸ ಪಯಣಕ್ಕೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ಬಹುಕಾಲದ ಗೆಳತಿ ಸ್ನೇಹಾ ಜೊತೆ ‘ಗುಳ್ಟು’ ನಿರ್ದೇಶಕನ ಎಂಗೇಜ್‌ಮೆಂಟ್

    ಬಹುಕಾಲದ ಗೆಳತಿ ಸ್ನೇಹಾ ಜೊತೆ ‘ಗುಳ್ಟು’ ನಿರ್ದೇಶಕನ ಎಂಗೇಜ್‌ಮೆಂಟ್

    ಸ್ಯಾಂಡಲ್‌ವುಡ್‌ನಲ್ಲಿ (Sandalwood) ‘ಗುಳ್ಟು’ (Gultoo Film) ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಜನಾರ್ಧನ್ ಚಿಕ್ಕಣ್ಣ ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬಹುಕಾಲದ ಗೆಳತಿ ಸ್ನೇಹಾ ಜೊತೆ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ (Janardhan Chikanna) ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಫ್ಯಾಷನ್ ಡಿಸೈನರ್ ಅಪರ್ಣಾ ಸಮಂತಾ ಜೊತೆ ಜೆಕೆ ಎಂಗೇಜ್

    ನವೀನ್ ಶಂಕರ್- ಸೋನು ಗೌಡ ನಟನೆಯ ‘ಗುಳ್ಟು’ ಸಿನಿಮಾ ಜನಾರ್ಧನ್ ಚಿಕ್ಕಣ್ಣ ಪರಿಕಲ್ಪನೆಯಲ್ಲಿ ಅದ್ಭುತವಾಗಿ ಮೂಡಿ ಬಂದಿತ್ತು. ಕಥೆಗೆ ಕಲಾವಿದರ ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

    ಇದೀಗ ಹಲವು ವರ್ಷಗಳ ತಮ್ಮ ಪ್ರೀತಿಗೆ ಉಂಗುರದ ಮುದ್ರೆ ಒತ್ತಿದ್ದಾರೆ. ಸ್ನೇಹಾ (Sneha) ಜೊತೆ ಅಧಿಕೃತವಾಗಿ ಎಂಗೇಜ್ (Engagement) ಆಗಿದ್ದಾರೆ. ಈ ಕುರಿತು ನಿರ್ದೇಶಕ ಜನಾರ್ಧನ್ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ತಿಳಿಸಿದ್ದಾರೆ. ಸದ್ಯದಲ್ಲೇ ಜನಾರ್ಧನ್- ಸ್ನೇಹಾ ಜೋಡಿ ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ. ನಟ ನವೀನ್, ಸೋನು ಗೌಡ, ಸಿಂಪಲ್ ಸುನಿ ಸೇರಿದಂತೆ ಹಲವರು ಈ ಜೋಡಿಗೆ ಶುಭಹಾರೈಸಿದ್ದಾರೆ.

  • ಹೆಣ್ಣು ಮಗುವಿಗೆ ಜನ್ಮ ನೀಡಿದ ದ್ರೌಪದಿ ಪಾತ್ರಧಾರಿ ಸ್ನೇಹ

    ಹೆಣ್ಣು ಮಗುವಿಗೆ ಜನ್ಮ ನೀಡಿದ ದ್ರೌಪದಿ ಪಾತ್ರಧಾರಿ ಸ್ನೇಹ

    ಚೆನ್ನೈ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ `ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ನಟಿ ಸ್ನೇಹ ಇಂದು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ನೇಹ ಹಾಗೂ ಅವರ ಪತಿ ಪ್ರಸನ್ನ ಅವರಿಗೆ ಇದು ಎರಡನೇ ಮಗುವಾಗಿದ್ದು, ಈ ವಿಷಯವನ್ನು ಇನ್‍ಸ್ಟಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

     

    View this post on Instagram

     

    Its a girl❤❤

    A post shared by Sneha Prasanna (@realactress_sneha) on

    ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸ್ನೇಹ ಅವರು ಸಾಂಪ್ರದಾಯಿಕವಾಗಿ ತಮ್ಮ ಸೀಮಂತ ಕಾರ್ಯಕ್ರಮವನ್ನು ಮಾಡಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸ್ನೇಹ ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು.

    ಮೇ 11, 2012ರಲ್ಲಿ ಸ್ನೇಹ ತಮ್ಮ ಗೆಳೆಯ ಪ್ರಸನ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2009ರಲ್ಲಿ ‘ಅಚಮಂಡು ಅಚಾಮುಂಡು’ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರು ಪ್ರೀತಿಸಲು ಶುರು ಮಾಡಿದ್ದರು. ಬಳಿಕ ಇಬ್ಬರು ರಿಲೇಶಿನ್‍ಶಿಪ್‍ನಲ್ಲಿ ಇದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ನಂತರ ಇಬ್ಬರು ಪೋಷಕರನ್ನು ಒಪ್ಪಿಸಿ ಮದುವೆಯಾಗಿದ್ದರು.

    ಮದುವೆಯಾಗಿ ಮೂರು ವರ್ಷಗಳ ನಂತರ ಸ್ನೇಹ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ‘ವಿಹಾನ್’ ಎಂದು ನಾಮಕರಣ ಮಾಡಿದ್ದರು. ಈಗ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಅಭಿಮಾನಿಗಳು ದಂಪತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

  • 2ನೇ ಮಗುವಿನ ನಿರೀಕ್ಷೆಯಲ್ಲಿ ದ್ರೌಪದಿ ಪಾತ್ರಧಾರಿಯ ಸ್ನೇಹ

    2ನೇ ಮಗುವಿನ ನಿರೀಕ್ಷೆಯಲ್ಲಿ ದ್ರೌಪದಿ ಪಾತ್ರಧಾರಿಯ ಸ್ನೇಹ

    ಚೆನ್ನೈ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ ಈಗ ಅವರು ಸೀಮಂತ ಕಾರ್ಯಕ್ರಮ ಮಾಡಿಸಿಕೊಂಡಿದ್ದಾರೆ.

    ಸ್ನೇಹ ಅವರು ಸಾಂಪ್ರದಾಯಿಕವಾಗಿ ತಮ್ಮ ಸೀಮಂತ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ನೇಹ ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು. ಸದ್ಯ ಸೀಮಂತ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮೇ 11, 2012ರಲ್ಲಿ ಸ್ನೇಹ ತಮ್ಮ ಗೆಳೆಯ ಪ್ರಸನ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2009ರಲ್ಲಿ ‘ಅಚಮಂಡು ಅಚಾಮುಂಡು’ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರು ಪ್ರೀತಿಸಲು ಶುರು ಮಾಡಿದ್ದರು. ಬಳಿಕ ಇಬ್ಬರು ರಿಲೇಶಿನ್‍ಶಿಪ್‍ನಲ್ಲಿ ಇದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ನಂತರ ಇಬ್ಬರು ಪೋಷಕರನ್ನು ಒಪ್ಪಿಸಿ ಮದುವೆಯಾಗಿದ್ದರು.

    ಮದುವೆಯಾಗಿ ಮೂರು ವರ್ಷಗಳ ನಂತರ ಸ್ನೇಹ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ‘ವಿಹಾನ್’ ಎಂದು ನಾಮಕರಣ ಮಾಡಿದ್ದರು. ಈ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಅಭಿಮಾನಿಗಳು ದಂಪತಿ ಶುಭಾಶಯ ತಿಳಿಸುತ್ತಿದ್ದಾರೆ.

  • ‘ವಿಕ್ರಮಚಿತ್ರ’ಕ್ಕೆ ಮುಹೂರ್ತ

    ‘ವಿಕ್ರಮಚಿತ್ರ’ಕ್ಕೆ ಮುಹೂರ್ತ

    ಬೆಂಗಳೂರು: ಜನರು ಅನಿರೀಕ್ಷಿತ ಕಥೆಗಳನ್ನು ಇಷ್ಟಪಡುತ್ತಾರೆಂದು ತಿಳಿದಿರುವ ಮಂಡ್ಯದ ಶ್ರೀಯುತ್ ‘ವಿಕ್ರಮಚಿತ್ರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದರೊಂದಿಗೆ ಕಾಲೇಜು ಹುಡುಗನ ಪಾತ್ರದಲ್ಲಿ ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದಾರೆ. ಇವರ ಕುರಿತು ಹೇಳುವುದಾದರೆ ಎಂಬಿಎ ಮುಗಿಸಿ ಉತ್ತಮ ಹುದ್ದೆಯಲ್ಲಿದ್ದರೂ ಬಣ್ಣದ ವ್ಯಾಮೋಹದಿಂದ ಕೆಲಸಕ್ಕೆ ಬೆನ್ನು ತೋರಿಸಿ ಪೂರ್ಣಪ್ರಮಾಣವಾಗಿ ಇದರಲ್ಲಿ ತೊಡಗಿಕೊಂಡಿದ್ದಾರೆ. ಕರ್ವ ಚಿತ್ರದಲ್ಲಿ ಕಾರ್ಯನಿರ್ವಹಿಸಿರುವ ಶ್ರೀಯುತ್ ಹಲವರ ಬಳಿ ಅನುಭವ ಪಡೆದುಕೊಂಡಿದ್ದಾರೆ. ಧಾರವಾಹಿಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ವಿಕ್ರಮ-ಬೇತಾಳದಲ್ಲಿ ಪರಿಸ್ಥಿತಿಗಳು ಒದಗಿಬಂದು ಪ್ರಶ್ನೆ ಮಾಡುತ್ತಿತ್ತು. ಅದರಂತೆ ಸಿನಿಮಾದ ಕತೆಯಲ್ಲಿ ಮನುಷ್ಯನಾದವನಿಗೆ ನಾನಾ ರೀತಿಯ ಪರಿಸ್ಥಿತಿಗಳು ಆವರಿಸಿಕೊಳ್ಳುತ್ತದೆ. ಇದನ್ನೆಲ್ಲಾ ಭೇದಿಸಿಕೊಂಡು ಸಫಲನಾಗುವನೇ ವಿಕ್ರಮನಾಗುತ್ತಾನೆ. ಅಂದರೆ ಕಾಲೇಜಿನಲ್ಲಿ ಹುಡುಗಿಯೊಬ್ಬಳು ಕಾಣೆಯಾಗುತ್ತಾಳೆ. ಇದನ್ನು ತನಿಖೆ ಮಾಡಲು ಹೋಗುವಾಗ ಒಂದಷ್ಟು ಸತ್ಯಾಂಶಗಳು ಹೊರಬರುತ್ತದೆ. ಕ್ಲೈಮಾಕ್ಸ್ ನಲ್ಲಿ ಈತ ಅಂದುಕೊಂಡಿದ್ದ ಸತ್ಯಗಳು ಸುಳ್ಳಾಗಿ ಕಂಡುಬರುತ್ತದೆ ಎನ್ನುವುದು ಕಥಾ ಸಾರಾಂಶ.

    ಶಿಲ್ಪ ಮತ್ತು ಸ್ನೇಹಾ ನಾಯಕಿಯರು. ‘ಚೌಕಟ್ಟು’ ಚಿತ್ರ ನಿರ್ಮಿಸಿರುವ ಮಂಜುನಾಥ್ ನಿರ್ಮಾಣದ ಎರಡನೇ ಚಿತ್ರವಿದು. ನಿರ್ಮಾಣದ ಜೊತೆಗೆ ಮಂಜುನಾಥ್ ಈ ಚಿತ್ರದಲ್ಲಿ ಬರುವ ನಾಲ್ಕು ಹುಡುಗರ ಪೈಕಿ ಒಬ್ಬರಾಗಿ ಕಾಣಿಸಿಕೊಳ್ಳಲಿದ್ದಾರೆ. ರವಿಶಂಕರ್ ಅವರು ಈ ಚಿತ್ರದಲ್ಲಿ ನಟಿಸುವ ಸಾಧ್ಯತೆಯಿದೆ. ಇವರೊಂದಿಗೆ ರಂಗಭೂಮಿ, ಕಿರುತೆರೆ ಕಲಾವಿದರುಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಬೆಂಗಳೂರು, ಸಕಲೇಶಪುರ ಸುತ್ತಮುತ್ತ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ಹಾಕಿಕೊಂಡಿದೆ.

    ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜನೆ ಮಾಡುವುದರೊಂದಿಗೆ ನಿರ್ಮಾಣದಲ್ಲೂ ಪಾಲುದಾರರಾಗಿದ್ದಾರೆ. ಮೊಂಟಿ ಭರತ್ ಸಂಭಾಷಣೆ, ಛಾಯಾಗ್ರಹಣ ಕಿಟ್ಟಿ ಕೌಶಿಕ್, ಸಂಕಲನ ಮೋಹನ್‍ರಾಜ್, ಸಾಹಸ ಜೋನಿ ರಾಮದೇವ್ ಅವರದಾಗಿದೆ. ಮಾತೃ ಛಾಯ ಕ್ರಿಯೇಷನ್ಸ್ ಹಾಗೂ ಜಾಹಸ್ ಕ್ರಿಯೇಟಿವ್ ಇನ್ ಮೂಲಕ ಸಿದ್ಧಗೊಳ್ಳುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ಕರ್ನಾಟಕ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್.ಎಂ.ಸುರೇಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು.